ಅಪರಾಧ

ಅಕ್ರಮ ಕೂಟ ಸೇರಿ ಬಲವಂತವಾಗಿ ಅಂಗಡಿಗಳನ್ನು ಬಂದ್ ಮಾಡಿ ನಿಷೇಧಾಜ್ಞೆ ಉಲ್ಲಂಘನೆ |  30 ಮಂದಿ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ನಿಷೇದಾಜ್ಞೆ ಜಾರಿಯಲ್ಲಿದ್ದರೂ ಮೇ 2ರಂದು ಪುತ್ತೂರು ಗಾಂಧಿಕಟ್ಟೆಯ ಬಳಿ ಸುಮಾರು 20 ರಿಂದ 30 ಜನ ಅಕ್ರಮ ಕೂಟ ಸೇರಿಕೊಂಡು ಬಸ್ ನಿಲ್ದಾಣದ ಬಳಿಯಲ್ಲಿರುವ ಅಂಗಡಿ ಮುಗ್ಗಟ್ಟುಗಳನ್ನು ಬಲವಂತವಾಗಿ ಮುಚ್ಚಿಸಿದ ಮತ್ತು ಸಮಾನ ಉದ್ದೇಶದಿಂದ ದೊಂಬಿ ಎಬ್ಬಿಸಿ ನಿಷೇದಾಜ್ಞೆ ಉಲ್ಲಂಘನೆ ಮಾಡಿರುವ ನಿಟ್ಟಿನಲ್ಲಿ ಸುಮಾರು 30 ಮಂದಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಎಂಬುವರ ಹತ್ಯೆ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ […]

ಅಕ್ರಮ ಕೂಟ ಸೇರಿ ಬಲವಂತವಾಗಿ ಅಂಗಡಿಗಳನ್ನು ಬಂದ್ ಮಾಡಿ ನಿಷೇಧಾಜ್ಞೆ ಉಲ್ಲಂಘನೆ |  30 ಮಂದಿ ವಿರುದ್ಧ ಪ್ರಕರಣ ದಾಖಲು Read More »

ಸುಹಾಸ್ ಹತ್ಯೆ ಬೆನ್ನಲ್ಲೇ ಕರಾವಳಿಯ ಹಿಂದೂ ಮುಖಂಡರಿಗೆ ಕೊಲೆ ಬೆದರಿಕೆ | ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‍

ಪುತ್ತೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ವಿಚಾರಣೆ ನಡೆಯುತ್ತಿರುವ ಬೆನ್ನಲ್ಲೆ ಮತ್ತೊಬ್ಬ ಹಿಂದೂ ಮುಖಂಡನಿಗೆ ಬೆದರಿಕೆ ಹಾಕಲಾದ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‍ ಆಗಿದೆ. ಹಿಂದೂ ಕಾರ್ಯಕರ್ತ ಭರತ್ ಕುಮ್ಮೇಲು ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮೂಲಕ ಜೀವ ಬೆದರಿಕೆಯನ್ನು ಹಾಕಲಾಗಿದೆ ಮೇ 5 ರಂದು ರಾತ್ರಿ 9:30ಕ್ಕೆ ನಿನ್ನ ಸ್ಥಳದಲ್ಲಿ ಬಂದು ಕೊಲೆ ಮಾಡುತ್ತೇವೆ’ ಎಂದು ಜೀವ ಬೆದರಿಕೆವುಳ್ಳ ಬರಹವನ್ನು ಹಾಕಿ ಪೋಸ್ಟ್ ಮಾಡಲಾಗಿದೆ. ಹನ ಶೆಟ್ಟಿ ಫೋಟೋಗೆ ರೈಟ್ ಮಾರ್ಕ್ ಹಾಕಿ ಪೊನ್ನು

ಸುಹಾಸ್ ಹತ್ಯೆ ಬೆನ್ನಲ್ಲೇ ಕರಾವಳಿಯ ಹಿಂದೂ ಮುಖಂಡರಿಗೆ ಕೊಲೆ ಬೆದರಿಕೆ | ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‍ Read More »

ಹಿಂದೂ ಕಾರ್ಯಕರ್ತ ಭರತ್‌ ಕುಮ್ಡೇಲುಗೆ ಜೀವ ಬೆದರಿಕೆ

ಮೇ 5ರಂದು ನಿನ್ನ ಸ್ಥಳಕ್ಕೆ ಬಂದು ಸಾಯಿಸುತ್ತೇವೆ ಎಂದು ಟಾರ್ಗೆಟ್‌ ಫಿಕ್ಸ್‌ ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಬೆನ್ನಿಗೇ ಮಂಗಳೂರಲ್ಲಿ ಮತ್ತೊಬ್ಬ ಹಿಂದೂ ಮುಖಂಡನ ಹತ್ಯೆಗೆ ಸಂಚು ರೂಪಿಸಲಾಗಿದೆ. ಹಿಂದೂ ಕಾರ್ಯಕರ್ತ ಭರತ್‌ ಕುಮ್ಡೇಲು ಅವರಿಗೆ ಸೋಷಿಯಲ್‌ ಮೀಡಿಯಾದಲ್ಲಿ ಬಹಿರಂಗವಾಗಿ ಕೊಲೆ ಬೆದರಿಕೆ ಹಾಕಿರುವ ಸಂಗತಿ ಬೆಳಕಿಗೆ ಬಂದಿದೆ. ಮೇ 5ರಂದು ರಾತ್ರಿ 9.30ಕ್ಕೆ ನಿನ್ನ ಸ್ಥಳದಲ್ಲೇ ಬಂದು ಕೊಲೆ ಮಾಡುತ್ತೇವೆ ಎಂದು ಭರತ್‌ ಕುಮ್ಡೇಲು ಫೋಟೊ ಸಹಿತ ಸೋಷಿಯಲ್‌ ಮೀಡಿಯಾದಲಿ ಪೋಸ್ಟ್‌ ಮಾಡಲಾಗಿದೆ. ಸುಹಾಸ್‌ ಶೆಟ್ಟಿ

ಹಿಂದೂ ಕಾರ್ಯಕರ್ತ ಭರತ್‌ ಕುಮ್ಡೇಲುಗೆ ಜೀವ ಬೆದರಿಕೆ Read More »

ಸುಹಾಸ್‌ ಶೆಟ್ಟಿ ಮೇಲೂ ಕೇಸ್‌ಗಳಿರುವುದರಿಂದ ಮನೆಗೆ ಹೋಗಿಲ್ಲ : ಪರಮೇಶ್ವರ್ ಸ್ಪಷ್ಟನೆ

ಮುಸ್ಲಿಂ ಮುಖಂಡರು ಅವರಾಗಿಯೇ ಬಂದು ಭೇಟಿ ಮಾಡಿದರು ಎಂದು ಸಮಜಾಯಿಷಿ ಬೆಂಗಳೂರು: ಶನಿವಾರ ಮಂಗಳೂರಿಗೆ ಬಂದಿದ್ದರೂ ಕೊಲೆಯಾದ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಮನೆಗೆ ಹೋಗಿ ತಂದೆ ತಾಯಿಗೆ ಸಾಂತ್ವನ ಹೇಳದ ಕುರಿತು ಇಂದು ಬೆಂಗಳೂರಿನಲ್ಲಿ ಸ್ಪಷ್ಟೀಕರಣ ನೀಡಿದ ಗೃಹ ಸಚಿವ ಜಿ.ಪರಮೇಶ್ವರ್‌, ಸುಹಾಸ್‌ ಶೆಟ್ಟಿ ಮೇಲೆ ಐದು ಕೇಸುಗಳಿದ್ದ ಕಾರಣ ಮನೆಗೆ ಹೋಗಿಲ್ಲ ಎಂದರು. ಸುಹಾಸ್ ಶೆಟ್ಟಿ ಕುಟುಂಬಕ್ಕೆ ಸರ್ಕಾರದ ವತಿಯಿಂದ ಯಾರೂ ಸಾಂತ್ವನ ಹೇಳದ ವಿಚಾರವಾಗಿ ಮಾತನಾಡಿದ ಅವರು, ಇದು ಒಂದು ಕೊಲೆ ಪ್ರಕರಣ.

ಸುಹಾಸ್‌ ಶೆಟ್ಟಿ ಮೇಲೂ ಕೇಸ್‌ಗಳಿರುವುದರಿಂದ ಮನೆಗೆ ಹೋಗಿಲ್ಲ : ಪರಮೇಶ್ವರ್ ಸ್ಪಷ್ಟನೆ Read More »

ಸುಹಾಸ್‌ ಶೆಟ್ಟಿ ಹತ್ಯೆ ಖಂಡಿಸಿ ಸೋಮವಾರ ಚಿಕ್ಕಮಗಳೂರು ಬಂದ್‌

ಚಿಕ್ಕಮಗಳೂರು : ಕಾಶ್ಮೀರದ ಪಹಲ್ಗಾಮ್​​ನಲ್ಲಿ ಹಿಂದುಗಳ ಮಾರಣಹೋಮ ಮತ್ತು ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಸೋಮವಾರ ಚಿಕ್ಕಮಗಳೂರು ಬಂದ್‌ಗೆ ಕರೆನೀಡಿದೆ. ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೆ ಚಿಕ್ಕಮಗಳೂರು ನಗರ ಸೇರಿದಂತೆ 9 ತಾಲೂಕುಗಳಲ್ಲಿ ಬಂದ್​ ಮಾಡಲು ನಿರ್ಧರಿಸಲಾಗಿದೆ. ಸ್ವಯಂಪ್ರೇರಿತರಾಗಿ ಅಂಗಡಿ ಮುಂಗಟ್ಟು ಬಂದ್​ ಮಾಡುವಂತೆ ಹಿಂದೂ ಸಂಘಟನೆಗಳು ಮನವಿ ಮಾಡಿವೆ. ಸರ್ಕಾರಿ ಬಸ್ ಸೇರಿದಂತೆ ಸಾರಿಗೆ ಸಂಚಾರಕ್ಕೆ ಯಾವುದೇ ಅಡ್ಡಿ ಮಾಡುವುದಿಲ್ಲ. ಸ್ವಯಂ ಪ್ರೇರಿತರಾಗಿ

ಸುಹಾಸ್‌ ಶೆಟ್ಟಿ ಹತ್ಯೆ ಖಂಡಿಸಿ ಸೋಮವಾರ ಚಿಕ್ಕಮಗಳೂರು ಬಂದ್‌ Read More »

ವಿಷ ಸೇವಿಸಿ ಆತ್ಮಹತ್ಯೆ

ಪುತ್ತೂರು: ಇಲ್ಲಿನ ತೆಂಕಿಲ ಕನ್ನೂರು ನಿವಾಸಿ ವೆಂಕಪ್ಪ (58) ಎಂಬವರು ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೆಂಕಪ್ಪ ಅವರು ಮೇ 1ರಂದು ಮನೆಯಿಂದ ಪೇಟೆಗೆ ಹೋಗಿ ಬರುತ್ತೇನೆಂದು ಹೋದವರು ಮನೆಗೆ ಹಿಂದಿರುಗಿಲ್ಲ. ಮೇ 2ರಂದು ಅವರು ದರ್ಬೆ ಮಂಗಳ ಬಾರ್ ಬಳಿಯ ಮೈದಾನದಲ್ಲಿ ಮಲಗಿಕೊಂಡಿದ್ದ ಸ್ಥಿತಿಯಲ್ಲಿದ್ದರು. ಮಾಹಿತಿ ತಿಳಿದು ಮನೆಯವರು ಹೋಗಿ ನೋಡುವಾಗ ಮೃತಪಟ್ಟಿರುವುದು ಗೊತ್ತಾಗಿದೆ. ಮಲಗಿದ್ದ ಪಕ್ಕದಲ್ಲೇ ನೀರಿನ ಬಾಟಲಿಗೆ ನೇರಳೆ ಬಣ್ಣದ ಹುಡಿಯನ್ನು ಹಾಕಿದ್ದುದು ಬೆಳಕಿಗೆ ಬಂದಿದೆ. ಅವರು ವಿಷ ಪದಾರ್ಥ ಸೇವಿಸಿ

ವಿಷ ಸೇವಿಸಿ ಆತ್ಮಹತ್ಯೆ Read More »

ಆ್ಯಂಟಿ ಕಮ್ಯೂನಲ್ ಟಾಸ್ಕ್‌ಫೋರ್ಸ್‌ಗೆ ಬಿಜೆಪಿ ವಿರೋಧ

ಹಿಂದುಗಳನ್ನು ದಮನಿಸುವ ಷಡ್ಯಂತ್ರ ಎಂದು ಆರೋಪ ಮಂಗಳೂರು : ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧ ಮಂಗಳೂರಿಗೆ ಶನಿವಾರ ಭೇಟಿ ನೀಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕೋಮು ಹಿಂಸಾಚಾರ ನಿಗ್ರಹಕ್ಕೆ ಆ್ಯಂಟಿ ಕಮ್ಯೂನಲ್ ಟಾಸ್ಕ್‌ಫೋರ್ಸ್ ಸ್ಥಾಪನೆಯ ಘೋಷಣೆ ಮಾಡಿರುವುದು ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ಇದು ಹಿಂದುಗಳನ್ನು ದಮನಿಸಲು, ಆ ಮೂಲಕ ತನ್ನ ವೋಟ್‌ಬ್ಯಾಂಕ್‌ ಪರವಾಗಿರುವವರನ್ನು ಖುಷಿಪಡಿಸಲು ಕಾಂಗ್ರೆಸ್‌ ಸರಕಾರ ಕೈಗೊಂಡಿರುವ ಕ್ರಮ ಎಂದು ಬಿಜೆಪಿ ನಾಯಕರು ಟೀಕಿಸಿದ್ದಾರೆ. ಈ ಸಂಬಂಧ ಮಾತನಾಡಿರುವ ಸಂಸದ ಕ್ಯಾ.ಬ್ರಿಜೇಶ್‌ ಚೌಟ,

ಆ್ಯಂಟಿ ಕಮ್ಯೂನಲ್ ಟಾಸ್ಕ್‌ಫೋರ್ಸ್‌ಗೆ ಬಿಜೆಪಿ ವಿರೋಧ Read More »

ಗಾಯಕ ಸೋನು ನಿಗಮ್‌ ವಿರುದ್ಧ ಕೇಸ್‌

ಕನ್ನಡಿಗರ ಅಭಿಮಾನವನ್ನು ಉಗ್ರರ ದಾಳಿಗೆ ಹೋಲಿಸಿ ವಿವಾದ ಸೃಷ್ಟಿಸಿರುವ ಗಾಯಕ ಬೆಂಗಳೂರು: ಕನ್ನಡಿಗರ ಅಭಿಮಾನವನ್ನು ಪಹಲ್ಗಾಮ್ ಉಗ್ರರ ದಾಳಿಗೆ ಹೋಲಿಸಿ ವಿವಾದ ಮೈಮೇಲೆ ಎಳೆದುಕೊಂಡಿರುವ ಜನಪ್ರಿಯ ಹಿನ್ನೆಲೆ ಗಾಯಕ ಸೋನು ನಿಗಮ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರು ನಗರ ಘಟಕದ ಅಧ್ಯಕ್ಷ ಧರ್ಮರಾಜ್ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಖಾಸಗಿ ಕಾಲೇಜೊಂದರ ಕಾರ್ಯಕ್ರಮದಲ್ಲಿ ಕನ್ನಡ ಹಾಡು ಹೇಳುವಂತೆ ವಿದ್ಯಾರ್ಥಿಗಳು ಕೋರಿದಾಗ ಕನ್ನಡ…ಕನ್ನಡ… ಈ ರೀತಿಯ

ಗಾಯಕ ಸೋನು ನಿಗಮ್‌ ವಿರುದ್ಧ ಕೇಸ್‌ Read More »

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಖಾದರ್‌ ಹೇಳಿಕೆ ವಿರುದ್ಧ ಬಿಜೆಪಿ ಕೆಂಡಾಮಂಡಲ

ಆರೋಪಿಗಳ ರಕ್ಷಣೆಗೆ ಸ್ಪೀಕರ್‌ ನಿಂತಿದ್ದಾರೆ ಎಂದು ಆರೋಪ; ಹಾಗೇ ಹೇಳಿಲ್ಲ ಎಂದು ಖಾದರ್‌ ಸ್ಪಷ್ಟನೆ ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆಯ ಬಳಿಕ ಸ್ಪೀಕರ್‌ ಯು.ಟಿ.ಖಾದರ್‌ ನೀಡಿದ ಹೇಳಿಕೆಯೊಂದು ಭಾರಿ ವಿವಾದಕ್ಕೆ ಕಾರಣವಾಗಿದ್ದು, ಕೊಲೆ ಪ್ರಕರಣದ ದಿಕ್ಕು ತಪ್ಪಿಸಲು ಸ್ವತಃ ಸ್ಪೀಕರ್‌ ಮುಂದಾಗಿರುವುದು ದುರದೃಷ್ಟಕರ, ಅವರು ರಾಜೀನಾಮೆ ನೀಡಬೇಕೆಂದು ಬಿಜೆಪಿ ನಾಯಕರು ಆಗ್ರಹಿಸುತ್ತಿದ್ದಾರೆ. ಸುಹಾಸ್‌ ಶೆಟ್ಟಿ ಹತ್ಯೆಗೂ ಮೂರು ವರ್ಷದ ಹಿಂದೆ ಸುರತ್ಕಲ್‌ನಲ್ಲಿ ಹತ್ಯೆಯಾದ ಫಾಝಿಲ್‌ ಕುಟುಂಬಕ್ಕೂ ಯಾವುದೇ ಸಂಬಂಧ ಇಲ್ಲ, ಫಾಝಿಲ್‌ ಕುಟುಂಬದವರೊಂದಿಗೆ ನಾನು

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಖಾದರ್‌ ಹೇಳಿಕೆ ವಿರುದ್ಧ ಬಿಜೆಪಿ ಕೆಂಡಾಮಂಡಲ Read More »

ಹಿಂದೂ ಕಾರ್ಯಕರ್ತ ಸುಹಾಸ್‍ ಹತ್ಯೆ ಪ್ರಕರಣ | 8 ಮಂದಿ ಆರೋಪಿಗಳ ಬಂಧನ

ಮಂಗಳೂರು: ಹಿಂದೂ ಕಾರ್ಯಕರ್ತ ಹಾಗು ರೌಡಿ ಶೀಟರ್ ಆಗಿದ್ದ ಸುಹಾಸ್‍ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಂಗಳೂರು ನಗರ ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸಿ 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಹಿಂದೂ ಸಂಘಟನೆಯ ಕಾರ್ಯಗಳಲ್ಲಿ ಗುರುತಿಸಿಕೊಂಡಿದ್ದ ಸುಹಾಸ್ ಶೆಟ್ಟಿಯ ಕೊಲೆ ದಕ್ಷಿಣಕನ್ನಡದಲ್ಲಿ ಸಂಚಲನ ಮೂಡಿಸಿತ್ತು. ತಡರಾತ್ರಿ ನಡೆದ ಈ ಬರ್ಬರ ಕೃತ್ಯದ ತನಿಖೆ ಚುರುಕುಗೊಳಿಸಿದ್ದ ಪೊಲೀಸರು, ಈ ಕೃತ್ಯದಲ್ಲಿ ಭಾಗಿಯಾಗಿದ್ದ ಎಂಟು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತ ಆರೋಪಿಗಳ ವಿವರಗಳನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ.

ಹಿಂದೂ ಕಾರ್ಯಕರ್ತ ಸುಹಾಸ್‍ ಹತ್ಯೆ ಪ್ರಕರಣ | 8 ಮಂದಿ ಆರೋಪಿಗಳ ಬಂಧನ Read More »

error: Content is protected !!
Scroll to Top