ಅಪರಾಧ

ಮಾಸ್ಟರ್ ಮೈಂಡ್‍ ಲಷ್ಕರ್ ಎ ತೈಬಾ ಸಂಘಟನೆಯ ಉಗ್ರ ಸೈಫುಲ್ಲಾ ಖಾಲಿದ್ ಪಾಕಿಸ್ಥಾನದಲ್ಲಿ ಹತ್ಯೆ

ಭಾರತದಲ್ಲಿ ನಡೆದ ಮೂರು ಪ್ರಮುಖ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಲಷ್ಕರ್-ಎ-ತೈಬಾ ಸಂಘಟನೆಯ ಟಾಪ್ ಉಗ್ರನನ್ನು ಪಾಕಿಸ್ತಾನದ ಸಿಂಥ್ ಪ್ರಾಂತ್ಯದಲ್ಲಿ ಹತ್ಯೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಸೈಫುಲ್ಲಾ ಖಾಲಿದ್ ಮೋಸ್ಟ್ ವಾಂಟೆಡ್ ಆಗಿದ್ದ ಲಷ್ಕರ್ ಉಗ್ರರನನ್ನು ಸಿಂಥ್ ಪ್ರಾಂತ್ಯದ ಬಾದಿನ್ ಜಿಲ್ಲೆಯ ಮಟ್ಟಿ ತಾಲೂಕಿನಲ್ಲಿ ಅಪರಿಚಿತ ಗುಂಪೊಂದು ಹತ್ಯೆ ಮಾಡಿದೆ. 2001 ರಲ್ಲಿ ರಾಂಪುರದಲ್ಲಿ ನಡೆದ ಸಿಆರ್‌ಪಿಎಫ್ ಶಿಬಿರದ ಮೇಲಿನ ದಾಳಿ, 2005 ರಲ್ಲಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ನಡೆದಿದ್ದ ಗುಂಡಿನ ದಾಳಿ ಹಾಗೂ […]

ಮಾಸ್ಟರ್ ಮೈಂಡ್‍ ಲಷ್ಕರ್ ಎ ತೈಬಾ ಸಂಘಟನೆಯ ಉಗ್ರ ಸೈಫುಲ್ಲಾ ಖಾಲಿದ್ ಪಾಕಿಸ್ಥಾನದಲ್ಲಿ ಹತ್ಯೆ Read More »

ಕನ್ನಡಿಗರನ್ನು ಅವಮಾನಿಸಿದ ಹೋಟೆಲ್‌ ಸೀಜ್‌, ಮ್ಯಾನೇಜರ್‌ ಬಂಧನ

ಡಿಸ್‌ಪ್ಲೇ ಬೋರ್ಡ್‌ನಲ್ಲಿ ಕನ್ನಡಿಗರನ್ನು ಅವಮಾನಿಸುವ ಸಂದೇಶ ಪ್ರಕಟ ಬೆಂಗಳೂರು: ಡಿಸ್‌ಪ್ಲೇ ಬೋರ್ಡ್‌ನಲ್ಲಿ ಕನ್ನಡಿಗರಿಗೆ ಅವಮಾನವಾಗುವಂಥ ಹೇಳಿಕೆ ಪ್ರಕಟಿಸಿದ ಬೆಂಗಳೂರಿನ ಕೋರಮಂಗಲದ ಜಿ.ಎಸ್​.ಸೂಟ್​ ಹೋಟೆಲ್‌ನ ಮ್ಯಾನೇಜರ್ ಸರ್ಫಜ್​​ ಎಂಬಾತನನ್ನು ಬಂಧಿಸಲಾಗಿದ್ದು, ಜಿ.ಎಸ್​.ಸೂಟ್​ ಹೋಟೆಲ್​​ ಸೀಜ್ ಮಾಡಲಾಗಿದೆ. ಹೋಟೆಲ್​​ ಮಾಲೀಕ ಜಮ್ಸದ್ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ. ನಗರದ ಕೋರಮಂಗಲದ ನೆಕ್ಸಸ್ ಮಾಲ್ ಸಮೀಪದಲ್ಲಿರುವ ಈ ಹೋಟೆಲ್‌ನಲ್ಲಿ ನಿನ್ನೆ ಕನ್ನಡಿಗರಿಗೆ ಅಪಮಾನ ಮಾಡಿರುವುದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ನಮ್ಮ‌ ನೆಲದ ಅನ್ನ ತಿಂದು ನಮ್ಮನ್ನೇ ಅವಮಾನಿಸುತ್ತಿದ್ದಾರೆ.‌ ಪದೇಪದೇ ಕನ್ನಡಿಗರನ್ನು ಕೆರಳಿಸುತ್ತಿದ್ದಾರೆ ಎಂದು

ಕನ್ನಡಿಗರನ್ನು ಅವಮಾನಿಸಿದ ಹೋಟೆಲ್‌ ಸೀಜ್‌, ಮ್ಯಾನೇಜರ್‌ ಬಂಧನ Read More »

ಧರ್ಮಸ್ಥಳದ ಏರೋಸ್ಪೇಸ್‌ ಉದ್ಯೋಗಿ ಪಂಜಾಬಿನಲ್ಲಿ ನಿಗೂಢ ಸಾವು

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಯುವತಿ ಪಂಜಾಬಿನಲ್ಲಿ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಮೇ 17ರಂದು ನಡೆದಿದೆ. ಮೃತ ಯುವತಿಯನ್ನು ಧರ್ಮಸ್ಥಳ ಗ್ರಾಮದ ಬೊಳಿಯಾರ್ ನಿವಾಸಿ ಸುರೇಂದ್ರ ಮತ್ತು ಸಿಂಧೂದೇವಿ ದಂಪತಿ ಪುತ್ರಿ ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ (22) ಎಂದು ಗುರುತಿಸಲಾಗಿದೆ.ಪಂಜಾಬಿನ ಎಲ್‌ಪಿಯು ಪಗ್ವಾಡ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದು, ಆರು ತಿಂಗಳ ಹಿಂದೆ ಏರೋಸ್ಪೇಸ್ ಇಂಜಿನಿಯರ್ ಆಗಿ ಡೆಲ್ಲಿಯಲ್ಲಿ ಉದ್ಯೋಗದಲ್ಲಿದ್ದರು. ಮುಂದೆ ಜಪಾನ್‌ಗೆ ಉದ್ಯೋಗಕ್ಕೆ ಹೋಗುವವರಿದ್ದು ಪಂಜಾಬ್ ಎಲ್‌ಪಿಯು ಪಗ್ವಾಡ ಕಾಲೇಜಿನಿಂದ ಸರ್ಟಿಫಿಕೇಟ್ ಪಡೆಯಲು ತೆರಳಿದ್ದರು. ಸರ್ಟಿಫಿಕೆಟ್

ಧರ್ಮಸ್ಥಳದ ಏರೋಸ್ಪೇಸ್‌ ಉದ್ಯೋಗಿ ಪಂಜಾಬಿನಲ್ಲಿ ನಿಗೂಢ ಸಾವು Read More »

ಇಂಡೋನೇಷ್ಯಾದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಉಗ್ರರ ಸೆರೆ

ಐಸಿಸ್‌ ಪರವಾಗಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುತ್ತಿದ್ದ ಉಗ್ರರು ನವದೆಹಲಿ: ಇಂಡೋನೇಷ್ಯಾದಲ್ಲಿ ತಲೆಮರೆಸಿಕೊಂಡಿದ್ದ ಪುಣೆಯ ಐಸಿಸ್ ಮಾಡ್ಯೂಲ್ ಪ್ರಕರಣದ ಇಬ್ಬರು ಉಗ್ರರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದೆ. ಅಬ್ದುಲ್ಲಾ ಫಯಾಜ್ ಶೇಖ್ ಮತ್ತು ತಲ್ಹಾ ಲಿಯಾಕತ್ ಖಾನ್ ಎಂಬವರನ್ನು ಇಂಡೋನೇಷ್ಯಾದಲ್ಲಿ ಬಂಧಿಸಿ ಭಾರತಕ್ಕೆ ರವಾನಿಸಲಾಗಿದ್ದು, ಮುಂಬಯಿಯಲ್ಲಿ ಬಂಧಿಸಲಾಗಿದೆ. ಅವರನ್ನು ಶೀಘ್ರದಲ್ಲೇ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಮಹಾರಾಷ್ಟ್ರ, ಗುಜರಾತ್ ಮತ್ತು ಭಾರತದ ಇತರ ಭಾಗಗಳಲ್ಲಿ ಭಯೋತ್ಪಾದಕ ದಾಳಿಗಳನ್ನು ನಡೆಸಲು ಐಸಿಸ್ ಪ್ರಾಯೋಜಿತ ಪಿತೂರಿಯಲ್ಲಿ ಇಬ್ಬರೂ ತೊಡಗಿದ್ದರು. ಐಇಡಿ ಸ್ಫೋಟದ ಕಾರ್ಯಾಗಾರಗಳನ್ನು ಆಯೋಜಿಸುವುದು,

ಇಂಡೋನೇಷ್ಯಾದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಉಗ್ರರ ಸೆರೆ Read More »

ಪಾಣೆಮಂಗಳೂರಿನಲ್ಲಿ ನಾಲ್ವರ ತಂಡದಿಂದ ತಲ್ವಾರ್‌ ದಾಳಿ

ಗಂಭೀರ ಗಾಯಗೊಂಡ ಪೈಂಟರ್‌ ಆಸ್ಪತ್ರೆಗೆ ದಾಖಲು ಬಂಟ್ವಾಳ : ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಕೃತ್ಯದಿಂದ ಉದ್ವಿಗ್ನಗೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಇನ್ನೊಂದು ಹತ್ಯಾ ಯತ್ನ ನಡೆದಿದೆ. ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಪೇಟೆಯ ಅಕ್ಕರಂಗಡಿ ಎಂಬಲ್ಲಿ ವ್ಯಕ್ತಿಯೊಬ್ಬರ ಮೇಲೆ ತಲವಾರುಗಳಿಂದ ದಾಳಿ ಮಾಡಲಾಗಿದೆ. ಅಕ್ಕರಂಗಡಿ ನಿವಾಸಿ ಹಮೀದ್ (38) ಎಂಬವರಿಗೆ ಬೈಕ್‌ನಲ್ಲಿ ಬಂದಿದ್ದ ದುಷ್ಕರ್ಮಿಗಳು ಇರಿದು ಪರಾರಿಯಾಗಿದ್ದಾರೆ. ಶುಕ್ರವಾರ ರಾತ್ರಿ ಸುಮಾರು 8 ಗಂಟೆಗೆ ಈ ಘಟನೆ ನಡೆದಿದೆ. ಅಕ್ಕರಂಗಡಿಯ ಪೈಂಟಿಂಗ್ ಕೆಲಸ

ಪಾಣೆಮಂಗಳೂರಿನಲ್ಲಿ ನಾಲ್ವರ ತಂಡದಿಂದ ತಲ್ವಾರ್‌ ದಾಳಿ Read More »

ಪಾಣೆಮಂಗಳೂರಿನಲ್ಲಿ ಯುವಕನಿಗೆ ಚೂರಿ ಇರಿತ

ಬಂಟ್ವಾಳ: ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಿಲ್ಲಾ ಪ್ರವಾಸದಲ್ಲಿರುವ ಸಂದರ್ಭದಲ್ಲಿಯೇ ಪಾಣೆಮಂಗಳೂರಿನ ಅಕ್ಕರಂಗಡಿಯಲ್ಲಿ ಚಾಕು ಇರಿತ ನಡೆದಿದೆ. ಪೈಂಟಿಂಗ್ ವೃತ್ತಿಯಲ್ಲಿದ್ದ  ಹಮೀದ್ ಯಾನೆ ಎಂಬಾತನಿಗೆ ಇರಿತವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ನಲ್ಲಿ ಬಂದ ಕಿಡಿಗೇಡಿಗಳು ದಾಳಿ ನಡೆಸಿ ಪರಾರಿಯಾಗಿದ್ದಾರೆ. ಶುಕ್ರವಾರ ರಾತ್ರಿ 9ರ ಸುಮಾರಿಗೆ ಬಿ.ಸಿ. ರೋಡ್ ಬಳಿಯ ಹಳೆಯ ಸೇತುವೆ ಬಳಿಯಲ್ಲಿ ಹಮೀದ್ ತನ್ನ ರಿಕ್ಷಾದಲ್ಲಿ ಕುಳಿತುಕೊಂಡಿದ್ದಾಗ ಅಲ್ಲಿಗೆ ಬಂದ ಕಿರಾತಕರು ಆತನ ಕೈಗೆ ಇರಿದಿದ್ದರು. ಮುಖ ಮುಚ್ಚಿಕೊಂಡಿದ್ದ ದಾಳಿಕೋರರ ಗುರುತು ಪತ್ತೆ ಸಾಧ್ಯವಾಗಿಲ್ಲ. ಪೊಲೀಸರ

ಪಾಣೆಮಂಗಳೂರಿನಲ್ಲಿ ಯುವಕನಿಗೆ ಚೂರಿ ಇರಿತ Read More »

ಸುಹಾಸ್‌ ಶೆಟ್ಟಿ ಹತ್ಯೆಯಲ್ಲಿ ಪಿಎಫ್‌ಐ ಕೈವಾಡ : ಡಾ.ಭರತ್‌ ಶೆಟ್ಟಿ

ತನಿಖೆಯನ್ನು ಎನ್‌ಐಎಗೊಪ್ಪಿಸಿ ಇನ್ನಷ್ಟು ಕೊಲೆಗಳನ್ನು ತಡೆಯಲು ಒತ್ತಾಯ ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯ ಸಂಚಿನಲ್ಲಿ ನಿಷೇಧಿತ ಉಗ್ರ ಸಂಘಟನೆ ಕೆ.ಎಫ್.ಡಿ ಹಾಗೂ ಪಿ.ಎಫ್.ಐ ಕೈವಾಡ ಇರುವುದು ಬಯಲಾಗಿದೆ. ಎರಡು ದಿನದ ಹಿಂದೆ ಬಂಧಿತನಾಗಿರುವ ನೌಶಾದ್ ಕೆ.ಎಫ್.ಡಿ ಸಂಘಟನೆಯ ಸಕ್ರಿಯ ಸದಸ್ಯನಾಗಿದ್ದ ಎಂದು ಮಂಗಳೂರು ಉತ್ತರ ಶಾಸಕ ಡಾ.ಭರತ್‌ ಶೆಟ್ಟಿ ಹೇಳಿದ್ದಾರೆ. ಹಿಂದೂ ಸಂಘಟನೆಯ ಪ್ರಮುಖ ಕಾರ್ಯಕರ್ತ ಸುಖಾನಂದ ಶೆಟ್ಟಿ ಅವರನ್ನು ಹತ್ಯೆ ಮಾಡಿರುವುದು ಇದೇ ಕೆ.ಎಫ್.ಡಿ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ನೌಶಾದ್ ಮತ್ತು ಅವನ

ಸುಹಾಸ್‌ ಶೆಟ್ಟಿ ಹತ್ಯೆಯಲ್ಲಿ ಪಿಎಫ್‌ಐ ಕೈವಾಡ : ಡಾ.ಭರತ್‌ ಶೆಟ್ಟಿ Read More »

ಬಸ್ಸಿನಲ್ಲಿ ಅಪ್ರಾಪ್ತೆಗೆ ಕಿರುಕುಳ : ಆರೋಪಿ ಬಂಧನ

ಸುಳ್ಯ: ಪುತ್ತೂರಿನಿಂದ ಮಡಿಕೇರಿಗೆ ಹೋಗುವ ಕೆ.ಎಸ್.ಆರ್.ಟಿ.ಸಿ. ಬಸ್ಸಿನಲ್ಲಿ ಅಪ್ರಾಪ್ತೆಗೆ ಕಿರುಕುಳ ನೀಡಿದ ಆರೋಪದಲ್ಲಿ ಯುವಕನೋರ್ವನನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ಬೆಟ್ಟಂಪಾಡಿಯ ಅಬ್ದುಲ್ಲಾ ಬಂಧಿತ ಆರೋಪಿ. ಪುತ್ತೂರಿನಿಂದ ಸುಳ್ಯ ಮೂಲಕ ಮಡಿಕೇರಿಗೆ ತೆರಳುವ ಬಸ್ಸಿನಲ್ಲಿ ಮಡಿಕೇರಿಗೆ ತೆರಳಲು ಮನೆಯವರೊಂದಿಗೆ ಅಪ್ರಾಪ್ತೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಪಕ್ಕದಲ್ಲಿ ನಿಂತಿದ್ದ ಆರೋಪಿ ಅಬ್ದುಲ್ಲಾ ಅಪ್ರಾಪ್ತೆ ಬಾಲಕಿಯ ಮೈಗೆ ಕೈ ಹಾಕಿ, ಅನುಚಿತವಾಗಿ ವರ್ತಿಸಿ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಮನೆಯವರು ಸುಳ್ಯ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು

ಬಸ್ಸಿನಲ್ಲಿ ಅಪ್ರಾಪ್ತೆಗೆ ಕಿರುಕುಳ : ಆರೋಪಿ ಬಂಧನ Read More »

ವನ್ಯಜೀವಿ ಬೇಟೆಯಾಡಿ ಮಾಂಸ ದಾಸ್ತಾನು | ಆರೋಪಿಗೆ ಜಾಮೀನು ಮಂಜೂರು

ಪುತ್ತೂರು: ಕಳೆದ ಏಪ್ರಿಲ್ ತಿಂಗಳಲ್ಲಿ ವನ್ಯಜೀವಿ ಬೇಟೆಯಾಡಿ, ಅದರ ಮಾಂಸವನ್ನು ದಾಸ್ತಾನಿರಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗೆ ದ.ಕ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ ನಿರೀಕ್ಷಣ ಜಾಮೀನು ಮಂಜೂರುಗೊಳಿಸಿ ಆದೇಶ ನೀಡಿದೆ.   ಏ.24 ರಂದು ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕಲೆಂಜಾಲು ಎಂಬಲ್ಲಿ ವಾಸವಿರುವ ವರ್ಗೀಸ್‍ ಥಾಮಸ್ ಎಂಬವರ ಮನೆಯಲ್ಲಿ ವನ್ಯ ಪ್ರಾಣಿಯ ಮಾಂಸದ ತುಂಡುಗಳನ್ನು ದಾಸ್ತಾನಿಟ್ಟಿರುವ ಕುರಿತು ಮಾಹಿತಿ ಬಂದಿದ್ದು, ಪಂಜ ವಲಯದ ಕಡಬ ಅರಣ್ಯಾಧಿಕಾರಿಗಳು ಆರೋಪಿ ಮನೆಗೆ ದಾಳಿ ನಡೆಸಿದಾಗ ಮನೆಯ ರೆಫ್ರಿಜರೇಟರ್ ಒಳಗಡೆ

ವನ್ಯಜೀವಿ ಬೇಟೆಯಾಡಿ ಮಾಂಸ ದಾಸ್ತಾನು | ಆರೋಪಿಗೆ ಜಾಮೀನು ಮಂಜೂರು Read More »

ತಂದೆಯನ್ನೇ ಮದುವೆಗೆ ಆಹ್ವಾನಿಸಿಲ್ಲವಂತೆ ಚೈತ್ರಾ ಕುಂದಾಪುರ

ಚೈತ್ರಾ ಹಾಗೂ ಆಕೆಯ ಪತಿ ಇಬ್ಬರೂ ಮೋಸಗಾರರು ಎಂದು ತಂದೆಯ ಗಂಭೀರ ಆರೋಪ ಕುಂದಾಪುರ : ಇತ್ತೀಚೆಗೆ ವಿವಾಹಿತರಾಗಿರುವ ಬಿಗ್‌ಬಾಸ್‌ ಸ್ಪರ್ಧಿ ಚೈತ್ರಾ ಕುಂದಾಪುರ ಮೇಲೆ ಅವರ ತಂದೆಯೇ ಗಂಭೀರ ಅರೋಪಗಳನ್ನು ಮಾಡಿದ್ದು, ತನ್ನನ್ನು ಮದುವೆಗೆ ಕರೆದೇ ಇಲ್ಲ ಎಂದು ತಂದೆ ಬಾಲಕೃಷ್ಣ ನಾಯ್ಕ್ ಹೇಳಿದ್ದಾರೆ. ಚೈತ್ರಾ ಕುಂದಾಪುರ ಕೆಲದಿನಗಳ ಹಿಂದೆ ದೇವಸ್ಥಾನದಲ್ಲಿ ವಿವಾಹ ಸರಳವಾಗಿ ನಡೆದಿತ್ತು. ಚೈತ್ರಾ ಅವರು ಶ್ರೀಕಾಂತ್ ಕಶ್ಯಪ್ ಎಂಬ ಯುವಕನನ್ನು ವರಿಸಿದ್ದಾರೆ. ಮಗಳ ಮದುವೆಯನ್ನು ನಾನು ಒಪ್ಪಲಾರೆ. ಚೈತ್ರಾ ಹಾಗೂ ಆಕೆಯ

ತಂದೆಯನ್ನೇ ಮದುವೆಗೆ ಆಹ್ವಾನಿಸಿಲ್ಲವಂತೆ ಚೈತ್ರಾ ಕುಂದಾಪುರ Read More »

error: Content is protected !!
Scroll to Top