ಅಪರಾಧ

ರೈಲ್ವೇ ನಿಲ್ದಾಣದಲ್ಲಿ ದ್ವಿಚಕ್ರ ವಾಹನಗಳಿಂದ ಪೆಟ್ರೋಲ್ ಕಳ್ಳತನ : ಸಾರ್ವಜನಿಕರಿಂದ ಆರೋಪಿಗಳನ್ನು ಹಿಡಿಯಲು ಕಾರ್ಯಾಚರಣೆ | ಆರೋಪಿಗಳು ಪರಾರಿ

ಪುತ್ತೂರು: ಪುತ್ತೂರು ರೈಲ್ವೇ ನಿಲ್ದಾಣದ ಬಳಿ ನಿಲ್ಲಿಸಲಾಗಿದ್ದ ಬೈಕ್ ನಿಂದ ಪೆಟ್ರೋಲ್ ಕಳ್ಳತನ ಮಾಡುತ್ತಿದ್ದವರನ್ನು ಸಾರ್ವಜನಿಕರು ಬೆಟ್ಟಿದ ಘಟನೆ ಮಂಗಳವಾರ ನಡೆದಿದೆ. ರೈಲ್ವೇ ನಿಲ್ದಾಣದಲ್ಲಿ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನಗಳಿಂದ ಪೆಟ್ರೋಲ್ ಕದಿಯುತ್ತಿದ್ದ ಸಂದರ್ಭ ಸಾರ್ವಜನಿಕರು ಗಮನಿಸಿ ಆರೋಪಿಗಳನ್ನು ಹಿಡಿಯಲೆತ್ನಿಸಿದಾಗ ಆರೋಪಿಗಳು ಕೂದಲೆಳೆ ಅಂತರದಲ್ಲಿ ಪರಾರಿಯಾಗಿದ್ದಾರೆ. ಹಲವು  ಸಮಯಗಳಿಂದ ರೈಲ್ವೇ ನಿಲ್ದಾಣದಲ್ಲಿ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನಗಳಿಂದ ಪೆಟ್ರೋಲ್ ಕದಿಯುತ್ತಿದ್ದು, ಆರೋಪಿಗಳನ್ನು ರೆಡ್ ಹ್ಯಾಂಡ್ ಆಗಿ ಹಿಡಿಯಲು ಕಾದು ಕುಳಿತಿದ್ದರು. ಆದರೆ ಚಾಣಾಕ್ಷ ಕಳ್ಳರು ತಪ್ಪಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ರೈಲ್ವೇ ನಿಲ್ದಾಣದಲ್ಲಿ ದ್ವಿಚಕ್ರ ವಾಹನಗಳಿಂದ ಪೆಟ್ರೋಲ್ ಕಳ್ಳತನ : ಸಾರ್ವಜನಿಕರಿಂದ ಆರೋಪಿಗಳನ್ನು ಹಿಡಿಯಲು ಕಾರ್ಯಾಚರಣೆ | ಆರೋಪಿಗಳು ಪರಾರಿ Read More »

ಆದಾಯ ತೆರಿಗೆ ಇಲಾಖೆಯ ವೆಬ್​ಸೈಟ್ ಹ್ಯಾಕ್​ : ಓರ್ವ ಸಿಐಡಿ ವಶಕ್ಕೆ

ಬೆಂಗಳೂರು : ಕರ್ನಾಟಕದ ಅತಿದೊಡ್ಡ ಸೈಬರ್ ವಂಚಕನನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ದಿಲೀಪ್ ರಾಜೇಗೌಡ ಬಂಧಿತ ಆರೋಪಿ. ಇನ್ನು ಆರೋಪಿಯನ್ನು ಸೆರೆ ಹಿಡಿಯಲು ಸಿಐಡಿ ಎಸ್​ಪಿ ಎಂ.ಡಿ ಶರತ್ ನೇತೃತ್ವದಲ್ಲಿ ವಿಶೇಷ ತಂಡ ಕಾರ್ಯಾಚರಣೆ ನಡೆಸಿತ್ತು. ಆದಾಯ ತೆರಿಗೆ ಇಲಾಖೆಯ ವೆಬ್​ಸೈಟ್​ನಲ್ಲಿನ ಲೋಪವನ್ನು ತಿಳಿದುಕೊಂಡ ಆರೋಪಿ, ಆ ಲೋಪದ ಮೂಲಕ ತೆರಿಗೆ ಕಟ್ಟಿದ್ದವರಿಗೆ ಸಲ್ಲಬೇಕಿದ್ದ ರೀ ಫಂಡ್ಸ್​ ಹಣವನ್ನು​ ತನ್ನ ಖಾತೆಗೆ ಜಾಮಾ ಮಾಡಿಕೊಳ್ಳುತ್ತಿದ್ದನು. ಹೀಗೆ ಆದಾಯ ತೆರಿಗೆ ಇಲಾಖೆಗೆ ಬರೋಬ್ಬರಿ 1,41,84,360 ರೂ. ಹಣವನ್ನು ವಂಚಿಸಿರುವುದು

ಆದಾಯ ತೆರಿಗೆ ಇಲಾಖೆಯ ವೆಬ್​ಸೈಟ್ ಹ್ಯಾಕ್​ : ಓರ್ವ ಸಿಐಡಿ ವಶಕ್ಕೆ Read More »

ದೇಗುಲ ಪ್ರವೇಶಕ್ಕೆ ಮುನ್ನ ದಿ ಕೇರಳ ಸ್ಟೋರಿ ಬ್ಯಾನರ್ ದರ್ಶನ

ಮುಂದಿನ ಜನಾಂಗ ಮೂಕಾಂಬಿಕೆ ದರ್ಶನ ಪಡೆಯಬೇಕಾದರೆ ದಿ ಕೇರಳ ಸ್ಟೋರಿ ನೋಡಿ ಎಂಬ ಒಕ್ಕಣೆ ಕೊಲ್ಲೂರು : ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಆವರಣದಲ್ಲಿ ದಿ ಕೇರಳ ಸ್ಟೋರಿ ಸಿನೆಮಾ ನೋಡಿ ಎಂದು ಹೇಳುವ ಬ್ಯಾನರ್​ ಇರಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಇಂಗ್ಲಿಷ್​ ಮತ್ತು ಮಲಯಾಳಂ ಭಾಷೆಯಲ್ಲಿ ಬರೆದಿರುವ ಬ್ಯಾನರ್​ಗಳನ್ನು ಇರಿಸಲಾಗಿದ್ದು, ಕೊಲ್ಲೂರಿಗೆ ಬರುವ ಪ್ರವಾಸಿಗರ ಗಮನ ಸೆಳೆಯಲಾಗುತ್ತಿದೆ. ಸೋಶಿಯಲ್​ ಮೀಡಿಯಾದಲ್ಲೂ ಈ ಬ್ಯಾನರ್​ಗಳು ವೈರಲ್​ ಆಗಿದೆ. ಕೊಲ್ಲೂರಿಗೆ ಬರುವ ಕೇರಳದ ಭಕ್ತರ ಗಮನ ಸೆಳೆಯಲೆಂದೇ ಇಲ್ಲಿ ಈ ಬ್ಯಾನರ್‌

ದೇಗುಲ ಪ್ರವೇಶಕ್ಕೆ ಮುನ್ನ ದಿ ಕೇರಳ ಸ್ಟೋರಿ ಬ್ಯಾನರ್ ದರ್ಶನ Read More »

ಕೌಕ್ರಾಡಿ ನಿವಾಸಿ ನಾಪತ್ತೆ

ಪುತ್ತೂರು :ಕೌಕ್ರಾಡಿ ಗ್ರಾಮದ ಮಾಲೇಲೆ ಮನೆ ನಿವಾಸಿ ಶಶಿಕಾಂತ್ (38) ಕಾಣೆಯಾದ ಕುರಿತು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ. ಶಶಿಕಾಂತ್ ಅವರು ಶನಿವಾರ ಪಟ್ರಮೆಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದವರು ಬಳಿಕ ಫೋನ್ ಕರೆಗೆ ಸಿಗದೆ ನಾಪತ್ತೆಯಾಗಿದ್ದಾರೆ ಎಂದು ಪತ್ನಿ ದಿವ್ಯಾ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೌಕ್ರಾಡಿ ನಿವಾಸಿ ನಾಪತ್ತೆ Read More »

ಮಂಗಳೂರು ಎಕ್ಸ್‌ಪ್ರೆಸ್‌ ರೈಲಿನಲ್ಲಿ ಮಹಿಳೆ ಮೇಲೆ ಹಲ್ಲೆ ಮಾಡಿ ದರೋಡೆ

ಮುಂಬಯಿ : ಮಂಗಳೂರಿನಿಂದ ಮುಂಬಯಿಗೆ ಹೋಗುತ್ತಿದ್ದ ಮಂಗಳೂರು ಎಕ್ಸ್‌ಪ್ರೆಸ್‌ ರೈಲಿನಲ್ಲಿ ಕುಂದಾಪುರದಿಂದ ಮುಂಬಯಿಗೆ ತೆರಳುತ್ತಿದ್ದ ಮಹಿಳೆ ಮೇಲೆ ಹಲ್ಲೆ ಮಾಡಿ ನಗ-ನಗದು ದರೋಡೆ ಮಾಡಿರುವ ಆಘಾತಕಾರಿ ಘಟನೆ ಶುಕ್ರವಾರ ಸಂಭವಿಸಿದೆ. ಮಹಿಳಾ ಕಂಪಾರ್ಟ್‌ಮೆಂಟ್‌ನಲ್ಲಿ ಒಬ್ಬರೇ ಇದ್ದ ವೇಳೆ ಥಾಣೆ ಮತ್ತು ಕಾಂಜೂರ್‌ಮಾರ್ಗ ರೈಲು ನಿಲ್ದಾಣಗಳ ನಡುವೆ ಈ ಘಟನೆ ಸಂಭವಿಸಿದೆ. 32ರ ಹರೆಯದ ವಿರಾರ್‌ ನಿವಾಸಿ ಮಹಿಳೆ ಕುಂದಾಪುರದಲ್ಲಿ ಕಳೆದ ಏಪ್ರಿಲ್‌ನಲ್ಲಿ ಬೈಪಾಸ್‌ ಸರ್ಜರಿಯಾಗಿರುವ ತಾಯಿಯನ್ನು ನೋಡಿಕೊಳ್ಳಲು ಹೋಗಿ ಹಿಂದಿರುಗುತ್ತಿದ್ದರು. ರೈಲು ಥಾಣೆ ನಿಲ್ದಾಣ ತಲುಪಿದಾಗ ಮಹಿಳಾ

ಮಂಗಳೂರು ಎಕ್ಸ್‌ಪ್ರೆಸ್‌ ರೈಲಿನಲ್ಲಿ ಮಹಿಳೆ ಮೇಲೆ ಹಲ್ಲೆ ಮಾಡಿ ದರೋಡೆ Read More »

ಯುವತಿ ಜತೆ ಅಸಭ್ಯ ವರ್ತನೆ ಪ್ರಕರಣ: ಯುವತಿ ಮನೆಯವರಿಗೆ ಧೈರ್ಯ ತುಂಬಿದ ಆಶಾ ತಿಮ್ಮಪ್ಪ | ಆರೋಪಿಗಳ ಬಂಧನಕ್ಕೆ ಆಗ್ರಹ

ಪುತ್ತೂರು: ವಿಟ್ಲದಲ್ಲಿ ಹಿಂದೂ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ ಪ್ರಕರಣದ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಶಾ ತಿಮ್ಮಪ್ಪ ಅವರು ಪೊಲೀಸ್ ಠಾಣೆಗೆ ತೆರಳಿ ಆಗ್ರಹಿಸಿದ್ದಾರೆ. ಇದಕ್ಕೆ ಮೊದಲು ಯುವತಿ ಮನೆಗೆ ತೆರಳಿ ಯುವತಿ ಹಾಗೂ ಪೋಷಕರಿಗೆ ಧೈರ್ಯ ತುಂಬಿದ್ದಾರೆ. ಬಡತನದಲ್ಲಿರುವ ಕುಟುಂಬಕ್ಕೆ ತನ್ನ ಕೈಲಾದ ಸಹಾಯ ನೀಡುವುದಾಗಿ ಭರವಸೆ ನೀಡಿರುವ ಅವರು, ಆ ಕುಟುಂಬಕ್ಕೆ ಆತ್ಮಸ್ಥೈರ್ಯ ತುಂಬುವಂತೆ ಸ್ಥಳೀಯರಲ್ಲಿ ಮನವಿ ಮಾಡಿಕೊಂಡರು. ಬಳಿಕ ಪೊಲೀಸ್ ಠಾಣೆಗೆ ತೆರಳಿ ಪೊಲೀಸರ ಜೊತೆ ಮಾತುಕತೆ ನಡೆಸಿದರು. ಆರೋಪಿಗಳನ್ನು ತಕ್ಷಣ ಬಂಧಿಸಿ,

ಯುವತಿ ಜತೆ ಅಸಭ್ಯ ವರ್ತನೆ ಪ್ರಕರಣ: ಯುವತಿ ಮನೆಯವರಿಗೆ ಧೈರ್ಯ ತುಂಬಿದ ಆಶಾ ತಿಮ್ಮಪ್ಪ | ಆರೋಪಿಗಳ ಬಂಧನಕ್ಕೆ ಆಗ್ರಹ Read More »

ಸ್ನಾನಕ್ಕೆ ತೆರಳಿದ ಸಹೋದರಿಯರು ಬಳ್ಪ‌ ಹೊಳೆ ಪಾಲು | ಹಂಸಿತಾ, ಅವಂತಿಕಾ ಮೃತದೇಹ ಪತ್ತೆ

ಸುಳ್ಯ: ಬಳ್ಪ ಸಮೀಪದ ಕೇನ್ಯ ಕಣ್ಕಲ್ ಬಳಿಯ ಹೊಳೆಯಲ್ಲಿ ಮುಳುಗಿ ಸಹೋದರಿಯರಿಬ್ಬರು ನೀರು ಪಾಲಾದ ಘಟನೆ ಸೋಮವಾರ ನಡೆದಿದೆ. ಹಂಸಿತಾ ( 15 ) ಮತ್ತು ಅವಂತಿಕಾ ( 11 ) ಇಬ್ಬರ ಮೃತದೇಹವೂ ಪತ್ತೆಯಾಗಿದೆ. ಸೋಮವಾರ ಸಂಜೆ ದುರ್ಘಟನೆ ಸಂಭವಿಸಿದೆ. ಮೂಲತಃ ಕಣ್ಕಲ್ ನವರಾಗಿದ್ದು, ಬೆಂಗಳೂರಿನಲ್ಲಿ ಇಂಜಿನಿಯರ್ ಆಗಿರುವ ಸತೀಶ್ ಅಮ್ಮಣ್ಣಾಯ ಅವರ ಪುತ್ರಿಯರು ಇವರು. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಕಾರ್ಯಾಚರಣೆ ಆರಂಭಿಸಿದರು. ರಾತ್ರಿ ವೇಳೆಗೆ ಇಬ್ಬರ ಮೃತದೇಹವೂ ಪತ್ತೆಯಾಗಿದೆ. ಸ್ಥಳೀಯರು

ಸ್ನಾನಕ್ಕೆ ತೆರಳಿದ ಸಹೋದರಿಯರು ಬಳ್ಪ‌ ಹೊಳೆ ಪಾಲು | ಹಂಸಿತಾ, ಅವಂತಿಕಾ ಮೃತದೇಹ ಪತ್ತೆ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮತ್ತಿಬ್ಬರು ಆರೋಪಿಗಳ ವಿರುದ್ಧ ಬೆಂಗಳೂರಿನ ವಿಶೇಷ ಎನ್ಐಎ ನ್ಯಾಯಾಲಯದಲ್ಲಿ ಚಾರ್ಜ್ ಶೀಟ್

ಪುತ್ತೂರು: ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ದಳ ಎನ್ಐಎ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ ಪ್ರಮುಖ ಆರೋಪಿಗಳಾದ. ತುಫೈಲ್ ಎಂ.ಎಚ್. ಹಾಗೂ ಮೊಹಮ್ಮದ್ ಜಬೀರ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದ್ದು, ಒಟ್ಟು 21 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದಂತಾಗಿದೆ. ಪಿಎಫ್ಐಯ ಸಕ್ರೀಯ ಸದಸ್ಯನಾಗಿದ್ದ ತುಫೈಲ್ ಕೊಡಗು ಮೂಲದವನಾಗಿದ್ದು, ಮಾಸ್ಟರ್ ಟ್ರೈನರ್ ಆಗಿ ಗುರುತಿಸಿಕೊಂಡಿದ್ದ. ಮಿತ್ತೂರಿನಲ್ಲಿ ಫ್ರೀಡಂ ಕಮ್ಯುನಿಟಿ ಹಾಲ್ ನಲ್ಲಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮತ್ತಿಬ್ಬರು ಆರೋಪಿಗಳ ವಿರುದ್ಧ ಬೆಂಗಳೂರಿನ ವಿಶೇಷ ಎನ್ಐಎ ನ್ಯಾಯಾಲಯದಲ್ಲಿ ಚಾರ್ಜ್ ಶೀಟ್ Read More »

ಪುತ್ತೂರು ಮೂಲದ ಯುವತಿ ಬೆಂಗಳೂರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ

ಪುತ್ತೂರು: ಪುತ್ತೂರು ಮೂಲದ ಯುವತಿಯೋರ್ವಳು ಬೆಂಗಳೂರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಮಾಡಾವು ಸ್ನಾನತ್ತಾರು ಚಂದ್ರಶೇಖರ ರೈ ಹಾಗೂ ಸೋಮಾವತಿ ರೈ ದಂಪತಿ ಪುತ್ರಿ ಶ್ರುತಿ ಸಿ. ರೈ (22) ಆತ್ಮಹತ್ಯೆ ಮಾಡಿಕೊಂಡವರು. ಶ್ರುತಿ ಬೆಂಗಳೂರಿನಲ್ಲಿ ಎರಡು ವರ್ಷಗಳಿಂದ ಅನಿಮೇಷನ್ ಶಿಕ್ಷಣ ಪಡೆಯುತ್ತಿದ್ದು, ಶಿಕ್ಷಣ ಮುಗಿಸಿ ಕೆಲಸದ ಹುಡುಕಾಟದಲ್ಲಿದ್ದರು. ಅದಕ್ಕಾಗಿ ಅಲ್ಲಿಯೇ ವಾಸ್ತವ್ಯ ಹೂಡಿದ್ದರು. ತನ್ನ ಬಾಡಿಗೆ ರೂಂನಲ್ಲಿ ಕೆಲವು ದಿನಗಳ ಹಿಂದೆ ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು,

ಪುತ್ತೂರು ಮೂಲದ ಯುವತಿ ಬೆಂಗಳೂರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ Read More »

ದರ್ಬೆ ‘ಚೈತ್ರಾ ಇಲೆಕ್ಟ್ರಾನಿಕ್ಸ್ ಕಾರ್ ಆಕ್ಸಸರೀಸ್’ ಮಾಲಕ ಆತ್ಮಹತ್ಯೆ

ಪುತ್ತೂರು: ದರ್ಬೆ ಲಿಟ್ಲ್ ಫ್ಲವರ್ ಶಾಲಾ ಸಮೀಪದ ಚೈತ್ರಾ ಇಲೆಕ್ಟ್ರಾನಿಕ್ಸ್ ಕಾರ್ ಆಕ್ಸಸರೀಸ್ ಶಾಪ್ ಮಾಲಕ ರಮೇಶ್ (49 ವ.) ತಮ್ಮ ಶಾಪ್ ನಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಮೇಶ್ ಜೇಸಿಐ ಸದಸ್ಯರಾಗಿಯೂ ಗುರುತಿಸಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.

ದರ್ಬೆ ‘ಚೈತ್ರಾ ಇಲೆಕ್ಟ್ರಾನಿಕ್ಸ್ ಕಾರ್ ಆಕ್ಸಸರೀಸ್’ ಮಾಲಕ ಆತ್ಮಹತ್ಯೆ Read More »

error: Content is protected !!
Scroll to Top