ಅಪರಾಧ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐ ಎ ತನಿಖೆಗೆ ಒತ್ತಾಯಿಸಿ ಅಮಿತ್ ಶಾ ಗೆ ಪತ್ರ ಬರೆದ ಬ್ರಿಜೇಶ್ ಚೌಟ

ನಮ್ಮ ಕಾರ್ಯಕರ್ತ ಸುಹಾಸ್ ಶೆಟ್ಟಿಯವರ ಭೀಕರ ಸಾರ್ವಜನಿಕ ಹತ್ಯೆಯು ಮತ್ತೊಮ್ಮೆ ಕರಾವಳಿಗರ ಹೃದಯದಲ್ಲಿ ಮನಸ್ಸಿನಲ್ಲಿ ಅಳಿಸಲಾಗದ ಆಘಾತ ಸೃಷ್ಟಿಸಿದೆ. ಇಂತಹ ನೋವು ಮೊದಲನೆಯದಲ್ಲ, ಹೊಸತೂ ಅಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ನಮ್ಮ ಭಾಗದ ಹಿಂದೂ ಕಾರ್ಯಕರ್ತರ ಗುರಿಯಾಗಿ ಹತ್ಯೆಗಳ ಪ್ರವೃತ್ತಿ ಹೆಚ್ಚಾಗುತ್ತವೆ ಎಂದು ಸಂಸದ ಬ್ರಿಜೇಶ್ ಚೌಟ ಹೇಳಿದರು. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರನ್ನು ಗುರಿ ಇಟ್ಟು ನಡೆಸಿದ ಹತ್ಯೆಯ ರೀತಿಯಲ್ಲಿಯೇ ಈ ಘಟನೆಯು ನಡೆದಿದೆ. ಈ ರೀತಿಯ ಹತ್ಯೆಯು ಈ ಪ್ರದೇಶದಲ್ಲಿ ಪಿಎಫ್‌ಐ ನಂತಹ […]

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐ ಎ ತನಿಖೆಗೆ ಒತ್ತಾಯಿಸಿ ಅಮಿತ್ ಶಾ ಗೆ ಪತ್ರ ಬರೆದ ಬ್ರಿಜೇಶ್ ಚೌಟ Read More »

ಮಂಗಳೂರಿನಲ್ಲಿ ಮೇ 6ರ ತನಕ ನಿಷೇಧಾಜ್ಞೆ : ನಗರ ಸಂಪೂರ್ಣ ಸ್ತಬ್ಧ

ಕೆಲವು ಬಸ್‌ಗಳಿಗೆ ಕಲ್ಲುತೂರಾಟ; ಅಂಗಡಿ ಹೋಟೆಲ್‌ಗಳು ಬಂದ್‌ ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಕೊಲೆ ಹಿನ್ನೆಲೆಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿರುವುದನ್ನು ಅನುಸರಿಸಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ತಕ್ಷಣದಿಂದಲೇ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್), 2023ರ ಸೆಕ್ಷನ್ 163ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದೆ. ಈ ಆದೇಶ ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಜಾರಿಗೆ ಬಂದಿದ್ದು, ಮೇ 6 ಬೆಳಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗ್ರವಾಲ್ ಈ ನಿಷೇಧಾಜ್ಞೆಯನ್ನು ತಕ್ಷಣದಿಂದಲೇ ಜಾರಿಗೆ

ಮಂಗಳೂರಿನಲ್ಲಿ ಮೇ 6ರ ತನಕ ನಿಷೇಧಾಜ್ಞೆ : ನಗರ ಸಂಪೂರ್ಣ ಸ್ತಬ್ಧ Read More »

ಪುತ್ತೂರಿನ ಬಂದ್ ಮಾಡದ ಅಂಗಡಿಗಳ ವಿರುದ್ಧ ಹಿಂದೂ ಸಂಘಟನೆಗಳಿಂದ ಆಕ್ರೋಶ | ಪುತ್ತೂರು ಬಸ್‍ ನಿಲ್ದಾಣದ ಬಳಿ ಜಮಾಯಿಸಿದ ಹಿಂದೂ ಸಂಘಟನೆಗಳು

ಪುತ್ತೂರು: ಸುಹಾಸ್‍ ಶೆಟ್ಟಿ ಹತ್ಯೆ  ಹಿನ್ನಲೆಯಲ್ಲಿ ವಿಶ್ವ ಹಿಂದೂ ಪರಿಷದ್ ಬಂದ್ ಗೆ ಕರೆ ನೀಡಿದರೂ ಶುಕ್ರವಾರ ಪುತ್ತೂರಿನಲ್ಲಿ ಕೆಲವು ಅಂಗಡಿಗಳು ಬಂದ್‍ ಮಾಡದ ಕಾರಣ ಆಕ್ರೋಶ ವ್ಯಕ್ತಪಡಿಸಿದ ಹಿಂದೂ ಪರ ಸಂಘಟನೆಗಳು, ಪುತ್ತೂರು ಬಸ್ ನಿಲ್ದಾಣ ಬಳಿ ಜಮಾಯಿಸಿದ ಘಟನೆ ನಡೆದಿದೆ. 11 ಗಂಟೆ ಸುಮಾರಿಗೆ ಅರುಣ್ ಕುಮಾರ್ ಪುತ್ತಿಲ ಅವರು ಪೊಲೀಸರ ಜೊತೆ ಮಾತನಾಡಿ, ಅಂಗಡಿಗಳನ್ನು ಬಂದ್ ಮಾಡಿಸಿ, ಹಾಗೊಂದು ವೇಳೆ ಬಂದ್ ಮಾಡದೇ ಇದ್ದರೆ ಸವಾಲು ಎದುರಿಸಲು ಸಿದ್ಧ ಎಂದರು. ಮುರಳೀಕೃಷ್ಣ ಹಸಂತ್ತಡ್ಕ

ಪುತ್ತೂರಿನ ಬಂದ್ ಮಾಡದ ಅಂಗಡಿಗಳ ವಿರುದ್ಧ ಹಿಂದೂ ಸಂಘಟನೆಗಳಿಂದ ಆಕ್ರೋಶ | ಪುತ್ತೂರು ಬಸ್‍ ನಿಲ್ದಾಣದ ಬಳಿ ಜಮಾಯಿಸಿದ ಹಿಂದೂ ಸಂಘಟನೆಗಳು Read More »

ಹಿಂದೂ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಹತ್ಯೆ | ವಿಎಚ್‍ ಪಿ ಬಂದ್‍ ಕರೆಗೆ ಪುತ್ತೂರಿನಲ್ಲಿ ವ್ಯಾಪಕ ಬೆಂಬಲ

ಪುತ್ತೂರು: ಹಿಂದೂ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ವಿಶ್ವ ಹಿಂದೂ ಪರಿಷದ್ ಕರೆ ನೀಡಿದ ಬಂದ್‍ ಗೆ ಪುತ್ತೂರಿನಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಬಂದ್‍ ಕರೆ ನೀಡಿದ ಬೆನ್ನಲ್ಲೇ ಪುತ್ತೂರಿನ ಎಲ್ಲಾ ವರ್ತಕರು ತಮ್ಮ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿದ್ದಾರೆ. ನ್ಯೂಸ್‍ ಪೇಪರ್‍ ಏಜೆನ್ಸಿ,ಹಾಲು, ಮೆಡಿಕಲ್‍, ಆಸ್ಪತ್ರೆ ಇನ್ನಿತರ ಪ್ರಮುಖ ಅಂಗಡಿಗಳು ತೆರೆದಿದ್ದವು. ಕೆಲವೆಡೆ ಹೊಟೇಲ್ ಗಳು ಅರ್ಧ ತೆರೆದಿದ್ದಿರುವುದು ಕಂಡು ಬಂದಿದೆ. ಆಟೋ, ಕಾರು ಮುಂತಾದ ಖಾಸಗಿ ವಾಹನಗಳ ಓಡಾಟ ನಡೆಸುತ್ತಿದ್ದವು.

ಹಿಂದೂ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಹತ್ಯೆ | ವಿಎಚ್‍ ಪಿ ಬಂದ್‍ ಕರೆಗೆ ಪುತ್ತೂರಿನಲ್ಲಿ ವ್ಯಾಪಕ ಬೆಂಬಲ Read More »

ಹಿಂದೂ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಹತ್ಯೆ | ಬಂಟ್ವಾಳದಲ್ಲಿ ಅಂತ್ಯಕ್ರಿಯೆಗೆ ತಯಾರಿ

ಮಂಗಳೂರು: ಗುರುವಾರ ಸಂಜೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ನಡೆದಿದ್ದು, ಅವರ ಅಂತ್ಯಕ್ರಿಯೆ ಬಂಟ್ವಾಳದಲ್ಲಿ ನಡೆಯಲಿದೆ. ಸುಹಾಸ್ ಶೆಟ್ಟಿ ಅವರ ಮೃತದೇಹ ಮೆರವಣಿಗೆ ಮೂಲಕ ತರಲಾಗುತ್ತಿದ್ದು, ಬಂಟ್ವಾಳ ದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ. ಹತ್ಯೆ ಪ್ರಕರಣವನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಶುಕ್ರವಾರ ದ.ಕ.ಜಿಲ್ಲಾದ್ಯಂತ ಬಂದ್‍ ಗೆ ಕರೆ ನೀಡಿದೆ. ಇಂದು ಬೆಳಿಗ್ಗೆ ಬಂದ್‍ ಗೆ ಕರೆ ನೀಡುತ್ತಿದ್ದಂತೆ ಮಂಗಳೂರಿನಲ್ಲಿ ಕೆಲವು ಬಸ್‍ ಗಳಿಗೆ ಕಲ್ಲು ತೂರಾಟ ನಡೆದ ಘಟನೆಯೂ ನಡೆಯಿತು.

ಹಿಂದೂ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಹತ್ಯೆ | ಬಂಟ್ವಾಳದಲ್ಲಿ ಅಂತ್ಯಕ್ರಿಯೆಗೆ ತಯಾರಿ Read More »

ಮಂಗಳೂರಿನಲ್ಲಿ ಅಹಿತಕರ ಘಟನೆ | ಮೇ 5 ರ ತನಕ ದ.ಕ. ಜಿಲ್ಲಾದ್ಯಂತ ನಿಷೇದಾಜ್ಞೆ ಜಾರಿ

ಮಂಗಳೂರು: ಗುರುವಾರ ಸಂಜೆ ಮಂಗಳೂರಿನ ಬಜ್ಪೆ ಪರಿಸರ ಹಾಗೂ ಉಳ್ಳಾಲದಲ್ಲಿ ಅಹಿತಕರ ಘಟನೆ ನಡೆದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮೇ 5 ರ ತನಕ ನಿಷೇದಾಜ್ಞೆ ಜಾರಿ ಮಾಡಿ ದ.ಕ.ಜಿಲ್ಲಾಧಿಕಾರಿ ಆದೇಶಿರುತ್ತಾರೆ. ಗುರುವಾರ ಸಂಜೆ ಹಿಂದೂ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಹತ್ಯೆಯಾದ ಬೆನ್ನಲ್ಲೆ ಉಳ್ಳಾಲದಲ್ಲಿ ಗುಂಪೊಂದು ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿತ್ತು. ಈ ಎರಡು ಪ್ರಕರಣದ ನಡೆದ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರವಾಗಿ ನಿಷೇದಾಜ್ಞೆ ಆದೇಶ ಹೊರಡಿಸಿದ್ದಾರೆ.

ಮಂಗಳೂರಿನಲ್ಲಿ ಅಹಿತಕರ ಘಟನೆ | ಮೇ 5 ರ ತನಕ ದ.ಕ. ಜಿಲ್ಲಾದ್ಯಂತ ನಿಷೇದಾಜ್ಞೆ ಜಾರಿ Read More »

ಆರೋಪಿಗಳ ಸುಳಿವು ಪತ್ತೆ, ಕಾರುಗಳು ವಶ : ಎಡಿಜಿಪಿ ಆರ್.ಹಿತೇಂದ್ರ ಮಾಹಿತಿ

ತನಿಖೆಗೆ ವಿಶೇಷ ತಂಡ ರಚನೆ; ಶಾಂತಿ ಕಾಪಾಡಲು ಮನವಿ ಮಂಗಳೂರು: ಮಂಗಳೂರು ಪೊಲೀಸರು ಆರೋಪಿಗಳ ಸುಳಿವು ಪತ್ತೆ ಹಚ್ಚಿದ್ದಾರೆ. ಸುಹಾಸ್ ಶೆಟ್ಟಿ ಮೇಲೆ ದಾಳಿ ನಡೆಸಿ ಪರಾರಿಯಾದ ಆರೋಪಿಗಳು ಯಾರು ಎಂದು ನಮಗೆ ಗೊತ್ತಾಗಿದೆ. ಆರೋಪಿಗಳ ಬಂಧನಕ್ಕೆ ತಂಡ ರಚನೆ ಮಾಡುತ್ತೇವೆ. ಆರೋಪಿಗಳ ಸುಳಿವನ್ನು ಈಗಾಗಲೇ ಪತ್ತೆ ಹಚ್ಚಿಲಾಗಿದೆ ಎಂದು ಎಡಿಜಿಪಿ ಆರ್.ಹಿತೇಂದ್ರ ಹೇಳಿದ್ದಾರೆ. ಕಾನೂನು ಕೈಗೆತ್ತಿಕೊಂಡವರ ಮೇಲೆ ಕಾನೂನು ರೀತಿ ಕ್ರಮ ಆಗಲಿದೆ ಎಂದು ಹಿತೇಂದ್ರ ಹೇಳಿದ್ದಾರೆ. ಸ್ಥಳದ ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ಪರಿಶೀಲಿಸಿದ್ದಾರೆ. ಇನ್ನು

ಆರೋಪಿಗಳ ಸುಳಿವು ಪತ್ತೆ, ಕಾರುಗಳು ವಶ : ಎಡಿಜಿಪಿ ಆರ್.ಹಿತೇಂದ್ರ ಮಾಹಿತಿ Read More »

ಮಾರ್ಚ್‌ನಲ್ಲೇ ಸುಹಾಸ್‌ ಶೆಟ್ಟಿ ಹತ್ಯೆಗೆ ಸ್ಕೆಚ್‌ : ಇನ್‌ಸ್ಟಾಗ್ರಾಂ ಪೋಸ್ಟರ್‌ನಿಂದ ಹುಟ್ಟಿದ ಅನುಮಾನ

ಹಂತಕರಿಗೆ ತಪ್ಪಿಸಿಕೊಳ್ಳಲು ಬುರ್ಖಾಧಾರಿ ಮಹಿಳೆಯರ ಸಹಾಯ? ಮಂಗಳೂರು: ನಗರದ ಬಜ್ಪೆ ಕಿನ್ನಿಪದವು ಬಳಿ ನಿನ್ನೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಹಂತಕರು ಬರ್ಬರವಾಗಿ ಹತ್ಯೆ ಮಾಡಿದ ಬಳಿಕ ಹಲವು ಬೆಳವಣಿಗೆಗಳು ನಡೆದಿದ್ದು, ಸುಹಾಸ್ ಹತ್ಯೆ ಬೆನ್ನಲ್ಲೇ ‘ಫಿನಿಶ್’ ಅಂತ ಸೋಶಿಯಲ್​ ಮೀಡಿಯಾದಲ್ಲಿ ಒಂದು ಪೋಸ್ಟ್ ವೈರಲ್​ ಆಗಿದ್ದು, ಸದ್ಯ ಸಾಕಷ್ಟು ಕುತೂಹಲ ಮತ್ತು ಚರ್ಚೆಗೆ ಗ್ರಾಸವಾಗಿದೆ. ಮಾರ್ಚ್ 31ರಂದೇ ಸುಹಾಸ್ ಶೆಟ್ಟಿ ಹತ್ಯೆಗೆ ಸ್ಕೆಚ್‌ ಹಾಕಲಾಗಿತ್ತಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಅಂದೇ ಟಾರ್ಗೆಟ್ ಕಿಲ್ಲರ್-03 ಎಂಬ ಇನ್‌ಸ್ಟಾಗ್ರಾಂ

ಮಾರ್ಚ್‌ನಲ್ಲೇ ಸುಹಾಸ್‌ ಶೆಟ್ಟಿ ಹತ್ಯೆಗೆ ಸ್ಕೆಚ್‌ : ಇನ್‌ಸ್ಟಾಗ್ರಾಂ ಪೋಸ್ಟರ್‌ನಿಂದ ಹುಟ್ಟಿದ ಅನುಮಾನ Read More »

ಮಂಗಳೂರು: ಉಳ್ಳಾಲದಲ್ಲಿ ಯುವಕನ ಮೇಲೆ ತಲವಾರಿನಿಂದ ಹಲ್ಲೆ

ಉಳ್ಳಾಲ: ನಿನ್ನೆ ರಾತ್ರಿ ಬಜಪೆ ಸಮೀಪ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿಯನ್ನು ಸಾಯಿಸಿದ ಹಿನ್ನೆಲೆಯಲ್ಲಿ ಮಂಗಳೂರು ಧಗಧಗಿಸುತ್ತಿರುವಾಗಲೇ ಸಮೀಪದ ಉಳ್ಳಾಲದಲ್ಲಿ ಇನ್ನೊಂದು ಮರಣಾಂತಿಕ ಹಲ್ಲೆ ಸಂಭವಿಸಿದೆ. ಯುವಕನ ಮೇಲೆ ತಂಡವೊಂದು ತಲವಾರಿನಿಂದ ದಾಳಿ ನಡೆಸಿದ ಪರಿಣಾಮ ಆತನಿಗೆ ಗಂಭೀರವಾದ ಗಾಯವಾಗಿದೆ. ಈ ಘಟನೆ ತೊಕ್ಕೊಟ್ಟು ಒಳಪೇಟೆ ಬಳಿ ನಡೆದಿರುವುದು ವರದಿಯಾಗಿದೆ. ಗಾಯಗೊಂಡವನನ್ನು ಅಳೇಕಲ ನಿವಾಸಿ ಫೈಝಲ್ ಎಂದು ಗುರುತಿಸಲಾಗಿದೆ. ಫೈಝಲ್ ಕಲ್ಲಾಪು ಮಾರುಕಟ್ಟೆಗೆ ಬರುತ್ತಿದ್ದ ವೇಳೆ ಒಳಪೇಟೆ ಬಳಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಮಂಗಳೂರು: ಉಳ್ಳಾಲದಲ್ಲಿ ಯುವಕನ ಮೇಲೆ ತಲವಾರಿನಿಂದ ಹಲ್ಲೆ Read More »

ಇಂದು ದ.ಕ ಬಂದ್‌, ಮಂಗಳೂರಿನಲ್ಲಿ ಬಸ್‌ಗೆ ಕಲ್ಲು ತೂರಾಟ

ಸುಹಾಸ್‌ ಶೆಟ್ಟಿ ಕೊಲೆಗೆ ಹಿಂದೂ ಸಂಘಟನೆಗಳಿಂದ ಆಕ್ರೋಶ ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಂದ್​​ಗೆ ವಿಶ್ವ ಹಿಂದೂ ಪರಿಷತ್ ಕರೆ ಕೊಟ್ಟಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೇರಲಾಗಿದೆ. ಮಂಗಳೂರಲ್ಲಿ ವಾಹನ ಸಂಚಾರ ಬಹುತೇಕ ಬಂದ್‌ ಆಗಿದೆ. ಅಂಗಡಿ ಮುಂಗಟ್ಟುಗಳು ಮುಚ್ಚಿವೆ. ಮಂಗಳೂರಿನಲ್ಲಿ ಸಂಚಾರ ಆರಂಭಿಸಿದ ಬಸ್‌ಗೆ ಕಲ್ಲು ತೂರಲಾಗಿದೆ. ಗುಂಪೊಂದು ಹಂಪನಕಟ್ಟೆ ಬಳಿ ಬಸ್‌ಗೆ ಕಲ್ಲು ತೂರಾಟ ನಡೆಸಿದ ಪರಿಣಾಮ ಬಸ್ಸಿನ ಮುಂಭಾಗದ

ಇಂದು ದ.ಕ ಬಂದ್‌, ಮಂಗಳೂರಿನಲ್ಲಿ ಬಸ್‌ಗೆ ಕಲ್ಲು ತೂರಾಟ Read More »

error: Content is protected !!
Scroll to Top