ಅಪರಾಧ

ಅಯೋಧ್ಯೆ ಮೇಲೆ ದಾಳಿ ಮಾಡುಲುದ್ದೇಶಿಸಿದ್ದ ಉಗ್ರ ಜೈಲಿನಲ್ಲಿ ಹತ್ಯೆ

ಸಹಕೈದಿಯ ಜೊತೆಗೆ ನಡೆದ ಜಗಳದಲ್ಲಿ ಸಾವಿಗೀಡಾದ ಉಗ್ರ ಲಖನೌ: ಅಯೋಧ್ಯೆಯ ರಾಮ ಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ ಆರೋಪದ ಮೇಲೆ ಸೆರೆಯಾಗಿ ಫರಿದಾಬಾದ್ ಜೈಲಿನಲ್ಲಿದ್ದ ಉಗ್ರನನ್ನು ಸಹಕೈದಿಯೊಬ್ಬ ಕೊಲೆ ಮಾಡಿದ್ದಾನೆ. ಅಬ್ದುಲ್ ರೆಹಮಾನ್(20) ಕೊಲೆಯಾದ ಆರೋಪಿಯಾಗಿದ್ದು, ಜೈಲಿನಲ್ಲಿದ್ದ ಕಾಶ್ಮೀರಿ ಯುವಕ ಅರುಣ್ ಚೌಧರಿ ಹರಿತವಾದ ವಸ್ತುವಿನಿಂದ ಹಲ್ಲೆ ನಡೆಸಿ ಹತ್ಯೆ ಎಸಗಿದ್ದಾನೆ. ಅಬ್ದುಲ್ ರೆಹಮಾನ್ ಮತ್ತು ಅರುಣ್‌ ಚೌಧರಿ ಮಧ್ಯೆ ಭಾನುವಾರ ಜಗಳ ನಡೆದು ವಿಕೋಪಕ್ಕೆ ತಿರುಗಿ ರಾತ್ರಿ 8 ಗಂಟೆಯ ವೇಳೆಗೆ ಅರುಣ್ […]

ಅಯೋಧ್ಯೆ ಮೇಲೆ ದಾಳಿ ಮಾಡುಲುದ್ದೇಶಿಸಿದ್ದ ಉಗ್ರ ಜೈಲಿನಲ್ಲಿ ಹತ್ಯೆ Read More »

ಎಪಿಕೆ ಫೈಲ್‌ ಡೌನ್‌ಲೋಡ್‌ ಮಾಡಿ 10 ಲ. ರೂ. ಕಳೆದುಕೊಂಡ ವ್ಯಕ್ತಿ

ವ್ಯವಹಾರ ಮಾಡದಿದ್ದರೂ ಖಾತೆಯಿಂದ ಹಣ ಲಪಟಾಯಿಸಿದ ವಂಚಕರು ಮಂಗಳೂರು : ಬರೀ ಎಪಿಕೆ ಫೈಲ್‌ ಡೌನ್‌ಲೋಡ್‌ ಮಾಡಿದ ಬಳಿಕ ವ್ಯಕ್ತಿಯೊಬ್ಬರು 10 ಲ.ರೂ. ಕಳೆದುಕೊಂಡ ಕುರಿತು ದೂರು ದಾಖಲಾಗಿದೆ. ಅಪರಿಚಿತರು ಕಳುಹಿಸಿದ ಎಪಿಕೆ ಲಿಂಕ್ ಡೌನ್ಲೋಡ್ ಮಾಡಿದ ವ್ಯಕ್ತಿಯ ಖಾತೆಯಿಂದ 10 ಲ.ರೂ. ಲಪಟಾಯಿಸಿದ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೆ.5ರಂದು ತನಗೆ ಬಂದ ಎಪಿಕೆ ಲಿಂಕ್ ಅನ್ನು ಡೌನ್ಲೋಡ್ ಮಾಡಿದ್ದೆ. ಅದರಲ್ಲಿ ತನ್ನ ಮೊಬೈಲ್ ನಂಬರ್ ನಮೂದಿಸಿದ್ದರು. ನಂತರ ಮತ್ತೊಂದು ಮೊಬೈಲ್ ಸಂಖ್ಯೆಯಿಂದ

ಎಪಿಕೆ ಫೈಲ್‌ ಡೌನ್‌ಲೋಡ್‌ ಮಾಡಿ 10 ಲ. ರೂ. ಕಳೆದುಕೊಂಡ ವ್ಯಕ್ತಿ Read More »

ಮಹಿಳಾ ಅಧಿಕಾರಿಯ ಖಾಸಗಿ ದೃಶ್ಯ ಚಿತ್ರೀಕರಿಸಿ ಬ್ಲ್ಯಾಕ್ಮೇಲ್: ಮತ್ತೊಬ್ಬ ಆರೋಪಿ ಪೊಲೀಸ್ ಬಲೆಗೆ

ಬೆಳಗಾವಿ: ಮಹಿಳಾ ಅಧಿಕಾರಿಯ ಮನೆಯಲ್ಲಿ ರಹಸ್ಯ ಕೆಮರಾ ‌ಇರಿಸಿದ ಮೂವರು ನಕಲಿ ಪತ್ರಕರ್ತರ ಬಂಧನ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಮಹಿಳಾ ಅಧಿಕಾರಿಯ ಕೆಳಹಂತದ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದವನೇ ವೃತ್ತಿ ಮಾತ್ಸರ್ಯದಿಂದ ಆರೋಪಿಗಳಿಗೆ ಸಾಥ್ ನೀಡಿದ್ದ ಎನ್ನುವ ವಿಚಾರ ಬಹಿರಂಗವಾಗಿದೆೆ. ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ವಿನೋದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಪೊಲೀಸರು ಆರೋಪಿ ವಿನೋದ್ ಎಂಬವನ ಮೊಬೈಲ್ ಫೋನ್ ತಪಾಸಣೆ ಸಹ ನಡೆಸಿದ್ದಾಗಿ ‌ತಿಳಿದು ಬಂದಿದೆ. ಮಹಿಳಾ ಅಧಿಕಾರಿಯ ಮನೆಯಲ್ಲಿ ರಹಸ್ಯ ಕೆಮರಾ ಇಟ್ಟು, ಖಾಸಗಿ

ಮಹಿಳಾ ಅಧಿಕಾರಿಯ ಖಾಸಗಿ ದೃಶ್ಯ ಚಿತ್ರೀಕರಿಸಿ ಬ್ಲ್ಯಾಕ್ಮೇಲ್: ಮತ್ತೊಬ್ಬ ಆರೋಪಿ ಪೊಲೀಸ್ ಬಲೆಗೆ Read More »

ವಿವಾಹವಾಗುವುದಾಗಿ ನಂಬಿಸಿ, ಮಗು ಕೊಟ್ಟು ಕೈಕೊಟ್ಟ ಪ್ರಕರಣ: ಆರೋಪಿ ಕೃಷ್ಣರಾವ್ ತಂದೆಗೆ ಕೊಂಚ ರಿಲೀಫ್

ಬೆಂಗಳೂರು: ಪುತ್ತೂರಿನಲ್ಲಿ ಯುವತಿಗೆ ಮದುವೆಯಾಗದೆ ಮಗು ಕೊಟ್ಟು ಮೋಸ ಮಾಡಿದ ಪುತ್ರನಿಗೆ ಆಶ್ರಯ ನೀಡಿರುವ ಆರೋಪ ಎದುರಿಸುತ್ತಿರುವ ಪಿ. ಜಿ. ಜಗನ್ನಿವಾಸ ರಾವ್ ಅವರಿಗೆ ಹೈಕೋರ್ಟ್ ಕೊಂಚ ರಿಲೀಫ್ ನೀಡಿದೆ. ಜಗನ್ನಿವಾಸ್ ರಾವ್ ವಿರುದ್ಧದ ಕಾನೂನು ಪ್ರಕ್ರಿಯೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಕಳೆದ ಜೂನ್ ತಿಂಗಳಿನಲ್ಲಿ ಪುತ್ತೂರು ಮಹಿಳಾ ಠಾಣೆಯಲ್ಲಿ ಯುವತಿಯೊಬ್ಬಳು ಕೃಷ್ಣ ಜೆ. ರಾವ್ ಎಂಬ ಯುವಕ ಮದುವೆಯಾಗುವುದಾಗಿ ನಂಬಿಸಿ, ಮಗು ಕರುಣಿಸಿ ಬಳಿಕ ಮೋಸ ಮಾಡಿದ್ದಾನೆ ಎಂದು ದೂರು ನೀಡಿದ್ದಳು. ದೂರು ದಾಖಲಾಗುತ್ತಿದ್ದ ಹಾಗೆ

ವಿವಾಹವಾಗುವುದಾಗಿ ನಂಬಿಸಿ, ಮಗು ಕೊಟ್ಟು ಕೈಕೊಟ್ಟ ಪ್ರಕರಣ: ಆರೋಪಿ ಕೃಷ್ಣರಾವ್ ತಂದೆಗೆ ಕೊಂಚ ರಿಲೀಫ್ Read More »

ಆತ್ಮಹತ್ಯೆ ಮಾಡಿಕೊಳ್ಳುವಾಗ ರುಂಡ ಬೇರ್ಪಟ್ಟು ಸಾವು

ಮನೆಯ ಬಾವಿಗೆ ಹಾರಿ ಆತ್ಮಹತ್ಯೆಗೆತ್ನಿಸಿದಾಗ ಬೇರ್ಪಟ್ಟ ರುಂಡ ಉಡುಪಿ : ನಿವೃತ್ತಿಯ ಅಂಚಿನಲ್ಲಿ ಇರುವ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಳ್ಳಲು ಬಾವಿಗೆ ಹಾರಿದ್ದಾರೆ. ಆದರೆ ಆತ್ಮಹತ್ಯೆ ಮಾಡಿಕೊಳ್ಳುವ ವೇಳೆಯೇ ಅವರ ರುಂಡ ಬೇರ್ಪಟ್ಟು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಉಡುಪಿಯಲ್ಲಿ ನಡೆದಿದೆ. ನಗರದ ಅಂಬಾಗಿಲು ವಾರ್ಡ್‌ನ ಕಕ್ಕುಂಜೆ ಪ್ರದೇಶದಲ್ಲಿ ಶನಿವಾರ ತಡರಾತ್ರಿ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ವೇಳೆ ಅವರ ರುಂಡ ಬೇರ್ಪಟ್ಟಿದೆ. ಮೃತರನ್ನು ಪುರುಷೋತ್ತಮ ನಾಯಕ್ (52) ಎಂದು ಗುರುತಿಸಲಾಗಿದೆ. ಮೃತ ಪುರುಷೋತ್ತಮ ನಾಯಕ್ ಅವರು

ಆತ್ಮಹತ್ಯೆ ಮಾಡಿಕೊಳ್ಳುವಾಗ ರುಂಡ ಬೇರ್ಪಟ್ಟು ಸಾವು Read More »

ಇಸ್ಲಾಮಾಬಾದ್‌ ಮಸೀದಿ ಬಾಂಬ್‌ ಸ್ಫೋಟಕ್ಕೆ 200ಕ್ಕೂ ಅಧಿಕ ಮಂದಿ ಬಲಿ

ಇದು ತನ್ನದೇ ಕೃತ್ಯ ಎಂದು ಹೇಳಿಕೊಂಡ ಇಸ್ಲಾಮಿಕ್‌ ಸ್ಟೇಟ್‌ ಉಗ್ರ ಸಂಘಟನೆ ಇಸ್ಲಾಮಾಬಾದ್‌: ಇಲ್ಲಿನ ಶಿಯಾ ಮಸೀದಿಯಲ್ಲಿ ಕಳೆದ ಶುಕ್ರವಾರ ಸಂಭವಿಸಿದ ಭೀಕರ ಬಾಂಬ್ ಸ್ಫೋಟದಲ್ಲಿ ಮೃತಪಟ್ಟವರು 36 ಮಂದಿ ಅಲ್ಲ ಬದಲಾಗಿ 200ಕ್ಕಿಂತಲೂ ಅಧಿಕ ಎಂದು ವರದಿಯಾಗಿದೆ. ಈ ಸ್ಫೋಟದ ಹೊಣೆಯನ್ನು ಜಾಗತಿಕ ಭಯೋತ್ಪಾದಕ ಸಂಘಟನೆ ಇಸ್ಲಾಮಿಕ್ ಸ್ಟೇಟ್ ಹೊತ್ತುಕೊಂಡಿದೆ. ಈ ಸ್ಫೋಟದ ಬಗ್ಗೆ ಇಸ್ಲಾಮಿಕ್‌ ಸ್ಟೇಟ್‌ ಮುಖವಾಣಿ ಅಮಾಕ್ ಮೂಲಕ ಹೇಳಿಕೆ ನೀಡಿದ್ದು, ಈ ದಾಳಿಯು ಪಾಕಿಸ್ತಾನ ಪ್ರಾಂತ್ಯದಲ್ಲಿ ಇಸ್ಲಾಮಿಕ್ ಸ್ಟೇಟ್ ಸೈನಿಕ ನಡೆಸಿದ

ಇಸ್ಲಾಮಾಬಾದ್‌ ಮಸೀದಿ ಬಾಂಬ್‌ ಸ್ಫೋಟಕ್ಕೆ 200ಕ್ಕೂ ಅಧಿಕ ಮಂದಿ ಬಲಿ Read More »

ಅತ್ಯಾಚಾರ ಎಸಗಿ ಕೊಲೆ : ಅಪರಾಧಿಗಳ ಗಲ್ಲು ಶಿಕ್ಷೆ ಕಾಯಂಗೊಳಿಸಿದ ಹೈಕೋರ್ಟ್‌

ಮಂಗಳೂರಿನ ವಾಮಂಜೂರಿನಲ್ಲಿ 5 ವರ್ಷದ ಹಿಂದೆ ನಡೆದಿದ್ದ ಪೈಶಾಚಿಕ ಕೃತ್ಯ ಬೆಂಗಳೂರು: ಐದು ವರ್ಷಗಳ ಹಿಂದೆ ಮಂಗಳೂರಿನಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷೆಯನ್ನು ಹೈಕೋರ್ಟ್‌ ಕಾಯಂಗೊಳಿಸಿದೆ. ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಲ್ಲದೆ, ಕತ್ತು ಹಿಸುಕಿ ಕೊಲೆ ಮಾಡಿದ ಅಪರಾಧಿಗಳ ಶಿಕ್ಷೆ ಪ್ರಮಾಣ ಕಡಿಮೆ ಮಾಡಿದಲ್ಲಿ ಅಂತಹ ಕೃತ್ಯಗಳನ್ನು ಪ್ರೋತ್ಸಾಹಿಸಿದಂತಾಗಲಿದ್ದು, ಸಮಾಜಕ್ಕೆ ತಪ್ಪು ಸಂದೇಶ ನೀಡಿದಂತಾಗುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಗಲ್ಲುಶಿಕ್ಷೆಯನ್ನು ಕಾಯಂಗೊಳಿಸಲು ಕೋರಿ ರಾಜ್ಯ ಸರ್ಕಾರ

ಅತ್ಯಾಚಾರ ಎಸಗಿ ಕೊಲೆ : ಅಪರಾಧಿಗಳ ಗಲ್ಲು ಶಿಕ್ಷೆ ಕಾಯಂಗೊಳಿಸಿದ ಹೈಕೋರ್ಟ್‌ Read More »

ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

ಪುತ್ತೂರಿನಲ್ಲಿ ಕೋಮು ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ದಾಖಲಾಗಿದ್ದ ಕೇಸ್‌ ಬೆಂಗಳೂರು: ಕೋಮು ದ್ವೇಷದ ಮಾತುಗಳನ್ನಾಡಿದ ಸಂಬಂಧ ಯೂಟ್ಯೂಬ್‌ ಚಾನಲ್‌ನಲ್ಲಿ ಪ್ರಸಾರವಾದ ವಿಡಿಯೋ ಆಧರಿಸಿ ಆರ್‌ಎಸ್‌ಎಸ್‌ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ಪುತ್ತೂರು ನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದು ಕೋರಿ ಪ್ರಭಾಕರ್‌ ಭಟ್‌ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ನಡೆಸಿತು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ಪ್ರಭಾಕರ್‌ ಭಟ್‌ ಭಾಷಣ

ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ Read More »

ಪುತ್ತೂರು : ಆರೋಪಿಗಳಿಗೆ ಗಾಂಜಾ ಪೂರೈಸುತ್ತಿದ್ದ ಮೂವರ ಬಂಧನ

ಪುತ್ತೂರಿನಲ್ಲಿ 1.6 ಕ್ವಿಂಟಾಲ್‌ ಗಾಂಜಾ ವಶವಾದ ಪ್ರಕರಣ ಪುತ್ತೂರು : ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಜ.19ರಂದು 53,03,000 ರೂ .ಮೌಲ್ಯದ 1 ಕ್ವಿಂಟಾಲ್ 6 ಕೆ.ಜಿ 50 ಗ್ರಾಂ ಗಾಂಜಾ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಒಡಿಶಾದ ವ್ಯಕ್ತಿ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಆರೋಪಿಗಳಿಗೆ ಹಣ ಮತ್ತು ವಾಹನದ ವ್ಯವಸ್ಥೆಯನ್ನು ಮಾಡಿದ ಬೆಳ್ತಂಗಡಿ ಚಾರ್ಮಾಡಿ ನಿವಾಸಿ ಮಹಮ್ಮದ್ ಫಯಾಜ್ ಡಿ.ಕೆ (27) ಹಾಗೂ ಬೆಳ್ತಂಗಡಿ ಕಕ್ಕಿಂಜೆ ನಿವಾಸಿ ನಝಿರ್ (42)

ಪುತ್ತೂರು : ಆರೋಪಿಗಳಿಗೆ ಗಾಂಜಾ ಪೂರೈಸುತ್ತಿದ್ದ ಮೂವರ ಬಂಧನ Read More »

ಮದ್ಯದ ನಶೆಯಲ್ಲಿ ನಡುರಸ್ತೆಯಲ್ಲಿ ರಂಪಾಟ ಮಾಡಿದ ಯುವತಿಯರು

ಯದ್ವಾತದ್ವಾ ಸ್ಕೂಟಿ ಚಲಾಯಿಸಿ ಹಲವು ವಾಹನಗಳಿಗೆ ಡಿಕ್ಕಿ ಬೆಂಗಳೂರು: ಇಬ್ಬರು ಯುವತಿಯರು ಕಂಠಪೂರ್ತಿ ಮದ್ಯ ಸೇವಿಸಿ ಹಾದಿಬೀದಿಯಲ್ಲಿ ರಂಪಾಟ ನಡೆಸಿದ ಘಟನೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆ ಹುಳಿಮಾವು ಬಳಿ ಶನಿವಾರ ತಡರಾತ್ರಿ ನಡೆದಿದೆ. ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಯುವತಿಯರು ಸಿಕ್ಕ ಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದಿದ್ದಾರೆ. ಕ್ಯಾಬ್‌ಗೆ ಡಿಕ್ಕಿ ಹೊಡೆದು ಚಾಲಕ ಜೊತೆ ಡಿಕ್ಕಿ ಹೊಡೆದು ಜಗಳ ಮಾಡಿದ್ದಾರೆ. ಕ್ಯಾಬ್‌ ಚಾಲಕ ನಿಮ್ಮದೇ ತಪ್ಪು ಎಂದಿದ್ದಕ್ಕೆ ಮದ್ಯದ ಬೆರಳು ತೋರಿಸಿ ಅವಾಚ್ಯ ಪದಗಳಿಂದ ನಿಂದಿಸಿ ಹಲ್ಲೆ ಮಾಡಲು

ಮದ್ಯದ ನಶೆಯಲ್ಲಿ ನಡುರಸ್ತೆಯಲ್ಲಿ ರಂಪಾಟ ಮಾಡಿದ ಯುವತಿಯರು Read More »

error: Content is protected !!
Scroll to Top