ಅಪರಾಧ

ಅಬ್ದುಲ್‌ ರಹಿಮಾನ್‌ ಕೊಲೆ ಪ್ರಕರಣ : ಮತ್ತಿಬ್ಬರು ಪೊಲೀಸರ ವಶಕ್ಕೆ

ಬಂಟ್ವಾಳ: ಇಲ್ಲಿನ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಇರಾಕೋಡಿ ಎಂಬಲ್ಲಿ ಮೇ 27ರಂದು ನಡೆದ ಅಬ್ದುಲ್ ರಹಿಮಾನ್ ಕೊಲೆ ಮತ್ತು ಕಲಂದರ್ ಶಾಫಿ ಎಂಬವರ ಮೇಲೆ ನಡೆದ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಮೊದಲು ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು. ಬಂಟ್ವಾಳದ ತೆಂಕಬೆಳ್ಳೂರು ಗ್ರಾಮದ ಸುಮಿತ್ ಆಚಾರ್ಯ (27) ಹಾಗೂ ಬಂಟ್ವಾಳದ ಬಡಗಬೆಳ್ಳೂರು ಗ್ರಾಮದ ರವಿರಾಜ್ (23) ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈಗಾಗಲೇ […]

ಅಬ್ದುಲ್‌ ರಹಿಮಾನ್‌ ಕೊಲೆ ಪ್ರಕರಣ : ಮತ್ತಿಬ್ಬರು ಪೊಲೀಸರ ವಶಕ್ಕೆ Read More »

ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ | ಯುವಕ ಪೋಲಿಸ್‌ ವಶಕ್ಕೆ

ಮೂಲ್ಕಿ : ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿರುವ ಘಟನೆ ಮೇ.೩೦ ಶುಕ್ರವಾರದಂದು  ಮೂಲ್ಕಿಯಲ್ಲಿ ನಡೆದಿದೆ. ಪಕ್ಷಿಕೆರೆ ಮೂಲದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿರುವ ಆರೋಪದ ಮೇಲೆ ಬಜಪೆಯ ಪ್ರೀತಮ್ ಎಂಬಾತನನ್ನು  ಮೂಲ್ಕಿ ಪೋಲಿಸರು  ಬಂಧಿಸಿದ್ದಾರೆ ಎಂದು ತಿಳಿಸಿದ್ದಾರೆ. ಮೇ 25, 2025ರಂದು ಆರೋಪಿ ಪ್ರೀತಮ್, ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಹಾಸನದ ಉದಯಪುರಕ್ಕೆ ಕರೆದುಕೊಂಡು ಹೋಗಿದ್ದನು. ಬಾಲಕಿಯ ತಾಯಿ, ತನ್ನ ಮಗಳ ಅಪಹರಣದ  ಬಗ್ಗೆ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಗುರುವಾರ (ಮೇ 29)

ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ | ಯುವಕ ಪೋಲಿಸ್‌ ವಶಕ್ಕೆ Read More »

ಲಾರಿ ಪಲ್ಟಿ : ಕಾರ್ಮಿಕ ಮೃತ್ಯು

ಬಂಟ್ವಾಳ : ಲಾರಿ ಪಲ್ಟಿಯಾಗಿ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ಇಂದು ಬೆಳಗ್ಗೆ ನಡೆದಿದೆ. ಘಟನೆಯಿಂದಾಗಿ ಜಾರ್ಖಾಂಡ್‌ ಮೂಲದ ನಿರ್ಮಲಾ ಅನ್ಸ್ತಾ ಮೃತಪಟ್ಟ ಕಾರ್ಮಿಕ ಎನ್ನಲಾಗಿದೆ. ಲಾರಿ ಚಾಲಕ ಸುಜಿತ್, ಕ್ಲೀನರ್ ಸಿಮೋಹನ್ ಮುರ್ಮ ಯಾವುದೇ ಗಾಯವಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ. ಅಕ್ಕಿ ಲೋಡ್ ನ ಲಾರಿ ಬಂಟ್ವಾಳದ ಎಸ್‌ವಿ.ಎಸ್.ಕಾಲೇಜು ಬಳಿ ಬರುವಾಗ ಅತಿಯಾದ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಉಡುಪಿಯಿಂದ ಅಕ್ಕಿ ಲೋಡ್ ಮಾಡಿಕೊಂಡು ಮೂಡಬಿದಿರೆಯಾಗಿ ಬಂಟ್ವಾಳಕ್ಕೆ ಬರುವ ವೇಳೆ ಈ ಘಟನೆ ನಡೆದಿದೆ.ಲಾರಿಯ ಹಿಂಭಾಗದಲ್ಲಿ ಅಕ್ಕಿ

ಲಾರಿ ಪಲ್ಟಿ : ಕಾರ್ಮಿಕ ಮೃತ್ಯು Read More »

ಮಂಗಳೂರು: ಹಿಂದೂ ಜಾಗರಣ ವೇದಿಕೆ ಮುಖಂಡನಿಗೆ ಜೈಷ್ ಎ ಮೊಹಮ್ಮದ್ ಹೆಸರಿನಲ್ಲಿ ಬೆದರಿಕೆ ಸಂದೇಶ

ನಿನ್ನ ಸ್ನೇಹಿತನ ಕೈ ಕಾಲು ಕಡಿಯುತ್ತೇವೆ, ನಂತರ ತಲೆ ಕಡಿದು ದೆಹಲಿಯ ಮೈನ್ ಗೇಟ್​​ನಲ್ಲಿ ನೇತು ಹಾಕುತ್ತೇವೆ ಎಂದು ಧಮ್ಕಿ ಮಂಗಳೂರು: ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಎಂಬವರಿಗೆ ಪಾಕಿಸ್ತಾನದ ಜೈಷ್ ಎ ಮೊಹಮ್ಮದ್ ಸಂಘಟನೆಯ ಹೆಸರಿನಲ್ಲಿ ಜೀವ ಬೆದರಿಕೆ ಸಂದೇಶ ಬಂದಿದೆ. ನಿನ್ನ ಸ್ನೇಹಿತನ ಕೈ ಕಾಲು ಕಡಿಯುತ್ತೇವೆ. ನಂತರ ತಲೆ ಕಡಿದು ದೆಹಲಿಯ ಮೈನ್ ಗೇಟ್​​ನಲ್ಲಿ ನೇತು ಹಾಕುತ್ತೇವೆ. ನಾವು ಹಿಂದೂ ಮುಖಂಡರ ಲಿಸ್ಟ್ ರೆಡಿ ಮಾಡಿದ್ದೇವೆ.

ಮಂಗಳೂರು: ಹಿಂದೂ ಜಾಗರಣ ವೇದಿಕೆ ಮುಖಂಡನಿಗೆ ಜೈಷ್ ಎ ಮೊಹಮ್ಮದ್ ಹೆಸರಿನಲ್ಲಿ ಬೆದರಿಕೆ ಸಂದೇಶ Read More »

ಕೋಮು ಹಿಂಸೆ ದಮನಕ್ಕೆ ಎಸ್‌ಟಿಎಫ್‌ ನಿಯೋಜನೆ

ದ.ಕ., ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಸ್ಥಾಪಿಸಲು ಸರ್ಕಾರ ಆದೇಶ ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹಿಂಸಾಚಾರಕ್ಕೆ ಕಾರಣವಾಗುವ ಕೋಮುವಾದಿ ಶಕ್ತಿಗಳನ್ನು ನಿಗ್ರಹಿಸಲು ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಸ್ಥಾಪಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಪದೇಪದೆ ಕೋಮು ಘರ್ಷಣೆಗಳು ಸಂಭವಿಸುತ್ತಿದ್ದು, ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ಪರಿಣಾಮ ಬೀರಿ ಆಡಳಿತದ ವರ್ಚಸ್ಸಿಗೆ ಕಳಂಕ ತರುತ್ತಿದೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ ಇತ್ತೀಚೆಗೆ ಮಂಗಳೂರಿನಲ್ಲಿ ಇಂತಹ ಘಟನೆಗಳನ್ನು ನಿಯಂತ್ರಣಕ್ಕೆ ತರಲು ಎಸ್‌ಟಿಎಫ್

ಕೋಮು ಹಿಂಸೆ ದಮನಕ್ಕೆ ಎಸ್‌ಟಿಎಫ್‌ ನಿಯೋಜನೆ Read More »

ವಿವಾಹಿತೆ ಪ್ರಿಯಕರನೊಂದಿಗೆ ಆತ್ಮಹತ್ಯೆಗೆ ಶರಣು

ಮೂಡುಬಿದಿರೆ : ಮರಕಡ ಬಳಿ ಇಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬಡಗ ಮಿಜಾರಿನ ನಮೀಕ್ಷಾ ಶೆಟ್ಟಿ (29) ಹಾಗೂ ಆಕೆಯ ಪ್ರಿಯಕರನಾದ ಚಾಲಕ ವೃತ್ತಿಯ ನಿನ್ನೋಡಿಯ ಪ್ರಶಾಂತ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎನ್ನಲಾಗಿದೆ. ವಿವಾಹಿತೆ ನಮೀಕ್ಷಾ ಎಂಬವರಿಗೆ ಇಬ್ಬರು ಗಂಡುಮಕ್ಕಳ ಇದ್ದು, ಗಂಡ ಸತೀಶ್ ಪುಣೆಯಲ್ಲಿ ಉದ್ಯೋಗದಲ್ಲಿದ್ದಾರೆ. ನಮೀಕ್ಷಾನ ಪ್ರಿಯಕ ಪ್ರಶಾಂತ್ ಮೂಲತಃ ಬಾಗಲಕೋಟೆಯ ನಿವಾಸಿ. ಆತನಿಗೂ ಮದುವೆಯಾಗಿದೆ ಎಂದು ತಿಳಿದು ಬಂದಿದೆ. ಇನ್‌ಸ್ಟಾಗ್ರಾಂ ಮೂಲಕ ಇವರಿಬ್ಬರ ಪರಿಚಯವಾಗಿ ಅದು ಪ್ರೇಮಸಂಬಂಧಕ್ಕೆ ತಿರುಗಿದೆ.

ವಿವಾಹಿತೆ ಪ್ರಿಯಕರನೊಂದಿಗೆ ಆತ್ಮಹತ್ಯೆಗೆ ಶರಣು Read More »

ಲಷ್ಕರ್‌ನ ಇಬ್ಬರು ಹೈಬ್ರಿಡ್‌ ಉಗ್ರರ ಬಂಧನ

ಬಂದೂಕು ಸಹಿತ ಅಪಾರ ಶಸ್ತ್ರಾಸ್ತ್ರ ವಶ ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್​ನಲ್ಲಿ ಭದ್ರತಾ ಪಡೆ ಲಷ್ಕರ್‌ ಇ ತೈಬಾದ ಇಬ್ಬರು ಹೈಬ್ರಿಡ್ ಉಗ್ರರನ್ನು ಬಂಧಿಸಿ ಅವರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದೆ. ಶೋಪಿಯಾನ್‌ನಲ್ಲಿ ಬಂಧಿಸಲಾದ ಈ ಲಷ್ಕರ್ ಭಯೋತ್ಪಾದಕರನ್ನು ಇರ್ಫಾನ್ ಬಶೀರ್ ಮತ್ತು ಉಜೈರ್ ಸಲಾಮ್ ಎಂದು ಗುರುತಿಸಲಾಗಿದೆ. ಭಾರಿ ದೊಡ್ಡ ವಿಧ್ವಂಸಕ ಕೃತ್ಯ ಎಸಗುವ ಉದ್ದೇಶದಿಂದ ಅವರು ಓಡಾಡುತ್ತಿದ್ದರು ಎಂದು ಭದ್ರತಾ ಪಡೆ ಮೂಲಗಳು ತಿಳಿಸಿವೆ. ಸೆರೆಯಾದ ಉಗ್ರರ ಬಳಿ 2 ಎಕೆ-56 ಬಂದೂಕು,

ಲಷ್ಕರ್‌ನ ಇಬ್ಬರು ಹೈಬ್ರಿಡ್‌ ಉಗ್ರರ ಬಂಧನ Read More »

ಅಬ್ದುಲ್‌ ರಹಿಮಾನ್‌ ಹತ್ಯೆ : ಮೂವರು ವಶ

15 ಮಂದಿಯ ತಂಡದಿಂದ ಕೊಲೆ ಎಂದು ಎಫ್‌ಐಆರ್‌ ದಾಖಲು ಬಂಟ್ವಾಳ: ತಾಲೂಕಿನ ಕೂರಿಯಾಳ ಸಮೀಪದ ಇರಾಕೋಡಿಯ ಕೊಳತ್ತಮಜಲ್ ನಿವಾಸಿ ಅಬ್ದುಲ್ ರಹಿಮಾನ್ ಹತ್ಯೆಗೆ ಸಂಬಂಧಪಟ್ಟು ದೀಪಕ್ ಸಹಿತ ಮೂವರನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ. ಕೊಲೆ ಕೃತ್ಯದಲ್ಲಿ ಸುಮಾರು 15 ಮಂದಿ ಭಾಗಿಯಾಗಿದ್ದಾರೆ ಎನ್ನಲಾಗುತ್ತಿದ್ದು, ಕೃತ್ಯ ನಡೆದ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಆ ಪೈಕಿ ಮೂವರನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಂಗಳವಾರ ಮಧ್ಯಾಹ್ನ ಅಬ್ದುಲ್‌ ರಹಿಮಾನ್‌ ಅವರನ್ನು

ಅಬ್ದುಲ್‌ ರಹಿಮಾನ್‌ ಹತ್ಯೆ : ಮೂವರು ವಶ Read More »

ಯುವಕನ ಮೇಲೆ  ಬಿಯರ್‌ ಬಾಟಲ್‌ನಿಂದ ಹಲ್ಲೆ | ದೂರು ದಾಖಲು

ಪುತ್ತೂರು:  ಯುವಕನ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ ಮಾಡಿದ ಘಟನೆ ನಿನ್ನೆ ಪಾಣಾಜೆ ಗ್ರಾಮದಲ್ಲಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿ ಅರ್ಲಪದವು ನಿವಾಸಿ ಪ್ರಕಾಶ್ (28) ಎನ್ನಲಾಗಿದೆ. ಹಲ್ಲೆ ಮಾಡಿದ ಆರೋಪಿಗಳು ಧನಂಜಯ ಮತ್ತು ಪುನೀತ್  ಎಂದು ತಿಳಿದು ಬಂದಿದೆ. ಪಾಣಾಜೆ ಗ್ರಾಮದ ವೈನ್‌ ಶಾಪ್‌ ನಿಂದ ಬಿಯರ್‌ ಬಾಟಲಿಯನ್ನು ಖರೀದಿ ಮಾಡಿ, ವೈನ್‌ ಶಾಪ್‌ ನಲ್ಲಿ ಇರುವ ಶೆಡ್‌ ನಲ್ಲಿದ್ದ ಚಯರ್‌ನಲ್ಲಿ ಕುಳಿತು ಬಿಯರ್ ಕುಡಿಯುತ್ತಿದ್ದ ವೇಳೆ ಪರಿಚಯದವರಾದ ಧನಂಜಯ ಮತ್ತು ಪುನೀತ್‌ ಎಂಬುವವರು ಬಂದಿದ್ದರು. ಬಂದ

ಯುವಕನ ಮೇಲೆ  ಬಿಯರ್‌ ಬಾಟಲ್‌ನಿಂದ ಹಲ್ಲೆ | ದೂರು ದಾಖಲು Read More »

ಅಬ್ದುಲ್‌ ರಹಿಮಾನ್‌ ಹತ್ಯೆ : ಅಘೋಷಿತ ಬಂದ್‌ ಆಚರಣೆ

ಮಂಗಳೂರಿನಿಂದ ಬಂಟ್ವಾಳ ತನಕ ಅಂಗಡಿಮುಂಗಟ್ಟುಗಳನ್ನು ಸ್ವಯಂ ಪ್ರೇರಣೆಯಿಂದ ಮುಚ್ಚಿದ ಮಾಲೀಕರು ಮಂಗಳೂರು: ಬಂಟ್ವಾಳದ ಅಬ್ದುಲ್‌ ರಹಿಮಾನ್‌ ಹತ್ಯೆ ಹಿನ್ನೆಲೆಯಲ್ಲಿ ಇಂದು ಮಂಗಳೂರಿನಿಂಂದ ಬಂಟ್ವಾಳದವರೆಗಿನ ನೂರಾರು ಅಂಗಡಿಮುಂಗಟ್ಟುಗಳು ಬಂದ್‌ ಆಗಿವೆ. ಮಾಲೀಕರು ಸ್ವಯಂಪ್ರೇರಿತವಾಗಿ ಅಘೋಷಿತ ಬಂದ್‌ ಆಚರಣೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಅಬ್ದುಲ್ ರಹಿಮಾನ್‌ ಮೃತದೇಹವನ್ನು ಕೊಳತ್ತಮಜಲಿಗೆ ಬೆಳಗ್ಗೆ ಸಾಗಿಸುವಾಗ ಅಂಗಡಿಗಳೆಲ್ಲ ಮುಚ್ಚಿದ್ದವು. ಪೊಲೀಸ್ ಬಂದೋಬಸ್ತ್‌ನಲ್ಲಿ ಮೃತದೇಹವನ್ನು ಮೆರವಣಿಗೆಯ ಮೂಲಕ ಸಾಗಿಸಲಾಯಿತು. ಈ ವೇಳೆ ನೂರಾರು ಜನ ಸೇರಿದ್ದರು. ಹತ್ಯೆ ಖಂಡಿಸಿ ಮಂಗಳೂರಿನಿಂದ ಬಂಟ್ವಾಳದವರೆಗೆ ಅಂಗಡಿಗಳ ಮುಂಗಟ್ಟುಗಳು ಬಂದ್‌ ಮಾಡಿ

ಅಬ್ದುಲ್‌ ರಹಿಮಾನ್‌ ಹತ್ಯೆ : ಅಘೋಷಿತ ಬಂದ್‌ ಆಚರಣೆ Read More »

error: Content is protected !!
Scroll to Top