ಅಪರಾಧ

ಕಾಡಾನೆ ಕಾರ್ಯಾಚರಣೆ ಕೊನೆಗೂ ಯಶಸ್ವಿ | ಇಬ್ಬರ ಹತ್ಯೆಗೈದ ಕಾಡಾನೆ ಸೆರೆ

ಪುತ್ತೂರು: ಅಭಿಮನ್ಯು ಸಹಿತ ದುಬಾರೆಯ 5 ಆನೆಗಳ ಸಹಾಯದಿಂದ ಕಳೆದ 3 ದಿನಗಳಿಂದ ಕಡಬ ರಕ್ಷಿತಾರಣ್ಯದಲ್ಲಿ ನಡೆಯುತ್ತಿರುವ ಕಾಡಾನೆ ಕಾರ್ಯಾಚರಣೆ ಕೊನೆಗೂ ಯಶಸ್ವಿ ಕಂಡಿದೆ. ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಗುರುವಾರ ಸಂಜೆ ಸೆರೆ ಹಿಡಿದಿದೆ. ಕಡಬ ತಾಲೂಕಿನ ರೆಂಜಿಲಾಡಿಯ ನೈಲ ಎಂಬಲ್ಲಿ ಫೆ. 20ರಂದು ರಂಜಿತಾ (21) ಹಾಗೂ ರಮೇಶ್ ರೈ (52) ಎಂಬವರನ್ನು ಕಾಡಾನೆ ಕೊಂದು ಹಾಕಿತ್ತು. ಸ್ಥಳೀಯರ ಒತ್ತಾಯದ ಮೇರೆಗೆ ಅಷ್ಟರಲ್ಲಿ ಅಲ್ಲಿಗಾಗಮಿಸಿದ ಆನೆಗಳ ಸಹಾಯದಿಂದ ಕಾರ್ಯಾಚರಣೆ ನಡೆಸಲಾಗಿತ್ತು. ಆದರೆ 3 ದಿನ […]

ಕಾಡಾನೆ ಕಾರ್ಯಾಚರಣೆ ಕೊನೆಗೂ ಯಶಸ್ವಿ | ಇಬ್ಬರ ಹತ್ಯೆಗೈದ ಕಾಡಾನೆ ಸೆರೆ Read More »

ಮಿತ್ತೂರು ಫ್ರೀಡಂ ಕಮ್ಯೂನಿಟಿ ಹಾಲಿನಲ್ಲಿ ಉಗ್ರ ಚಟುವಟಿಕೆ | ಎನ್‍.ಐ.ಎ. ವಶಕ್ಕೆ ಫ್ರೀಡಂ ಕಮ್ಯೂನಿಟಿ ಹಾಲ್

ಪುತ್ತೂರು : ಬಿಜೆಪಿ ಯುವ ಮುಖಂಡ, ಬೆಳ್ಳಾರೆ ಸಮೀಪದ ನೆಟ್ಟಾರು ನಿವಾಸಿ ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ನಡೆದ ತನಿಖೆ ವೇಳೆ ಕಬಕ ಸಮೀಪದ ಇಡ್ಕಿದು ಗ್ರಾಮದ ಮಿತ್ತೂರು ಎಂಬಲ್ಲಿಯ ಫ್ರೀಡಂ ಕಮ್ಯೂನಿಟಿ ಹಾಲ್ ನಲ್ಲಿ ಪಿಎಫ್ ಐ ಸದಸ್ಯರಿಗೆ ಅನಧಿಕೃತವಾಗಿ ಭಯೋತ್ಪಾದನಾ ಚಟುವಟಿಕೆಗೆ ಸಹಕಾರಿಯಾಗುವ ಶಸ್ತ್ರಾಸ್ತ್ರ ತರಬೇತಿ ನೀಡಲಾಗುತ್ತಿದೆ ಎಂಬ ವಿಚಾರ ಬಹಿರಂಗಗೊಂಡ ಹಿನ್ನಲೆಯಲ್ಲಿ ರಾಷ್ಟ್ರೀಯ ತನಿಖಾ ದಳ ಫ್ರೀಡಂ ಕಮ್ಯೂನಿಟಿ ಹಾಲ್ ನ್ನು ಸ್ವಾಧೀನಪಡಿಸಿಕೊಂಡು ಬೀಗ ಜಡಿದಿದೆ. ಮಿತ್ತೂರಿನಲ್ಲಿ ಸುಮಾರು 0.20 ಎಕ್ರೆ ಜಾಗದಲ್ಲಿ ಈ

ಮಿತ್ತೂರು ಫ್ರೀಡಂ ಕಮ್ಯೂನಿಟಿ ಹಾಲಿನಲ್ಲಿ ಉಗ್ರ ಚಟುವಟಿಕೆ | ಎನ್‍.ಐ.ಎ. ವಶಕ್ಕೆ ಫ್ರೀಡಂ ಕಮ್ಯೂನಿಟಿ ಹಾಲ್ Read More »

ಬೆಳ್ತಂಗಡಿಯಲ್ಲಿ ವ್ಯಾಪಿಸಿದ ಭಾರಿ ಕಾಡ್ಗಿಚ್ಚು

ಬೆಟ್ಟದ ತುದಿ ತನಕ ವ್ಯಾಪಿಸಿದ ಬೆಂಕಿ; ನಂದಿಸುವ ಕಾರ್ಯಾಚರಣೆ ಪ್ರಗತಿಯಲ್ಲಿ ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಬೆಳ್ತಂಗಡಿ ವನ್ಯಜೀವಿ ವಲಯ ಪ್ರದೇಶದ ಸುಮಾರು 10 ಎಕರೆ ಪ್ರದೇಶದಲ್ಲಿ ಬುಧವಾರ ಭಾರಿ ಕಾಡ್ಗಿಚ್ಚು ವ್ಯಾಪಿಸಿದ್ದು, ಬೆಂಕಿ ನಂದಿಸಲು ಅಧಿಕಾರಿಗಳು ಹರಸಾಹಸಪಟ್ಟಿದ್ದಾರೆ. ಇದೀಗ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎನ್ನಲಾಗಿದ್ದು, ಶೇ. 80ಕ್ಕೂ ಹೆಚ್ಚಿನ ಬೆಂಕಿಯನ್ನು ನಂದಿಸಲಾಗಿದೆ. ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರಿದಿದೆ. ಕಾಡ್ಗಿಚ್ಚಿಗೆ ಕಾರಣವೇನೆಂಬುದು ಇನ್ನಷ್ಟೇ ತಿಳಿಯಬೇಕಿದೆ. ಅಳದಂಗಡಿ ವಲಯದ ಹೂವಿನಕೊಪ್ಪಲು ಹಾಗೂ ಊರ್ಜಾಲುಬೆಟ್ಟ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು ಹರಡಿತ್ತು ಎಂದು

ಬೆಳ್ತಂಗಡಿಯಲ್ಲಿ ವ್ಯಾಪಿಸಿದ ಭಾರಿ ಕಾಡ್ಗಿಚ್ಚು Read More »

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಯುವತಿ ಮೇಲೆ ಮೂತ್ರ ವಿಸರ್ಜಿಸಿದ ಸಹ ಪ್ರಯಾಣಿಕ

ಮಂಗಳೂರಿಗೆ ಬರುತ್ತಿದ್ದ ಬಸ್‌ನಲ್ಲಿ ನಡೆದ ಘಟನೆ ಬೆಂಗಳೂರು : ಕಳೆದ ವರ್ಷ ಏರ್​ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕ ವೃದ್ಧ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ಘಟನೆ ಭಾರಿ ಸುದ್ದಿಯಾಗಿ, ಆ ಪ್ರಯಾಣಿಕನ ಬಂಧನವೂ ಆಗಿತ್ತು. ಇದೀಗ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಇದೇ ಮಾದರಿಯ ಘಟನೆ ನಡೆದಿದೆ. ವಿಜಯಪುರದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್​​ನಲ್ಲಿ ಪ್ರಯಾಣಿಕನೊಬ್ಬ ಯುವತಿ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ನಾನ್​ ಎಸಿ ಸ್ಲೀಪರ್​ ಬಸ್​​ ಹುಬ್ಬಳ್ಳಿ ಸಮೀಪದ ಕಿರೇಸೂರು ಢಾಬಾದಲ್ಲಿ ನಿಂತಾಗ ಯುವತಿ ಸೀಟ್​​ನ ಬಳಿ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಯುವತಿ ಮೇಲೆ ಮೂತ್ರ ವಿಸರ್ಜಿಸಿದ ಸಹ ಪ್ರಯಾಣಿಕ Read More »

ಇಸ್ಲಾಂ ಮತ ಪ್ರವಚನಕ್ಕೆ ವಿದ್ಯಾರ್ಥಿಗಳನ್ನು ಕಳುಹಿಸಿದ ಘಟನೆ: ಮುಖ್ಯಶಿಕ್ಷಕ ತಾತ್ಕಾಲಿಕ ಅಮಾನತು

ಪುತ್ತೂರು: ಅಡ್ಯನಡ್ಕ ಜನತಾ ಪ್ರೌಢಶಾಲೆಯಲ್ಲಿ ಸಮೀಪದ ಕಟ್ಟಡದಲ್ಲಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಕಾರ್ಯಾಗಾರ ಆಯೋಜಿಸಿ, ಅದರಲ್ಲಿ ಇಸ್ಲಾಂ ಮತಪ್ರವಚನ ನೀಡಿದ ಘಟನೆಗೆ ಸಂಬಂಧಪಟ್ಟಂತೆ ಶಾಲಾ ಮುಖ್ಯಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿದುಬಂದಿದೆ. ಅಡ್ಯನಡ್ಕ ಎಜ್ಯುಕೇಶನಲ್ ಸೊಸೈಟಿಯ ಕಾರ್ಯದರ್ಶಿಗಳು ಅಧ್ಯಕ್ಷರ ಅನುಮತಿ ಮೇರೆಗೆ ಈ ಆದೇಶ ಹೊರಡಿಸಿದ್ದಾರೆ. ಆದ್ದರಿಂದ ಪ್ರೌಢಶಾಲಾ ಮುಖ್ಯಶಿಕ್ಷಕ ಟಿ.ಆರ್. ನಾಯ್ಕ್ ಅವರನ್ನು ತಾತ್ಕಾಲಿಕವಾಗಿ ಸೇವೆಯಿಂದ ಅಮಾನತುಗೊಳ್ಳಲಿದ್ದಾರೆ. ಫೆ. 18ರಂದು 10ನೇ ತರಗತಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರನ್ನು ಶಾಲಾ ಮುಖ್ಯಶಿಕ್ಷಕ ಟಿ.ಆರ್. ನಾಯ್ಕ್ ಅವರು ಕಾರ್ಯಾಗಾರಕ್ಕೆ ಕಳುಹಿಸಿಕೊಟ್ಟಿದ್ದರು. ಆ

ಇಸ್ಲಾಂ ಮತ ಪ್ರವಚನಕ್ಕೆ ವಿದ್ಯಾರ್ಥಿಗಳನ್ನು ಕಳುಹಿಸಿದ ಘಟನೆ: ಮುಖ್ಯಶಿಕ್ಷಕ ತಾತ್ಕಾಲಿಕ ಅಮಾನತು Read More »

ಮತ್ತೆ ಬೆನ್ನಟ್ಟಿದ ಕಾಡಾನೆ | ಸ್ವಲ್ಪದರಲ್ಲೇ ಮಹಿಳೆ ಬಚಾವ್ | ಕೊಣಾಜೆ ಗ್ರಾಮದ ಪುತ್ತಿಗೆಯಲ್ಲಿ ಘಟನೆ

ಕಡಬ: ಆನೆ ಅವಾಂತರಕ್ಕೆ ಇಬ್ಬರು ಬಲಿಯಾದ ಬೆನ್ನಲ್ಲೇ, ಮತ್ತೊಬ್ಬಾಕೆ ಮಹಿಳೆಯನ್ನು ಆನೆ ಬೆನ್ನಟ್ಟಿದ ಘಟನೆ ಫೆ. 21ರಂದು ಸಂಜೆ ನಡೆದಿರುವ ಬಗ್ಗೆ ವರದಿಯಾಗಿದೆ. ಕೊಣಾಜೆ ಗ್ರಾಮದ ಪುತ್ತಿಗೆಯಲ್ಲಿ ಘಟನೆ ನಡೆದಿದ್ದು, ಮಹಿಳೆಯೋರ್ವರು ಸ್ವಲ್ಪದರಲ್ಲೇ ತಪ್ಪಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಪಿಕಪಿನಲ್ಲಿ ತಮ್ಮ ಮನೆಗೆ ಆಗಮಿಸಿದ ಮಹಿಳೆ, ಪಿಕಪ್ ವಾಹನದಿಂದ ಇಳಿದುಕೊಂಡು ಹೋಗುತ್ತಿದ್ದಾಗ ಆನೆ ಬೆನ್ನಟ್ಟಿದೆ. ವಾಹನದಿಂದ ಇಳಿದ ಮಹಿಳೆ, ಬೊಬ್ಬೆ ಹಾಕುತ್ತಾ ಓಡಿ ತಪ್ಪಿಸಿಕೊಂಡಿದ್ದಾರೆ. ಇದರಿಂದಾಗಿ ತಕ್ಷಣ ಜನರು ಜಮಾಯಿಸಿ, ಆನೆಯನ್ನು ಬೆನ್ನಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇಬ್ಬರನ್ನು ಬಲಿ

ಮತ್ತೆ ಬೆನ್ನಟ್ಟಿದ ಕಾಡಾನೆ | ಸ್ವಲ್ಪದರಲ್ಲೇ ಮಹಿಳೆ ಬಚಾವ್ | ಕೊಣಾಜೆ ಗ್ರಾಮದ ಪುತ್ತಿಗೆಯಲ್ಲಿ ಘಟನೆ Read More »

ಕಾಡಾನೆ ದಾಳಿಯಿಂದ ಇಬ್ಬರು ಮೃತ್ಯು | ಎಚ್ಚೆತ್ತುಕೊಂಡ ಅರಣ್ಯ ಇಲಾಖೆ | ಕಾಡಾನೆ ಸೆರೆಹಿಡಿಯಲು  ಮೈಸೂರು, ದುಬಾರೆಯಿಂದ ಪಳಗಿದ ಆನೆ ಆಗಮನ

ಪುತ್ತೂರು : ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ರೆಂಜಿಲಾಡಿ ಸಮೀಪದ ನೈಲದಲ್ಲಿ ಸೋಮವಾರ ಮುಂಜಾನೆ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟ ಬೆನ್ನಲ್ಲೇ ಎಚ್ಚೆತ್ತುಕೊಂಡ ಅರಣ್ಯ ಇಲಾಖೆ ದಾಳಿ ನಡೆಸಿದ ಕಾಡಾನೆಯನ್ನು ಸೆರೆಹಿಡಿಯಲು ಮೈಸೂರು ಹಾಗೂ ದುಬಾರೆಯಿಂದ ಪಳಗಿನ ಆನೆಗಳನ್ನು ತರಿಸಲಾಗಿದೆ. ಸೋಮವಾರ ರಾತ್ರಿಯೇ ಬೃಹತ್‍ ಲಾರಿಗಳ ಮೂಲಕ ಮೈಸೂರು ಹಾಗೂ ದುಬಾರೆಯಿಂದ ಐದು ಆನೆಗಳು ಆಗಮಿಸಿದ್ದು, ಮಂಗಳವಾರ ಬೆಳಿಗ್ಗೆಯಿಂದ ಕಾಡಾನೆಗಳನ್ನು ಸೆರೆ ಹಿಡಿಯುವ ಕಾರ್ಯಾಚರಣೆ ಆರಂಭಗೊಂಡಿದೆ. ಸೋಮವಾರ ಬೆಳಿಗ್ಗೆ ಕಾಡಾನೆ ದಾಳಿಯಿಂದ ಕಡಬ ತಾಲೂಕಿನ  ರೆಂಜಲಾಡಿ ಗ್ರಾಮದ

ಕಾಡಾನೆ ದಾಳಿಯಿಂದ ಇಬ್ಬರು ಮೃತ್ಯು | ಎಚ್ಚೆತ್ತುಕೊಂಡ ಅರಣ್ಯ ಇಲಾಖೆ | ಕಾಡಾನೆ ಸೆರೆಹಿಡಿಯಲು  ಮೈಸೂರು, ದುಬಾರೆಯಿಂದ ಪಳಗಿದ ಆನೆ ಆಗಮನ Read More »

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ : ಅಪಾಯದಿಂದ ಪಾರು

ಪುತ್ತೂರು : ಹುಂಡೈ ಐ10 ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕುಂಬ್ರ ಸಮೀಪದ ಮಡ್ಯಂಗಳದಲ್ಲಿ ಸೋಮವಾರ ನಡೆದಿದೆ. ಕಾರಿನಲ್ಲಿ ತಂದೆ ಮತ್ತು ಮಗಳು ಸುಳ್ಯಕ್ಕೆ ಪ್ರಾಣಿಸುತ್ತಿದ್ದು. ಮಗಳು ಕಾರನ್ನು ಚಲಾಯಿಸುತ್ತಿದ್ದರು ಎಂದು ತಿಳಿದು ಬಂದಿದೆ. ಮಡ್ಯಂಗಳ ತಲುಪುತ್ತಿದ್ದಂತೆ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇಬ್ಬರಿಗೂ ಯಾವುದೇ ಗಾಯಗಳಾಗದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ : ಅಪಾಯದಿಂದ ಪಾರು Read More »

ಕಡಬದ ಕುಟ್ರುಪ್ಪಾಡಿಯಲ್ಲಿ ಸೋಮವಾರ ಮುಂಜಾನೆ ಆನೆ ದಾಳಿ | ಇಬ್ಬರು ಮೃತ್ಯು | ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು

ಕಡಬ : ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮದ ಮೀನಾಡಿ ಎಂಬಲ್ಲಿ ಸೋಮವಾರ ಮುಂಜಾನೆ ಆನೆಯೊಂದು ದಾಳಿ ನಡೆಸಿದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವರನ್ನು ಕಡಬ ತಾಲೂಕಿನ  ರೆಂಜಲಾಡಿ ಗ್ರಾಮದ ನೈಲ ನಿವಾಸಿಗಳಾದ ರಂಜಿತಾ (21) ಹಾಗೂ  ರಮೇಶ್ ರೈ(55) ಎಂದು ತಿಳಿದು ಬಂದಿದೆ. ರಂಜಿತಾ ಪೇರಡ್ಕ ಹಾಲಿನ ಸೊಸೈಟಿಯಲ್ಲಿ ಉದ್ಯೋಗಿಯಾಗಿದ್ದು, ಸೋಮವಾರ ಮುಂಜಾನೆ ಕರ್ತವ್ಯಕ್ಕೆ ಮನೆಯಿಂದ ಹೋಗುತ್ತಿದ್ದಾಗ ಮೀನಾಡಿ ಸಮೀಪ ರಸ್ತೆಯಲ್ಲಿ ಆನೆಯೊಂದು ಹಠಾತ್ತನಎ  ದಾಳಿ ನಡೆಸಿದೆ. ಈ ಸಂದರ್ಭ ಯುತಿಯ ಬೊಬ್ಬೆ ಹೊಡೆದದ್ದನ್ನು

ಕಡಬದ ಕುಟ್ರುಪ್ಪಾಡಿಯಲ್ಲಿ ಸೋಮವಾರ ಮುಂಜಾನೆ ಆನೆ ದಾಳಿ | ಇಬ್ಬರು ಮೃತ್ಯು | ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು Read More »

ಸವಣೂರು ಕಂಚಿಕಾರ ಕೆರೆ ಸುತ್ತ ಖಾಸಗಿ ವ್ಯಕ್ತಿಯಿಂದ ಒತ್ತುವರಿ | ಸಮಸ್ಯೆ ಪರಿಹರಿಸದಿದ್ದಲ್ಲಿ ಸದಸ್ಯರಿಂದ ಸಾಮೂಹಿಕ ರಾಜೀನಾಮೆಯ ಎಚ್ಚರಿಕೆ

ಪುತ್ತೂರು : ಸವಣೂರು ಗ್ರಾಪಂ ವ್ಯಾಪ್ತಿಯಲ್ಲಿರುವ ಕಂಚಿಕಾರ ಕೆರೆಯ ವ್ಯಾಪ್ತಿಯಲ್ಲಿನ ಐತಿಹಾಸಿಕ ಕಂಚಿಕಾರ ಕೆರೆಯನ್ನು ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿದ್ದು, ಈ ಕೆರೆಯ ವ್ಯಾಪ್ತಿ ಸೇರಿದಂತೆ ಸುತ್ತಮುತ್ತಲಿನ ಕಂದಾಯ ಜಾಗವನ್ನು ಖಾಸಗಿ ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿದ್ದಾರೆ. ಕೆರೆ ಅತಿಕ್ರಮಣದ ಬಗ್ಗೆ ಗ್ರಾಪಂ ನಿರ್ಣಯ ಕೈಗೊಂಡು ಸಂಬಂಧಿಸಿದ ಕಂದಾಯ ಅಧಿಕಾರಿಗಳಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಫೆ.೨೦ರಂದು ದೋಳ್ಪಾಡಿಯಲ್ಲಿ ಜಿಲ್ಲಾಧಿಕಾರಿಗಳ ಗ್ರಾಮವಾಸ್ತವ್ಯ ಕಾರ್ಯಕ್ರಮವಿದೆ. ಅದಕ್ಕೆ ಮೊದಲು ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಯನ್ನು ಪರಿಹರಿಸದಿದ್ದಲ್ಲಿ ಮುಂದಿನ

ಸವಣೂರು ಕಂಚಿಕಾರ ಕೆರೆ ಸುತ್ತ ಖಾಸಗಿ ವ್ಯಕ್ತಿಯಿಂದ ಒತ್ತುವರಿ | ಸಮಸ್ಯೆ ಪರಿಹರಿಸದಿದ್ದಲ್ಲಿ ಸದಸ್ಯರಿಂದ ಸಾಮೂಹಿಕ ರಾಜೀನಾಮೆಯ ಎಚ್ಚರಿಕೆ Read More »

error: Content is protected !!
Scroll to Top