ಅಪರಾಧ

ಬೀಡಿಯ ತುಂಡು ನುಂಗಿ 10 ತಿಂಗಳ ಮಗು ಸಾವು

ತಂದೆ ಸೇದಿ ಎಸೆದಿದ್ದ ಬೀಡಿಯ ತುಂಡು ನುಂಗಿದ್ದ ಹಸುಳೆ ಮಂಗಳೂರು: ಬೀಡಿಯ ತುಂಡು ನುಂಗಿ 10 ತಿಂಗಳು ಪ್ರಾಯದ ಮಗುವೊಂದು ಸಾವನ್ನಪ್ಪಿರುವ ದಾರುಣ ಘಟನೆ ಮಂಗಳೂರು ಸಮೀಪ ಅಡ್ಯಾರ್‌ನಲ್ಲಿ ಸಂಭವಿಸಿದೆ. ಅಡ್ಯಾರ್‌ನಲ್ಲಿ ವಾಸವಿದ್ದ ಬಿಹಾರ ಮೂಲದ ದಂಪತಿಯ 10 ತಿಂಗಳ ಅನೀಶ್‌ ಕುಮಾರ್‌ ಸಾವನ್ನಪ್ಪಿರುವ ನತದೃಷ್ಟ ಮಗು. ಕಳೆದ ಶನಿವಾರ ಮಧ್ಯಾಹ್ನ 1.30ರ ವೇಳೆಗೆ ಮನೆಯಲ್ಲಿ ತಂದೆ ಸೇದಿ ಎಸೆದಿದ್ದ ಬೀಡಿಯ ತುಂಡನ್ನು ಮಗು ನುಂಗಿದೆ. ಅಸ್ವಸ್ಥಗೊಂಡ ಮಗುವನ್ನು ಸಂಜೆ ವೇಳೆಗೆ ವೆನ್ಲಾಕ್‌ ಆಸ್ಪತ್ರೆಗೆ ಕರೆತಂದಿದ್ದರು. ಆದರೆ […]

ಬೀಡಿಯ ತುಂಡು ನುಂಗಿ 10 ತಿಂಗಳ ಮಗು ಸಾವು Read More »

ಮಹಿಳೆಗೆ ಕಿರುಕುಳ : ಪ್ರಸಿದ್ಧ ದೇವಸ್ಥಾನದ ಅರ್ಚಕನ ಬಂಧನ

ಪೂಜೆಯ ನೆಪದಲ್ಲಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಅರ್ಚಕರು ಬೆಂಗಳೂರು: ಪೂಜೆ ಮಾಡಿಸುವ ನೆಪದಲ್ಲಿ ಬೆಂಗಳೂರಿನ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕೇರಳದ ದೇವಸ್ಥಾನದ ಅರ್ಚಕನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಇನ್ನೋರ್ವ ಆರೋಪಿ ಮುಖ್ಯ ಅರ್ಚಕ ತಲೆಮರೆಸಿಕೊಂಡಿದ್ದಾನೆ. ವಾಟ್ಸಪ್‌ನಲ್ಲಿ ಮಹಿಳೆಯ ನಗ್ನ ವಿಡಿಯೋ ರೆಕಾರ್ಡ್‌ ಮಾಡಿಕೊಂಡು ಕೇರಳ ತೃಶ್ಶೂರ್‌ನ ಪ್ರಸಿದ್ಧ ದೇವಾಲಯದ ಅರ್ಚಕರಿಬ್ಬರು ಮಹಿಳೆಯನ್ನು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದರು ಎಂದು ಬೆಳ್ಳಂದೂರು ಪೊಲೀಸರು ತಿಳಿಸಿದ್ದಾರೆ. ತೃಶ್ಶೂರ್‌ನ ಪ್ರಸಿದ್ಧ ಪೆರಿಗೊಟ್ಟುಕ್ಕಾರ ದೇವಾಲಯದ ಅರ್ಚಕ ಅರುಣ್ ಬಂಧಿತ ಆರೋಪಿ. ಮುಖ್ಯ

ಮಹಿಳೆಗೆ ಕಿರುಕುಳ : ಪ್ರಸಿದ್ಧ ದೇವಸ್ಥಾನದ ಅರ್ಚಕನ ಬಂಧನ Read More »

ಚಿಕ್ಕಪುತ್ತೂರು ನಿವಾಸಿ ರೇಷ್ಮಾ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ಚಿಕ್ಕಪುತ್ತೂರು ನಿವಾಸಿ ಚಿಂತನ್ ಎಂಬವರ ಪತ್ನಿ 7 ತಿಂಗಳ ಗರ್ಭಿಣಿ ರೇಷ್ಮಾ ಭಾನುವಾರ ರಾತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಚಿಕ್ಕಪುತ್ತೂರಿನಲ್ಲಿ ಬಾಡಿಗೆ ಮನೆಯಲ್ಲಿ ಚಿಂತನ್, ಅವರ ಪತ್ನಿ ಹಾಗು ಪುತ್ರಿ ವಾಸ್ತವ್ಯ ಹೊಂದಿದ್ದರು. 4 ವರ್ಷಗಳ ಹಿಂದೆಯಷ್ಟೆ ಚಿಂತನ್ ಅವರ ವಿವಾಹ ಸುರತ್ಕಲ್ ನ. ರೇಷ್ಮಾ ಅವರ ಜೊತೆ ನಡೆದಿತ್ತು. ಭಾನುವಾರ ರಾತ್ರಿ ರೇಷ್ಮಾ ಅವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿದ್ದಾರೆಂದು ತಿಳಿದು ಬಂದಿದೆ. ಸ್ಥಳಕ್ಕೆ ಪುತ್ತೂರು ಪೊಲೀಸರು

ಚಿಕ್ಕಪುತ್ತೂರು ನಿವಾಸಿ ರೇಷ್ಮಾ ನೇಣು ಬಿಗಿದು ಆತ್ಮಹತ್ಯೆ Read More »

ಸ್ಮಾರ್ಟ್‌ ಸಿಟಿ ಯೋಜನೆ ಹೆಸರಲ್ಲಿ 70 ಸಾವಿರ ಜನರಿಗೆ 2,676 ಕೋಟಿ ರೂ. ವಂಚಿಸಿದ ಸಹೋದರರು

ಹೂಡಿಕೆ ಮಾಡಿದರೆ ಲಾಭ, ನಿವೇಶನ ನೀಡುವ ನೆಪವೊಡ್ಡಿ ಭಾರಿ ಮೋಸ ನವದೆಹಲಿ:‌ ‘ಧೋಲೇರಾ ಸ್ಮಾರ್ಟ್ ಸಿಟಿ’ ಯೋಜನೆ ಹೆಸರಿನಲ್ಲಿ 70,000 ಜನರಿಗೆ ಹೆಚ್ಚಿನ ಲಾಭದ ಆಮಿಷವೊಡ್ಡಿ ಸುಮಾರು 2,676 ಕೋಟಿ ರೂ. ವಂಚಿಸಿದ ರಾಜಸ್ಥಾನದ ಖತರ್ನಾಕ್‌ ಸಹೋದರರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸುಭಾಷ್ ಬಿಜಾರಾನಿ ಮತ್ತು ರಣವೀರ್ ಬಿಜಾರಾನಿ ಎಂದು ಗುರುತಿಸಲಾಗಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಇಬ್ಬರು ತಲೆಮರೆಸಿಕೊಂಡಿದ್ದರು. ಆದರೆ ಪೊಲೀಸರು ಇಬ್ಬರು ವಂಚಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ರಣವೀರ್ ಬಿಜಾರಾನಿ 2014ರಲ್ಲಿ ಮೊದಲ

ಸ್ಮಾರ್ಟ್‌ ಸಿಟಿ ಯೋಜನೆ ಹೆಸರಲ್ಲಿ 70 ಸಾವಿರ ಜನರಿಗೆ 2,676 ಕೋಟಿ ರೂ. ವಂಚಿಸಿದ ಸಹೋದರರು Read More »

ಲಾಡ್ಜಿನಲ್ಲಿ ವೈಶ್ಯವಾಟಿಕೆ | ಪೊಲೀಸರಿಂದ ದಾಳಿ : ಇಬ್ಬರ ಬಂಧನ

ಬೆಳ್ತಂಗಡಿ : ಉಜಿರೆಯ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಶಂಕೆ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್‍ ಸ್ಪೆಕ್ಟರ್ ಸುಬ್ಬಾಪುರ್ ಮಠ ನೇತೃತ್ವದಲ್ಲಿ ಬೆಳ್ತಂಗಡಿ ಮತ್ತು ಉಜಿರೆಯಲ್ಲಿರುವ ಲಾಡ್ಜ್ ಗಳ ಮೇಲೆ ಶನಿವಾರ ದಾಳಿ ನಡೆಸಿ ಪರಿಶೀಲಿಸಿದ್ದಾರೆ. ಈ ಸಂದರ್ಭ ಉಜಿರೆಯ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸಲು ಯುವತಿಯನ್ನು ಕರೆತಂದಿದ್ದು ಬಯಲಾಗಿದ್ದು. ಓರ್ವ ಯುವತಿಯನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ ಎನ್ನಲಾಗಿದೆ. ಲಾಡ್ಜ್ ನ ಮ್ಯಾನೇಜರ್ ಬೆಳ್ತಂಗಡಿ ತಾಲೂಕಿನ ಸಾವ್ಯ ಗ್ರಾಮದ ಬಾರೆಗುಡ್ಡೆ ಸತೀಶ್ ಪೂಜಾರಿ (49) ಮತ್ತು

ಲಾಡ್ಜಿನಲ್ಲಿ ವೈಶ್ಯವಾಟಿಕೆ | ಪೊಲೀಸರಿಂದ ದಾಳಿ : ಇಬ್ಬರ ಬಂಧನ Read More »

ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಹತ್ಯೆ | ತನಿಖೆ ಕೈಗೆತ್ತಿಕೊಂಡ ಎನ್‍ ಐಎ ತಂಡ ಮಂಗಳೂರಿಗೆ

ಮಂಗಳೂರು: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಎನ್‌ಐಎ ಅಧಿಕಾರಿಗಳ ತಂಡ ಮಂಗಳೂರಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಡಿಎಸ್ಪಿ ಪವನ್ ಕುಮಾರ್ ನೇತೃತ್ವದ ಎನ್‌ಐಎ ತಂಡ ನಡೆಸುತ್ತಿದೆ. ಅದರಂತೆ ಇಂದು ಬೆಂಗಳೂರಿನಿಂದ ಆಗಮಿಸಿದ ತಂಡ ಮಂಗಳೂರು ಸಿಸಿಬಿ ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕುತ್ತಿವೆ.

ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಹತ್ಯೆ | ತನಿಖೆ ಕೈಗೆತ್ತಿಕೊಂಡ ಎನ್‍ ಐಎ ತಂಡ ಮಂಗಳೂರಿಗೆ Read More »

ಚೂರಿ ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾದ ಯುವಕ ಮೃತ್ಯು

ಮಂಗಳೂರು: ನಗರದ ಯೆಯ್ಯಾಡಿಯ ಬಾ‌ರ್ ಒಂದರಲ್ಲಿ ಚೂರಿ ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕೌಶಿಕ್ (32) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಜೂ,6 ರಂದು ಎರಡು ಗುಂಪುಗಳ ಮಧ್ಯೆ ಜಗಳ ಉಂಟಾಗಿ ವೇಳೆಗೆ ಚೂರಿ ಇರಿತವಾಗಿತ್ತು. ಆರೋಪಿಗಳು ಮೃತಪಟ್ಟ ಯುವಕ ಕೌಶಿಕ್ ಪರಿಚಿತರೇ ಆಗಿದ್ದರು. ಒಂದು ತಿಂಗಳ ಹಿಂದೆ ಇವರ ನಡುವೆ ಯಾವುದೋ ಕಾರಣಕ್ಕೆ ಮಾತಿನ ಚಕಮಕಿ ನಡೆದಿತ್ತು. ಇದೇ ವಿಚಾರದಲ್ಲಿ ಜೂನ್ 6ರಂದು ಯೆಯ್ಯಾಡಿಯ ಬಾರ್‌ನಲ್ಲಿದ್ದಾಗ ಪರಸ್ಪರ ಬೈದಾಡಿಕೊಂಡಿದ್ದರು. ಇದೇ ವೇಳೆ ಬಿಜೈ ನಿವಾಸಿಗಳಾದ ಬ್ರಿಜೇಶ್ ಮತ್ತು ಗಣೇಶ್

ಚೂರಿ ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾದ ಯುವಕ ಮೃತ್ಯು Read More »

ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುರುಳರು

ಮಧ್ಯರಾತ್ರಿ ಹಟ್ಟಿಯಲ್ಲಿದ್ದ ಹಸುವಿಗೆ ಹಿಂಸೆ ಬೆಂಗಳೂರು: ಬೆಂಗಳೂರು ಬಳಿಕ ಇದೀಗ ಬಾಗಲಕೋಟೆ ಜಿಲ್ಲೆಯಲ್ಲೂ ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಘಟನೆ ಸಂಭವಿಸಿದೆ. ಕುಳಗೇರಿ ಕ್ರಾಸ್‌ ಬಳಿ ಮನೆಯ ಹಟ್ಟಿಯಲ್ಲಿದ್ದ ಹಸುವಿನ ಕೆಚ್ಚಲು ಕತ್ತರಿಸಿ ದುರುಳರು ವಿಕೃತಿ ಮೆರೆದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಕುಳಗೇರಿ ಗ್ರಾಮದ ಭರಮಪ್ಪ ಕುರಿ ಎಂಬವರು ಸಾಕಿರುವ ಹಸುವಿನ ಕೆಚ್ಚಲನ್ನು ದುರುಳರು ಶುಕ್ರವಾರ ಕತ್ತರಿಸಿದ್ದಾರೆ. ಮಧ್ಯರಾತ್ರಿ ಹಸುವಿಗೆ ಮೇವು ಹಾಕಿ ಮನೆಯವರು ತೆರಳಿದ್ದಾರೆ. ಬಳಿಕ ಈ ಕೃತ್ಯ ಎಸಗಿದ್ದಾರೆ. ಹಸುವಿನ ಕೆಚ್ಚಲಿನಿಂದ

ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುರುಳರು Read More »

ರಂಜಿತಾ ಸಾವನ್ನು ಅಣಕಿಸಿದ್ದ ಡೆಪ್ಯುಟಿ ತಹಸೀಲ್ದಾರ್ ಅಮಾನತು

ವಿಮಾನ ದುರಂತದಲ್ಲಿ ಸಾವಿಗೀಡಾದ ರಂಜಿತಾ ಬಗ್ಗೆ ವ್ಯಂಗ್ಯವಾಗಿ ಕಮೆಂಟ್‌ ಕಾಸರಗೋಡು: ಅಹಮದಾಬಾದ್‌ ವಿಮಾನ ದುರಂತದಲ್ಲಿ ಕೇರಳದ ನರ್ಸ್‌ ರಂಜಿತಾ ಅವರ ಸಾವನ್ನು ವ್ಯಂಗ್ಯಮಾಡಿ ಅಣಕಿಸಿದ್ದ ಕಾಸರಗೋಡು ಜಿಲ್ಲೆಯ ವೆಳ್ಳರಿಕುಂಡ್ ತಾಲೂಕಿನ ಡೆಪ್ಯುಟಿ ತಹಸೀಲ್ದಾರ್ ಎ.ಪವಿತ್ರನ್ ಅವರನ್ನು ಕೇರಳ ಸರ್ಕಾರ ಅಮಾನತು ಮಾಡಿದೆ. ಕೇರಳ ಸರ್ಕಾರಕ್ಕೆ ರಜೆ ಹಾಕಿ ಹೋಗಿದ್ದಕ್ಕೆ ರಂಜಿತಾಗೆ ಸಾವು ಎಂದು ಸೋಷಿಯಲ್‌ ಮೀಡಿಯಾದಲ್ಲಿ ಪವಿತ್ರನ್ ವ್ಯಂಗ್ಯವಾಗಿ ಕಮೆಂಟ್ ಹಾಕಿದ್ದರು. ಇನ್ನೊಂದು ಪೋಸ್ಟ್‌ ಮಾಡಿ ಆಕೆ ಇನ್ನೂ ಎತ್ತರಕ್ಕೇರಲಿ ಎಂದು ಪವಿತ್ರನ್‌ ಕಮೆಂಟ್‌ ಮಾಡಿದ್ದರು. ಪವಿತ್ರನ್‌

ರಂಜಿತಾ ಸಾವನ್ನು ಅಣಕಿಸಿದ್ದ ಡೆಪ್ಯುಟಿ ತಹಸೀಲ್ದಾರ್ ಅಮಾನತು Read More »

ದೈವ ನರ್ತಕನ ಹತ್ಯೆ : ಆರೋಪಿ ಚಿದಾನಂದ ಬಂಧನ

ಮುಳ್ಳೇರಿಯ: ಅದೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡೂರು ಉರುಡೂರು ಚಂದನಕ್ಕಾಡಿನ ದೈವ ಕಲಾವಿದ ಟಿ. ಸತೀಶನ್ ಯಾನೆ ಬಿಜು (46) ಅವರ ಸಾವು ಕೊಲೆಯೆಂದು ತನಿಖೆಯಲ್ಲಿ ತಿಳಿದುಬಂದಿದ್ದು, ಆರೋಪಿಯಾದ ಸ್ನೇಹಿತ ಚಿದಾನಂದನನ್ನು (32) ಪೊಲೀಸರು ಬಂಧಿಸಿದ್ದಾರೆ. ಚೋಮಣ್ಣ ಎಂಬವರ ಮನೆಯಲ್ಲಿ ಜೂ.9 ರಂದು ಚಿದಾನಂದ ಹಾಗೂ ಸತೀಶನ್‍ ಇಬ್ಬರು ಮದ್ಯ ಸೇವಿಸುತ್ತಿದ್ದರು. ಈ ನಡುವೆ ಇಬ್ಬರ ನಡುವೆ ಜಗಳ ಉಂಟಾಗಿದೆ. ಈ ಸಂದರ್ಭ ಚಿದಾನಂದ ಸತೀಶನ್ ಅವರನ್ನು ಕೆಳಗೆ ತಳ್ಳಿದ್ದಾನೆ. ಸತೀಶನ್‍ ತಲೆಗೆ ಗಾಯವಾಗಿದೆ.  ಸತೀಶನ್‍ ಮನೆಗೆ

ದೈವ ನರ್ತಕನ ಹತ್ಯೆ : ಆರೋಪಿ ಚಿದಾನಂದ ಬಂಧನ Read More »

error: Content is protected !!
Scroll to Top