ಅಪರಾಧ

ಧರ್ಮದ ಹೆಸರಲ್ಲಿ ಹಿಂಸಾಚಾರ : ಇಸ್ಲಾಂ ತ್ಯಜಿಸಿದ ಶಿಕ್ಷಕ

ಕೋಲ್ಕತ್ತಾ: ಪಹಲ್ಗಾಮ್‌ನಲ್ಲಿ ಉಗ್ರರು ಧರ್ಮ ಕೇಳಿ ಪ್ರವಾಸಿಗರನ್ನು ಸಾಯಿಸಿದ ಕೃತ್ಯದ ಬಳಿಕ ಪಶ್ಚಿಮ ಬಂಗಾಳದ ಬದುರಿಯಾದ ಶಾಲಾ ಶಿಕ್ಷಕರೊಬ್ಬರು ಇಸ್ಲಾಂ ಧರ್ಮ ತ್ಯಜಿಸಲು ನಿರ್ಧರಿಸಿದ್ದಾರೆ. ಈ ಬಗ್ಗೆ ವೀಡಿಯೋ ಹಂಚಿಕೊಂಡಿರುವ ಶಿಕ್ಷಕ ಸಬೀರ್ ಹುಸೇನ್, ಕಾಶ್ಮೀರ ಸೇರಿದಂತೆ ವಿವಿಧೆಡೆ ಧರ್ಮವನ್ನು ಹಿಂಸೆಗೆ ಆಯುಧವನ್ನಾಗಿ ಬಳಸಲಾಗುತ್ತಿದೆ. ಇದನ್ನು ಒಪ್ಪಲು ಸಾಧ್ಯವಿಲ್ಲ. ಆದ್ದರಿಂದ ನಾನು ಇಸ್ಲಾಂನ್ನು ತ್ಯಜಿಸುತ್ತೇನೆ. ಯಾವ ಧರ್ಮದ ವ್ಯಾಪ್ತಿಗೂ ಒಳಪಡದೆ, ಕೇವಲ ಮಾನವನಾಗಿ ಗುರುತಿಸಿಕೊಳ್ಳಲು ಬಯಸುತ್ತೇನೆ ಎಂದು ಹೇಳಿಕೊಂಡಿದ್ದಾರೆ. ಏ.22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ […]

ಧರ್ಮದ ಹೆಸರಲ್ಲಿ ಹಿಂಸಾಚಾರ : ಇಸ್ಲಾಂ ತ್ಯಜಿಸಿದ ಶಿಕ್ಷಕ Read More »

ಕಾಶ್ಮೀರದಲ್ಲಿ ಇನ್ನಿಬ್ಬರು ಉಗ್ರರ ಮನೆ ಧ್ವಂಸ

ಸ್ಫೋಟಕದ ಮೂಲಕ ಮನೆಗಳನ್ನು ನಾಶ ಮಾಡಿದ ಸೇನೆ ಶ್ರೀನಗರ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರನ್ನು ಗುಂಡು ಹಾರಿಸಿ ಕೊಂದ ಭಯೋತ್ಪಾದಕ ಕೃತ್ಯದ ಬಳಿಕ ಉಗ್ರರ ಮನೆಗಳನ್ನು ಭದ್ರತಾ ಪಡೆ ನಾಶ ಮಾಡುತ್ತಿದೆ. ನಿನ್ನೆ ರಾತ್ರಿ ಐಇಡಿ ಸ್ಫೋಟಿಸಿ ಮತ್ತು ಬುಲ್‌ಡೋಜರ್‌ ಮೂಲಕ ಇಬ್ಬರು ಉಗ್ರರ ಮನೆಯನ್ನು ಭಾರತೀಯ ಸೇನೆ ಧ್ವಂಸ ಮಾಡಿದೆ. ಲಷ್ಕರ್ ಎ ತೊಯ್ಬಾದ ಉಗ್ರ ಸಂಘಟನೆಯ ಉಗ್ರ ಫಾರೂಕ್ ಎಂಬಾತನ ಮನೆಯನ್ನು ಸೇನೆ ಧ್ವಂಸಗೊಳಿಸಿದೆ. ಕುಪ್ವಾರದ ಕಲಾರೂಸ್ ಪ್ರದೇಶದಲ್ಲಿರುವ ಫಾರೂಕ್ ಮನೆಯನ್ನು ಐಇಡಿ ಸ್ಫೋಟಿಸಿ

ಕಾಶ್ಮೀರದಲ್ಲಿ ಇನ್ನಿಬ್ಬರು ಉಗ್ರರ ಮನೆ ಧ್ವಂಸ Read More »

ಪುತ್ತೂರು ಸರಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿಗಳ ಜೊತೆ ಅನುಚಿತ ವರ್ತನೆ, ಹಲ್ಲೆಗೆ ಯತ್ನ | ಪುತ್ತೂರು ಮಹಿಳಾ ಪೊಲೀಸ್ ಠಾಣೆ ಎದುರು ಭಾರತೀಯ ವೈದ್ಯಕೀಯ ಸಂಘದ ಪುತ್ತೂರು ಶಾಖೆಯ ಪದಾಧಿಕಾರಿಗಳಿಂದ ಪ್ರತಿಭಟನೆ | ರಸ್ತೆ ತಡೆ ನಡೆಸಿ ಪ್ರತಿಭಟನೆ

ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಮೇಲೆ ಅನುಚಿತ ವರ್ತನೆ ಹಾಗೂ ಹಲ್ಲೆಗೆ ಯತ್ನಿಸಿದ ಯುವಕನನ್ನು ಇಂದು ಸಂಜೆ 6 ಗಂಟೆ ಒಳಗೆ ಬಂಧಿಸದಿದ್ದಲ್ಲಿ ತಾಲೂಕಿನ ಎಲ್ಲಾ ಆಸ್ಪತ್ರೆಗಳು ಬಂದ್‍ ಆಗಲಿದೆ ಎಂಬ ಎಚ್ಚರಿಕೆಯನ್ನು ಭಾರತೀಯ ವೈದ್ಯಕೀಯ ಸಂಘದ ಪುತ್ತೂರು ಶಾಖ ಎಚ್ಚರಿಕೆ ನೀಡಿದೆ. ಪುತ್ತೂರು ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳ ಮೇಲೆ ವ್ಯಕ್ತಿಯೋರ್ವ ಅನುಚಿತ ವರ್ತನೆ, ಹಲ್ಲೆಗೆ ಯತ್ನಿಸಿದ ಘಟನೆ ಶುಕ್ರವಾರ ರಾತ್ರಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನಡೆದಿದ್ದು, ಈ ನಿಟ್ಟಿನಲ್ಲಿ ವೈದ್ಯರು ಹಾಗೂ ಬಿಜೆಪಿ ಮುಖಂಡರು

ಪುತ್ತೂರು ಸರಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿಗಳ ಜೊತೆ ಅನುಚಿತ ವರ್ತನೆ, ಹಲ್ಲೆಗೆ ಯತ್ನ | ಪುತ್ತೂರು ಮಹಿಳಾ ಪೊಲೀಸ್ ಠಾಣೆ ಎದುರು ಭಾರತೀಯ ವೈದ್ಯಕೀಯ ಸಂಘದ ಪುತ್ತೂರು ಶಾಖೆಯ ಪದಾಧಿಕಾರಿಗಳಿಂದ ಪ್ರತಿಭಟನೆ | ರಸ್ತೆ ತಡೆ ನಡೆಸಿ ಪ್ರತಿಭಟನೆ Read More »

ಪಾಕ್‌ ಪ್ರಜೆಗಳ ಬಳಿಕ ಈಗ ಬಾಂಗ್ಲಾದೇಶದ ಪ್ರಜೆಗಳ ಗಡಿಪಾರು

550ಕ್ಕೂ ಅಧಿಕ ಬಾಂಗ್ಲಾದೇಶಿಯರ ಬಂಧನ; ಗಡಿಪಾರು ಮಾಡಲು ಕ್ರಮ ಹೊಸದಿಲ್ಲಿ: ಪಹಲ್ಗಾಮ್‌ ಉಗ್ರ ದಾಳಿಯ ಬಳಿಕ ಪಾಕಿಸ್ಥಾನಿ ಪ್ರಜೆಗಳಿಗೆ ದೇಶಬಿಟ್ಟು ಹೋಗಲು ಹೇಳಿದ ಬಳಿಕ ಈಗ ಬಾಂಗ್ಲಾದೇಶದ ಅಕ್ರಮ ಪ್ರಜೆಗಳಿಗೆ ಗೇಟ್‌ಪಾಸ್‌ ನೀಡಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರ ತವರು ರಾಜ್ಯವಾದ ಗುಜರಾತಿನಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶ ಪ್ರಜೆಗಳನ್ನು ಗುರುತಿಸುವ ಕಾರ್ಯಾಚರಣೆ ಪ್ರಾರಂಭಿಸಲಾಗಿದ್ದು, ಭಾರತದಿಂದ ಹೊರಗೆ ಕಳುಹಿಸಲು ಸಿದ್ಧತೆಗಳನ್ನು ನಡೆಸಿದೆ. ರಾಜ್ಯಾದ್ಯಂತ ನಡೆದ ಬೃಹತ್ ಕಾರ್ಯಾಚರಣೆಯಲ್ಲಿ, ನಕಲಿ ದಾಖಲೆಗಳೊಂದಿಗೆ ಭಾರತದಲ್ಲಿ ವಾಸಿಸುತ್ತಿರುವ 550ಕ್ಕೂ ಹೆಚ್ಚು ಅಕ್ರಮ ವಲಸಿಗರನ್ನು ಅಹಮದಾಬಾದ್

ಪಾಕ್‌ ಪ್ರಜೆಗಳ ಬಳಿಕ ಈಗ ಬಾಂಗ್ಲಾದೇಶದ ಪ್ರಜೆಗಳ ಗಡಿಪಾರು Read More »

ಜೀನಿ ಸಂಸ್ಥೆಯ ಮಾಲಕನ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ದೂರು ದಾಖಲು

ಜೀನಿ ಸಂಸ್ಥೆಯ ಮಾಲೀಕ ದಿಲೀಪ್ ಕುಮಾರ್ ವಿರುದ್ಧ ಲೈಂಗಿಕ ಕಿರುಕುಳವನ್ನು ನೀಡಿದ್ದಾರೆ ಎಂದು ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ದೂರು ನೀಡಿದ ಘಟನೆ ನಡೆದಿದೆ. ಜೀನಿ ಕಂಪೆನಿಯ ಮಾಲೀಕರಾದ ದಿಲೀಪ್ ಕುಮಾರ್ ವಿರುದ್ಧ ಅವರದ್ದೇ ಕಂಪೆನಿಯ ಕೆಲಸ ಮಾಡುತ್ತಿದ್ದ ಮೇಘನಾ ಎಂಬುವವರು ದೂರು ನೀಡಿದ್ದು, ದೂರಿನಲ್ಲಿ ತಿಳಿಸಿದಂತೆ, ಕಳೆದ ಹತ್ತು ತಿಂಗಳ ಹಿಂದೆ ನಾನು ಕೆಲಸಕ್ಕೆ ಸೇರಿದ್ದೆ, ಕಳೆದ 15 ದಿನಗಳಿಂದ ನನ್ನೊಂದಿಗೆ ಅಸಭ್ಯವಾಗಿ ಮಾತನಾಡಿ, ನನ್ನನ್ನು ಕೈ ಹಿಡಿದು ಎಳೆದು ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದ್ದಾರೆ

ಜೀನಿ ಸಂಸ್ಥೆಯ ಮಾಲಕನ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ದೂರು ದಾಖಲು Read More »

ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಯುವಕರು | ಸ್ಥಳಿಯರ ನೆರವಿನಿಂದ ಯುವಕರು ಪೋಲಿಸರ ಕೈವಶ

ಮಂಗಳೂರು : ಅನೇಕ ಕಡೆಗಳಲ್ಲಿ ಗೋ ಹತ್ಯೆ, ಗೋ ಸಾಗಾಟದ ಪ್ರಕರಣಗಳು ಹೆಚ್ಚುತ್ತಲೇ ಇದೆ. ಇದೀಗ ಅಂತಹದ್ದೇ ಗೋ ಸಾಗಾಟ ಮಾಡುತ್ತಿದ್ದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಕೂಳೂರು ಸೇತುವೆಯ ಬಳಿಯಿಂದ ತಣ್ಣೀರು ಬಾವಿಗೆ ಹೋಗುವ ರಸ್ತೆಯಲ್ಲಿ ಅಕ್ರಮ ದನ ಸಾಗಾಟ ಮಾಡಲು  ಪ್ರಯತ್ನಿಸುತ್ತಿದ್ದ ಯುವಕರು ಪೊಲೀಸರ ವಶವಾದ ಘಟನೆ ನಿನ್ನೆ (ಏ.24) ತಡರಾತ್ರಿ ನಡೆದಿದೆ. ಯುವಕರು ಮೂರು ದನಗಳಿಗೆ ಆಹಾರ ನೀಡುತ್ತಾ ಅದನ್ನು ಹಿಡಿದು ವಾಹನದಲ್ಲಿ ತುಂಬಿಸಿ ಸಾಗಿಸುತ್ತಿದ್ದಾಗ ಸಂಶಯಗೊಂಡ ಸ್ಥಳೀಯರು ತಡೆದು ಪ್ರಶ್ನಿಸಿದ್ದಾರೆ. ಬಳಿಕ

ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಯುವಕರು | ಸ್ಥಳಿಯರ ನೆರವಿನಿಂದ ಯುವಕರು ಪೋಲಿಸರ ಕೈವಶ Read More »

ಫೇಸ್‌ಬುಕ್‌ನಲ್ಲಿ ಪಹಲ್ಗಾಮ್‌ ದಾಳಿ ಸಮರ್ಥಿಸಿ ಪೋಸ್ಟ್‌

ಕೊಣಾಜೆಯ ವ್ಯಕ್ತಿಗಾಗಿ ಪೊಲೀಸರ ಶೋಧ ಮಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ಗುಂಡಿನ ದಾಳಿಯನ್ನು ಸಮರ್ಥಿಸಿಕೊಂಡು ಪೋಸ್ಟ್​ ಹಾಕಿದ್ದ ಫೇಸ್‌ಬುಕ್ ಪೇಜ್ ವಿರುದ್ಧ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳ್ಳಾಲದ ಸತೀಶ್ ಕುಮಾರ್ ಎಂಬವರು‌ ನೀಡಿದ ದೂರಿನ ಆಧಾರದ ಮೇಲೆ ಬಿಎನ್​ಎಸ್​ ಸೆಕ್ಷನ್ 192 ಮತ್ತು 353(1)(b) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಫೇಸ್​ಬುಕ್ ಪೇಜ್​ನ ಡಿಪಿ‌ಯಲ್ಲಿರುವ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ನಿಚ್ಚು ಮಂಗಳೂರು ಎಂಬ‌ ಫೇಸ್​ಬುಕ್​ ಪೇಜ್​ನಲ್ಲಿ, 2023ರಲ್ಲಿ ಮಹಾರಾಷ್ಟ್ರದ ಪಾಲ್ಗರ್​ನಲ್ಲಿ ಮೂವರು

ಫೇಸ್‌ಬುಕ್‌ನಲ್ಲಿ ಪಹಲ್ಗಾಮ್‌ ದಾಳಿ ಸಮರ್ಥಿಸಿ ಪೋಸ್ಟ್‌ Read More »

ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಮನೆಯಲ್ಲಿ ಇ.ಡಿ.ಶೋಧ

ಚಿನ್ನ ವಂಚನೆ ಪ್ರಕರಣದಲ್ಲಿ ಶಾಮೀಲಾಗಿರುವ ಅನುಮಾನ ಬೆಂಗಳೂರು: ಮಾಜಿ ಸಚಿವ, ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿ ರಾತ್ರಿಯಿಡೀ ಪರಿಶೀಲನೆ ನಡೆಸಿದೆ. ಬೆಂಗಳೂರಿನ ಡಾಲರ್ಸ್ ಕಾಲೊನಿಯಲ್ಲಿರುವ ವಿನಯ್ ಕುಲಕರ್ಣಿ ನಿವಾಸದ ಮೇಲೆ ದಾಳಿ ಮಾಡಿದ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಚಿನ್ನ ಹಾಗೂ ಕೆಲ ವ್ಯವಹಾರದಲ್ಲಿ ಐಶ್ವರ್ಯಾ ಗೌಡ ಹಾಗೂ ಶಿಲ್ಪಾ ಗೌಡ ಎಂಬುವವರು ವಂಚನೆ ಮಾಡಿದ್ದರು ಎಂಬ ಆರೋಪ ಕೆಲವು ದಿನಗಳ ಹಿಂದೆ ಕೇಳಿ ಬಂದಿತ್ತು. ತನಿಖೆ ವೇಳೆ

ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಮನೆಯಲ್ಲಿ ಇ.ಡಿ.ಶೋಧ Read More »

ಐಪಿಎಲ್‌ ಪಂದ್ಯಗಳ ಮೇಲೆ ಬೆಟ್ಟಿಂಗ್‌ ನಡೆಸುತ್ತಿದ್ದ ಮೂವರು ಯುವಕರು ಸೆರೆ

ಮೊಬೈಲ್‌ ಬೆಟ್ಟಿಂಗ್ ಅಪ್ಲಿಕೇಶನ್ ಮೂಲಕ ಅಕ್ರಮ ದಂಧೆ ಉಡುಪಿ : ಐಪಿಎಲ್ ಪಂದ್ಯಗಳ ಮೇಲೆ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಮೂವರು ವ್ಯಕ್ತಿಗಳನ್ನು ಉಡುಪಿ ಸಿಇಎನ್ (ಸೆನ್‌) ಪೊಲೀಸರು ಬಂಧಿಸಿದ್ದಾರೆ. ಉಡುಪಿಯ ಸಿಇಎನ್ ಪೊಲೀಸ್ ಠಾಣೆಯ ಅಪರಾಧ ನಿರೀಕ್ಷಕ ರಾಮಚಂದ್ರ ನಾಯಕ್ ಉಡುಪಿ ಅಜ್ಜರಕಾಡಿನ ಭುಜಂಗ್ ಪಾರ್ಕ್ ಬಳಿ ದಾಳಿ ನಡೆಸಿ ಕ್ರಿಕೆಟ್ ಬೆಟ್ಟಿಂಗ್ ದಂಧೆಯನ್ನು ಭೇದಿಸಿದ್ದಾರೆ. ಹೈದರಾಬಾದ್‌ನಲ್ಲಿ ನಡೆಯುತ್ತಿರುವ ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಎಚ್) ಮತ್ತು ಮುಂಬೈ ಇಂಡಿಯನ್ಸ್ (ಎಂಐ) ನಡುವಿನ ಐಪಿಎಲ್ ಪಂದ್ಯದ ಮೇಲೆ ಬೆಟ್ಟಿಂಗ್ ಕಟ್ಟಲು

ಐಪಿಎಲ್‌ ಪಂದ್ಯಗಳ ಮೇಲೆ ಬೆಟ್ಟಿಂಗ್‌ ನಡೆಸುತ್ತಿದ್ದ ಮೂವರು ಯುವಕರು ಸೆರೆ Read More »

ಬಸ್‌ನಲ್ಲಿ ಯುವತಿಗೆ ಕಿರುಕುಳ ನೀಡಿದ ನಿರ್ವಾಹಕ ನೌಕರಿಯಿಂದ ವಜಾ

ಮುಡಿಪುವಿನಿಂದ ಮಂಗಳೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದ ಘಟನೆ ಮಂಗಳೂರು : ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಯುವತಿಗೆ ಕಿರುಕುಳ ನೀಡಿದ ನಿರ್ವಾಹಕನನ್ನು ನೌಕರಿಯಿಂದಲೇ ವಜಾ ಮಾಡಲಾಗಿದೆ. ಗುತ್ತಿಗೆ ಆಧಾರದಲ್ಲಿ ಕಂಡಕ್ಟರ್‌ ನೇಮಕಾತಿ ಪಡೆದಿದ್ದ ಆರೋಪಿ ಬಾಗಲಕೋಟೆಯ ಮೂಲದ ಪ್ರದೀಪ್ ಕಾಶಪ್ಪ ನಾಯ್ಕರ್ (35)ನನ್ನು ವಜಾಗೊಳಿಸಲು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚಿಸಿದ್ದಾರೆ. ಸರಕಾರಿ ಬಸ್‌ಗಳಲ್ಲಿ ಪ್ರತಿಯೊಬ್ಬ ಮಹಿಳೆಯೂ ಸುರಕ್ಷಿತವಾಗಿ ಪ್ರಯಾಣಿಸಬೇಕು. ಬಸ್‌ನ ಸಿಬ್ಬಂದಿಯೇ ದುರ್ವರ್ತನೆ ತೋರಿಸಿದರೆ ಅದು ಜನರಿಗೆ ತೀರಾ ಕೆಟ್ಟ ಸಂದೇಶ ನೀಡಿದಂತಾಗುತ್ತದೆ. ಇಂಥ ಕೃತ್ಯವನ್ನು ಸರಕಾರ

ಬಸ್‌ನಲ್ಲಿ ಯುವತಿಗೆ ಕಿರುಕುಳ ನೀಡಿದ ನಿರ್ವಾಹಕ ನೌಕರಿಯಿಂದ ವಜಾ Read More »

error: Content is protected !!
Scroll to Top