ಅಪರಾಧ

ಪರಮೇಶ್ವರ ಒಡೆತನದ ಸಂಸ್ಥೆಗಳ ಮೇಲಿನ ಇಡಿ ಶೋಧ ಇಂದೂ ಮುಂದುವರಿಕೆ

ಗೋಲ್ಡ್‌ ಸ್ಮಗ್ಲಿಂಗ್‌ ಆರೋಪಿ ರನ್ಯಾ ರಾವ್‌ಗಿರುವ ಸಂಬಂಧದ ಕುರಿತು ತನಿಖೆ ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ನಿನ್ನೆ ಜಾರಿ ನಿರ್ದೇಶನಾಲಯ ದಾಳಿ ಮಾಡಿದ ಬಳಿಕ ಈ ಸಂಸ್ಥೆಗೂ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನ ಆರೋಪಿ ನಟಿ ರನ್ಯಾ ರಾವ್‌ಗೂ ಇರುವ ಸಂಬಂಧದ ಕುರಿತು ಚರ್ಚೆಗಳಾಗುತ್ತಿವೆ. ದಾಳಿ ಹಾಗೂ ಶೋಧ ಕಾರ್ಯ ಗುರುವಾರ ಬೆಳಗ್ಗೆಯೂ ಮುಂದುವರಿದಿದೆ. ದಾಳಿ ನಡೆಸಿ 24 ಗಂಟೆಗಳು ಕಳೆದರೂ ಇಡಿ ಅಧಿಕಾರಿಗಳ ಶೋಧ ಕಾರ್ಯ ಮುಂದುವರಿದಿದ್ದು, ಅಕ್ರಮ ಚಿನ್ನ […]

ಪರಮೇಶ್ವರ ಒಡೆತನದ ಸಂಸ್ಥೆಗಳ ಮೇಲಿನ ಇಡಿ ಶೋಧ ಇಂದೂ ಮುಂದುವರಿಕೆ Read More »

ಯೆಹೂದಿ ವಸ್ತು ಸಂಗ್ರಹಾಲಯದ ಮೇಲೆ ದಾಳಿ : ಇಸ್ರೇಲ್‌ ರಾಯಭಾರ ಕಚೇರಿಯ ಇಬ್ಬರು ಸಿಬ್ಬಂದಿ ಸಾವು

ಫ್ರೀ ಪ್ಯಾಲೆಸ್ತೀನ್‌ ಎಂದು ಕೂಗಿ ಗುಂಡು ಹಾರಿಸಿದ ದುಷ್ಕರ್ಮಿ ವಾಷಿಂಗ್ಟನ್ : ವಾಷಿಂಗ್ಟನ್ ಡಿಸಿಯ ಯೆಹೂದಿ ವಸ್ತು ಸಂಗ್ರಹಾಲಯದ ಬಳಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಇಸ್ರೇಲಿ ರಾಯಭಾರ ಕಚೇರಿಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಫ್ರೀ ಪ್ಯಾಲೆಸ್ತೀನ್ ಎಂದು ಘೋಷಣೆ ಕೂಗುತ್ತಾ ಇಬ್ಬರು ಇಸ್ರೇಲಿ ರಾಯಭಾರ ಸಿಬ್ಬಂದಿ ಮೇಲೆ ದುಷ್ಕರ್ಮಿಯೊಬ್ಬ ಗುಂಡು ಹಾರಿಸಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಉಗ್ರರು ಇದೀಗ ಅಮೆರಿಕಕ್ಕೂ ದಾಳಿ ಇಟ್ಟಿದ್ದು, ಜನರಲ್ಲಿ ಭೀತಿ ಹೆಚ್ಚಿದೆ. ಗುಂಡು ಹಾರಿಸಿದ ಬಳಿಕ ಒಬ್ಬ ವ್ಯಕ್ತಿ

ಯೆಹೂದಿ ವಸ್ತು ಸಂಗ್ರಹಾಲಯದ ಮೇಲೆ ದಾಳಿ : ಇಸ್ರೇಲ್‌ ರಾಯಭಾರ ಕಚೇರಿಯ ಇಬ್ಬರು ಸಿಬ್ಬಂದಿ ಸಾವು Read More »

ದೆಹಲಿಯಲ್ಲಿ ಭಯೋತ್ಪಾದಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಐಎಸ್‌ಐ : ಹೈಕಮಿಷನ್‌ ಸಿಬ್ಬಂದಿ ಶಾಮೀಲು

ಯೂಟ್ಯೂಬರ್‌ಗಳ ಮೂಲಕ ಆಯಕಟ್ಟಿನ ಸ್ಥಳಗಳ ಮಾಹಿತಿ ಸಂಗ್ರಹ ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಯೋತ್ಪಾದಕ ದಾಳಿ ನಡೆಸುವ ಐಎಸ್ಐ ಸಂಚನ್ನು ಭಾರತದ ಗುಪ್ತಚರ ಏಜೆನ್ಸಿಗಳು ವಿಫಲಗೊಳಿಸಿವೆ. ಮೂರು ತಿಂಗಳ ಯೋಜಿತ ಕಾರ್ಯಾಚರಣೆಯಲ್ಲಿ ಐಎಸ್ಐ ಯತ್ನವನ್ನು ವಿಫಲಗೊಳಿಸಿ, ದಾಳಿ ನಡೆಸಲು ತೀವ್ರ ತರಬೇತಿ ಪಡೆದ ಇಬ್ಬರನ್ನು ಬಂಧಿಸಲಾಗಿದೆ. ದಾಳಿ ನಡೆಸುವ ಹೊಣೆ ಹೊತ್ತಿದ್ದ ಪಾಕಿಸ್ತಾನದ ಅನ್ಸಾರುಲ್ ಮಿಯಾ ಅನ್ಸಾರಿ ಕೂಡಾ ಬಂಧಿತರಲ್ಲಿ ಸೇರಿದ್ದಾನೆ. ಈತ ಭಾರತ ಸಶಸ್ತ್ರ ಪಡೆಗಳ ಬಗ್ಗೆ ಸೂಕ್ಷ್ಮ ಮಾಹಿತಿಗಳನ್ನು ಕಲೆ ಹಾಕುತ್ತಿದ್ದ ಎನ್ನಲಾಗಿದೆ. ಈ

ದೆಹಲಿಯಲ್ಲಿ ಭಯೋತ್ಪಾದಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಐಎಸ್‌ಐ : ಹೈಕಮಿಷನ್‌ ಸಿಬ್ಬಂದಿ ಶಾಮೀಲು Read More »

ಕಾಶ್ಮೀರ : ಭದ್ರತಾ ಪಡೆಯಿಂದ ಇನ್ನೊಂದು ದೊಡ್ಡ ಉಗ್ರ ಬೇಟೆ

4-5 ಭಯೋತ್ಪಾದಕರ ವಿರುದ್ಧ ನಡೆಯುತ್ತಿದೆ ತೀವ್ರ ಕಾಳಗ ಶ್ರೀನಗರ: ಜಮ್ಮು-ಕಾಶ್ಮೀರದ ಕಿಷ್ತ್ವರ್‌ ಜಿಲ್ಲೆಯ ಛತ್ರೂವಿನ ಸಿಂಘ್‌ಪುರ ಎಂಬಲ್ಲಿ ಗುರುವಾರ ನಸುಕಿನ ಹೊತ್ತು ಉಗ್ರರ ಜೊತೆ ಭದ್ರತಾ ಪಡೆಯ ತೀವ್ರ ಕಾಳಗ ಶುರುವಾಗಿದೆ. ಇಲ್ಲಿ 4-5 ಉಗ್ರರು ಇರುವ ಮಾಹಿತಿ ಇರುವ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ತೀವ್ರ ಎನ್‌ಕೌಂಟರ್‌ ನಡೆಯುತ್ತಿದ್ದು, ಗುಂಡಿನ ಚಕಮಕಿ ಪ್ರಾರಂಭವಾಗಿದೆ ಎಂದು ಮೂಲಗಳು ತಿಳಿಸಿವೆ. ಇಡೀ ಪ್ರದೇಶದಲ್ಲಿ ಹೈಅಲರ್ಟ್‌ ಘೋಷಿಸಿ ಭದ್ರತಾ ಪಡೆಗಳು ಸುತ್ತುವರಿದಿವೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

ಕಾಶ್ಮೀರ : ಭದ್ರತಾ ಪಡೆಯಿಂದ ಇನ್ನೊಂದು ದೊಡ್ಡ ಉಗ್ರ ಬೇಟೆ Read More »

ಹಿಟ್‍ ಆಂಡ್ ರನ್‍ | ಗಾಯಗೊಂಡ ಅರಿಯಡ್ಕ ಗ್ರಾಪಂ ಮಾಜಿ ಅಧ್ಯಕ್ಷೆ ಸವಿತಾ ಎಸ್‍.

ಪುತ್ತೂರು: ಹಿಟ್ ಆಂಡ್ ರನ್‌ ನಲ್ಲಿ ಅರಿಯಡ್ಕ ಗ್ರಾ. ಪಂ ಮಾಜಿ ಅಧ್ಯಕ್ಷೆ ಸವಿತಾ ಎಸ್.ರವರು ಗಾಯಗೊಂಡ ಘಟನೆ ಬುಧವಾರ ರಾಷ್ಟ್ರೀಯ ಹೆದ್ದಾರಿ 275 ರ ಕುಂಬ್ರ ಸಮೀಪದ ಶೇಖಮಲೆಯಲ್ಲಿ ನಡೆದಿದೆ. ಸವಿತಾರವರು ಚಲಾಯಿಸುತ್ತಿದ್ದ ಸ್ಕೂಟರ್‌ ಶೇಖಮಲೆ ಮಸೀದಿ ಹತ್ತಿರ ಟೆಂಪೋ ಟ್ರಾವೆಲ್ಲರ್‌ ವೊಂದು ಎದುರಿನಿಂದ ಬರುತ್ತಿದ್ದ ವಾಹನವನ್ನು ತಪ್ಪಿಸುವ ಭರದಲ್ಲಿ ಡಿಕ್ಕಿ ಹೊಡೆದು ಪರಾರಿಯಾಗಿತ್ತು. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಪಲ್ಟಿಯಾಗಿದ್ದು ಸವಾರ ರಸ್ತೆಗೆ ಎಸೆಯಲ್ಪಟ್ಟಿದ್ದರು. ಗಾಯಾಳುವನ್ನು ತಕ್ಷಣವೇ ಕುಂಬ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ನಿರ್ದೇಶಕ

ಹಿಟ್‍ ಆಂಡ್ ರನ್‍ | ಗಾಯಗೊಂಡ ಅರಿಯಡ್ಕ ಗ್ರಾಪಂ ಮಾಜಿ ಅಧ್ಯಕ್ಷೆ ಸವಿತಾ ಎಸ್‍. Read More »

ಗೃಹ ಸಚಿವ ಪರಮೇಶ್ವರ್‌ಗೆ ಬೆಳ್ಳಂಬೆಳಗ್ಗೆ ಇ.ಡಿ.ಶಾಕ್‌ : ಮೆಡಿಕಲ್‌ ಕಾಲೇಜಿಗೆ ದಾಳಿ

ರನ್ಯಾ ರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸಿಗೆ ಸಂಬಂಧ ಇದೆ ಎಂಬ ಗುಸುಗುಸು ಬೆಂಗಳೂರು: ಗೃಹ ಸಚಿವ ಜಿ.ಪರಮೇಶ್ವರ್‌ ಒಡೆತನದ ಸಂಸ್ಥೆಗಳ ಮೇಲೆ ಇಂದು ಬೆಳ್ಳಂಬೆಳಗ್ಗೆ ಇ.ಡಿ ದಾಳಿ ನಡೆಸಿದೆ. ತುಮಕೂರಿನಲ್ಲಿರುವ ಸಿದ್ದಾರ್ಥ ಮೆಡಿಕಲ್, ಇಂಜಿನಿಯರಿಂಗ್‌ ಕಾಲೇಜು ಅಲ್ಲದೆ ನೆಲಮಂಗಲದ ಟಿ ಬೇಗೂರು ಬಳಿ ಇರುವ ಕಾಲೇಜು ಮೇಲೂ ಇಡಿ ದಾಳಿ ನಡೆದಿದೆ. 9 ಕಾರುಗಳಲ್ಲಿ ಬಂದಿರುವ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಕನ್ನಡ ನಟಿ ರನ್ಯಾ ರಾವ್‌ ಒಳಗೊಂಡಿರುವ ಗೋಲ್ಡ್‌ ಸ್ಮಗ್ಲಿಂಗ್‌ ಕೇಸಿಗೆ

ಗೃಹ ಸಚಿವ ಪರಮೇಶ್ವರ್‌ಗೆ ಬೆಳ್ಳಂಬೆಳಗ್ಗೆ ಇ.ಡಿ.ಶಾಕ್‌ : ಮೆಡಿಕಲ್‌ ಕಾಲೇಜಿಗೆ ದಾಳಿ Read More »

ಧರ್ಮಸ್ಥಳದ ಮನೆಗೆ ತಲುಪಿದ ಆಕಾಂಕ್ಷಾ ಮೃತದೇಹ

ಪಂಜಾಬ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಏರೋಸ್ಪೇಸ್ ಉದ್ಯೋಗಿ ಬೆಳ್ತಂಗಡಿ: ಪಂಜಾಬ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಧರ್ಮಸ್ಥಳ ಬೊಳಿಯಾರ್ ನಿವಾಸಿ ಏರೋಸ್ಪೇಸ್ ಉದ್ಯೋಗಿಯಾಗಿದ್ದ ಆಕಾಂಕ್ಷಾ ಎಸ್. ನಾಯರ್(22) ಅವರ ಮೃತದೇಹ ಬುಧವಾರ ಬೆಳಗ್ಗೆ ಮನೆಗೆ ತಲುಪಿದೆ. ಆಕಾಂಕ್ಷಾ ಮೃತದೇಹವನ್ನು ಬೆಂಗಳೂರು ವಿಮಾನ ನಿಲ್ದಾಣದಿಂದ ಆಂಬುಲೆನ್ಸ್ ಮೂಲಕ ಧರ್ಮಸ್ಥಳದ ಬೊಳಿಯರ್‌ಗೆ ಬುಧವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ತರಲಾಯಿತು. ಮನೆಯಲ್ಲಿ ತಂದೆ ತಾಯಿಯರ ಆಕ್ರಂದನ ಮುಗಿಲು ಮುಟ್ಟಿದ್ದು ನೂರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಧರ್ಮಸ್ಥಳ ಬೊಳಿಯಾರ್ ನಿವಾಸಿ ಸುರೇಂದ್ರ

ಧರ್ಮಸ್ಥಳದ ಮನೆಗೆ ತಲುಪಿದ ಆಕಾಂಕ್ಷಾ ಮೃತದೇಹ Read More »

ಪೆಟ್ರೋಲ್ ಹಾಕಿ ಹಣ ನೀಡದೇ ಪರಾರಿಯಾದ ಯುವಕರು | ಪರಾರಿಯಾಗುವ ಭರದಲ್ಲಿ ಅಪಘಾತ, ಪೊಲೀಸ್‍ ವಶಕ್ಕೆ

ವಿಟ್ಲ:ಪೆಟ್ರೋಲ್‍ ಬಂಕ್‍ ಗೆ ಆಲ್ಟೋ ಕಾರಿನಲ್ಲಿ ಬಂದ ಇಬ್ಬರು ಮದ್ಯ ವ್ಯಸನಿಗಳು ಪೆಟ್ರೋಲ್ ಹಾಕಿಸಿ ಹಣ ನೀಡದೇ ಪರರಾರಿಯಾದ ಸಂದರ್ಭ ಬೈಕ್‍ ಹಾಗೂ ಪಿಕಪ್‍ ವಾಹನಗಳಿಗೆ ಡಿಕ್ಕಿಯಾಗಿ ಸಿಕ್ಕಿಬಿದ್ದ ಘಟನೆ ಮಂಗಳವಾರ ಸಂಜೆ ವಿಟ್ಲ ಸಾಲೆತ್ತೂರು ಸಮೀಪದ ವಾಲ್ತಾಜೆಯಲ್ಲಿ ನಡೆದಿದೆ. ಆರೋಪಿಗಳಿಬ್ಬರು ಹಿಂದಿ ಭಾಷಿಕರಾಗಿದ್ದು, ಪೆಟ್ರೋಲ್ ಹಾಕಿಸಿ ಹಣ ನೀಡದೇ ಸಾಲೆತ್ತೂರು ಮೂಲಕ ಪರಾರಿಯಾಗುತ್ತಿದ್ದಾಗ ಪಾಲ್ತಾಜೆಯಲ್ಲಿ ಆಕ್ಟಿವಾ ಮತ್ತು ಪಿಕಪ್ ವಾಹನಕ್ಕೆ ಆಲ್ಟೋ ಕಾರು ಢಿಕ್ಕಿಯಾಗಿದೆ.  ಆಕ್ಟಿವಾ ಸವಾರ ಕಟ್ಟತ್ತಿಲ ನಿವಾಸಿ ಅಬೂಬಕ್ಕರ್ ಗೆ  ಗಂಭೀರ ಗಾಯಗೊಂಡಿದ್ದಾರೆ.

ಪೆಟ್ರೋಲ್ ಹಾಕಿ ಹಣ ನೀಡದೇ ಪರಾರಿಯಾದ ಯುವಕರು | ಪರಾರಿಯಾಗುವ ಭರದಲ್ಲಿ ಅಪಘಾತ, ಪೊಲೀಸ್‍ ವಶಕ್ಕೆ Read More »

ಮಂಗಳೂರು ಜೈಲಿನಲ್ಲಿ ಮತ್ತೆ ಹೊಡೆದಾಟ

ಮಂಗಳೂರು: ಕೋಡಿಯಾಲ್‌ ಬೈಲ್‌ನಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಇಂದು ಮಧ್ಯಾಹ್ನ ಕೈದಿಗಳ ಮಧ್ಯೆ ಮತ್ತೆ ಹೊಡೆದಾಟ ನಡೆದಿರುವ ಕುರಿತು ವರದಿಯಾಗಿದೆ. ಅಡುಗೆ ಮಾಡುತ್ತಿದ್ದ ಕೈದಿ ಅಕ್ಷಿತ್ ಎಂಬಾತನಿಗೆ ಅಬ್ದುಲ್ ರಹ್ಮಾನ್ ಯಾನೆ ಮುನ್ನಿ ಯಾನೆ ಮುನೀರ್, ಉಮರ್ ಶಿಹಾಬ್ ಮತ್ತಿತರರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಇದರಿಂದ ಕೆಲಕಾಲ ಜೈಲಿನೊಳಗೆ ಆತಂಕದ ವಾತಾವರಣ ಸೃಷ್ಟಿಯಾಯಿತು ಎಂದು ತಿಳಿದು ಬಂದಿದೆ. ಮಾಹಿತಿ ಪಡೆದ ಬರ್ಕೆ ಪೊಲೀಸರು ಜೈಲಿಗೆ ತೆರಳಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಂಗಳೂರು ಜೈಲಿನಲ್ಲಿ ಮತ್ತೆ ಹೊಡೆದಾಟ Read More »

ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣದ ನಿರ್ಲಕ್ಷ್ಯ : ಪೊಲೀಸರ ಅಮಾನತು

ವಿದೇಶದಲ್ಲಿ ನೌಕರಿ ಕೊಡಿಸುವ ಆಮಿಷದಲ್ಲಿ 300ಕ್ಕೂ ಹೆಚ್ಚು ಮಂದಿಗೆ ಪಂಗನಾಮ ಮಂಗಳೂರು : ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ನೂರಾರು ಜನರಿಗೆ ಕೋಟಿಗಟ್ಟಲೆ ರೂಪಾಯಿ ಪಂಗನಾಮ ಹಾಕಿರುವ ಕಂಪನಿಯ ಬಗ್ಗೆ ಮೊದಲೇ ಎಚ್ಚರಿಕೆ ನೀಡಿದ್ದರೂ ತನಿಖೆ ಮಾಡದೆ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಅರೋಪ ಕೇಳಿಬಂದಿದೆ. ವಂಚನೆ ಪ್ರಕರಣದ ತನಿಖೆಯಲ್ಲಿ ನಿರ್ಲಕ್ಷ್ಯ ತೋರಿದ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಆದೇಶ ಹೊರಡಿಸಿದ್ದಾರೆ. ನಕಲಿ ಸಂಸ್ಥೆಯ ಬಗ್ಗೆ ಆಫೀಸ್ ಪ್ರೊಟೆಕ್ಟರ್

ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣದ ನಿರ್ಲಕ್ಷ್ಯ : ಪೊಲೀಸರ ಅಮಾನತು Read More »

error: Content is protected !!
Scroll to Top