ಅಪರಾಧ

ನಕಲಿ ಪ್ರಮಾಣಪತ್ರ ಸೃಷ್ಟಿಸಿ ಮಂಗಳೂರು ಮಹಾನಗರ ಪಾಲಿಕೆಗೆ ಲಕ್ಷಾಂತರ ರೂ. ವಂಚನೆ

4500ಕ್ಕೂ ಅಧಿಕ ಉದ್ದಿಮೆ ನಕಲಿ ಸರ್ಟಿಫಿಕೆಟ್‌ ಸೃಷ್ಟಿಸಿರುವ ಅನುಮಾನ ಮಂಗಳೂರು : ಮಂಗಳೂರು ಮಹಾನಗರಪಾಲಿಕೆಯಲ್ಲಿ ದಿನಕ್ಕೊಂದು ಅವ್ಯವಹಾರ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ನಗರಪಾಲಿಕೆ ನೀಡುವ ಪ್ರಮಾಣಪತ್ರವನ್ನೇ ನಕಲಿಯಾಗಿ ಸೃಷ್ಟಿಸಿ ತೆರಿಗೆ ವಂಚಿಸಿದ ಪ್ರಕರಣ ಬಯಲಾಗಿದ್ದು, ಇದರ ಹಿಂದೆ ಬೃಹತ್‌ ಜಾಲ ಇರುವ ಅನುಮಾನ ವ್ಯಕ್ತವಾಗಿದೆ. ನಕಲಿ ತೆರಿಗೆ ನೋಂದಣಿ ಜಾಲವೊಂದು ಇದರ ಹಿಂದೆ ಇದೆ ಎನ್ನಲಾಗಿದೆ. ನಕಲಿ ಪ್ರಮಾಣಪತ್ರಗಳನ್ನು ಸೃಷ್ಟಿಸಿ ಲಕ್ಷಾಂತರ ರೂ. ವಂಚನೆ ಮಾಡಲಾಗಿದೆ. ಮಹಾನಗರ ಪಾಲಿಕೆ ನೀಡುವ ಸರ್ಟಿಫಿಕೇಟ್​​ನ್ನೇ ವಂಚಕರು ಕಂಪ್ಯೂಟರ್ ತಂತ್ರಜ್ಞಾನ ಬಳಸಿ […]

ನಕಲಿ ಪ್ರಮಾಣಪತ್ರ ಸೃಷ್ಟಿಸಿ ಮಂಗಳೂರು ಮಹಾನಗರ ಪಾಲಿಕೆಗೆ ಲಕ್ಷಾಂತರ ರೂ. ವಂಚನೆ Read More »

ಹೆರಿಗೆ ಬಳಿಕ ವಿಪರೀತ ರಕ್ತ ಸ್ರಾವದಿಂದ ಮಹಿಳೆ ಮೃತ್ಯು | ಪ್ರಕರಣ ದಾಖಲು

ಪುತ್ತೂರು: ಹೆರಿಗೆ ಬಳಿಕ ವಿಪರೀತ ರಕ್ತಸ್ರಾವ ಉಂಟಾಗಿ ಕರ್ನೂರಿನ ಮಹಿಳೆಯೋರ್ವರು ಮೃತರಾದ ಘಟನೆ ನಡೆದಿದ್ದು, ಈ ಕುರಿತು ಪೊಲೀಸರಿಗೆ ದೂರು ನೀಡಲಾಗಿದೆ. ಕರ್ನೂರು ಮೊಹಮ್ಮದ್ ಬಶೀರ್ ಕೆ.ಎ.ಅವರ ಪತ್ನಿ ಆಯಿಷತ್ ಸೌಜಾನ ಮೃತಪಟ್ಟವರು. ಆಯಿಷತ್ ಸೌಜಾನ ಅವರನ್ನು ಜೂ.27ರಂದು ಹೆರಿಗೆಗಾಗಿ ಆಕೆಯ ಗಂಡ ಕಾಸರಗೋಡು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಆಕೆಯ ಆರೈಕೆಯಲ್ಲಿ ಜುಬೈದಾ ಕಾವು ಅವರು ಇದ್ದರು. ಜು.1ರಂದು ಬೆಳಿಗ್ಗೆ, 05.30 ಗಂಟೆಗೆ ಆಯಿಷತ್ ಸೌಜಾನರಿಗೆ ಸಾಮಾನ್ಯ ಹೆರಿಗೆಯಾಗಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಆ ಬಳಿಕ

ಹೆರಿಗೆ ಬಳಿಕ ವಿಪರೀತ ರಕ್ತ ಸ್ರಾವದಿಂದ ಮಹಿಳೆ ಮೃತ್ಯು | ಪ್ರಕರಣ ದಾಖಲು Read More »

ಮುಂಬಯಿ: ಶಿಷ್ಯನನ್ನೇ ಲೈಂಗಿಕ ಸುಖಕ್ಕೆ ಬಳಸಿಕೊಂಡ ಶಿಕ್ಷಕಿ

ಪಂಚತಾರಾ ಹೋಟೆಲ್‌ಗಳಲ್ಲಿ ಶಿಷ್ಯನ ಮೇಲೆ ದೌರ್ಜನ್ಯ ಎಸಗಿದ ಪ್ರತಿಷ್ಠಿತ ಶಾಲೆಯ ಶಿಕ್ಷಕಿ ಮುಂಬೈ: ಪ್ರತಿಷ್ಠಿತ ಶಾಲೆಯ ಶಿಕ್ಷಕಿಯೊಬ್ಬಳು ತನ್ನ ಹದಿಹರೆಯದ ಶಿಷ್ಯನನ್ನೇ ಲೈಂಗಿಕ ಸುಖಕ್ಕೆ ಬಳಸಿಕೊಂಡ ಆಘಾತಕಾರಿ ಘಟನೆ ಮುಂಬಯಿಯಲ್ಲಿ ಬೆಳಕಿಗೆ ಬಂದಿದೆ. 11ನೇ ತರಗತಿ ವಿದ್ಯಾರ್ಥಿಯ ಜೊತೆ ಲೈಂಗಿಕ ಕ್ರಿಯೆ ನಡೆಸಿದ ಆರೋಪದಲ್ಲಿ 40ರ ಹರೆಯದ ಶಿಕ್ಷಕಿಯನ್ನು ಪೋಕ್ಸೊ ಕಾಯ್ದೆಯ ಅಡಿ ಬಂಧಿಸಲಾಗಿದೆ. ಮುಂಬೈನ ಪ್ರಖ್ಯಾತ ಶಾಲೆಯ 40 ವರ್ಷದ ಇಂಗ್ಲಿಷ್‌ ಶಿಕ್ಷಕಿ ಕಳೆದ ಒಂದು ವರ್ಷದಲ್ಲಿ 16 ವರ್ಷದ ವಿದ್ಯಾರ್ಥಿಯ ಮೇಲೆ ಹಲವು ಬಾರಿ

ಮುಂಬಯಿ: ಶಿಷ್ಯನನ್ನೇ ಲೈಂಗಿಕ ಸುಖಕ್ಕೆ ಬಳಸಿಕೊಂಡ ಶಿಕ್ಷಕಿ Read More »

ಅಲ್‌ ಖೈದಾ ಉಗ್ರರಿಂದ ಮೂವರು ಭಾರತೀಯರ ಅಪಹರಣ

ಸಿಮೆಂಟ್‌ ಕಾರ್ಖಾನೆಯ ಮೇಲೆ ದಾಳಿ ಮಾಡಿ ಕಿಡ್ನ್ಯಾಪ್‌ ನವದೆಹಲಿ: ಪಶ್ಚಿಮ ಆಫ್ರಿಕಾದ ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯ ಸಂದರ್ಭದಲ್ಲಿ ಅಲ್​​ ಖೈದಾ ಉಗ್ರರು ಮೂವರು ಭಾರತೀಯರನ್ನು ಅಪಹರಿಸಿದ್ದಾರೆ. ಈ ಘಟನೆ ಬಗ್ಗೆ ಭಾರತ ಸರ್ಕಾರ ತೀವ್ರ ಕಳವಳ ವ್ಯಕ್ತಪಡಿಸಿ ಅವರನ್ನು ಕೂಡಲೇ ರಕ್ಷಣೆ ಮಾಡುವಂತೆ ಮಾಲಿ ಸರ್ಕಾರದ ಬಳಿ ಮನವಿ ಮಾಡಿದೆ. ವಿದೇಶಾಂಗ ಸಚಿವಾಲಯ ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಜುಲೈ 1ರಂದು ಕೆಲವು ಶಸ್ತ್ರಸಜ್ಜಿತ ದಾಳಿಕೋರರು ಮಾಲಿಯ ಕೇಯ್ಸ್‌ನಲ್ಲಿರುವ ಡೈಮಂಡ್ ಸಿಮೆಂಟ್ ಕಾರ್ಖಾನೆಯ ಮೇಲೆ ದಾಳಿ

ಅಲ್‌ ಖೈದಾ ಉಗ್ರರಿಂದ ಮೂವರು ಭಾರತೀಯರ ಅಪಹರಣ Read More »

ನೆಲ್ಯಾಡಿಯ ಲಾರಿ ಚಾಲಕನ ಮೇಲೆ ತಂಡದಿಂದ ಹಲ್ಲೆ

ಕಾರಿನಲ್ಲಿ ಬಂದು ಅಡ್ಡಗಟ್ಟಿ ಥಳಿಸಿದ ಗುಂಪು ಉಪ್ಪಿನಂಗಡಿ: ನೆಲ್ಯಾಡಿ ಗ್ರಾಮದ ಲಾರಿ ಚಾಲಕರೊಬ್ಬರ ಮೇಲೆ ನಿನ್ನೆ ರಾತ್ರಿ ಸಕಲೇಶಪುರ ಬಳಿ ಕಾರಿನಲ್ಲಿ ಬಂದ ತಂಡವೊಂದು ಹಲ್ಲೆ ನಡೆಸಿದ ಘಟನೆ ಸಂಭವಿಸಿದೆ. ಪ್ಲೈವುಡ್ ಸಾಗಿಸುತ್ತಿದ್ದ ಲಾರಿಯನ್ನು ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದ ತಂಡ ಬಾಗಿ ಗ್ರಾಮದ ಬಾಳ್ಳುಪೇಟೆಯ ಪೆಟ್ರೋಲ್ ಪಂಪ್‌ ಬಳಿ ಅಡ್ಡಗಟ್ಟಿ ಚಾಲಕ ನೆಲ್ಯಾಡಿ ಗ್ರಾಮದ ಮುಹಮ್ಮದ್ ನಿಶಾನ್‌ ಎಂಬವರ ಮೇಲೆ ಹಲ್ಲೆ ಮಾಡಿದೆ ಎನ್ನಲಾಗಿದೆ. ಲಾರಿಯನ್ನು ಅಡ್ಡಗಟ್ಟಿ, ಗಾಜಿಗೆ ಲಾಠಿಯಿಂದ ಹೊಡೆದು ನಂತರ ಚಾಲಕನ ಮೇಲೆ ಹಲ್ಲೆ

ನೆಲ್ಯಾಡಿಯ ಲಾರಿ ಚಾಲಕನ ಮೇಲೆ ತಂಡದಿಂದ ಹಲ್ಲೆ Read More »

ಕನ್ನಡಕ್ಕೆ ಅವಮಾನ : ಕಮಲ ಹಾಸನ್‌ ವಿರುದ್ಧ ಕೇಸ್‌ ದಾಖಲು

ಕನ್ನಡಕ್ಕೆ ತಮಿಳು ತಾಯಿಭಾಷೆ ಎಂದು ಹೇಳಿ ವಿವಾದಕ್ಕೀಡಾಗಿದ್ದ ಕಮಲ ಹಾಸನ್‌ ಬೆಂಗಳೂರು: ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ವಿರುದ್ಧ ಕನಕಪುರದ ಎರಡನೇ ಅಪರ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ. ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ನಾಗಾರ್ಜುನ ಗೌಡ ಎಂಬವರು ಕೋರ್ಟ್‌ಗೆ ಖಾಸಗಿ ದೂರು ದಾಖಲು ಮಾಡಿದ್ದಾರೆ. ಕನ್ನಡದ ಬಗ್ಗೆ ಕಮಲ್ ಹಾಸನ್ ಅವಹೇಳನ ಮಾಡಿರುವುದು ವೈಯಕ್ತಿಕವಾಗಿ ನೋವು ತಂದಿದೆ. ಜೊತೆಗೆ ಮಾನಸಿಕವಾಗಿ ಖಿನ್ನತೆ ತರಿಸಿದೆ. ಕನ್ನಡಕ್ಕೆ ಅಪಮಾನ ಮಾಡಿದ ಬಗ್ಗೆ

ಕನ್ನಡಕ್ಕೆ ಅವಮಾನ : ಕಮಲ ಹಾಸನ್‌ ವಿರುದ್ಧ ಕೇಸ್‌ ದಾಖಲು Read More »

ಅನೈತಿಕ ಚಟುವಟಿಕೆ : ಪೊಲೀಸರಿಂದ ದಾಳಿ, ಮಹಿಳೆ ರಕ್ಷಣೆ

ಪುತ್ತೂರು: ಮನೆಯೊಂದರಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿರುವ ಕುರಿತು  ಮಾಹಿತಿ ತಿಳಿದ ಪೊಲೀಸರು ದಾಳಿ ನಡೆಸಿ ಯುವತಿಯನ್ನು ರಕ್ಷಿಸಿ, ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಘಟನೆ ಸಾಮೆತ್ತಡ್ಕದಲ್ಲಿ ನಡೆದಿದೆ. ಪೊಲೀಸರ ದಾಳಿ ವೇಳೆ ಮನೆ ಮಾಲಕ, ಯುವತಿ ಮತ್ತು ಪುರುಷನನ್ನು ಅಲ್ಲಿಂದ ತಪ್ಪಿಸಲು ಸಹಾಯ ಮಾಡಿದ್ದಾರೆ. ಆದರೆ ಬೆನ್ನತ್ತಿದ್ದ ಪೊಲೀಸರು ಯುವತಿಯನ್ನು ರಕ್ಷಿಸಿದ್ದಾರೆ. ಸುಳ್ಯ ಮೂಲದ ಪುರುಷ ಮತ್ತು ಅವರಿಗೆ ಮನೆ ನೀಡಿದ ವಿಲ್ಫ್ರೆಡ್ ಎಂಬವರನ್ನು ವಶಕ್ಕೆ ಪಡೆದು ಮಹಿಳಾ ಪೊಲೀಸ್ ಠಾಣೆಯಲ್ಲಿ ಆರೋಪಿಗಳಿಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ

ಅನೈತಿಕ ಚಟುವಟಿಕೆ : ಪೊಲೀಸರಿಂದ ದಾಳಿ, ಮಹಿಳೆ ರಕ್ಷಣೆ Read More »

ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

ಕೊಲೆ, ಹತ್ಯಾಯತ್ನ ಪ್ರಕರಣದ ಆರೋಪಿಗಳು ಮಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕಳೆದ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸಿದ ನಂತರ ಸುಮಾರು ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಮೊಹಮ್ಮದ್ ಮುಸ್ತಫಾ ಅಲಿಯಾಸ್ ಮುಸ್ತ ಎಂಬಾತನನ್ನು ಮೂಲ್ಕಿ ಸಮೀಪ ಪಕ್ಷಕೆರೆಯಲ್ಲಿ ಬಂಧಿಸಲಾಗಿದೆ. ಮೊಹಮ್ಮದ್ ಮುಸ್ತಫಾ ಅಲಿಯಾಸ್ ಮುಸ್ತ 2020ರಲ್ಲಿ ಮುಲ್ಕಿ ಹೆದ್ದಾರಿಯ ಬಳಿ ವಿಜಯ ಸನ್ನಿಧಿ ಎದುರು ನಡೆದ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದು, ಕರ್ನಾಟಕ ಹೈಕೋರ್ಟ್‌ನಿಂದ ಜಾಮೀನು ಪಡೆದಿದ್ದ.

ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ Read More »

ಧರ್ಮಸ್ಥಳ : ಫೇಸ್‌ಬುಕ್‌ನಲ್ಲಿ ಅಶ್ಲೀಲ, ಪ್ರಚೋದನಕಾರಿ ಪೋಸ್ಟ್‌ ಹಾಕಿದವರ ವಿರುದ್ಧ ಕೇಸ್‌

ಬೆಳ್ತಂಗಡಿ : ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಅಶ್ಲೀಲ ಮತ್ತು ಪ್ರಚೋದನಕಾರಿ ಪೋಸ್ಟ್‌ ಹಾಕಿದ ಸಂಬಂಧ ಇಬ್ಬರ ವಿರುದ್‌ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಅಶ್ಲೀಲ ಪದಗಳನ್ನು ಬಳಸಿ ಪೋಸ್ಟ್ ಹಾಕಿದ ಆರೋಪದಲ್ಲಿ ನವೀನ್ ಗೌಡ ಎಂಬಾತನ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿಯೊಬ್ಬರು ನೀಡಿರುವ ದೂರಿನಂತೆ ಪ್ರಕರಣ‌ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.Naveen Gowda (https://facebook.com/naveen.gowda.938621) ಎಂಬ ಫೇಸ್‌ಬುಕ್ ಖಾತೆಯಲ್ಲಿ ಮಹೇಶ್ ಶೆಟ್ಟಿ ಎಂತವರನ್ನು ಸಾಕಿಕೊಂಡಿದ್ದಾನೆ ಎಂದು ಆರಂಭಿಸಿ

ಧರ್ಮಸ್ಥಳ : ಫೇಸ್‌ಬುಕ್‌ನಲ್ಲಿ ಅಶ್ಲೀಲ, ಪ್ರಚೋದನಕಾರಿ ಪೋಸ್ಟ್‌ ಹಾಕಿದವರ ವಿರುದ್ಧ ಕೇಸ್‌ Read More »

ಬೆಂಗಳೂರು ಕಾಲ್ತುಳಿತ ಪ್ರಕರಣ : ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ಆದೇಶ ರದ್ದು

ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ತೀರ್ಪಿನಿಂದ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗ ಬೆಂಗಳೂರು 1: ಐಪಿಎಲ್ ಆರ್‌ಸಿಬಿ ವಿಜಯೋತ್ಸವ ಸಂದರ್ಭ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 11 ಜನರ ಸಾವಿಗೆ ಕಾರಣವಾಗಿದ್ದ ಕಾಲ್ತುಳಿತ ಘಟನೆಗೆ ಹೊಣೆಯಾಗಿಸಿ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅವರನ್ನು ಅಮಾನತು ಮಾಡಿದ ನಿರ್ಧಾರವನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಮಂಗಳವಾರ ರದ್ದುಪಡಿಸಿ ಆದೇಶಿಸಿದೆ. ನ್ಯಾಯಮೂರ್ತಿ ಬಿ.ಕೆ ಶ್ರೀವಾತ್ಸವ ಮತ್ತು ಸಂತೋಷ್ ಮೆಹ್ರಾ ಅವರಿದ್ದ ಪೀಠ ಈ ಆದೇಶ ನೀಡಿದೆ. ಅವರಿಗೆ ಹಿಂದಿನ ಎಲ್ಲ ಭತ್ಯೆ, ಸೌಲಭ್ಯ ಒದಗಿಸಲು

ಬೆಂಗಳೂರು ಕಾಲ್ತುಳಿತ ಪ್ರಕರಣ : ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ಆದೇಶ ರದ್ದು Read More »

error: Content is protected !!
Scroll to Top