ಅಪರಾಧ

ಬಂಟ್ವಾಳ : ಜೂಜಾಟವಾಡುತ್ತಿದ್ದ ಇಬ್ಬರ ಬಂಧನ  

ಬಂಟ್ವಾಳ : ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಆಟ ಆಡುತ್ತಿದ್ದ ವೇಳೆ ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ ಪೋಲಿಸರು ಇಬ್ಬರನ್ನು ಬಂಧಿಸಿದ ಘಟನೆ ಬಿ.ಸಿ.ರೋಡು ಸಮೀಪದ ಕೈಕಂಬ ಎಂಬಲ್ಲಿ ನಡೆದಿದೆ. ಬಂಟ್ವಾಳ ಮೂಡ ಗ್ರಾಮದ ಕೈಕಂಬ ಎಂಬಲ್ಲಿ ಖಾಸಗಿ ಕಟ್ಟಡವೊಂದರ ಬಳಿಯಲ್ಲಿ ಆಟಕ್ಕೆ ತಯಾರು ನಡೆಸುತ್ತಿದ್ದ ವೇಳೆ ದಾಳಿ ನಡೆಸಿದ ಪೋಲೀಸರು ಪ್ರಮುಖ ಆರೋಪಿಗಳಾದ ನಾವೂರ ನಿವಾಸಿ ಸುರೇಶ್ ಹಾಗೂ ಮಿತ್ತಬೈಲು ನಿವಾಸಿ ಭಾಸ್ಕರ ಎಂಬವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 3.500 ರೂ ನಗದು ಹಾಗೂ ಆಟಕ್ಕೆ […]

ಬಂಟ್ವಾಳ : ಜೂಜಾಟವಾಡುತ್ತಿದ್ದ ಇಬ್ಬರ ಬಂಧನ   Read More »

ಪಾಕಿಸ್ಥಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಐಎಸ್‌ಐ ಏಜೆಂಟ್‌ ಸೆರೆ

ಬೆಂಗಳೂರಿನ ಬಿಇಎಲ್‌ನಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ಬೆಂಗಳೂರು : ಗುಪ್ತಚರ ಇಲಾಖೆ ಹಾಗೂ ಸೇನಾ ಇಂಟೆಲಿಜೆನ್ಸ್ ವಿಭಾಗ ನಡೆಸಿದ ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಪಾಕಿಸ್ಥಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಗೂಢಚಾರನೊಬ್ಬನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.ಉತ್ತರಪ್ರದೇಶದ ಗಾಜಿಯಾಬಾದ್​​​ ಮೂಲದ ನಿವಾಸಿ ಬಿಇಎಲ್​​​ನಲ್ಲಿ ಕೆಲಸ ಮಾಡುತ್ತಿದ್ದ ದೀಪ್‌ರಾಜ್​ ಚಂದ್ರ ಎಂಬಾತ ಬಂಧನಕ್ಕೊಳಗಾದ ವ್ಯಕ್ತಿ. ಈತ ಪಾಕಿಸ್ಥಾನದ ಗೂಢಚಾರ ಸಂಸ್ಥೆ ಐಎಸ್‌ಐ ಪರವಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಬಾಹ್ಯಾಕಾಶ ಮತ್ತು ಸೇನೆಗಾಗಿ ಆಧುನಿಕ ರಕ್ಷಣಾ ಉಪಕರಣಗಳನ್ನು ತಯಾರಿಸುವ ಕೇಂದ್ರ ಸರಕಾರ ಸ್ವಾಮ್ಯದ ಬಿಇಎಲ್​ನ ಪ್ರಾಡಕ್ಟ್​​​

ಪಾಕಿಸ್ಥಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಐಎಸ್‌ಐ ಏಜೆಂಟ್‌ ಸೆರೆ Read More »

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 38 ಕೋ. ರೂ. ಮೌಲ್ಯದ ಕೊಕೇನ್‌ ವಶ

75 ಕೋ. ರೂ. ಮಾದಕ ವಸ್ತು ವಶವಾದ ಬೆನ್ನಲ್ಲೇ ಇನ್ನೊಂದು ಪ್ರಕರಣ ಬೆಂಗಳೂರು : ಮಂಗಳೂರು ಸಿಸಿಬಿ ಪೊಲೀಸರು ಕೆಲದಿನಗಳ ಹಿಂದೆ ಬೆಂಗಳೂರಿನಲ್ಲಿ ರಾಜ್ಯದಲ್ಲೇ ಅತಿದೊಡ್ಡ ಪ್ರಕರಣವಾದ 75 ಕೋ.ಟಿ ರೂ. ಮೌಲ್ಯದ ಮಾದಕವಸ್ತು ವಶಪಡಿಸಿಕೊಂಡ ಬೆನ್ನಲ್ಲೇ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಮಾರು 38 ಕೋ.ರೂ. ಮೌಲ್ಯದ ಕೊಕೇನ್‌ ವಶವಾಗಿದೆ.ವಿಮಾನ ನಿಲ್ದಾಣದ ಕಂದಾಯ ನಿರ್ದೇಶನಾಲಯದ (ಡಿಆರ್‌ಐ) ಅಧಿಕಾರಿಗಳು ಘಾನಾ ದೇಶದ ಮಹಿಳೆಯೊಬ್ಬಳನ್ನು ಬಂಧಿಸಿ 38.4 ಕೋಟಿ ರೂ. ಮೌಲ್ಯವಿರುವ 3.186 ಕೆಜಿ ಕೊಕೇನ್‌ ಮಾದಕ ವಸ್ತು

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 38 ಕೋ. ರೂ. ಮೌಲ್ಯದ ಕೊಕೇನ್‌ ವಶ Read More »

ಮರಕ್ಕೆ ಕಟ್ಟಿ ಹಾಕಿ ಮಹಿಳೆಗೆ ಹಲ್ಲೆ : ಸಿದ್ದರಾಮಯ್ಯ ದಿಗ್ಭ್ರಮೆ

ದೇಶಾದ್ಯಂತ ಸುದ್ದಿಯಾದ ಮಲ್ಪೆ ಬಂದರಿನಲ್ಲಿ ನಡೆದ ಘಟನೆ ಉಡುಪಿ: ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿದ ಪ್ರಕರಣ ದೇಶಾದ್ಯಂತ ಸುದ್ದಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಘಟನೆಗೆ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ ವೀಡಿಯೊ ಕಂಡು ದಿಗ್ಭ್ರಮೆಯಾಯಿತು. ಕಾರಣವೇನೆ ಇರಲಿ ಒಬ್ಬ ಮಹಿಳೆಗೆ ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಮಾತ್ರವಲ್ಲ, ಗಂಭೀರ ಅಪರಾಧವೂ ಹೌದು. ಇಂತಹ

ಮರಕ್ಕೆ ಕಟ್ಟಿ ಹಾಕಿ ಮಹಿಳೆಗೆ ಹಲ್ಲೆ : ಸಿದ್ದರಾಮಯ್ಯ ದಿಗ್ಭ್ರಮೆ Read More »

ನಾಗಪುರ ಕೋಮು ಗಲಭೆ : ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿದವನ ಫೋಟೊ ಬಿಡುಗಡೆ

ಗಡ್ಕರಿ ಎದುರು 6.5 ಲಕ್ಷ ಮತಗಳಿಂದ ಸೋತವನೇ ಗಲಭೆಯ ಸೂತ್ರಧಾರ ಮುಂಬಯಿ: ಆರ್‌ಎಸ್‌ಎಸ್‌ ಕೇಂದ್ರ ಕಚೇರಿಯಿರುವ ನಾಗಪುರ ನಗರದ ಮಹಲ್‌ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದಿರುವ ಕೋಮು ಹಿಂಸಾಚಾರದ ರೂವಾರಿಯ ಫೋಟೊವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಫಾಹಿಮ್‌ ಶಮೀಮ್‌ ಖಾನ್‌ ಎಂಬಾತನ ಪ್ರಚೋದನಕಾರಿ ಭಾಷಣದಿಂದ ಹಿಂಸಾಚಾರ ಸಂಭವಿಸಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಫಾಹಿಮ್‌ ಖಾನ್‌ ನಾಗಪುರದ ಯಶೋಧರ ನಗರದ ಸಂಜಯ್‌ ಭಾಗ್‌ ಕಾಲನಿಯ ನಿವಾಸಿಯಾಗಿದ್ದು, ಗಲಭೆಯ ಬಳಿಕ ತಲೆಮರೆಸಿಕೊಂಡಿದ್ದಾನೆ. ನಾಗಪುರ ನಗರದಲ್ಲಿ ರಾಜಕೀಯ ಮುಖಂಡನಾಗಿ ಗುರುತಿಸಿಕೊಂಡಿದ್ದ 38ರ

ನಾಗಪುರ ಕೋಮು ಗಲಭೆ : ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿದವನ ಫೋಟೊ ಬಿಡುಗಡೆ Read More »

ಮೀನಿನ ಬರಕ್ಕೆ ಲೈಟ್‌ ಫಿಶಿಂಗ್‌ ಕಾರಣ : ಸಿಕ್ಕಾಪಟ್ಟೆ ಬೆಲೆ ಏರಿಕೆಯಿಂದ ಮತ್ಸ್ಯಪ್ರಿಯರು ಕಂಗಾಲು

ಕೊನೆಗೂ ಕಾರ್ಯಾಚರಣೆಗಿಳಿದ ಮೀನುಗಾರಿಕೆ ಇಲಾಖೆ ಉಡುಪಿ : ಈ ವರ್ಷ ಕಂಡುಬಂದಿರುವ ಮೀನಿನ ಕೊರತೆಗೆ ಸಮುದ್ರದಲ್ಲಿ ನಡೆಯುತ್ತಿರುವ ಲೈಟ್‌ಫಿಶಿಂಗ್‌ ಕಾರಣ ಎಂಬ ಕೂಗು ಕೇಳಿ ಬಂದ ಹಿನ್ನೆಲೆಯಲ್ಲಿ ಈಗ ಮೀನುಗಾರಿಕೆ ಇಲಾಖೆ ಕರಾವಳಿ ರಕ್ಷಣಾ ಪಡೆಯ ಸಹಯೋಗದಲ್ಲಿ ಲೈಟ್‌ ಫಿಶಿಂಗ್‌ ಮಟ್ಟ ಹಾಕಲು ತೀವ್ರ ಕಾರ್ಯಾಚರಣೆ ಪ್ರಾರಂಭಿಸಿದೆ. ಈ ವರ್ಷ ಮಾರ್ಚ್‌ಗಾಗುವಾಗಲೇ ಮೀನಿನ ತೀವ್ರ ಬರ ಕಂಡುಬಂದಿದ್ದು, ಸಾಕಷ್ಟು ಮೀನು ದೊರೆಯದೆ ಹಾಕಿದ ಡೀಸೆಲ್‌ನ ಖರ್ಚು ಕೂಡ ಹುಟ್ಟುತ್ತಿಲ್ಲ ಎಂಬ ಕಾರಣಕ್ಕೆ ಆಳ ಸಮುದ್ರ ಮೀನುಗಾರಿಕೆಯ ಮೀನುಗಳೆಲ್ಲ

ಮೀನಿನ ಬರಕ್ಕೆ ಲೈಟ್‌ ಫಿಶಿಂಗ್‌ ಕಾರಣ : ಸಿಕ್ಕಾಪಟ್ಟೆ ಬೆಲೆ ಏರಿಕೆಯಿಂದ ಮತ್ಸ್ಯಪ್ರಿಯರು ಕಂಗಾಲು Read More »

ಠಾಣೆಯಲ್ಲೇ ಇಸ್ಪೀಟ್‌ ಆಡಿದ ಪೊಲೀಸರು!

ಎಎಸ್‌ಐ ಸಹಿತ ಐವರು ಅಮಾನತು ಬೆಂಗಳೂರು: ಜೂಜಾಡುವವರನ್ನು ಹಿಡಿದು ತಂದು ರುಬ್ಬಿ ಪಾಠ ಕಲಿಸಬೇಕಾದ ಪೊಲೀಸರು ತಾವೇ ಠಾಣೆಯಲ್ಲಿ ಯೂನಿಫಾರ್ಮ್‌ ಧರಿಸಿಕೊಂಡು ಜೂಜಾಡಿದರೆ ಹೇಗೆ? ಇಂಥ ಒಂದು ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಪೊಲೀಸ್‌ ಠಾಣೆಯಲ್ಲಿ ಸಂಭವಿಸಿದೆ. ಜೂಜಾಡಿದ ಐವರು ಪೊಲೀಸ್‌ ಸಿಬ್ಬಂದಿಯನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಆದೇಶ ಹೊರಡಿಸಿದ್ದಾರೆ. ಚಿತ್ತಾಪುರ ತಾಲೂಕಿನ ವಾಡಿ ಠಾಣೆಯ ಎಎಸ್​ಐ ಮಹಿಮೂದ್ ಮಿಯಾ, ಹೆಡ್​ಕಾನ್ಸ್‌ಟೆಬಲ್‌ಗಳಾದ ನಾಗರಾಜ್, ಸಾಯಿಬಣ್ಣ, ಇಮಾಮ್ ಮತ್ತು ಕಾನ್‌ಸ್ಟೆಬಲ್‌ ನಾಗಭೂಷಣ್

ಠಾಣೆಯಲ್ಲೇ ಇಸ್ಪೀಟ್‌ ಆಡಿದ ಪೊಲೀಸರು! Read More »

ರಾಜ್ಯ ರಾಜಕೀಯ ಪಡಸಾಲೆಯಲ್ಲಿ ಮತ್ತೆ ಹನಿಟ್ರ್ಯಾಪ್‌ ಗುಸುಗುಸು

ಪ್ರಭಾವಿ ಸಚಿವರನ್ನು ಹನಿಟ್ರ್ಯಾಪ್‌ ಬಲೆಗೆ ಕೆಡವಲು ಇನ್ನೋರ್ವ ಸಚಿವರಿಂದ ಪ್ರಯತ್ನ ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೆ ಹನಿಟ್ರ್ಯಾಪ್‌ ಗುಸುಗುಸು ಕೇಳಿಸಲಾರಂಭಿಸಿದೆ. ಪ್ರಭಾವಿ ಸಚಿವರೊಬ್ಬರು ಹನಿಟ್ರ್ಯಾಪ್ ಖೆಡ್ಡಾದಲ್ಲಿ ಸಿಲುಕಿದ್ದಾರೆ ಎಂಬ ಸುದ್ದಿ ರಾಜಕೀಯ ಪಡಸಾಲೆಯಲ್ಲಿ ಭಾರಿ ಸಂಚಲನ ಮೂಡಿಸಿದೆ. ತುಮಕೂರು ಕಡೆಯ ಸಚಿವರನ್ನು ಹನಿಟ್ರ್ಯಾಪ್‌ ಜಾಲಕ್ಕೆ ಬೀಳಿಸಿ ಮಟ್ಟ ಹಾಕಲು ಪ್ರಯತ್ನಿಸಲಾಗಿದೆ. ಈ ಹನಿಟ್ರ್ಯಾಪ್‌ ಜಾಲ ಹೆಣೆದಿರುವುದು ಕಾಂಗ್ರೆಸಿನವರೇ ಆದ ಇನ್ನೊಬ್ಬ ಪ್ರಭಾವಿ ಸಚಿವರು ಎಂಬ ವದಂತಿಗಳು ಕಳೆದ ಎರಡು ದಿನಗಳಿಂದ ಹರಿದಾಡುತ್ತಿವೆ. ಕೆಲ ದಿನಗಳಿಂದ ತೆರೆಮರೆಯಲ್ಲಿ ನಡೆಯುತ್ತಿದ್ದ

ರಾಜ್ಯ ರಾಜಕೀಯ ಪಡಸಾಲೆಯಲ್ಲಿ ಮತ್ತೆ ಹನಿಟ್ರ್ಯಾಪ್‌ ಗುಸುಗುಸು Read More »

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಯತ್ನಾಳ್‌ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಗೋಲ್ಡ್‌ ಸ್ಮಗ್ಲಿಂಗ್‌ ಮಾಡಿ ಸಿಕ್ಕಿಬಿದ್ದರುವ ನಟಿ ರನ್ಯಾ ರಾವ್ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿದ ಆರೋಪದ ಮೇಲೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.ಅಕುಲ ಅನುರಾಧ ಎಂಬವರು ಯತ್ನಾಳ್‌ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಯತ್ನಾಳ್‌ ಅವರು ಅವಾಚ್ಯ ಪದ ಬಳಸಿ ನಟಿಯ ತೇಜೋವಧೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ದೂರಿನನ್ವಯ ಬಿಎನ್‌ಎಸ್‌ ಸೆಕ್ಷನ್‌ 79 ಅಡಿ ಎಫ್‌ಐಆರ್‌ ದಾಖಲಾಗಿದೆ.ಆಕೆ ದೇಹದಾದ್ಯಂತ ಚಿನ್ನವನ್ನು ಹೊಂದಿದ್ದಳು, ರಂಧ್ರಗಳನ್ನು ಹೊಂದಿರುವಲ್ಲೆಲ್ಲಾ

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಯತ್ನಾಳ್‌ ವಿರುದ್ಧ ಎಫ್‌ಐಆರ್‌ Read More »

ಜ್ಯೂಸ್‍ ಕುಡಿತಯುತ್ತಿದ್ದ ಅನ್ಯಕೋಮಿನ ಜೋಡಿ | ಪೋಲಿಸರಿಗೊಪ್ಪಿಸಿದ ಹಿಂದೂ ಕಾರ್ಯಕರ್ತರು

ಪುತ್ತೂರು: ಬಸ್ ನಿಲ್ದಾಣದ ಬಳಿಯ ಹೋಟೆಲ್ ಒಂದರಲ್ಲಿ ಅನ್ಯಕೋಮಿನ ಯುವಕನೋರ್ವ ಹಿಂದು ಯುವತಿಯೊಂದಿಗೆ ಜ್ಯೂಸ್ ಕುಡಿಯುತ್ತಿದ್ದ ಸಂದರ್ಭ ಸಂಘಟನೆಗಳ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿ ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ. ಇಬ್ಬರು ಶಿವಮೊಗ್ಗ ಮೂಲದವರು ಎಂದು ತಿಳಿದು ಬಂದಿದ್ದು, ಯುವತಿ ನಗರದಲ್ಲಿ ಪಿಜಿ ಯಿಂದ ಕಾಲೇಜಿಗೆ ತೆರಳುತ್ತಿದ್ದಳು ಎನ್ನಲಾಗಿದೆ. ಠಾಣೆಗೆ ಪುತ್ತೂರು ಬಿಜೆಪಿ ನಿಯೋಗ ಬೇಟಿ ನೀಡಿದರು. ಆದರೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಸದ್ಯ ಪೊಲೀಸರು ಇಬ್ಬರ ಮನೆಯವರಿಗೆ ಮಾಹಿತಿ ನೀಡಿ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಜ್ಯೂಸ್‍ ಕುಡಿತಯುತ್ತಿದ್ದ ಅನ್ಯಕೋಮಿನ ಜೋಡಿ | ಪೋಲಿಸರಿಗೊಪ್ಪಿಸಿದ ಹಿಂದೂ ಕಾರ್ಯಕರ್ತರು Read More »

error: Content is protected !!
Scroll to Top