ಅಪರಾಧ

ಮಂಗಳೂರಿನಲ್ಲಿ ಪೊಲೀಸರು, ಮುಖಂಡರ ಜೊತೆಗೆ ಪರಮೇಶ್ವರ್‌ ಸರಣಿ ಸಭೆ

ಪೊಲೀಸರ ಕಾರ್ಯವೈಖರಿಯ ಬಗ್ಗೆ ಭಾರಿ ಅಸಮಾಧಾನ ಮಂಗಳೂರು: ಕರಾವಳಿಯಲ್ಲಿ ಇತ್ತೀಚೆಗೆ ನಡೆದ ಎರಡು ಹತ್ಯೆಗಳ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಶನಿವಾರ ಮಂಗಳೂರಿಗೆ ಭೇಟಿ ನೀಡಿದ್ದು, ಸ್ಥಳೀಯ ಅಧಿಕಾರಿಗಳು ಹಾಗೂ ಮುಸ್ಲಿಂ ಮುಖಂಡರೊಂದಿಗೆ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಸಚಿವ ಪರಮೇಶ್ವರ್‌ ವಿಮಾನ ನಿಲ್ದಾಣದಿಂದ ಸರ್ಕೀಟ್ ಹೌಸ್‌ಗೆ ಆಗಮಿಸಿದ್ದು, ಸರ್ಕೀಟ್ ಹೌಸ್‌ನಲ್ಲಿ ಮಾತುಕತೆ ನಡೆಸುತ್ತಿದ್ದಾರೆಂದು ವರದಿಗಳು ತಿಳಿಸಿವೆ. ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿಯನ್ನು […]

ಮಂಗಳೂರಿನಲ್ಲಿ ಪೊಲೀಸರು, ಮುಖಂಡರ ಜೊತೆಗೆ ಪರಮೇಶ್ವರ್‌ ಸರಣಿ ಸಭೆ Read More »

ಮಂಗಳೂರು : ಬಿಗಿ ಬಂದೋಬಸ್ತು ನಡುವೆ ತಲ್ವಾರು ಹಿಡಿದು ಕೃತ್ಯ ಮೆರೆದ ಯುವಕರು

ಮಂಗಳೂರು : ರೌಡಿ ಶೀಟರ್, ಸಂಘಪರಿವಾರದ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯ ಹಿನ್ನೆಲೆಯಲ್ಲಿ ಕಾವೂರು ಪೊಲೀಸ್ ಠಾಣೆಯ ಎರಡು ಕಡೆಗಳಲ್ಲಿ ದುಷ್ಕರ್ಮಿಗಳು ಸಾರ್ವಜನಿಕರಿಬ್ಬರಿಗೆ ತಲವಾರು ತೋರಿಸಿ ಪರಾರಿಯಾಗಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ ಎಂದು ತಿಳಿದು ಬಂದಿದೆ. ಪಂಜಿಮೊಗರು ಸಮೀಪ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಂಜಿಮೊಗರು ನಿವಾಸಿ ಮೊಯ್ಲಿನಬ್ಬ (37) ಮತ್ತು ಶಾಂತಿನಗರದ ನಾಸಿರ್ (38) ಎಂಬವರಿಗೆ ತಲವಾರು ತೋರಿಸಿ, ಬೆದರಿಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ. ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್‍ ಧರಿಸಿಕೊಂಡಿದ್ದ ಇಬ್ಬರು ದುಷ್ಕರ್ಮಿಗಳು ತಲವಾರಿನೊಂದಿಗೆ ಸಂಚರಿಸುತ್ತಾ

ಮಂಗಳೂರು : ಬಿಗಿ ಬಂದೋಬಸ್ತು ನಡುವೆ ತಲ್ವಾರು ಹಿಡಿದು ಕೃತ್ಯ ಮೆರೆದ ಯುವಕರು Read More »

ಡಾ. ಆಶಾಪುತ್ತೂರಾಯರಿಗೆ ಹಲ್ಲೆ ಯತ್ನ | ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

ಪುತ್ತೂರು: ಪುತ್ತೂರಿನ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಆಶಾ ಪುತ್ತೂರಾಯರಿಗೆ ಅವಮಾನಿಸಿ  ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳಿಗೂ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಸುಳ್ಯ ಪದವಿನ ಜೊಹರಾ ಮತ್ತು ಅವರ ಮಗ ಸಮದ್ ಎಂಬವರು ಪ್ರಕರಣದ ಆರೋಪಿಗಳು. ಆರೋಪಿಗಳ ಪರ ವಕೀಲರಾದ ಅಶ್ರಫ್ ಅಗ್ನಾಡಿ, ಅಬ್ದುಲ್ ಮಜೀದ್ ಖಾನ್, ಸೆಲೀನಾ ನೆಕ್ಕಿಲಾಡಿ, ಮಿತ್ರಿಯಾ ವಾದಿಸಿದ್ದರು. ಹಲ್ಲೆ ಯತ್ನ ನಡೆದ ಬಗ್ಗೆ ಮಾಹಿತಿ ದೊರೆತು ಪುತ್ತೂರು

ಡಾ. ಆಶಾಪುತ್ತೂರಾಯರಿಗೆ ಹಲ್ಲೆ ಯತ್ನ | ಆರೋಪಿಗಳಿಗೆ ನಿರೀಕ್ಷಣಾ ಜಾಮೀನು Read More »

ಸಹಜ ಸ್ಥಿತಿಗೆ ಮರಳಿದ ಮಂಗಳೂರು : ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್‌ ಕಾವಲು

ಸೋಷಿಯಲ್‌ ಮೀಡಿಯಾ ಪೋಸ್ಟ್‌ಗಳ ಮೇಲೆ ತೀವ್ರ ನಿಗಾ ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ನಿನ್ನೆ ಬಂದ್‌ ಆಗಿದ್ದ ಮಂಗಳೂರು ನಗರ ಇಂದು ಸಹಜ ಸ್ಥಿತಿಗೆ ಮರಳಿದೆ. ನಿನ್ನೆ ಸುಹಾಸ್‌ ಶೆಟ್ಟಿ ಹತ್ಯೆ ಪ್ರತಿಭಟಿಸಿ ವಿಶ್ವ ಹಿಂದೂ ಪರಿಷತ್‌ ನೀಡಿದ ಕರೆಯನ್ವಯ ಬಂದ್‌ ಆಚರಿಸಲಾಗಿತ್ತು. ಬಂದ್‌ ಆಚರಿಸಲು ಒಪ್ಪದೆ ರಸ್ತೆಗಿಳಿದ ಕೆಲವು ಬಸ್‌ಗಳಿಗೆ ಕಲ್ಲುತೂರಿದ ಘಟನೆ ಮಂಗಳೂರು, ಮೂಲ್ಕಿ, ಕಾರ್ಕಳ ಮತ್ತಿತರೆಡೆಗಳಲ್ಲಿ ಸಂಭವಿಸಿತ್ತು. ನಿನ್ನೆಯಿಡೀ ಮಂಗಳೂರು ಸುತ್ತಮುತ್ತ ಬಿಗುವಿನ ಪರಿಸ್ಥಿಯಿತ್ತು. ಪುತ್ತೂರು, ಕಡಬ, ಬೆಳ್ತಂಗಡಿ

ಸಹಜ ಸ್ಥಿತಿಗೆ ಮರಳಿದ ಮಂಗಳೂರು : ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್‌ ಕಾವಲು Read More »

ಸುಹಾಸ್‌ ಶೆಟ್ಟಿ ಹತ್ಯೆ : 8 ಶಂಕಿತರು ವಶ?

ಇಂದು ಗೃಹ ಸಚಿವ ಪರಮೇಶ್ವರ್‌ ಮಂಗಳೂರಿಗೆ ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ಸಂಬಂಧಿಸಿ 8 ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಹತ್ಯೆಗೆ ಭಾರಿ ಸಂಚು ನಡೆಸಿರುವುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ವೀಡಿಯೊ ಸಾಕ್ಷ್ಯದ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಇದೀಗ 8 ಆರೋಪಿಗಳನ್ನು ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದಿರುವ ವಿಚಾರವನ್ನು ಪೊಲೀಸರು ಇನ್ನೂ ದೃಢಪಡಿಸಿಲ್ಲ. ಇಂದು ಸುದ್ದಿಗೋಷ್ಠಿ ಕರೆದು ತನಿಖೆಯ ಮಾಹಿತಿ

ಸುಹಾಸ್‌ ಶೆಟ್ಟಿ ಹತ್ಯೆ : 8 ಶಂಕಿತರು ವಶ? Read More »

ಜಾತ್ರೆಯಲ್ಲಿ ಭೀಕರ ಕಾಲ್ತುಳಿತ : 7 ಮಂದಿ ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ

ಗ್ರಾಮದೇವತೆಯ ಜಾತ್ರೆ ಮೆರವಣಿಗೆ ವೇಳೆ ವದಂತಿಗಳಿಂದ ನೂಕುನುಗ್ಗಲು ಉಂಟಾಗಿ ದುರಂತ ಪಣಜಿ: ಉತ್ತರ ಗೋವಾದ ಶಿರಗಾವ್‌ ದೇವಸ್ಥಾನದ ಜಾತ್ರಾ ಮಹೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 7 ಜನರು ದುರ್ಮರಣ ಹೊಂದಿದ್ದು, 50ಕ್ಕೂ ಅಧಿಕ ಜನರಿಗೆ ಗಾಯಂಡಿದ್ದಾರೆ. ಘಟನೆ ಕುರಿತು ಸಿಎಂ ಪ್ರಮೋದ್ ಸಾವಂತ್ ಆಘಾತ ವ್ಯಕ್ತಪಡಿಸಿದ್ದು, ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗೋವಾದ ಶಿರ್ಗಾಂವ್ ಗ್ರಾಮದಲ್ಲಿ ದೇವಿ ಲೈರೈ ಜಾತ್ರೆಯಲ್ಲಿ ಶನಿವಾರ ಮುಂಜಾನೆ ಈ ಘಟನೆ ಸಂಭವಿಸಿದೆ.

ಜಾತ್ರೆಯಲ್ಲಿ ಭೀಕರ ಕಾಲ್ತುಳಿತ : 7 ಮಂದಿ ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ Read More »

ಆಸ್ಪತ್ರೆಯಲ್ಲಿ ಬೆಂಕಿ ಅವಘಡ : ಉಸಿರುಕಟ್ಟಿ ಐವರು ರೋಗಿಗಳು ಸಾವು

ಕೋಝಿಕ್ಕೋಡ್: ಕೇರಳದ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿನಲ್ಲಿ ಶುಕ್ರವಾರ ರಾತ್ರಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹತ್ತಿಕೊಂಡು ದಟ್ಟ ಹೊಗೆ ವ್ಯಾಪಿಸಿದ್ದು, ಘಟನೆಯಲ್ಲಿ ಕನಿಷ್ಠ ಐವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಉಸಿರುಗಟ್ಟಿದ ಪರಿಣಾಮ ಸಾವುಗಳು ಸಂಭವಿಸಿವೆ. ಅಗ್ನಿಶಾಮಕ ಪಡೆಯ ನೆರವಿನಿಂದ ಪರಿಸ್ಥಿತಿಯನ್ನು ಕ್ಷಿಪ್ರವಾಗಿ ಹತೋಟಿಗೆ ತರಲಾಗಿದ್ದು, 200ಕ್ಕೂ ಅಧಿಕ ರೋಗಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಆಸ್ಪತ್ರೆಯ ಎಮರ್ಜೆನ್ಸಿ ವಿಭಾಗದಲ್ಲಿ ಅಗ್ನಿಅವಘಡ ಸಂಭವಿಸಿದೆ ಎನ್ನಲಾಗಿದೆ.

ಆಸ್ಪತ್ರೆಯಲ್ಲಿ ಬೆಂಕಿ ಅವಘಡ : ಉಸಿರುಕಟ್ಟಿ ಐವರು ರೋಗಿಗಳು ಸಾವು Read More »

ಮೇ 4ರ ತನಕ ನಾಲ್ಕು ತಾಲೂಕುಗಳಲ್ಲಿ ಮದ್ಯ ಮಾರಾಟ ನಿಷೇಧ : ಡಿಸಿ ಆದೇಶ

ಪುತ್ತೂರು, ಬೆಳ್ತಂಗಡಿ, ಕಡಬ, ಸುಳ್ಯ ತಾಲೂಕುಗಳಲ್ಲಿ ಬಾರ್‌, ಮದ್ಯದಂಗಡಿಗಳು ಬಂದ್‌ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕುಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.ಇದಲ್ಲದೆ ಮಂಗಳೂರು ಆಯುಕ್ತರ ವ್ಯಾಪ್ತಿಯಲ್ಲಿ ಮೇ 2ರಿಂದ ಮೇ 4ರಂದು ಬೆಳಿಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದುಷ್ಕರ್ಮಿಗಳು ರೌಡಿ ಶೀಟರ್ ಮತ್ತು ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರನ್ನು ಹತ್ಯೆ ಮಾಡಿದ

ಮೇ 4ರ ತನಕ ನಾಲ್ಕು ತಾಲೂಕುಗಳಲ್ಲಿ ಮದ್ಯ ಮಾರಾಟ ನಿಷೇಧ : ಡಿಸಿ ಆದೇಶ Read More »

ಹತ್ಯೆಯಾದ ಸುಹಾಸ್‌ ಶೆಟ್ಟಿ ಕುಟುಂಬಕ್ಕೆ ಬಿಜೆಪಿಯಿಂದ 25 ಲ.ರೂ. ಪರಿಹಾರ

ತನಿಖೆಯನ್ನು ಎನ್‌ಐಎಗೊಪ್ಪಿಸಲು ವಿಜಯೇಂದ್ರ ಆಗ್ರಹ ಮಂಗಳೂರು: ಗುರುವಾರ ರಾತ್ರಿ ಬಜಪೆ ಬಳಿ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಯಾಗಿರುವ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕುಟುಂಬಕ್ಕೆ ಬಿಜೆಪಿ ವತಿಯಿಂದ 25 ಲಕ್ಷ ರೂ. ಪರಿಹಾರ ನೀಡುವುದಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಘೋಷಣೆ ಮಾಡಿದ್ದಾರೆ. ನಿನ್ನೆ ಮೃತ ಸುಹಾಸ್ ಶೆಟ್ಟಿ ಅಂತಿಮ ದರ್ಶನ ಪಡೆದ ಬಳಿಕ ಮಾತನಾಡಿದ ಅವರು, ಕಾಶ್ಮೀರ ಪಹಲ್ಗಾಮ್ ಹತ್ಯೆ ಮರೆಯುವ ಮೊದಲೇ ಮಂಗಳೂರಿನಲ್ಲಿ ಘಟನೆ ನಡೆದಿರುವುದು ಖಂಡನಾರ್ಹ. ಬಿಜೆಪಿ ಈ ಘಟನೆಯನ್ನು ಬಹಳ ಗಂಭೀರವಾಗಿ

ಹತ್ಯೆಯಾದ ಸುಹಾಸ್‌ ಶೆಟ್ಟಿ ಕುಟುಂಬಕ್ಕೆ ಬಿಜೆಪಿಯಿಂದ 25 ಲ.ರೂ. ಪರಿಹಾರ Read More »

ಸುಹಾಸ್‌ ಶೆಟ್ಟಿ ಹತ್ಯೆ ಬೆನ್ನಲ್ಲೇ ಇಬ್ಬರ ಕೊಲೆಗೆ ಯತ್ನ

ಕೂದಲೆಳೆ ಅಂತರದಿಂದ ಪಾರಾದ ಇಬ್ಬರು ಯುವಕರು ಉಡುಪಿ: ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ನಿನ್ನೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಆದ ಬೆನ್ನಲ್ಲೇ ಉಡುಪಿ ಸಮೀಪ ಆತ್ರಾಡಿಯಲ್ಲಿ ಮುಸ್ಲಿಂ ಯುವಕನ ಕೊಲೆಗೆ ಯತ್ನಿಸಿರುವ ಘಟನೆ ನಡೆದಿದೆ. ಅಬೂಬಕ್ಕರ್ ಹಲ್ಲೆಗೊಳಗಾದ ಮುಸ್ಲಿಂ ಯುವಕ. ಹಿರಿಯಡಕ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರವಾಗಿ ಕೊಲೆ ಮಾಡಲು ಯತ್ನಿಸಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಮದು ಪೊಲೀಸರು ತಿಳಿಸಿದ್ದಾರೆ. ಸುಶಾಂತ್ ಮತ್ತು ಸಂದೇಶ್ ಪೂಜಾರಿ ಬಂಧಿತ ಆರೋಪಿಗಳು. ನಿನ್ನೆ

ಸುಹಾಸ್‌ ಶೆಟ್ಟಿ ಹತ್ಯೆ ಬೆನ್ನಲ್ಲೇ ಇಬ್ಬರ ಕೊಲೆಗೆ ಯತ್ನ Read More »

error: Content is protected !!
Scroll to Top