ಅಪರಾಧ

ಹಿಂದೂ ದ್ವೇಷದ ಪೋಸ್ಟ್‌ ಹಾಕಿದ ಮಂಗಳೂರಿನ ವೈದ್ಯೆ ವಿರುದ್ಧ ಎಫ್‌ಐಆರ್‌

ನೌಕರಿಯಿಂದ ವಜಾಗೊಳಿಸಿದ ಹೈಲ್ಯಾಂಡ್‌ ಆಸ್ಪತ್ರೆ ಮಂಗಳೂರು : ಪಹಲ್ಗಾಮ್‌ ಉಗ್ರ ದಾಳಿಯ ಬಳಿಕ ಸೋಷಿಯಲ್‌ ಮೀಡಿಯಾದಲ್ಲಿ ವಿವಾದಾತ್ಮಕ ಪೋಸ್ಟ್‌ ಒಂದನ್ನು ಹಾಕಿದ್ದ ಮಂಗಳೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯ ವೈದ್ಯೆಯನ್ನು ನೌಕರಿಯಿಂದ ವಜಾ ಮಾಡಲಾಗಿದೆ. ಡಾ.ಅಫೀಫ ಫಾತಿಮಾ ಎಂಬಾಕೆ ಜಮ್ಮು ಕಾಶ್ಮೀರದ ಪಹಲ್ಗಾಮ್ ದಾಳಿ ನಂತರ ಭಾರತ ಹಾಗೂ ಪಾಕಿಸ್ಥಾನ ಮಧ್ಯೆ ಉದ್ವಿಗ್ನ ಪರಿಸ್ಥಿತಿ ಇರುವ ಸಂದರ್ಭದಲ್ಲಿಯೇ ʼಕಾಪಾಡಿ, ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ. ಹೌದು ನಾನು ಭಾರತೀಯಳು, ಹೌದು ನಾನು ಭಾರತವನ್ನು ದ್ವೇಷಿಸುತ್ತೇನೆ’ ಎಂದು ಸೋಷಿಯಲ್‌ […]

ಹಿಂದೂ ದ್ವೇಷದ ಪೋಸ್ಟ್‌ ಹಾಕಿದ ಮಂಗಳೂರಿನ ವೈದ್ಯೆ ವಿರುದ್ಧ ಎಫ್‌ಐಆರ್‌ Read More »

ಕಾರಿನಲ್ಲೇ ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ

ಕಾರ್ಕಳ : ಮಂಗಳೂರಿನಲ್ಲಿ ವಾಸವಿದ್ದ ಮೂಲತಃ ಕಾರ್ಕಳದವರಾದ ಉದ್ಯಮಿ ದಿಲೀಪ್‌ ಎನ್‌.ಆರ್‌. ಎಂಬವರು ಮಂಗಳವಾರ ನಸುಕಿನ ಹೊತ್ತು ಕಾರ್ಕಳದ ನಿಟ್ಟೆ ಸಮೀಪ ಕಾರಿನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಸಂಭವಿಸಿದೆ. ಕಾರ್ಕಳ ಪುರಸಭೆಯ ಮಾಜಿ ಉಪಾಧ್ಯಕ್ಷರಾಗಿದ್ದರು.ವಾರ ನಸುಕಿನ ಹೊತ್ತು ಕಾರ್ಕಳದ ನಿಟ್ಟೆ ಸಮೀಪ ಕಾರಿನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಸಂಭವಿಸಿದೆ. ಮಂಗಳೂರಿನಲ್ಲಿ ವಾಸವಿದ್ದ ದಿಲೀಪ್‌ ಎನ್‌.ಆರ್‌. ಅವರು ನಿನ್ನೆ ರಾತ್ರಿ ಅಲ್ಲಿಂದ ತನ್ನ ಕ್ವಿಡ್‌ ಕಾರಿನಲ್ಲಿ ಹೊರಟವರು ನಿಟ್ಟೆ ದೂಪಕಟ್ಟೆಯ

ಕಾರಿನಲ್ಲೇ ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ Read More »

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ | ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ ಆರೋಗ್ಯಾಧಿಕಾರಿ ಡಾ.ದೀಪಕ್‍ ರೈ

ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಸಾರ್ವಜನಿಕರಿಂದ ಪದೇ ಪದೇ ಆಗುತ್ತಿರುವ ತೊಂದರೆಯ ನಿಟ್ಟಿನಲ್ಲಿ  ಆಸ್ಪತ್ರೆಯ ಪ್ರಮುಖ ಬಾಗಿಲುಗಳನ್ನು ಮುಚ್ಚಲಾಗುವುದು. ಅಲ್ಲದೆ ನಾಲ್ವರು ಭದ್ರತಾ ಸಿಬ್ಬಂದಿಗಳನ್ನು ನೇಮಿಸಲಾಗುವುದು. ಈ ಕುರಿತು ಇಂದಿನಿಂದಲೇ ಕ್ರಮ ಕೈಗೊಳ್ಳಲಾಗುವುದು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ತಿಳಿಸಿದ್ದಾರೆ. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಏ.25 ಶುಕ್ರವಾರ ನಡೆದ ಘಟನೆಯ ಕುರಿತು ಸ್ಪಷ್ಟನೆ ನೀಡಿ, ಮುಖ್ಯವಾಗಿ ಹೆರಿಗೆ ವಾರ್ಡಿನಲ್ಲಿ ಗಂಡಸರಿಗೆ ಎಂಟ್ರಿ ಇಲ್ಲ. ವೈದ್ಯಾಧಿಕಾರಿ ಡಾ. ಆಶಾ ಪುತ್ತೂರಾಯ ಅವರು ಘಟನೆಗೆ ಕಾರಣರಾದವರಿಗೆ ಹೊರಗೆ ಹೋಗುವಂತೆ

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ | ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ ಆರೋಗ್ಯಾಧಿಕಾರಿ ಡಾ.ದೀಪಕ್‍ ರೈ Read More »

ವ್ಯಕ್ತಿಯೋರ್ವನ ಕುತ್ತಿಗೆಗೆ ಚೂರಿಯಿಂದ ಇರಿತ | ಗಂಭೀರ ಗಾಯ

ಬೆಳ್ತಂಗಡಿ: ವ್ಯಕ್ತಿಯೊಬ್ಬನ ಕುತ್ತಿಗೆಗೆ ಹಾಗೂ ಎದೆಗೆ ಚೂರಿಯಿಂದ ಇರಿದು ಕೊಲೆ ಮಾಡಲು ಯತ್ನಿಸಿದ ಘಟನೆ ಅಳದಂಗಡಿ ಸಂತೆ ಮಾರುಕಟ್ಟೆಯಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ . ಡೆನ್ನಿಸ್ ಪಿಂಟೋ ಹಲ್ಲೆಗೆ ಒಳಗಾದ ವ್ಯಕ್ತಿಯಾಗಿದ್ದಾರೆ. ಕೊಲೆಗೈದವ ಸ್ಥಳೀಯ ನಿವಾಸಿ ಶೀನ ಎಂಬವರು ಆರೋಪಿಯಾಗಿದ್ದಾನೆ. ಅಳದಂಗಡಿ ಸಂತೆ ಮಾರುಕಟ್ಟೆಯ ಒಳಗೆ ಎ.26 ರಂದು ರಾತ್ರಿಯ ವೇಳೆ ಕ್ಷುಲ್ಲಕ ಕಾರಣಕ್ಕೆ ಆರೋಪಿ ಶೀನ ಎಂಬಾತ ಹಾಗೂ ಡೆನ್ನಿಸ್ ಪಿಂಟೋ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಶೀನ

ವ್ಯಕ್ತಿಯೋರ್ವನ ಕುತ್ತಿಗೆಗೆ ಚೂರಿಯಿಂದ ಇರಿತ | ಗಂಭೀರ ಗಾಯ Read More »

ಮಹಿಳಾ ಪೊಲೀಸ್ ಠಾಣೆ ಬಳಿ ಮುಖ್ಯರಸ್ತೆಯಲ್ಲಿ ಕುಳಿತು ಸುಗಮ ಸಂಚಾರ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಹಿನ್ನೆಲೆ | ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಯವರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ಎ.26 ರಂದು ಬೆಳಗ್ಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಬಳಿ ಮುಖ್ಯರಸ್ತೆಯ ಮಧ್ಯದಲ್ಲಿ ಕುಳಿತು ಸುಗಮ ಸಂಚಾರಕ್ಕೆ ಮತ್ತು ಇತರ ವೈದ್ಯಕೀಯ ತುರ್ತು ಸೇವೆಗೆ ಅಡ್ಡಿ ಸಹಿತ ಪೊಲೀಸರ ಕರ್ತವ್ಯಕ್ಕೂ ಅಡ್ಡಿಪಡಿಸಿರುವ ಆರೋಪದ ಮೇರೆಗೆ ಪ್ರತಿಭಟನಾಕಾರರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎ.25ರಂದು ಪುತ್ತೂರು ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಅಶಾಜ್ಯೋತಿ ಕೆ ಪುತ್ತೂರಾಯ ಅವರ

ಮಹಿಳಾ ಪೊಲೀಸ್ ಠಾಣೆ ಬಳಿ ಮುಖ್ಯರಸ್ತೆಯಲ್ಲಿ ಕುಳಿತು ಸುಗಮ ಸಂಚಾರ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಹಿನ್ನೆಲೆ | ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲು Read More »

ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ವಾಲಿಬಾಲ್‌ ಕೋಚ್‌ ವಿರುದ್ಧ ಪೋಕ್ಸೊ ಕೇಸ್‌

ಹಿಂದು ಕಾರ್ಯಕರ್ತರು ಹಲ್ಲೆ ಮಾಡಿದ ಕುರಿತು ಪ್ರತಿದೂರು ದಾಖಲು ಬೆಳ್ತಂಗಡಿ: ಖಾಸಗಿ ಕಾಲೇಜು ವಿದ್ಯಾರ್ಥಿನಿಗೆ ಅಸಭ್ಯ ಮೆಸೇಜ್‌ ಕಳುಹಿಸಿ ಕಿರುಕುಳ ನೀಡುತ್ತಿದ್ದ ವಾಲಿಬಾಲ್ ಕೋಚ್‌ ವಿರುದ್ಧ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪೋಕ್ಸೊ ಕೇಸ್‌ ದಾಖಲಾಗಿದೆ. ಕಾರ್ಕಳದ ಸಯ್ಯದ್ (24) ಎಂಬಾತ ಕಿರುಕುಳ ನೀಡಿದ ಆರೋಪಿ. 17ರ ಹರೆಯದ ವಿದ್ಯಾರ್ಥಿನಿಗೆ ಸಯ್ಯದ್‌ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮೆಸೇಜ್‌ಗಳನ್ನು ಕಳುಹಿಸಿ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಈ ವಿಚಾರ ತಿಳಿದ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಏ.26ರಂದು

ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ವಾಲಿಬಾಲ್‌ ಕೋಚ್‌ ವಿರುದ್ಧ ಪೋಕ್ಸೊ ಕೇಸ್‌ Read More »

ನಿರ್ಜನ ಸ್ಥಳದಲ್ಲಿ ಯುವಕನ ಶವ ಪತ್ತೆ : ಕೊಲೆ ಶಂಕೆ

ಕ್ರಿಕೆಟ್‌ ವಿಚಾರದಲ್ಲಿ ನಡೆದ ಹಲ್ಲೆಯಿಂದ ಸಾವಿಗೀಡಾದ ಅನುಮಾನ ಮಂಗಳೂರು : ನಗರದ ಹೊರವಲಯದ ಕುಡುಪು ಭಟ್ರಕಲ್ಲುರ್ಟಿ ದೈವಸ್ಥಾನದ ಬಳಿ ನಿರ್ಜನ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಭಾನುವಾರ ಸಂಜೆ ವೇಳೆಗೆ ಪತ್ತೆಯಾಗಿದೆ. ವ್ಯಕ್ತಿಯನ್ನು ಹಲ್ಲೈಗೈದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇಲ್ಲಿನ ಸ್ಥಳೀಯರಿಗೆ ಮೃತ ವ್ಯಕ್ತಿಯ ಪರಿಚಯವಿಲ್ಲ. ಆತ ದಿನಗೂಲಿ ಕಾರ್ಮಿಕನಾಗಿರಬಹುದು ಎಂದು ಶಂಕಿಸಲಾಗಿದೆ. ಇಲ್ಲೆ ಸಮೀಪ ಕ್ರಿಕೆಟ್‌ ಪಂದ್ಯಾಟವೊಂದು ನಡೆದಿದ್ದು, ಅದನ್ನು ನೋಡಲು ಬಂದ ವ್ಯಕ್ತಿ ಕೊಲೆಯಾಗಿದ್ದಾನೆಯೇ ಎಂಬ ಅನುಮಾನವೂ ಇದೆ. ಕುಡುಪು ಕಟ್ಟೆ ಸಮೀಪದ

ನಿರ್ಜನ ಸ್ಥಳದಲ್ಲಿ ಯುವಕನ ಶವ ಪತ್ತೆ : ಕೊಲೆ ಶಂಕೆ Read More »

ನದಿಗೆ ಬಿದ್ದು ಯುವಕ ಸಾವು

ಉಡುಪಿ: ಹೆಬ್ರಿ ಸಮೀಪ ಸೀತಾನದಿ ನದಿಗೆ ಆಕಸ್ಮಿಕವಾಗಿ ಜಾರಿ ಬಿದ್ದು ಯುವಕ ಸಾವನ್ನಪ್ಪಿದ ದುರಂತ ಘಟನೆ ಸಂಭವಿಸಿದೆ. ಮೃತನನ್ನು ಹೆಬ್ರಿಯ ಕಿನ್ನಿಗುಡ್ಡೆ ನಿವಾಸಿ ಸುಧಾಕರ ಶೆಟ್ಟಿ ಅವರ ಪುತ್ರ ಸಂಕೇತ್ ಶೆಟ್ಟಿ (24) ಎಂದು ಗುರುತಿಸಲಾಗಿದೆ. ಸಂಕೇತ್ ತನ್ನ ಸ್ನೇಹಿತರೊಂದಿಗೆ ನದಿಗೆ ಹೋಗಿದ್ದಾಗ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಹೆಬ್ರಿ ಗ್ರಾಮ ಪಂಚಾಯತ್ ಅಡಿಯಲ್ಲಿ ಅಂಗವಿಕಲ ವ್ಯಕ್ತಿಗಳ ಪುನರ್ವಸತಿ ವಿಭಾಗದಲ್ಲಿ ಅವರು ಉದ್ಯೋಗದಲ್ಲಿದ್ದರು ಮತ್ತು ಹೆಬ್ರಿ ಜೆಸಿಐ ಸೇರಿದಂತೆ ವಿವಿಧ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ನದಿಗೆ ಬಿದ್ದು ಯುವಕ ಸಾವು Read More »

ಧರ್ಮದ ಹೆಸರಲ್ಲಿ ಹಿಂಸಾಚಾರ : ಇಸ್ಲಾಂ ತ್ಯಜಿಸಿದ ಶಿಕ್ಷಕ

ಕೋಲ್ಕತ್ತಾ: ಪಹಲ್ಗಾಮ್‌ನಲ್ಲಿ ಉಗ್ರರು ಧರ್ಮ ಕೇಳಿ ಪ್ರವಾಸಿಗರನ್ನು ಸಾಯಿಸಿದ ಕೃತ್ಯದ ಬಳಿಕ ಪಶ್ಚಿಮ ಬಂಗಾಳದ ಬದುರಿಯಾದ ಶಾಲಾ ಶಿಕ್ಷಕರೊಬ್ಬರು ಇಸ್ಲಾಂ ಧರ್ಮ ತ್ಯಜಿಸಲು ನಿರ್ಧರಿಸಿದ್ದಾರೆ. ಈ ಬಗ್ಗೆ ವೀಡಿಯೋ ಹಂಚಿಕೊಂಡಿರುವ ಶಿಕ್ಷಕ ಸಬೀರ್ ಹುಸೇನ್, ಕಾಶ್ಮೀರ ಸೇರಿದಂತೆ ವಿವಿಧೆಡೆ ಧರ್ಮವನ್ನು ಹಿಂಸೆಗೆ ಆಯುಧವನ್ನಾಗಿ ಬಳಸಲಾಗುತ್ತಿದೆ. ಇದನ್ನು ಒಪ್ಪಲು ಸಾಧ್ಯವಿಲ್ಲ. ಆದ್ದರಿಂದ ನಾನು ಇಸ್ಲಾಂನ್ನು ತ್ಯಜಿಸುತ್ತೇನೆ. ಯಾವ ಧರ್ಮದ ವ್ಯಾಪ್ತಿಗೂ ಒಳಪಡದೆ, ಕೇವಲ ಮಾನವನಾಗಿ ಗುರುತಿಸಿಕೊಳ್ಳಲು ಬಯಸುತ್ತೇನೆ ಎಂದು ಹೇಳಿಕೊಂಡಿದ್ದಾರೆ. ಏ.22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ

ಧರ್ಮದ ಹೆಸರಲ್ಲಿ ಹಿಂಸಾಚಾರ : ಇಸ್ಲಾಂ ತ್ಯಜಿಸಿದ ಶಿಕ್ಷಕ Read More »

ಕಾಶ್ಮೀರದಲ್ಲಿ ಇನ್ನಿಬ್ಬರು ಉಗ್ರರ ಮನೆ ಧ್ವಂಸ

ಸ್ಫೋಟಕದ ಮೂಲಕ ಮನೆಗಳನ್ನು ನಾಶ ಮಾಡಿದ ಸೇನೆ ಶ್ರೀನಗರ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರನ್ನು ಗುಂಡು ಹಾರಿಸಿ ಕೊಂದ ಭಯೋತ್ಪಾದಕ ಕೃತ್ಯದ ಬಳಿಕ ಉಗ್ರರ ಮನೆಗಳನ್ನು ಭದ್ರತಾ ಪಡೆ ನಾಶ ಮಾಡುತ್ತಿದೆ. ನಿನ್ನೆ ರಾತ್ರಿ ಐಇಡಿ ಸ್ಫೋಟಿಸಿ ಮತ್ತು ಬುಲ್‌ಡೋಜರ್‌ ಮೂಲಕ ಇಬ್ಬರು ಉಗ್ರರ ಮನೆಯನ್ನು ಭಾರತೀಯ ಸೇನೆ ಧ್ವಂಸ ಮಾಡಿದೆ. ಲಷ್ಕರ್ ಎ ತೊಯ್ಬಾದ ಉಗ್ರ ಸಂಘಟನೆಯ ಉಗ್ರ ಫಾರೂಕ್ ಎಂಬಾತನ ಮನೆಯನ್ನು ಸೇನೆ ಧ್ವಂಸಗೊಳಿಸಿದೆ. ಕುಪ್ವಾರದ ಕಲಾರೂಸ್ ಪ್ರದೇಶದಲ್ಲಿರುವ ಫಾರೂಕ್ ಮನೆಯನ್ನು ಐಇಡಿ ಸ್ಫೋಟಿಸಿ

ಕಾಶ್ಮೀರದಲ್ಲಿ ಇನ್ನಿಬ್ಬರು ಉಗ್ರರ ಮನೆ ಧ್ವಂಸ Read More »

error: Content is protected !!
Scroll to Top