ಅಪರಾಧ

ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲರಿಗೆ ಕಲಬುರ್ಗಿಗೆ ಗಡಿಪಾರು ಆದೇಶ | ವಿಚಾರಣೆಗೆ ಹಾಜರಾಗಲು ಸೂಚನೆ

ಪುತ್ತೂರು: ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲರಿಗೆ ದ.ಕ.ಜಿಲ್ಲೆಯಿಂದ ಕಲುಬುರ್ಗಿ ಜಿಲ್ಲೆಯ ಶಹಬಾದ್‍ ಪೊಲೀಸ್‍ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಹೊರಡಿಸಿದ್ದು, ಈ ಕುರಿತು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 55 ರಂತೆ ಈ ಆದೇಶ ಹೊರಡಿಸಲಾಗಿದ್ದು, ಈ ಕುರಿತು ಜೂ.6 ರಂದು ವಿಚಾರಣೆಗೆ ನ್ಯಾಯವಾದಿಗಳ ಮೂಲಕ ಹಾಜರಾಗಿ ವಾದಿಸುವಂತೆ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರು ಸೂಚನೆ ನೀಡಿದ್ದಾರೆ. ತಪ್ಪಿದಲ್ಲಿ ಈ ಪ್ರಕರಣದಲ್ಲಿ  ನಿಮಗೆ ಆಸಕ್ತಿ ಇಲ್ಲವೆಂದು ಭಾವಿಸಿ ಲಭ್ಯವಿರುವ ಮಾಹಿತಿ ಆಧಾರದಲ್ಲಿ […]

ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲರಿಗೆ ಕಲಬುರ್ಗಿಗೆ ಗಡಿಪಾರು ಆದೇಶ | ವಿಚಾರಣೆಗೆ ಹಾಜರಾಗಲು ಸೂಚನೆ Read More »

ವಿರಾಟ್‌ ಕೊಹ್ಲಿ ಪಬ್‌ ಮೇಲೆ ಇನ್ನೊಂದು ಕೇಸ್‌

ಕಾನೂನು ಉಲ್ಲಂಘಿಸಿ ಕಾರ್ಯಾಚರಿಸುತ್ತಿರುವ ಪಬ್‌ ಬೆಂಗಳೂರು: ಟೀಂ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಮಾಲೀಕತ್ವದ ಬೆಂಗಳೂರಿನಲ್ಲಿರುವ ಪಬ್ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.ಪ್ರತ್ಯೇಕ ಸ್ಥಳ ಮೀಸಲಿಡದೆ ಧೂಮಪಾನಕ್ಕೆ ಅವಕಾಶ ನೀಡಿದ್ದಕ್ಕಾಗಿ ಬೆಂಗಳೂರಿನ ಕಸ್ತೂರ್‌ಬಾ ರಸ್ತೆಯಲ್ಲಿರುವ ಒನ್ 8 ಕಮ್ಯೂನ್ ಬಾರ್ & ರೆಸ್ಟೋರೆಂಟ್‌ನ ಮ್ಯಾನೇಜರ್ ಹಾಗೂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಮೇ 29ರಂದು ಕಬ್ಬನ್ ಪಾರ್ಕ್ ಪೊಲೀಸರು ಬಾರ್ ಮೇಲೆ ದಾಳಿ ಮಾಡಿ, ಸ್ವಯಂಪ್ರೇರಿತವಾಗಿ ಎನ್‌ಸಿಆರ್ ದಾಖಲಿಸಿಕೊಂಡಿದ್ದರು. ಇದೀಗ ನ್ಯಾಯಾಲಯದ ಅನುಮತಿ ಪಡೆದು, ಕೊಟ್ಪಾ ಕಾಯ್ದೆಯಡಿ

ವಿರಾಟ್‌ ಕೊಹ್ಲಿ ಪಬ್‌ ಮೇಲೆ ಇನ್ನೊಂದು ಕೇಸ್‌ Read More »

ಕೋಮು ಪ್ರಚೋದನಕಾರಿ ಭಾಷಣ : ಡಾ.ಕಲ್ಲಡ್ಕ ಪ್ರಭಾಕರ ಭಟ್‍ ವಿರುದ್ಧ ಪ್ರಕರಣ ದಾಖಲು

ಬಂಟ್ವಾಳ: ಮಂಗಳೂರಿನಲ್ಲಿ ಇತ್ತೀಚೆಗೆ ಕೊಲೆಯಾದ ಯುವಕನ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಸಮಾಜದ ಸ್ವಾಸ್ಥ್ಯ ಕದಡುವ ಮತ್ತು ಕೋಮು ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಮಧ್ಯ ಪ್ಯಾಲೇಸ್ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕ‌ರ್ ಭಟ್ ಅವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಅಲ್ಲಿ ನೆರೆದಿದ್ದ ಸುಮಾರು 300 ಜನರನ್ನು ಉದ್ದೇಶಿಸಿ ಅವರು ಮಾತನಾಡಿ.

ಕೋಮು ಪ್ರಚೋದನಕಾರಿ ಭಾಷಣ : ಡಾ.ಕಲ್ಲಡ್ಕ ಪ್ರಭಾಕರ ಭಟ್‍ ವಿರುದ್ಧ ಪ್ರಕರಣ ದಾಖಲು Read More »

ಸೌದಿ ಅರೇಬಿಯಾದಲ್ಲಿ ಕಾಸರಗೋಡಿನ ಚಾಲಕನ ಹತ್ಯೆ

ಟ್ಯಾಕ್ಸಿ ಸ್ವಚ್ಛಗೊಳಿಸುತ್ತಿದ್ದಾಗ ಗುಂಡಿಕ್ಕೆ ಕೊಂದ ದುಷ್ಕರ್ಮಿಗಳು ರಿಯಾದ್: ಕಾಸರಗೋಡು ಮೂಲದ ಟ್ಯಾಕ್ಸಿ ಚಾಲಕರೊಬ್ಬರನ್ನು ಭಾನುವಾರ ನಸುಕಿನ ಜಾವ ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಸೌದಿ ಅರೇಬಿಯದ ಅಸೀರ್ ಪ್ರಾಂತ್ಯದ ಬಿಶಾ ಎಂಬಲ್ಲಿ ನಡೆದಿದೆ.ಕೊಲೆಯಾದ ಟ್ಯಾಕ್ಸಿ ಚಾಲಕನನ್ನು ಕಾಸರಗೋಡು ಕುತ್ತಿಕೋಲ್ ಏಣಿಯಾಡಿಯ 42 ವರ್ಷದ ಬಷೀರ್ ಎಂದು ಗುರುತಿಸಲಾಗಿದೆ. ಕಳೆದ 15 ವರ್ಷಗಳಿಂದ ಬಷೀರ್ ಅವರು ಸೌದಿ ಅರೇಬಿಯಾದಲ್ಲಿ ಟ್ಯಾಕ್ಸಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಅವರು ಮೊದಲು ಹೌಸ್ ಡ್ರೈವರ್ ವೀಸಾದ ಮೇಲೆ ಸೌದಿಗೆ ಹೋಗಿದ್ದರು ಎನ್ನಲಾಗಿದೆ. ಬಿಶಾ

ಸೌದಿ ಅರೇಬಿಯಾದಲ್ಲಿ ಕಾಸರಗೋಡಿನ ಚಾಲಕನ ಹತ್ಯೆ Read More »

ಪೊಲೀಸರು ಇನ್ನು ವಾಹನಗಳ ಕೀಲಿಕೈ ಕಿತ್ತುಕೊಳ್ಳುವಂತಿಲ್ಲ

ವಾಹನ ತಪಾಸಣೆಗಾಗಿ ಕಟ್ಟುನಿಟ್ಟಿನ ಮಾರ್ಗಸೂಚಿ ಹೊರಡಿಸಿದ ಡಿಜಿಪಿ ಬೆಂಗಳೂರು : ಮಂಡ್ಯ ಜಿಲ್ಲೆಯಲ್ಲಿ ಇತ್ತೀಚೆಗೆ ಸಂಚಾರ ನಿಯಮ ಉಲ್ಲಂಘಿಸುವ ವಾಹನ ತಪಾಸಣೆ ವೇಳೆ ಅಪಘಾತಕ್ಕೀಡಾಗಿ ಮಗು ಸಾವಿಗೀಡಾದ ಪ್ರಕರಣ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಪೊಲೀಸರ ವಾಹನ ತಪಾಸಣೆಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಲವು ಸೂಚನೆಗಳನ್ನು ನೀಡಿದ್ದಾರೆ. ಈ ಸಂಬಂಧ ಶನಿವಾರ ಸುತ್ತೋಲೆ ಹೊರಡಿಸಿರುವ ಡಿಜಿಪಿ-ಐಜಿಪಿ ಡಾ.ಎಂ.ಎ.ಸಲೀಂ, ಕಣ್ಣಿಗೆ ಕಾಣುವಂತೆ ಸಂಚಾರ ನಿಯಮ ಉಲ್ಲಂಘಿಸದ ವಾಹನಗಳನ್ನು ಅಡ್ಡಗಟ್ಟಿ ತಪಾಸಣೆ ಮಾಡಬಾರದು. ವಾಹನ ತಪಾಸಣೆ ವೇಳೆ ಬಾಡಿ ವೋರ್ನ್‌ ಕ್ಯಾಮೆರಾಗಳನ್ನು ಕಡ್ಡಾಯವಾಗಿ

ಪೊಲೀಸರು ಇನ್ನು ವಾಹನಗಳ ಕೀಲಿಕೈ ಕಿತ್ತುಕೊಳ್ಳುವಂತಿಲ್ಲ Read More »

15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಇಬ್ಬರು ಆರೋಪಿಗಳು ಸೆರೆ

ಬೆಳಗಾವಿಯಲ್ಲಿ ಒಂದೇ ವಾರದಲ್ಲಿ ಸಂಭವಿಸಿದ ಎರಡನೇ ಪ್ರಕರಣ ಬೆಳಗಾವಿ : ಬೆಳಗಾವಿಯಲ್ಲಿ ಇನ್ನೊಂದು ಗ್ಯಾಂಗ್‌ರೇಪ್‌ ಪ್ರಕರಣ ಸಂಭವಿಸಿದೆ. ಹದಿನೈದು ವರ್ಷದ ಬಾಲಕಿ ಮೇಲೆ 6 ಜನ ಎರಡೆರಡು ಬಾರಿ ಸಾಮೂಹಿಕ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ನಗರದ ಹೊರವಲಯದ ಕಾಕತಿ ಪೊಲೀಸ್‌ ಠಾಣೆ ವ್ಯಾಪ್ತಿಯ ಗುಡ್ಡದಲ್ಲಿ ನಡೆದಿದೆ.ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಎಫ್‌ಐಆರ್​ ದಾಖಲಾದ ಬಳಿಕ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಸಹಿತ ಉಳಿದ ನಾಲ್ವರು ತಪ್ಪಿಸಿಕೊಂಡಿದ್ದಾರೆ. ಆರು ತಿಂಗಳ ಹಿಂದೆ ಸ್ನೇಹಿತ ಬಾಲಕಿಯನ್ನು

15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಇಬ್ಬರು ಆರೋಪಿಗಳು ಸೆರೆ Read More »

ಮಹಿಳೆಗೆ 92 ಲ.ರೂ. ವಂಚನೆ : ಖ್ಯಾತ ನಿರ್ಮಾಪಕನ ವಿರುದ್ಧ ದೂರು ದಾಖಲು

ಶಿವರಾಜ್‌ಕುಮಾರ್‌, ಗಣೇಶ್‌ ಅಭಿನಯದ ಸಿನಿಮಾ ಮಾಡುತ್ತಿದ್ದೇನೆ ಎಂದು ನಂಬಿಸಿ ವಂಚನೆ ಬೆಂಗಳೂರು : ಕನ್ನಡದ ಖ್ಯಾತ ಚಿತ್ರ ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಮಹಿಳೆಯೊಬ್ಬರಿಗೆ 92 ಲ.ರೂ. ವಂಚಿಸಿದ ಕುರಿತು ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐ ದಾಖಲಾಗಿದೆ. ಶಿವರಾಜ್​ಕುಮಾರ್, ಗಣೇಶ್ ಜೊತೆ ಸಿನಿಮಾ ಮಾಡುವುದಾಗಿ ನಂಬಿಸಿ ಮಹಿಳೆಯಿಂದ ಸೂರಪ್ಪ ಬಾಬು ಹಣ ಪಡೆದಿದ್ದರು ಎನ್ನಲಾಗಿದೆ. ಆದರೆ ನಂತರ ಸಾಲ ವಾಪಸ್ ಕೇಳಿದಾಗ ಮಹಿಳೆಗೆ ಬೆದರಿಕೆ ಹಾಕಿದರು ಎಂಬ ಆರೋಪಿಸಲಾಗಿದೆ. ಪುನೀತ್ ರಾಜ್​ಕುಮಾರ್​ ನಟನೆಯ ‘ಪೃಥ್ವಿ’, ಕಿಚ್ಚ

ಮಹಿಳೆಗೆ 92 ಲ.ರೂ. ವಂಚನೆ : ಖ್ಯಾತ ನಿರ್ಮಾಪಕನ ವಿರುದ್ಧ ದೂರು ದಾಖಲು Read More »

ಐದು ತಿಂಗಳ ಹಿಂದೆ ನಡೆದ ಹಲ್ಲೆಯ ಕುರಿತು ದೂರು

ಬೈಕಿನಲ್ಲಿ ಹೋಗುವಾಗ ಕಲ್ಲಿನಿಂದ ದಾಳಿ ಮಾಡಿದ ಆರೋಪ ಬಂಟ್ವಾಳ : ಐದು ತಿಂಗಳ ಹಿಂದೆ ಕಲ್ಲಿನಿಂದ ದಾಳಿ ಮಾಡಿದ್ದಾರೆ ಎಂದು ಬಂಟ್ವಾಳ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಕೊಲತ್ತಮಜಲು ಎಂಬಲ್ಲಿ ಯುವಕನೊಬ್ಬ ಕಲ್ಲು ತೂರಾಟದಿಂದ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಡಿಸೆಂಬರ್ 29, 2024ರಂದು ನಡೆದ ಘಟನೆಯ ಬಗ್ಗೆ ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಬಡಗಬೆಳ್ಳೂರು ನಿವಾಸಿ ಶಮೀರ್ (31) ಎಂಬ ಯುವಕ ದೂರು ನೀಡಿದ್ದು, ತೇಜಾಕ್ಷ

ಐದು ತಿಂಗಳ ಹಿಂದೆ ನಡೆದ ಹಲ್ಲೆಯ ಕುರಿತು ದೂರು Read More »

ಮಟ್ಕಾ, ಜುಗಾರಿ : ಬುಕ್ಕಿ ಸಹಿತ ಇಬ್ಬರ ಬಂಧನ

ಉಡುಪಿ : ಮಟ್ಕಾ ಜುಗಾರಿ ಪ್ರಕರಣಕ್ಕೆ ಸಂಬಂಧಿಸಿ ಬುಕ್ಕಿ ಸಹಿತ ಇಬ್ಬರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ವಿಠಲ ದೇವಾಡಿಗ ಹಾಗೂ ಜೂಜಾಟದ ಬುಕ್ಕಿ ಉಡುಪಿ ಲಿಯೋ ಕರ್ನೇಲಿಯೋ ಬಂಧಿತರು. ಆರೋಪಿಗಳಿಬ್ಬರನ್ನು ನ್ಯಾಯಲಯದ ಮುಂದೆ ಹಾಜರುಪಡಿಸಲಾಗಿದೆ. ಶನಿವಾರ ಕುರ್ಕಾಲು ಗ್ರಾಮದ ಶಂಕರಪುರದ ಅಶ್ವಥಕಟ್ಟೆ ಬಸ್‌ ನಿಲ್ದಾಣದ ಬಳಿ ವಿಠಲ ದೇವಾಡಿಗ ಎಂಬಾತ ಮಟ್ಕಾ ಚೀಟಿ ಬರೆಯುತ್ತಿದ್ದ. ಆತನನ್ನು  ಬಂಧಿಸಿದ್ದು, ಆತನ ವಶದಲ್ಲಿ ಮಟ್ಕಾ ಸಂಖ್ಯೆ ಬರೆದಿರುವ  ಚೀಟಿ – 1,  1,200 ನಗದು ರೂ. ಮತ್ತು ಬಾಲ್ ಪೆನ್

ಮಟ್ಕಾ, ಜುಗಾರಿ : ಬುಕ್ಕಿ ಸಹಿತ ಇಬ್ಬರ ಬಂಧನ Read More »

ದರೋಡೆಗೆ ಸಂಚು ನಡೆಸುತ್ತಿದ್ದ ಇಬ್ಬರು ದುಷ್ಕರ್ಮಿಗಳು ಸೆರೆ

ಮೂಡುಬಿದಿರೆ: ಬಡಗ ಮಿಜಾರು ಗ್ರಾಮದ ಬೊಳ್ಳಚ್ಛಾರ್ ಎಂಬಲ್ಲಿ, ದರೋಡೆ ಕೃತ್ಯವೆಸಗಲು ಸಂಚು ರೂಪಿಸುತ್ತಿದ್ದ ದುಷ್ಕರ್ಮಿಗಳನ್ನು ಬಂಧಿಸಿ, ಅವರ ಜಾಲವನ್ನು ಭೇದಿಸುವಲ್ಲಿ ಮೂಡುಬಿದಿರೆ ಪೊಲೀಸರು ಯಶಸ್ವಿಯಾಗಿದ್ದಾರೆ. ಗುರುವಾರ ರಾತ್ರಿ ಸುಮಾರು 10.30 ಗಂಟೆಗೆ. ಖಚಿತ ಮಾಹಿತಿ ಮೇರೆಗೆ ಕಾರ್ಯಪ್ರವೃತ್ತರಾದ ಪಿಎಸ್‌ಐ ಪ್ರತಿಭಾ ಮತ್ತು ಅವರ ಸಿಬ್ಬಂದಿ. ಇನ್ನೋವಾ ಕಾರಿನಲ್ಲಿದ್ದ ಐವರು ಶಂಕಿತರನ್ನು ಸುತ್ತುವರಿದು ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ, ಮಾರ್ಪಾಡಿ ಗ್ರಾಮದ ಜಗದೀಶ್ (29) ಮತ್ತು ಹೊಸಂಗಡಿ ಗ್ರಾಮದ ಪ್ರಶಾಂತ್ ಅಲಿಯಾಸ್ ಪಾಂತು (27) ಎಂಬ ಇಬ್ಬರನ್ನು ಬಂಧಿಸಲಾಗಿದೆ.

ದರೋಡೆಗೆ ಸಂಚು ನಡೆಸುತ್ತಿದ್ದ ಇಬ್ಬರು ದುಷ್ಕರ್ಮಿಗಳು ಸೆರೆ Read More »

error: Content is protected !!
Scroll to Top