ಅಪರಾಧ

ಟ್ರಂಪ್‌ ಡಿನ್ನರ್‌ ಕೂಟದಲ್ಲಿ ಗುಂಡು ಹಾರಿಸಿದಾತ ಅರೆಸ್ಟ್‌

ವರದಿಗಾರರ ಔತಣಕೂಟದಲ್ಲಿ ಟ್ರಂಪ್‌ ದಂಪತಿ ಇರುವಾಗಲೇ ಗುಂಡು ಹಾರಾಟ ವಾಷಿಂಗ್ಟನ್‌: ಶ್ವೇತಭವನದ ಸಮೀಪ ವಾಷಿಂಗ್ಟನ್ ಹಿಲ್ಟನ್ ಹೋಟೆಲ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ವರದಿಗಾರರ ಔತಣಕೂಟದಲ್ಲಿ ಗುಂಡು ಹಾರಿಸದವನನ್ನು ಬಂಧಿಸಲಾಗಿದೆ. ಸೀಕ್ರೆಟ್ ಸರ್ವಿಸ್ ಮತ್ತು ಕಾನೂನು ಜಾರಿ ಸಂಸ್ಥೆಗಳು ಅದ್ಭುತವಾಗಿ ಕೆಲಸ ಮಾಡಿದ್ದು, ಶಂಕಿತ ದಾಳಿಕೋರನನ್ನು ಬಂಧಿಸಲಾಗಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿಕೊಂಡಿದ್ದಾರೆ. ಪತ್ರಕರ್ತರ ಜೊತೆಗಿನ ಡಿನ್ನರ್‌ ವೇಳೆ ನಡೆದ ಗುಂಡಿನ ದಾಳಿಯ ಬಗ್ಗೆ ಟ್ರಂಪ್‌ ತಮ್ಮ ಟ್ರೂಥ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಪ್ರತಿಕ್ರಿಯಿಸಿದ್ದಾರೆ.ಸೀಕ್ರೆಟ್ ಸರ್ವಿಸ್ ಮತ್ತು […]

ಟ್ರಂಪ್‌ ಡಿನ್ನರ್‌ ಕೂಟದಲ್ಲಿ ಗುಂಡು ಹಾರಿಸಿದಾತ ಅರೆಸ್ಟ್‌ Read More »

ತಲೆಮರೆಸಿಕೊಂಡಿದ್ದ ಅಪರಾಧಿ ಆಂಧ್ರ ಪ್ರದೇಶದಲ್ಲಿ ಪತ್ತೆ

ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಶಿಕ್ಷೆಯಾಗಿದ್ದ ಅಪರಾಧಿ ಕಡಬ : ಸಾರ್ವಜನಿಕ ರಸ್ತೆಯ ಸಮೀಪ ಮೋರಿಯ ಅಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯೋರ್ವರ ಮೃತದೇಹ ಪತ್ತೆಯಾದ ಪ್ರರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷೆ ಪ್ರಕಟವಾದ ಬಳಿಕ ತಲೆಮರೆಸಿಕೊಂಡಿದ್ದ ಕುಖ್ಯಾತ ಅಪರಾಧಿಯನ್ನು ಪೊಲೀಸರು ಬಂಧಿಸಿದ್ದಾರೆ. ಸುಳ್ಯ ಅಜ್ಜಾವರ ನಿವಾಸಿ ಎನ್.ಎಂ.ಅಬ್ದುಲ್ ಅಜೀಜ್ (30) ಬಂಧಿತ ಆರೋಪಿ. 2012ರ ಜನವರಿ 31ರಂದು ಕಡಬ ಠಾಣಾ ವ್ಯಾಪ್ತಿಯ ಪುತ್ತೂರು, ಕೊಂಬಾರು ಗ್ರಾಮದ ಅಮೈತಡ್ಕ ಎಂಬಲ್ಲಿ ಸಾರ್ವಜನಿಕ ರಸ್ತೆಯ ಸಮೀಪ ಮೋರಿಯ ಅಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ

ತಲೆಮರೆಸಿಕೊಂಡಿದ್ದ ಅಪರಾಧಿ ಆಂಧ್ರ ಪ್ರದೇಶದಲ್ಲಿ ಪತ್ತೆ Read More »

ಶ್ವೇತ ಭವನದ ಭೋಜನ ಕೂಟದಲ್ಲಿ ಗುಂಡಿನ ದಾಳಿ : ಟ್ರಂಪ್‌ ದಂಪತಿಯ ರಕ್ಷಣೆ

ಮಾಧ್ಯಮದವರಿಗಾಗಿ ಆಯೋಜಿಸಿದ್ದ ಭೋಜನಕೂಟದಲ್ಲಿ ಕೇಳಿಸಿದ ಗುಂಡಿನ ಶಬ್ದ ವಾಷಿಂಗ್ಟನ್ : ವಾಷಿಂಗ್ಟನ್‌ನಲ್ಲಿ ಶನಿವಾರ ರಾತ್ರಿ ನಡೆದ ಶ್ವೇತ ಭವನದ ವಾರ್ಷಿಕ ಭೋಜನಕೂಟದಲ್ಲಿ ಗಂಭೀರ ಸ್ವರೂಪದ ಭದ್ರತಾ ವೈಫಲ್ಯ ನಡೆದಿರುವುದು ವರದಿಯಾಗಿದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭಾಷಣಕ್ಕೂ ಮುನ್ನ ಗುಂಡಿನ ಶಬ್ದ ಕೇಳಿಬಂದು ಸಭಾಂಗಣದಲ್ಲಿ ಅವ್ಯವಸ್ಥೆ ಉಂಟಾಯಿತು. ನೂರಾರು ಪತ್ರಕರ್ತರು, ಹಾಲಿವುಡ್ ಸೆಲೆಬ್ರಿಟಿಗಳು ಮತ್ತು ಹಿರಿಯ ರಾಜತಾಂತ್ರಿಕರಿಂದ ತುಂಬಿದ್ದ ಸಭಾಂಗಣದಲ್ಲಿ ಐದರಿಂದ ಎಂಟು ಬಾರಿ ಗುಂಡು ಹಾರಿಸಿದ ಶಬ್ದ ಕೇಳಿಬಂದಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಸೀಕ್ರೆಟ್ ಸರ್ವಿಸ್ ಸಿಬ್ಬಂದಿ,

ಶ್ವೇತ ಭವನದ ಭೋಜನ ಕೂಟದಲ್ಲಿ ಗುಂಡಿನ ದಾಳಿ : ಟ್ರಂಪ್‌ ದಂಪತಿಯ ರಕ್ಷಣೆ Read More »

ಮದುವೆ ಮಂಟಪದಿಂದ 1 ಕೋ.ರೂ. ಆಭರಣ ಕಳವು

ಬೆಂಗಳೂರು : ಮದುವೆ ಮನೆಯಲ್ಲಿ ಕೈಚಳಕ ತೋರಿರುವ ಕಳ್ಳರು ಬರೋಬ್ಬರಿ 1 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ನಡೆಸಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಅಮೆರಿಕದಲ್ಲಿ ವಾಸವಿರುವ 52 ವರ್ಷದ ವೈದ್ಯೆ ಡಾ.ಸಿರುವೆಲ್ಲ ಶ್ರೀದೇವಿ ಎಂಬವರಿಗೆ ಸೇರಿದ ಚಿನ್ನಾಭರಣವನ್ನು ಮದುವೆ ಮಂಟಪದಲ್ಲಿ ಕದ್ದಿರುವ ಪ್ರಕರಣ ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಘಟನೆಯಿಂದ ಮದುವೆ ಸಂಭ್ರಮದಲ್ಲಿದ್ದ ಕುಟುಂಬಸ್ಥರಿಗೆ ದೊಡ್ಡ ಆಘಾತವಾಗಿದೆ. ಘಟನೆ ಸಂಬಂಧ ಡಾ.ಸಿರುವೆಲ್ಲ ಶ್ರೀದೇವಿ ಗುರುವಾರ ಮಧ್ಯಾಹ್ನ ದೂರು

ಮದುವೆ ಮಂಟಪದಿಂದ 1 ಕೋ.ರೂ. ಆಭರಣ ಕಳವು Read More »

ಮನೆಯಿಂದ ನಗ – ನಗದು ಲೂಟಿ: ಮನೆ ಕೆಲಸಕ್ಕಿದ್ದ ಮಹಿಳೆಯ ಮೇಲೆ ಸಂಶಯ

ಪುತ್ತೂರು: ಎಪಿಎಂಸಿ ರಸ್ತೆಯಲ್ಲಿನ ಮನೆಯೊಂದರಿಂದ ‌ಸುಮಾರು 3.10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದು ಕಾಣೆಯಾಗಿದ್ದು, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೆಗೆ ಕೆಲಸಕ್ಕೆ ಬರುತ್ತಿದ್ದ ಮಹಿಳೆಯ ಮೇಲೆ ಕಳ್ಳತನದ ಸಂದೇಹ ಬಂದಿದೆ. ಎಪಿಎಂಸಿ ರಸ್ತೆಯ ಮಹಾಲಿಂಗೇಶ್ವರ ನಿಲಯದ ಕೆ. ಎಸ್. ಮಹಾದೇವಸ್ವಾಮಿ ಅವರು ಮನೆ ಕೆಲಸಕ್ಕೆ ಮೈಸೂರಿನ ಮಹಿಳೆಯನ್ನು ಕಳೆದ ಜನವರಿ ತಿಂಗಳಿನಲ್ಲಿ ಕರೆದುಕೊಂಡು ಬಂದಿದ್ದರು. ಜ. 2 – 25 ರ ವರೆಗೆ ಮನೆಗೆಲಸ ಮಾಡಿದ್ದ ಆಕೆ ಬಳಿಕ ಕೆಲಸ

ಮನೆಯಿಂದ ನಗ – ನಗದು ಲೂಟಿ: ಮನೆ ಕೆಲಸಕ್ಕಿದ್ದ ಮಹಿಳೆಯ ಮೇಲೆ ಸಂಶಯ Read More »

ಮಾಜಿ ಪತ್ನಿಯ ಸಂಬಂಧಿಕರ ‌ಮೇಲೆ ಹಲ್ಲೆಗೆ ಯತ್ನ: ಆರೋಪಿ ಅಂದರ್

ಮಂಗಳೂರು: ಕುಟುಂಬ ಕಲಹದ ಹಿನ್ನೆಲೆ ಪತ್ನಿಯ ಸಂಬಂಧಿಕರ ಮೇಲೆ ಕತ್ತಿಯಿಂದ ಹಲ್ಲೆ ನಡೆಸಲು ಯತ್ನಿಸಿದ ವಾಮಂಜೂರಿನ ನವೀನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನವೀನ್ ಪತ್ನಿ ವಿಚ್ಛೇದನ ಪಡೆದು ಕೆಲವು ತಿಂಗಳುಗಳಿಂದ ಜೋಕಟ್ಟೆಯಲ್ಲಿ ಬೇರೆ ವಾಸವಿದ್ದರು. ಇದೇ ಸಿಟ್ಟಿನಲ್ಲಿ ನವೀನ್ ಕತ್ತಿ ಹಿಡಿದು ಜೋಕಟ್ಟೆಗೆ ರಾತ್ರಿ ಬೈಕ್‌ನಲ್ಲಿ ಆಗಮಿಸಿದ್ದಾನೆ. ನವೀನ್ ಕಳವರದ ದೇವಿಪ್ರಸಾದ್ ಎಂಬವರ ಮೇಲೆ ಹಲ್ಲೆ ನಡೆಸುವ ಹಿನ್ನೆಲೆ ಆಯುಧದ ಜೊತೆ ಬಂದಿದ್ದಾನೆ. ದೇವಿಪ್ರಸಾದ್ ಮತ್ತು ಪೋಷಕರ ಮೇಲೆ ಹಲ್ಲೆಗೆ ಪ್ರಯತ್ನ ಮಾಡಿದ್ದಾನೆ. ತಕ್ಷಣವೇ ದೇವಿಪ್ರಸಾದ್

ಮಾಜಿ ಪತ್ನಿಯ ಸಂಬಂಧಿಕರ ‌ಮೇಲೆ ಹಲ್ಲೆಗೆ ಯತ್ನ: ಆರೋಪಿ ಅಂದರ್ Read More »

ಜನಿವಾರ ತೆಗೆಸಿದ ಪ್ರಕರಣ : ಕಾಲೇಜಿಗೆ 25 ಲ.ರೂ. ದಂಡ ಹಾಕಲು ಒತ್ತಾಯ

ಸಿಇಟಿ ಪರೀಕ್ಷೆ ವೇಳೆ ವಿದಾರ್ಥಿಗಳ ಜನಿವಾರ ತೆಗೆಸಿದ ಕಾಲೇಜು ಸಿಬ್ಬಂದಿ ಬೆಂಗಳೂರು: ಬೆಂಗಳೂರಿನ ಕಾಲೇಜೊಂದರಲ್ಲಿ ಸಿಇಟಿ ಪರೀಕ್ಷೆ ವೇಳೆ ಆನಂದ್ ಸುಧೀರ್ ರಾವ್ ಸೇರಿದಂತೆ ಐದಕ್ಕೂ ಹೆಚ್ಚು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆಗೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಆಕ್ರೋಶ ವ್ಯಕ್ತಪಿಸಿದ್ದು, ಮುಖ್ಯಮಂತ್ರಿಗೆ ಈ ಕುರಿತು ಪತ್ರ ಬರೆದು ಜನಿವಾರ ತೆಗೆಸಿದ ಕಾಲೇಜಿನ ಪರವಾನಗಿ ರದ್ದುಪಡಿಸುವಂತೆ ಆಗ್ರಹಿಸಿದೆ. ಜೊತೆಗೆ ಸಂಬಂಧಿಸಿದ ಸಂಸ್ಥೆಗೆ ಕನಿಷ್ಠ 25 ಲಕ್ಷ ರೂ. ದಂಡ ವಿಧಿಸಬೇಕೆಂದು ಒತ್ತಾಯಿಸಿದೆ. ಸಿಇಟಿ ಪರೀಕ್ಷಾರ್ಥಿಗಳ ಜನಿವಾರ

ಜನಿವಾರ ತೆಗೆಸಿದ ಪ್ರಕರಣ : ಕಾಲೇಜಿಗೆ 25 ಲ.ರೂ. ದಂಡ ಹಾಕಲು ಒತ್ತಾಯ Read More »

ದೈವದ ಭಂಡಾರ ಹೋಗುತ್ತಿದ್ದಾಗ ಮುರಿದು ಬಿದ್ದ ಕಾಲು ಸಂಕ: ಹಲವರಿಗೆ ಗಾಯ

ಮೂಡಬಿದ್ರೆ: ದೈವದ ಭಂಡಾರ ಆಗಮನದ ವೇಳೆ ಕಾಲು ಸಂಕ ಮುರಿದು ಬಿದ್ದ ಪರಿಣಾಮ ಅವಘಡ ಸಂಭವಿಸಿದ ಘಟನೆ ಪುಚ್ಚೆಮೊಗರು ಗ್ರಾಮದ ಬಾವದಬೈಲಿನಲ್ಲಿ ‌ನಡೆದಿದೆ. ಈ ದುರಂತದಲ್ಲಿ ಎಂಟು ಮಂದಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸಾ ಹಿನ್ನೆಲೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತಾಕೋಡೆ ಬರ್ಕೆ ಧರ್ಮ ನೇಮದ ಹಿನ್ನೆಲೆ ಪಲ್ಲಕ್ಕಿಯಲ್ಲಿ ಹೊತ್ತು ದೈವದ ಭಂಡಾರವನ್ನು ಮೆರವಣಿಗೆಯ ಮೂಲಕ ಕೊಂಡೊಯ್ಯಲಾಗುತ್ತಿತ್ತು. ಈ ವೇಳೆ ಕಾಲು ಸಂಕ ಮುರಿದು ಬಿದ್ದಿದ್ದು, ಪಲ್ಲಕ್ಕಿ ಸಮೇತ ಭಂಡಾರ ತರುತ್ತಿದ್ದ ಭಕ್ತರು ಮುರಿದ ಸಂಕದ ಕೆಳಕ್ಕೆ ಬಿದ್ದಿದ್ದಾರೆ.

ದೈವದ ಭಂಡಾರ ಹೋಗುತ್ತಿದ್ದಾಗ ಮುರಿದು ಬಿದ್ದ ಕಾಲು ಸಂಕ: ಹಲವರಿಗೆ ಗಾಯ Read More »

ರಸ್ತೆ ಮಧ್ಯೆ ನಿಲ್ಲಿಸಿದ್ದ ಆಟೋ ಸೈಡ್ ಹಾಕುವಂತೆ ಹೇಳಿದ್ದಕ್ಕೆ ‌ಸಹೋದರರ ಮೇಲೆ ಹಲ್ಲೆ: ದೂರು ದಾಖಲು

ಕಲಬುರ್ಗಿ: ರಸ್ತೆ ನಡುವೆ ನಿಂತಿದ್ದ ಅಟೋ‌ವನ್ನು ಪಕ್ಕಕ್ಕೆ ನಿಲ್ಲಿಸುವಂತೆ ಮನವಿ ಮಾಡಿದ ವಿಷಯದಲ್ಲಿ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ‌ನಡೆದ ಘಟನೆ ಭೀಮಳ್ಳಿಯಲ್ಲಿ ನಡೆದಿದೆ. ಚಿತ್ತಾಪುರದ ನಾಲವಾರ ‌ನಿವಾಸಿಗಳಾದ ತೋಟೇಂದ್ರ ಮತ್ತು ಸುನಿಲ್ ಎಂಬಿಬ್ಬರು ಸಹೋದರರು ತಮ್ಮ ಸಹೋದರಿಯ ಮನೆಯ ಕಾರ್ಯಕ್ರಮಕ್ಕೆ ತೆರಳಿದ್ದರು. ಕಾರ್ಯಕ್ರಮ ಮುಗಿಸಿ ಸಹೋದರಿಯನ್ನು ‌ಮನೆಗೆ ಬಿಡುವ ಸಲುವಾಗಿ ಕಾರಿನಲ್ಲಿ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ರಸ್ತೆಯ ಮಧ್ಯೆ ಆಟೋ ಒಂದು ನಿಲ್ಲಿಸಲಾಗಿದ್ದು, ಅದನ್ನು ಪಕ್ಕಕ್ಕೆ ಹಾಕುವಂತೆ ಸಹೋದರರು ಮನವಿ ಮಾಡಿದ್ದಾರೆ. ಆದರೆ

ರಸ್ತೆ ಮಧ್ಯೆ ನಿಲ್ಲಿಸಿದ್ದ ಆಟೋ ಸೈಡ್ ಹಾಕುವಂತೆ ಹೇಳಿದ್ದಕ್ಕೆ ‌ಸಹೋದರರ ಮೇಲೆ ಹಲ್ಲೆ: ದೂರು ದಾಖಲು Read More »

ಕಲ್ಲು ತೂರಾಟ ಮಾಡಿದವರನ್ನು ಬಿಡುಗಡೆ ಮಾಡಲು ಖಾದರ್‌ ಪತ್ರ : ಹಿಂದೂ ಮುಖಂಡರ ಆಕ್ರೋಶ

ಆಳಂದದಲ್ಲಿ ಹಿಂದೂ ಮುಖಂಡರು, ಡಿಸಿ, ಎಸ್ಪಿ ಮೇಲೆ ಕಲ್ಲು ತೂರಿದ ಪ್ರಕರಣ ಬೆಂಗಳೂರು: ಕಲಬುರಗಿಜಿಲ್ಲೆಯ ಆಳಂದದ ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣದಲ್ಲಿ ಬಂಧಿತರಾಗಿರುವ ಮುಸ್ಲಿಂ ಯುವಕರನ್ನು ಬಿಡುಗಡೆ ಮಾಡುವಂತೆ ಸ್ಪೀಕರ್‌ ಯು.ಟಿ. ಖಾದರ್ ಗೃಹ ಸಚಿವ ಜಿ.ಪರಮೇಶ್ವರ್​ಗೆ ಬರೆದಿರುವ ಪತ್ರ ತೀವ್ರ ವಿವಾದಕ್ಕೆ ಕಾರಣವಾಗಿದೆ. ಸ್ಪೀಕರ್ ಅವರ ಈ ನಡೆಯನ್ನು ಹಿಂದೂ ಸಂಘಟನೆಗಳು, ಸರ್ಕಾರದ ವಿರುದ್ಧ ಹೋರಾಟದ ಎಚ್ಚರಿಕೆ ನೀಡಿವೆ. ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿರುವ ಶ್ರೀ ರಾಘವ ಚೈತನ್ಯ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು

ಕಲ್ಲು ತೂರಾಟ ಮಾಡಿದವರನ್ನು ಬಿಡುಗಡೆ ಮಾಡಲು ಖಾದರ್‌ ಪತ್ರ : ಹಿಂದೂ ಮುಖಂಡರ ಆಕ್ರೋಶ Read More »

error: Content is protected !!
Scroll to Top