ಅಪರಾಧ

ಏರ್‌ ಇಂಡಿಯಾ ವಿಮಾನಕ್ಕೆ ಬಾಂಬ್‌ ಬೆದರಿಕೆ : ತುರ್ತು ಭೂ ಸ್ಪರ್ಶ

ಥಾಯ್ಲೆಂಡ್‌ನ ಫುಕೆಟ್ ದ್ವೀಪದಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ನವದೆಹಲಿ : ಗುರುವಾರ ಅಹಮದಾಬಾದ್‌ನಲ್ಲಿ ಸಂಭವಿಸಿದ ಭೀಕರ ವಿಮಾನ ದುರಂತಕ್ಕೆ ಇನ್ನೂ ದೇಶ ಮಮ್ಮಲ ಮರುಗುತ್ತಾ ಇರುವಾಗಲೇ ಥಾಯ್ಲೆಂಡ್‌ನ ಫುಕೆಟ್ ದ್ವೀಪದಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ.ಥಾಯ್ಲೆಂಡ್‌ನಲ್ಲಿ ತುರ್ತು ಭೂಸ್ಪರ್ಶಕ್ಕೆ ಮನವಿ ಮಾಡಲಾಗಿದ್ದು, ಈ ಕಾರಣದಿಂದ ತಕ್ಷಣ ಭೂಸ್ಪರ್ಶಕ್ಕೆ ಮನವಿ ಮಾಡಲಾಗಿದೆ ಎಂದು ಫುಕೆಟ್ ವಿಮಾನ ನಿಲ್ದಾಣದ ಅಧಿಕಾರಿಗಳನ್ನು ಹೇಳಿದ್ದಾರೆ. ಇದೀಗ ವಿಮಾನ AI 379 ಲ್ಯಾಂಡ್ ಆಗಿದ್ದು, ಹಾರಾಟ […]

ಏರ್‌ ಇಂಡಿಯಾ ವಿಮಾನಕ್ಕೆ ಬಾಂಬ್‌ ಬೆದರಿಕೆ : ತುರ್ತು ಭೂ ಸ್ಪರ್ಶ Read More »

ಅಶ್ರಫ್‌, ಅಬ್ದುಲ್‌ ರಹಿಮಾನ್‌ ಹತ್ಯೆ ಪ್ರಕರಣಗಳ ಎನ್‌ಐಎ ತನಿಖೆ?

ಎನ್‌ಐಎಗೊಪ್ಪಿಸುವ ಕುರಿತು ಸ್ಪೀಕರ್‌ ಯು.ಟಿ.ಖಾದರ್‌ ಮಾತುಕತೆ ಮಂಗಳೂರು : ಮಂಗಳೂರು ಸಮೀಪ ಕುಡುಪುವಿನಲ್ಲಿ ನಡೆದ ಕೇರಳ ವಯನಾಡು ಮೂಲದ ಅಶ್ರಫ್ ಗುಂಪು ಹತ್ಯೆ ಹಾಗೂ ಕೊಳತ್ತಮಜಲಿನಲ್ಲಿ ನಡೆದ ಅಬ್ದುಲ್ ರಹಿಮಾನ್‌ ಹತ್ಯೆ ಪ್ರಕರಣಗಳ ತನಿಖೆಯನ್ನೂ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವಹಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆಯನ್ನು ಎನ್‌ಐಎ ತನಿಖೆಗೆ ಕೇಂದ್ರ ಸರ್ಕಾರ ಒಪ್ಪಿಸಿದ ಬಳಿಕ ಅಶ್ರಫ್‌ ಮತ್ತು ಅಬ್ದುಲ್‌ ರಹಿಮಾನ್‌ ತನಿಖೆಯನ್ನೂ ಎನ್‌ಐಎ ಮಾಡಲಿ ಎಂಬ ಒತ್ತಾಯ ಕೇಳಿ ಬಂದಿತ್ತು.

ಅಶ್ರಫ್‌, ಅಬ್ದುಲ್‌ ರಹಿಮಾನ್‌ ಹತ್ಯೆ ಪ್ರಕರಣಗಳ ಎನ್‌ಐಎ ತನಿಖೆ? Read More »

ಮಹಿಳೆಗೆ ಕಿರುಕುಳ : ಆರೋಪಿ ಬಂಧನ

ಬಂಟ್ವಾಳ: ಪತಿಯ ಜತೆ ಪ್ರಯಾಣಿಸುತ್ತಿದ್ದ ಮಹಿಳೆಗೆ ಆರೋಪಿಯೋರ್ವ ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ದೈಹಿಕ ಕಿರುಕುಳ ನೀಡಿದ ಘಟನೆ ಬಂಟ್ವಾಳ ಬೈಪಾಸ್ ಜಂಕ್ಷನ್‌ನಲ್ಲಿ ನಡೆದಿದೆ. ಅಬೂಬಕ್ಕರ್ ಎಂಬಾತ ಮಹಿಳೆಗೆ ಕಿರುಕುಳ ನೀಡಿದ ಆರೋಪಿ. ಉಜಿರೆಯಿಂದ ಮಂಗಳೂರಿನತ್ತ ಪ್ರಯಾಣಿಸುತ್ತಿದ್ದ ಮಹಿಳೆಯ ಜತೆ ಆತ ಅಸಭ್ಯವಾಗಿ ವರ್ತಿಸಿದಲ್ಲದೇ ದೈಹಿಕ ಕಿರುಕುಳ ನೀಡಿದ್ದಾನೆ. ಸಂತ್ರಸ್ತ ಮಹಿಳೆ ನೀಡಿದ ದೂರಿನಂತೆ ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಮಹಿಳೆಗೆ ಕಿರುಕುಳ : ಆರೋಪಿ ಬಂಧನ Read More »

ಪಾರ್ಟಿ ಮಾಡಲು ಅನುಮತಿ ಪಡೆಯಬೇಕೆಂದು ಗೊತ್ತಿರಲಿಲ್ಲ : ಮಂಗ್ಲಿ ಗೋಳಾಟ

ಬರ್ತ್‌ಡೇ ಪಾರ್ಟಿಯಲ್ಲಿ ಮದ್ಯ, ಮಾದಕ ವಸ್ತು ಬಳಸಿದ ಪ್ರಕರಣ ಹೈದರಾಬಾದ್‌: ಬರ್ತ್‌ಡೇ ಪಾರ್ಟಿಯಲ್ಲಿ ಮದ್ಯ ಮತ್ತು ಡ್ರಗ್ಸ್‌ ಪೂರೈಸಿರುವ ಆರೋಪಕ್ಕೆ ಒಳಗಾಗಿರುವ ತೆಲುಗಿನ ಪ್ರಸಿದ್ಧ ಗಾಯಕಿ ಮಂಗ್ಲಿ ಯಾನೆ ಸತ್ಯವತಿ ರಾಠೋಡ್‌, ಪಾರ್ಟಿಯಲ್ಲಿ ಮದ್ಯ ಸೇವಿಸಲು ಪೊಲೀಸರ ಅನುಮತಿ ಪಡೆಯಬೇಕೆಂದು ತನಗೆ ಗೊತ್ತಿರಲಿಲ್ಲ, ಇದು ಅರಿವಿಲ್ಲದೆ ಆಗಿರುವ ತಪ್ಪು ಎಂದು ಹೇಳಿಕೊಂಡಿದ್ದಾರೆ. ಪ್ರಸಿದ್ಧ ಜಾನಪದ ಗಾಯಕಿಯಾಗಿರುವ ಮಂಗ್ಲಿ ತೆಲುಗು ಮತ್ತು ಕನ್ನಡದ ಅನೇಕ ಸಿನಿಮಾಗಳಿಗೂ ಹಾಡಿದ್ದಾರೆ. ವಿಶಿಷ್ಟವಾದ ಧ್ವನಿ ಮತ್ತು ಜಾನಪದ ಶೈಲಿಯ ನೃತ್ಯಗಳಿಂದ ಅವರು ಸೋಷಿಯಲ್‌

ಪಾರ್ಟಿ ಮಾಡಲು ಅನುಮತಿ ಪಡೆಯಬೇಕೆಂದು ಗೊತ್ತಿರಲಿಲ್ಲ : ಮಂಗ್ಲಿ ಗೋಳಾಟ Read More »

ಕೋಮು ನಿಗ್ರಹ ಪಡೆ ನಾಳೆ ಉದ್ಘಾಟನೆ

ಸುಧೀರ್‌ ಕುಮಾರ್‌ ರೆಡ್ಡಿ ಮುಖ್ಯಸ್ಥ; ಮಂಗಳೂರಲ್ಲಿ ಕೇಂದ್ರ ಕಚೇರಿ ಬೆಂಗಳೂರು: ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಪದೇಪದೆ ಸಂಭವಿಸುತ್ತಿರುವ ಕೋಮು ಗಲಭೆಗಳನ್ನು ನಿಗ್ರಹಿಸುವ ಸಲುವಾಗಿ ಸರ್ಕಾರ ರಚಿಸಿರುವ ವಿಶೇಷ ಕೋಮು ನಿಗ್ರಹ ಪಡೆಯ ಉದ್ಘಾಟನೆ ನಾಳೆ ನೆರವೇರಲಿದೆ. ಗೃಹ ಸಚಿವ ಜಿ.ಪರಮೇಶ್ವರ್‌ ಉದ್ಘಾಟಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಭಾಗವಹಿಸಲಿದ್ದಾರೆ. ಕೋಮುಗಲಭೆ ಪ್ರಚೋದಿಸುವ ಸರಣಿ ಹತ್ಯೆಗಳ ತಡೆಗೆ ರಾಜ್ಯ ಸರ್ಕಾರ ಈ ವಿಶೇಷ ಪಡೆಯನ್ನು ರಚಿಸಿದೆ. ವಿಶೇಷ ಕಾರ್ಯಪಡೆ ಘಟಕಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ

ಕೋಮು ನಿಗ್ರಹ ಪಡೆ ನಾಳೆ ಉದ್ಘಾಟನೆ Read More »

ಬಾವಿಯಲ್ಲಿ ವ್ಯಕ್ತಿಯೊಬ್ಬರ ಶವ ಕೊಳೆತ ಸ್ಥಿತಿಯಲ್ಲಿ  ಪತ್ತೆ

ಸುಳ್ಯ: ಸುಳ್ಯ ತಾಲೂಕಿನ ಬೊಮ್ಮಾರಿನ ಬಾವಿಯೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾದ ಘಟನೆ ನಡೆದಿದೆ. ಮರ್ಕಂಜದ ಬೊಮ್ಮಾರು ನಿವಾಸಿ ಶೀನ ಪೂಜಾರಿ (65) ಅವರ ಶವ ಕೊಳೆತ ಸ್ಥಿತಿಯಲ್ಲಿ  ಪತ್ತೆಯಾಗಿದೆ. ಕೆಲವು ವರ್ಷಗಳಿಂದ ಒಂಟಿಯಾಗಿ ವಾಸಿಸುತ್ತಿದ್ದ ಅವರು ಕಳೆದ ಏಳೆಂಟು ದಿನಗಳಿಂದ ಕಾಣಿಸುತ್ತಿರಲಿಲ್ಲ. ಸೋಮವಾರ ಪರಿಸರದಲ್ಲಿ ಕೊಳೆತ ವಾಸನೆ ಬರುತ್ತಿದ್ದುದರಿಂದ ಹುಡುಕಾಡಿದಾಗ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ. ಶೀನ ಅವರು ಕೆಲವು ವರ್ಷಗಳ ಹಿಂದೆ ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿದ ಆರೋಪದಲ್ಲಿ ಶಿಕ್ಷೆಗೊಳಗಾಗಿ ಜೈಲುವಾಸ ಅನುಭವಿಸಿ ಬಂದಿದ್ದರು. ಪತ್ನಿಯನ್ನು

ಬಾವಿಯಲ್ಲಿ ವ್ಯಕ್ತಿಯೊಬ್ಬರ ಶವ ಕೊಳೆತ ಸ್ಥಿತಿಯಲ್ಲಿ  ಪತ್ತೆ Read More »

ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ : ಮಾಜಿ ಶಾಸಕ ಮೊಯ್ದೀನ್‍ ಬಾವಾ ಸಹಿತ ಸಹಚರರ ವಿರುದ್ಧ ಪ್ರಕರಣ ದಾಖಲು

ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನಲೆಯಲ್ಲಿ ಮಾಜಿ ಶಾಸಕ ಮೊಯ್ದೀನ್‍ ಬಾವಾ ಹಾಗೂ ಸಹಚರರ ವಿರುದ್ಧ ಪ್ರಕರಣ ದಾಖಲಾಗಿದೆ. ಜೂಊ.9  ರಂದು ರಾತ್ರಿ ಮಾಜಿ ಶಾಸಕರಾದ ಮೊಯಿದ್ದೀನ್ ಬಾವಾ ರವರು ಮತ್ತು ಅವರ ಇಬ್ಬರು ಸಹಚರರೊಂದಿಗೆ ಕಾಮಗಾರಿಯ ಬಿಲ್ಲನ್ನು ಮಂಜೂರು ಮಾಡುವ ವಿಷಯದ ಕುರಿತು ಎನ್.ಎಂ.ಪಿ.ಎ ಕಛೇರಿಯ ಡೆಪ್ಯೂಟಿ ಚೇರ್ಪಸ್ರನ್ ರವರ ಕಛೇರಿಗೆ ನುಗ್ಗಿ 15 ನಿಮಿಷ ಕಾಲ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಅವರನ್ನು ಕಛೇರಿಯಿಂದ ಹೊರಗೆ ಹೋಗಲು ಅವಕಾಶ ನೀಡದೇ, ಅವರನ್ನು ತಡೆದು ನಿಲ್ಲಿಸಿದ

ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ : ಮಾಜಿ ಶಾಸಕ ಮೊಯ್ದೀನ್‍ ಬಾವಾ ಸಹಿತ ಸಹಚರರ ವಿರುದ್ಧ ಪ್ರಕರಣ ದಾಖಲು Read More »

ಎಂಟು ಕಡೆ ಇ.ಡಿ. ದಾಳಿ: ಸಂಸದ, ಮೂವರು ಶಾಸಕರ ಮನೆ ಪರಿಶೋಧನೆ

ವಾಲ್ಮೀಕಿ ನಿಗಮದ ಹಣವನ್ನು ಚುನಾವಣೆ ಗೆಲ್ಲಲು ಬಳಸಿದ ಆರೋಪದ ಹಿನ್ನೆಲೆಯಲ್ಲಿ ದಾಳಿ ಬೆಂಗಳೂರು : ವಾಲ್ಮೀಕಿ ನಿಗಮದಲ್ಲಿ ಸಂಭವಿಸಿರುವ ಬಹುಕೋಟಿ ಭ್ರಷ್ಟಾಚಾರ ಸಂಬಂಧ ಜಾರಿ ನಿರ್ದೇಶನಾಲಯ ಇಂದು ಬೆಳಗ್ಗೆ ಬಳ್ಳಾರಿಯ ಕಾಂಗ್ರೆಸ್‌ ಸಂಸದ ಇ.ತುಕರಾಂ ಮತ್ತು ಬಳ್ಳಾರಿ ಭಾಗದ ಮೂವರು ಶಾಸಕರು ಸೇರಿದಂತೆ ಒಟ್ಟು ಕಡೆ ದಾಳಿ ನಡೆಸಿದೆ. ಬಳ್ಳಾರಿ ಚುನಾವಣೆಗೆ ವಾಲ್ಮೀಕಿ ನಿಗಮದ 21 ಕೋಟಿ ರೂ. ಬಳಸಿದ ಆರೋಪದಲ್ಲಿ ಈ ದಾಳಿಯಾಗಿದ್ದು, ಸಂಸದ ತುಕಾರಾಂ ಅವರನ್ನು ಇಡಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಮುಡಾ

ಎಂಟು ಕಡೆ ಇ.ಡಿ. ದಾಳಿ: ಸಂಸದ, ಮೂವರು ಶಾಸಕರ ಮನೆ ಪರಿಶೋಧನೆ Read More »

ಬಳ್ಳಾರಿಯ ಕಾಂಗ್ರೆಸ್‌ ಸಂಸದ ತುಕರಾಂ ಇ.ಡಿ. ವಶ?

ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ದಾಳಿ ಬೆಂಗಳೂರು: ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಬೆಳ್ಳಂಬೆಳಗ್ಗೆ ಕಾಂಗ್ರೆಸ್‌ಗೆ ಜಾರಿ ನಿರ್ದೇಶನಾಲಯ ಭಾರಿ ದೊಡ್ಡ ಶಾಕ್‌ ನೀಡಿದೆ. ಕಾಂಗ್ರೆಸ್‌ ಸಂಸದ ತುಕರಾಮ್‌ ಮತ್ತು ಮೂವರು ಶಾಸಕರ ಮನೆ ಮೇಲೆ ಇ.ಡಿ. ದಾಳಿಯಾಗಿದೆ. ತುಕರಾಂ ಅವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಬಂದಿದೆ. ಬಳ್ಳಾರಿ ಚುನಾವಣೆಗೆ 21 ಕೋಟಿ ರೂ. ಬಳಸಿದ ಆರೋಪ ಸಂಸದ ತುಕಾರಾಂ ಮೇಲಿದೆ. ಇದು ವಾಲ್ಮೀಕಿ ನಿಗಮದ ಹಣ ಎನ್ನಲಾಗಿದೆ.

ಬಳ್ಳಾರಿಯ ಕಾಂಗ್ರೆಸ್‌ ಸಂಸದ ತುಕರಾಂ ಇ.ಡಿ. ವಶ? Read More »

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಇಂದಿನಿಂದ ರನ್ಯಾ ರಾವ್‌ಗೆ ಐಟಿ ಡ್ರಿಲ್‌

ಜೈಲಿನಲ್ಲಿರುವ ರನ್ಯಾಳನ್ನು ತೀವ್ರ ವಿಚಾರಣೆಗೊಳಪಡಿಸಲಿರುವ ಐಟಿ ಇಲಾಖೆ ಬೆಂಗಳೂರು : ಕನ್ನಡ ನಟಿ ರನ್ಯಾ ರಾವ್‌ ಒಳಗೊಂಡಿರುವ ದೇಶಾದ್ಯಂತ ಸಂಚಲನ ಉಂಟು ಮಾಡಿದ್ದಚಿನ್ನ ಕಳ್ಳ ಸಾಗಣೆ ಪ್ರಕರಣದ ತನಿಖೆಗೆ ಈಗ ಆದಾಯ ಕರ ಇಲಾಖೆಯೂ ಮುಂದಾಗಿದೆ. ಈಗಾಗಲೇ ಜಾರಿ ನಿರ್ದೇಶನಾಲಯ, ಸಿಬಿಐ ಮತ್ತು ಪೊಲೀಸರು ಬೇರೆ ಬೇರೆ ಆಯಾಮಗಳಲ್ಲಿ ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ನಾಲ್ಕು ತಿಂಗಳ ಹಿಂದೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳ ಸಾಗಾಟ ಮಾಡುವಾಗ ಸಿಕ್ಕಿಬಿದ್ದಿರುವ ರನ್ಯಾ ರಾವ್‌ ಈಗಲೂ ಜೈಲಿನಲ್ಲಿ ಇದ್ದಾಳೆ.

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಇಂದಿನಿಂದ ರನ್ಯಾ ರಾವ್‌ಗೆ ಐಟಿ ಡ್ರಿಲ್‌ Read More »

error: Content is protected !!
Scroll to Top