ಅಪರಾಧ

ಮಣಿಪುರದಲ್ಲಿ ಜನಾಂಗೀಯ ಸಂಘರ್ಷ | ಆಂಬುಲೆನ್ಸ್ ಗೆ ಬೆಂಕಿ ಹಚ್ಚಿದ ಪರಿಣಾಮ ಮೂವರು ಸಜೀವ ದಹನ

ಮಣಿಪುರ: ಮಣಿಪುರದಲ್ಲಿ ಜನಾಂಗೀಯ ಸಂಘರ್ಷ ನಡೆಯುತ್ತಿದ್ದು, ಆಂಬುಲೆನ್ಸ್ ಒಂದಕ್ಕೆ ಬೆಂಕಿ ಹಚ್ಚಿದೆ ಪರಿಣಾಮ ಮೂವರು ಸಜೀವ ದಹನಗೊಂಡ ಘಟನೆ ನಡೆದಿದೆ. ಆಂಬುಲೆನ್ಸ್ ನಲ್ಲಿದ್ದ ಏಳು ವರ್ಷದ ಗಾಯಾಳು ಬಾಲಕ, ಆತನ ತಾಯಿ ಹಾಗೂ ಮತ್ತೊಬ್ಬ ಮಹಿಳೆ ಸೇರಿದಂತೆ ಮೂವರು ದಹನಗೊಂಡಿದ್ದಾರೆ. ಮಣಿಪುರದಲ್ಲಿ ಕಳೆದ ಹಲವು ದಿನಗಳಿಂದ ಮೀಸಲಾತಿ ಬಗ್ಗೆ ಘರ್ಷಣೆಗಳು ನಡೆಯುತ್ತಿದೆ.

ಮಣಿಪುರದಲ್ಲಿ ಜನಾಂಗೀಯ ಸಂಘರ್ಷ | ಆಂಬುಲೆನ್ಸ್ ಗೆ ಬೆಂಕಿ ಹಚ್ಚಿದ ಪರಿಣಾಮ ಮೂವರು ಸಜೀವ ದಹನ Read More »

ಕೊಯಿಲ ಪರಿಸರದಲ್ಲಿ ಅಕ್ರಮ ಕಸಾಯಿಖಾನೆ : ಎಲ್ಲೆಂದರಲ್ಲಿ ಎಸೆಯುವ ತ್ಯಾಜ್ಯ

ಕಡಬ: ತಾಲೂಕಿನ ಕೊÊಲ ಗ್ರಾಮದಲ್ಲಿ ಅಲ್ಲಲ್ಲಿ ಅಕ್ರಮ ಕಸಾಯಿಖಾನೆಗಳು ಕಾರ್ಯಾಚರಿಸುತ್ತಿದ್ದು, ಪರಿಸರದಲ್ಲಿ ಎಲ್ಲೆಂದರಲ್ಲಿ ತ್ಯಾಜ್ಯವನ್ನು ಎಸೆಯಲಾಗುತ್ತಿ..  ಗೋಳಿತ್ತಡ- ಏಣಿತಡ್ಕ ರಸ್ತೆಯ ತ್ರಿವೇಣಿ ಸರ್ಕಲ್ ಬಳಿ ದನದ ಕಾಲಿನ ಎಲುಬು ಮಂಗಳವಾರ ಪತ್ತೆಯಾಗಿ ಅಕ್ರಮ ಕಸಾಯಿಖಾನೆ ಕಾರ್ಯಾಚರಿಸುತ್ತಿರುವುದಕ್ಕೆ ಪುಷ್ಠಿ ನೀಡಿದೆ. ಗ್ರಾಮದ ಕುದುಳೂರು, ಕೊರೆಪದವು, ಕಲಾಯಿ, ಕೊಯಿಲ ಗೇಟ್ ಬಳಿ, ಜನತಾ ಕಾಲೋನಿ, ಆತೂರು ಬೈಲು, ಪೂರಿಂಗ ಮುಂತಾದೆಡೆ ಅಕ್ರಮ ಕಸಾಯಿಖಾನೆಗಳು ಕಾಯಾಚರಿಸುತ್ತಿದ್ದು, ಅಕ್ರಮವಾಗಿ ಗೋವಧೆ ನಿರಂತರವಾಗಿ ನಡೆಯುತ್ತಿದೆ ಎಂದು ಹಿಂದೂಪರ ಸಂಘಟನೆಗಳು ಆರೋಪಿಸುತ್ತಿವೆ. ರಾತ್ರೋ ರಾತ್ರಿ ಗೋವುಗಳನ್ನು

ಕೊಯಿಲ ಪರಿಸರದಲ್ಲಿ ಅಕ್ರಮ ಕಸಾಯಿಖಾನೆ : ಎಲ್ಲೆಂದರಲ್ಲಿ ಎಸೆಯುವ ತ್ಯಾಜ್ಯ Read More »

ಯುವ ವೈದ್ಯೆ ನೇಣು ಬಿಗಿದು ಆತ್ಮಹತ್ಯೆ

ಸುಳ್ಯ: ಸುಳ್ಯ ಯುವ ವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಇಂಟರ್ನ್ ಶಿಪ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ನೀರ್ಚಾಲು ಕನ್ನೆಪಾಡಿ ನಿವಾಸಿ, ಕ್ಯಾಂಪ್ಕೋ ನಿವೃತ್ತಿ ಉದ್ಯೋಗಿ ಗೋಪಾಲಕೃಷ್ಣ ಭಟ್ ಅವರ ಪುತ್ರಿ ಡಾ.ಪಲ್ಲವಿ ಜಿ.ಕೆ. (25) ಎಂದು ಗುರುತಿಸಲಾಗಿದೆ. ಸೋಮವಾರ ರಾತ್ರಿ ಊಟ ಮಾಡಿ ತನ್ನ ಕೊಠಡಿಗೆ ತೆರಳಿದ್ದರು. ಬೆಳಿಗ್ಗೆ 6 ಗಂಟೆಗೆ ತಂದೆ ಕೊಠಡಿಗೆ ತೆರಳಿದಾಗ ನೇಣು ಬಿಗಿದುಕೊಂಡು ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿ್ದ್ದಾರೆ. ಈ ಕುರಿತು ಬದಿಯಡ್ಕ ಪೊಲೀಸರು ಪ್ರಕರಣ

ಯುವ ವೈದ್ಯೆ ನೇಣು ಬಿಗಿದು ಆತ್ಮಹತ್ಯೆ Read More »

ಕಬಕ ಬಿರಾವು ನಿವಾಸಿ ಸಹೋದರಿ ಮನೆಯಲ್ಲಿ ಆತ್ಮಹತ್ಯೆ

ಪುತ್ತೂರು: ಕಬಕದ ಬಿರಾವು ನಿವಾಸಿಯೊಬ್ಬರು ಬಲ್ನಾಡು ಗ್ರಾಮದ ಕಟ್ಟತ್ತಾರು ಸಹೋದರಿಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬಿರಾವು ಪದ್ಮನಾಭ ಪೂಜಾರಿ (54) ಆತ್ಮಹತ್ಯೆ ಮಾಡಿಕೊಂಡವರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕಳೆದ ಒಂದು ವರ್ಷದಿಂದ ಬಲ್ನಾಡು ಗ್ರಾಮದ ಕಟ್ಟತ್ತಾರು ಎಂಬಲ್ಲಿ ಸಹೋದರಿಯ ಜೊತೆ ವಾಸವಾಗಿದ್ದರು. ಅಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರ ಪುತ್ರ ಶ್ರೀಕಾಂತ್ ಬಿರಾವು ಅವರು ನೀಡಿದ ದೂರಿನಂತೆ ಸಂಪ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಬಕ ಬಿರಾವು ನಿವಾಸಿ ಸಹೋದರಿ ಮನೆಯಲ್ಲಿ ಆತ್ಮಹತ್ಯೆ Read More »

ಸುಳ್ಯ ಪದವು ಮರದ ದಿಮ್ಮಿ ಮೈಮೇಲೆ ಬಿದ್ದು ವ್ಯಕ್ತಿ ಮೃತ್ಯು

ಸುಳ್ಯಪದವು: ಮನೆಯ ಸಮೀಪ ಮರದದಿಮ್ಮಿಯನ್ನು ವಾಹನಕ್ಕೆ ಲೋಡ್ ಮಾಡುತ್ತಿರುವಾಗ ಮರದ ದಿಮ್ಮಿ ಮೈ ಮೇಲೆ ಬಿದ್ದು ಪಡುವನ್ನೂರು ಗ್ರಾಮದ ಸುಳ್ಯ ಪದವು ಬಟ್ಟ್ಯಂಗಳ ನಿವಾಸಿ ಗೋಪಾಲಕೃಷ್ಣ ಎಂಬವರು ಮೃತಪಟ್ಟ ಘಟನೆ ಇಂದು ಮುಂಜಾನೆ ನಡೆದಿದೆ. ತನ್ನ ಮನೆಯ ಸಮೀಪ ಇರುವ ಮಾವಿನ ಮರದ ದಿಮ್ಮಿಗಳನ್ನು ಜೆಸಿಬಿ ಮೂಲಕ ಟಿಪ್ಪರ್ ವಾಹನಕ್ಕೆ ಲೋಡ್ ಮಾಡಲಾಗಿತ್ತು. ಟಿಪ್ಪರ್ ವಾಹನದ ಹಿಂದಿನ ಬಾಗಿಲನ್ನು ಸರಿಪಡಿಸುವ ಸಂದರ್ಭದಲ್ಲಿ ಮರದ ದಿಮ್ಮಿ ಹಿಂದಕ್ಕೆ ಬಂದು ಮೈಮೇಲೆ ಬಿದ್ದು ಗಂಭೀರ ಗಾಯಗೊಂಡಿದ ಗೋಪಾಲ ಕೃಷ್ಣ ರವರನ್ನು

ಸುಳ್ಯ ಪದವು ಮರದ ದಿಮ್ಮಿ ಮೈಮೇಲೆ ಬಿದ್ದು ವ್ಯಕ್ತಿ ಮೃತ್ಯು Read More »

ಕೇರಳದಲ್ಲಿ ಸಹೋದರನ ಕೊಲೆ | ಕೊಲೆ ಆರೋಪಿ ಪುತ್ತೂರಿನಲ್ಲಿ ಪೊಲೀಸ್ ವಶ

ಪುತ್ತೂರು : ಕೊಲೆ ಆರೋಪಿಯೋರ್ವನನ್ನು ಪೊಲೀಸರು ಕೊಂಬೆಟ್ಟು ಬಳಿ ಬಂಧಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಆರೋಪಿಯು ಕೇರಳದಲ್ಲಿ ಸಹೋದರನನ್ನು ಕೊಲೆಗೈದು ಪುತ್ತೂರಿನಲ್ಲಿ ತಲೆಮರೆಸಿಕೊಂಡಿದ್ದು, ಈ ಬಗ್ಗೆ ಮಾಹಿತಿ ತಿಳಿದ ಕೇರಳ ಪೊಲೀಸರು ಪುತ್ತೂರಿಗೆ ಆಗಮಿಸಿದ್ದರು. ಆರೋಪಿಯನ್ನು ಬಂಧಿಸುವಲ್ಲಿ ಪುತ್ತೂರು ನಗರ ಠಾಣಾ ಪೊಲೀಸರು ಸಹಕರಿಸಿದ್ದು, ಆರೋಪಿಯು ದೇವಸ್ಥಾನದ ಸಮೀಪವಿರುವ ಚರಂಡಿಗಳಲ್ಲೆಲ್ಲಾ ಬಿದ್ದು ತಪ್ಪಿಸಿಕೊಳ್ಳಲು ಯತ್ನಿಸಿದ್ದು, ನಗರ ಠಾಣಾ ಪೊಲೀಸರು, ಕೇರಳ ಪೊಲೀಸರ ಜೊತೆ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದರು…

ಕೇರಳದಲ್ಲಿ ಸಹೋದರನ ಕೊಲೆ | ಕೊಲೆ ಆರೋಪಿ ಪುತ್ತೂರಿನಲ್ಲಿ ಪೊಲೀಸ್ ವಶ Read More »

8 ತಿಂಗಳ ಹಿಂದೆ 15 ಲಕ್ಷ ನಗದು ಕಳ್ಳತನ -ಆರೋಪಿಗಳ ಬಂಧನ

ಪುತ್ತೂರು:  ಅಂಗಡಿಯೊಂದರಿಂದ ಎಂಟು ತಿಂಗಳ ಹಿಂದೆ 15 ಲಕ್ಷ ರೂ. ನಗದು ಕಳವುಗೈದಿದ್ದ ಇಬ್ಬರು ಆರೋಪಿಗಳನ್ನು ಪುತ್ತೂರು ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ದೇವರಾಜ ಅರಸ್‌ ಬಡವಾಣೆಯ ಸಮೀರ್‌ (ಕಪ್ಪ), ಹಾಸನ ಶಂಕರಿಪುರಂನ ಚಂದ್ರಶೇಖರ್‌ (ಚಂದು) ಬಂಧಿತರು. ಆರೋಪಿಗಳು 2022 ಸೆ. 16ರಂದು ಪುತ್ತೂರು ನಗರದ ಮುಖ್ಯ ರಸ್ತೆಯ ಮಾಯಿದೆ ದೇವುಸ್‌ ಚರ್ಚ್‌ ಸಮೀಪದ ಪ್ರಕಾಶ್‌ ಫೂಟ್ ವೇರ್‌ ಅಂಗಡಿಗೆ ನುಗ್ಗಿದ ಕಳ್ಳರು ಸುಮಾರು 15 ಲಕ್ಷ ರೂ. ಅನ್ನು ಕಳ್ಳತನ ಎಸಗಿದ್ದರು. ಈ ಬಗ್ಗೆ

8 ತಿಂಗಳ ಹಿಂದೆ 15 ಲಕ್ಷ ನಗದು ಕಳ್ಳತನ -ಆರೋಪಿಗಳ ಬಂಧನ Read More »

ಎನ್.ಐ.ಎ. ತಂಡ ಚಿಕ್ಕಮುಡ್ನೂರಿಗೆ ದಾಳಿ? | ಪುತ್ತೂರಿನ ನಾಲ್ವರನ್ನು ವಶಕ್ಕೆ ಪಡೆದುಕೊಂಡ ತಂಡ!

ಪುತ್ತೂರು: ಬುಧವಾರ ಬೆಳ್ಳಂಬೆಳಗ್ಗೆ ಮಿಂಚಿನ ಕಾರ್ಯಾಚರಣೆ ನಡೆಸಿದ ಎನ್.ಐ.ಎ. ತಂಡ ಪುತ್ತೂರು ನಗರಸಭೆ ಸಮೀಪದಲ್ಲೇ ಇರುವ ಚಿಕ್ಕಮುಡ್ನೂರು ಗ್ರಾಮಕ್ಕೂ ದಾಳಿ ನಡೆಸಿತ್ತು ಎಂಬ ಮಾಹಿತಿ ತಿಳಿದುಬಂದಿದೆ. ಬುಧವಾರ ನಡೆದ ದಾಳಿಯಲ್ಲಿ ಪುತ್ತೂರು ತಾಲೂಕಿನ 4 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಹೇಳಲಾಗಿದೆ. ಮಹಮ್ಮದ್ ಹ್ಯಾರೀಸ್ ಕುಂಬ್ರ (32), ಸಜ್ಜದ್ ಹುಸೈನ್ ಕೋಡಿಂಬಾಡಿ (37), ಫೈಜಲ್ ಅಹಮ್ಮದ್ ತಾರಿಗುಡ್ಡೆ, ಸಂಶುದ್ದೀನ್ ಕೂರ್ನಡ್ಕ ಎಂಬವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಎನ್.ಐ.ಎ. ತಂಡ ಚಿಕ್ಕಮುಡ್ನೂರಿಗೆ ದಾಳಿ? | ಪುತ್ತೂರಿನ ನಾಲ್ವರನ್ನು ವಶಕ್ಕೆ ಪಡೆದುಕೊಂಡ ತಂಡ! Read More »

ಅಳಕೆಮಜಲು: ಯುವಕ ನೇಣು ಬಿಗಿದು ಆತ್ಮಹತ್ಯೆ

ವಿಟ್ಲ: ಇಲ್ಲಿನ ಅಳಕೆಮಜಲು ನಿವಾಸಿ ಧೀರಜ್ (30) ಬುಧವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಳಕೆಮಜಲಿನಲ್ಲಿ ಸಮೀಪ ನಡೆದಿದೆ. ಧೀರಜ್ ಅವರು ಬಿ.ಸಿ.ರೋಡ್ ನ ಹೋಂಡಾ ಶೋ ರೂಂನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಒಂದು ವರುಷದ ಹಿಂದಷ್ಟೇ ವಿವಾಹವಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ, ಪತ್ನಿಯನ್ನು ಅಗಲಿದ್ದಾರೆ.

ಅಳಕೆಮಜಲು: ಯುವಕ ನೇಣು ಬಿಗಿದು ಆತ್ಮಹತ್ಯೆ Read More »

ಸಾಮಾಜಿಕ ಜಾಲತಾಣಗಳಲ್ಲಿ  ಒಂದು ಪಕ್ಷರ ಪರ ಪ್ರಚಾರ ಮಾಡುತ್ತಿರುವ ಗ್ರಂಥ ಪಾಲಕರನ್ನು ಕೆಲಸದಿಂದ ವಜಾ ಮಾಡುವಂತೆ ಮನವಿ

ಪುತ್ತೂರು: ಪುತ್ತೂರು ಸರಕಾರಿ ಪದವಿಪೂರ್ವ ಕಾಲೇಜಿನ ಗ್ರಂಥಪಾಲಕ ಪ್ರವೀಣ್ ವಗ್ಗ ಒಂದು ರಾಜಕೀಯ ಪಕ್ಷದ ಪರ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡುತ್ತಿದ್ದು ತಕ್ಷಣ ಅವರನ್ನು ಕೆಲಸದಿಂದ ವಜಾ ಮಾಡಬೇಕು ಎಂದು ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಆಗ್ರಹಿಸಿದೆ. ಸರಕಾರಿ ಒದ್ಯೋಗಿಯಾಗಿದ್ದ ಈ ರೀತಿಯಾಗಿ ಒಂದು ಪಕ್ಷದ ಪರ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಪ್ಪು. ಯಾವುದೇ ಪಕ್ಷದ ಪರ ಇರುವಂತಿಲ್ಲ. ಬೇರೆ ಬೇರೆ ಧರ್ಮ ಜಾತಿಗಳ ವಿದ್ಯಾರ್ಥಿಗಳರುವ ಈ ಕಾಲೇಜನಲ್ಲಿ ಒಬ್ಬರು ಅಧ್ಯಾಪಕರು ಈ ರೀತಿ

ಸಾಮಾಜಿಕ ಜಾಲತಾಣಗಳಲ್ಲಿ  ಒಂದು ಪಕ್ಷರ ಪರ ಪ್ರಚಾರ ಮಾಡುತ್ತಿರುವ ಗ್ರಂಥ ಪಾಲಕರನ್ನು ಕೆಲಸದಿಂದ ವಜಾ ಮಾಡುವಂತೆ ಮನವಿ Read More »

error: Content is protected !!
Scroll to Top