ಅಪರಾಧ

ಬಾಂಗ್ಲಾ ದೇಶದಲ್ಲಿ ಹಿಂದೂ ಧರ್ಮೀಯರ ದುರ್ಗಾ ದೇವಾಲಯ ಧ್ವಂಸ : ಆಕ್ರೋಶ‌ ವ್ಯಕ್ತಪಡಿಸಿದ ಭಾರತ

ಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂ ವಿರೋಧಿ ಚಟುವಟಿಕೆಗಳು ಮುಂದುವರೆದಿದ್ದು, ಢಾಕಾದ ಖಿಲ್ಖೇತ್ ಪ್ರದೇಶದ ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರವಾದ ದುರ್ಗಾ ದೇವಾಲಯವನ್ನು ಧ್ವಂಸ ಮಾಡಲಾಗಿದೆ. ಈ ಘಟನೆಗೆ ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ರಣದೀಪ್ ಸಿಂಗ್ ಜೈ ಸ್ ವಾಲ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಕೃತ್ಯ ಭಾರತೀಯರ ಧಾರ್ಮಿಕ ಭಾವನೆಗಳಿಗೆ ಘಾಸಿ ‌ಮಾಡಿದೆ. ಇದನ್ನು ಸಾಮಾನ್ಯ ಘಟನೆ ಎಂದು ಹಗುರವಾಗಿ ಪರಿಗಣಿಸಲಾಗದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ಕೇವಲ ಭೂ ಕಬಳಿಕೆಯ ವಿಷಯವಲ್ಲ. ಬದಲಾಗಿ […]

ಬಾಂಗ್ಲಾ ದೇಶದಲ್ಲಿ ಹಿಂದೂ ಧರ್ಮೀಯರ ದುರ್ಗಾ ದೇವಾಲಯ ಧ್ವಂಸ : ಆಕ್ರೋಶ‌ ವ್ಯಕ್ತಪಡಿಸಿದ ಭಾರತ Read More »

ಕೋಡಿಮಠದ ಸ್ವಾಮೀಜಿಯ ಸರ, ಉಂಗುರ ಕದ್ದ ಕಳ್ಳ ಸೆರೆ

ರೈಲಿನಲ್ಲಿ ಪ್ರಯಾಣಿಸುವಾಗ ಬ್ಯಾಗಿನಿಂದ ಕಳವಾಗಿದ್ದ ಆಭರಣ ಹಾಸನ : ದೇಶ-ಕಾಲದ ಬಗ್ಗೆ ಭವಿಷ್ಯ ನುಡಿದು ಖ್ಯಾತರಾಗಿರುವ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಹಾರನಹಳ್ಳಿಯ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳ ಚಿನ್ನ ಮತ್ತು ನಗದು ಕಳ್ಳತನ ಮಾಡಿದ್ದ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಏಳು ವರ್ಷಗಳ ಹಿಂದೆ ಈತ ಕಳ್ಳತನ ನಡೆದಿತ್ತು. ಉತ್ತರಾಖಂಡದ ನೈನಿತಾಲ್ ಮೂಲದ ಜಿತೇಂದ್ರ ಕುಮಾರ್ ಎಂಬಾತ ಆರೋಪಿ. 2018ರಲ್ಲಿ ಸ್ವಾಮೀಜಿ ಬಾಗಲಕೋಟೆಯಿಂದ ಅರಸೀಕೆರೆಗೆ ರೈಲಿನ ಎಸಿ ಕೋಚ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಲೆದರ್ ಬ್ಯಾಗ್‌ನಲ್ಲಿ 250

ಕೋಡಿಮಠದ ಸ್ವಾಮೀಜಿಯ ಸರ, ಉಂಗುರ ಕದ್ದ ಕಳ್ಳ ಸೆರೆ Read More »

ಯುವತಿಯನ್ನು ಗರ್ಭವತಿಯನ್ನಾಗಿ ಮಾಡಿ ವಂಚಿಸಿದ ಯುವಕ | ಗಂಡು ಮಗುವಿಗೆ ಜನ್ಮವಿತ್ತ ಯುವತಿ

ಪುತ್ತೂರು: ಯುವತಿಯನ್ನು ವಂಚಿಸಿ ಗರ್ಭಿಣಿಯಾಗಿಸಿ ವಂಚಿಸಿದ ಯುವಕನ ಶೋಧ ಕಾರ್ಯ ಮುಂದುವರಿದಿದ್ದು, ಈ ನಡಿಗೆ ಯುವತಿ ನಿನ್ನೆ ರಾತ್ರಿ ಗಂಡು ಮಗಿವಿಗೆ ಜನ್ಮ ನೀಡಿದ್ದಾರೆ. ಸಂತ್ರಸ್ತೆಯೂ ಜೂ 24 ರಂದು ರಾತ್ರಿ ಬಪ್ಪಳಿಗೆ ನಿವಾಸಿ ಇಂಜಿನಿಯರಿಂಗ್‍ ವಿದ್ಯಾರ್ಥಿಯೋರ್ವ ತನಗೆ ಮದುವೆಯಾಗುವುದಾಗಿ ನಂಬಿಸಿ ಇದೀಗ ಮದುವೆಯಾಗಲು ನಿರಾಕರಿಸಿರುವುದಾಗಿ ದೂರು ನೀಡಿದಂತೆ ನಗರ ಠಾಣೆಯಲ್ಲಿ ಅತ್ಯಾಚಾರ ಹಾಗೂ ನಂಬಿಕೆ ದ್ರೋಹದ ಪ್ರಕರಣ ದಾಖಲಿಸಿದ್ದರು. ಸಂತ್ರಸ್ತ ಯುವತಿಯ ತಾಯಿ ಶುಕ್ರವಾರ ಪುತ್ತೂರಿನಲ್ಲಿ ಸುದ್ದಿಗೋಷ್ಠಿ ನಿಗದಿ ಮಾಡಿದ್ದರು. ಆದರೇ ನಿಗದಿತ ಸಮಯಕ್ಕೆ ಮಹಿಳೆ

ಯುವತಿಯನ್ನು ಗರ್ಭವತಿಯನ್ನಾಗಿ ಮಾಡಿ ವಂಚಿಸಿದ ಯುವಕ | ಗಂಡು ಮಗುವಿಗೆ ಜನ್ಮವಿತ್ತ ಯುವತಿ Read More »

ಮದುವೆ ಮಾಡಿಸದ ದ್ವೇಷದಲ್ಲಿ ತಾಯಿಯ ಕೊಲೆ : ಪೊಲೀಸರ ಬಳಿ ಬಾಯಿಬಿಟ್ಟ ಆರೋಪಿ

ಮಂಜೇಶ್ವರ ವರ್ಕಾಡಿಯಲ್ಲಿ ತಾಯಿಯನ್ನು ದಹಿಸಿ ಕೊಂದ ಪ್ರಕರಣ ಕಾಸರಗೋಡು : ತನಗೆ ಮದುವೆ ಮಾಡದ್ದಕ್ಕಾಗಿ ಮತ್ತು ಆಸ್ತಿಗಾಗಿ ತಾಯಿಯನ್ನು ಕೊಂದಿರುವುದಾಗಿ ವರ್ಕಾಡಿ ಕೊಲೆ ಪ್ರಕರಣದ ಆರೋಪಿ ಮೆಲ್ವಿನ್‌ ವಿಚಾರಣೆ ವೇಳೆ ಪೊಲೀಸರಿಗೆ ತಿಳಿಸಿದ್ದಾನೆ. ವರ್ಕಾಡಿ ನಲ್ಲೆಂಗಿಯ ಹಿಲ್ಡಾ ಮೊಂತೇರೋ (59) ಅವರನ್ನು ಪುತ್ರನೇ ಬೆಂಕಿ ಹಚ್ಚಿ ಜಿಂವಂತ ಸುಟ್ಟುಕೊಂದ ಪ್ರಕರಣ ಭಾರಿ ಸಂಚಲನಕ್ಕೆ ಕಾರಣವಾಗಿತ್ತು. ಆರೋಪಿ ತನ್ನ ಸೋದರತ್ತೆಯನ್ನೂ ಇದೇ ಮಾದರಿ ಸಾಯಿಸಲು ಯತ್ನಿಸಿದ್ದ. ಅವರು ತಪ್ಪಿಸಿಕೊಂಡಿದ್ದರು. ಆರೋಪಿಯನ್ನು ಪೊಲೀಸರು ಬೈಂದೂರಿನಲ್ಲಿ ಬಂಧಿಸಿ ವಿಚಾರಣೆಗೊಳಪಡಿಸಿದಾಗ ಬೆಚ್ಚಿಬೀಳಿಸುವ ಮಾಹಿತಿ

ಮದುವೆ ಮಾಡಿಸದ ದ್ವೇಷದಲ್ಲಿ ತಾಯಿಯ ಕೊಲೆ : ಪೊಲೀಸರ ಬಳಿ ಬಾಯಿಬಿಟ್ಟ ಆರೋಪಿ Read More »

ಚಾಮರಾಜನಗರದಲ್ಲಿ ಇನ್ನೊಂದು ಹುಲಿ ಸಾವು

4-5 ವರ್ಷದ ಹೆಣ್ಣು ಹುಲಿಯ ಕಳೇಬರ ಪತ್ತೆ ಬೆಂಗಳೂರು: ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದ ಹುಲಿಗಳ ಹತ್ಯಾಕಾಂಡ ಹಸಿರಾಗಿರುವಾಗಲೇ ರಾಜ್ಯದಲ್ಲಿ ಇನ್ನೊಂದು ಹುಲಿ ಸಾವನ್ನಪ್ಪಿದೆ. ಚಾಮರಾಜನಗರ ಜಿಲ್ಲೆಯ ಬಂಡೀಪುರದ ಗುಂಡ್ರೆ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಹೆಣ್ಣು ಹುಲಿಯೊಂದು ಸಾವನ್ನಪ್ಪಿದೆ. 4-5 ವರ್ಷದ ಹೆಣ್ಣು ಹುಲಿ ಸಹಜವಾಗಿ ಮೃತಪಟ್ಟಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಶುಕ್ರವಾರ ಅರಣ್ಯ ಸಿಬ್ಬಂದಿ ಗಸ್ತು ತಿರುಗುವ ವೇಳೆ ಕಳೇಬರ ಪತ್ತೆ ಆಗಿದೆ. ಇಂದು ವೈದ್ಯರು ಹುಲಿ ಮರಣೋತ್ತರ ಪರೀಕ್ಷೆ ನಡೆಸಲಿದ್ದಾರೆ. ಐದು ಹುಲಿಗಳನ್ನು ವಿಷವಿಕ್ಕಿ ಸಾಯಿಸಿದ ಪ್ರಕರಣ

ಚಾಮರಾಜನಗರದಲ್ಲಿ ಇನ್ನೊಂದು ಹುಲಿ ಸಾವು Read More »

ವಿದ್ಯಾರ್ಥಿನಿಗೆ ವಂಚಿಸಿದ ವಿದ್ಯಾರ್ಥಿ : ವಿದ್ಯಾರ್ಥಿಗಾಗಿ ಪೊಲೀಸರಿಂದ ಶೋಧಕಾರ್ಯ

ಪುತ್ತೂರು: ಪುತ್ತೂರಿನ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯೋರ್ವ ತನ್ನ ಸಹಪಾಠಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿಯನ್ನಾಗಿಸಿದ ಬಳಿಕ ವಂಚಿಸಿ ಪರಾರಿಯಾಗಿರುವ ಘಟನೆಗೆ ಸಂಬಂಧಿಸಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿ ದಿಢೀರ್ ರದ್ದಾದ ಘಟನೆ ಶುಕ್ರವಾರ ನಡೆದಿದೆ. ಪುತ್ತೂರಿನ ಬಪ್ಪಳಿಗೆ ನಿವಾಸಿಯಾಗಿರುವ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವನಿಂದ ವಂಚನೆಗೆ ಒಳಗಾಗಿದ್ದಾರೆ ಎಂದು ಹೇಳಲಾಗುತ್ತಿರುವ ವಿದ್ಯಾರ್ಥಿನಿಯ ತಾಯಿ ಪುತ್ತೂರಿನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಿಗದಿ ಪಡಿಸಿದ್ದರು. ಇದರ ಮಾಹಿತಿ ತಿಳಿದ ಪತ್ರಕರ್ತರು ಪತ್ರಿಕಾಗೋಷ್ಠಿಗೆ ಆಗಮಿಸಿದ್ದರು. ಆದರೆ ಕೊನೇಯ ಘಳಿಗೆಯಲ್ಲಿ ಪತ್ರಿಕಾಗೋಷ್ಠಿ ರದ್ದು ಪಡಿಸಲಾಗಿದೆ. ರಾಜಕೀಯ ಒತ್ತಡದಿಂದ ಪತ್ರಿಕಾಗೋಷ್ಠಿ

ವಿದ್ಯಾರ್ಥಿನಿಗೆ ವಂಚಿಸಿದ ವಿದ್ಯಾರ್ಥಿ : ವಿದ್ಯಾರ್ಥಿಗಾಗಿ ಪೊಲೀಸರಿಂದ ಶೋಧಕಾರ್ಯ Read More »

ಕೆನರಾ ಬ್ಯಾಂಕ್‌ ಶಾಖೆಯಿಂದ 59 ಕೆಜಿ ಚಿನ್ನ ಕದ್ದ ಆರೋಪಿಗಳು ಅರೆಸ್ಟ್‌

ಬ್ಯಾಂಕ್‌ ಮ್ಯಾನೇಜರ್‌ ಕಳ್ಳರ ಗ್ಯಾಂಗಿನ ಲೀಡರ್‌ ; ಸಿನಿಮೀಯ ರೀತಿಯಲ್ಲಿ ಪ್ಲ್ಯಾನ್‌ ಬೆಂಗಳೂರು : ವಿಜಯಪುರ ಜಿಲ್ಲೆಯ ಬಸನವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಮೇ 25ರಂದು ನಸುಕಿನ ಹೊತ್ತು ನಡೆದ 59 ಕೆಜಿ ಬಂಗಾರ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಕೊನೆಗೂ ಸಫಲರಾಗಿದ್ದಾರೆ. ಆಘಾತಕಾರಿ ವಿಚಾರವೆಂದರೆ ಕೆನರಾ ಬ್ಯಾಂಕ್‌ ಮ್ಯಾನೇಜರ್‌ ಈ ಕಳ್ಳತನದ ರೂವಾರಿ. ಬ್ಯಾಂಕಿನಿಂದ ಮೇ 25ರಂದು ನಸುಕಿನ ಹೊತ್ತು 58.975.94 ಕೆಜಿ ಚಿನ್ನಾಭರಣಗಳು ಮತ್ತು 5.20 ಲಕ್ಷ ನಗದು ಕಳ್ಳತನವಾಗಿತ್ತು.

ಕೆನರಾ ಬ್ಯಾಂಕ್‌ ಶಾಖೆಯಿಂದ 59 ಕೆಜಿ ಚಿನ್ನ ಕದ್ದ ಆರೋಪಿಗಳು ಅರೆಸ್ಟ್‌ Read More »

ಐದು ಹುಲಿಗಳ ಸಾವು : ಐವರು ಶಂಕಿತರ ವಶ

ಗ್ರಾಮಸ್ಥರ ವಿಚಾರಣೆ; ಗೋವಿನ ಮಾಲೀಕನ ಹುಡುಕಾಟ ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ವನ್ಯಧಾಮದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಇಂದು ಬೆಳಗ್ಗೆ ಐವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಹುಲಿಗಳ ಸಾವು ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಈಗಾಗಲೇ ಆಶ್ವಾಸನೆ ನೀಡಿದೆ. ಹುಲಿಗಳ ಮರಣೋತ್ತರ ಪರೀಕ್ಷೆ ಇಂದು ನಡೆಯಲಿದ್ದು, ವರದಿ ಕೈಸೇರಿದ ಬಳಿಕ ಸಾವಿಗೆ

ಐದು ಹುಲಿಗಳ ಸಾವು : ಐವರು ಶಂಕಿತರ ವಶ Read More »

‘ದ್ವಿಚಕ್ರ ವಾಹನಗಳಿಗೂ ಟೋಲ್’ ಬಗ್ಗೆ ನಿತಿನ್ ಗಡ್ಕರಿ ಹೇಳಿದ್ದೇನು?

ನವದೆಹಲಿ: ಕೇಂದ್ರ ಸರ್ಕಾರ ದ್ವಿಚಕ್ರ ವಾಹನಗಳಿಗೂ ಟೋಲ್ ವಿಧಿಸುತ್ತದೆ ಎಂದು ಸಾರ್ವಜನಿಕ ವಲಯದಲ್ಲಿ ಸುದ್ದಿಯಾಗುತ್ತಿದ್ದು, ಇದು ಸತ್ಯಕ್ಕೆ ದೂರವಾದ ಸಂಗತಿ. ಆ ರೀತಿಯ ಯಾವ ನಿರ್ಣಯವನ್ನೂ ತೆಗೆದುಕೊಳ್ಳಲಾಗಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಟೋಲ್‌ಗಳಲ್ಲಿ ದ್ವಿಚಕ್ರ ವಾಹನಗಳಿಗೆ ವಿನಾಯಿತಿ ಮುಂದುವರಿಯಲಿದೆ. ಸತ್ಯ ತಿಳಿಯದೆ ಜನರ ದಾರಿ ತಪ್ಪಿಸುವುದು ಉತ್ತಮ, ಆರೋಗ್ಯಕರ ಪತ್ರಿಕೋದ್ಯಮ ಅಲ್ಲ. ಅದನ್ನು ತಾನು ಖಂಡಿಸುವುದಾಗಿ ಬರೆದುಕೊಂಡಿದ್ದಾರೆ. ಹಾಗೆಯೇ, ದ್ವಿಚಕ್ರ ವಾಹನಗಳ

‘ದ್ವಿಚಕ್ರ ವಾಹನಗಳಿಗೂ ಟೋಲ್’ ಬಗ್ಗೆ ನಿತಿನ್ ಗಡ್ಕರಿ ಹೇಳಿದ್ದೇನು? Read More »

error: Content is protected !!
Scroll to Top