ಅಪರಾಧ

ಕೊಲೆ ಪ್ರಕರಣದ ಅಪರಾಧಿಗೆ ಜೀವಾವಧಿ ಶಿಕ್ಷೆ

ಉಳ್ಳಾಲದ ಮುಕ್ಕಚ್ಚೇರಿಯಲ್ಲಿ ನಡೆದಿದ್ದ ಕೊಲೆ ಮಂಗಳೂರು : ಉಳ್ಳಾಲದ ಮುಕ್ಕಚ್ಚೇರಿಯಲ್ಲಿ 2017ರ ಅಕ್ಟೋಬರ್ 4ರಂದು ನಡೆದಿದ್ದ ಝಬೇರ್ ಎಂಬವರ ಕೊಲೆ ಮತ್ತು ಇಲ್ಯಾಸ್ ಎಂಬವರ ಕೊಲೆಯತ್ನ ಪ್ರಕರಣ ಅಪರಾಧಿ ಅಬ್ದುಲ್ ರಹ್ಮಾನ್ ಸುಹೇಲ್‌ಗೆ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 2017ರ ಅಕ್ಟೋಬರ್ 4ರಂದು ರಾತ್ರಿ ಜುಬೇರ್ ಮತ್ತು ಇಲ್ಯಾಸ್ ಮಾತನಾಡುತ್ತಿದ್ದಾಗ ಮಾರಕಾಸ್ತ್ರಗಳೊಂದಿಗೆ ಬಂದ ತಂಡವೊಂದು ಅವರ ಮೇಲೆ ದಾಳಿ ನಡೆಸಿತ್ತು. ಈ ವೇಳೆ ಜುಬೇರ್ ಕೊಲೆಯಾಗಿದ್ದರು. ಮಧ್ಯಪ್ರವೇಶಿಸಲು […]

ಕೊಲೆ ಪ್ರಕರಣದ ಅಪರಾಧಿಗೆ ಜೀವಾವಧಿ ಶಿಕ್ಷೆ Read More »

ಮಹಾರಾಷ್ಟ್ರದ ಸಚಿವ ನಿತೇಶ್‌ ರಾಣೆಗೆ ಜೈಲು ಶಿಕ್ಷೆ

ಈ ಒಂದು ಪ್ರತಿಭಟನೆ ಮುಳುವಾಯಿತು ಮುಂಬೈ: ಮಹಾರಾಷ್ಟ್ರದ ಮೀನುಗಾರಿಕೆ ಮತ್ತು ಬಂದರು ಅಭಿವೃದ್ಧಿ ಸಚಿವ ನಿತೇಶ್ ನಾರಾಯಣ ರಾಣೆ ಅವರಿಗೆ ಸ್ಥಳೀಯ ಕೋರ್ಟ್‌ 1 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಇಂಜಿನಿಯರ್‌ ಮೇಲೆ ಕೆಸರು ಸುರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಂಧುದುರ್ಗದ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ನಿತೇಶ್ ರಾಣೆ ಅವರನ್ನು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 504 (ಸಾರ್ವಜನಿಕ ಶಾಂತಿಗೆ ಭಂಗ ತರುವ ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ದೋಷಿ ಎಂದು ಘೋಷಿಸಿದೆ. ನ್ಯಾಯಾಲಯ ಒಂದು

ಮಹಾರಾಷ್ಟ್ರದ ಸಚಿವ ನಿತೇಶ್‌ ರಾಣೆಗೆ ಜೈಲು ಶಿಕ್ಷೆ Read More »

ರೈಲು ಹಳಿಯಲ್ಲಿ ಸ್ಫೋಟ : ಛಿದ್ರಗೊಂಡ ಮೃತದೇಹ ಪತ್ತೆ

ವಿಧ್ವಂಸಕ ಕೃತ್ಯ ಎಸಗಿರುವ ಶಂಕೆ ಚಂಡಿಗಢ : ಪಂಜಾಬ್‌ನ ಪಟಿಯಾಲದಲ್ಲಿ ಸೋಮವಾರ ತಡರಾತ್ರಿ ರೈಲು ಹಳಿಯಲ್ಲಿ ಸ್ಫೋಟ ಸಂಭವಿಸಿ ಹಳಿ ಹಾನಿಗೊಳಗಾಗಿದೆ. ಶಂಭು-ಅಂಬಾಲ ರೈಲು ಹಳಿಯಲ್ಲಿ ಸ್ಫೋಟದ ಸ್ಥಳದ ಬಳಿ ಒಂದು ಛಿದ್ರಗೊಂಡ ಮೃತದೇಹ ಪತ್ತೆಯಾಗಿದ್ದು, ತನಿಖೆ ಆರಂಭಿಸಲಾಗಿದೆ. ಈ ಸ್ಫೊಟದಿಂದಲೇ ವ್ಯಕ್ತರಿ ಛಿದ್ರವಾಗಿರಬೇಕೆಂದು ಸಂಶಯಿಸಲಾಗಿದೆ. ಆದರೆ ಸ್ಫೋಟಕ್ಕೆ ಕಾರಣವೇನೆಂದು ಸ್ಪಷ್ಟವಾಗಿಲ್ಲ. ಪೊಲೀಸರ ಪ್ರಕಾರ ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಸರಕು ರೈಲುಗಳಿಗೆ ಮೀಸಲಾಗಿರುವ ರೈಲ್ವೆ ಹಳಿಯ ಬಳಿ ಸ್ಫೋಟ ಸಂಭವಿಸಿದೆ. ಸ್ಫೋಟದ ನಂತರ ಪೊಲೀಸ್

ರೈಲು ಹಳಿಯಲ್ಲಿ ಸ್ಫೋಟ : ಛಿದ್ರಗೊಂಡ ಮೃತದೇಹ ಪತ್ತೆ Read More »

ಸಹೋದರಿ ಮೃತಪಟ್ಟಿರುವುದನ್ನು ಸಾಬೀತುಪಡಿಸಲು ಅಸ್ಥಿಪಂಜರವನ್ನೇ ಬ್ಯಾಂಕಿಗೆ ತಂದ ವ್ಯಕ್ತಿ!

ಉರಿಬಿಸಿಲಿನಲ್ಲಿ ಅಸ್ಥಿಪಂಜರವನ್ನು ಹೊತ್ತುಕೊಂಡು 3 ಕಿ.ಮೀ. ನಡೆದ ಆದಿವಾಸಿ ಜನಾಂಗದ ವ್ಯಕ್ತಿ ಭುವನೇಶ್ವರ: ಸಹೋದರಿ ಮೃತಪಟ್ಟಿರುವುದನ್ನು ಸಾಬೀತುಪಡಿಸಲು ಆಕೆಯ ಅಸ್ಥಿಪಂಜರವನ್ನೇ ವ್ಯಕ್ತಿಯೊಬ್ಬರು ಉರಿ ಬಿಸಿಲಿನಲ್ಲಿ 3 ಕಿಲೋಮೀಟರ್‌ ದೂರ ಹೊತ್ತುಕೊಂಡು ಬ್ಯಾಂಕಿಗೆ ತಂದ ವಿಲಕ್ಷಣ ಘಟನೆಯೊಂದು ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ ಸಂಭವಿಸಿದೆ. ಕಿಯೋಂಜಾರ್ ಜಿಲ್ಲೆಯ ಡಯಾನಾಲಿ ಗ್ರಾಮದ ಜಿತು ಮುಂಡಾ ಎಂಬವರ ಸಹೋದರಿ ಕಾಕ್ರಾ ಮುಂಡಾ ಎರಡು ತಿಂಗಳ ಹಿಂದೆ ನಿಧನರಾಗಿದ್ದರು. ಕಾಕ್ರಾ ಅವರ ಪತಿ ಮತ್ತು ಮಗು ಮೊದಲೇ ಮೃತಪಟ್ಟಿದ್ದರಿಂದ ಜಿತು ಅವರೇ ಬದುಕುಳಿದರುವ ಏಕೈಕ

ಸಹೋದರಿ ಮೃತಪಟ್ಟಿರುವುದನ್ನು ಸಾಬೀತುಪಡಿಸಲು ಅಸ್ಥಿಪಂಜರವನ್ನೇ ಬ್ಯಾಂಕಿಗೆ ತಂದ ವ್ಯಕ್ತಿ! Read More »

ಯುವತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಬಾಡಿಗೆ ಮನೆಯಲ್ಲಿ ಪತ್ತೆ : ಕೊಲೆ ಶಂಕೆ

ಪ್ರತಿಷ್ಠಿತ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಯುವತಿ ಸಾವಿನ ಸುತ್ತ ಅನುಮಾನ ಬೆಂಗಳೂರು: ಬಾಡಿಗೆ ಮನೆಯಲ್ಲಿ ಬೆತ್ತಲೆ ಹಾಗೂ ಕೊಳೆತ ಸ್ಥಿತಿಯಲ್ಲಿ ಯುವತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಪ್ರತಿಷ್ಠಿತ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ 34 ವರ್ಷದ ಪೂಜಾ ದತ್ತ ಎಂಬ ಯುವತಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಪೂಜಾ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದವಳು ಇತ್ತೀಚಿಗೆ ಕೆಲಸ ಕಳೆದುಕೊಂಡಿದ್ದರು. ಬಾಡಿಗೆ ಮನೆಯಲ್ಲಿ ವಾಸವಾಗಿದ್ದಋು. ಮನೆಯಲ್ಲಿ ಮೃತದೇಹ ಪತ್ತೆಯಾಗಿದ್ದು, ಆಡುಗೋಡಿ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೆಯಿಂದ ಭಾರಿ ದುರ್ನಾತ

ಯುವತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಬಾಡಿಗೆ ಮನೆಯಲ್ಲಿ ಪತ್ತೆ : ಕೊಲೆ ಶಂಕೆ Read More »

ಸಂಬಳ ಕೊಡಲಿಲ್ಲ ಎಂದು ಚಿನ್ನಸ್ವಾಮಿ ಕ್ರೀಡಾಂಗಣದ ಸಿಸಿಟಿವಿ ಕೇಬಲ್‌ ಕಟ್‌ ಮಾಡಿದ ನೌಕರರು!

ಐಪಿಎಲ್‌ ಪಂದ್ಯದ ದಿನವೇ ಸಿಸಿಟಿವಿ ಬಂದ್‌ ಆಗಿ ಆತಂಕದ ಪರಿಸ್ಥಿತಿ ಬೆಂಗಳೂರು : ಕಳೆದ ಶುಕ್ರವಾರ ಆರ್​ಸಿಬಿ ಹಾಗೂ ಗುಜರಾತ್ ಟೈಟನ್ಸ್ ನಡುವಿನ ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 240ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮರಾಗಳ ಕೇಬಲ್ ಕಟ್ ಆಗಿ ಆತಂಕ ಮೂಡಿಸಿತ್ತು. ಇದು ವಿಧ್ವಂಸಕ ಕೃತ್ಯವಿರಬಹುದು ಎಂಬ ಅನುಮಾನದಲ್ಲಿ ತನಿಖೆ ಕೈಗೊಂಡಿದ್ದ ಕಬ್ಬನ್ ಪಾರ್ಕ್ ಪೊಲೀಸರಿಗೆ ಈಗ ತೀರಾ ವೈಯಕ್ತಿಕ ಕಾರಣ ತಿಳಿದುಬಂದಿದೆ. ಕ್ರೀಡಾಂಗಣದ ಭದ್ರತೆಗಾಗಿ ಅಳವಡಿಸಲಾಗಿದ್ದ ಸಿಸಿಟಿವಿ ನಿರ್ವಹಣೆಯ ಹೊಣೆಯನ್ನು ‘IVS ಡಿಜಿಟಲ್ ಸೊಲ್ಯೂಷನ್’ ಎಂಬ

ಸಂಬಳ ಕೊಡಲಿಲ್ಲ ಎಂದು ಚಿನ್ನಸ್ವಾಮಿ ಕ್ರೀಡಾಂಗಣದ ಸಿಸಿಟಿವಿ ಕೇಬಲ್‌ ಕಟ್‌ ಮಾಡಿದ ನೌಕರರು! Read More »

ಚಿನ್ನಾಭರಣಕ್ಕಾಗಿ ಮಹಿಳೆಯ ಕೊಲೆ: 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಪುತ್ತೂರು: ಚಿನ್ನಾಭರಣದ ಆಸೆಯಿಂದ ಹದಿನಾಲ್ಕು ವರ್ಷಗಳ ಹಿಂದೆ ತನ್ನ ಸಂಬಂಧಿ ಮಹಿಳೆಯನ್ನು ಹತ್ಯೆ ಮಾಡಿ ಹೈಕೋರ್ಟ್‌ನಿಂದ ‌ಶಿಕ್ಷೆಗೆ ತುತ್ತಾಗಿದ್ದರೂ, ತಲೆಮರೆಸಿಕೊಂಡಿದ್ದ ಆರೋಪಿಯನ್ನು ಆಂಧ್ರಪ್ರದೇಶದಲ್ಲಿ ಕಡಬ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಸುಳ್ಯದ ಅಜ್ಜಾವರ ನಿವಾಸಿ ಅಬ್ದುಲ್ ಅಜೀಜ್ ಎಂದು ಗುರುತಿಸಲಾಗಿದೆ. ಅಜೀಜ್ 2012 ರ ಜನವರಿ 9 ರಂದು ಬೆಳ್ತಂಗಡಿಯ ತಣ್ಣೀರುಪಂಥದ ತನ್ನ ಸಂಬಂಧಿ ಖತೀಜಮ್ಮ ಎಂಬಾಕೆಯನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ್ದ. ಈತ ವಿದೇಶದಿಂದ ಮರಳಿದ್ದ ‌ಸಮಯ ಅದಾಗಿದ್ದು, ಆತನಿಗೆ ಹಣದ ಅವಶ್ಯಕತೆ ಇತ್ತು. ಅದಕ್ಕಾಗಿ ಆತ ತನ್ನ

ಚಿನ್ನಾಭರಣಕ್ಕಾಗಿ ಮಹಿಳೆಯ ಕೊಲೆ: 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ Read More »

ಪಾಕಿಸ್ತಾನದಲ್ಲಿ ಇನ್ನೋರ್ವ ಉಗ್ರ ಮುಖಂಡನ ಹತ್ಯೆ

ಲಷ್ಕರ್‌ನ ಟಾಪ್‌ ಕಮಾಂಡರ್‌ ಬಂದೂಕುಧಾರಿಗಳ ಗುಂಡಿಗೆ ಬಲಿ ಇಸ್ಲಾಮಾಬಾದ್‌: ಲಷ್ಕರ್‌ ಇ ತಯ್ಯಬ ಉಗ್ರಗಾಮಿ ಸಂಘಟನೆಯ ಟಾಪ್‌ ಲೆವೆಲ್‌ ಕಮಾಂಡರ್‌ ಶೇಕ್‌ ಯೂಸುಫ್‌ ಆಫ್ರಿದಿ ಎಂಬಾತನನ್ನು ಅಜ್ಞಾತ ಬಂದೂಕುಧಾರಿಗಳು ಪಾಕಿಸ್ತಾನದ ಖೈಬರ್‌ ಪಖ್ತೂನ್‌ಖ್ವಾದಲ್ಲಿ ಅತಿ ಸಮೀಪದಿಂದ ಗುಂಡಿಕ್ಕಿ ಸಾಯಿಸಿದ್ದಾರೆ. ಲಷ್ಕರ್‌ನ ಸ್ಥಾಪಕ ಹಾಫಿದ್‌ ಸಯೀದ್‌ನ ಅತಿ ನಿಕಟ ಕಮಾಂಡರ್‌ ಅಗಿದ್ದ ಆಫ್ರಿದಿಯನ್ನು ಬಂದೂಕುಧಾರಿಗಳು ತಪ್ಪಿಸಲು ಸಾಧ್ಯವೆ ಇಲ್ಲದ ರೀತಿಯಲ್ಲಿ ಖೆಡ್ಡಾಕ್ಕೆ ಕೆಡವಿ ಗುಂಡಿಕ್ಕಿದ್ದಾರೆ ಎಂದು ವರದಿಯಾಗಿದೆ. ಆಫ್ರಿದಿ ಲಷ್ಕರ್‌ನ ಅತ್ಯುನ್ನತ ಕಮಾಂಡರ್‌ ಆಗಿದ್ದ ಮತ್ತು ಅಫಘಾನಿಸ್ತಾನದ ಗಡಿಗೆ

ಪಾಕಿಸ್ತಾನದಲ್ಲಿ ಇನ್ನೋರ್ವ ಉಗ್ರ ಮುಖಂಡನ ಹತ್ಯೆ Read More »

ಖಾಸಗಿ ಜಾಗಕ್ಕೆ ನುಗ್ಗಿ ಹಲ್ಲೆ : 8 ಮಂದಿ ವಿರುದ್ಧ ದೂರು

ಬೆಳ್ತಂಗಡಿ : ಗರ್ಡಾಡಿಯಲ್ಲಿರುವ ಖಾಸಗಿ ಜಾಗಕ್ಕೆ ಆರೋಪಿಗಳು ಅಕ್ರಮವಾಗಿ ಪ್ರವೇಶ ಮಾಡಿ ಕೈಯಿಂದ ಮತ್ತು ಲೈಸೆನ್ಸ್ ಇಲ್ಲದ ಗನ್‌ನಿಂದ ಹಲ್ಲೆ ಮಾಡಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 8 ಮಂದಿ ಆರೋಪಿಗಳ ವಿರುದ್ಧ ಆರ್ಮ್ಸ್ ಆಕ್ಟ್‌ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರಾದ ಪಿ.ಆರ್.ಮನೋಹರ ಎಂಬವರು ಏ.24ರಂದು ಮಧ್ಯಾಹ್ನ 12.30 ಗಂಟೆಗೆ ವಕೀಲೆ ಟಿಸ್ಮಿ ಮತ್ತು ಶಾಂತಲಾ ರಾಜೇಶ್ ಪ್ರಭು ಹಾಗೂ ಅವರ ಕೆಲಸದವರ ಜೊತೆಯಲ್ಲಿ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದಲ್ಲಿರುವ ಅವರ ಪಟ್ಟಾ ಜಾಗಕ್ಕೆ ಭೇಟಿ ನೀಡಿದಾಗ

ಖಾಸಗಿ ಜಾಗಕ್ಕೆ ನುಗ್ಗಿ ಹಲ್ಲೆ : 8 ಮಂದಿ ವಿರುದ್ಧ ದೂರು Read More »

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಭೀತಿ ಸೃಷ್ಟಿಸಿದ ವ್ಯಕ್ತಿಯ ಬಂಧನ

ಒಂಟಿ ಮಹಿಳೆಯರು ಇರುವ ಮನೆಗಳಿಗೆ ಬಂದು ನೀರು ಕೇಳಿದ ಯುವಕ ಉಪ್ಪಿನಂಗಡಿ: ನೀರು ಕೇಳುವ ನೆಪದಲ್ಲಿ ಹಾಡಹಗಲೇ ಮನೆಗೆ ಬಂದು ಮಹಿಳೆಯರೇ ಇರುವುದನ್ನು ಖಚಿತಪಡಿಸಿಕೊಂಡು ಒಳಗೆ ನುಗ್ಗಿ ಬಾಗಿಲ ಚಿಲಕ ಹಾಕಿ ಮನೆ ಮಂದಿಯನ್ನು ಭೀತಿಗೊಳಪಡಿಸಿದ್ದ ಅಪರಿಚಿತ ವ್ಯಕ್ತಿಯನ್ನು ಉಪ್ಪಿನಂಗಡಿಯ ನಾಗರಿಕರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಭಾನುವಾರ ನಡೆದಿದೆ. ಇಲ್ಲಿನ ಬ್ಯಾಂಕ್ ರಸ್ತೆಯ ಬಳಿ ವೃದ್ಧೆಯೋರ್ವರು ಮಾತ್ರ ಮನೆಯಲ್ಲಿದ್ದ ವೇಳೆ ನೀರು ಕೇಳುವ ನೆಪದಲ್ಲಿ ಬಂದ ವ್ಯಕ್ತಿ ವೃದ್ಧೆ ನೀರು ತರಲೆಂದು ಅಡುಗೆ ಕೋಣೆಗೆ ಹೋದ ವೇಳೆ

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಭೀತಿ ಸೃಷ್ಟಿಸಿದ ವ್ಯಕ್ತಿಯ ಬಂಧನ Read More »

error: Content is protected !!
Scroll to Top