ಅಪರಾಧ

ಬೆಂಗಳೂರಿನಲ್ಲಿ ವಿದ್ವಂಸಕ್ಕೆ ಕೃತ್ಯಕ್ಕೆ ಸಂಚು ಮಾಡಿದ್ದ ಉಗ್ರರು

ಜೈಲಿನಲ್ಲಿದ್ದುಕೊಂಡೆ ಉಗ್ರರ ಸ್ಲೀಪರ್‌ ಸೆಲ್‌ ಕಟ್ಟಿದ್ದ ನಾಸೀರ್‌ ಬೆಂಗಳೂರು : ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನಿನ್ನೆ ರಾತ್ರಿ ಬೆಂಗಳೂರು ಮತ್ತು ಕೋಲಾರದ ಐದು ಕಡೆಗಳಲ್ಲಿ ದಾಳಿ ನಡೆಸಿ ಮೂವರನ್ನು ಬಂಧಿಸಿದ ಬಳಿಕ ಬೆಂಗಳೂರಿನಲ್ಲಿ ಉಗ್ರಜಾಲ ವ್ಯವಸ್ಥಿತವಾಗಿ ಬೆಳೆಯುತ್ತಿರುವ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಮಂಗಳವಾರ ರಾತ್ರಿ ಬೆಂಗಳೂರು, ಕೋಲಾರದಲ್ಲಿ ದಿಢೀರ್ ದಾಳಿ ನಡೆಸಿರುವ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಮೂವರನ್ನು ಬಂಧಿಸಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನ ಮನೋವೈದ್ಯ ಡಾ.ನಾಗರಾಜ್, ಪರಪ್ಪನ ಅಗ್ರಹಾರ ಜೈಲಿನ ಎಎಸ್ಐ […]

ಬೆಂಗಳೂರಿನಲ್ಲಿ ವಿದ್ವಂಸಕ್ಕೆ ಕೃತ್ಯಕ್ಕೆ ಸಂಚು ಮಾಡಿದ್ದ ಉಗ್ರರು Read More »

ವಂಚನೆ : ನಟಿ ಅಲಿಯಾ ಭಟ್‌ ಮಾಜಿ ಸಹಾಯಕಿ ಬೆಂಗಳೂರಿನಲ್ಲಿ ಸೆರೆ

ನಟಿಯ ಸಿನಿಮಾ ನಿರ್ಮಾಣ ಸಂಸ್ಥೆಗೆ 77 ಲ.ರೂ. ವಂಚಿಸಿದ್ದ ವೇದಿಕಾ ಪ್ರಕಾಶ್‌ ಶೆಟ್ಟಿ ಮುಂಬೈ: ಸಿನಿಮಾ ನಿರ್ಮಾಣ ಸಂಸ್ಥೆಗೆ 77 ಲಕ್ಷ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್‌ ನಟಿ ಆಲಿಯಾ ಭಟ್‌ ಅವರ ಮಾಜಿ ಆಪ್ತ ಸಹಾಯಕಿ ವೇದಿಕಾ ಪ್ರಕಾಶ್‌ ಶೆಟ್ಟಿ (32) ಎಂಬಾಕೆಯನ್ನು ಮುಂಬೈಯ ಜುಹು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಭಟ್‌ ನಿರ್ಮಾಣ ಸಂಸ್ಥೆ ಎಟರ್ನಲ್ ಸನ್‌ಶೈನ್ ಪ್ರೊಡಕ್ಷನ್ಸ್ ಪ್ರೈವೇಟ್ ಲಿಮಿಟೆಡ್‌ ಖಾತೆ ಹಾಗೂ ನಟಿಯ ಖಾತೆಯಿಂದ ಸುಮಾರು 76.9 ಲಕ್ಷ ರೂ. ಹಣ

ವಂಚನೆ : ನಟಿ ಅಲಿಯಾ ಭಟ್‌ ಮಾಜಿ ಸಹಾಯಕಿ ಬೆಂಗಳೂರಿನಲ್ಲಿ ಸೆರೆ Read More »

ಶಾಲಾ ಬಾಲಕನಿಗೆ ಬೆದರಿಕೆ : ಯುವಕನ ಬಂಧನ

ಬಸ್‌ ನಿಲ್ದಾಣದಲ್ಲಿ ಸಹಪಾಠಿಯ ಜೊತೆ ಮಾತನಾಡುತ್ತಿದ್ದ ಬಾಲಕನಿಗೆ ಬೆದರಿಕೆ ವಿಟ್ಲ : ಖಾಸಗಿ ಬಸ್ ನಿಲ್ದಾಣದ ಸಮೀಪ ಶಾಲಾ ಸಹಪಾಠಿಯೊಂದಿಗೆ ಮಾತನಾಡುತ್ತಿದ್ದ ಬಾಲಕನಿಗೆ ಬೆದರಿಕೆಯೊಡ್ಡಿದ ಆರೋಪದಲ್ಲಿ ಯುವಕನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಾಲಕ ತನ್ನ ಸಹಪಾಠಿಯ ಜೊತೆಗೆ ಮಾತನಾಡುತ್ತಾ ನಿಂತಿದ್ದ ವೇಳೆ ಅಲ್ಲಿಗೆ ಬಂದ ವ್ಯಕ್ತಿ ಬಾಲಕನಿಗೆ ಜೀವ ಬೆದರಿಕೆ ಒಡ್ಡಿದ್ದಾನೆ ಎನ್ನಲಾಗಿದೆ. ಮಂಜೇಶ್ವರ ಎಣ್ಮಕಜೆ ನಿವಾಸಿ ಪದ್ಮರಾಜ್ ಬಂಧಿಸಲ್ಪಟ್ಟಿರುವ ಯುವಕ. ಬಾಲಕ ತನ್ನ ಶಾಲಾ ಸಹಪಾಠಿಯೊಂದಿಗೆ ವಿಟ್ಲದ ಖಾಸಗಿ ಬಸ್ ನಿಲ್ದಾಣದಲ್ಲಿ ಮಾತನಾಡುತ್ತಿದ್ದು, ಈ ಸಂದರ್ಭ

ಶಾಲಾ ಬಾಲಕನಿಗೆ ಬೆದರಿಕೆ : ಯುವಕನ ಬಂಧನ Read More »

ಉಗ್ರರಿಗೆ ನೆರವು ನೀಡುತ್ತಿದ್ದ ವೈದ್ಯ, ಎಎಸ್‌ಐ ಬಂಧನ

ಐದು ಕಡೆ ಎನ್‌ಐಎ ದಾಳಿ; ಉಗ್ರ ಜಾಲದ ಮಹತ್ವದ ಸುಳಿವು ಪತ್ತೆ ಬೆಂಗಳೂರು : ರಾಷ್ಟ್ರೀಯ ತನಿಖಾ ದಳ (ಎನ್​ಐಎ) ಬೆಂಗಳೂರು, ಕೋಲಾರದಲ್ಲಿ ಒಟ್ಟು ಐದು ಕಡೆ ದಾಳಿ ಮಾಡಿ ಉಗ್ರರಿಗೆ ನೆರವಾಗುತ್ತಿದ್ದ ಮೂವರನ್ನು ಬಂಧಿಸಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನ ಮನೋವೈದ್ಯ ಡಾ.ನಾಗರಾಜ್, ಪರಪ್ಪನ ಅಗ್ರಹಾರ ಜೈಲಿನ ಎಎಸ್ಐ ಆಗಿದ್ದ ಚಾಂದ್ ಪಾಷಾ ಅನೀಸ್ ಹಾಗೂ ಫಾತಿಮಾ ಎನ್ನುವವರನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬಂಧಿಸಿದ್ದಾರೆ. ಉಗ್ರರ ಚಟುವಟಿಕೆಗೆ ನೆರವು ನೀಡುತ್ತಿದ್ದ ಆರೋಪದಡಿ ಮೂವರನ್ನು

ಉಗ್ರರಿಗೆ ನೆರವು ನೀಡುತ್ತಿದ್ದ ವೈದ್ಯ, ಎಎಸ್‌ಐ ಬಂಧನ Read More »

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ : ಆರೋಪಿ ಬಂಧನ

ಪುತ್ತೂರು: ಅಪ್ರಾಪ್ತ ಪ್ರಾಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಹಲ್ಲೆ ಮಾಡಿದ ಘಟನೆ ಮಂಗಳವಾರ ಪುತ್ತೂರು ಹೊರವಲಯದ ನೆಹರು ನಗರದಲ್ಲಿ ನಡೆದಿದೆ. ಅಪ್ರಾಪ್ತ ಬಾಲಕಿ ಬೆಳಗ್ಗೆ  ತನ್ನ ತಾಯಿಯೊಂದಿಗೆ  ನೆಹರೂ ನಗರ ಜಂಕ್ಷನ್ ನಲ್ಲಿ  ಬಸ್ಸಿಗಾಗಿ ಕಾಯುತ್ತಿದ್ದಾಗ, ಅಪರಿಚಿತ ವ್ಯಕ್ತಿಯೊಬ್ಬ ಬಂದು  ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿ ಹಲ್ಲೆ ನಡೆಸಿದ್ದಾನೆ. ಈ ಬಗ್ಗೆ ಸಂತ್ರಸ್ತೆಯ ತಾಯಿ ನೀಡಿದ ದೂರಿನ ಮೇರೆಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಅಕ್ರ: 53/2025 ಕಲಂ: 126(2), 74, 115(2),

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ : ಆರೋಪಿ ಬಂಧನ Read More »

ಬಂಟ್ವಾಳ: ಪಿಯುಸಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬಂಟ್ವಾಳ: ಪಿಯುಸಿ ವಿದ್ಯಾರ್ಥಿಯೊಬ್ಬ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳದಲ್ಲಿ ಸೋಮವಾರ ಸಂಜೆ ಸಂಭವಿಸಿದೆ. ತುಂಬೆ ಗ್ರಾಮದ ಪರ್ಲಕ್ಕೆಯ ಕರುಣಾಕರ ಗಟ್ಟಿ ಅವರ ಏಕೈಕ ಪುತ್ರ ತೇಜಸ್ ಆತ್ಮಹತ್ಯೆ ಮಾಡಿಕೊಂಡ ಬಾಲಕ. ತೇಜಸ್ ಮೊಡಂಕಾಪುವಿನ ಕಾಲೇಜಿನಲ್ಲಿ ಪಿಯುಸಿ ವಿದ್ಯಾರ್ಥಿಯಾಗಿದ್ದ. ನಿನ್ನೆ ಆತನಿಗೆ ಪರೀಕ್ಷೆ ಇದ್ದು, ಸಂಜೆ ವೇಳೆ ಕ್ಲಾಸಿನಿಂದ ಮನೆಗೆ ಬಂದಿದ್ದಾನೆ. ತಂದೆ ತಾಯಿ ಇಬ್ಬರು ನೌಕಯಲ್ಲಿದ್ದು, ಅವರು ಮನೆಗೆ ಬರುವಾಗ ರಾತ್ರಿಯಾಗುತ್ತದೆ. ತೇಜಸ್‌ ಎಂದಿನಂತೆ ಸಂಜೆ ಮನೆಗೆ ಬಂದು ನೇಣು ಹಾಕಿಕೊಂಡಿದ್ದ. ತಂದೆ

ಬಂಟ್ವಾಳ: ಪಿಯುಸಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ Read More »

ಬಾಲಕಿಯನ್ನು ಅಪಹರಿಸಿದ ದಂಪತಿ ಸಹಿತ ಮೂವರ ಸೆರೆ

ಮಂಗಳೂರು: ಉಳ್ಳಾಲದಿಂದ ಬಾಲಕಿಯೊಬ್ಬಳನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿ ಸಹಿತ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯನ್ನು ಅಪಹರಿಸಲು ಪ್ರಮುಖ ಆರೋಪಿಗೆ ದಂಪತಿ ನೆರವಾಗಿದ್ದರು ಎನ್ನಲಾಗಿದೆ. 16ರ ಹರೆಯದ ಮಗಳು ಮನೆಯಿಂದ ಹೊರ ಹೋದವಳು ನಂತರ ನಾಪತ್ತೆಯಾಗಿದ್ದು, ಆಕೆಯನ್ನು ಅಪಹರಿಸಿರುವುದಾಗಿ ಬಾಲಕಿಯ ತಂದೆ ಉಳ್ಳಾಲ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ತನಿಖೆ ನಡೆಸಿದ ಉಳ್ಳಾಲ ಪೊಲೀಸರು ಬಾಲಕಿಯನ್ನು ಅಪಹರಿಸಿದ ಆರೋಪಿ ದೇರಳಕಟ್ಟೆ ಸಮೀಪದ ರೆಂಜಾಡಿ ನಿವಾಸಿ ಶಹಬಾಝ್ (27) ಹಾಗೂ ಆತನಿಗೆ ಸಹಕರಿಸಿದ ಕೊಣಾಜೆ ನಿವಾಸಿಗಳಾದ ಅಮೀರ್

ಬಾಲಕಿಯನ್ನು ಅಪಹರಿಸಿದ ದಂಪತಿ ಸಹಿತ ಮೂವರ ಸೆರೆ Read More »

ಮಾಟ ಮಾಡಿದ ಅನುಮಾನದಲ್ಲಿ ಒಂದೇ ಕುಟುಂಬದ ಐವರ ಜೀವಂತ ದಹನ

ಭೀಕರ ಕೃತ್ಯ ಎಸಗಿದ ಬಳಿಕ ಗ್ರಾಮಕ್ಕೆ ಗ್ರಾಮವೇ ಪಲಾಯನ ಪಾಟ್ನಾ: ಮಾಟ ಮಂತ್ರ ಮಾಡಿದ ಅನುಮಾನದಲ್ಲಿ ಒಂದೇ ಕುಟುಂಬದ ಐವರು ಸದಸ್ಯರನ್ನು ಕ್ರೂರವಾಗಿ ಥಳಿಸಿ ನಂತರ ಜೀವಂತವಾಗಿ ಸುಟ್ಟುಹಾಕಿದ ಘಟನೆ ಬಿಹಾರದ ಪೂರ್ನಿಯಾ ಜಿಲ್ಲೆಯ ಮುಫಾಸಿಲ್ ಪೊಲೀಸ್ ಠಾಣೆ ಪ್ರದೇಶದ ಟೆಟ್ಗಾಮಾ ಎಂಬ ಗ್ರಾಮದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಈ ಭೀಕರ ಕೊಲೆ ಸುತ್ತಮುತ್ತಲೂ ಆಘಾತ ಸೃಷ್ಟಿಸಿದೆ. ಕೃತ್ಯ ಎಸಗಿದ ಎಲ್ಲ ಆರೋಪಿಗಳು ಗ್ರಾಮದಿಂದ ಪರಾರಿಯಾಗಿದ್ದಾರೆ. ಈ ಭಯಾನಕ ಘಟನೆಯು 4 ದಿನಗಳ ಹಿಂದೆ ಗ್ರಾಮದಲ್ಲಿ ನಡೆದಿದೆ.

ಮಾಟ ಮಾಡಿದ ಅನುಮಾನದಲ್ಲಿ ಒಂದೇ ಕುಟುಂಬದ ಐವರ ಜೀವಂತ ದಹನ Read More »

ಯುವತಿಗೆ ಹಲ್ಲೆ ಮಾಡಿ ಆಕೆಯ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಯುವಕ

ಬಂಟ್ವಾಳ: ಯುವತಿಗೆ ಹಲ್ಲೆ ಮಾಡಿದ ಯುವಕನೊಬ್ಬ ಆಕೆಯ ಮನೆಯಲ್ಲೇ ಆತ್ಮಹತ್ಯೆಗೆ ಶರಣಾದ ಘಟನೆ ಸುಜೀರಿನಲ್ಲಿ ‌ನಡೆದಿದೆ. ಗ್ಯಾರೇಜಿನಲ್ಲಿ ಕೆಲಸ‌ ಮಾಡುತ್ತಿದ್ದ ಕೊಡ್ಮಣ್ ನಿವಾಸಿ ಸುಧೀರ್ ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ಯುವಕ. ಹಲ್ಲೆಗೊಳಗಾದ ಯುವತಿ ತುಂಬೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಯುವತಿಯ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಈ ಘಟನೆ ನಡೆದಿರುವ ಸಾಧ್ಯತೆ ಇದೆ. ಈ ಘಟನೆಗೆ ಕಾರಣ ಏನು ಎಂಬುದು ಇನ್ನಷ್ಟೇ ತಿಳಿದು ಬರಬೇಕಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯುವತಿಗೆ ಹಲ್ಲೆ ಮಾಡಿ ಆಕೆಯ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಯುವಕ Read More »

ಡ್ರಗ್ಸ್ ಪಾರ್ಟಿ ನಡೆದರೆ ಬಾಡಿಗೆಗೆ ಸ್ಥಳಾವಕಾಶ ಒದಗಿಸಿದ ಮಾಲೀಕನ ಮೇಲೆಯೂ ಕೇಸ್?

ಬೆಂಗಳೂರು: ಡ್ರಗ್ಸ್ ದಂಧೆಗೆ, ಸೇವನೆಗೆ ಕಡಿವಾಣ ಹಾಕುವ ಹಿನ್ನೆಲೆಯಲ್ಲಿ ಈಶಾನ್ಯ ವಿಭಾಗ ಪೊಲೀಸರು ರೆಸಾರ್ಟ್, ಹೋಂಸ್ಟೇ, ಹೊಟೇಲ್ ಸೇರಿದಂತೆ ಇನ್ನಿತರ ಪಾರ್ಟಿ ಮಾಡುವ ಸ್ಥಳಗಳ ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರು ಹೊರವಲಯದಲ್ಲಿರುವ ರೆಸಾರ್ಟ್‌ಗಳು, ಹೊಟೇಲ್‌ಗಳು, ಹೋಮ್‌ಸ್ಟೇ‌ಗಳಲ್ಲಿ ಪಾರ್ಟಿಗಾಗಿ ಬುಕ್ ಮಾಡುವ ಕೆಲ ಆಯೋಜಕರು, ಅಲ್ಲಿ ಮಾದಕ ದ್ರವ್ಯಗಳಿಗಾಗಿಯೂ ವ್ಯವಸ್ಥೆ ಮಾಡುತ್ತಾರೆ‌. ಡ್ರಗ್ಸ್ ಸೇವನೆಯಂತಹ ಸಮಾಜ ಘಾತುಕ ಕೆಲಸಗಳೂ ನಡೆಯುತ್ತಿವೆ. ಈ ಹಿನ್ನೆಲೆ ಪಾರ್ಟಿಗಳಿಗೆ ತಮ್ಮ ಕಟ್ಟಡಗಳು, ಸ್ಥಳಗಳನ್ನು ಬಿಟ್ಟು ಕೊಡುವವರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದಾರೆ. ಹೋಂಸ್ಟೇ ನಡೆಸುವವರು

ಡ್ರಗ್ಸ್ ಪಾರ್ಟಿ ನಡೆದರೆ ಬಾಡಿಗೆಗೆ ಸ್ಥಳಾವಕಾಶ ಒದಗಿಸಿದ ಮಾಲೀಕನ ಮೇಲೆಯೂ ಕೇಸ್? Read More »

error: Content is protected !!
Scroll to Top