ಅಪರಾಧ

ಮನೆ ಮುಂದೆ ಕೆಮ್ಮಿದ ಕಾರಣಕ್ಕೆ ವ್ಯಕ್ತಿಯ ಮೇಲೆ ಹಲ್ಲೆ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ರಾಮನಗರ: ಮನೆ ಪಕ್ಕ ಕೆಮ್ಮಿದ ಕಾರಣಕ್ಕೆ ವ್ಯಕ್ತಿಯೊಬ್ಬರ ‌ಮೇಲೆ ಕೆಲವರು ಸೇರಿ ಹಲ್ಲೆ ನಡೆಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಹಲ್ಲೆಗೊಳಗಾದ ವ್ಯಕ್ತಿ ಮೃತಪಟ್ಟ ಘಟನೆ ಬಿಡದಿಯಲ್ಲಿ ನಡೆದಿದೆ. ರಾಜಸ್ಥಾನ ಮೂಲದ ವಿನೋದ್(34) ಎಂಬವರೇ ‌ಮೃತ ದುರ್ದೈವಿ. ಬಿಡದಿಯ ಖಾಸಗಿ ಕಂಪನಿಯೊಂದರಲ್ಲಿ ವಿನೋದ್ ಅವರು ಕೆಲಸ ಮಾಡುತ್ತಿದ್ದರು. ಕೆಲ ದಿನಗಳ ಹಿಂದೆ ಮನೆಯ ಮುಂದೆ ನಿಂತು ವಿನೋದ್ ಅವರು ಕೆಮ್ಮಿದರು ಎಂಬ ಕಾರಣಕ್ಕೆ ಆರೋಪಿಗಳಾದ ಸ್ಥಳೀಯ ನಿವಾಸಿಗಳಾದ ಹೊಂಬಯ್ಯ, ವಿಜಯ್ ಸೇರಿದಂತೆ ಇನ್ನಿತರರು ಅವರ ಮೇಲೆ ಗಂಭೀರ ಹಲ್ಲೆ ನಡೆಸಿದ್ದಾರೆ. […]

ಮನೆ ಮುಂದೆ ಕೆಮ್ಮಿದ ಕಾರಣಕ್ಕೆ ವ್ಯಕ್ತಿಯ ಮೇಲೆ ಹಲ್ಲೆ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು Read More »

ಅಕ್ರಮ ಕೋಳಿ ಅಂಕಕ್ಕೆ ‌ಪೊಲೀಸ್ ದಾಳಿ

ಮಡಿಕೇರಿ: ಅಕ್ರಮ ಕೋಳಿ ಅಂಕ ಚೆಂಬು ಗ್ರಾಮದಲ್ಲಿ ನಡೆಯುತ್ತಿದ್ದ ಕುರಿತು ಮಾಹಿತಿ ಪಡೆದ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಸ್ಥಳದಲ್ಲಿ ಕೋಳಿ ಅಂಕ ನಡೆಸಲು ಕಬ್ಬಿಣದ ಬೇಲಿಯನ್ನು ಅಳವಡಿಸಲಾಗಿತ್ತು. ಹಲವಾರು ಕೋಳಿಗಳು ‌ಸಹ ಉದ್ದೇಶಿತ ಸ್ಥಳದಲ್ಲಿ ಇದ್ದವು. ದಾಳಿ ನಡೆಸಿದ ಪೊಲೀಸರು ಅಳವಡಿಸಲಾಗಿದ್ದ ಕಬ್ಬಿಣದ ಬೇಲಿಯನ್ನು ‌ವಶಕ್ಕೆ ಪಡೆದಿದ್ದಾರೆ. ಪೊಲೀಸರ ರೈಡ್ ವೇಳೆ ಅಲ್ಲಿ ಸೇರಿದ್ದ ಜನರು ಓಡಿ ಹೋದ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಅಕ್ರಮ ಕೋಳಿ ಅಂಕಕ್ಕೆ ‌ಪೊಲೀಸ್ ದಾಳಿ Read More »

ಕೆನಡಾದ ಶಾಲೆಯಲ್ಲಿ ಗುಂಡಿನ ದಾಳಿ : 10 ಮಂದಿ ಸಾವು; 25ಕ್ಕೂ ಹೆಚ್ಚು ಮಂದಿಗೆ ಗಾಯ

ಶಾಲೆಗೆ ನುಗ್ಗಿ ಯದ್ವಾತದ್ವಾ ಗುಂಡು ಹಾರಿಸಿದ ಬಂದೂಕುಧಾರಿ ಓಟ್ಟಾವಾ: ಕೆನಡಾದ ಬ್ರಿಟಿಷ್ ಕೊಲಂಬಿಯಾದಲ್ಲಿರುವ ಶಾಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ, ಬಂದೂಕುಧಾರಿಯೂ ಸೇರಿದಂತೆ ಒಟ್ಟು 10 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ಕನಿಷ್ಠ 25ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಕೆನಡಾದ ಬ್ರಿಟಿಷ್ ಕೊಲಂಬಿಯಾದ ಟಂಬ್ಲರ್ ರಿಡ್ಜ್​ ಪಟ್ಟಣದಲ್ಲಿರುವ ಶಾಲೆಯಲ್ಲಿ ಅಪರಿಚಿತ ದುಷ್ಕರ್ಮಿಯಿಂದ ಸಾಮೂಹಿಕ ಗುಂಡಿನ ದಾಳಿ ನಡೆದಿದೆ. ಮೃತರು ಹಾಗೂ ಉದ್ದೇಶ ಹಾಗೂ ಸಂದರ್ಭಗಳ ಕುರಿತು ಅಧಿಕಾರಿಗಳು

ಕೆನಡಾದ ಶಾಲೆಯಲ್ಲಿ ಗುಂಡಿನ ದಾಳಿ : 10 ಮಂದಿ ಸಾವು; 25ಕ್ಕೂ ಹೆಚ್ಚು ಮಂದಿಗೆ ಗಾಯ Read More »

ಅಂದರ್‌ ಬಾಹರ್‌ ಜುಗಾರಿ : 11 ಮಂದಿ ಸೆರೆ

ಮನೆಯನ್ನೇ ಜುಗಾರಿ ಅಡ್ಡೆ ಮಾಡಿಕೊಂಡು ಆಟ ಕಾರ್ಕಳ : ತಾಲೂಕಿನ ಕುಕ್ಕುಂದೂರು ಗ್ರಾಮದ ನಕ್ರೆ ಬೈಲ್ಬೆಟ್ಟು ಪ್ರದೇಶದಲ್ಲಿರುವ ಮನೆಯೊಂದರಲ್ಲಿ ಇಸ್ಪೀಟ್ ಜುಗಾರಿ ಆಟ ನಡೆಯುತ್ತಿದ್ದ ಅಡ್ಡೆಗೆ ಕಾರ್ಕಳ ನಗರ ಪೊಲೀಸ್ ಠಾಣಾ ಸಿಬ್ಬಂದಿ ದಾಳಿ ನಡೆಸಿ ಎಂಟು ಮಂದಿಯನ್ನು ಬಂಧಿಸಿದ್ದಾರೆ. ಉಮ್ಮರ ಫಾರೂಕ್ (62), ಅಬ್ದುಲ್ ಅಜೀಜ್ (40), ಸತೀಶ ಎಸ್. ಪ್ರಭು (49), ಅಬ್ದುಲ್ ರಹಿಮಾನ್ (49), ಸಮೀರ್ (46), ಸುಲೇಮಾನ್ (45), ಇರ್ಫಾನ್ (26) ಹಾಗೂ ಚೇತಕ್ (38) ಬಂಧಿತ ಆರೋಪಿಗಳು. ಅಶೋಕ ಎಂಬುವರಿಗೆ

ಅಂದರ್‌ ಬಾಹರ್‌ ಜುಗಾರಿ : 11 ಮಂದಿ ಸೆರೆ Read More »

ಅನ್ಯಕೋಮಿನ ಯುವಕನ ಜೊತೆ ವಿದ್ಯಾರ್ಥಿನಿ ಪರಾರಿ : ಪೋಷಕರಿಂದ ದೂರು

ವಯನಾಡಿಗೆ ಹೋಗಿ ರಿಜಿಸ್ಟ್ರರ್‌ ಮದುವೆಯಾದ ಮಾಹಿತಿ ಮಂಗಳೂರು : ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿಯಾಗಿರುವ ಘಟನೆ ಮಂಗಳೂರಿನ ಸುರತ್ಕಲ್​​ನಲ್ಲಿ ನಡೆದಿದೆ. ಸುರತ್ಕಲ್​ನ ಮುಕ್ಕ ಕಾಲೇಜಿನಲ್ಲಿ ಓದುತ್ತಿದ್ದ ಕಾಸರಗೋಡು ಆರ್.ಡಿ‌.ನಗರದ ಮೀಪುಗುರಿ ನಿವಾಸಿಯಾದ ವೈಶಾಲಿ ಪರಾರಿಯಾಗಿದ್ದು, ಜನವರಿ 31ರಂದು ಮಿದ್ಲಾಜ್ ಜತೆ ರಿಜಿಸ್ಟ್ರರ್​ ಮದುವೆ ಆಗಿರುವ ಮಾಹಿತಿ ತಿಳಿದುಬಂದಿದೆ. ಮಗಳು ಸಂಪರ್ಕಕ್ಕೆ ಸಿಗದಿದ್ದರಿಂದ ಕಂಗಾಲಾಗಿರುವ ಪೋಷಕರು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮನೆಯವರೆಗೆ ತಿಳಿಸದೆ ಜನವರಿ 31ರಂದು ಕೇರಳದ ವಯನಾಡು ನೋಂದಣಾಧಿಕಾರಿ ಕಚೇರಿಯಲ್ಲಿ ವೈಶಾಲಿ ಹಾಗೂ

ಅನ್ಯಕೋಮಿನ ಯುವಕನ ಜೊತೆ ವಿದ್ಯಾರ್ಥಿನಿ ಪರಾರಿ : ಪೋಷಕರಿಂದ ದೂರು Read More »

ಧುರಂದರ್‌ ಖ್ಯಾತಿಯ ನಟ ರಣವೀರ್‌ ಸಿಂಗ್‌ಗೆ ಬೆದರಿಕೆ

ಕೋಟ್ಯಾಂತರ ರೂಪಾಯಿ ಕೇಳಿ ವಾಟ್ಸಪ್‌ ಮೂಲಕ ಬೆದರಿಕೆ ಸಂದೇಶ ರವಾನೆ ಮುಂಬೈ: ಸೂಪರ್‌ ಹಿಟ್‌ ಸಿನೆಮಾ ಧುರಂದರ್‌ ಖ್ಯಾತಿಯ ನಟ ರಣವೀರ್ ಸಿಂಗ್ ಅವರಿಗೆ ಬೆದರಿಕೆ ಹಾಕಲಾಗಿದೆ. ವಾಟ್ಸಪ್ ಮೂಲಕ ಬೆದರಿಕೆ ಸಂದೇಶ ಕಳುಹಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ರಣವೀರ್ ಸಿಂಗ್, ದೀಪಿಕಾ ಪಡುಕೋಣೆ ದಂಪತಿಯ ನಿವಾಸಕ್ಕೆ ಭದ್ರತೆ ಒದಗಿಸಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಮೊದಲು ಬಾಲಿವುಡ್​​ನ ಹಲವು ಸೆಲೆಬ್ರಿಟಿಗಳಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್​ನವರು ಬೆದರಿಕೆ ಹಾಕಿದ್ದರು. ಈಗಲೂ ರಣವೀರ್ ಸಿಂಗ್ ಅವರಿಗೆ ಲಾರೆನ್ಸ್

ಧುರಂದರ್‌ ಖ್ಯಾತಿಯ ನಟ ರಣವೀರ್‌ ಸಿಂಗ್‌ಗೆ ಬೆದರಿಕೆ Read More »

ಮದುವೆಯಾಗುವುದಾಗಿ ನಂಬಿಸಿ ಯುವತಿಯರಿಂದ ಹಣ ಪಡೆದು ವಂಚನೆ : ನಕಲಿ ಅಳಿಯ-ಮಾವ ಸೆರೆ

ಮಂಗಳೂರು, ಉಡುಪಿ, ಕಾರ್ಕಳದ 9 ಯುವತಿಯರಿಗೆ ವಂಚಿಸಿರುವ ಆರೋಪಿಗಳು ಮಂಗಳೂರು : ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮದುವೆಯ ಹೆಸರಲ್ಲಿ ಯುವತಿಯರನ್ನು ವಂಚಿಸುತ್ತಿದ್ದ ಆರೋಪಿ ಹಾಗೂ ಅವನಿಗೆ ಸಹಾಯ ಮಾಡುತ್ತಿದ್ದವನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮ್ಯಾಟ್ರಿಮೋನಿಯಲ್ಲಿ ವರ ಹುಡುಕುತ್ತಿದ್ದ ಯುವತಿಯರನ್ನು ಗುರಿಯಾಗಿಸಿಕೊಂಡು ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚನೆ ಎಸಗಿದ ಪ್ರಕರಣ ಇವರಿಬ್ಬರ ಬಂಧನದಿಂದ ಬೆಳಕಿಗೆ ಬಂದಿದೆ. ಬಂಧಿತನನ್ನು ಸುಶಾಂತ್ ಪೂಜಾರಿ ಎಂದು ಗುರುತಿಸಲಾಗಿದ್ದು, ಈತನ ವಂಚನೆಗೆ ಸಾಥ್ ನೀಡಿದ್ದ ಮೂಲ್ಕಿ ನಿವಾಸಿ ಭಾಸ್ಕರ್‌ನನ್ನೂ ಪೊಲೀಸರು ಬಂಧಿಸಿದ್ದಾರೆ.

ಮದುವೆಯಾಗುವುದಾಗಿ ನಂಬಿಸಿ ಯುವತಿಯರಿಂದ ಹಣ ಪಡೆದು ವಂಚನೆ : ನಕಲಿ ಅಳಿಯ-ಮಾವ ಸೆರೆ Read More »

ಕಸದ ತೊಟ್ಟಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ

ಬೆಂಗಳೂರು: ನವಜಾತ ಶಿಶುವಿನ ಶವ ಕಸದ ತೊಟ್ಟಿಯಲ್ಲಿ ಪತ್ತೆಯಾಗಿದ್ದು, ಶೇಷಾದ್ರಿಪುರಂ ರೈಲ್ವೆ ಪಾರ್ಲರ್‌ನಲ್ಲಿ ಈ ಘಟನೆ ನಡೆದಿದೆ. ಮಗು ಹುಟ್ಟಿದ ಒಂದೇ ದಿನದಲ್ಲಿ ಯಾರೋ‌ ತಂದು ಕಸದ ತೊಟ್ಟಿಗೆ ‌ಎಸೆದಿದ್ದು, ಆ ರಭಸಕ್ಕೆ ಮಗು ಮೃತಪಟ್ಟಿರುವಂತಿದೆ. ಮೃತದೇಹವನ್ನು ‌ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಶೇಷಾದ್ರಿಪುರಂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಸಿಸಿಟಿವಿ ವಿಡಿಯೋಗಳನ್ನು ಪರಿಶೀಲನೆ ಮಾಡಲಾಗುತ್ತಿದ್ದು, ಕ್ರೂರಿಗಳನ್ನು ಹಿಡಿಯಲು ಮಾಹಿತಿ ಸಂಗ್ರಹ ಕಾರ್ಯ ನಡೆಯುತ್ತಿದೆ.

ಕಸದ ತೊಟ್ಟಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ Read More »

ವಿಧಾನಸೌಧದ ಸಚಿವರ ಕಚೇರಿಯಲ್ಲೇ ಚಿನ್ನಾಭರಣ, ನಗದು ಇದ್ದ ಬ್ಯಾಗ್ ಕಳವು

ಸಂದರ್ಶಕರೊಬ್ಬರು ಮರೆತು ಹೋದ ಬ್ಯಾಗ್‌ ಕಳ್ಳತನ ಬೆಂಗಳೂರು : ಹೆಚ್ಚಿನ ಭದ್ರತೆ ಇರುವ ಸ್ಥಳವಾದ ವಿಧಾನಸೌಧದಲ್ಲೇ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರ ಕಚೇರಿಯಲ್ಲಿ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ರೂಪಾಯಿ ನಗದು ಇದ್ದ ಕೈಚೀಲ ಕಳವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ ಗ್ರೂಪ್ ನೌಕರನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ನವೀನ್ ಎಂಬವರು ಕೆಲಸದ ನಿಮಿತ್ತ ಸಚಿವ ಭೈರತಿ ಸುರೇಶ್ ಅವರ ಕಚೇರಿಗೆ ಬಂದಿದ್ದ ವೇಳೆ, ಕೈಚೀಲದಲ್ಲಿದ್ದ 300

ವಿಧಾನಸೌಧದ ಸಚಿವರ ಕಚೇರಿಯಲ್ಲೇ ಚಿನ್ನಾಭರಣ, ನಗದು ಇದ್ದ ಬ್ಯಾಗ್ ಕಳವು Read More »

ತಲೆಗೆ ಗಾಯವಾಗಿ ವೃದ್ಧ ಸಾವು : ಸಾವಿನ ಬಗ್ಗೆ ಅನುಮಾನ

ಮನೆಯಲ್ಲೇ ಬಿದ್ದಿತ್ತು 73ರ ಹರೆಯದ ವ್ಯಕ್ತಿಯ ಶವ ಕಡಬ: ವೃದ್ಧರೊಬ್ಬರು ತಲೆಗೆ ಗಾಯಗೊಂಡ ಸ್ಥಿತಿಯಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದು, ನೆಲ್ಯಾಡಿಯಲ್ಲಿರುವ ಅವರ ನಿವಾಸದಲ್ಲಿ ಭಾನುವಾರ ಶವ ಪತ್ತೆಯಾಗಿದೆ. ಮೃತರನ್ನು ಕಡಬ ನೆಲ್ಯಾಡಿ ಗ್ರಾಮದ ನಿವಾಸಿ ಕೆ.ಸಿ. ವರ್ಗೀಸ್ (73) ಎಂದು ಗುರುತಿಸಲಾಗಿದೆ. ಕೆ.ವಿ.ಥಾಮಸ್ ಸಲ್ಲಿಸಿದ ದೂರಿನ ಪ್ರಕಾರ, ಭಾನುವಾರ ಮಧ್ಯಾಹ್ನ ಚಿಕಿತ್ಸೆಗಾಗಿ ತನ್ನ ತಾಯಿಯನ್ನು ನೆಲ್ಯಾಡಿಯ ಅಶ್ವಿನಿ ಆಸ್ಪತ್ರೆಗೆ ಕರೆದೊಯ್ದಿದ್ದರು. ರಾತ್ರಿ 8 ಗಂಟೆಗೆ ಅವರನ್ನು ಸಂಬಂಧಿಕರ ಮನೆಯಲ್ಲಿ ಬಿಟ್ಟು ಹೋದ ನಂತರ, ರಾತ್ರಿ 11 ಗಂಟೆಗೆ ಮನೆಗೆ

ತಲೆಗೆ ಗಾಯವಾಗಿ ವೃದ್ಧ ಸಾವು : ಸಾವಿನ ಬಗ್ಗೆ ಅನುಮಾನ Read More »

error: Content is protected !!
Scroll to Top