ಅಪರಾಧ

ನಾಗಪುರ ಹಿಂಸಾಚಾರಕ್ಕೆ ಕುರಾನ್‌ ಸುಟ್ಟ ವದಂತಿ ಕಾರಣ

ಹಿಂಸಾಚಾರಕ್ಕೆ ಮೊದಲೇ ತಯಾರಿ ನಡೆದಿತ್ತು ಎಂದು ಬಿಜೆಪಿ ಆರೋಪ ಮುಂಬಯಿ: ಆರ್‌ಎಸ್‌ಎಸ್‌ ಕೇಂದ್ರ ಕಚೇರಿಯಿರುವ ನಾಗಪುರ ನಗರದ ಮಹಲ್‌ನಲ್ಲಿ ನಿನ್ನೆ ತಡರಾತ್ರಿ ನಡೆದಿರುವ ಕೋಮು ಹಿಂಸಾಚಾರ ಪೂರ್ವ ನಿಯೋಜಿತ ಎಂದು ಬಿಜೆಪಿ ಆರೋಪಿಸಿದೆ. ಹಿಂದುಗಳ ಅಂಗಡಿ, ಮನೆ ಮತ್ತು ವಾಹನಗಳನ್ನು ಗುರಿಮಾಡಿಕೊಂಡು ದಾಳಿ ಮಾಡಲಾಗಿದೆ. ಇದಕ್ಕೂ ಮೊದಲು ಈ ಭಾಗದಲ್ಲಿರುವ ಎಲ್ಲ ಸಿಸಿಟಿವಿಗಳನ್ನು ಧ್ವಂಸ ಮಾಡಿದ್ದಾರೆ. ಭಾರಿ ಪ್ರಮಾಣದಲ್ಲಿ ಕಲ್ಲು ತೂರಾಟವಾಗಿದ್ದು ಪೊಲೀಸರ ಸಹಿತ ಅನೇಕ ಮಂದಿ ಗಾಯಗೊಂಡಿದ್ದಾರೆ. ಇವೆಲ್ಲ ಪೂರ್ವ ನಿಯೋಜಿತ ಕೃತ್ಯ. ಗಲಭೆಗೆ ಮೊದಲೇ […]

ನಾಗಪುರ ಹಿಂಸಾಚಾರಕ್ಕೆ ಕುರಾನ್‌ ಸುಟ್ಟ ವದಂತಿ ಕಾರಣ Read More »

ಮತ್ತೆ ಮುನ್ನೆಲೆಗೆ ಬಂದ ಸೌಜನ್ಯಾ ಪ್ರಕರಣ : 14 ವರ್ಷವಾದರೂ ತಗ್ಗದ ಕಾವು

ಹೋರಾಟಗಾರರ ಸಭೆಗೆ ಮತ್ತೊಮ್ಮೆ ಅನುಮತಿ ನಿರಾಕರಿಸಿದ ಪೊಲೀಸರು ಮಂಗಳೂರು : ಕೆಲ ಸಮಯದಿಂದ ತಣ್ಣಗಾದಂತೆ ಕಾಣಿಸುತ್ತಿದ್ದ ಸೌಜನ್ಯಾ ಪರ ಹೋರಾಟ ಈಗ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಸಮೀರ್‌ ಎಂ.ಡಿ. ಎಂಬ ಯೂಟ್ಯೂಬರ್‌ ಸೌಜನ್ಯಳಿಗೆ ನ್ಯಾಯ ಸಿಗಬೇಕು ಎಂದು ಹೇಳಿಕೊಂಡು ಧರ್ಮಸ್ಥಳ ಕ್ಷೇತ್ರ ಮತ್ತು ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರನ್ನು ಗುರಿಯಾಗಿಸಿಕೊಂಡು ಮಾಡಿದ ವೀಡಿಯೊದಿಂದಾಗಿ ಮತ್ತೆ ಸೌಜನ್ಯಾ ಪ್ರಕರಣ ಜೀವ ಪಡೆದುಕೊಂಡಿದೆ.39 ನಿಮಿಷ 8 ಸೆಕೆಂಡುಗಳ ಈ ವೀಡಿಯೊ ಆರಂಭದಲ್ಲಿ ಸಮೀರ್‌ನ ಚಾನೆಲ್‌ನಲ್ಲಿ ಮಾತ್ರ ಇತ್ತು ಹಾಗೂ ಮೊದಲ ನಾಲ್ಕು

ಮತ್ತೆ ಮುನ್ನೆಲೆಗೆ ಬಂದ ಸೌಜನ್ಯಾ ಪ್ರಕರಣ : 14 ವರ್ಷವಾದರೂ ತಗ್ಗದ ಕಾವು Read More »

ಒಂದು ವರ್ಷದಲ್ಲಿ 59 ಸಲ ಡ್ರಗ್ಸ್‌ ಸಾಗಾಟ : ಆದರೂ ಸಿಕ್ಕಿಬೀಳಲಿಲ್ಲ ಈ ಚಾಲಾಕಿಯರು

ಮಂಗಳೂರು ಸಿಸಿಬಿ ಪೊಲೀಸರು ಭೇದಿಸಿದ ಬೃಹತ್‌ ಡ್ರಗ್ಸ್‌ ಜಾಲದಲ್ಲಿ ಯಾರೆಲ್ಲ ಶಾಮೀಲಾಗಿದ್ದಾರೆ? ಮಂಗಳೂರು: ಮಂಗಳೂರು ಸಿಸಿಬಿ ಪೊಲೀಸರು ಭೇದಿಸಿರುವ ರಾಜ್ಯದ ಅತಿದೊಡ್ಡ ಡ್ರಗ್ಸ್ ಜಾಲದ ಹಲವು ಮಾಹಿತಿಗಳು ಬೆಚ್ಚಿಬೀಳಿಸುವಂತಿದೆ. ದಾಖಲೆಯ 75 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜೊತೆ ಸಿಕ್ಕಿಬಿದ್ದಿರುವ ಇಬ್ಬರು ವಿದೇಶಿ ಮಹಿಳೆಯರು ಈ ಮೊದಲು ಒಂದು ವರ್ಷದ ಅವಧಿಯಲ್ಲಿ ವಿಮಾನ ನಿಲ್ದಾಣದ ಮೂಲಕ 59 ಸಲ ಡ್ರಗ್ಸ್‌ ಸಾಗಿಸಿದ್ದರೂ ಸಿಕ್ಕಿಬೀಳದೆ ಪಾರಾಗಿದ್ದರು. ಆದರೆ ಅದು ಹೇಗೆ ಸಾಧ್ಯವಾಯಿತು ಎನ್ನುವ ಪ್ರಶ್ನೆಯೊಂದು ಕಾಡುತ್ತಿದೆ. ರನ್ಯಾ ರಾವ್‌

ಒಂದು ವರ್ಷದಲ್ಲಿ 59 ಸಲ ಡ್ರಗ್ಸ್‌ ಸಾಗಾಟ : ಆದರೂ ಸಿಕ್ಕಿಬೀಳಲಿಲ್ಲ ಈ ಚಾಲಾಕಿಯರು Read More »

ಇಂದು ಬಹಿರಂಗವಾಗಲಿದೆ ಗೋಲ್ಡ್‌ ಸ್ಮಗ್ಲಿಂಗ್‌ನಲ್ಲಿ ಶಾಮೀಲಾಗಿರುವ ಸಚಿವರ ಹೆಸರು

ಯತ್ನಾಳ್‌ ಹೇಳಿಕೆಯಿಂದ ಇಡೀ ದೇಶದ ಗಮನ ಇಂದಿನ ಕಲಾಪದತ್ತ ಬೆಂಗಳೂರು: ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಾಟ ಪ್ರಕರಣದಲ್ಲಿ ಭಾಗಿಯಾಗಿರುವ ಇಬ್ಬರು ಸಚಿವರ ಹೆಸರನ್ನು ಸೋಮವಾರ ಸದನದಲ್ಲೇ ಹೇಳುವುದಾಗಿ ಬಿಜೆಪಿ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿರುವುದು ಭಾರಿ ಕುತೂಹಲ ಹುಟ್ಟಿಸಿದೆ.ವಿಜಯಪುರದಲ್ಲಿ ಭಾನುವಾರ ಈ ವಿಚಾರವಾಗಿ ಮಾತನಾಡಿರುವ ಅವರು, ರನ್ಯಾ ರಾವ್‌ಗೆ ಪ್ರೊಟೊಕಾಲ್ ನೀಡಿದವರ ಮಾಹಿತಿ ಸಂಗ್ರಹಿಸಲಾಗಿದೆ. ಚಿನ್ನ ಎಲ್ಲಿಂದ ತಂದರು, ಎಲ್ಲಿಟ್ಟು ತಂದರು ಎಂಬುದು ಗೊತ್ತಿದೆ. ಸೋಮವಾರ ವಿಧಾನಸಭೆಯಲ್ಲಿ ಸಚಿವರ ಹೆಸರುಗಳನ್ನು ಬಹಿರಂಗಪಡಿಸುತ್ತೇನೆ ಎಂದು ಹೇಳಿದ್ದಾರೆ.

ಇಂದು ಬಹಿರಂಗವಾಗಲಿದೆ ಗೋಲ್ಡ್‌ ಸ್ಮಗ್ಲಿಂಗ್‌ನಲ್ಲಿ ಶಾಮೀಲಾಗಿರುವ ಸಚಿವರ ಹೆಸರು Read More »

75 ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶ : ಇಬ್ಬರು ವಿದೇಶಿ ಮಹಿಳೆಯರ ಬಂಧನ

ಬೆಂಗಳೂರಿನಲ್ಲಿ ಮಂಗಳೂರು ಪೊಲೀಸರ ಕಾರ್ಯಾಚರಣೆ ಮಂಗಳೂರು : ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ 75 ಕೋಟಿ ರೂ. ಮೌಲ್ಯದ 37.87 ಕೆಜಿ ಡ್ರಗ್ಸ್​ ವಶಪಡಿಸಿಕೊಂಡು ಇಬ್ಬರು ವಿದೇಶಿ ಮಹಿಳೆಯರನ್ನು ಬಂಧಿಸಿದ್ದಾರೆ. ಇದು ಕರ್ನಾಟಕದ ಇತಿಹಾಸದಲ್ಲಿ ಅತಿದೊಡ್ಡ ಡ್ರಗ್ಸ್ ವಶ ಕಾರ್ಯಾಚರಣೆ ಎನ್ನಲಾಗಿದೆ. ಸಿಸಿಬಿ ಪೊಲೀಸರು ಕಳೆದ ಐದು ತಿಂಗಳಿಂದ ಈ ಡ್ರಗ್ಸ್‌ ಜಾಲದ ಬೆನ್ನುಹತ್ತಿದ್ದರು.ಎಂಡಿಎಂಎ ಡ್ರಗ್ಸ್ ದೆಹಲಿಯ ಲ್ಯಾಬ್​ನಲ್ಲಿ ನಿತ್ಯ ತಯಾರಾಗುತ್ತಿತ್ತು. ವಾರಕ್ಕೊಮ್ಮೆ ಬೆಂಗಳೂರಿಗೆ ವಿಮಾನದಲ್ಲಿ ಮೂಟೆಗಟ್ಟಲೆ ಬರುತ್ತಿತ್ತು. ವಾರಕ್ಕೆ 15-30 ಕೆಜಿ ಮತ್ತು ತಿಂಗಳಿಗೆ ಕನಿಷ್ಠ

75 ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶ : ಇಬ್ಬರು ವಿದೇಶಿ ಮಹಿಳೆಯರ ಬಂಧನ Read More »

ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ಅಪರಾಧಿಗೆ 20 ವರ್ಷ ಜೈಲು

ಕಲಿಯಲು ಬಂದಿದ್ದ ಸ್ನೇಹಿತನ ಮಗಳ ಮೇಲೆಯೇ ಅತ್ಯಾಚಾರ ಎಸಗಿದ್ದ ಪಾಪಿ ಮಂಗಳೂರು: ಕಾರ್ಕಳ ತಾಲೂಕಿನ ಇನ್ನಾದಲ್ಲಿ ಎರಡು ವರ್ಷದ ಹಿಂದೆ ಕಾಲೇಜು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿ ಆಕೆ ಗರ್ಭಿಣಿಯಾಗುವಂತೆ ಮಾಡಿದ್ದ ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಪೋಕ್ಸೊ ವಿಶೇಷ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ವಾಸದ ಶಿಕ್ಷೆ ವಿಧಿಸಿದೆ. ಮೂಲ್ಕಿ ತಾಲೂಕು ಏಳಿಂಜೆಯ ರವಿ (35) ಎಂಬಾತ ಶಿಕ್ಷೆಗೊಳಗಾದ ಅಪರಾಧಿ.ಅಪರಾಧಿ ರವಿ 2023ರ ಜೂನ್‌ನಿಂದ ಡಿಸೆಂಬರ್‌ವರೆಗೆ ಇನ್ನಾದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ.

ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ಅಪರಾಧಿಗೆ 20 ವರ್ಷ ಜೈಲು Read More »

ಲಷ್ಕರ್‌ನ ಮೋಸ್ಟ್‌ ವಾಂಟೆಡ್‌ ಉಗ್ರ ಅಬ್ದುಲ್‌ ಖತಲ್‌ನ ಹತ್ಯೆ

ರಾತ್ರಿ ಅಜ್ಞಾತ ವ್ಯಕ್ತಿಗಳ ಗುಂಡಿಗೆ ಬಲಿಯಾದ ಉಗ್ರ ಸಂಘಟನೆಯ ಕಮಾಂಡರ್‌ ಇಸ್ಲಾಮಾಬಾದ್‌ : ಪಾಕಿಸ್ಥಾನದ ಉಗ್ರ ಸಂಘಟನೆ ಲಷ್ಕರ್‌ ಇ ತಯ್ಯಬದ ಕಮಾಂಡರ್‌, ಮೋಸ್ಟ್‌ ವಾಂಟೆಡ್‌ ಲಿಸ್ಟ್‌ನಲ್ಲಿದ್ದ ಉಗ್ರನೊಬ್ಬನನ್ನು ಅಜ್ಞಾತ ವ್ಯಕ್ತಿಗಳು ನಿನ್ನೆ ರಾತ್ರಿ ಸಾಯಿಸಿದ್ದಾರೆ. ಕೊಲೆಯಾಗಿರುವ ಅಬ್ದುಲ್‌ ಖತಲ್‌ ಜಮ್ಮು-ಕಾಶ್ಮೀರದಲ್ಲಿ ನಡೆದ ಹಲವು ಉಗ್ರ ದಾಳಿಗಳ ರೂವಾರಿಯಾಗಿದ್ದ. ಭಾರತದ ಪಾಲಿಗೆ ಅವನು ತಲೆನೋವಾಗಿದ್ದ. ಶನಿವಾರ ರಾತ್ರಿ ಅವನನ್ನು ಅಜ್ಞಾತ ವ್ಯಕ್ತಿಗಳು ಗುಂಡಿಕ್ಕಿ ಸಾಯಿಸಿದ್ದಾರೆ ಎಂದು ವರದಿಯಾಗಿದೆ.ಲಷ್ಕರ್‌ನ ಸ್ಥಾಪಕ ಹಾಗೂ ಮುಂಬಯಿ ಮೇಲೆ ನಡೆದ ಭಯೋತ್ಪಾದಕ ದಾಳಿಯ

ಲಷ್ಕರ್‌ನ ಮೋಸ್ಟ್‌ ವಾಂಟೆಡ್‌ ಉಗ್ರ ಅಬ್ದುಲ್‌ ಖತಲ್‌ನ ಹತ್ಯೆ Read More »

ಹೋಳಿ ಗಮ್ಮತ್ತಿನಲ್ಲಿ ಹೊಡೆದಾಟ : ಮೂವರ ಹತ್ಯೆ

ನಶೆ ಏರಿದ ಬಳಿಕ ರಾಡ್‌, ದೊಣ್ಣೆಯಿಂದ ಬಡಿದಾಡಿಕೊಂಡ ಸ್ನೇಹಿತರು ಬೆಂಗಳೂರು: ಹೋಳಿ ಗಮ್ಮತ್ತಿನಲ್ಲಿ ಕಂಠಮಟ್ಟ ಶರಾಬು ಕುಡಿದು ನಶೆ ತಲೆಗೇರಿಸಿಕೊಂಡಿದ್ದ ಬಿಹಾರ ಮೂಲದ ಆರು ಕಾರ್ಮಿಕರು ಪರಸ್ಪರ ಹೊಡೆದಾಡಿಕೊಂಡ ಪರಿಣಾಮ ಮೂವರು ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಓರ್ವನಿಗೆ ಗಂಭೀರ ಗಾಯವಾಗಿದ್ದು, ಇಬ್ಬರು ಪರಾರಿ ಆಗಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸರ್ಜಾಪುರದ ನಿರ್ಮಾಣ ಹಂತದ ಫೋರ್‌ವಾಲ್ ಅವೆನ್ಯೂ ಅಪಾರ್ಟ್​ಮೆಂಟ್​ನ​ 3ನೇ ಮಹಡಿಯಲ್ಲಿ ಘಟನೆ ನಡೆದಿದೆ. ಕೊಲೆಯಾದ ಇಬ್ಬರನ್ನು ಅನ್ಸು(19) ಮತ್ತು ರಾಧೆ ಶ್ಯಾಮ್(20) ಎಂದು

ಹೋಳಿ ಗಮ್ಮತ್ತಿನಲ್ಲಿ ಹೊಡೆದಾಟ : ಮೂವರ ಹತ್ಯೆ Read More »

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಡಿಜಿಪಿ ರಾಮಚಂದ್ರ ರಾವ್‌ಗೆ ಕಡ್ಡಾಯ ರಜೆ ನೀಡಿದ ಸರಕಾರ

ಪ್ರಭಾವಿ ನಾಯಕರೊಬ್ಬರ ಜರ್ಮನಿ ಟೂರ್‌ ಬಗ್ಗೆ ಅನುಮಾನ ವ್ಯಕ್ತಪಡಿಸಿದ ತನಿಖಾಧಿಕಾರಿಗಳು ಬೆಂಗಳೂರು: ಕನ್ನಡ ನಟಿ ರನ್ಯಾ ರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಪ್ರಕರಣದ ತನಿಖೆ ತೀವ್ರಗೊಂಡಿರುವಂತೆ ಸರಕಾರ ಆಕೆಯ ಮಲತಂದೆ ಡಿಜಿಪಿ ದರ್ಜೆಯ ಐಪಿಎಸ್‌ ಅಧಿಕಾರಿ ಡಾ.ರಾಮಚಂದ್ರ ರಾವ್‌ ಅವರನ್ನು ಕಡ್ಡಾಯ ರಜೆಯಲ್ಲಿ ಕಳಿಸಿದೆ. ಡಾ.ರಾಮಚಂದ್ರ ರಾವ್‌ ಪ್ರಸ್ತುತ ಪೊಲೀಸ್‌ ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ.ರನ್ಯಾ ರಾವ್‌ ಕಳೆದ ಮಾ.3ರಂದು ದುಬೈಯಿಂದ 12.56 ಕೋಟಿ ರೂ. ಮೌಲ್ಯದ 14.2 ಕೆಜಿ ಚಿನ್ನವನ್ನು ಕಳ್ಳ ಮಾರ್ಗದಿಂದ

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಡಿಜಿಪಿ ರಾಮಚಂದ್ರ ರಾವ್‌ಗೆ ಕಡ್ಡಾಯ ರಜೆ ನೀಡಿದ ಸರಕಾರ Read More »

ಬೈಕ್‍ ಗೆ ಕಾರು ಡಿಕ್ಕಿ ಹೊಡೆಸಿ ಕೊಲೆಗೆ ಯತ್ನಿಸಿದ  ಆರೋಪಿಗೆ  ನ್ಯಾಯಾಂಗ  ಬಂಧನ

ಮಂಗಳೂರು: ನಗರದ ಸಮೀಪ ಹಳೆಯ ದ್ವೇಷಕ್ಕೆ ಸಂಬಂಧಿಸಿ ಬಿಜೈ ಕಾಪಿಕಾಡ್ 6ನೇ ಕ್ರಾಸ್‌ನಲ್ಲಿ ಬೈಕಿಗೆ ಕಾರು ಢಿಕ್ಕಿ ಹೊಡೆಸಿ ಬೈಕ್ ಸವಾರನನ್ನು ಕೊಲೆ ಮಾಡಲು ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಬಂಧಿತ ಆರೋಪಿ ಸತೀಶ್ ಕುಮಾರ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಪಾದಚಾರಿ ಮಹಿಳೆ ಯಲ್ಲವ್ವ ಉಪ್ನಾಳ ಮತ್ತು ಬೈಕ್ ಸವಾರ ಮುರಳಿ ಪ್ರಸಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಹಿಳೆಯು ಗುರುವಾರ ಬೆಳಗ್ಗೆ ಕೆಲಸಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿತ್ತು ಎಂದು ತಿಳಿದು ಬಂದಿದೆ. ಪೊಲೀಸರು

ಬೈಕ್‍ ಗೆ ಕಾರು ಡಿಕ್ಕಿ ಹೊಡೆಸಿ ಕೊಲೆಗೆ ಯತ್ನಿಸಿದ  ಆರೋಪಿಗೆ  ನ್ಯಾಯಾಂಗ  ಬಂಧನ Read More »

error: Content is protected !!
Scroll to Top