ಅಪರಾಧ

ಆಪರೇಷನ್‌ ಸಿಂದೂರ್‌ಗೆ ಧಿಕ್ಕಾರ ಎಂದು ಪೋಸ್ಟ್‌ ಹಾಕಿದ ಬೆಳ್ತಂಗಡಿಯ ವಿದ್ಯಾರ್ಥಿನಿ

ವಿವಾದ ಸೃಷ್ಟಿಯಾದ ಬಳಿಕ ಡಿಲೀಟ್‌ ಮಾಡಿ ಇನ್ನೊಂದು ಪೋಸ್ಟ್‌ ಮಂಗಳೂರು : ಭಾರತೀಯ ಸೇನೆ ನಡೆಸಿದ ಆಪರೇಷನ್​ ಸಿಂದೂರ್ ಕಾರ್ಯಾಚರಣೆಯನ್ನು ಖಂಡಿಸಿ ಬೆಳ್ತಂಗಡಿಯ ವಿದ್ಯಾರ್ಥಿನಿಯೊಬ್ಬಳು ಹಾಕಿದ ಇನ್‌ಸ್ಟಾಗ್ರಾಂ ಪೋಸ್ಟ್‌ಗೆ ಭಾರಿ ವಿರೋಧ ವ್ಯಕ್ತವಾಗಿದೆ. ಬೆಳ್ತಂಗಡಿ ತಾಲೂಕಿನ ಬೆಳಾಲು ನಿವಾಸಿ ರೇಷ್ಮಾ ಎನ್. ಬಾರಿಗ ಎಂಬ ವಿದ್ಯಾರ್ಥಿನಿ ತನ್ನ ಇನ್​ಸ್ಟಾಗ್ರಾಂ​ ಖಾತೆಯಲ್ಲಿ ಹ್ಯಾಷ್​ ಟ್ಯಾಗ್​ ಧಿಕ್ಕಾರ ಆಪರೇಷನ್​ ಸಿಂದೂರ್ (dikkaraoperationsindura)” ಎಂದು ಗುರುವಾರದಂದು ಪೋಸ್ಟ್ ಹಾಕಿದ್ದಳು. ಇದಕ್ಕೆ ವಿರೋಧ ವ್ಯಕ್ತವಾಗುತ್ತಿದ್ದಂತೆ ರೇಷ್ಮಾ ಪೋಸ್ಟ್ ಡಿಲೀಟ್​ ಮಾಡಿದ್ದಾಳೆ. ರೇಷ್ಮಾ ಪ್ರಸ್ತುತ […]

ಆಪರೇಷನ್‌ ಸಿಂದೂರ್‌ಗೆ ಧಿಕ್ಕಾರ ಎಂದು ಪೋಸ್ಟ್‌ ಹಾಕಿದ ಬೆಳ್ತಂಗಡಿಯ ವಿದ್ಯಾರ್ಥಿನಿ Read More »

ದೇಶದ ವಿರೋಧವಾಗಿ ಪೋಸ್ಟ್ ಹಂಚಿಕೊಂಡ ಮಂಗಳೂರಿನ ವಿದ್ಯಾರ್ಥಿ | ವಿದ್ಯಾರ್ಥಿನಿಯ ವಿರುದ್ಧ ಪ್ರಕರಣ ದಾಖಲಿಸುವಂತೆ ಒತ್ತಾಯ

ಮಂಗಳೂರು : ಪಹಲ್ಗಾಮ್ ದಾಳಿಯ ನಂತರ  ಭಾರತ ಪ್ರತಿಕಾರವಾಗಿ ಆಪರೇಷನ್‍ ಸಿಂಧೂರ್‍ ಮೂಲಕ ಪಾಕಿಸ್ಥಾನವನ್ನು ದಾಳಿ ಮಾಡಿ ಭಾರತ ಹಾಗೂ ಪಾಕ್‍ ನಡುವೆ ಉದ್ವಿಗ್ನತೆಯ  ಪರಿಸ್ಥಿತಿ ಉಂಟಾಗಿದೆ. ಪಹಲ್ಗಾಮ್‍ ದಾಳಿಯಲ್ಲಿ ಅಮಾಯಕರ ಬಲಿಯನ್ನು ತೆಗೆದುಕೊಂಡ ಮಾಕಿಸ್ತಾನವನ್ನು  ಸಹಿಸದ ಬಾರತ ಪ್ರತಿಕಾರವಾಗಿ ‘ಆಪರೇಷನ್ ಸಿಂಧೂರ್’ ಮೂಲಕ ಪ್ರತಿಕಾರ ಯುದ್ಧಗಳು ನಡೆಯುತ್ತಿತ್ತಲೇ ಇವೆ. ಈ ಹಿನ್ನಲೇ ಇಡೀ ದೇಶವೇ ನಮ್ಮ ಸೈನ್ಯಕ್ಕೆ ಬೆನ್ನೆಲುಬಾಗಿ ನಿಂತು ಪ್ರಾರ್ಥಿಸುತ್ತಿರುವ ವೇಳೆ ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ದೇಶವಿರೋಧಿ ಪೋಸ್ಟ್ ಒಂದನ್ನು ತನ್ನ ಇನ್ಸಾಗ್ರಾಂಮ್‍

ದೇಶದ ವಿರೋಧವಾಗಿ ಪೋಸ್ಟ್ ಹಂಚಿಕೊಂಡ ಮಂಗಳೂರಿನ ವಿದ್ಯಾರ್ಥಿ | ವಿದ್ಯಾರ್ಥಿನಿಯ ವಿರುದ್ಧ ಪ್ರಕರಣ ದಾಖಲಿಸುವಂತೆ ಒತ್ತಾಯ Read More »

ಜನಾರ್ದನ ರೆಡ್ಡಿ ಶಾಸಕ ಸ್ಥಾನ ರದ್ದು

ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಜನಾರ್ದನ ರೆಡ್ಡಿ ಬೆಂಗಳೂರು : ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಗಂಗಾವತಿ ಶಾಸಕ ಜನಾರ್ದನ ರೆಡ್ಡಿಯವರ ಶಾಸಕ ಸ್ಥಾನ ರದ್ದಾಗಿದೆ. ಸಿಬಿಐ ಕೋರ್ಟ್ 7 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದ ಬೆನ್ನಿಗೆ ಜನಾರ್ದನ ರೆಡ್ಡಿಯವರನ್ನು ಜೈಲಿಗೆ ಕಳುಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇದೀಗ ಜನಾರ್ದನ ರೆಡ್ಡಿ ಶಾಸಕ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಜನಾರ್ದನ ರೆಡ್ಡಿ ಆಂಧ್ರದ ಚಂಚಲಗುಡ ಜೈಲಿನಲ್ಲಿದ್ದಾರೆ. ಗಣಿಗಾರಿಕೆ ಪ್ರಕರಣ ಸುದೀರ್ಘ ವಿಚಾರಣೆ ನಡೆಸಿದ್ದ ಹೈದರಾಬಾದ್ ಸಿಬಿಐ ಕೋರ್ಟ್ ಏಳು

ಜನಾರ್ದನ ರೆಡ್ಡಿ ಶಾಸಕ ಸ್ಥಾನ ರದ್ದು Read More »

ಪ್ರಚೋದನಕಾರಿ ಸಂದೇಶ ಪೋಸ್ಟ್‌ ಮಾಡಿದರೆ ಕಾದಿದೆ ಕ್ರಮ : ಕಮಿಷನರ್‌ ಎಚ್ಚರಿಕೆ

ದ್ವೇಷಪೂರಿತ ಪೋಸ್ಟ್‌ಗಳನ್ನು ಲೈಕ್‌, ಫಾರ್ವರ್ಡ್‌ ಮಾಡಿದರೂ ಕೇಸ್‌ ಮಂಗಳೂರು: ಇತ್ತೀಚಿನ ದಿನಗಳಲ್ಲಿ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ವಾಟ್ಸಾಪ್ ಗುಂಪುಗಳು ಮತ್ತು ಇತರ ಸಾಮಾಜಿಕ ಮಾಧ್ಯಮಗಳಲ್ಲಿ ಕೋಮು ದ್ವೇಷ, ಸುಳ್ಳು ಮಾಹಿತಿ ಮತ್ತು ಬೆದರಿಕೆ ಸಂದೇಶಗಳನ್ನು ಹರಡುವುದನ್ನು ಪೊಲೀಸ್ ಇಲಾಖೆ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಈ ರೀತಿಯ ಪೋಸ್ಟ್‌ಗಳನ್ನು ಹಾಕುವವರು ಪರಿಣಾಂ ಎದುರಿಸಲು ಸಿದ್ಧರಾಗಿರಬೇಕೆಂದು ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ಎಚ್ಚರಿಸಿದ್ದಾರೆ. ಕಳೆದ ವಾರವೊಂದರಲ್ಲೇ ವಿವಿಧ ಪೊಲೀಸ್ ಠಾಣೆಗಳಲ್ಲಿ ಇಂತಹ 30ಕ್ಕೂ ಹೆಚ್ಚು ಇಂಥ ಪ್ರಕರಣಗಳು ದಾಖಲಾಗಿವೆ. ಸಿಇಎನ್

ಪ್ರಚೋದನಕಾರಿ ಸಂದೇಶ ಪೋಸ್ಟ್‌ ಮಾಡಿದರೆ ಕಾದಿದೆ ಕ್ರಮ : ಕಮಿಷನರ್‌ ಎಚ್ಚರಿಕೆ Read More »

ಬಾಲಕಿಗೆ ಲೈಂಗಿಕ ಕಿರುಕುಳ | ಯುವಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲು

ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟಣೆ ಶಿರ್ಲಾಲುವಿನಲ್ಲಿ ನಡೆದಿದೆ.  ಪರಿಣಾಮ ಆಕೆ ಗರ್ಭಾವತಿಯಾಗಿದ್ದು, ಆರೋಪಿ ಯುವಕನ ವಿರುದ್ಧ ವೇಣೂರು ಪೊಲೀಸರಿಗೆ ನೊಂದ ಬಾಲಕಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಲೈಂಗಿಕ ಕಿರುಕುಳ ನೀಡಿದವ ಶಿರ್ಲಾಲು ಗ್ರಾಮದ ಸನತ್ (28ವ) ಎಂಬವನು ಎಂದು ಗುರುತಿಸಲಾಗಿದೆ. ಆರೋಪಿ ಸನತ್ ಬಾಲಕಿಯ ತಂದೆಯ ಕಾರಿನಲ್ಲಿ ಚಾಲಕನಾಗಿ ದುಡಿಯುತ್ತಿದ್ದು, ಆಗಾಗ ಮನೆಗೆ ಬಂದವನು ಬಾಲಕಿ ಜೊತೆ ಸಲುಗೆಯಿಂದ ಇದ್ದನೆನ್ನಲಾಗಿದೆ. 2024 ಮೇ. 22ರಂದು ಬಾಲಕಿಯ ಜನ್ಮ ದಿನದ

ಬಾಲಕಿಗೆ ಲೈಂಗಿಕ ಕಿರುಕುಳ | ಯುವಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲು Read More »

ಕಾಂತಾರ ಕಲಾವಿದ ನದಿಯಲ್ಲಿ ಮುಳುಗಿ ಸಾವು

ಕುಂದಾಪುರ : ರಿಷಬ್‌ ಶೆಟ್ಟಿಯವರ ಕಾಂತಾರಾ-1 ಸೆಟ್‌ನಲ್ಲಿ ಇನ್ನೊಂದು ದುರಂತ ಸಂಭವಿಸಿದೆ. ಚಿತ್ರತಂಡದಲ್ಲಿದ್ದ ಕೇರಳ ಮೂಲದ ಜೂನಿಯರ್ ಆರ್ಟಿಸ್ಟ್ ಕಪಿಲ್ ಎಂಬವರು ಕೊಲ್ಲೂರಿನಲ್ಲಿ ಮಂಗಳವಾರ ಸೌಪರ್ಣಿಕಾ ನದಿಯಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ಕೊಲ್ಲೂರು ಭಾಗದಲ್ಲಿ ಕಾಂತಾರ-1 ಶೂಟಿಂಗ್ ನಡೆಯುತ್ತಿತ್ತು. ಶೂಟಿಂಗ್ ಮುಗಿಸಿ ಕಪಿಲ್‌ ಮತ್ತು ತಂಡ ಸೌಪರ್ಣಿಕಾ ನದಿಗೆ ಈಜಾಡಲು ತೆರಳಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ಕಪಿಲ್‌ ಮೃತದೇಹವನ್ನು ಕುಂದಾಪುರದ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ. ಇಂದು ಕಪಿಲ್ ಅವರ ಮನೆಯವರು ಬಂದ ನಂತರ ಮರಣೋತ್ತರ ಪರೀಕ್ಷೆ

ಕಾಂತಾರ ಕಲಾವಿದ ನದಿಯಲ್ಲಿ ಮುಳುಗಿ ಸಾವು Read More »

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ | ಮನೀಶ್‍ ವಿರುದ್ಧ ಪ್ರಕರಣ ದಾಖಲು

ಮಂಗಳೂರು : ನಗರದ ಬಜೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಟ್ಸಾಪ್ ಗ್ರೂಪ್ ನಲ್ಲಿ ಮನೀಶ್‍ ಎಸ್‍.ಎಂಬ ಹೆಸರಿನವರು “ನಮ್ಮ ಕಾರ್ಯಕರ್ತನಾದ ಸುಹಾಸ್ ಬಜ್ಜೆಯ ಹತ್ಯೆಯನ್ನು ಖಂಡಿಸಿ ಇಂದು ಬೆಳಗ್ಗೆ 6:00 ಗಂಟೆಯಿಂದ ಸಂಜೆ 6:00 ಗಂಟೆಯವರೆಗೆ ದ ಕ ಜಿಲ್ಲೆ ಸಂಪೂರ್ಣ ಬಂದ್. ಸುಹಾಸ್ ರವರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ. ನಮ್ಮ ಬಲವನ್ನು ಈಗ ತೋರಿಸದೇ ಇದ್ದಲ್ಲಿ ಮುಂದೊಂದು ದಿನ ನಾವೇ ಇರುವುದಿಲ್ಲ. ಹಿಂದೂ ಸಾಗರದ ಬಿಂದು ಬಿಂದುಗಳೇ

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ | ಮನೀಶ್‍ ವಿರುದ್ಧ ಪ್ರಕರಣ ದಾಖಲು Read More »

ದ.ಕ. ಬಂದ್‍ ಕರೆ ಹಿನ್ನಲೆ ಹಿಂದೂ ಮುಖಂಡ ಶರಣ್ ಪಂಪ್ ವೇಲ್ ವಿರುದ್ಧ ಎಫ್‍.ಐ.ಆರ್‍

ಮಂಗಳೂರು : ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಹತ್ಯೆಯ ಬಳಿಕ  ದಕ್ಷಿಣ ಕನ್ನಡ ಜಿಲ್ಲಾ ಬಂದ್‍ ಕರೆ ಗೆ ನೀಡಿದ ಬೆನ್ನಲ್ಲೇ ಹಿಂದೂ ಮುಖಂಡ ಶರಣ್ ಪಂಪ್ ವೇಲ್ ವಿರುದ್ಧ  ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ಕರೆ ನೀಡಿದ್ದು, ಈ ಸಂದರ್ಭದಲ್ಲಿ ಸರ್ಕಾರಿ ಬಸ್ ಗಳಿಗೆ ಕಲ್ಲೆಸೆದು ಹಾನಿ ಮಾಡಲಾಗಿದೆ. ಈ ವೇಳೆ BNS ಕಾಯ್ದೆ 353 (2) 196 (b) (1) 49 ಹಾಗೂ 324

ದ.ಕ. ಬಂದ್‍ ಕರೆ ಹಿನ್ನಲೆ ಹಿಂದೂ ಮುಖಂಡ ಶರಣ್ ಪಂಪ್ ವೇಲ್ ವಿರುದ್ಧ ಎಫ್‍.ಐ.ಆರ್‍ Read More »

ಮಂಗಳೂರು ಹೈ ಅಲರ್ಟ್‍ | ವೈರಲ್‍ ಪೋಸ್ಟ್ ನಿಂದ ರಾತ್ರಿ 9:30ರೊಳಗೆ ವ್ಯಾಪಾರಗಳು ಬಂದ್‍

ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಹತ್ಯೆಯ ಪ್ರಕರಣದ ಕುರಿತಾಗಿ ಸೋಶಿಯಲ್‍ ಮೀಡಿಯಾದಲ್ಲಿ ಪೋಸ್ಟ್ ಗಳನ್ನು ಹಬ್ಬಿರುವ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೋಲಿಸರು ಕಠಿಣಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.  ‘ರಾತ್ರಿ 9.30ಕ್ಕೆ ಭರತ್ ಕುಮೇಲ್ ಕೊಲ್ಲುತ್ತೇವೆ’ ಎಂಬ ಸಂದೇಶ ರವಾಣೆಯಾದ ಹಿನ್ನಲೆಯಲ್ಲಿ ಮಂಗಳೂರು ನಗರದಾದ್ಯಂತ ಪೋಲಿಸರು ಹೈ ಅಲರ್ಟ್‍ ಆಗಿದ್ದಾರೆ.  ಸೋಮವಾರ ರಾತ್ರಿ 9.30ರೊಳಗೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಲಾಗಿದೆ. ಜನರನ್ನು ಬೇಗನೆ ಮನೆ ಸೇರಿಸುವ ಯತ್ನದಲ್ಲಿ ಹೋಟೆಲ್, ಪಬ್, ಬಾರ್ಗಗಳು, ಫುಟ್ ಪಾತ್

ಮಂಗಳೂರು ಹೈ ಅಲರ್ಟ್‍ | ವೈರಲ್‍ ಪೋಸ್ಟ್ ನಿಂದ ರಾತ್ರಿ 9:30ರೊಳಗೆ ವ್ಯಾಪಾರಗಳು ಬಂದ್‍ Read More »

ಹತ್ಯೆ ನಡೆದ ಸ್ಥಳದಲ್ಲಿದ್ದ ಇಬ್ಬರು ಮಹಿಳೆಯರ ವಿಚಾರಣೆ

ಆರೋಪಿಯೊಬ್ಬನ ಸಂಬಂಧಿಕ ಮಹಿಳೆಯರು ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಕೊಲೆ ಮಾಡುವಾಗ ಸ್ಥಳದಲ್ಲಿದ್ದ ಇಬ್ಬರು ಬುರ್ಖಾಧಾರಿ ಮಹಿಳೆಯರನ್ನು ವಿಚಾರಣೆಗೊಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಕೊಲೆ ಮಾಡಿ ಕಾರಿನಲ್ಲಿ ಪರಾರಿಯಾಗುತ್ತಿದ್ದಾಗ ಸ್ಥಳದಲ್ಲಿದ್ದ ಇಬ್ಬರು ಬುರ್ಖಾ ಧರಿಸಿದ ಮಹಿಳೆಯರು ಕಾರಿನ ಸಮೀಪ ಬಂದಿದ್ದರು. ಈ ಪೈಕಿ ಓರ್ವ ಮಹಿಳೆ ಫೋನಿನಲ್ಲಿ ಯಾರೊಂದಿಗೋ ಮಾತನಾಡುತ್ತಾ ಆರೋಪಿಯೊಬ್ಬನ ಸಮೀಪ ಸಾಗಿ ಬಂದಿದ್ದಳು. ಈ ಹಿನ್ನೆಲೆಯಲ್ಲಿ ಕೊಲೆಯಲ್ಲಿ ಇವರ ಪಾತ್ರವಿರಬಹುದು ಎಂಬ ಶಂಕೆ ವ್ಯಕ್ತವಾಗಿತ್ತು. ಈ ಮಹಿಳೆಯರು ಘಟನೆಯಲ್ಲಿ ನೇರವಾಗಿ

ಹತ್ಯೆ ನಡೆದ ಸ್ಥಳದಲ್ಲಿದ್ದ ಇಬ್ಬರು ಮಹಿಳೆಯರ ವಿಚಾರಣೆ Read More »

error: Content is protected !!
Scroll to Top