ಅಪರಾಧ

ಮಗನ ಮದುವೆಗೆ ಖರೀದಿಸಿದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

ಬಂಟ್ವಾಳ: ಮಗನ ಮದುವೆಗೆಂದು ಖರೀದಿಸಿ ಬ್ಯಾಗಿನಲ್ಲಿಟ್ಟಿದ್ದ ಚಿನ್ನಾಭರಣ ದೇವಸ್ಥಾನಕ್ಕೆ ಹೋಗಿ ಬರುವಷ್ಟರಲ್ಲಿ ಕಳವಾಗಿರುವ ಘಟನೆ ಪೊಳಲಿ ದೇವಸ್ಥಾನ ವಠಾರದಲ್ಲಿ ನಡೆದಿದೆ. ಅಮ್ಮಾಡಿ ಗ್ರಾಮದ ಕಾಯರ್ ಮಾರ್ ನಿವಾಸಿ ಗೀತಾ (63)  ಮೇ 18 ರಂದು ಮಗನ ಮದುವೆ ಇರುವ ಪ್ರಯುಕ್ತ ಶನಿವಾರ 3,99,500/- ರೂಪಾಯಿ ಮೌಲ್ಯದ 41.800 ಗ್ರಾಂ ತೂಕದ ಪದಕ ಇರುವ ಕರಿಮಣಿ ಸರ ಹಾಗೂ 1 ಲಕ್ಷ ರೂಪಾಯಿ ಮೌಲ್ಯದ 9.820 ಗ್ರಾಂ ತೂಕದ ಚಿನ್ನದ ಬಳೆ ಖರೀದಿಸಿ ಸಂಪ್ರದಾಯದಂತೆ ದೇವರಲ್ಲಿ ಚಿನ್ನ ಇಟ್ಟು […]

ಮಗನ ಮದುವೆಗೆ ಖರೀದಿಸಿದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು Read More »

ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದನ ಕಳ್ಳರು

ಚಿಕ್ಕಮಗಳೂರಿನ ಕಡೂರಿನಲ್ಲಿ ಸಂಭವಿಸಿದ ಕೃತ್ಯಕ್ಕೆ ಭಾರಿ ಆಕ್ರೋಶ ಚಿಕ್ಕಮಗಳೂರು : ಬೆಂಗಳೂರು ಮಾದರಿಯಲ್ಲೇ ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ದನದ ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದ ಘಟನೆ ಬೆಳಕಿಗೆ ಬಂದಿದ್ದು, ವಿಪರೀತ ರಕ್ತ ಸೋರಿಕೆಯಾಗಿ ದನ ಮೃತಪಟ್ಟಿದೆ. ಚಿಕ್ಕಮಗಳೂರಿನ ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೃತ್ಯ ಎಸಗಲಾಗಿದ್ದು, ತೀವ್ರ ರಕ್ತಸ್ರಾವದಿಂದಾಗಿ ಹಸು ಮೃತಪಟ್ಟಿದೆ.ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ತಮ್ಮಿಹಳ್ಳಿಯಲ್ಲಿ ಶೇಖರಪ್ಪ ಎಂಬವರಿಗೆ ಸೇರಿದ ಹಸುವನ್ನು ರಾತ್ರೋರಾತ್ರಿ ಕಳವು ಮಾಡಲು ದುಷ್ಕರ್ಮಿಗಳು ಯತ್ನಿಸಿದ್ದಾರೆ. ಆದರೆ ಕಳ್ಳತನ ಯತ್ನ ವಿಫಲವಾದಾಗ ರೋಷದಿಂದ

ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದನ ಕಳ್ಳರು Read More »

ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಸೆರೆ

ಉಡುಪಿ: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಘಟನೆ ಬಲಾಯಿಪಾದೆ ಜಂಕ್ಷನ್ ಬಳಿ ನಡೆದಿದೆ. ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಪ್ರಶಾಂತ್ ಹಾಗೂ ಪ್ರವೀಣ್ ಎಂದು ಪತ್ತೆಹಚ್ಚಲಾಗಿದೆ. ಆರೋಪಿಗಳಿಬ್ಬರ ಬಳಿ ಇದ್ದ ವಿವಿಧ ಬ್ಯಾಂಡ್‌ನ ಮದ್ಯದ ಸಾಚೇಟ್, ಬೀಯರ್ ಬಾಟಲ್, ನೀರಿನ ಬಾಟಲ್‌ಗಳು ಮತ್ತು ನಗದನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಸೆರೆ Read More »

ಭದ್ರತಾ ಪಡೆ ಗುಂಡಿಗೆ ಓರ್ವ ಉಗ್ರ ಬಲಿ

ಶೋಪಿಯಾನ್‌ನಲ್ಲಿ ಭದ್ರತಾ ಪಡೆಗೆ ಮುಖಾಮುಖಿಯಾದ ಉಗ್ರರ ತಂಡ ಶ್ರೀನಗರ: ಜಮ್ಮು-ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯ ಜಿನ್‌ಪತೆರ್‌ ಎಂಬಲ್ಲಿ ಭದ್ರತಾ ಪಡೆಗೆ ಭಯೋತ್ಪಾದಕರು ಇಂದು ಬೆಳಗ್ಗೆ ಮುಖಾಮುಖಿಯಗಿದ್ದು, ಈ ಸಂದರ್ಭದಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಓರ್ವ ಉಗ್ರ ಸತ್ತಿದ್ದಾನೆ. ಇನ್ನೂ ಹಲವು ಉಗ್ರರು ಇಲ್ಲಿದ್ದು, ತೀವ್ರ ಗುಂಡಿನ ಕಾಳಗ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ. ಉಗ್ರರು ಲಷ್ಕರ್‌ ಎ ತೈಬಾ ಸಂಘಟನೆಗೆ ಸೇರಿದವರು. ಇಬ್ಬರು ಉಗ್ರರನ್ನು ಭದ್ರತಾ ಪಡೆ ಸುತ್ತುವರಿದಿದೆ. ಎನ್‌ಕೌಂಟರ್‌ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ. ವಿವರವಾದ ಮಾಹಿತಿ

ಭದ್ರತಾ ಪಡೆ ಗುಂಡಿಗೆ ಓರ್ವ ಉಗ್ರ ಬಲಿ Read More »

ಕಳ್ಳಭಟ್ಟಿ ಸಾರಾಯಿ ಸೇವಿಸಿ 16 ಮಂದಿ ಸಾವು

ನವದೆಹಲಿ: ಕಳ್ಳಭಟ್ಟಿ ಸಾರಾಯಿ ಸೇವಿಸಿ ಕನಿಷ್ಠ 16 ಮಂದಿ ಸಾವಿಗೀಡಾದ ಘಟನೆ ಪಂಜಾಬಿನ ಅಮೃತಸರ ಜಿಲ್ಲೆಯ ಐದು ಹಳ್ಳಿಗಳಲ್ಲಿ ಸಂಭವಿಸಿದೆ. ಈ ದುರಂತಕ್ಕೆ ಸಂಭವಿಸಿ ಐದು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಐದು ಹಳ್ಳಿಗಳ ಜನ ನಿನ್ನೆ ರಾತ್ರಿ ಕಳ್ಳಭಟ್ಟಿ ಸೇವಿಸಿ ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಕನಿಷ್ಠ 6 ಮಂದಿ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾತ್ರಿ 9.30ರ ವೇಳೆಗೆ ಜನರು ಕಳ್ಳಭಟ್ಟಿ ಸಾರಾಯಿ ಸೇವಿಸಿ ತೀವ್ರ ಅಸ್ವಸ್ಥರಾಗತೊಡಗಿದರು. ಪೊಲೀಸರು ಸ್ಥಳಕ್ಕೆ ತಲುಪುವಷ್ಟರಲ್ಲಿ

ಕಳ್ಳಭಟ್ಟಿ ಸಾರಾಯಿ ಸೇವಿಸಿ 16 ಮಂದಿ ಸಾವು Read More »

ಮೋದಿ ಮನೆ ಮೇಲೆ ಬಾಂಬ್‌ ಹಾಕಬೇಕು ಎಂದ ಯುವಕ ಸೆರೆ

ಯುದ್ಧಕ್ಕೆ ಮೋದಿಯೇ ಕಾರಣ ಎಂಬ ವೀಡಿಯೊ ಅಪ್‌ಲೋಡ್‌ ಮಾಡಿದ್ದ ಯುವಕ ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಮನೆ ಮೇಲೆ ಬಾಂಬ್‌ ಹಾಕಬೇಕೆಂದು ಪ್ರಚೋದನಾಕಾರಿ ಹೇಳಿಕೆಯ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹಾಕಿದ್ದ ಯುವಕನನ್ನು ಬೆಂಗಳೂರಿನ ಬಂಡೆಪಾಳ್ಯ ಪೊಲೀಸರು ಬಂಧಿಸಿದ್ದಾರೆ. ವೀಡಿಯೊ ವೈರಲ್ ಆಗುತ್ತಿದ್ದಂತೆಯೇ ಆರೋಪಿ ನವಾಜ್ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿದ್ದರು. ಆತನನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿರಿಸಲಾಗಿದೆ. ಭಾರತ ಮತ್ತು ಪಾಕಿಸ್ತಾನ ಮಧ್ಯೆ ಯುದ್ಧವಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಮನೆ ಮೇಲೆ ಯಾಕೆ ಪಾಕಿಸ್ತಾನ ಬಾಂಬ್ ಹಾಕಿಲ್ಲ?

ಮೋದಿ ಮನೆ ಮೇಲೆ ಬಾಂಬ್‌ ಹಾಕಬೇಕು ಎಂದ ಯುವಕ ಸೆರೆ Read More »

ಅತಿಯಾಗಿ ನಿದ್ರೆ ಮಾತ್ರೆ ಸೇವಿಸಿದ ತಾಯಿ-ಮಗ | ತಾಯಿ ಮೃತ್ಯು, ಮಗ ಗಂಭೀರ

ಬೆಳ್ತಂಗಡಿ: ಒಂದೆಡೆ ಆರ್ಥಿಕ ಸಮಸ್ಯೆ, ಇನ್ನೊಂದೆಡೆ ಅನಾರೋಗ್ಯದಿಂದಾಗಿ ನಿದ್ರೆ ಮಾತ್ರೆ ಸೇವಿಸಿದ ವೃದ್ಧೆ ತಾಯಿ ಸಾವಿಗೀಡಾಗಿ ಪುತ್ರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಸೋಮವಾರ ಮುಂಡಾಜೆಯಲ್ಲಿ ನಡೆದಿದೆ. ಮುಂಡಾಜೆ ಗ್ರಾಮದ ಕೂಳೂರು ನಿವಾಸಿ ದಿ. ಕುಂಞರಾಮನ್ ನಾಯರ್ ಅವರ ಪತ್ನಿ ಕಲ್ಯಾಣಿ (96) ಮೃತಪಟ್ಟವರು. ಪುತ್ರ ಖ್ಯಾತ ಜನಪದ ಕಲಾವಿದ, ಶಿಕ್ಷಕ ಜಯರಾಂ, (58) ಅವರು ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಲ್ಯಾಣಿ ಮತ್ತು ಜಯರಾಂ ಅವರ ಕೂಳೂರಿನ ಮನೆಯಲ್ಲಿ ಯಾವುದೇ ಚಟುವಟಿಕೆ ಇಲ್ಲದಿರುವುದನ್ನು

ಅತಿಯಾಗಿ ನಿದ್ರೆ ಮಾತ್ರೆ ಸೇವಿಸಿದ ತಾಯಿ-ಮಗ | ತಾಯಿ ಮೃತ್ಯು, ಮಗ ಗಂಭೀರ Read More »

ಹೊತ್ತಿ ಉರಿದ ಗೋದಾಮು : 30 ಕೋಟಿ ರೂ. ತೈಲ ನಾಶ

ಯುದ್ಧದ ಹಿನ್ನೆಲೆಯಲ್ಲಿ ತೈಲ ಸಂಗ್ರಹಿಸಿಟ್ಟಿದ್ದ ಗೋದಾಮಿನಲ್ಲಿ ಭೀಕರ ಬೆಂಕಿ ಅವಘಡ ಬೆಂಗಳೂರು: ಬೆಂಗಳೂರಿನ ನೆಲಮಂಗಲ ಬಳಿಯ ಅಡಕಮಾರನಹಳ್ಳಿ ಬಳಿ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿಹತ್ತಿಕೊಂಡು ತೈಲ ಗೋದಾಮು ಬೆಂಕಿಗಾಹುತಿಯಾಗಿರುವ ಘಟನೆ ಇಂದು ಮುಂಜಾನೆ ನಡೆದಿದೆ. ಶಲ್‌ ಕಂಪನಿಗೆ ಸೇರಿದ ಆಯಿಲ್‌ ಗೋದಾಮು ಧಗಧಗನೆ ಹೊತ್ತಿ ಉರಿದಿದೆ. ಬೆಳಗಿನ ಜಾವ ಮೂರು ಗಂಟೆಯಲ್ಲಿ ಈ ಅವಘಡ ಸಂಭವಿಸಿದೆ. ನೆಲಮಂಗಲ, ಪೀಣ್ಯ, ಯಶವಂತಪುರ ಭಾಗದ 8ಕ್ಕೂ ಹೆಚ್ಚು ಅಗ್ನಿಶಾಮಕ ತಂಡದಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ

ಹೊತ್ತಿ ಉರಿದ ಗೋದಾಮು : 30 ಕೋಟಿ ರೂ. ತೈಲ ನಾಶ Read More »

ಸುಹಾಸ್ ಶೆಟ್ಟಿ ಹತ್ಯೆ ಕುರಿತು ಸುಳ್ಳು ಸಂದೇಶ ರವಾನೆ | ಆರೋಪಿ ಅರೆಸ್ಟ್

ಮಂಗಳೂರು : ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಕರಾವಳಿಯನ್ನೇ ಬೆಚ್ಚಿಬೀಳಿಸಿದೆ. ಸುಹಾಸ್ ಶೆಟ್ಟಿ ಹತ್ಯೆಯ ವಿಷಯನುಸಾರವಾಗಿ ಸಾಕಷ್ಟು ವಿಚಾರಗಳು ಹಬ್ಬುತ್ತಲೇ ಇವೆ. ಇದೀಗ ಹತ್ಯೆಗೆ ಸಂಬಂಧಿಸಿದಂತೆ ಸುಳ್ಳು ಸಂದೇಶವೊಂದು ವೈರಲ್ ಆಗಿದ್ದು, ಸಂದೇಶ ರವಾನಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. *ಮಂಗಳೂರು ಮುಸ್ಲಿಂ ಯುವಸೇನೆ’ ಎಂಬ ವಾಟ್ಸ್ ಆ್ಯಪ್ ಗ್ರೂಪ್‌ನಲ್ಲಿ ಪ್ರಚೋದನಕಾರಿ ಸಂದೇಶ ರವಾನಿಸಿದ್ದ ಆರೋಪಿ ವಿಟ್ಲದ ಅನಾಸ್ ನನ್ನು ವಿಚಾರಣೆ ನಡೆಸಲಾಗಿದ್ದು ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಈ ಬಗ್ಗೆ ಮೂಡುಬಿದಿರೆ

ಸುಹಾಸ್ ಶೆಟ್ಟಿ ಹತ್ಯೆ ಕುರಿತು ಸುಳ್ಳು ಸಂದೇಶ ರವಾನೆ | ಆರೋಪಿ ಅರೆಸ್ಟ್ Read More »

ಹನಿ ಟ್ರ್ಯಾಪ್ ನಡೆಸಿ ಪೊಲೀಸರ ದಲ್ಲಾಳಿಯಂತೆ ವರ್ತಿಸಿದ ವಿಟ್ಲದ ನಟೋರಿಯಸ್ ರೌಡಿ ಶೀಟರ್ ಜಮಾಲ್..!

ವಿಟ್ಲ: ಸಾರ್ವಜನಿಕ ಸ್ಥಳದಲ್ಲಿ ಜುಗಾರಿ ನಡೆಯುತ್ತಿದ್ದ ವೇಳೆ ಮಾಹಿತಿ ಮೇರೆಗೆ ವಿಟ್ಲ ಪೊಲೀಸ್ ಸಿಬ್ಬಂದಿಗಳ ಜೊತೆ ಎಸ್ ಐ ಠಾಣಾ ವ್ಯಾಪ್ತಿಯ ಪಳಿಕೆ ಎಂಬಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿಗಳು ಪರಾರಿಯಾಗಿದ್ದಾರೆ. ಬಳಿಕ ವಿಟ್ಲ ಠಾಣೆಯಲ್ಲಿ ಮಧ್ಯವರ್ತಿ ಮಾಡುತ್ತಿರುವ ಈ ಹಿಂದೆ ಪಿರಿಯಾಪಟ್ಟಣ ಮತ್ತು ಉಪ್ಪಿನಂಗಡಿಯಲ್ಲಿ ಹನಿಟ್ರಾಪ್ ನಡೆಸಿ ಸಿಕ್ಕಿಬಿದ್ದಿರುವ ಆರೋಪಿ ವಿಟ್ಲದ ಜಮಾಲ್ ಜೊತೆ ಎಸೈ ಅವರು ಸೇರಿಕೊಂಡು ಜುಗಾರಿ ಆರೋಪಿಗೆ ಕರೆ ಮಾಡಿದ್ದಾರೆ. ಜಮಾಲ್ ಜೊತೆ ಮಾತುಕತೆ ನಡೆಸಿ ಮೂವತ್ತು ಸಾವಿರ ನೀಡಬೇಕು.

ಹನಿ ಟ್ರ್ಯಾಪ್ ನಡೆಸಿ ಪೊಲೀಸರ ದಲ್ಲಾಳಿಯಂತೆ ವರ್ತಿಸಿದ ವಿಟ್ಲದ ನಟೋರಿಯಸ್ ರೌಡಿ ಶೀಟರ್ ಜಮಾಲ್..! Read More »

error: Content is protected !!
Scroll to Top