ಅಪರಾಧ

ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂದ ಪುತ್ರ

ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಗನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಲೆ ಮಾಡಿರುವ ಅಮಾನವೀಯ ಘಟನೆ ಬೆಂಗಳೂರಿನ ಆರ್‌ಆರ್ ನಗರ ಬೆಮಲ್ ಲೇಔಟ್‌ನಲ್ಲಿ ನಡೆದಿದೆ. ಪುತ್ರ ವೆಂಕಟೇಶ್ ಎನ್ನುವಾತ ತನ್ನ ಹೆತ್ತ ತಾಯಿ ಸಾವಿತ್ರಮ್ಮ(72) ಎಂಬವರನ್ನು ಮಹಡಿ ಮೇಲಿಂದ ತಳ್ಳಿ ಕೊಂದಿದ್ದಾನೆ. ಪಾರ್ಶ್ವವಾಯು ಪೀಡಿತರಾಗಿದ್ದ ಸಾವಿತ್ರಮ್ಮ ಕಳೆದ ಐದಾರು ವರ್ಷದಿಂದ ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇದರಿಂದ ಬೇಸತ್ತು ತಾಯಿ ಸಾವಿತ್ರಮ್ಮಳನ್ನ 3ನೇ ಮಹಡಿಯಿಂದ ತಳ್ಳಿದ್ದಾನೆ. ಸುಮಾರು ವರ್ಷಗಳಿಂದ ಸಾವಿತ್ರಮ್ಮ ಅರೆ ಪ್ರಜ್ಞಾವಸ್ಥೆಯಲ್ಲಿದ್ದರು. ತಾಯಿ ಅವಸ್ಥೆಯಿಂದ ನೊಂದು […]

ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂದ ಪುತ್ರ Read More »

ಮಹಿಳೆಗೆ ಅಗೌರವ, ಜೀವ ಬೆದರಿಕೆ: ತಿಮರೋಡಿ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ದೂರವಾಣಿ ಮೂಲಕ ಮಹಿಳೆಗೆ ಅವಾಚ್ಯವಾಗಿ ನಿಂದಿಸಿ, ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಕ್ಷಗಾನ ಕಲಾವಿದ ದಿನೇಶ್ ಕೊಡಪದವು ಅವರ ತಾಯಿ ಬಂಟ್ವಾಳದ ಲೀಲಾವತಿ (71) ಅವರು ದೂರು ನೀಡಿದ್ದಾರೆ. ತಿಮರೋಡಿ ಫೋನ್ ಮೂಲಕ ಅತ್ಯಂತ ಕೀಳು ಮಟ್ಟದಲ್ಲಿ ಮಾತನಾಡಿ ಮಹಿಳೆಯ ತೇಜೋವಧೆ ಮಾಡಿದ್ದಾರೆ. ಮಹಿಳೆಯ ಗೌರವಕ್ಕೆ ಧಕ್ಕೆ ತರುವ ರೀತಿ ಮಾತನಾಡಿದ್ದು ಮಾತ್ರವಲ್ಲದೆ, ಜೀವ ಬೆದರಿಕೆ ಹಾಕಿದ್ದಾರೆ. ಈ

ಮಹಿಳೆಗೆ ಅಗೌರವ, ಜೀವ ಬೆದರಿಕೆ: ತಿಮರೋಡಿ ವಿರುದ್ಧ ಪ್ರಕರಣ ದಾಖಲು Read More »

ಮಗುವಿನ ಚೈನ್ ಕಳ್ಳತನ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವ್ಯಕ್ತಿಯಲ್ಲ ಕಳ್ಳ

ವಿಟ್ಲ: ಕೊಡಪದವು ಪ್ರದೇಶದಲ್ಲಿ ಎ. 12 ರಂದು 7 ವರ್ಷದ ಮಗುವಿನ ಕತ್ತಿನಿಂದ ಅಪರಿಚಿತ ಬೈಕ್ ಸವಾರನೊಬ್ಬ 7 ಗ್ರಾಂ ತೂಕದ ಬಂಗಾರದ ಸರವನ್ನು ಎಗರಿಸಿದ್ದು, ಈ ಬಗ್ಗೆ ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣದ ಆರೋಪಿ ಎಂದು ಕೆ.ಟಿ.ಎಂ. ಬೈಕ್ ಸವಾರನೊಬ್ಬನನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಲಾಗುತ್ತಿದ್ದು, ಆತನನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಆ ವ್ಯಕ್ತಿಗೆ ಮತ್ತು ಪ್ರಕರಣಕ್ಕೆ ಯಾವುದೇ ರೀತಿಯ ಸಂಬಂಧ ಇಲ್ಲ ಎನ್ನುವುದು ತಿಳಿದು ಬಂದಿದೆ. ಆದ್ದರಿಂದ ಆ

ಮಗುವಿನ ಚೈನ್ ಕಳ್ಳತನ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವ್ಯಕ್ತಿಯಲ್ಲ ಕಳ್ಳ Read More »

ಗ್ರಾ. ಪಂ. ಮಾಜಿ ಸದಸ್ಯನ ಭೀಕರ ಕೊಲೆ

ವಿಜಯಪುರ: ರಿಯಲ್ ಎಸ್ಟೇಟ್ ಉದ್ಯಮಿ, ಗ್ರಾ. ಪಂ. ಮಾಜಿ ಸದಸ್ಯನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ಮೃತನನ್ನು ಗೊಡಂದಡ್ಡಿ ನಿವಾಸಿ ರಾಜು ಬಾಪು ಖರೆ ಎಂದು ಗುರುತಿಸಲಾಗಿದೆ. ರಾಜು ಅವರು ಹೋಗುತ್ತಿದ್ದ ಜೀಪಿಗೆ ಟಿಪ್ಪರ್ ಗುದ್ದಿಸಿ, ಬಳಿಕ ಬೇಕಾಬಿಟ್ಟಿ ಗುಂಡು ಹಾರಿಸಿದ ದುಷ್ಕರ್ಮಿಗಳು ಅವರನ್ನು ಹತ್ಯೆ ಮಾಡಿದ್ದಾರೆ. ಥಾರ್ ಜೀಪ್‌ನ ಡೋರ್ ಓಪನ್ ಆಗದೇ ಇದ್ದ ಸಮಯದಲ್ಲಿ ಅದರ ಮೇಲೆ ಕಲ್ಲನ್ನೂ ಎತ್ತಿ ಹಾಕಿ ಮತ್ತಷ್ಟು ಕ್ರೌರ್ಯ ಮೆರೆದಿದ್ದಾರೆ. ಈ ಕೊಲೆಗೆ ಕಾರಣ ಏನು ಎಂಬುದು

ಗ್ರಾ. ಪಂ. ಮಾಜಿ ಸದಸ್ಯನ ಭೀಕರ ಕೊಲೆ Read More »

ಪುತ್ರಿಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ತಾಯಿ

ಬೆಂಗಳೂರು: ತನ್ನ ಹದಿನೇಳು ವರ್ಷದ ಪುತ್ರಿಯನ್ನು ಹತ್ಯೆ ಮಾಡಿ ಬಳಿಕ ತಾಯಿಯೂ ಆತ್ಮಹತ್ಯೆಗೆ ಶರಣಾದ ಘಟನೆ ವೈಟ್‌ಫೀಲ್ಡ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಗಳನ್ನು ಕಾರುಣ್ಯ ಎಂದು ಗುರುತಿಸಲಾಗಿದೆ. ಮಗಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಾಯಿಯ ಹೆಸರು ಸುವರ್ಣ. ಈ ಕೊಲೆ ಮತ್ತು ಆತ್ಮಹತ್ಯೆಯ ಹಿಂದಿನ ಕಾರಣ ತಿಳಿದು ಬಂದಿಲ್ಲ. ವೈಟ್ ಫೀಲ್ಡ್ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.

ಪುತ್ರಿಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ತಾಯಿ Read More »

ಉಪ್ಪಿನಂಗಡಿ: ಕಂತು ಮೊತ್ತ ಪಾವತಿಸದ 20 ಅಂಗಡಿಗಳಿಗೆ ಬೀಗ

ಏಲಂನಲ್ಲಿ ಅಂಗಡಿ ಪಡೆದು ಹಣ ಪಾವತಿಸದ ಅಂಗಡಿಗಳ ವಿರುದ್ಧ ಕಾರ್ಯಾಚರಣೆ ಉಪ್ಪಿನಂಗಡಿ: ಇಲ್ಲಿನ ಹೊಸ ಬಸ್ ನಿಲ್ದಾಣದ ಬಳಿ ಇರುವ ಪಂಚಾಯತ್ ಸ್ವಾಮ್ಯದ ವಾಣಿಜ್ಯ ಸಂಕೀರ್ಣಗಳ ಏಲಂ ಬಿಡ್‍ನಲ್ಲಿ ಪಡೆದ ಅಂಗಡಿ ಕೋಣೆಗಳ ಕಂತು ಬಾಕಿ ಇರಿಸಿದ್ದ 20 ಅಂಗಡಿಗಳಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿಲ್ಫ್ರೆಡ್ ಲಾರೆನ್ಸ್ ರೋಡ್ರಿಗ್ರಸ್ ಮಂಗಳವಾರ ಬೀಗ ಜಡಿದಿದ್ದಾರೆ. ಏಲಂ ಪ್ರಕ್ರಿಯೆಯಲ್ಲಿ ಪಡೆದುಕೊಂಡ ಅಂಗಡಿ ಕೊಠಡಿಗಳ ಬಿಡ್ ಮೊತ್ತವನ್ನು ಕಂತುಗಳಲ್ಲಿ ಪಾವತಿಸಲು ಅವಕಾಶ ನೀಡಿದ್ದು, ಇದರಂತೆ ಹಲವರು ಉಳಿಕೆ ಮೊತ್ತದ ಕಂತುಗಳನ್ನು ಪಾವತಿಸದೆ

ಉಪ್ಪಿನಂಗಡಿ: ಕಂತು ಮೊತ್ತ ಪಾವತಿಸದ 20 ಅಂಗಡಿಗಳಿಗೆ ಬೀಗ Read More »

ಇನ್ನೊಂದು ಲವ್‌ ಜಿಹಾದ್‌ ಪ್ರಕರಣ ಬೆಳಕಿಗೆ : ನೂರಾರು ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದಾತ ಸೆರೆ

ಅಪ್ರಾಪ್ತ ವಯಸ್ಕರನ್ನು ಬುಟ್ಟಿಗೆ ಹಾಕಿಕೊಂಡು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಆರೋಪಿ ಮುಂಬೈ: ಮಹಾರಾಷ್ಟ್ರದಲ್ಲಿ ಇನ್ನೊಂದು ದೊಡ್ಡ ಲವ್‌ ಜಿಹಾದ್‌ ಪ್ರಕರಣ ಬಳಕಿಗೆ ಬಂದಿದೆ. ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ 180 ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ 350ಕ್ಕೂ ಹೆಚ್ಚು ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿರುವ ಆರೋಪಿಯನ್ನು ಬಂಧಿಸಲಾಗಿದೆ. ಬಿಜೆಪಿ ಸಂಸದರೊಬ್ಬರ ದೂರಿನ ಮೇರೆಗೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಅಮರಾವತಿಯ ಪರತ್ವಾಡ ನಗರದ ನಿವಾಸಿ ಮೊಹಮ್ಮದ್ ಅಯಾಜ್ ಅಲಿಯಾಸ್ ತನ್ವೀರ್ ಹುಡುಗಿಯರನ್ನು ಪ್ರೀತಿಯ ಬಲೆಗೆ ಬೀಳಿಸಿ ಮುಂಬೈ

ಇನ್ನೊಂದು ಲವ್‌ ಜಿಹಾದ್‌ ಪ್ರಕರಣ ಬೆಳಕಿಗೆ : ನೂರಾರು ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದಾತ ಸೆರೆ Read More »

ಬಾವಿಯಲ್ಲಿ ಬಾಲಕಿಯರಿಬ್ಬರ ಶವ ಪತ್ತೆ

ಕಲಬುರ್ಗಿ: ಜಿಲ್ಲೆಯ ಯಡ್ರಾಮಿಯ ಇಜೇರಿ ಗ್ರಾಮದಲ್ಲಿ ಇಬ್ಬರು ಬಾಲಕಿಯರ ಶವಗಳು ಬಾವಿಯಲ್ಲಿ ಪತ್ತೆಯಾಗಿದ್ದು, ಇದು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿ ಮಾಡಿದೆ. ನಂದಿನಿ(16) ಮತ್ತು ಸಂಜನಾ(17) ಮೃತ ಬಾಲಕಿಯರು. ಈ ಇಬ್ಬರೂ ಚಿಕ್ಕಪ್ಪ – ದೊಡ್ಡಪ್ಪನ ಮಕ್ಕಳಾಗಿದ್ದಾರೆ. ಇಬ್ಬರ ಕೈಗಳನ್ನೂ ಕಟ್ಟಿದ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿರುವುದಾಗಿದೆ. ಈ ಪ್ರಕರಣ ನಿಗೂಢತೆಯಿಂದ ಕೂಡಿದ್ದು ಸಾವಿನ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಜೇವರ್ಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದು ಆತ್ಮಹತ್ಯೆಯೋ ಅಥವಾ ಇನ್ನೇನಾದರೂ ಅನುಮಾನಾಸ್ಪದ

ಬಾವಿಯಲ್ಲಿ ಬಾಲಕಿಯರಿಬ್ಬರ ಶವ ಪತ್ತೆ Read More »

ಅಕ್ರಮ ಸ್ಪೋಟಕಗಳ ವಶ: ಆರೋಪಿ ಪೊಲೀಸ್ ವಶಕ್ಕೆ

ವಿಟ್ಲ: ಯಾವುದೇ ಸುರಕ್ಷತಾ ಕ್ರಮಗಳನ್ನು ಅನುಸರಿಸದೆ ಸುಡುಮದ್ದು ತಯಾರಿಸಲು ಅಕ್ರಮವಾಗಿ ಸ್ಪೋಟಕಗಳನ್ನು ಸಂಗ್ರಹಿಸಿ ಇಟ್ಟಿದ್ದ ವ್ಯಕ್ತಿಯೊಬ್ಬನನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಕಂಬಳಬೆಟ್ಟು ಸಮೀಪದ ಅಮೈ ನಿವಾಸಿ ಜಗದೀಶ ಪೂಜಾರಿ ಎಂದು ಗುರುತಿಸಲಾಗಿದೆ. ಜಗದೀಶ್ ತಮ್ಮ ಮನೆಯಲ್ಲಿ ಸ್ಪೋಟಕಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಪೊಲೀಸ್ ತಪಾಸಣೆಯಲ್ಲಿ ಸುಮಾರು 1.9 KG ಗಳಷ್ಟು ಅನುಮಾನಾಸ್ಪದ ‌ಸ್ಪೋಟಕಗಳು ಪತ್ತೆಯಾಗಿವೆ. ಜನವಸತಿ ಪ್ರದೇಶದಲ್ಲಿ ಯಾವುದೇ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸದೆ

ಅಕ್ರಮ ಸ್ಪೋಟಕಗಳ ವಶ: ಆರೋಪಿ ಪೊಲೀಸ್ ವಶಕ್ಕೆ Read More »

ಸಕ್ಕರೆ ಸಚಿವ ಶಿವಾನಂದ ಪಾಟೀಲ್ ವಿರುದ್ಧ ಲೋಕಾಯುಕ್ತಕ್ಕೆ ದೂರು

ಎಪಿಎಂಸಿ ಮಾರುಕಟ್ಟೆಯಲ್ಲಿ ಅನಧಿಕೃತ ಮಳಿಗೆಗಳಿಗೆ ಲೈಸೆನ್ಸ್‌ ನೀಡಿದ ಅರೋಪ ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದ ಮತ್ತೊಬ್ಬರು ಪ್ರಭಾವಿ ಸಚಿವರ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿಬಂದಿದೆ. ಎಪಿಎಂಸಿ ಮಳಿಗೆ ಹಸ್ತಾಂತರ ವಿಚಾರದಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕೃಷಿ ಉತ್ಪನ್ನ ಮಾರುಕಟ್ಟೆ ಮತ್ತು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಹಾಗೂ ಎಪಿಎಂಸಿ ಕಾರ್ಯದರ್ಶಿ ದೊರೆಸ್ವಾಮಿ ಅವರ ವಿರುದ್ಧ ಎಪಿಎಂಸಿ ವರ್ತಕರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಸಚಿವರ ವಿರುದ್ಧ ಒಂದಿಲ್ಲೊಂದು ಭ್ರಷ್ಟಾಚಾರ ಆರೋಪ ಆಗಾಗ ಕೇಳಿಬರುತ್ತಲೇ ಇದೆ.

ಸಕ್ಕರೆ ಸಚಿವ ಶಿವಾನಂದ ಪಾಟೀಲ್ ವಿರುದ್ಧ ಲೋಕಾಯುಕ್ತಕ್ಕೆ ದೂರು Read More »

error: Content is protected !!
Scroll to Top