ಅಪರಾಧ

ಲಾಡ್ಜ್ ನಲ್ಲಿ ವೈಶ್ಯಾವಾಟಿಕೆ : ಆರೋಪಿ ಬಂಧನ

ಉಡುಪಿ: ಲಾಡ್ಜ್ ಒಂದರಲ್ಲಿ  ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ. ಬಡಗಬೆಟ್ಟುವಿನ ದಶರಥನಗರದ ಲಾಡ್ಜ್ ವೊಂದರಲ್ಲಿ ಮಹಿಳೆಯನ್ನು ಬಲವಂತವಾಗಿ ಇರಿಸಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಗೊತ್ತಾಗಿದ್ದು, ಕೂಡಲೇ ದಾಳಿ ನಡೆಸಲಾಗಿದೆ. ದಾಳಿಯ ವೇಳೆ ಮಹಿಳೆಯನ್ನು ರಕ್ಷಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ಕ್ರಮ ಕೈಗೊಂಡಿದ್ದಾರೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಾಡ್ಜ್ ನಲ್ಲಿ ವೈಶ್ಯಾವಾಟಿಕೆ : ಆರೋಪಿ ಬಂಧನ Read More »

ಕಾಲ್ತುಳಿತ ಘಟನೆ : ಕೆಎಸ್‌ಸಿಎ ಇಬ್ಬರು ಪದಾಧಿಕಾರಿಗಳು ರಾಜೀನಾಮೆ

ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ನ ಇಬ್ಬರು ಪದಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ. ಕೆಎಸ್‌ಸಿಎ ಕಾರ್ಯದರ್ಶಿ ಎ. ಶಂಕರ್‌, ಖಜಾಂಚಿ ಜೈರಾಮ್‌ ಶುಕ್ರವಾರ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಎ. ಶಂಕರ್‌ ಅವರೇ ಪ್ರಕಟಣೆ ಹೊರಡಿಸಿದ್ದಾರೆ. ಕಾಲ್ತುಳಿತ ಪ್ರಕರಣ ಸಂಬಂಧ ಗುರುವಾರ ರಾತ್ರಿ ತುರ್ತು ಸುದ್ದಿಗೋಷ್ಠಿ ನಡೆಸಿದ್ದ ಸಿಎಂ ಸಿದ್ದರಾಮಯ್ಯ, ತನಿಖೆಯನ್ನು ಸಿಐಡಿಗೆ ವಹಿಸಿ ಕಾಲ್ತುಳಿತಕ್ಕೆ ಕಾರಣರಾದ ಆರ್‌ಸಿಬಿ ಆಡಳಿತ ಮಂಡಳಿ, ಡಿಎನ್‌ಎ

ಕಾಲ್ತುಳಿತ ಘಟನೆ : ಕೆಎಸ್‌ಸಿಎ ಇಬ್ಬರು ಪದಾಧಿಕಾರಿಗಳು ರಾಜೀನಾಮೆ Read More »

ಕಾಲ್ತುಳಿತ ಘಟನೆ : ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಬಿಜೆಪಿಯಿಂದ ಪೊಲೀಸರಿಗೆ ದೂರು

ಎಫ್‌ಐಆರ್‌ ದಾಖಲಿಸಿ ಕ್ರಮ ಕೈಗೊಳ್ಳದಿದ್ದರೆ ಕೋರ್ಟ್‌ಗೆ ಹೋಗುವ ಎಚ್ಚರಿಕೆ ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತರಾದ ಘಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ನಿಜವಾದ ಸಂಕಷ್ಟ ಈಗ ಶುರುವಾಗಿದೆ. ದುರಂತದಲ್ಲಿ 11 ಮಂದಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್‌ ವಿರುದ್ಧವೂ ಪೊಲೀಸ್‌ ದೂರು ನೀಡಲಾಗಿದೆ. ಬಿಜೆಪಿ ನಾಯಕರು ಸಿಎಂ, ಡಿಸಿಎಂ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್‌ ವಿರುದ್ಧ ಕಬ್ಬನ್​ಪಾರ್ಕ್ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ರಾಜ್ಯ ಸರ್ಕಾರ

ಕಾಲ್ತುಳಿತ ಘಟನೆ : ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಬಿಜೆಪಿಯಿಂದ ಪೊಲೀಸರಿಗೆ ದೂರು Read More »

ಆರ್‌ಸಿಬಿ ಸ್ಟಾರ್‌ ಪ್ಲೇಯರ್‌ ವಿರಾಟ್‌ ಕೊಹ್ಲಿ ವಿರುದ್ಧವೂ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಅರೆಸ್ಟ್‌ ವಿರಾಟ್‌ ಕೊಹ್ಲಿ ಟ್ರೆಂಡಿಂಗ್‌ ಬೆಂಗಳೂರು: ಆರ್‌ಸಿಬಿ ವಿಜಯೋತ್ಸವ ಸಂದರ್ಭ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದ ಘಟನೆಯಲ್ಲಿ 11 ಮಂದಿ ಸಾವಿಗೀಡಾದ ಹಿನ್ನೆಲೆಯಲ್ಲಿ ಸೋಷಿಯಲ್‌ ಮೀಡಿಯಾದಲ್ಲಿ ಆರ್‌ಸಿಬಿಯ ಸ್ಟಾರ್‌ ಆಟಗಾರ ವಿರಾಟ್‌ ಕೊಹ್ಲಿ ವಿರುದ್ಧವೂ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ವಿರಾಟ್‌ ಕೊಹ್ಲಿ ವಿರುದ್ಧವೂ ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ಶುಕ್ರವಾರ ಕೇಸ್‌ ದಾಖಲಾಗಿದೆ. ಆದರೆ ವಿರಾಟ್‌ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಲಂಡನ್‌ಗೆ ತೆರಳಿದ್ದಾರೆ ಎಂಬ ವದಂತಿ ಹಬ್ಬಿದೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ

ಆರ್‌ಸಿಬಿ ಸ್ಟಾರ್‌ ಪ್ಲೇಯರ್‌ ವಿರಾಟ್‌ ಕೊಹ್ಲಿ ವಿರುದ್ಧವೂ ಆಕ್ರೋಶ Read More »

ಅರುಣ್ ಪುತ್ತಿಲ ಗಡಿಪಾರಿಗೆ ಸೂಕ್ತ ದಾಖಲೆ ಸಲ್ಲಿಸಲು ಪೊಲೀಸರಿಗೆ ಎಸಿ ಆದೇಶ | ವಿಚಾರಣೆ ಮುಂದೂಡಿಕೆ

ಪುತ್ತೂರು: ಅರುಣ್ ಪುತ್ತಿಲ ಗಡಿಪಾರು ನೋಟಿಸ್ ಸಂಬಂಧಪಟ್ಟಂತೆ ಪುತ್ತೂರು ಎಸಿ ಕೋರ್ಟ್ ನಲ್ಲಿ ವಿಚಾರಣೆ ನಡೆದಿದೆ. ಅರುಣ್ ಪುತ್ತಿಲ ಪರ ಪುತ್ತೂರಿನ ಹಿರಿಯ ವಕೀಲರಾದ ನರಸಿಂಹ ಪ್ರಸಾದ್ ಭಾಗಿಯಾಗಿ ವಾದಿಸಿದ್ದರು. ಅರುಣ್ ಪುತ್ತಿಲ ಗಡಿಪಾರಿಗೆ ಪೊಲೀಸರು ಸೂಕ್ತ ಹಾಗೂ ಸಮರ್ಪಕ ದಾಖಲೆ ಸಲ್ಲಿಸದ ಕಾರಣ ಜೂ.27ಕ್ಕೆ ಮುಂದೂಡಿ ಸಮರ್ಪಕ ದಾಖಲೆ ಸಲ್ಲಿಸುವಂತೆ ಆದೇಶಿಸಿದರು.

ಅರುಣ್ ಪುತ್ತಿಲ ಗಡಿಪಾರಿಗೆ ಸೂಕ್ತ ದಾಖಲೆ ಸಲ್ಲಿಸಲು ಪೊಲೀಸರಿಗೆ ಎಸಿ ಆದೇಶ | ವಿಚಾರಣೆ ಮುಂದೂಡಿಕೆ Read More »

ಸಂಭ್ರಮಾಚರಣೆಗೆ ಕರೆ ಕೊಟ್ಟದ್ದೇ ಸರ್ಕಾರ : ಕೋರ್ಟ್‌ಗೆ ಕೆಎಸ್‌ಸಿಎ ಮಾಹಿತಿ

ಜನರ ಆಕ್ರೋಶದ ಹಿನ್ನೆಲೆಯಲ್ಲಿ ತನ್ನ ಮೇಲೆ ಆರೋಪ ಎಂದು ದೂರು ಬೆಂಗಳೂರು : ಆರ್​ಸಿಬಿ ಐಪಿಎಲ್ ಟ್ರೋಫಿ ಗೆಲುವಿನ ಸಂಭ್ರಮಾಚರಣೆಯನ್ನು ವಿಧಾನಸೌಧದ ಎದುರು ನಡೆಸುವಂತೆ ಕರೆ ಕೊಟ್ಟಿದ್ದೇ ಸರ್ಕಾರ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್‌ಸಿಎ) ಆರೋಪಿಸಿ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಸಚಿವರು ವಿಧಾನಸೌಧ ಗ್ರ್ಯಾಂಡ್ ಸ್ಟೆಪ್ಸ್ ವೇದಿಕೆಯಲ್ಲಿ ಆಟಗಾರರನ್ನು ಸನ್ಮಾನಿಸಿದ್ದಾರೆ. ಸರ್ಕಾರ, ಸಚಿವರ ಮೇಲಿನ ಜನರ ಆಕ್ರೋಶದ ಹಾದಿ ತಪ್ಪಿಸಲು ಎಫ್​ಐಆರ್ ದಾಖಲಿಸಲಾಗಿದೆ ಎಂದು

ಸಂಭ್ರಮಾಚರಣೆಗೆ ಕರೆ ಕೊಟ್ಟದ್ದೇ ಸರ್ಕಾರ : ಕೋರ್ಟ್‌ಗೆ ಕೆಎಸ್‌ಸಿಎ ಮಾಹಿತಿ Read More »

ಕಾಲ್ತುಳಿತ : ಪ್ರಮುಖ ಆರೋಪಿಗಳು ಪರಾರಿಯಾಗಲು ಸರ್ಕಾರವೇ ಕಾರಣ?

ಸಿಎಂ ನೀಡಿದ ಸುಳಿವಿನಿಂದಲೇ ಆರೋಪಿಗಳು ರಾತ್ರೋರಾತ್ರಿ ತಪ್ಪಿಸಿಕೊಂಡಿದ್ದಾರೆ ಎಂಬ ಆರೋಪ ಬೆಂಗಳೂರು: ಆರ್‌ಸಿಬಿ ಐಪಿಎಲ್‌ ಗೆದ್ದಾಗ ಸನ್ಮಾನ ಏರ್ಪಡಿಸಿ ಪ್ರಚಾರ ಪಡೆಯಲು ಯತ್ನಿಸಿದ ರಾಜ್ಯ ಸರ್ಕಾರ ಎಡವಟ್ಟಿನ ಮೇಲೆ ಎಡವಟ್ಟು ಮಾಡಿಕೊಳ್ಳುತ್ತಿದೆ. ಕಾಲ್ತುಳಿತ ಘಟನೆಯ ಪ್ರಮುಖ ಆರೋಪಿಗಳೆಲ್ಲ ಪರಾರಿಯಾಗಿದ್ದು, ಇವರು ತಪ್ಪಿಸಿಕೊಳ್ಳಲು ಪರೋಕ್ಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಕಾರಣ ಎಂಬ ಆರೋಪ ಈಗ ಕೇಳಿಬಂದಿದೆ. ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ನೀಡಿದ ಸುಳಿವಿನಿಂದ ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣದ ಪ್ರಮುಖ ಆರೋಪಿಗಳು ಪರಾರಿಯಾಗಿದ್ದಾರೆ ಎನ್ನಲಾಗುತ್ತಿದೆ. ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಸಿಬಿ, ಕರ್ನಾಟಕ

ಕಾಲ್ತುಳಿತ : ಪ್ರಮುಖ ಆರೋಪಿಗಳು ಪರಾರಿಯಾಗಲು ಸರ್ಕಾರವೇ ಕಾರಣ? Read More »

ಕಾಲ್ತುಳಿತ ಪ್ರಕರಣ : ಕೆಎಸ್‌ಸಿಎ ಪ್ರತಿನಿಧಿ ಸೇರಿ ನಾಲ್ವರ ಬಂಧನ

ಕೆಎಸ್‌ಸಿಎ ಪ್ರಮುಖರೆಲ್ಲಾ ರಾತ್ರೋರಾತ್ರಿ ಎಸ್ಕೇಪ್‌? ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ನಿನ್ನೆ ರಾತ್ರಿ ಬಂಧಿಸಿದ್ದಾರೆ. ಆದರೆ ಕೆಲವು ಪ್ರಮುಖ ಆರೋಪಿಗಳು ಪಲಾಯನ ಮಾಡಿದ್ದಾರೆ ಎನ್ನಲಾಗಿದೆ. ಡಿಎನ್‌ಎ ಇವೆಂಟ್‌ ಮ್ಯಾನೇಜ್‌ಮೆಂಟ್‌ ಸಂಸ್ಥೆಯ ಮೂವರು ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ನ ಒಬ್ಬರು ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಡಿಎನ್‌ಎ ಇವೆಂಟ್‌ ಮ್ಯಾನೇಜ್ಮೆಂಟ್‌ನ ಸುನೀಲ್ ಮ್ಯಾಥ್ಯೂ, ಕಿರಣ್ ಮತ್ತು ವಿನೋದ್, ಕೆಎಸ್‌ಸಿಎ ಪ್ರತಿನಿಧಿ ಹೆಸರು ಬಹಿರಂಗಪಡಿಸಿಲ್ಲ. ಕೆಎಸ್‌ಸಿಎ

ಕಾಲ್ತುಳಿತ ಪ್ರಕರಣ : ಕೆಎಸ್‌ಸಿಎ ಪ್ರತಿನಿಧಿ ಸೇರಿ ನಾಲ್ವರ ಬಂಧನ Read More »

ಬೆಂಗಳೂರು ಪೊಲೀಸ್‌ ಆಯುಕ್ತರ ತಲೆದಂಡಕ್ಕೆ ಸಾರ್ವಜನಿಕರಿಂದ ಆಕ್ಷೇಪ

ಅಮಾನತಿಗೆ ಕಾರಣ ಕೊಟ್ಟ ಸರ್ಕಾರ ಬೆಂಗಳೂರು: ಆರ್‌ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಬಲಿಯಾಗಿ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆಗೆ ಬೆಂಗಳೂರು ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ಸಹಿತ ಕೆಲವು ಪೊಲೀಸ್‌ ಅಧಿಕಾರಿಗಳನ್ನು ಹೊಣೆ ಮಾಡಿರುವ ಸರ್ಕಾರ ನಿನ್ನೆ ಅವರನ್ನು ಅಮಾನತಿನಲ್ಲಿಟ್ಟಿದೆ. ಆದರೆ ದಕ್ಷ ಅಧಿಕಾರಿ ಎಂದು ಗುರುತಿಸಿಕೊಂಡಿರುವ ಬಿ.ದಯಾನಂದ್‌ ಅವರ ತಲೆದಂಡಕ್ಕೆ ಸಾರ್ವಜನಿಕ ವಲಯದಿಂದ ಭಾರಿ ಆಕ್ಷೇಪ ವ್ಯಕ್ತವಾಗಿದೆ. ಸರ್ಕಾರ ತಾನು ಮಾಡಿದ ತಪ್ಪನ್ನು ಮುಚ್ಚಿಕೊಳ್ಳಲು ಪೊಲೀಸರ ತಲೆದಂಡ ಮಾಡಿದೆ. ಅದರಲ್ಲೂ ಕೆರಿಯರ್‌ನಲ್ಲಿ

ಬೆಂಗಳೂರು ಪೊಲೀಸ್‌ ಆಯುಕ್ತರ ತಲೆದಂಡಕ್ಕೆ ಸಾರ್ವಜನಿಕರಿಂದ ಆಕ್ಷೇಪ Read More »

ಕಾಲ್ತುಳಿತದಲ್ಲಿ ಕರಾವಳಿ ಮೂಲದ ಯುವತಿ ಮೃತ್ಯು

ಯುವ ಯಕ್ಷಗಾನ ಕಲಾವಿದೆ, ಬಾಸ್ಕೆಟ್‌ಬಾಲ್‌ ಕ್ರೀಡಾಪಟು ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವದ ಸಮಯದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಉಡುಪಿಯ ಹೆಬ್ರಿ ಮೂಲದ ಯುವತಿಯೊಬ್ಬರು ಸಾವಿಗೀಡಾಗಿದ್ದಾರೆ. ಯುವ ಯಕ್ಷಗಾನ ಕಲಾವಿದೆ, ಬಾಸ್ಕೆಟ್ ಬಾಲ್ ಕ್ರೀಡಾಪಟು ಚಿನ್ಮಯಿ ಶೆಟ್ಟಿ (19) ಮೃತಪಟ್ಟವರು. ಪ್ರಸ್ತುತ ಬೆಂಗಳೂರು ತಿಪ್ಪಸಂದ್ರ ನಿವಾಸಿಗಳಾದ ಹೆಬ್ರಿ ಕರುಣಾಕರ ಶೆಟ್ಟಿ ಮತ್ತು ಉಪ್ಪಿನಂಗಡಿ ಪೂಜಾ ಶೆಟ್ಟಿಯವರ ಪುತ್ರಿ ಕು.ಚಿನ್ಮಯಿ ಶೆಟ್ಟಿ. ಅವರು ಬೆಂಗಳೂರಿನ ಕನಕಪುರ ಮಾರ್ಗದ ಜ್ಯೋತಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಿಇ ವ್ಯಾಸಂಗ ಮಾಡುತ್ತಿದ್ದರು. ‘ಯಕ್ಷತರಂಗ ಬೆಂಗಳೂರು’ನ ಯಕ್ಷಗಾನ

ಕಾಲ್ತುಳಿತದಲ್ಲಿ ಕರಾವಳಿ ಮೂಲದ ಯುವತಿ ಮೃತ್ಯು Read More »

error: Content is protected !!
Scroll to Top