ಅಪರಾಧ

ನಿಗೂಢ ಪ್ರಾಣಿಯ ದಾಳಿಯಿಂದ 6 ಮಂದಿ ಸಾವು

ನೆರಳಿನಂತೆ ಬಂದು ಕಚ್ಚಿ ಕಣ್ಮರೆಯಾಗುತ್ತಿದೆ ಪ್ರಾಣಿ ಭೋಪಾಲ: ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯಲ್ಲಿ ಎರಡು ವಾರಗಳಲ್ಲಿ ನಿಗೂಢ ಪ್ರಾಣಿಯೊಂದು 6 ಮಂದಿಯನ್ನು ಕಚ್ಚಿ ಸಾಯಿಸಿದೆ. ಪ್ರಾಣಿಯಿಂದ ದಾಳಿಗೊಳಗಾದ ಎಲ್ಲರಿಗೂ ರೇಬಿಸ್ ಚುಚ್ಚುಮದ್ದನ್ನು ನೀಡಲಾಗಿತ್ತು. ಮೇ 5ರಂದು ಬೆಳಗಿನ ಜಾವ 1 ರಿಂದ 5 ಗಂಟೆ ನಡುವೆ ಈ ಘಟನೆ ನಡೆದಿದೆ. ಗ್ರಾಮದ 17 ಮಂದಿ ಒಂದೆಡೆ ಮಲಗಿದ್ದಾಗ ನಿಗೂಢ ಪ್ರಾಣಿ ದಾಳಿ ಮಾಡಿದೆ. ಪ್ರಾಣಿ ಯಾವುದೆಂದು ಗುರುತಿಸಲು ಸಾಧ್ಯವಾಗಲಿಲ್ಲ. ಲಿಂಬೈ ಗ್ರಾಮದ ಮೂರು ಸ್ಥಳಗಳಲ್ಲಿ ಆ ಪ್ರಾಣಿ ದಾಳಿ […]

ನಿಗೂಢ ಪ್ರಾಣಿಯ ದಾಳಿಯಿಂದ 6 ಮಂದಿ ಸಾವು Read More »

ಪಾಕಿಸ್ತಾನದ ಇನ್ನೋರ್ವ ಉಗ್ರ ಮುಖಂಡ ಫಿನಿಷ್‌

ಭಯೋತ್ಪಾದಕರಲ್ಲಿ ನಡುಕ ಹುಟ್ಟಿಸಿದ ಉಗ್ರನ ನಿಗೂಢ ಸಾವು ಇಸ್ಲಾಮಾಬಾದ್ : ಭಾರತದ ವಿರುದ್ಧ ಸದಾ ವಿಷ ಕಾರುತ್ತಿದ್ದ ಜೈಶ್‌ ಎ ಮೊಹಮ್ಮದ್‌ ಉvಗ್ರ ಸಂಘಟನೆಯ ಕಮಾಂಡರ್‌ ಒಬ್ಬ ಪಾಕಿಸ್ತಾನದಲ್ಲಿ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದಾನೆ. ಜೈಶ್-ಎ-ಮೊಹಮ್ಮದ್‌ನ ಹಿರಿಯ ಕಮಾಂಡರ್ ಮೌಲಾನಾ ಅಬ್ದುಲ್ ಅಜೀಜ್ ನಿಗೂಢವಾಗಿ ಸಾವನ್ನಪ್ಪಿರುವ ಉಗ್ರ. ಈ ನಿಗೂಢ ಸಾವು ಭಯೋತ್ಪಾದಕರಲ್ಲಿ ನಡುಕ ಹುಟ್ಟಿಸಿದೆ. ಮೌಲಾನಾ ಅಬ್ದುಲ್ ಅಜೀಜ್ ಕಳೆದ ತಿಂಗಳು ಪಾಕಿಸ್ತಾನದಲ್ಲಿ ನಡೆದ ಜೈಶ್ ಸಭೆಯಲ್ಲಿ ಭಾರತದ ವಿರುದ್ಧ ವಿಷ ಕಾರಿ, ಭಾರತಕ್ಕೂ ಯುಎಸ್ಎಸ್ಆರ್ ಗತಿಯಾಗಲಿದೆ

ಪಾಕಿಸ್ತಾನದ ಇನ್ನೋರ್ವ ಉಗ್ರ ಮುಖಂಡ ಫಿನಿಷ್‌ Read More »

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಇನ್ನೋರ್ವ ಆರೋಪಿ ಬಂಧನ

ಕೊಲೆಗೆ ಸಂಚು ರೂಪಿಸಿ, ಆರೋಪಿಗಳಿಗೆ ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಆರೋಪ ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಸಿಸಿಬಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಮೇ 1ರಂದು ಬಜ್ಪೆಯಲ್ಲಿ ಸುಹಾಸ್ ಶೆಟ್ಟಿ ಕೊಲೆ ಮಾಡಲಾಗಿತ್ತು. ಬಂಧಿತ ವ್ಯಕ್ತಿಯ ಮೇಲೆ ಪ್ರಮುಖ ಆರೋಪಿಗಳೊಂದಿಗೆ ಸೇರಿ ಕೊಲೆಗೆ ಸಂಚು ರೂಪಿಸಿದ ಮತ್ತು ಪೊಲೀಸರಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಆರೋಪವಿದೆ. ಬಂಧಿತನನ್ನು ಮಂಗಳೂರು ಬಜ್ಪೆ ಶಾಂತಿಗುಡ್ಡೆಯ ಬದ್ರಿಯಾ ಜುಮಾ ಮಸೀದಿ ಬಳಿಯ

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಇನ್ನೋರ್ವ ಆರೋಪಿ ಬಂಧನ Read More »

ಘನ ವಾಹನಗಳಿಗೆ ತಡೆ : ಹಲವರ ವಿರುದ್ಧ ಪ್ರಕರಣ ದಾಖಲು

ವಿಟ್ಲ: ವಿಟ್ಲ: ಘನ ವಾಹನಗಳಿಗೆ ತಡೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸರು ಹಲವರ ಮೇಲೆ ಪ್ರಕರಣ  ದಾಖಲಿಸಿದ್ದಾರೆ. ಅಪಘಾತದ ಹಿನ್ನಲೆಯಲ್ಲಿ ರಿಯಾಝ್‌, ಸಮದ್‌,  ಕುಂಞಿಮೋನು, ರಹಿಮಾನ್‌, ಸುಲೈಮಾನ್‌ ಮತ್ತು ಇತರ 25 ರಿಂದ 30 ಜನರು ರಸ್ತೆಯಲ್ಲಿ ಘನ ವಾಹನಗಳು ಸಂಚರಿಸದಂತೆ ತಡೆಯೊಡ್ಡಿದ್ದರು. ಜೂ. 2ರಂದು ರಾತ್ರಿ ವಿಟ್ಲ ಸಮೀಪದ ಮಂಗಳಪದವು ಎಂಬಲ್ಲಿ ಕೆಲವರು ವಿಟ್ಲ-ಕಲ್ಲಡ್ಕ ರಸ್ತೆಯಲ್ಲಿ ಹೋಗುವ ಲಾರಿಗಳನ್ನು ತಡೆದು ನಿಲ್ಲಿಸಿದ ಮಾಹಿತಿ ಬಂದ ಮೇರೆಗೆ, ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದರು. ಈ

ಘನ ವಾಹನಗಳಿಗೆ ತಡೆ : ಹಲವರ ವಿರುದ್ಧ ಪ್ರಕರಣ ದಾಖಲು Read More »

ಆಪರೇಷನ್‌ ಸಿಂದೂರ ಮಾಹಿತಿ ರವಾನಿಸಿದ್ದ ಪಾಕ್‌ ಗೂಢಚಾರ ಸೆರೆ

ಕಾರ್ಯಾಚರಣೆ ನಡೆಯುತ್ತಿರುವಾಗಲೇ ಮಾಹಿತಿ ರವಾನಿಸುತ್ತಿದ್ದ ಗೂಢಚಾರ ನವದೆಹಲಿ: ಇನ್ನೋರ್ವ ಪಾಕಿಸ್ತಾನಿ ಗೂಢಚಾರ ಸೆರೆಯಾಗಿದ್ದಾನೆ. ಆಪರೇಷನ್ ಸಿಂದೂರ ಕಾರ್ಯಾಚರಣೆ ನಡೆಯುತ್ತಿರುವಾಗ ಪಾಕಿಸ್ತಾನದ ಐಎಸ್​ಐ ಜತೆ ಸೇನೆಯ ಚಲನವಲನದ ಹಂಚಿಕೊಂಡಿದ್ದ ಗೂಢಚಾರನನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ. ಐಎಸ್‌ಐ ಜೊತೆ ಬಲವಾದ ಸಂಪರ್ಕ ಹೊಂದಿರುವ ಆರೋಪದ ಮೇಲೆ ಗೂಢಚಾರ ಗಗನ್‌ದೀಪ್ ಸಿಂಗ್​​ನನ್ನು ಬಂಧಿಸಲಾಗಿದೆ. ಆತ ಖಲಿಸ್ತಾನಿ ಉಗ್ರ ಗೋಪಾಲ್ ಸಿಂಗ್ ಚಾವ್ಲಾನೊಂದಿಗೂ ಸಂಬಂಧ ಹೊಂದಿದ್ದಾನೆ. ಆರೋಪಿಯು ಆಪರೇಷನ್ ಸಿಂದೂರ ಸೇರಿದಂತೆ ಗಡಿಯಾಚೆಗಿನ ಏಜೆಂಟರೊಂದಿಗೆ ಸೇನಾ ಚಲನವಲನಗಳ ಬಗ್ಗೆ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾನೆ

ಆಪರೇಷನ್‌ ಸಿಂದೂರ ಮಾಹಿತಿ ರವಾನಿಸಿದ್ದ ಪಾಕ್‌ ಗೂಢಚಾರ ಸೆರೆ Read More »

ಕಂಟೈನರ್ ನಲ್ಲಿ ಅಕ್ರಮ ದನ ಸಾಗಾಟ : ಓರ್ವ ಆರೋಪಿ ಬಂಧನ

ಕೇರಳ : ಕಂಟೈನರ್‌ ನಲ್ಲಿ ಕೂಡಿಹಾಕಿ ಅಕ್ರಮವಾಗಿ ಸಾಗಿಸುತ್ತಿದ್ದ 24 ದನಗಳನ್ನು ರಕ್ಷಿಸಿದ ಸಿಸಿಬಿ ಪೊಲೀಸರು ಕಂಟೈನರ್ ಲಾರಿಯನ್ನು ವಶಕ್ಕೆ ಪಡೆದುಕೊಂಡು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಚಾಲಕ ಉತ್ತರ ಪ್ರದೇಶ ಮುಜಾಫರ್ ನಗರದ ಆಸಿಫ್ (25) ಬಂಧಿತ ಆರೋಪಿ. ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ. ನೂತನ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರಿಗೆ ಬಂದ ಮಾಹಿತಿ ಮೇರೆಗೆ ಮಂಗಳೂರು ಸಿಸಿಬಿ ಘಟಕದ ಪಿಎಸ್ ಐ. ಶರಣಪ್ಪ ಭಂಡಾರಿ ನೇತೃತ್ವದ ತಂಡ ಜು. 1ರ ನಸುಕಿನ ಜಾವ ತಲಪಾಡಿ

ಕಂಟೈನರ್ ನಲ್ಲಿ ಅಕ್ರಮ ದನ ಸಾಗಾಟ : ಓರ್ವ ಆರೋಪಿ ಬಂಧನ Read More »

ದಕ್ಷಿಣ ಕನ್ನಡದಲ್ಲಿ ಪೊಲೀಸರಿಂದ ಆಪರೇಷನ್‌ ಗಡಿಪಾರು ಅಸ್ತ್ರ ಪ್ರಯೋಗ

36 ಮಂದಿಯ ಗಡಿಪಾರು ಪ್ರಕ್ರಿಯೆ ಶುರು; ಬಿಜೆಪಿಯಿಂದ ಹೋರಾಟದ ಎಚ್ಚರಿಕೆ ಮಂಗಳೂರು : ಸರಣಿ ಹತ್ಯೆಗಳು ಮತ್ತು ಪ್ರಚೋದನಕಾರಿ ಭಾಷಣಗಳಿಂದ ಪ್ರಕ್ಷುಬ್ಧಗೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯನ್ನು ಸಹಜ ಸ್ಥಿತಿಗೆ ತರಲು ಪೊಲೀಸರು ಆಪರೇಷನ್‌ ಗಡಿಪಾರು ಅಸ್ತ್ರ ಪ್ರಯೋಗಕ್ಕೆ ಮುಂದಾಗಿದ್ದಾರೆ. ಹಿಂದು ಮುಖಂಡ ಅರುಣ್‌ ಪುತ್ತಿಲ ಅವರಿಗೆ ಗಡಿಪಾರು ನೋಟಿಸ್‌ ಕೊಟ್ಟ ಬೆನ್ನಲ್ಲೇ ಇದೇ ಮಾದರಿಯಲ್ಲಿ ಇನ್ನೂ 36 ಜನರಿಗೆ ನೋಟಿಸ್‌ ನೀಡಲಾಗಿದೆ. ಕೋಮು ಗಲಭೆಗೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಆರೋಪಿಸಿ 36 ಜನರ ಗಡಿಪಾರು ಪ್ರಕ್ರಿಯೆ ಪ್ರಾರಂಭಿಸಲಾಗಿದೆ.

ದಕ್ಷಿಣ ಕನ್ನಡದಲ್ಲಿ ಪೊಲೀಸರಿಂದ ಆಪರೇಷನ್‌ ಗಡಿಪಾರು ಅಸ್ತ್ರ ಪ್ರಯೋಗ Read More »

ಕಲ್ಲಡ್ಕ ಪ್ರಭಾಕರ ಭಟ್‌ ಬಂಧಿಸದಂತೆ ಹೈಕೋರ್ಟ್‌ ಆದೇಶ

ದುರುದ್ದೇಶದಿಂದ ಎಫ್​ಐಆರ್​ ದಾಖಲಿಸಲಾಗಿದೆ ಎಂದು ವಾದ ಮಂಗಳೂರು: ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರ ಬಂಧನ ಸಹಿತ ಯಾವುದೇ ಒತ್ತಡದ ಕ್ರಮ ಕೈಗೊಳ್ಳದಂತೆ ನ್ಯಾ‌.ಕೃಷ್ಣಕುಮಾರ್ ಅವರಿದ್ದ ಹೈಕೋರ್ಟ್​ನ ಏಕಸದಸ್ಯ ಪೀಠ ಆದೇಶ ಹೊರಡಿಸಿ ಜೂನ್ 10ಕ್ಕೆ ವಿಚಾರಣೆ ಮುಂದೂಡಿದೆ. ಕಲ್ಲಡ್ಕ ಪ್ರಭಾಕರ ಭಟ್ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದರು. ಎಫ್‌ಐಆರ್‌ ದಾಖಲಾದ ಬಳಿಕ ಪ್ರಕರಣ ರದ್ದು ಕೋರಿ ಕಲ್ಲಡ್ಕ ಪ್ರಭಾಕರ ಭಟ್ ನಿನ್ನೆಯೇ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಭಾಷಣ ಮಾಡಿದ ಹಲವು

ಕಲ್ಲಡ್ಕ ಪ್ರಭಾಕರ ಭಟ್‌ ಬಂಧಿಸದಂತೆ ಹೈಕೋರ್ಟ್‌ ಆದೇಶ Read More »

ಕೆನರಾ ಬ್ಯಾಂಕ್‌ನಿಂದ 59 ಕೆಜಿ ಚಿನ್ನ ಕಳ್ಳತನ

ಪೊಲೀಸರಿಗೆ ಸವಾಲಾಗಿ ಪರಿಣಮಿಸಿರುವ ಭಾರಿ ದೊಡ್ಡ ಕಳ್ಳತನ ಕೃತ್ಯ ಬೆಂಗಳೂರು: ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯ ಕೆನರಾ ಬ್ಯಾಂಕ್ ಶಾಖೆಯಿಂದ ಕಳ್ಳರು ಕಳೆದ ಮೇ 25ರಂದು ಬರೋಬ್ಬರಿ 58.975 ಕಿಲೋ ಚಿನ್ನ ಮತ್ತು 5.20 ಲ.ರೂ. ನಗದು ಕಳ್ಳತನ ಮಾಡಿದ್ದು, ಈ ಕಳ್ಳತನ ಪ್ರಕರಣ ಪೊಲೀಸರಿಗೆ ಸವಾಲಾಗಿ ಪರಿಣಮಿಸಿದೆ. ಸಿನಿಮೀಯ ರೀತಿಯಲ್ಲಿ, ಮಾಸ್ಟರ್ ಪ್ಲ್ಯಾನ್ ಮಾಡಿ ಕಳ್ಳರು ಕೋಟಿ ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ಕದ್ದಿದ್ದಾರೆ. ಖದೀಮರ ಪತ್ತೆಗೆ ಪೊಲೀಸ್​ ಇಲಾಖೆ ಎಂಟು ವಿಶೇಷ ತಂಡಗಳನ್ನು ರಚಿಸಿದೆ. ಬ್ಯಾಂಕ್​ನಲ್ಲಿದ್ದ 58

ಕೆನರಾ ಬ್ಯಾಂಕ್‌ನಿಂದ 59 ಕೆಜಿ ಚಿನ್ನ ಕಳ್ಳತನ Read More »

ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲರಿಗೆ ಕಲಬುರ್ಗಿಗೆ ಗಡಿಪಾರು ಆದೇಶ | ವಿಚಾರಣೆಗೆ ಹಾಜರಾಗಲು ಸೂಚನೆ

ಪುತ್ತೂರು: ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲರಿಗೆ ದ.ಕ.ಜಿಲ್ಲೆಯಿಂದ ಕಲುಬುರ್ಗಿ ಜಿಲ್ಲೆಯ ಶಹಬಾದ್‍ ಪೊಲೀಸ್‍ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಹೊರಡಿಸಿದ್ದು, ಈ ಕುರಿತು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 55 ರಂತೆ ಈ ಆದೇಶ ಹೊರಡಿಸಲಾಗಿದ್ದು, ಈ ಕುರಿತು ಜೂ.6 ರಂದು ವಿಚಾರಣೆಗೆ ನ್ಯಾಯವಾದಿಗಳ ಮೂಲಕ ಹಾಜರಾಗಿ ವಾದಿಸುವಂತೆ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರು ಸೂಚನೆ ನೀಡಿದ್ದಾರೆ. ತಪ್ಪಿದಲ್ಲಿ ಈ ಪ್ರಕರಣದಲ್ಲಿ  ನಿಮಗೆ ಆಸಕ್ತಿ ಇಲ್ಲವೆಂದು ಭಾವಿಸಿ ಲಭ್ಯವಿರುವ ಮಾಹಿತಿ ಆಧಾರದಲ್ಲಿ

ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲರಿಗೆ ಕಲಬುರ್ಗಿಗೆ ಗಡಿಪಾರು ಆದೇಶ | ವಿಚಾರಣೆಗೆ ಹಾಜರಾಗಲು ಸೂಚನೆ Read More »

error: Content is protected !!
Scroll to Top