ಅಪರಾಧ

ತೃತೀಯಲಿಂಗಿ ಜೊತೆ ಬಂಗಲೆಯಲ್ಲಿ ಸಿಕ್ಕಿಬಿದ್ದ ಸಚಿವ

ವಿಡಿಯೋ ವೈರಲ್‌ ಆಗಿ ಆಡಳಿತ ಪಕ್ಷಕ್ಕೆ ಮುಜುಗರ ತಂದ ಪ್ರಕರಣ ಮುಂಬೈ : ಸಚಿವರೊಬ್ಬರು ತೃತೀಯಲಿಂಗಿ ಜತೆ ಸಿಕ್ಕಿಬಿದ್ದಿರುವ ವಿಡಿಯೋ ವೈರಲ್ ಆಗಿ ಮಹಾರಾಷ್ಟ್ರ ರಾಜಕಾರಣದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿದೆ. ಮಹಾರಾಷ್ಟ್ರ ಸಚಿವ, ಎನ್​ಸಿಪಿ ನಾಯಕ ನರಹರಿ ಜಿರ್ವಾಲ್ ತಮ್ಮ ಬಂಗಲೆಯಲ್ಲಿ ಟ್ರಾನ್ಸ್​ಜೆಂಡರ್ ಜತೆ ಇದ್ದ ವಿಡಿಯೋ ವೈರಲ್ ಆಗಿದೆ. ವಿರೋಧ ಪಕ್ಷ ಮಹಾ ವಿಕಾಸ್ ಅಘಾಡಿ ಅವರ ರಾಜೀನಾಮೆಗೆ ಒತ್ತಾಯಿಸಿದೆ. ಎರಡು ತಿಂಗಳಲ್ಲಿ ನರಹರಿ ಜಿರ್ವಾಲ್‌ ಹುಟ್ಟು ಹಾಕಿದ ಎರಡನೇ ವಿವಾದವಿದು. ಸಚಿವಾಲಯದಲ್ಲಿ 35 ಸಾವಿರ ರೂ. […]

ತೃತೀಯಲಿಂಗಿ ಜೊತೆ ಬಂಗಲೆಯಲ್ಲಿ ಸಿಕ್ಕಿಬಿದ್ದ ಸಚಿವ Read More »

ಸುಳ್ಯ: ಗೋವು ಅಕ್ರಮ ಸಾಗಿಸುತ್ತಿದ್ದ ಮೂವರು ಸೆರೆ

ಸುಳ್ಯ: ಗೋವುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ ಘಟನೆ ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ನಡೆದಿದೆ. ಪಿಕಪ್ ಚಾಲಕ ಕೇರಳ ಮೂಲದ ಇಸಾಕ್ (40), ಸುಳ್ಯದ ನಾವೂರು ನಿವಾಸಿ ಇಬ್ರಾಹಿಂ ಎಂಬವರು ಗೋವುಗಳನ್ನು ಅಮರಮುಡ್ನೂರಿನಿಂದ ಖರೀದಿಸಿ, ಅನುಮತಿ ಪಡೆಯದೆ ವಧೆ ಮಾಡುವ ಸಲುವಾಗಿ ಸಾಗಿಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಆಲೆಟ್ಟಿ ಮಾರ್ಗವಾಗಿ ಕೇರಳದ ಕಡೆಗೆ ಪಿಕಪ್ ವಾಹನದಲ್ಲಿ ಗೋವುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯಂತೆ ಸುಳ್ಯ ಪೊಲೀಸರು ಪಿಕಪ್

ಸುಳ್ಯ: ಗೋವು ಅಕ್ರಮ ಸಾಗಿಸುತ್ತಿದ್ದ ಮೂವರು ಸೆರೆ Read More »

ಕೆಲಸಕ್ಕೆಂದ್ದು ಹೊರಟು ಹೋದ ಯುವತಿ ನಾಪತ್ತೆ

ಬಂಟ್ವಾಳ: ಕೆಲಸಕ್ಕೆಂದು ತೆರಳಿ ಮನೆಗೆ ಬಾರದೆ ನಾಪತ್ತೆಯಾದ ಘಟನೆ ಅರಳ ಗ್ರಾಮದ ಮುಲಾರಪಟ್ಟದಲ್ಲಿ ನಡೆದಿದೆ. ಮುಲ್ಲಾರಪಟ್ಟ ಆಝಾದ್ ನಗರದನಿವಾಸಿ ಅಬ್ದುಲ್ ರಶೀದ್‌ರವರ ಪುತ್ರಿ ಫಾತಿಮತ್ ಇಪ್ರಾ (18) ನಾಪತ್ತೆಯಾದ ಯುವತಿ. ಪಿಯುಸಿ ಮುಗಿಸಿ ಕಂಪ್ಯೂಟರ್ ತರಬೇತಿ ಪಡೆದಿದ್ದು, ಬಿ.ಸಿ.ರೋಡ್ ನ ಸೈಬರ್ ಸೆಂಟರ್ ನಲ್ಲಿ ಕೆಲಸ ಮಾಡಿತ್ತಿದ್ದರು. ಎಂದಿನಂತೆ ಮಾ.24ರಂದು ಕೆಲಸಕ್ಕೆಂದು ತೆರಳಿದ ಫಾತಿವiತ್ ಇಪ್ರಾ ಸಂಜೆಯಾದರು ಮನೆಗೆ ಬಾರದಿರುವುದನ್ನು ಕಂಡು ಗಾಬರಿಗೊಂಡ ಪೋಷಕರು ಆಕೆ ಕೆಲಸ ಮಾಡುವ ಸೈಬರ್ ಸೆಂಟರ್ ನ ಮಾಲೀಕ ಮನ್ನೂರ್ ಅವರ

ಕೆಲಸಕ್ಕೆಂದ್ದು ಹೊರಟು ಹೋದ ಯುವತಿ ನಾಪತ್ತೆ Read More »

ಆನ್‌ಲೈನ್ ಗೇಮಿಂಗ್ ಹುಚ್ಚು: ವೈದ್ಯಕೀಯ ವಿದ್ಯಾರ್ಥಿಯ ಹಣವೂ ಹೋಯ್ತು, ಜೀವವೂ ಹೋಯ್ತು

ಬೀದರ್: ಆನ್‌ಲೈನ್ ಗೇಮ್ಸ್ ಹುಚ್ಚಿಗೆ ಹಣ ಕಳಕೊಂಡ ನೋವಿನಲ್ಲಿ ‌ವೈದ್ಯಕೀಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಬೀದರ್‌ನ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನಡೆದಿದೆ. ಮೃತನನ್ನು ಅಂತಿಮ ವರ್ಷದ ವೈದ್ಯಕೀಯ ಪದವಿ ಓದುತ್ತಿದ್ದ ಅನಿಷ್ಕಾರ್ ‌ಚೌಹಾಣ್ ಎಂದು ಗುರುತಿಸಲಾಗಿದೆ. ಕಲ್ಬುರ್ಗಿಯ ಚಿಂಚೋಳಿ ತಾಲೂಕಿನ ಸಲಗರ್ ಗ್ರಾಮದ ಯುವಕ ಈತ. ಆನ್‌ಲೈನ್ ಗೇಮ್ಸ್ ಚಟಕ್ಕೆ ಬಿದ್ದು ಹಣ ಕಳೆದುಕೊಂಡಿದ್ದ. ಇದರಿಂದ ಮನನೊಂದು ಕಾಲೇಜಿನ ವಸತಿ ಗೃಹದಲ್ಲೇ ನೇಣಿಗೆ ಕೊರಳೊಡ್ಡಿ ಸಾವನ್ನಪ್ಪಿದ್ದಾನೆ. ಅನಿಷ್ಕಾರ್ ತನ್ನ ಸ್ನೇಹಿತನಿಂದಲೂ ‌ಸುಮಾರು ಎಪ್ಪತ್ತು ಸಾವಿರ ರೂ.

ಆನ್‌ಲೈನ್ ಗೇಮಿಂಗ್ ಹುಚ್ಚು: ವೈದ್ಯಕೀಯ ವಿದ್ಯಾರ್ಥಿಯ ಹಣವೂ ಹೋಯ್ತು, ಜೀವವೂ ಹೋಯ್ತು Read More »

ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಅಶ್ರಫ್ ಬಂಧನ

ಬಂಟ್ವಾಳ: ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದ ಹಾಗೆ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ ‌ವಾರಂಟ್ ಆರೋಪಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಬಂಧಿತನನ್ನು ‌ವೀರಕಂಬ ನಿವಾಸಿ ಮಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ. ಈತ ಅ.ಕ್ರ :117/2019 ಹಾಗೂ ಅ.ಕ್ರ :111/2020 ಪ್ರಕರಣಗಳಿಗೆ ಸಂಬಂಧಿಸಿದಂತೆ, ಬಂಟ್ವಾಳ ACJ & JMFC ನ್ಯಾಯಾಲಯಕ್ಕೆ ಹಲವು ಬಾರಿ ಹಾಜರಾಗದೇ ತಪ್ಪಿಸಿಕೊಂಡಿದ್ದ. ಈತನ ವಿರುದ್ಧ ಹತ್ತಕ್ಕೂ ಹೆಚ್ಚು ಬಾರಿ ವಾರಂಟ್ ಸಹ ಜಾರಿಯಾಗಿತ್ತು. ಸದ್ಯ ಬಂಟ್ವಾಳ ನಗರ ಪೊಲೀಸ್ ಠಾಣೆಯ ASI ಸುಜು ಹಾಗೂ

ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಅಶ್ರಫ್ ಬಂಧನ Read More »

ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಅಂದರ್

ಬೆಳ್ತಂಗಡಿ: ಸುಮಾರು ಐದು‌‌ ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ‌ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯೊಬ್ಬನನ್ನು ಕೊನೆಗೂ ವೇಣೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮಣಿಕಂಠ ಎಂದು ಗುರುತಿಸಲಾಗಿದೆ. ಈತ ಉಡುಪಿ ಜಿಲ್ಲೆಯ ಕಾಪು ಪ್ರದೇಶದವನು ಎಂದು ತಿಳಿದು ಬಂದಿದೆ. ಆರೋಪಿಯನ್ನು ಉಡುಪಿಯಲ್ಲಿ ಬಂಧಿಸಲಾಗಿದ್ದು, ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಅಂದರ್ Read More »

ಪ್ರಚೋದನಕಾರಿ ವಿಡಿಯೋ ಹಂಚಿದ ಆರೋಪಿ ಸೆರೆ

ಫೇಸ್‌ಬುಕ್‌ ನಕಲಿ ಖಾತೆ ಮೂಲಕ ವಿಡಿಯೋ ಹಂಚುತ್ತಿದ್ದ ಪಾತಕಿ ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದ ಮೂಲಕ ತಿರುಚಿದ ವಿಡಿಯೋಗಳನ್ನು ಸೃಷ್ಟಿಸಿ ಹಂಚಿಕೊಂಡು ಸಮಾಜದಲ್ಲಿ ಕೋಮು ದ್ವೇಷದ ಕಿಚ್ಚು ಹಚ್ಚಲು ಯತ್ನಿಸಿದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ನಿವಾಸಿ ಮಹಮ್ಮದ್ ರಫೀಕ್ (38) ಬಂಧಿತ ಆರೋಪಿ, ಈತ ನಝೀರ ಮಂಗಳೂರು ಫೇಸ್‌ಬುಕ್ ಖಾತೆಯ ಮೂಲಕ ವಿಡಿಯೋಗಳನ್ನು ಹರಿಬಿಡುತ್ತಿದ್ದ. ಕಳೆದ ಅಕ್ಟೋಬಋನಲ್ಲಿ ಈತ ತನ್ನ ಫೇಸ್‌ಬುಕ್ ಖಾತೆಯ ಮೂಲಕ ಎಐ ತಂತ್ರಜ್ಞಾನ

ಪ್ರಚೋದನಕಾರಿ ವಿಡಿಯೋ ಹಂಚಿದ ಆರೋಪಿ ಸೆರೆ Read More »

ಮಸೀದಿ ವಿಚಾರದಲ್ಲಿ ಮಾರಾಮಾರಿ : ಮೂರು ಪ್ರಕರಣ ದಾಖಲು

ಗುಂಪು ಕಟ್ಟಿಕೊಂಡು ಹೊಡೆದಾಟ; ಹಲವರಿಗೆ ಗಾಯ ಬಂಟ್ವಾಳ : ಉಳ್ಳಾಲ ತಾಲೂಕಿನ ಸಜಿಪಪಡು ಗ್ರಾಮದ ತಲೆಮೊಗರು ಮಸೀದಿಯ ವಿಚಾರಕ್ಕೆ ಸಂಬಂಧಿಸಿದಂತೆ ಭಾರಿ ಮಾರಾಮಾರಿ ನಡೆದಿದ್ದು, ಕೆಲವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಈ ಹೊಡೆದಾಟದ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ. ಮೊದಲ ಪ್ರಕರಣದಲ್ಲಿ ಸಜಿಪಪಡು ನಿವಾಸಿ ಅಬ್ದುಲ್ ನವಾಝ್ (42) ಎಂಬವರು ನೀಡಿದ ದೂರಿನಂತೆ ಮಾರ್ಚ್ 22ರಂದು ಬೆಳಗ್ಗೆ ಇವರು ಮತ್ತು ಅವರ

ಮಸೀದಿ ವಿಚಾರದಲ್ಲಿ ಮಾರಾಮಾರಿ : ಮೂರು ಪ್ರಕರಣ ದಾಖಲು Read More »

ಇನ್‌ಸ್ಪೆಕ್ಟರ್‌ ಸಂದೇಶ್‌ ಪಿ.ಜಿ. ಪ್ರಕರಣ ಸಿಐಡಿಗೆ ವರ್ಗಾವಣೆ

ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಸಿಐಡಿ ತನಿಖೆಗೆ ಆದೇಶಿಸಿದ ಸರ್ಕಾರ ಮಂಗಳೂರು : ಮೂಡುಬಿದಿರೆಯ ಅಮಾನತಿನಲ್ಲಿರುವ ಪೊಲೀಸ್‌ ಇನ್‌ಸ್ಪೆಕ್ಟರ್‌ ಸಂದೇಶ್‌ಪಿ.ಜಿ.ಯ ಹೊಸ ಹೊಸ ಪ್ರಕರಣಗಳು ಬಯಲಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿದೆ. ರಾಜ್ಯ ಸರ್ಕಾರ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ಸೋಮವಾರ ಆದೇಶ ಹೊರಡಿಸಿದೆ. ಸರ್ಕಾರ ಆದೇಶ ಹೊರಬಿದ್ದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿದ್ದಾರೆ. 2018ರಲ್ಲಿ ವೇಣೂರು ಠಾಣೆಯಲ್ಲಿ ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಅಕ್ಕನ ವಿರುದ್ಧ ತಂಗಿ ದೂರು ನೀಡಿದ್ದರು. ಆ ಮಹಿಳೆ

ಇನ್‌ಸ್ಪೆಕ್ಟರ್‌ ಸಂದೇಶ್‌ ಪಿ.ಜಿ. ಪ್ರಕರಣ ಸಿಐಡಿಗೆ ವರ್ಗಾವಣೆ Read More »

ಮಾದಕ ದ್ರವ್ಯ ಸೇವಿಸಿದ ಯುವಕನಿಂದ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯ ವರ್ತನೆ: ಬಂಧನ

ಉಪ್ಪಿನಂಗಡಿ: ಮಾದಕ ದ್ರವ್ಯ ಸೇವನೆ ಮಾಡಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಕಾಸರಗೋಡು ನಿವಾಸಿ ಯೂಸುಫ್ ಸಿ. ಇ. ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿಯ ಕರ್ವೇಲು ಎಂಬಲ್ಲಿ ಯುವಕನೊಬ್ಬ ಅಸಭ್ಯವಾಗಿ ವರ್ತಿಸುತ್ತಿದ್ದು, ಈ ಬಗ್ಗೆ ಪೊಲೀಸರಿಗೆ ಮಾಹಿತಿ ಹೋಗಿತ್ತು. ಅದರಂತೆ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳಕ್ಕೆ ಬಂದು ಆರೋಪಿಯನ್ನು ವಶಕ್ಕೆ ಪಡೆದಿರುವುದಾಗಿದೆ. ಪರೀಕ್ಷಾ ವರದಿಯಲ್ಲಿ ಯುವಕ ಡ್ರಗ್ಸ್ ಸೇವನೆ ಮಾಡಿರುವುದು ದೃಢಪಟ್ಟಿದೆ.

ಮಾದಕ ದ್ರವ್ಯ ಸೇವಿಸಿದ ಯುವಕನಿಂದ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯ ವರ್ತನೆ: ಬಂಧನ Read More »

error: Content is protected !!
Scroll to Top