ಅಪರಾಧ

ರಷ್ಯಾದ ಕ್ಷಿಪಣಿ ಬಡಿದು ಮಲೇಷ್ಯಾದ ವಿಮಾನ ಪತನ

298 ಮಂದಿಯ ಸಾವಿಗೆ ರಷ್ಯಾವೇ ನೇರ ಹೊಣೆ ಎಂಬ ಸ್ಫೋಟಕ ಮಾಹಿತಿ ಬಹಿರಂಗ ಸ್ಟ್ರಾಸ್‌ಬರ್ಗ್: 283 ಪ್ರಯಣಿಕರು ಮತ್ತು 15 ಸಿಬ್ಬಂದಿ ಸಾವಿಗೀಡಾಗಿದ್ದ ಮಲೇಷ್ಯಾದ ನಾಗರಿಕ ಯಾನ ವಿಮಾನ ಪತನಕ್ಕೆ ಯಾವುದೇ ತಾಂತ್ರಿಕ ದೋಷ ಕಾರಣವಲ್ಲ, ರಷ್ಯಾದ ಕ್ಷಿಪಣಿ ಬಡಿದು ಈ ವಿಮಾನ ಪತನಗೊಂಡಿತ್ತು ಎಂಬ ಸ್ಫೋಟಕ ಮಾಹಿತಿಯನ್ನು ಯುರೋಪ್‌ನ ಉನ್ನತ ಮಾನವ ಹಕ್ಕುಗಳ ನ್ಯಾಯಾಲಯ ಬಹಿರಂಗಪಡಿಸಿದೆ. 2014ರ ಜುಲೈ 17ರಂದು ಮಲೇಷ್ಯಾ ಏರ್‌ಲೈನ್ಸ್‌ MH17 ಬೋಯಿಂಗ್‌ 777 ವಿಮಾನ ಪತನಗೊಂಡು ಅದರಲ್ಲಿದ್ದ ಎಲ್ಲ 283 ಪ್ರಯಾಣಿಕರು […]

ರಷ್ಯಾದ ಕ್ಷಿಪಣಿ ಬಡಿದು ಮಲೇಷ್ಯಾದ ವಿಮಾನ ಪತನ Read More »

ಯುವತಿಯರ ವಿಡಿಯೋ ಶೂಟ್‌ ಮಾಡಿ ಇನ್‌ಸ್ಟಾಗ್ರಾಂಗೆ ಅಪ್‌ಲೋಡ್‌ : ಆರೋಪಿ ಸೆರೆ

ಬೆಂಗಳೂರಿನ ಜನನಿಬಿಢ ರಸ್ತೆಗಳಲ್ಲಿ ನಡೆದುಕೊಂಡು ಹೋಗುವವರ ವಿಡಿಯೋ ಮಾಡುತ್ತಿದ್ದ ಆರೋಪಿ ಬೆಂಗಳೂರು: ಬೆಂಗಳೂರಿನ ಜನನಿಬಿಢ ರಸ್ತೆಯಲ್ಲಿ ನಡೆದುಹೋಗುವ ಮಹಿಳೆಯರ ವಿಡಿಯೋ ಶೂಟ್‌ ಮಾಡಿ ಅಸಭ್ಯ ಕಮೆಂಟ್‌ಗಳೊಂದಿಗೆ ಇನ್‌ಗ್ರಾಂಗೆ ಅಪ್‌ಲೋಡ್‌ ಮಾಡುತ್ತಿದ್ದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಬನಶಂಕರಿ, ಕೋರಮಂಗಲ ಮತ್ತಿತರೆಡೆ ಸಾರ್ವಜನಿಕ ರಸ್ತೆಯ ಜನಜಂಗುಳಿಯ ವಿಡಿಯೋ ಮಾಡುತ್ತಿದ್ದೇನೆ ಎಂದು ಜನರನ್ನು ನಂಬಿಸಿ ರಹಸ್ಯವಾಗಿ ಯುವತಿಯರ ವಿಡಿಯೋ ಮತ್ತು ಫೋಟೊ ಶೂಟ್‌ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತನನ್ನು ಕೆ.ಆರ್ ಪುರಂ ನಿವಾಸಿ

ಯುವತಿಯರ ವಿಡಿಯೋ ಶೂಟ್‌ ಮಾಡಿ ಇನ್‌ಸ್ಟಾಗ್ರಾಂಗೆ ಅಪ್‌ಲೋಡ್‌ : ಆರೋಪಿ ಸೆರೆ Read More »

ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿ ಮನೆ, ಕಚೇರಿ ಮೇಲೆ ಇ.ಡಿ. ದಾಳಿ

ಮಲೇಷ್ಯಾ, ಹಾಂಕಾಂಗ್​​, ಜರ್ಮನಿಯಲ್ಲಿ ಆಸ್ತಿ ಹೊಂದಿರುವ ಶಾಸಕ ಬೆಂಗಳೂರು: ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಮನೆ ಮತ್ತು ಕಚೇರಿ ಸೇರಿದಂತೆ ಬೆಂಗಳೂರಿನ 5 ಕಡೆಗಳಲ್ಲಿ ಗುರುವಾರ ಬೆಳಗ್ಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಾಸಕ ಸುಬ್ಬಾರೆಡ್ಡಿ ಮತ್ತು ಸಂಬಂಧಿಕರಿಗೆ ಸೇರಿದ ಮನೆಗಳಲ್ಲಿ ಶೋಧ ನಡೆಯುತ್ತಿದೆ. ಸುಬ್ಬಾರೆಡ್ಡಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್​ ಶಾಸಕರಾಗಿದ್ದು, ಇವರ ವಿರುದ್ಧ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘನೆ ಆರೋಪ ಕೇಳಿಬಂದಿತ್ತು. ಅದರ ಅನ್ವಯ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಬ್ಬಾರೆಡ್ಡಿ

ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿ ಮನೆ, ಕಚೇರಿ ಮೇಲೆ ಇ.ಡಿ. ದಾಳಿ Read More »

ಪ್ರಚೋದನಕಾರಿ ಹೇಳಿಕೆ  | ಶಾಸಕ ಅಶೋಕ್ ರೈ ವಿರುದ್ಧ ಹಿಂದೂ ಜಾಗರಣ ವೇದಿಕೆಯಿಂದ ನಗರ ಠಾಣೆಗೆ ದೂರು

ಪುತ್ತೂರು: ಪುತ್ತೂರಿನ ಶಾಸಕ‌ ಅಶೋಕ್ ರೈ ಹಿಂದೂ ಸಂಘಟನೆಗಳ ಪ್ರಮುಖರನ್ನು ಉದ್ದೇಶಿಸಿ ಸಾರ್ವಜನಿಕವಾಗಿ ನಿಂದಿಸಿ ಪ್ರಚೋದನಕಾರಿ ಹೇಳಿಕೆ ನೀಡಿರುವುದರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪುತ್ತೂರು ನಗರ ಪೊಲೀಸ್ ಠಾಣೆಗೆ ಹಿಂದೂ ಜಾಗರಣ ವೇದಿಕೆ ಮನವಿ ಮಾಡಿದರು. ಬಳಿಕ ಮಾಧ್ಯಮವನ್ನುದ್ದೇಶಿಸಿ ಮಾತನಾಡಿದ ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಂಯೋಜಕ ಮೋಹನ್ ದಾಸ್ ಕಾಣಿಯೂರು, ದ.ಕ. ಜಿಲ್ಲೆಯಲ್ಲಿ ನೂತನ ಎಸ್ಪಿ ಹಾಗೂ ಕಮಿಷನರ್ ಅಧಿಕಾರ ವಹಿಸಿಕೊಂಡ ನಂತರ ಎಲ್ಲವೂ ಶಾಂತಿಯುತವಾಗಿ ಸಾರ್ವಜನಿಕ ವಲಯದಲ್ಲಿ ಭಯಮುಕ್ತವಾಗಿತ್ತು. ಇದೆಲ್ಲದರ ಮಧ್ಯೆ ಪುತ್ತೂರು

ಪ್ರಚೋದನಕಾರಿ ಹೇಳಿಕೆ  | ಶಾಸಕ ಅಶೋಕ್ ರೈ ವಿರುದ್ಧ ಹಿಂದೂ ಜಾಗರಣ ವೇದಿಕೆಯಿಂದ ನಗರ ಠಾಣೆಗೆ ದೂರು Read More »

ಹೆಣ್ಣು ಮಕ್ಕಳನ್ನು ಶಾಲೆಯಲ್ಲೇ ವಿವಸ್ತ್ರಗೊಳಿಸಿದ ಮುಖ್ಯಶಿಕ್ಷಕ

ಹೆಡ್‌ಮೇಷ್ಟ್ರು ಸೇರಿ ಆರು ಮಂದಿ ವಿರುದ್ಧ ಪೋಕ್ಸೊ ಕೇಸ್‌ ಪುಣೆ : ಶಾಲೆಯ ಮುಖ್ಯಶಿಕ್ಷಕನೇ ವಿದ್ಯಾರ್ಥಿನಿಯರನ್ನು ವಿವಸ್ತ್ರಗೊಳಿಸಿದ ಆಘಾತಕಾರಿ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ಸಂಭವಿಸಿದೆ. ಶೌಚಾಲಯದಲ್ಲಿ ರಕ್ತದ ಕಲೆ ಕಂಡ ಹಿನ್ನೆಲೆಯಲ್ಲಿ ಮುಟ್ಟಾದವರು ಯಾರು ಎಂದು ತಿಳಿಯಲು ಮುಖ್ಯಶಿಕ್ಷಕ ಎಲ್ಲ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ ಮುಖ್ಯಶಿಕ್ಷಕ ಹಾಗೂ ಓರ್ವ ಸಹಾಯಕ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಆ ಶಾಲೆಯಲ್ಲಿ 5ರಿಂದ 10ನೇ ತರಗತಿಯ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಮಂಗಳವಾರ ಶಾಲೆಯ ಶೌಚಾಲಯದಲ್ಲಿ ರಕ್ತದ ಕಲೆಗಳು ಕಂಡುಬಂದಿದ್ದವು.

ಹೆಣ್ಣು ಮಕ್ಕಳನ್ನು ಶಾಲೆಯಲ್ಲೇ ವಿವಸ್ತ್ರಗೊಳಿಸಿದ ಮುಖ್ಯಶಿಕ್ಷಕ Read More »

ಮನೋವ್ಯದ್ಯನಿಗೇ ಬ್ರೈನ್‌ವಾಶ್‌ ಮಾಡಿದ್ದ ಉಗ್ರ !

ತನಗೆ ಕೌನ್ಸೆಲಿಂಗ್‌ ಮಾಡುತ್ತಿದ್ದ ಮನೋವೈದ್ಯನನ್ನು ಉಗ್ರ ಕೃತ್ಯಕ್ಕೆ ಬಳಸಿಕೊಂಡ ಭಯೋತ್ಪಾದಕ ನಾಸಿರ್‌ ಬೆಂಗಳೂರು: ಪಾತಕ ಕೃತ್ಯಗಳನ್ನು ಎಸಗಿ ಜೈಲು ಶಿಕ್ಷೆಗೆ ಗುರಿಯಾಗಿರುವ ಕೈದಿಗಳ ಮನಪರಿವರ್ತನೆ ಮಾಡಿ ಅವರು ಮತ್ತೆ ಅಪರಾಧ ಲೋಕದತ್ತ ಹೋಗಬಾರದು, ಉತ್ತಮ ನಾಗರಿಕರಾಗಿ ಬಾಳಬೇಕೆಂಬ ಉದ್ದೇಶದಿಂದ ಜೈಲಿಗೆ ಮನೋವೈದ್ಯರನ್ನು ನೇಮಿಸಲಾಗುತ್ತದೆ. ಇವರ ಮುಖ್ಯ ಧ್ಯೇಯವೇ ಕೈದಿಗಳ ಮನಸ್ಸನ್ನು ಪರಿವರ್ತಿಸಿ ಮನಸ್ಸಿನಲ್ಲಿ ಪ್ರಾಯಶ್ಚಿತ್ತ ಪ್ರಜ್ಞೆ ಮೂಡಿಸಿ ಬಿಡುಗಡೆಯಾಗಿ ಹೋದ ಬಳಿಕ ಮತ್ತೆ ಅಪರಾಧಗಳನ್ನು ಮಾಡದಂತೆ ತಡೆಯುವುದು. ಆದರೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿ ಮಾತ್ರ ಉಲ್ಟಾ

ಮನೋವ್ಯದ್ಯನಿಗೇ ಬ್ರೈನ್‌ವಾಶ್‌ ಮಾಡಿದ್ದ ಉಗ್ರ ! Read More »

ಸುಳ್ಯ : ಗ್ರಾಪಂನ ಘನ ತ್ಯಾಜ್ಯ ಘಟಕ ಬೆಂಕಿಗಾಹುತಿ

ಸುಳ್ಯ: ಅರಂತೋಡು ಗ್ರಾಮ ಪಂಚಾಯಿತಿಯ ಘನತ್ಯಾಜ್ಯ ಘಟಕಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಘಟಕ ಹೊತ್ತಿ ಉರಿದಿದೆ. ಬುಧವಾರ ಸಂಜೆ ಘಟನೆ ನಡೆದಿದೆ. ಘಟಕದಲ್ಲಿ ತ್ಯಾಜ್ಯ ಪೂರ್ತಿಯಾಗಿ ಬೇರ್ಪಡಿಸಿ ತುಂಬಿಡಲಾಗಿತ್ತು. ಬೆಂಕಿ ತಗುಲಿ ಈ ತ್ಯಾಜ್ಯ ಹೊತ್ತಿ ಉರಿದಿದೆ. ಕಟ್ಟಡ ಮತ್ತಿತರ ವಸ್ತುಗಳಿಗೆ ಸೇರಿ ಅಪಾರ ಹಾನಿ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿರಬಹುದು ಎಂದು ಶಂಕಿಸಲಾಗಿದೆ. ಅಗ್ನಿಶಾಮಕ ದಳದವರು ಬಂದು ಬೆಂಕಿ ನಂದಿಸಿದರು. ಘಟನೆಯಲ್ಲಿ ಘನತ್ಯಾಜ್ಯ ಸಂಪೂರ್ಣ ಹೊತ್ತಿ ಉರಿದಿದೆ. ಘನತ್ಯಾಜ್ಯ ವಿಲೇವಾರಿ ಮಾಡುವ ನಾಲ್ಕು

ಸುಳ್ಯ : ಗ್ರಾಪಂನ ಘನ ತ್ಯಾಜ್ಯ ಘಟಕ ಬೆಂಕಿಗಾಹುತಿ Read More »

ಕಡಿದು ಬಿದ್ದ ವಿದ್ಯುತ್‌ ತಂತಿ ತುಳಿದು ವ್ಯಕ್ತಿ ಸಾವು

ಸುಳ್ಯ: ಮನೆಗೆ ಹೋಗುವ ದಾರಿಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ವಯರ್ ತುಳಿದು ವಿದ್ಯುತ್ ಆಘಾತದಿಂದ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಕೊಡಿಯಾಲ ಗ್ರಾಮದ ಕಲ್ಲಪಣೆಯಲ್ಲಿ ಬುಧವಾರ ಸಂಜೆ ಸಂಭವಿಸಿದೆ. ಮೃತಪಟ್ಟವರನ್ನು ಕಲ್ಲಪಣೆಯ ದಿವಾಕರ ಆಚಾರ್ಯ (45) ಎಂದು ಗುರುತಿಸಲಾಗಿದೆ. ಮನೆಗೆ ಹೋಗುವ ದಾರಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರನ್ನು ನೋಡದೆ ತುಳಿದಿದ್ದರು. ವಿದ್ಯುತ್‌ ಆಘಾತಕ್ಕೆ ಒಳಗಾದ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ತಂದು ಪೋಸ್ಟ್‌ಮಾರ್ಟಮ್ ನಡೆಸಿ ಮನೆಯವರಿಗೆ ಹಸ್ತಾಂತರ ಮಾಡಲಾಗಿದೆ.

ಕಡಿದು ಬಿದ್ದ ವಿದ್ಯುತ್‌ ತಂತಿ ತುಳಿದು ವ್ಯಕ್ತಿ ಸಾವು Read More »

ಭದ್ರತಾ ಸಿಬ್ಬಂದಿ ವಿಷ ಸೇವಿಸಿ ಆತ್ಮಹತ್ಯೆ

ಉಪ್ಪಿನಂಗಡಿ: ಸಹಕಾರಿ ಸಂಸ್ಥೆಯ ಭದ್ರತಾ ಸಿಬ್ಬಂದಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ನಡೆದಿದೆ. ಭದ್ರತಾ ಸಿಬ್ಬಂದಿ ಸುರೇಶ್ (30) ಆತ್ಮಹತ್ಯೆ ಮಾಡಿಕೊಂಡವರು. ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಮನೆಗಾರ ಮಜಲು ಮನೆ ನಿವಾಸಿ  ದಿ. ನೀಲಯ್ಯ ಗೌಡ ಎಂಬವರ ಪುತ್ರರಾಗಿರುವ ಸುರೇಶ್  ಕರ್ತವ್ಯಕ್ಕೆ ರಜೆ ಹಾಕಿ ಮನೆಯಲ್ಲಿದ್ದರು. ವೈಯಕ್ತಿಕ ಕಾರಣಗಳಿಂದ ಮನನೊಂದು ಈ ಕೃತ್ಯಕ್ಕೆ ಎಸಗಿದ್ದಾರೆ ಎಂದು ದೂರಲಾಗಿದೆ. ಈ ಕುರಿತು  ಉಪ್ಪಿನಂಗಡಿ ಠಾಣೆಯಲ್ಲಿ ದೂರು ದಾಖಲಾಗಿದೆ.

ಭದ್ರತಾ ಸಿಬ್ಬಂದಿ ವಿಷ ಸೇವಿಸಿ ಆತ್ಮಹತ್ಯೆ Read More »

ಶವಗಳ ಮೇಲೂ ಅತ್ಯಾಚಾರ : ಹಮಾಸ್‌ ಉಗ್ರರ ಭಯಾನಕ ಕ್ರೌರ್ಯ ಬಿಚ್ಚಿಟ್ಟ ವರದಿ

ಇಸ್ರೇಲ್‌ ಮಹಿಳೆಯರ ಮೇಲೆ ಲೈಂಗಿಕ ಹಿಂಸೆ ಎಸಗಿದ್ದ ಹಮಾಸ್‌ ಉಗ್ರರು ಟೆಲ್‌ಅವೀವ್‌ : ಹಮಾಸ್ ಉಗ್ರರು ತಮ್ಮ ಒತ್ತೆಸೆರೆಯಲ್ಲಿದ್ದ ಇಸ್ರೇಲ್‌ ಮಹಿಳೆಯರ ಮೇಲೆ ಎಸಗಿದ ಭೀಕರ ಕ್ರೌರ್ಯ ಈಗ ಬಯಲಾಗಿದೆ. ಹಮಾಸ್ ಉಗ್ರರು ಇಸ್ರೇಲಿ ಮಹಳೆಯರ ಮೃತದೇಹಗಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿಗುತ್ತಿದ್ದರು, ಖಾಸಗಿ ಭಾಗಗಳಿಗೆ ಗುಂಡು ಹಾರಿಸಿ ವಿಕೃತ ಖುಷಿ ಅನುಭವಿಸುತ್ತಿದ್ದರು ಎಂಬ ಭಯಾನಕ ವಿಚಾರವನ್ನು ಬದುಕಿ ಬಂದ ಕೆಲವರು ಹೇಳಿಕೊಂಡಿದ್ದಾರೆ. 2023ರ ಅಕ್ಟೋಬರ್ 7ರಂದು ಹಮಾಸ್ ಉಗ್ರರು ಇಸ್ರೇಲ್ ಮೇಲೆ ಅಪ್ರಚೋದಿತ ದಾಳಿ ನಡೆಸಿದ ಬಳಿಕ

ಶವಗಳ ಮೇಲೂ ಅತ್ಯಾಚಾರ : ಹಮಾಸ್‌ ಉಗ್ರರ ಭಯಾನಕ ಕ್ರೌರ್ಯ ಬಿಚ್ಚಿಟ್ಟ ವರದಿ Read More »

error: Content is protected !!
Scroll to Top