ಅಪರಾಧ

ಸೌದಿ ಅರೇಬಿಯಾದಲ್ಲಿ ಕಾಸರಗೋಡಿನ ಚಾಲಕನ ಹತ್ಯೆ

ಟ್ಯಾಕ್ಸಿ ಸ್ವಚ್ಛಗೊಳಿಸುತ್ತಿದ್ದಾಗ ಗುಂಡಿಕ್ಕೆ ಕೊಂದ ದುಷ್ಕರ್ಮಿಗಳು ರಿಯಾದ್: ಕಾಸರಗೋಡು ಮೂಲದ ಟ್ಯಾಕ್ಸಿ ಚಾಲಕರೊಬ್ಬರನ್ನು ಭಾನುವಾರ ನಸುಕಿನ ಜಾವ ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಸೌದಿ ಅರೇಬಿಯದ ಅಸೀರ್ ಪ್ರಾಂತ್ಯದ ಬಿಶಾ ಎಂಬಲ್ಲಿ ನಡೆದಿದೆ.ಕೊಲೆಯಾದ ಟ್ಯಾಕ್ಸಿ ಚಾಲಕನನ್ನು ಕಾಸರಗೋಡು ಕುತ್ತಿಕೋಲ್ ಏಣಿಯಾಡಿಯ 42 ವರ್ಷದ ಬಷೀರ್ ಎಂದು ಗುರುತಿಸಲಾಗಿದೆ. ಕಳೆದ 15 ವರ್ಷಗಳಿಂದ ಬಷೀರ್ ಅವರು ಸೌದಿ ಅರೇಬಿಯಾದಲ್ಲಿ ಟ್ಯಾಕ್ಸಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಅವರು ಮೊದಲು ಹೌಸ್ ಡ್ರೈವರ್ ವೀಸಾದ ಮೇಲೆ ಸೌದಿಗೆ ಹೋಗಿದ್ದರು ಎನ್ನಲಾಗಿದೆ. ಬಿಶಾ […]

ಸೌದಿ ಅರೇಬಿಯಾದಲ್ಲಿ ಕಾಸರಗೋಡಿನ ಚಾಲಕನ ಹತ್ಯೆ Read More »

ಪೊಲೀಸರು ಇನ್ನು ವಾಹನಗಳ ಕೀಲಿಕೈ ಕಿತ್ತುಕೊಳ್ಳುವಂತಿಲ್ಲ

ವಾಹನ ತಪಾಸಣೆಗಾಗಿ ಕಟ್ಟುನಿಟ್ಟಿನ ಮಾರ್ಗಸೂಚಿ ಹೊರಡಿಸಿದ ಡಿಜಿಪಿ ಬೆಂಗಳೂರು : ಮಂಡ್ಯ ಜಿಲ್ಲೆಯಲ್ಲಿ ಇತ್ತೀಚೆಗೆ ಸಂಚಾರ ನಿಯಮ ಉಲ್ಲಂಘಿಸುವ ವಾಹನ ತಪಾಸಣೆ ವೇಳೆ ಅಪಘಾತಕ್ಕೀಡಾಗಿ ಮಗು ಸಾವಿಗೀಡಾದ ಪ್ರಕರಣ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಪೊಲೀಸರ ವಾಹನ ತಪಾಸಣೆಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಲವು ಸೂಚನೆಗಳನ್ನು ನೀಡಿದ್ದಾರೆ. ಈ ಸಂಬಂಧ ಶನಿವಾರ ಸುತ್ತೋಲೆ ಹೊರಡಿಸಿರುವ ಡಿಜಿಪಿ-ಐಜಿಪಿ ಡಾ.ಎಂ.ಎ.ಸಲೀಂ, ಕಣ್ಣಿಗೆ ಕಾಣುವಂತೆ ಸಂಚಾರ ನಿಯಮ ಉಲ್ಲಂಘಿಸದ ವಾಹನಗಳನ್ನು ಅಡ್ಡಗಟ್ಟಿ ತಪಾಸಣೆ ಮಾಡಬಾರದು. ವಾಹನ ತಪಾಸಣೆ ವೇಳೆ ಬಾಡಿ ವೋರ್ನ್‌ ಕ್ಯಾಮೆರಾಗಳನ್ನು ಕಡ್ಡಾಯವಾಗಿ

ಪೊಲೀಸರು ಇನ್ನು ವಾಹನಗಳ ಕೀಲಿಕೈ ಕಿತ್ತುಕೊಳ್ಳುವಂತಿಲ್ಲ Read More »

15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಇಬ್ಬರು ಆರೋಪಿಗಳು ಸೆರೆ

ಬೆಳಗಾವಿಯಲ್ಲಿ ಒಂದೇ ವಾರದಲ್ಲಿ ಸಂಭವಿಸಿದ ಎರಡನೇ ಪ್ರಕರಣ ಬೆಳಗಾವಿ : ಬೆಳಗಾವಿಯಲ್ಲಿ ಇನ್ನೊಂದು ಗ್ಯಾಂಗ್‌ರೇಪ್‌ ಪ್ರಕರಣ ಸಂಭವಿಸಿದೆ. ಹದಿನೈದು ವರ್ಷದ ಬಾಲಕಿ ಮೇಲೆ 6 ಜನ ಎರಡೆರಡು ಬಾರಿ ಸಾಮೂಹಿಕ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ನಗರದ ಹೊರವಲಯದ ಕಾಕತಿ ಪೊಲೀಸ್‌ ಠಾಣೆ ವ್ಯಾಪ್ತಿಯ ಗುಡ್ಡದಲ್ಲಿ ನಡೆದಿದೆ.ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಎಫ್‌ಐಆರ್​ ದಾಖಲಾದ ಬಳಿಕ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಸಹಿತ ಉಳಿದ ನಾಲ್ವರು ತಪ್ಪಿಸಿಕೊಂಡಿದ್ದಾರೆ. ಆರು ತಿಂಗಳ ಹಿಂದೆ ಸ್ನೇಹಿತ ಬಾಲಕಿಯನ್ನು

15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಇಬ್ಬರು ಆರೋಪಿಗಳು ಸೆರೆ Read More »

ಮಹಿಳೆಗೆ 92 ಲ.ರೂ. ವಂಚನೆ : ಖ್ಯಾತ ನಿರ್ಮಾಪಕನ ವಿರುದ್ಧ ದೂರು ದಾಖಲು

ಶಿವರಾಜ್‌ಕುಮಾರ್‌, ಗಣೇಶ್‌ ಅಭಿನಯದ ಸಿನಿಮಾ ಮಾಡುತ್ತಿದ್ದೇನೆ ಎಂದು ನಂಬಿಸಿ ವಂಚನೆ ಬೆಂಗಳೂರು : ಕನ್ನಡದ ಖ್ಯಾತ ಚಿತ್ರ ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಮಹಿಳೆಯೊಬ್ಬರಿಗೆ 92 ಲ.ರೂ. ವಂಚಿಸಿದ ಕುರಿತು ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐ ದಾಖಲಾಗಿದೆ. ಶಿವರಾಜ್​ಕುಮಾರ್, ಗಣೇಶ್ ಜೊತೆ ಸಿನಿಮಾ ಮಾಡುವುದಾಗಿ ನಂಬಿಸಿ ಮಹಿಳೆಯಿಂದ ಸೂರಪ್ಪ ಬಾಬು ಹಣ ಪಡೆದಿದ್ದರು ಎನ್ನಲಾಗಿದೆ. ಆದರೆ ನಂತರ ಸಾಲ ವಾಪಸ್ ಕೇಳಿದಾಗ ಮಹಿಳೆಗೆ ಬೆದರಿಕೆ ಹಾಕಿದರು ಎಂಬ ಆರೋಪಿಸಲಾಗಿದೆ. ಪುನೀತ್ ರಾಜ್​ಕುಮಾರ್​ ನಟನೆಯ ‘ಪೃಥ್ವಿ’, ಕಿಚ್ಚ

ಮಹಿಳೆಗೆ 92 ಲ.ರೂ. ವಂಚನೆ : ಖ್ಯಾತ ನಿರ್ಮಾಪಕನ ವಿರುದ್ಧ ದೂರು ದಾಖಲು Read More »

ಐದು ತಿಂಗಳ ಹಿಂದೆ ನಡೆದ ಹಲ್ಲೆಯ ಕುರಿತು ದೂರು

ಬೈಕಿನಲ್ಲಿ ಹೋಗುವಾಗ ಕಲ್ಲಿನಿಂದ ದಾಳಿ ಮಾಡಿದ ಆರೋಪ ಬಂಟ್ವಾಳ : ಐದು ತಿಂಗಳ ಹಿಂದೆ ಕಲ್ಲಿನಿಂದ ದಾಳಿ ಮಾಡಿದ್ದಾರೆ ಎಂದು ಬಂಟ್ವಾಳ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಕೊಲತ್ತಮಜಲು ಎಂಬಲ್ಲಿ ಯುವಕನೊಬ್ಬ ಕಲ್ಲು ತೂರಾಟದಿಂದ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಡಿಸೆಂಬರ್ 29, 2024ರಂದು ನಡೆದ ಘಟನೆಯ ಬಗ್ಗೆ ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಬಡಗಬೆಳ್ಳೂರು ನಿವಾಸಿ ಶಮೀರ್ (31) ಎಂಬ ಯುವಕ ದೂರು ನೀಡಿದ್ದು, ತೇಜಾಕ್ಷ

ಐದು ತಿಂಗಳ ಹಿಂದೆ ನಡೆದ ಹಲ್ಲೆಯ ಕುರಿತು ದೂರು Read More »

ಮಟ್ಕಾ, ಜುಗಾರಿ : ಬುಕ್ಕಿ ಸಹಿತ ಇಬ್ಬರ ಬಂಧನ

ಉಡುಪಿ : ಮಟ್ಕಾ ಜುಗಾರಿ ಪ್ರಕರಣಕ್ಕೆ ಸಂಬಂಧಿಸಿ ಬುಕ್ಕಿ ಸಹಿತ ಇಬ್ಬರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ವಿಠಲ ದೇವಾಡಿಗ ಹಾಗೂ ಜೂಜಾಟದ ಬುಕ್ಕಿ ಉಡುಪಿ ಲಿಯೋ ಕರ್ನೇಲಿಯೋ ಬಂಧಿತರು. ಆರೋಪಿಗಳಿಬ್ಬರನ್ನು ನ್ಯಾಯಲಯದ ಮುಂದೆ ಹಾಜರುಪಡಿಸಲಾಗಿದೆ. ಶನಿವಾರ ಕುರ್ಕಾಲು ಗ್ರಾಮದ ಶಂಕರಪುರದ ಅಶ್ವಥಕಟ್ಟೆ ಬಸ್‌ ನಿಲ್ದಾಣದ ಬಳಿ ವಿಠಲ ದೇವಾಡಿಗ ಎಂಬಾತ ಮಟ್ಕಾ ಚೀಟಿ ಬರೆಯುತ್ತಿದ್ದ. ಆತನನ್ನು  ಬಂಧಿಸಿದ್ದು, ಆತನ ವಶದಲ್ಲಿ ಮಟ್ಕಾ ಸಂಖ್ಯೆ ಬರೆದಿರುವ  ಚೀಟಿ – 1,  1,200 ನಗದು ರೂ. ಮತ್ತು ಬಾಲ್ ಪೆನ್

ಮಟ್ಕಾ, ಜುಗಾರಿ : ಬುಕ್ಕಿ ಸಹಿತ ಇಬ್ಬರ ಬಂಧನ Read More »

ದರೋಡೆಗೆ ಸಂಚು ನಡೆಸುತ್ತಿದ್ದ ಇಬ್ಬರು ದುಷ್ಕರ್ಮಿಗಳು ಸೆರೆ

ಮೂಡುಬಿದಿರೆ: ಬಡಗ ಮಿಜಾರು ಗ್ರಾಮದ ಬೊಳ್ಳಚ್ಛಾರ್ ಎಂಬಲ್ಲಿ, ದರೋಡೆ ಕೃತ್ಯವೆಸಗಲು ಸಂಚು ರೂಪಿಸುತ್ತಿದ್ದ ದುಷ್ಕರ್ಮಿಗಳನ್ನು ಬಂಧಿಸಿ, ಅವರ ಜಾಲವನ್ನು ಭೇದಿಸುವಲ್ಲಿ ಮೂಡುಬಿದಿರೆ ಪೊಲೀಸರು ಯಶಸ್ವಿಯಾಗಿದ್ದಾರೆ. ಗುರುವಾರ ರಾತ್ರಿ ಸುಮಾರು 10.30 ಗಂಟೆಗೆ. ಖಚಿತ ಮಾಹಿತಿ ಮೇರೆಗೆ ಕಾರ್ಯಪ್ರವೃತ್ತರಾದ ಪಿಎಸ್‌ಐ ಪ್ರತಿಭಾ ಮತ್ತು ಅವರ ಸಿಬ್ಬಂದಿ. ಇನ್ನೋವಾ ಕಾರಿನಲ್ಲಿದ್ದ ಐವರು ಶಂಕಿತರನ್ನು ಸುತ್ತುವರಿದು ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ, ಮಾರ್ಪಾಡಿ ಗ್ರಾಮದ ಜಗದೀಶ್ (29) ಮತ್ತು ಹೊಸಂಗಡಿ ಗ್ರಾಮದ ಪ್ರಶಾಂತ್ ಅಲಿಯಾಸ್ ಪಾಂತು (27) ಎಂಬ ಇಬ್ಬರನ್ನು ಬಂಧಿಸಲಾಗಿದೆ.

ದರೋಡೆಗೆ ಸಂಚು ನಡೆಸುತ್ತಿದ್ದ ಇಬ್ಬರು ದುಷ್ಕರ್ಮಿಗಳು ಸೆರೆ Read More »

ಯುದ್ಧನೌಕೆ, ಜಲಾಂತರ್ಗಾಮಿಗಳ ಮಾಹಿತಿ ಪಾಕಿಸ್ತಾನಕ್ಕೆ ರವಾನಿಸಿದ ಇಂಜಿನಿಯರ್‌ ಬಂಧನ

ಮಹತ್ವದ ಮಾಹಿತಿಗಳನ್ನು ರೇಖಾಚಿತ್ರದೊಂದಿಗೆ ಪಾಕ್‌ ಏಜೆಂಟರಿಗೆ ಕೊಡುತ್ತಿದ್ದ ಪಾತಕಿ ಮುಂಬೈ: ದೇಶದ ಯುದ್ಧನೌಕೆಗಳು, ಜಲಾಂತರ್ಗಾಮಿಗಳ ಸೂಕ್ಷ್ಮಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಐಎಸ್‌ಐ ಏಜೆಂಟ್‌ ಒಬ್ಬನನ್ನು ಮಹಾರಾಷ್ಟ್ರದ ಥಾಣೆಯಲ್ಲಿ ಬಂಧಿಸಲಾಗಿದೆ. ಥಾಣೆಯ ಕಲ್ವಾ ನಿವಾಸಿ ಮೆಕ್ಯಾನಿಕಲ್ ಇಂಜಿನಿಯರ್ ರವೀಂದ್ರ ವರ್ಮಾ (27) ಬಂಧಿತ ಆರೋಪಿ. ಮಹಾರಾಷ್ಟ್ರ ಪೊಲೀಸರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್‌) ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ರವೀಂದ್ರನನ್ನು ಬಂಧಿಸಲಾಗಿದೆ. ವರ್ಮಾ ರಕ್ಷಣಾ ತಂತ್ರಜ್ಞಾನ ಸಂಸ್ಥೆಯಲ್ಲಿ ಜೂನಿಯರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ. ಹೀಗಾಗಿ ದಕ್ಷಿಣ ಮುಂಬೈನಲ್ಲಿರುವ ನೇವಲ್ ಡಾಕ್‌ಯಾರ್ಡ್‌ಗೆ

ಯುದ್ಧನೌಕೆ, ಜಲಾಂತರ್ಗಾಮಿಗಳ ಮಾಹಿತಿ ಪಾಕಿಸ್ತಾನಕ್ಕೆ ರವಾನಿಸಿದ ಇಂಜಿನಿಯರ್‌ ಬಂಧನ Read More »

ಕಾರ್ಕಳ ಮೆಸ್ಕಾಂ ಅಕೌಂಟ್ ಆಫೀಸರ್ ಮನೆ ಮೇಲೆ ಲೋಕಾಯುಕ್ತ ದಾಳಿ

ರಾಜ್ಯದೆಲ್ಲೆಡೆ ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌ ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌ ನೀಡಿದೆ. ಹಲವು ಸರ್ಕಾರಿ ಅಧಿಕಾರಿಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಅರೋಪ ಹಿನ್ನೆಲೆಯಲ್ಲಿ ಕಾರ್ಕಳ ಮೆಸ್ಕಾಂ ವಿಭಾಗದ ಅಕೌಂಟ್ ಆಫೀಸರ್ ಗಿರೀಶ್ ರಾವ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಲೋಕಾಯುಕ್ತ ಡಿವೈಎಸ್ ಪಿ.ಮಂಜುನಾಥ ನೇತೃತ್ವದಲ್ಲಿ ದಾಳಿಯಾಗಿದ್ದು, ಕಾರ್ಕಳದ ಮನೆ, ಕಚೇರಿ, ಸಂಬಂಧಿಕರ ಮನೆ ಸೇರಿದಂತೆ ಐದು ಕಡೆ ದಾಳಿ

ಕಾರ್ಕಳ ಮೆಸ್ಕಾಂ ಅಕೌಂಟ್ ಆಫೀಸರ್ ಮನೆ ಮೇಲೆ ಲೋಕಾಯುಕ್ತ ದಾಳಿ Read More »

ಮೊಂಟೆಪದವು ಗುಡ್ಡಕುಸಿತಕ್ಕೆ ನಿರ್ಲಕ್ಷ್ಯ ಕಾರಣ : ಪಿಡಿಒ, ಕೆಆರ್​ಡಿಐಎಲ್ ಅಧಿಕಾರಿಗಳ ವಿರುದ್ಧ ದೂರು

ಮೂವರು ಸಾವನ್ನಪ್ಪಿದ ದಾರುಣ ಘಟನೆ ಮಂಗಳೂರು : ಮಂಜನಾಡಿಯ ಮೊಂಟೆಪದವಿನಲ್ಲಿ ಶುಕ್ರವಾರ ನಸುಕಿನ ಹೊತ್ತು ಗುಡ್ಡಕುಸಿತವಾಗಲು ಗುಡ್ಡದ ಮೇಲೆ ನಡೆಸಿರುವ ಅವೈಜ್ಞಾನಿಕ ರಸ್ತೆ ನಿರ್ಮಾಣ ಕಾಮಗಾರಿ ಕಾರಣವೆಂಬ ಆರೋಪ ಕೇಳಿಬಂದಿದ್ದು, ಈ ಕುರಿತಾಗಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ದುರ್ಘಟನೆಯಲ್ಲಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಗುಡ್ಡಕುಸಿತಕ್ಕೆ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಅವೈಜ್ಞಾನಿಕ ಕಾಮಗಾರಿ ಕಾರಣ ಎಂದು ಗಾಯಾಳು ಅಶ್ವಿನಿ ಸಹೋದರ ತೇಜು ಕುಮಾರ್ ಆರೋಪಿಸಿದ್ದಾರೆ.ಈ ಕುರಿತಾಗಿ ಕೊಣಾಜೆ ಪೊಲೀಸ್

ಮೊಂಟೆಪದವು ಗುಡ್ಡಕುಸಿತಕ್ಕೆ ನಿರ್ಲಕ್ಷ್ಯ ಕಾರಣ : ಪಿಡಿಒ, ಕೆಆರ್​ಡಿಐಎಲ್ ಅಧಿಕಾರಿಗಳ ವಿರುದ್ಧ ದೂರು Read More »

error: Content is protected !!
Scroll to Top