ಅಪರಾಧ

ಬಳ್ಳಾರಿಯ ಕಾಂಗ್ರೆಸ್‌ ಸಂಸದ ತುಕರಾಂ ಇ.ಡಿ. ವಶ?

ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ದಾಳಿ ಬೆಂಗಳೂರು: ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಬೆಳ್ಳಂಬೆಳಗ್ಗೆ ಕಾಂಗ್ರೆಸ್‌ಗೆ ಜಾರಿ ನಿರ್ದೇಶನಾಲಯ ಭಾರಿ ದೊಡ್ಡ ಶಾಕ್‌ ನೀಡಿದೆ. ಕಾಂಗ್ರೆಸ್‌ ಸಂಸದ ತುಕರಾಮ್‌ ಮತ್ತು ಮೂವರು ಶಾಸಕರ ಮನೆ ಮೇಲೆ ಇ.ಡಿ. ದಾಳಿಯಾಗಿದೆ. ತುಕರಾಂ ಅವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಬಂದಿದೆ. ಬಳ್ಳಾರಿ ಚುನಾವಣೆಗೆ 21 ಕೋಟಿ ರೂ. ಬಳಸಿದ ಆರೋಪ ಸಂಸದ ತುಕಾರಾಂ ಮೇಲಿದೆ. ಇದು ವಾಲ್ಮೀಕಿ ನಿಗಮದ ಹಣ ಎನ್ನಲಾಗಿದೆ. […]

ಬಳ್ಳಾರಿಯ ಕಾಂಗ್ರೆಸ್‌ ಸಂಸದ ತುಕರಾಂ ಇ.ಡಿ. ವಶ? Read More »

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಇಂದಿನಿಂದ ರನ್ಯಾ ರಾವ್‌ಗೆ ಐಟಿ ಡ್ರಿಲ್‌

ಜೈಲಿನಲ್ಲಿರುವ ರನ್ಯಾಳನ್ನು ತೀವ್ರ ವಿಚಾರಣೆಗೊಳಪಡಿಸಲಿರುವ ಐಟಿ ಇಲಾಖೆ ಬೆಂಗಳೂರು : ಕನ್ನಡ ನಟಿ ರನ್ಯಾ ರಾವ್‌ ಒಳಗೊಂಡಿರುವ ದೇಶಾದ್ಯಂತ ಸಂಚಲನ ಉಂಟು ಮಾಡಿದ್ದಚಿನ್ನ ಕಳ್ಳ ಸಾಗಣೆ ಪ್ರಕರಣದ ತನಿಖೆಗೆ ಈಗ ಆದಾಯ ಕರ ಇಲಾಖೆಯೂ ಮುಂದಾಗಿದೆ. ಈಗಾಗಲೇ ಜಾರಿ ನಿರ್ದೇಶನಾಲಯ, ಸಿಬಿಐ ಮತ್ತು ಪೊಲೀಸರು ಬೇರೆ ಬೇರೆ ಆಯಾಮಗಳಲ್ಲಿ ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ನಾಲ್ಕು ತಿಂಗಳ ಹಿಂದೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳ ಸಾಗಾಟ ಮಾಡುವಾಗ ಸಿಕ್ಕಿಬಿದ್ದಿರುವ ರನ್ಯಾ ರಾವ್‌ ಈಗಲೂ ಜೈಲಿನಲ್ಲಿ ಇದ್ದಾಳೆ.

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಇಂದಿನಿಂದ ರನ್ಯಾ ರಾವ್‌ಗೆ ಐಟಿ ಡ್ರಿಲ್‌ Read More »

ಅಕ್ರಮ ಕೋಳಿ ಅಂಕ ಅಡ್ಡೆಗೆ ದಾಳಿ : ಮೂವರ ಬಂಧನ, ಸೊತ್ತುಗಳು ವಶಕ್ಕೆ

ಕಡಬ: ಅಕ್ರಮ ಕೋಳೀ ಅಂಕ ನಡೆಯುತ್ತಿದ್ದ ಸ್ಥಳಕ್ಕೆ ಕಡಬ ಪೊಲೀಸರು ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದುಕೊಂಡ ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಹಳೇ ನೇರಂಕಿ ಗ್ರಾಮದ ನೇರಂಕಿ ಎಂಬಲ್ಲಿ ನಡೆದಿದೆ. ಕಡಬ ನಿವಾಸಿಗಳಾದ ರಾಧಾಕೃಷ್ಣ (52) ಮೋಹನ್ ದಾಸ್ (48) ವೆಂಕಟರಮಣ (30) ಬಂಧಿತರು. ತೋಟವೊಂದರಲ್ಲಿ, ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದ ಬಗ್ಗೆ ಮಾಹಿತಿ ಬಂದ ಮೇರೆಗೆ, ಕಡಬ ಪೊಲೀಸ್ ಠಾಣಾ ಪೋಲಿಸ್ ಉಪನಿರೀಕ್ಷಕರಾದ ಅಭಿನಂದನ್ ಮತ್ತು ಸಿಬ್ಬಂದಿಗಳೊಂದಿಗೆ ಧಾಳಿ ನಡೆಸಿದ್ದಾರೆ.

ಅಕ್ರಮ ಕೋಳಿ ಅಂಕ ಅಡ್ಡೆಗೆ ದಾಳಿ : ಮೂವರ ಬಂಧನ, ಸೊತ್ತುಗಳು ವಶಕ್ಕೆ Read More »

ಅಡಿಕೆ ವ್ಯಾಪಾರಿಯಿಂದ ಕೋಟ್ಯಾಂತರ ರೂಪಾಯಿ ವಂಚನೆ | ಠಾಣೆ ಮೆಟ್ಟಿಲೇರಿದ ಕೃಷಿಕರು

ಬಂಟ್ವಾಳ: ಅಡಿಕೆ ವ್ಯಾಪಾರಿಯೋರ್ವ ಕೃಷಿಕರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿ ಪಾರಾರಿಯಾಗಿದ್ದು ಇದೀಗ ಕೃಷಿಕರು ತಮ್ಮ ಹಣಕ್ಕಾಗಿ ಬಂಟ್ವಾಳ ನಗರ ಪೋಲೀಸ್‌ ಠಾಣೆಯ ಮೆಟ್ಟಿಲೇರಿದ್ದಾರೆ. ಇಂದು ಸುಮಾರು 50 ಕ್ಕೂ ಅಧಿಕ ಕೃಷಿಕರು ಬಂಟ್ವಾಳ ನಗರ ಪೋಲೀಸ್ ಠಾಣೆಯ ಮುಂದೆ ಜಮಾಯಿಸಿದ್ದು, ವಂಚನೆಗೆ ಒಳಗಾದ ಕೃಷಿಕರು ಹಣ ನೀಡದೆ ವಂಚಿಸಿದ ವ್ಯಕ್ತಿಯ ವಿರುದ್ಧ ದೂರು ನೀಡಲು ಮುಂದಾಗಿದ್ದಾರೆ. ಸ್ಥಳೀಯ ಕೃಷಿಕ ಮಹಿಳೆಯೊಬ್ಬರು ತಮ್ಮ ಬ್ಯಾಂಕ್ ಸಾಲದ ಮೊತ್ತ ಪಾವತಿಯ ಹಿನ್ನಲೆಯಲ್ಲಿ ವ್ಯಾಪಾರಿಯ ಬಳಿ ಹಣಕ್ಕಾಗಿ ಹೋದಾಗ ಆತ ಪರಾರಿಯಾಗಿರುವುದು

ಅಡಿಕೆ ವ್ಯಾಪಾರಿಯಿಂದ ಕೋಟ್ಯಾಂತರ ರೂಪಾಯಿ ವಂಚನೆ | ಠಾಣೆ ಮೆಟ್ಟಿಲೇರಿದ ಕೃಷಿಕರು Read More »

ಪೆಟ್ರೋಲ್‍ ಸುರಿದು ಕೊಲೆಗೆ ಯತ್ನ | ಗಾಯಾಳು ಆಸ್ಪತ್ರೆಯಲ್ಲಿ ಮೃತ್ಯು

ಕಡಬ: ತಮ್ಮನೇ ಅಣ್ಣನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅಣ್ಣ ಚಿಕಿತ್ಸೆ ಫಲಿಸದೆ ಸೋಮವಾರ  ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮಂಗಳೂರು-ಬೆಂಗಳೂರು ರೈಲು ಮಾರ್ಗದ ಕೋಡಿಂಬಾಳ ಸಮೀಪದ ಕೋರಿಯರ್ ರೈಲು ಟ್ರ್ಯಾಕ್ ಸಮೀಪ ಜೂ.8 ರಂದು ಈ ಘಟನೆ ನಡೆದಿತ್ತು. ತಮ್ಮನ್ನೇ ತನ್ನ ಅಣ್ಣನ ಮೇಲೆ ಪೆಟ್ರೋಲ್ ಸುರಿದು ಕೊಲೆ ಯತ್ನಿಸಿದ್ದ. ಸುಟ್ಟ ಗಾಯಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹನುಮಪ್ಪ (42) ಚಿಕಿತ್ಸೆ ಫಲಿಸದೆ ಸೋಮವಾರ ಮೃತಪಟ್ಟಿದ್ದಾರೆ. ಸಾವಿನ ಬಳಿಕ ಪೊಲೀಸರು

ಪೆಟ್ರೋಲ್‍ ಸುರಿದು ಕೊಲೆಗೆ ಯತ್ನ | ಗಾಯಾಳು ಆಸ್ಪತ್ರೆಯಲ್ಲಿ ಮೃತ್ಯು Read More »

ನಿರ್ಜನ ಪ್ರದೇಶದಲ್ಲಿ ಕಾರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವ ವೈದ್ಯ

ಚೆನ್ನೈ: ಯುವ ವೈದ್ಯನೋರ್ವ ನಿರ್ಜನ ಪ್ರದೇಶದಲ್ಲಿ ಕಾರಿನೊಳಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ಕೊಡೈಕೆನಾಲ್ ನಲ್ಲಿ ಬೆಳಕಿಗೆ ಬಂದಿದೆ. ದಿಂಡಿಗಲ್ ಜಿಲ್ಲೆಯ ವೇದಚಂದೂರಿನ ಡಾ. ಜೋಶುವಾ ಸಾಮ್ರಾಜ್ ಆತ್ಮಹತ್ಯೆ ಮಾಡಿಕೊಂಡವರು. ಜೋಶುವಾ ಅವರು ವೈದ್ಯಕೀಯ ಪದವಿ ಪೂರ್ಣಗೊಳಿಸಿ ತಮಿಳುನಾಡಿನಾದ್ಯಂತ ವಿವಿಧ ಆಸ್ಪತ್ರೆಗಳಲ್ಲಿ ಕೆಲಸ ಮಾಡಿದ್ದರು. ಸದ್ಯ ಡಾ. ಜೋಶುವಾ ಸಾಮ್ರಾಜ್ ಸೇಲಂನಲ್ಲಿ (ಡಾಕ್ಟರ್ ಆಫ್ ಮೆಡಿಸಿನ್) ವ್ಯಾಸಂಗ ಮಾಡುತ್ತಿದ್ದು, ಮಧುರೈನ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ನಾಲ್ಕು ದಿನಗಳ ಹಿಂದೆ ಜೋಶುವಾ ನಾಪತ್ತೆಯಾಗಿದ್ದರು

ನಿರ್ಜನ ಪ್ರದೇಶದಲ್ಲಿ ಕಾರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವ ವೈದ್ಯ Read More »

ಅನುಚಿತವಾಗಿ ವರ್ತಿಸಿದ ಓರ್ವನ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಸಾರ್ವಜನಿಕ ಸ್ಥಳದಲ್ಲಿ ಇಬ್ಬರು ಅನುಚಿತವಾಗಿ ವರ್ತಸಿದ ಹಿನ್ಲೆಯಲ್ಲಿ ಪೊಲೀಸರು ವಿಚಾರಿಸಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಓರ್ವ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟ ಮೇರೆಗೆ ಓರ್ವನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕೆದಿಲ ಗ್ರಾಮದ ಗಡಿಯಾರ ನಿವಾಸಿ ಮಹಮ್ಮದ್ ಕಲಂದರ್ ಶಾಫಿ (24) ವಿರುದ್ಧ ಪ್ರಕರಣ ದಾಖಲಾಗಿದೆ. ಖಚಿತ ಮಾಹಿತಿ ಮೇರೆಗೆ ಎಸ್.ಐ ಆಂಜನೇಯ ರೆಡ್ಡಿಯವರು ಸಿಬ್ಬಂದಿಗಳ ಜೊತೆ ಕೆದಿಲ ಗ್ರಾಮದ ಸತ್ತಿಕಲ್ಲು ಸ್ಥಳಕ್ಕೆ ಹೋಗಿ ಇಬ್ಬರು ವ್ಯಕ್ತಿಗಳು ಅನುಚಿತವಾಗಿ ವರ್ತಿಸಿರುವ ಕುರಿತು ವಿಚಾರಿಸಿ ಅವರನ್ನು

ಅನುಚಿತವಾಗಿ ವರ್ತಿಸಿದ ಓರ್ವನ ವಿರುದ್ಧ ಪ್ರಕರಣ ದಾಖಲು Read More »

ಹನಿಮೂನ್‌ನಲ್ಲಿದ್ದ ದಂಪತಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌

ಥ್ರಿಲ್ಲರ್‌ ಸಿನಿಮಾ ಮಾದರಿ ಇದೆ ಈ ಪ್ರಕರಣ ಶಿಲ್ಲಾಂಗ್: ಹನಿಮೂನ್‌ಗೆಂದು ಮೇಘಾಲಯಕ್ಕೆ ತೆರಳಿದ ಬಳಿಕ ದಂಪತಿ ನಾಪತ್ತೆಯಾಗಿದ್ದ ಪ್ರಕರಣ ಥ್ರಿಲ್ಲರ್‌ ಸಿನಿಮಾ ಮಾದರಿ ಟ್ವಿಸ್ಟ್‌ ಪಡೆದುಕೊಂಡಿದ್ದು, ಪತಿಯನ್ನು ನವವಿವಾಹಿತ ಪತ್ನಿಯೇ ಕೊಲ್ಲಿಸಿರುವುದು ಬಯಲಾಗಿದೆ. ಹತ್ಯೆ ಆರೋಪದಲ್ಲಿ ಪೊಲೀಸರು ಪತ್ನಿಯನ್ನು ಬಂಧಿಸಿದ್ದಾರೆ. ಇಂದೋರ್‌ನ ದಂಪತಿ ಹನಿಮೂನ್‌ಗಾಗಿ ಮೇಘಾಲಯಕ್ಕೆ ತೆರಳಿದ ಬಳಿಕ ನಿಗೂಢವಾಗಿ ನಾಪತ್ತೆಯಾದ ಪ್ರಕರಣ ದೇಶದಲ್ಲಿ ಭಾರಿ ಕುತೂಹಲಕ್ಕೆ ಕಾರಣವಾಗಿತ್ತು. ಟೂರಿಸ್ಟ್‌ ಗೈಡ್‌ ನೀಡಿದ್ದ ಸಣ್ಣ ಸುಳಿವೊಂದು ಇಡೀ ಪ್ರಕರಣವನ್ನು ಬಯಲೆಗೆಳೆಯಲು ಪೊಲೀಸರಿಗೆ ನೆರವಾಗಿದೆ. ಪತಿಯ ಕೊಲೆಗೆ ಸಂಚು

ಹನಿಮೂನ್‌ನಲ್ಲಿದ್ದ ದಂಪತಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌ Read More »

ಚಲಿಸುತ್ತಿದ್ದ ಕಾರು ತಡೆದು ಹಲ್ಲೆ : ಪ್ರಕರಣ ದಾಖಲು

ಪುತ್ತೂರು: ಚಲಿಸುತ್ತಿದ್ದ ಕಾರನ್ನು ನಿಲ್ಲಿಸಿ ಹಲ್ಲೆ ನಡೆಸಿದ ಘಟನೆ ಕೆದಿಲ ಗ್ರಾಮದ ಗಾಂಧಿನಗರದಲ್ಲಿ ನಡೆದಿದ್ದು, ಈ ಕುರಿತು ಪ್ರಕರಣ ದಾಖಲಗಿದೆ. ಕೆದಿಲ ಗ್ರಾಮದ ಸರೋಳಿ ನಿವಾಸಿ ಅಬೂಬಕ್ಕರ್ ರಾಶಿಕ್ (28) ಹಲ್ಲೆಗೊಳಗಾದವರು ಎಂದು ತಿಳಿದು ಬಂದಿದೆ. ತನ್ನ ಕಾರಿನಲ್ಲಿ ಮಾರಿಪಳ್ಳ ಎಂಬಲ್ಲಿಗೆ ಹೋಗಿ ಬರುತ್ತಿದ್ದ ಸಂದರ್ಭ ಕೆದಿಲ ಗ್ರಾಮದ ಗಾಂಧಿನಗರದಲ್ಲಿ ಶಾಫಿ ಗಡಿಯಾರ ಮತ್ತು ಜೆಸಿಬಿ ಸಿದ್ಧಿಕ್ ಎಂಬವರು ಕಾರನ್ನು ತಡೆದ ನಿಲ್ಲಿಸಿ. ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಗಾಯಾಳು ಅಬೂಬಕ್ಕರ್ ರಾಶಿಕ್ ಪುತ್ತೂರು

ಚಲಿಸುತ್ತಿದ್ದ ಕಾರು ತಡೆದು ಹಲ್ಲೆ : ಪ್ರಕರಣ ದಾಖಲು Read More »

ಮೂರೂ ಕೊಲೆ ಪ್ರಕರಣಗಳ ಎನ್‌ಐಎ ತನಿಖೆ : ಮುಂಜುನಾಥ ಭಂಡಾರಿ ಆಗ್ರಹ

ಒಂದು ಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣ ಬೇಡ ಎಂದು ಹೇಳಿಕೆ ಮಂಗಳೂರು: ದ.ಕ. ಜಿಲ್ಲೆಯಲ್ಲಿ ಒಂದೂವರೆ ತಿಂಗಳಲ್ಲಿ ಮೂರು ಕೊಲೆ ಪ್ರಕರಣಗಳು ನಡೆದಿದ್ದು, ಈ ಮೂರು ಕೊಲೆ ಪ್ರಕರಣಗಳ ಎನ್‌ಐಎ ತನಿಖೆಯಾಗಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಆಗ್ರಹಿಸಿದ್ದಾರೆ. ಬೆನ್ನುಬೆನ್ನಿಗೆ ನಡೆದ ಈ ಮೂರು ಕೊಲೆಗಳು ಇಡೀ ಕರಾವಳಿಯಲ್ಲಿ ಆತಂಕ ಮೂಡಿಸಿವೆ. ಒಂದಕ್ಕೊಂದು ಪ್ರತೀಕಾರದ ಕೊಲೆಯಾಗಿರುವ ಸಾಧ್ಯತೆಯಿದ್ದು, ಈ ಮೂರು ಪ್ರಕರಣಗಳನ್ನು ಎನ್‌ಐಎ ತನಿಖೆಗೆ ವಹಿಸಿದರೆ ದುಷ್ಕೃತ್ಯದ ಹಿಂದಿನ ಸತ್ಯ ಬಯಲಿಗೆ ಬರಲಿದೆ ಎಂದು ಮಂಜುನಾಥ್

ಮೂರೂ ಕೊಲೆ ಪ್ರಕರಣಗಳ ಎನ್‌ಐಎ ತನಿಖೆ : ಮುಂಜುನಾಥ ಭಂಡಾರಿ ಆಗ್ರಹ Read More »

error: Content is protected !!
Scroll to Top