ಅಪರಾಧ

ಕಳ್ಳಭಟ್ಟಿ ಸಾರಾಯಿ ಸೇವಿಸಿ 16 ಮಂದಿ ಸಾವು

ನವದೆಹಲಿ: ಕಳ್ಳಭಟ್ಟಿ ಸಾರಾಯಿ ಸೇವಿಸಿ ಕನಿಷ್ಠ 16 ಮಂದಿ ಸಾವಿಗೀಡಾದ ಘಟನೆ ಪಂಜಾಬಿನ ಅಮೃತಸರ ಜಿಲ್ಲೆಯ ಐದು ಹಳ್ಳಿಗಳಲ್ಲಿ ಸಂಭವಿಸಿದೆ. ಈ ದುರಂತಕ್ಕೆ ಸಂಭವಿಸಿ ಐದು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಐದು ಹಳ್ಳಿಗಳ ಜನ ನಿನ್ನೆ ರಾತ್ರಿ ಕಳ್ಳಭಟ್ಟಿ ಸೇವಿಸಿ ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಕನಿಷ್ಠ 6 ಮಂದಿ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾತ್ರಿ 9.30ರ ವೇಳೆಗೆ ಜನರು ಕಳ್ಳಭಟ್ಟಿ ಸಾರಾಯಿ ಸೇವಿಸಿ ತೀವ್ರ ಅಸ್ವಸ್ಥರಾಗತೊಡಗಿದರು. ಪೊಲೀಸರು ಸ್ಥಳಕ್ಕೆ ತಲುಪುವಷ್ಟರಲ್ಲಿ […]

ಕಳ್ಳಭಟ್ಟಿ ಸಾರಾಯಿ ಸೇವಿಸಿ 16 ಮಂದಿ ಸಾವು Read More »

ಮೋದಿ ಮನೆ ಮೇಲೆ ಬಾಂಬ್‌ ಹಾಕಬೇಕು ಎಂದ ಯುವಕ ಸೆರೆ

ಯುದ್ಧಕ್ಕೆ ಮೋದಿಯೇ ಕಾರಣ ಎಂಬ ವೀಡಿಯೊ ಅಪ್‌ಲೋಡ್‌ ಮಾಡಿದ್ದ ಯುವಕ ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಮನೆ ಮೇಲೆ ಬಾಂಬ್‌ ಹಾಕಬೇಕೆಂದು ಪ್ರಚೋದನಾಕಾರಿ ಹೇಳಿಕೆಯ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹಾಕಿದ್ದ ಯುವಕನನ್ನು ಬೆಂಗಳೂರಿನ ಬಂಡೆಪಾಳ್ಯ ಪೊಲೀಸರು ಬಂಧಿಸಿದ್ದಾರೆ. ವೀಡಿಯೊ ವೈರಲ್ ಆಗುತ್ತಿದ್ದಂತೆಯೇ ಆರೋಪಿ ನವಾಜ್ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿದ್ದರು. ಆತನನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿರಿಸಲಾಗಿದೆ. ಭಾರತ ಮತ್ತು ಪಾಕಿಸ್ತಾನ ಮಧ್ಯೆ ಯುದ್ಧವಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಮನೆ ಮೇಲೆ ಯಾಕೆ ಪಾಕಿಸ್ತಾನ ಬಾಂಬ್ ಹಾಕಿಲ್ಲ?

ಮೋದಿ ಮನೆ ಮೇಲೆ ಬಾಂಬ್‌ ಹಾಕಬೇಕು ಎಂದ ಯುವಕ ಸೆರೆ Read More »

ಅತಿಯಾಗಿ ನಿದ್ರೆ ಮಾತ್ರೆ ಸೇವಿಸಿದ ತಾಯಿ-ಮಗ | ತಾಯಿ ಮೃತ್ಯು, ಮಗ ಗಂಭೀರ

ಬೆಳ್ತಂಗಡಿ: ಒಂದೆಡೆ ಆರ್ಥಿಕ ಸಮಸ್ಯೆ, ಇನ್ನೊಂದೆಡೆ ಅನಾರೋಗ್ಯದಿಂದಾಗಿ ನಿದ್ರೆ ಮಾತ್ರೆ ಸೇವಿಸಿದ ವೃದ್ಧೆ ತಾಯಿ ಸಾವಿಗೀಡಾಗಿ ಪುತ್ರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಸೋಮವಾರ ಮುಂಡಾಜೆಯಲ್ಲಿ ನಡೆದಿದೆ. ಮುಂಡಾಜೆ ಗ್ರಾಮದ ಕೂಳೂರು ನಿವಾಸಿ ದಿ. ಕುಂಞರಾಮನ್ ನಾಯರ್ ಅವರ ಪತ್ನಿ ಕಲ್ಯಾಣಿ (96) ಮೃತಪಟ್ಟವರು. ಪುತ್ರ ಖ್ಯಾತ ಜನಪದ ಕಲಾವಿದ, ಶಿಕ್ಷಕ ಜಯರಾಂ, (58) ಅವರು ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಲ್ಯಾಣಿ ಮತ್ತು ಜಯರಾಂ ಅವರ ಕೂಳೂರಿನ ಮನೆಯಲ್ಲಿ ಯಾವುದೇ ಚಟುವಟಿಕೆ ಇಲ್ಲದಿರುವುದನ್ನು

ಅತಿಯಾಗಿ ನಿದ್ರೆ ಮಾತ್ರೆ ಸೇವಿಸಿದ ತಾಯಿ-ಮಗ | ತಾಯಿ ಮೃತ್ಯು, ಮಗ ಗಂಭೀರ Read More »

ಹೊತ್ತಿ ಉರಿದ ಗೋದಾಮು : 30 ಕೋಟಿ ರೂ. ತೈಲ ನಾಶ

ಯುದ್ಧದ ಹಿನ್ನೆಲೆಯಲ್ಲಿ ತೈಲ ಸಂಗ್ರಹಿಸಿಟ್ಟಿದ್ದ ಗೋದಾಮಿನಲ್ಲಿ ಭೀಕರ ಬೆಂಕಿ ಅವಘಡ ಬೆಂಗಳೂರು: ಬೆಂಗಳೂರಿನ ನೆಲಮಂಗಲ ಬಳಿಯ ಅಡಕಮಾರನಹಳ್ಳಿ ಬಳಿ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿಹತ್ತಿಕೊಂಡು ತೈಲ ಗೋದಾಮು ಬೆಂಕಿಗಾಹುತಿಯಾಗಿರುವ ಘಟನೆ ಇಂದು ಮುಂಜಾನೆ ನಡೆದಿದೆ. ಶಲ್‌ ಕಂಪನಿಗೆ ಸೇರಿದ ಆಯಿಲ್‌ ಗೋದಾಮು ಧಗಧಗನೆ ಹೊತ್ತಿ ಉರಿದಿದೆ. ಬೆಳಗಿನ ಜಾವ ಮೂರು ಗಂಟೆಯಲ್ಲಿ ಈ ಅವಘಡ ಸಂಭವಿಸಿದೆ. ನೆಲಮಂಗಲ, ಪೀಣ್ಯ, ಯಶವಂತಪುರ ಭಾಗದ 8ಕ್ಕೂ ಹೆಚ್ಚು ಅಗ್ನಿಶಾಮಕ ತಂಡದಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ

ಹೊತ್ತಿ ಉರಿದ ಗೋದಾಮು : 30 ಕೋಟಿ ರೂ. ತೈಲ ನಾಶ Read More »

ಸುಹಾಸ್ ಶೆಟ್ಟಿ ಹತ್ಯೆ ಕುರಿತು ಸುಳ್ಳು ಸಂದೇಶ ರವಾನೆ | ಆರೋಪಿ ಅರೆಸ್ಟ್

ಮಂಗಳೂರು : ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಕರಾವಳಿಯನ್ನೇ ಬೆಚ್ಚಿಬೀಳಿಸಿದೆ. ಸುಹಾಸ್ ಶೆಟ್ಟಿ ಹತ್ಯೆಯ ವಿಷಯನುಸಾರವಾಗಿ ಸಾಕಷ್ಟು ವಿಚಾರಗಳು ಹಬ್ಬುತ್ತಲೇ ಇವೆ. ಇದೀಗ ಹತ್ಯೆಗೆ ಸಂಬಂಧಿಸಿದಂತೆ ಸುಳ್ಳು ಸಂದೇಶವೊಂದು ವೈರಲ್ ಆಗಿದ್ದು, ಸಂದೇಶ ರವಾನಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. *ಮಂಗಳೂರು ಮುಸ್ಲಿಂ ಯುವಸೇನೆ’ ಎಂಬ ವಾಟ್ಸ್ ಆ್ಯಪ್ ಗ್ರೂಪ್‌ನಲ್ಲಿ ಪ್ರಚೋದನಕಾರಿ ಸಂದೇಶ ರವಾನಿಸಿದ್ದ ಆರೋಪಿ ವಿಟ್ಲದ ಅನಾಸ್ ನನ್ನು ವಿಚಾರಣೆ ನಡೆಸಲಾಗಿದ್ದು ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಈ ಬಗ್ಗೆ ಮೂಡುಬಿದಿರೆ

ಸುಹಾಸ್ ಶೆಟ್ಟಿ ಹತ್ಯೆ ಕುರಿತು ಸುಳ್ಳು ಸಂದೇಶ ರವಾನೆ | ಆರೋಪಿ ಅರೆಸ್ಟ್ Read More »

ಹನಿ ಟ್ರ್ಯಾಪ್ ನಡೆಸಿ ಪೊಲೀಸರ ದಲ್ಲಾಳಿಯಂತೆ ವರ್ತಿಸಿದ ವಿಟ್ಲದ ನಟೋರಿಯಸ್ ರೌಡಿ ಶೀಟರ್ ಜಮಾಲ್..!

ವಿಟ್ಲ: ಸಾರ್ವಜನಿಕ ಸ್ಥಳದಲ್ಲಿ ಜುಗಾರಿ ನಡೆಯುತ್ತಿದ್ದ ವೇಳೆ ಮಾಹಿತಿ ಮೇರೆಗೆ ವಿಟ್ಲ ಪೊಲೀಸ್ ಸಿಬ್ಬಂದಿಗಳ ಜೊತೆ ಎಸ್ ಐ ಠಾಣಾ ವ್ಯಾಪ್ತಿಯ ಪಳಿಕೆ ಎಂಬಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿಗಳು ಪರಾರಿಯಾಗಿದ್ದಾರೆ. ಬಳಿಕ ವಿಟ್ಲ ಠಾಣೆಯಲ್ಲಿ ಮಧ್ಯವರ್ತಿ ಮಾಡುತ್ತಿರುವ ಈ ಹಿಂದೆ ಪಿರಿಯಾಪಟ್ಟಣ ಮತ್ತು ಉಪ್ಪಿನಂಗಡಿಯಲ್ಲಿ ಹನಿಟ್ರಾಪ್ ನಡೆಸಿ ಸಿಕ್ಕಿಬಿದ್ದಿರುವ ಆರೋಪಿ ವಿಟ್ಲದ ಜಮಾಲ್ ಜೊತೆ ಎಸೈ ಅವರು ಸೇರಿಕೊಂಡು ಜುಗಾರಿ ಆರೋಪಿಗೆ ಕರೆ ಮಾಡಿದ್ದಾರೆ. ಜಮಾಲ್ ಜೊತೆ ಮಾತುಕತೆ ನಡೆಸಿ ಮೂವತ್ತು ಸಾವಿರ ನೀಡಬೇಕು.

ಹನಿ ಟ್ರ್ಯಾಪ್ ನಡೆಸಿ ಪೊಲೀಸರ ದಲ್ಲಾಳಿಯಂತೆ ವರ್ತಿಸಿದ ವಿಟ್ಲದ ನಟೋರಿಯಸ್ ರೌಡಿ ಶೀಟರ್ ಜಮಾಲ್..! Read More »

ಮಹಿಳೆಗೆ ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ | ಪ್ರಕರಣ ದಾಖಲು

ವಿಟ್ಲ: ಮನೆಗೆ ಹೋಗುವ ರಸ್ತೆಯಲ್ಲಿ ಗೇಟ್ ಗೆ ಬೀಗ ಹಾಕುವ ವೇಳೆ ವಿಚಾರಿಸಲು ಬಂದ ಮಹಿಳೆಗೆ ಚಡ್ಡಿ ಜಾರಿಸಿ ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಘಟನೆ ಇಡ್ಕಿದು ಗ್ರಾಮದ ಕೊಪ್ಪ ಎಂಬಲ್ಲಿ ನಡೆದಿದೆ. ವಿಕೃತಿ ಮೆರೆದ ಆರೋಪಿಯನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ ಸಪಲ್ಯ ಎಂದು ತಿಳಿದು ಬಂದಿದೆ. ಮಹಿಳೆ ತನ್ನ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ತನ್ನ ಮನೆಗೆ ಬರುವ ದಾರಿಯಲ್ಲಿ ಯಾರೋ ಕೆಲಸ ಮಾಡುವ ಶಬ್ದ ಕೇಳಿದರಿಂದ ಸ್ಥಳಕ್ಕೆ ತೆರಳಿ ವಿಡಿಯೋ ಮಾಡಿದ್ದಾರೆ. ಇದನ್ನು

ಮಹಿಳೆಗೆ ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ | ಪ್ರಕರಣ ದಾಖಲು Read More »

ಯುವಕನೋರ್ವನನ್ನು ಮನೆ ಅಂಗಳದಲ್ಲೇ ಇರಿದು ಹತ್ಯೆ

ನೆಲ್ಯಾಡಿ: ಯುವಕನೋರ್ವನನ್ನು ಮನೆ ಅಂಗಳದಲ್ಲೇ ಇರಿದು ಹತ್ಯೆ ನಡೆಸಿದ ಘಟನೆ ನೆಲ್ಯಾಡಿಯ ಮಾದೇರಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಮೃತ ಯುವಕನನ್ನು ಮಾದೇರಿ ನಿವಾಸಿ ಶರತ್ ಎಂದು ಗುರುತಿಸಲಾಗಿದೆ. ಕೌಟುಂಬಿಕ ಕಲಹವೇ ಘಟನೆಗೆ ಕಾರಣ ಎಂದು ಹೇಳಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ.

ಯುವಕನೋರ್ವನನ್ನು ಮನೆ ಅಂಗಳದಲ್ಲೇ ಇರಿದು ಹತ್ಯೆ Read More »

ನೆಲ್ಯಾಡಿಯಲ್ಲಿ ಮನೆಯಂಗಳದಲ್ಲೇ ಯುವಕನ ಕೊಲೆ

ನೆಲ್ಯಾಡಿ : ಮನೆಯಂಗಳದಲ್ಲೇ ಚಾಕುವಿನಿಂದ ಇರಿದು ಯುವಕನನ್ನು ಹತ್ಯೆ ಮಾಡಿದ ಘಟನೆ ಶುಕ್ರವಾರ ರಾತ್ರಿ ನೆಲ್ಯಾಡಿ ಹೊರಠಾಣೆ ವ್ಯಾಪ್ತಿಯ ಮಾದೇರಿ ಸಮೀಪ ನಡೆದಿದೆ. ಮೃತ ಯುವಕನನ್ನು ಮಾದೇರಿ ನಿವಾಸಿ ಶರತ್ ಎಂದು ಗುರುತಿಸಲಾಗಿದೆ. ಮನೆಯ ಅಂಗಳದಲ್ಲಿ ಶರತ್‌ನನ್ನು ಚಾಕುವಿನಿಂದ ಇರಿದು ಕೊಲೆಗೈಯಲಾಗಿದ್ದು, ಕೌಟುಂಬಿಕ ಕಲಹ ಘಟನೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನೆಲ್ಯಾಡಿಯಲ್ಲಿ ಮನೆಯಂಗಳದಲ್ಲೇ ಯುವಕನ ಕೊಲೆ Read More »

ಪ್ರೊ.ರಾಮಕೃಷ್ಣ ಕೊಲೆ ಪ್ರಕರಣ | ಡಾ.ರೇಣುಕಾಪ್ರಸಾದ್ ಸಹಿತ ಎಲ್ಲಾ ಆರೋಪಿಗಳು ದೋಷಮುಕ್ತ

ಸುಳ್ಯ : ಪ್ರೊ.ಎ.ಎನ್.ರಾಮಕೃಷ್ಣ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಎಲ್ಲ ಆರೋಪಿಗಳನ್ನೂ ಪ್ರಕರಣದಿಂದ ದೋಷಮುಕ್ತಗೊಳಿಸಲಾಗಿದೆ. ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿರುವುದಾಗಿ ತಿಳಿದುಬಂದಿದೆ. 2011 ರಲ್ಲಿ ಪ್ರೊ.ರಾಮಕೃಷ್ಣರ ಹತ್ಯೆ ನಡೆದಿದ್ದು,  ಈ ಪ್ರಕರಣ ಜಿಲ್ಲಾ ಸೆಶನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ನಡೆದು 2016 ರಲ್ಲಿ ಈ ಪ್ರಕರಣ ತಪ್ಪಿ ಹೋಗಿತ್ತು. ಈ ತೀರ್ಪಿನ ವಿರುದ್ಧ ಸರಕಾರ ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸಿ, ವಿಚಾರಣೆ ನಡೆದು 2023 ರಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆಯಾಗಿತ್ತು. ಇದರ ವಿರುದ್ಧ ಶಿಕ್ಷೆಗೊಳಗಾದವರು ಸುಪ್ರೀಂಕೋರ್ಟಿನ ಮೆಟ್ಟಿಲೇರಿದ್ದರು. ಸುಪ್ರೀಂಕೋರ್ಟು

ಪ್ರೊ.ರಾಮಕೃಷ್ಣ ಕೊಲೆ ಪ್ರಕರಣ | ಡಾ.ರೇಣುಕಾಪ್ರಸಾದ್ ಸಹಿತ ಎಲ್ಲಾ ಆರೋಪಿಗಳು ದೋಷಮುಕ್ತ Read More »

error: Content is protected !!
Scroll to Top