ಅಪರಾಧ

ಸೌಜನ್ಯ ಕೊಲೆ ನೈಜ ಆರೋಪಿಗಳ ಪತ್ತೆಗೆ ಹಕ್ಕೊತ್ತಾಯ | ಸವಣೂರು ಯುವಕ ಮಂಡಲ, ಸಮಾನ ಮನಸ್ಕರ ವೇದಿಕೆ ವತಿಯಿಂದ ಸವಣೂರಿನಲ್ಲಿ ಸಾರ್ವಜನಿಕ ಮೌನ ಪ್ರತಿಭಟನೆ

ಪುತ್ತೂರು: ಸವಣೂರು ಯುವ ಮಂಡಲ ಹಾಗೂ ಸಮಾನ ಮನಸ್ಕರ ವೇದಿಕೆ ವತಿಯಿಂದ ಸೌಜನ್ಯ ಕೊಲೆಯ ನೈಜ ಆರೋಪಿಗಳ ಪತ್ತೆಗೆ ಹಕ್ಕೊತ್ತಾಯದ ಕುರಿತು ಸಾರ್ವಜನಿಕ ಮೌನ ಪ್ರತಿಭಟನೆ ಸವಣೂರಿನಲ್ಲಿ ಸೋಮವಾರ ನಡೆಯಿತು. ಸವಣೂರು ಪದ್ಮಾವತಿ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಗಿರಿಶಂಕರ ಸುಲಾಯ ಮೌನ ಮೆರವಣಿಗೆಗೆ ಚಾಲನೆ ನೀಡಿದರು. ರಾಕೇಶ್ ರೈ ಕೆಡೆಂಜಿ ಸಂದರ್ಭೋಚಿತವಾಗಿ ಮಾತನಾಡಿದರು. ಬಳಿಕ ಮೌನ ಮೆರವಣಿಗೆ ಸಾಗಿ ಸವಣೂರು ವೃತ್ತದಲ್ಲಿ ಸಮಾಪನಗೊಂಡು ಬಳಿಕ ಯುವಕ ಮಂಡಲದ ಕಾರ್ಯದರ್ಶಿ ಕೀರ್ತನ್ ಕೋಡಿಂಬೈಲು ಅವರು ಸವಣೂರು ಗ್ರಾಮ […]

ಸೌಜನ್ಯ ಕೊಲೆ ನೈಜ ಆರೋಪಿಗಳ ಪತ್ತೆಗೆ ಹಕ್ಕೊತ್ತಾಯ | ಸವಣೂರು ಯುವಕ ಮಂಡಲ, ಸಮಾನ ಮನಸ್ಕರ ವೇದಿಕೆ ವತಿಯಿಂದ ಸವಣೂರಿನಲ್ಲಿ ಸಾರ್ವಜನಿಕ ಮೌನ ಪ್ರತಿಭಟನೆ Read More »

ಬಹುಮಹಡಿಯಿಂದ ಹಾರಿ ಉದ್ಯಮಿ ಆತ್ಮಹತ್ಯೆ

ಮಂಗಳೂರು: ಮಂಗಳೂರಿನ ಉದ್ಯಮಿಯೊಬ್ಬರು ಬಹುಮಹಡಿ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮಂಗಳೂರಿನ ಬೆಂದೂರುವೆಲ್‍ ನಲ್ಲಿ ಈ ಘಟನೆ ನಡೆದಿದ್ದು, ಮೋಹನ್ ಅಮೀನ್ ಎಂಬವರು ಆತ್ಮಹತ್ಯೆ ಮಾಡಿಕೊಂಡವರು. ಈ ಕುರಿತು ಕದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಹುಮಹಡಿಯಿಂದ ಹಾರಿ ಉದ್ಯಮಿ ಆತ್ಮಹತ್ಯೆ Read More »

ಅಂದರ್-ಬಾಹರ್ ಆಡುತ್ತಿದ್ದ ಅಡ್ಡೆಗೆ ಪೊಲೀಸರಿಂದ ದಾಳಿ | ಮೂವರು ಆರೋಪಿಗಳ ಬಂಧನ

ವಿಟ್ಲ: ಅಂದರ್ ಬಾಹರ್ ಇಸ್ಟಿಟ್ ಅಡ್ಡೆಗೆ ವಿಟ್ಲ ಪೊಲೀಸರು ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿ ನಗದು ಸಹಿತ ಜುಗಾರಿಗೆ ಬಳಸಲಾದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ವೀರಕಂಭ ಗ್ರಾಮದ ಎರ್ಮೆಮಜಲಿನಲ್ಲಿ ಈ ಘಟನೆ ನಡೆದಿದ್ದು, ಸರಕಾರಿ ಜಾಗವೊಂದರಲ್ಲಿ ಅಂದರ್ ಬಾಹರ್ ಆಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿ 15 ಸಾವಿರ ರೂ. ನಗದು, ಆಡಕ್ಕೆ ಬಳಸಲಾದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಐದು ಮಂದಿ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಂದರ್-ಬಾಹರ್ ಆಡುತ್ತಿದ್ದ ಅಡ್ಡೆಗೆ ಪೊಲೀಸರಿಂದ ದಾಳಿ | ಮೂವರು ಆರೋಪಿಗಳ ಬಂಧನ Read More »

ಲಕ್ಷಾಂತರ ಮೌಲ್ಯದ ಅಡಿಕೆ ಕಳವು | ಇಬ್ಬರು ಕಳ್ಳರ ಬಂಧನ | ಸೊತ್ತುಗಳು  ವಶಕ್ಕೆ

ಪುತ್ತೂರು: ಮಾಡನ್ನೂರು ಗ್ರಾಮದ ಅಮ್ಮಿನಡ್ಕ ಎಂಬಲ್ಲಿ ವಿಷ್ಣು ಕಲ್ಲೂರಾಯ ಎಂಬವರ ಮನೆಯಂಗಳದ ಉಗ್ರಾಣದಿಂದ 12 ಕ್ವಿಂಟಾಲ್ ಅಡಿಕೆ ಕಳವು ಪ್ರಕರಣದ ಆರೋಪಿಗಳನ್ನು ಸಂಪ್ಯ ಪೊಲೀಸರು ಎರಡೇ ವಾರದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಾಡನ್ನೂರ್ ಗ್ರಾಮದ ಕಾವು ಅಮ್ಮಿನಡ್ಕ ಉಜ್ರುಗುಳಿ ನಿವಾಸಿ ಕಿರಣ್ ಕುಮಾರ್ (27) ಮತ್ತು ಸಂತೋಷ್ ಯು (30) ಬಂಧಿತ ಆರೋಪಿಗಳು. ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ. ಬಂಧಿತ ಆರೋಪಿಗಳಿಬ್ಬರಿಂದ ಕೃತ್ಯಕ್ಕೆ ಬಳಸಿದ ಮಾರುತಿ ವ್ಯಾನ್ ಸಹಿತ ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಾಡನ್ನೂರ್ ಗ್ರಾಮದ ಅಮ್ಮಿನಡ್ಕ ಎಂಬಲ್ಲಿ

ಲಕ್ಷಾಂತರ ಮೌಲ್ಯದ ಅಡಿಕೆ ಕಳವು | ಇಬ್ಬರು ಕಳ್ಳರ ಬಂಧನ | ಸೊತ್ತುಗಳು  ವಶಕ್ಕೆ Read More »

ಮಣಿಪುರದಲ್ಲಿ ಮತ್ತೆ ಹಿಂಸಾಚಾರ | ಗುಂಡಿನ ದಾಳಿಗೆ ಮೂವರು ಮೃತ್ಯು

ಇಂಫಾಲ್ : ಸ್ವಲ್ಪ ಮಟ್ಟಿಗೆ ಶಾಂತವಾಗಿದ್ದ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಶನಿವಾರ ಮುಂಜಾನೆ ಶಂಕಿತ ವ್ಯಕ್ತಿಗಳು ಬಿಷ್ಣುಪುರದ ಕ್ವಾಕ್ಕಾ ಬಳಿಯ ಉಖಾ ತಂಪಕ್ ಗ್ರಾಮದ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದ ಪರಿಣಾಮ ತಂದೆ-ಮಗ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ದಾಳಿಕೋರರು ಕೇಂದ್ರ ಭದ್ರತಾ ಪಡೆಯ ನಿಯಂತ್ರಣಲ್ಲಿರುವ ಬೆಟ್ಟ-ಕಣಿವೆಗಳ ನಡುವಿನ ಬಫರ್ ವಲಯದಿಂದ ಕದ್ದುಮುಚ್ಚಿ ಬರುತ್ತಿದ್ದಾರೆ ಎನ್ನಲಾಗಿದ್ದು, ಅಲ್ಲಿಯ ಜನರ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಘಟನೆ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮಣಿಪುರದಲ್ಲಿ ಮತ್ತೆ ಹಿಂಸಾಚಾರ | ಗುಂಡಿನ ದಾಳಿಗೆ ಮೂವರು ಮೃತ್ಯು Read More »

ಠೇವಣಿ ಹಣ ನಿಗದಿತ ಅವಧಿಯಲ್ಲಿ ಹಿಂದಿರುಗಿಸದ ಆರೋಪ : ಸಹಕಾರಿ ಸಂಘದ ಅಧ್ಯಕ್ಷ, ಉಪಾಧ್ಯಕ್ಷ, ಮ್ಯಾನೇಜರ್, ನಿರ್ದೇಶಕರ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಠೇವಣಿ ಅವಧಿ ಮುಗಿದರೂ ಠೇವಣಿ ಹಣವನ್ನು  ನಿಗದಿತ ಸಮಯದಲ್ಲಿ ವಾಪಾಸ್ಸು ನೀಡದೆ ವಂಚನೆ ಮಾಡಿರುವ ಕುರಿತು ಸೌಹಾರ್ದ ಸಹಕಾರಿ ಸಂಘದ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರಿನ ಅಕ್ಷಯ್ ಕಾಂಪ್ಲೆಕ್ಸ್ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ಭಾರತ್ ಒನ್ ಸೌಹಾರ್ದ ಸಹಕಾರಿ ಸಂಘ ಮತ್ತು ಈ ಸಂಸ್ಥೆಯ ಅಡಿಯಲ್ಲಿ ಕಾರ್ಯಾಚರಿಸುತ್ತಿದ್ದ ಟಾರ್ಗೆಟ್ 2 ಸಕ್ಸೆಸ್ ಟ್ರೇಡಿಂಗ್ ಸಂಸ್ಥೆಯ ಅಧ್ಯಕ್ಷ ಗಿರೀಶ್ ರೈ, ಉಪಾಧ್ಯಕ್ಷ ಸುದೇಶ್ ರೈ ಅಲೆಕ್ಕಾಡಿ, ಮ್ಯಾನೇಜರ್ ಸಂದೀಪ್ ಹಾಗೂ ಇತರ ನಿರ್ದೇಶಕರ ವಿರುದ್ಧ

ಠೇವಣಿ ಹಣ ನಿಗದಿತ ಅವಧಿಯಲ್ಲಿ ಹಿಂದಿರುಗಿಸದ ಆರೋಪ : ಸಹಕಾರಿ ಸಂಘದ ಅಧ್ಯಕ್ಷ, ಉಪಾಧ್ಯಕ್ಷ, ಮ್ಯಾನೇಜರ್, ನಿರ್ದೇಶಕರ ವಿರುದ್ಧ ಪ್ರಕರಣ ದಾಖಲು Read More »

ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ

ಬೆಂಗಳೂರು: ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕಾಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ. ಮೃತರನ್ನು ಪತಿ ವೀರಾರ್ಜುನ ವಿಜಯ್ (31), ಪತ್ನಿ ಹೇಮಾವತಿ(29) ಹಾಗೂ ಇಬ್ಬರು ಮಕ್ಕಳಾದ ಎರಡೂವರೆ ವರ್ಷದ ಮೋಕ್ಷಾ, ಎಂಟು ತಿಂಗಳ  ಸೃಷ್ಟಿ (8 ತಿಂಗಳು) ಎಂದು ಗುರುತಿಸಲಾಗಿದೆ. ಶೀಗೆಹಳ್ಳಿಯ ಅಪಾರ್ಟ್ಮೆಂಟ್ ಒಂದರಲ್ಲಿ ಈ ಘಟನೆ ಸಂಭವಿಸಿದೆ. ದಂಪತಿ ಆಂಧ್ರ ಮೂಲದವರಾಗಿದ್ದಾರೆ. ಮೃತ ವೀರಾರ್ಜುನ್ ಐಟಿಪಿಎಲ್‍ನಲ್ಲಿರೋ ಯೂರೋ ಪಿಲ್ಸ್ ಅನ್ನೋ ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು

ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ Read More »

ವಿದ್ಯಾರ್ಥಿನಿಯನ್ನು ಆಟೋದಲ್ಲಿ ಡ್ರಾಪ್ ಮಾಡಿದ್ದಕ್ಕೆ ತಂಡದಿಂದ ಹಲ್ಲೆ

ಬೆಳ್ತಂಗಡಿ : ವಿದ್ಯಾರ್ಥಿನಿಯೋರ್ವಳನ್ನು ಅನ್ಯ ಕೋಮಿನ ಯುವಕನೊಬ್ಬ ಆಟೋ ರಿಕ್ಷಾದಲ್ಲಿ ಡ್ರಾಪ್ ಮಾಡದ್ದಕ್ಕೆ ತಂಡವೊಂದು ಆತನಿಗೆ ಹಲ್ಲೆ ನಡೆಸಿ ಬೆದರಿಕೆ ಹಾಕಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಬೆಂಗಳೂರಿನ ನಿವಾಸಿ ಹಿಂದೂ ವಿದ್ಯಾರ್ಥಿನಿಯೊಬ್ಬಳು ಉಜಿರೆ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದು ಕಳೆದ ವಾರ ಕಾಲೇಜ್ ಕೊನೆಗೊಂಡಿದ್ದು. ಬುಧವಾರ ರಾತ್ರಿ ಬೆಂಗಳೂರಿಗೆ ತೆರಳಲು ಪರಿಚಯಸ್ಥ ಮುಸ್ಲಿಂ ಆಟೋ ಚಾಲಕ ಆಟೋ ಮೊಹಮ್ಮದ್ ಆಶೀಕ್ ಗೆ ಕರೆ ಮಾಡಿದ್ದು ಆತ ಬಂದು ಉಜಿರೆಯಿಂದ ಧರ್ಮಸ್ಥಳ ಬಸ್ ನಿಲ್ದಾಣಕ್ಕೆ ಆ.2 ರಂದು ರಾತ್ರಿ

ವಿದ್ಯಾರ್ಥಿನಿಯನ್ನು ಆಟೋದಲ್ಲಿ ಡ್ರಾಪ್ ಮಾಡಿದ್ದಕ್ಕೆ ತಂಡದಿಂದ ಹಲ್ಲೆ Read More »

ಸೌಜನ್ಯ ಕೊಲೆ ಪ್ರಕರಣ | ಸರಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸಿಕೊಂಡುವಂತೆ ಡಾ.ಹೆಗ್ಗಡೆಯವರಿಂದ ಮನವಿ

ಬೆಳ್ತಂಗಡಿ : ಹನ್ನೊಂದು ವರ್ಷಗಳ ಹಿಂದೆ ನಡೆದ ಸೌಜನ್ಯ ಕೊಲೆ ಪ್ರಕರಣ ಸಂಬಂಧಿಸಿ ಸರಕಾರ ಮತ್ತು ತನಿಖಾ ಸಂಸ್ಥೆ ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸಿಕೊಡಬೇಕು ಎಂದು  ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಸರಕಾರವನ್ನು ಒತ್ತಾಯಿಸಿದ್ದಾರೆ. ಪ್ರಸ್ತುತ ಸೌಜನ್ಯ ಸಾವು ಪ್ರಕರಣ ನ್ಯಾಯಾಲಯ, ಸರಕಾರ ಹಾಗೂ ತನಿಖಾ ಸಂಸ್ಥೆಯ ವ್ಯಾಪ್ತಿಯಲ್ಲಿ ಇರುವುದರಿಂದ ಸರಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಿಕೊಡಬೇಕು ಎಂದು ಒತ್ತಾಯಿಸುತ್ತೇನೆ ಹಾಗೂ ಈ ವಿಚಾರವಾಗಿ ಕ್ಷೇತ್ರದ ಬಗ್ಗೆ ಅವಹೇಳನಕಾರಿ, ಸುಳ್ಳು ಹೇಳಿಕೆ,

ಸೌಜನ್ಯ ಕೊಲೆ ಪ್ರಕರಣ | ಸರಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸಿಕೊಂಡುವಂತೆ ಡಾ.ಹೆಗ್ಗಡೆಯವರಿಂದ ಮನವಿ Read More »

ರಸ್ತೆ ಸಮಸ್ಯೆ : ಕ್ರಮ ಕೈಗೊಂಡಿದ್ದರೂ ಮಾಹಿತಿ ನೀಡದ ಕಂದಾಯ ಇಲಾಖೆಯ ಸಾರ್ವಜನಿಕ ಮಾಹಿತಿ ಅಧಿಕಾರಿಗೆ 15 ಸಾವಿರ ರೂ. ದಂಡ

ಪುತ್ತೂರು: ರಸ್ತೆ ಸಮಸ್ಯೆಗೆ ಸಂಬಂಧಿಸಿದ ಕ್ರಮ ಕೈಗೊಂಡಿದ್ದರೂ ಈ ಕುರಿತು ಮಾಹಿತಿ ನೀಡದ ಕಂದಾಯ ಇಲಾಖೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಸುಲೋಚನಾ ಅವರಿಗೆ ರಾಜ್ಯ ಮಾಹಿತಿ ಆಯೋಗ 15 ಸಾವಿರ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ. ರಸ್ತೆ ಸಮಸ್ಯೆಗೆ ಸಂಬಂಧಿಸಿದ ಸೂಕ್ತ ಕ್ರಮ ವಹಿಸಲು ಆಯೋಗದ ಕಾರ್ಯದರ್ಶಿಗಳಿಗೆ ಸೂಚಿಸಿದೆ. ಅಲ್ಲದೇ, ಮೇಲ್ಮನವಿದಾರರ ಪ್ರಕರಣದ ಬಗ್ಗೆ ನಿಯಮಾನುಸಾರ ಕ್ರಮ ಕೈಗೊಂಡು ಇತ್ಯರ್ಥಪಡಿಸಲು ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ ಅವರಿಗೆ ಸೂಚಿಸಿದೆ.ಕಳೆದ 25 ವರ್ಷಗಳಿಂದ ಬಳಸುತ್ತಿದ್ದ ಸರಕಾರಿ

ರಸ್ತೆ ಸಮಸ್ಯೆ : ಕ್ರಮ ಕೈಗೊಂಡಿದ್ದರೂ ಮಾಹಿತಿ ನೀಡದ ಕಂದಾಯ ಇಲಾಖೆಯ ಸಾರ್ವಜನಿಕ ಮಾಹಿತಿ ಅಧಿಕಾರಿಗೆ 15 ಸಾವಿರ ರೂ. ದಂಡ Read More »

error: Content is protected !!
Scroll to Top