ಅಪರಾಧ

ಮಹಿಳೆಗೆ ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ | ಪ್ರಕರಣ ದಾಖಲು

ವಿಟ್ಲ: ಮನೆಗೆ ಹೋಗುವ ರಸ್ತೆಯಲ್ಲಿ ಗೇಟ್ ಗೆ ಬೀಗ ಹಾಕುವ ವೇಳೆ ವಿಚಾರಿಸಲು ಬಂದ ಮಹಿಳೆಗೆ ಚಡ್ಡಿ ಜಾರಿಸಿ ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಘಟನೆ ಇಡ್ಕಿದು ಗ್ರಾಮದ ಕೊಪ್ಪ ಎಂಬಲ್ಲಿ ನಡೆದಿದೆ. ವಿಕೃತಿ ಮೆರೆದ ಆರೋಪಿಯನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ ಸಪಲ್ಯ ಎಂದು ತಿಳಿದು ಬಂದಿದೆ. ಮಹಿಳೆ ತನ್ನ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ತನ್ನ ಮನೆಗೆ ಬರುವ ದಾರಿಯಲ್ಲಿ ಯಾರೋ ಕೆಲಸ ಮಾಡುವ ಶಬ್ದ ಕೇಳಿದರಿಂದ ಸ್ಥಳಕ್ಕೆ ತೆರಳಿ ವಿಡಿಯೋ ಮಾಡಿದ್ದಾರೆ. ಇದನ್ನು […]

ಮಹಿಳೆಗೆ ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ | ಪ್ರಕರಣ ದಾಖಲು Read More »

ಯುವಕನೋರ್ವನನ್ನು ಮನೆ ಅಂಗಳದಲ್ಲೇ ಇರಿದು ಹತ್ಯೆ

ನೆಲ್ಯಾಡಿ: ಯುವಕನೋರ್ವನನ್ನು ಮನೆ ಅಂಗಳದಲ್ಲೇ ಇರಿದು ಹತ್ಯೆ ನಡೆಸಿದ ಘಟನೆ ನೆಲ್ಯಾಡಿಯ ಮಾದೇರಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಮೃತ ಯುವಕನನ್ನು ಮಾದೇರಿ ನಿವಾಸಿ ಶರತ್ ಎಂದು ಗುರುತಿಸಲಾಗಿದೆ. ಕೌಟುಂಬಿಕ ಕಲಹವೇ ಘಟನೆಗೆ ಕಾರಣ ಎಂದು ಹೇಳಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ.

ಯುವಕನೋರ್ವನನ್ನು ಮನೆ ಅಂಗಳದಲ್ಲೇ ಇರಿದು ಹತ್ಯೆ Read More »

ನೆಲ್ಯಾಡಿಯಲ್ಲಿ ಮನೆಯಂಗಳದಲ್ಲೇ ಯುವಕನ ಕೊಲೆ

ನೆಲ್ಯಾಡಿ : ಮನೆಯಂಗಳದಲ್ಲೇ ಚಾಕುವಿನಿಂದ ಇರಿದು ಯುವಕನನ್ನು ಹತ್ಯೆ ಮಾಡಿದ ಘಟನೆ ಶುಕ್ರವಾರ ರಾತ್ರಿ ನೆಲ್ಯಾಡಿ ಹೊರಠಾಣೆ ವ್ಯಾಪ್ತಿಯ ಮಾದೇರಿ ಸಮೀಪ ನಡೆದಿದೆ. ಮೃತ ಯುವಕನನ್ನು ಮಾದೇರಿ ನಿವಾಸಿ ಶರತ್ ಎಂದು ಗುರುತಿಸಲಾಗಿದೆ. ಮನೆಯ ಅಂಗಳದಲ್ಲಿ ಶರತ್‌ನನ್ನು ಚಾಕುವಿನಿಂದ ಇರಿದು ಕೊಲೆಗೈಯಲಾಗಿದ್ದು, ಕೌಟುಂಬಿಕ ಕಲಹ ಘಟನೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನೆಲ್ಯಾಡಿಯಲ್ಲಿ ಮನೆಯಂಗಳದಲ್ಲೇ ಯುವಕನ ಕೊಲೆ Read More »

ಪ್ರೊ.ರಾಮಕೃಷ್ಣ ಕೊಲೆ ಪ್ರಕರಣ | ಡಾ.ರೇಣುಕಾಪ್ರಸಾದ್ ಸಹಿತ ಎಲ್ಲಾ ಆರೋಪಿಗಳು ದೋಷಮುಕ್ತ

ಸುಳ್ಯ : ಪ್ರೊ.ಎ.ಎನ್.ರಾಮಕೃಷ್ಣ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಎಲ್ಲ ಆರೋಪಿಗಳನ್ನೂ ಪ್ರಕರಣದಿಂದ ದೋಷಮುಕ್ತಗೊಳಿಸಲಾಗಿದೆ. ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿರುವುದಾಗಿ ತಿಳಿದುಬಂದಿದೆ. 2011 ರಲ್ಲಿ ಪ್ರೊ.ರಾಮಕೃಷ್ಣರ ಹತ್ಯೆ ನಡೆದಿದ್ದು,  ಈ ಪ್ರಕರಣ ಜಿಲ್ಲಾ ಸೆಶನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ನಡೆದು 2016 ರಲ್ಲಿ ಈ ಪ್ರಕರಣ ತಪ್ಪಿ ಹೋಗಿತ್ತು. ಈ ತೀರ್ಪಿನ ವಿರುದ್ಧ ಸರಕಾರ ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸಿ, ವಿಚಾರಣೆ ನಡೆದು 2023 ರಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆಯಾಗಿತ್ತು. ಇದರ ವಿರುದ್ಧ ಶಿಕ್ಷೆಗೊಳಗಾದವರು ಸುಪ್ರೀಂಕೋರ್ಟಿನ ಮೆಟ್ಟಿಲೇರಿದ್ದರು. ಸುಪ್ರೀಂಕೋರ್ಟು

ಪ್ರೊ.ರಾಮಕೃಷ್ಣ ಕೊಲೆ ಪ್ರಕರಣ | ಡಾ.ರೇಣುಕಾಪ್ರಸಾದ್ ಸಹಿತ ಎಲ್ಲಾ ಆರೋಪಿಗಳು ದೋಷಮುಕ್ತ Read More »

ಆಪರೇಷನ್‌ ಸಿಂದೂರ್‌ಗೆ ಧಿಕ್ಕಾರ ಎಂದು ಪೋಸ್ಟ್‌ ಹಾಕಿದ ಬೆಳ್ತಂಗಡಿಯ ವಿದ್ಯಾರ್ಥಿನಿ

ವಿವಾದ ಸೃಷ್ಟಿಯಾದ ಬಳಿಕ ಡಿಲೀಟ್‌ ಮಾಡಿ ಇನ್ನೊಂದು ಪೋಸ್ಟ್‌ ಮಂಗಳೂರು : ಭಾರತೀಯ ಸೇನೆ ನಡೆಸಿದ ಆಪರೇಷನ್​ ಸಿಂದೂರ್ ಕಾರ್ಯಾಚರಣೆಯನ್ನು ಖಂಡಿಸಿ ಬೆಳ್ತಂಗಡಿಯ ವಿದ್ಯಾರ್ಥಿನಿಯೊಬ್ಬಳು ಹಾಕಿದ ಇನ್‌ಸ್ಟಾಗ್ರಾಂ ಪೋಸ್ಟ್‌ಗೆ ಭಾರಿ ವಿರೋಧ ವ್ಯಕ್ತವಾಗಿದೆ. ಬೆಳ್ತಂಗಡಿ ತಾಲೂಕಿನ ಬೆಳಾಲು ನಿವಾಸಿ ರೇಷ್ಮಾ ಎನ್. ಬಾರಿಗ ಎಂಬ ವಿದ್ಯಾರ್ಥಿನಿ ತನ್ನ ಇನ್​ಸ್ಟಾಗ್ರಾಂ​ ಖಾತೆಯಲ್ಲಿ ಹ್ಯಾಷ್​ ಟ್ಯಾಗ್​ ಧಿಕ್ಕಾರ ಆಪರೇಷನ್​ ಸಿಂದೂರ್ (dikkaraoperationsindura)” ಎಂದು ಗುರುವಾರದಂದು ಪೋಸ್ಟ್ ಹಾಕಿದ್ದಳು. ಇದಕ್ಕೆ ವಿರೋಧ ವ್ಯಕ್ತವಾಗುತ್ತಿದ್ದಂತೆ ರೇಷ್ಮಾ ಪೋಸ್ಟ್ ಡಿಲೀಟ್​ ಮಾಡಿದ್ದಾಳೆ. ರೇಷ್ಮಾ ಪ್ರಸ್ತುತ

ಆಪರೇಷನ್‌ ಸಿಂದೂರ್‌ಗೆ ಧಿಕ್ಕಾರ ಎಂದು ಪೋಸ್ಟ್‌ ಹಾಕಿದ ಬೆಳ್ತಂಗಡಿಯ ವಿದ್ಯಾರ್ಥಿನಿ Read More »

ದೇಶದ ವಿರೋಧವಾಗಿ ಪೋಸ್ಟ್ ಹಂಚಿಕೊಂಡ ಮಂಗಳೂರಿನ ವಿದ್ಯಾರ್ಥಿ | ವಿದ್ಯಾರ್ಥಿನಿಯ ವಿರುದ್ಧ ಪ್ರಕರಣ ದಾಖಲಿಸುವಂತೆ ಒತ್ತಾಯ

ಮಂಗಳೂರು : ಪಹಲ್ಗಾಮ್ ದಾಳಿಯ ನಂತರ  ಭಾರತ ಪ್ರತಿಕಾರವಾಗಿ ಆಪರೇಷನ್‍ ಸಿಂಧೂರ್‍ ಮೂಲಕ ಪಾಕಿಸ್ಥಾನವನ್ನು ದಾಳಿ ಮಾಡಿ ಭಾರತ ಹಾಗೂ ಪಾಕ್‍ ನಡುವೆ ಉದ್ವಿಗ್ನತೆಯ  ಪರಿಸ್ಥಿತಿ ಉಂಟಾಗಿದೆ. ಪಹಲ್ಗಾಮ್‍ ದಾಳಿಯಲ್ಲಿ ಅಮಾಯಕರ ಬಲಿಯನ್ನು ತೆಗೆದುಕೊಂಡ ಮಾಕಿಸ್ತಾನವನ್ನು  ಸಹಿಸದ ಬಾರತ ಪ್ರತಿಕಾರವಾಗಿ ‘ಆಪರೇಷನ್ ಸಿಂಧೂರ್’ ಮೂಲಕ ಪ್ರತಿಕಾರ ಯುದ್ಧಗಳು ನಡೆಯುತ್ತಿತ್ತಲೇ ಇವೆ. ಈ ಹಿನ್ನಲೇ ಇಡೀ ದೇಶವೇ ನಮ್ಮ ಸೈನ್ಯಕ್ಕೆ ಬೆನ್ನೆಲುಬಾಗಿ ನಿಂತು ಪ್ರಾರ್ಥಿಸುತ್ತಿರುವ ವೇಳೆ ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ದೇಶವಿರೋಧಿ ಪೋಸ್ಟ್ ಒಂದನ್ನು ತನ್ನ ಇನ್ಸಾಗ್ರಾಂಮ್‍

ದೇಶದ ವಿರೋಧವಾಗಿ ಪೋಸ್ಟ್ ಹಂಚಿಕೊಂಡ ಮಂಗಳೂರಿನ ವಿದ್ಯಾರ್ಥಿ | ವಿದ್ಯಾರ್ಥಿನಿಯ ವಿರುದ್ಧ ಪ್ರಕರಣ ದಾಖಲಿಸುವಂತೆ ಒತ್ತಾಯ Read More »

ಜನಾರ್ದನ ರೆಡ್ಡಿ ಶಾಸಕ ಸ್ಥಾನ ರದ್ದು

ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಜನಾರ್ದನ ರೆಡ್ಡಿ ಬೆಂಗಳೂರು : ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಗಂಗಾವತಿ ಶಾಸಕ ಜನಾರ್ದನ ರೆಡ್ಡಿಯವರ ಶಾಸಕ ಸ್ಥಾನ ರದ್ದಾಗಿದೆ. ಸಿಬಿಐ ಕೋರ್ಟ್ 7 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದ ಬೆನ್ನಿಗೆ ಜನಾರ್ದನ ರೆಡ್ಡಿಯವರನ್ನು ಜೈಲಿಗೆ ಕಳುಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇದೀಗ ಜನಾರ್ದನ ರೆಡ್ಡಿ ಶಾಸಕ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಜನಾರ್ದನ ರೆಡ್ಡಿ ಆಂಧ್ರದ ಚಂಚಲಗುಡ ಜೈಲಿನಲ್ಲಿದ್ದಾರೆ. ಗಣಿಗಾರಿಕೆ ಪ್ರಕರಣ ಸುದೀರ್ಘ ವಿಚಾರಣೆ ನಡೆಸಿದ್ದ ಹೈದರಾಬಾದ್ ಸಿಬಿಐ ಕೋರ್ಟ್ ಏಳು

ಜನಾರ್ದನ ರೆಡ್ಡಿ ಶಾಸಕ ಸ್ಥಾನ ರದ್ದು Read More »

ಪ್ರಚೋದನಕಾರಿ ಸಂದೇಶ ಪೋಸ್ಟ್‌ ಮಾಡಿದರೆ ಕಾದಿದೆ ಕ್ರಮ : ಕಮಿಷನರ್‌ ಎಚ್ಚರಿಕೆ

ದ್ವೇಷಪೂರಿತ ಪೋಸ್ಟ್‌ಗಳನ್ನು ಲೈಕ್‌, ಫಾರ್ವರ್ಡ್‌ ಮಾಡಿದರೂ ಕೇಸ್‌ ಮಂಗಳೂರು: ಇತ್ತೀಚಿನ ದಿನಗಳಲ್ಲಿ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ವಾಟ್ಸಾಪ್ ಗುಂಪುಗಳು ಮತ್ತು ಇತರ ಸಾಮಾಜಿಕ ಮಾಧ್ಯಮಗಳಲ್ಲಿ ಕೋಮು ದ್ವೇಷ, ಸುಳ್ಳು ಮಾಹಿತಿ ಮತ್ತು ಬೆದರಿಕೆ ಸಂದೇಶಗಳನ್ನು ಹರಡುವುದನ್ನು ಪೊಲೀಸ್ ಇಲಾಖೆ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಈ ರೀತಿಯ ಪೋಸ್ಟ್‌ಗಳನ್ನು ಹಾಕುವವರು ಪರಿಣಾಂ ಎದುರಿಸಲು ಸಿದ್ಧರಾಗಿರಬೇಕೆಂದು ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ಎಚ್ಚರಿಸಿದ್ದಾರೆ. ಕಳೆದ ವಾರವೊಂದರಲ್ಲೇ ವಿವಿಧ ಪೊಲೀಸ್ ಠಾಣೆಗಳಲ್ಲಿ ಇಂತಹ 30ಕ್ಕೂ ಹೆಚ್ಚು ಇಂಥ ಪ್ರಕರಣಗಳು ದಾಖಲಾಗಿವೆ. ಸಿಇಎನ್

ಪ್ರಚೋದನಕಾರಿ ಸಂದೇಶ ಪೋಸ್ಟ್‌ ಮಾಡಿದರೆ ಕಾದಿದೆ ಕ್ರಮ : ಕಮಿಷನರ್‌ ಎಚ್ಚರಿಕೆ Read More »

ಬಾಲಕಿಗೆ ಲೈಂಗಿಕ ಕಿರುಕುಳ | ಯುವಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲು

ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟಣೆ ಶಿರ್ಲಾಲುವಿನಲ್ಲಿ ನಡೆದಿದೆ.  ಪರಿಣಾಮ ಆಕೆ ಗರ್ಭಾವತಿಯಾಗಿದ್ದು, ಆರೋಪಿ ಯುವಕನ ವಿರುದ್ಧ ವೇಣೂರು ಪೊಲೀಸರಿಗೆ ನೊಂದ ಬಾಲಕಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಲೈಂಗಿಕ ಕಿರುಕುಳ ನೀಡಿದವ ಶಿರ್ಲಾಲು ಗ್ರಾಮದ ಸನತ್ (28ವ) ಎಂಬವನು ಎಂದು ಗುರುತಿಸಲಾಗಿದೆ. ಆರೋಪಿ ಸನತ್ ಬಾಲಕಿಯ ತಂದೆಯ ಕಾರಿನಲ್ಲಿ ಚಾಲಕನಾಗಿ ದುಡಿಯುತ್ತಿದ್ದು, ಆಗಾಗ ಮನೆಗೆ ಬಂದವನು ಬಾಲಕಿ ಜೊತೆ ಸಲುಗೆಯಿಂದ ಇದ್ದನೆನ್ನಲಾಗಿದೆ. 2024 ಮೇ. 22ರಂದು ಬಾಲಕಿಯ ಜನ್ಮ ದಿನದ

ಬಾಲಕಿಗೆ ಲೈಂಗಿಕ ಕಿರುಕುಳ | ಯುವಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲು Read More »

ಕಾಂತಾರ ಕಲಾವಿದ ನದಿಯಲ್ಲಿ ಮುಳುಗಿ ಸಾವು

ಕುಂದಾಪುರ : ರಿಷಬ್‌ ಶೆಟ್ಟಿಯವರ ಕಾಂತಾರಾ-1 ಸೆಟ್‌ನಲ್ಲಿ ಇನ್ನೊಂದು ದುರಂತ ಸಂಭವಿಸಿದೆ. ಚಿತ್ರತಂಡದಲ್ಲಿದ್ದ ಕೇರಳ ಮೂಲದ ಜೂನಿಯರ್ ಆರ್ಟಿಸ್ಟ್ ಕಪಿಲ್ ಎಂಬವರು ಕೊಲ್ಲೂರಿನಲ್ಲಿ ಮಂಗಳವಾರ ಸೌಪರ್ಣಿಕಾ ನದಿಯಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ಕೊಲ್ಲೂರು ಭಾಗದಲ್ಲಿ ಕಾಂತಾರ-1 ಶೂಟಿಂಗ್ ನಡೆಯುತ್ತಿತ್ತು. ಶೂಟಿಂಗ್ ಮುಗಿಸಿ ಕಪಿಲ್‌ ಮತ್ತು ತಂಡ ಸೌಪರ್ಣಿಕಾ ನದಿಗೆ ಈಜಾಡಲು ತೆರಳಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ಕಪಿಲ್‌ ಮೃತದೇಹವನ್ನು ಕುಂದಾಪುರದ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ. ಇಂದು ಕಪಿಲ್ ಅವರ ಮನೆಯವರು ಬಂದ ನಂತರ ಮರಣೋತ್ತರ ಪರೀಕ್ಷೆ

ಕಾಂತಾರ ಕಲಾವಿದ ನದಿಯಲ್ಲಿ ಮುಳುಗಿ ಸಾವು Read More »

error: Content is protected !!
Scroll to Top