ಅಪರಾಧ

ನಗರ ಪ್ರಾಥಮಿಕ ಕೇಂದ್ರದ ಸಿಸಿಟಿವಿ ಕ್ಯಾಮರಾ ಕಳವು

ಪುತ್ತೂರು: ನಗರದ ನೆಲ್ಲಿಕಟ್ಟೆಯಲ್ಲಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಸಿ ಟಿವಿ ಕ್ಯಾಮರಾ ಕಳವಾದ ಘಟನೆ ನಡೆದಿದೆ. ಕೆಲವು ತಿಂಗಳ ಹಿಂದೊಮ್ಮೆ ಇದೇ ಪ್ರಾಥಮಿಕ ಕೇಂದ್ರದ ಸಿವಿಟಿವಿ ಕ್ಯಾಮರಾ ಕಳವಾಗಿದ್ದು, ಇದು ಎರಡನೇ ಬಾರಿ ಕಳವು ಪ್ರಕರಣವಾಗಿದೆ. ಈ ಕುರಿತು ಆರೋಗ್ಯ ಇಲಾಖೆ ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದಾರೆ.

ನಗರ ಪ್ರಾಥಮಿಕ ಕೇಂದ್ರದ ಸಿಸಿಟಿವಿ ಕ್ಯಾಮರಾ ಕಳವು Read More »

ಕೊಂಬೆಟ್ಟು ಉದ್ಯಮಿ ಮನೆಯಿಂದ ಕಳವಿಗೆ ಯತ್ನ

ಪುತ್ತೂರು: ಸ್ವರ್ಣೋದ್ಯಮಿಯೊಬ್ಬರ ಮನೆಗೆ ಕಳ್ಳರು ನುಗ್ಗಿ ಕಳವಿಗೆ ಯತ್ನಿಸಿದ ಘಟನೆ ಜು.31 ಸೋಮವಾರ ರಂದು ಬೆಳಕಿಗೆ ಬಂದಿದೆ. ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ನ ಜಿ.ಎಲ್ ಬಲರಾಮ ಆಚಾರ್ಯ ಅವರ ಪುತ್ರ ಲಕ್ಷ್ಮೀಕಾಂತ್ ಆಚಾರ್ಯ ಅವರ ಕೊಂಬೆಟ್ಟಿನಲ್ಲಿರುವ ಮನೆಗೆ ಕಳ್ಳರು ನುಗ್ಗಿ ಕಳವಿಗೆ ವಿಫಲ ಯತ್ನ ಮಾಡಿದ್ದಾರೆ. ಕಳವಿಗೆ ಸಂಬಂಧಿಸಿ ಬೆರಳಚ್ಚು ತಜ್ಞರು ಮನೆಗೆ ಆಗಮಿಸಿ ಕೆಲವೊಂದು ಸಾಕ್ಷಾದಾರ ಸಂಗ್ರಹ ಮಾಡುತ್ತಿದ್ದಾರೆ.

ಕೊಂಬೆಟ್ಟು ಉದ್ಯಮಿ ಮನೆಯಿಂದ ಕಳವಿಗೆ ಯತ್ನ Read More »

ರಾಜಕೀಯ ಸಮಾವೇಶ ನಡೆಯುತ್ತಿರುವಾಗ ತನ್ನನ್ನು ಸ್ಫೋಟಿಸಿಕೊಂಡ ಆತ್ಮಾಹುತಿ ಬಾಂಬರ್

ಇಸ್ಲಾಮಾಬಾದ್ : ವಾಯುವ್ಯ ಪಾಕಿಸ್ಥಾನದಲ್ಲಿ ಭಾನುವಾರ ಸಂಜೆ ಇಸ್ಲಾಮಿಕ್ ಪಕ್ಷದ ರಾಜಕೀಯ ಸಮಾವೇಶದಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 44 ಜನ ಸಾವನ್ನಪ್ಪಿದ್ದಾರೆ ಮತ್ತು 200ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಜಮಿಯತ್ ಉಲೇಮಾ-ಎ-ಇಸ್ಲಾಂ-ಎಫ್(ಜೆಯುಐ- ಎಫ್) ಪಕ್ಷದ ರಾಜಕೀಯ ಸಮಾವೇಶದಲ್ಲಿ ಈ ಭೀಕರ ಸ್ಫೋಟ ನಡೆದಿದೆ. ಅಫ್ಘಾನಿಸ್ತಾನ ಗಡಿ ಸಮೀಪವಿರುವ ಪತ್ತೂನ್‌ಗ್ವಾ ಪ್ರಾಂತ್ಯದ ಖಾರ್ ಪಟ್ಟಣದಲ್ಲಿ ನಡೆದ ಈ ಸಮಾವೇಶದಲ್ಲಿ 400ಕ್ಕೂ ಹೆಚ್ಚು ಸದಸ್ಯರು ಮತ್ತು ಬೆಂಬಲಿಗರು ಭಾಗವಹಿಸಿದ್ದರು.ಇದೊಂದು ಆತ್ಮಾಹುತಿ ದಾಳಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದುವರೆಗೂ ಯಾವುದೇ

ರಾಜಕೀಯ ಸಮಾವೇಶ ನಡೆಯುತ್ತಿರುವಾಗ ತನ್ನನ್ನು ಸ್ಫೋಟಿಸಿಕೊಂಡ ಆತ್ಮಾಹುತಿ ಬಾಂಬರ್ Read More »

ಸೌಜನ್ಯ ಪ್ರಕರಣ ಮರು ತನಿಖೆ ಕುರಿತು ಮಹತ್ವದ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ವಿಚಾರವಾಗಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. ದೇಶಾದ್ಯಂತ ಸದ್ದು ಮಾಡಿ, ಮತ್ತೆ ನ್ಯಾಯಕ್ಕಾಗಿ ಎಲ್ಲೆಡೆ ಸಂಚಲನ ಮೂಡಿಸುತ್ತಿರುವ ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆಗೆ ಆಗ್ರಹಿಸಿ ಇತ್ತೀಚೆಗೆ ಬೆಳ್ತಂಗಡಿ ಕ್ಷೇತ್ರದ ಶಾಸರು ಹಾಗೂ ಕುಟುಂಬದವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರದ ಮೂಲಕ ಮನವಿ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ಈ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯನವರು ಮರುತನಿಖೆ

ಸೌಜನ್ಯ ಪ್ರಕರಣ ಮರು ತನಿಖೆ ಕುರಿತು ಮಹತ್ವದ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ Read More »

ಬೆಂಗಳೂರಿನಿಂದ ಪ್ರಯಾಣಿಸುತ್ತಿದ್ದಾಗ ಬ್ಯಾಗ್‍ನಿಂದ ಸಾವಿರಾರು ಮೌಲ್ಯದ ವಸ್ತುಗಳ ಕಳವು | ಪುತ್ತೂರು ಠಾಣೆಗೆ ದೂರು

ಪುತ್ತೂರು: ಬೆಂಗಳೂರಿನಿಂದ ಪುತ್ತೂರಿಗೆ ಕೆ.ಎಸ್.ಆರ್.ಟಿ.ಸಿ ಬಸ್‌ನಲ್ಲಿ ಬರುತ್ತಿದ್ದ ಪ್ರಯಾಣಿಕರೊಬ್ಬರ ಬ್ಯಾಗ್‌ನಿಂದ ಸಾವಿರಾರು ರೂ.ಮೌಲ್ಯದ ಸೊತ್ತುಗಳು ಕಳವಾದ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ಪುಣಚ ಗ್ರಾಮದ ಅಜೇರು ನಿವಾಸಿ ದಿವಾಕರ ನಾಯಕ್ ಎಂಬವರ ಪುತ್ರಿ ದೀಪಿಕಾ ಅವರ ಬ್ಯಾಗ್‌ನಿಂದ ಲ್ಯಾಪ್‌ಟಾಪ್, ಸ್ಯಾಮ್‌ಸಂಗ್ ಕಂಪೆನಿಯ ಮೊಬೈಲ್, ಡೇನಿಯಲ್ ಕ್ಲೀನ್ ಕಂಪೆನಿಯ ವಾಚ್ ಸಹಿತ ಒಟ್ಟು ರೂ.53 ಸಾವಿರ ಮೌಲ್ಯದ ಸೊತ್ತು ಕಳವಾಗಿದೆ. ಅವರು ಬೆಂಗಳೂರಿನ ಟಿಸಿಎಸ್ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದು ಜು.26ರಂದು ರಾತ್ರಿ ಬೆಂಗಳೂರಿನಿಂದ ಪುತ್ತೂರಿಗೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸಿದ್ದರು. ಪುತ್ತೂರಿಗೆ

ಬೆಂಗಳೂರಿನಿಂದ ಪ್ರಯಾಣಿಸುತ್ತಿದ್ದಾಗ ಬ್ಯಾಗ್‍ನಿಂದ ಸಾವಿರಾರು ಮೌಲ್ಯದ ವಸ್ತುಗಳ ಕಳವು | ಪುತ್ತೂರು ಠಾಣೆಗೆ ದೂರು Read More »

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ತಪ್ಪೊಪ್ಪಿಕೊಳ್ಳಲು ಆರೋಪಿಗಳಿಗೆ ಕಿರುಕುಳ ನೀಡಿದ ಇಲಾಖೆ | ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಲು ಕೇಂದ್ರ ಯೋಜನಾ ಸಂಚಾಲಕರು, ತಾಂತ್ರಿಕ ತಂಡಕ್ಕೆ ಹೈಕೋರ್ಟ್ ನಿರ್ದೇಶನ

ಪುತ್ತೂರು: ಬೆಳ್ಳಾರೆ: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ವಿಚಾರಣೆ ವೇಳೆ ಆರೋಪಿಗಳಿಗೆ ಕಿರುಕುಳ ನೀಡಿ ತಪ್ಪೋಪ್ಪಿಗೆ ಹೇಳಿಕೆ ದಾಖಲಿಸಿದ್ದಾರೆ ಎಂಬ ಆರೋಪದಿಂದ ಅದಕ್ಕೆ ಸಂಬಂಧಪಟ್ಟ ಮತ್ತು ಕಚೇರಿಯಲ್ಲಿನ ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಲು ತನ್ನ ಕೇಂದ್ರ ಯೋಜನಾ ಸಂಚಾಲಕರು ಮತ್ತು ತಾಂತ್ರಿಕ ತಂಡಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ. ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಜಾಬಿರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ನ ವಿಭಾಗೀಯ ಪೀಠ, ಎಫ್‌ಎಸ್ಎಲ್ ಮತ್ತು ಎನ್ಎಐ ಕಚೇರಿಗಳಲ್ಲಿ 2022ರ ನವೆಂಬರ್ ತಿಂಗಳ ಸಿಸಿಟಿವಿ ದೃಶ್ಯಾವಳಿ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ತಪ್ಪೊಪ್ಪಿಕೊಳ್ಳಲು ಆರೋಪಿಗಳಿಗೆ ಕಿರುಕುಳ ನೀಡಿದ ಇಲಾಖೆ | ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಲು ಕೇಂದ್ರ ಯೋಜನಾ ಸಂಚಾಲಕರು, ತಾಂತ್ರಿಕ ತಂಡಕ್ಕೆ ಹೈಕೋರ್ಟ್ ನಿರ್ದೇಶನ Read More »

ಉಡುಪಿ ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ : ಮೂವರು ವಿದ್ಯಾರ್ಥಿನಿಯರಿಗೆ ಶರತ್ತುಬದ್ಧ ಜಾಮೀನು ಮಂಜೂರು

ಉಡುಪಿ : ದೇಶದಾದ್ಯಂತ ಸುದ್ದಿಯಲ್ಲಿರುವ ಉಡುಪಿಯ ನೇತ್ರಾ ಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದ ಮೂವರು ವಿದ್ಯಾರ್ಥಿನಿಯರಿಗೆ ಉಡುಪಿ ನ್ಯಾಯಾಲಯವು ಇಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ವಿಧ್ಯಾರ್ಥಿನಿಯರು ಮತ್ತೊಂದು ವಿಧ್ಯಾರ್ಥಿನಿ ವಾಶ್ ರೂಂ ನಲ್ಲಿರು ವೇಳೆ ಮೊಬೈಲ್ ನಲ್ಲಿ ವಿಡಿಯೋ ಚಿತ್ರೀಕರಿಸಿದ್ದಾರೆ ಎಂಬ ಆರೋಪ ಇದ್ದು, ಈ ಹಿನ್ನಲೆ ಆರೋಪಿ ವಿದ್ಯಾರ್ಥಿನಿಯರು ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಕಲಂ: 509,204,175,34 ಐ,ಪಿ,ಸಿ,ಮತ್ತು 66(ಇ) ಐಟಿ ಕಾಯಿದೆಯಡಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ

ಉಡುಪಿ ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ : ಮೂವರು ವಿದ್ಯಾರ್ಥಿನಿಯರಿಗೆ ಶರತ್ತುಬದ್ಧ ಜಾಮೀನು ಮಂಜೂರು Read More »

ಮೊಬೈಲ್ ಖರೀದಿಗೆ 8 ತಿಂಗಳ ಮಗುವನ್ನೇ ಮಾರಿದ ದಂಪತಿ | ಪೊಲೀಸರ ಅತಿಥಿಯಾದ ದಂಪತಿ

ಕೋಲ್ಕತ್ತ : ಹೊಸ ಮೊಬೈಲ್ ಫೋನ್ ಖರೀದಿಸಲು ತಮ್ಮ 8 ತಿಂಗಳ ಮಗುವನ್ನೇ ಮಾರಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ನಡೆದಿರುವುದು ಪಶ್ಚಿಮ ಬಂಗಾಳದ 24 ಪರಗಣ ಜಿಲ್ಲೆಯಲ್ಲಿ ಮಗುವನ್ನುಮಾರಿ ಹೊಸ ಫೋನ್ ಖರೀದಿಸಿದ್ದು ಮಾತ್ರವಲ್ಲದೆ ಈ ದಂಪತಿ ಜಾಲಿಟ್ರಿಪ್ ಕೂಡ ಮಾಡಿದ್ದರು. ಅವರ ಕೈಯಲ್ಲಿ ದುಬಾರಿ ಬೆಲೆಯ ಫೋನ್ ಕಂಡು ಸಂಶಯಗೊಂಡ ನೆರೆಹೊರೆಯವರು ಗುಸುಗುಸು ಮಾತನಾಡಲು ತೊಡಗಿದಾಗಲೇ ಖತರ್‌ನಾಕ್ ದಂಪತಿಯ ಗುಟ್ಟು ಬಯಲಾದದ್ದು. ದಂಪತಿಗೆ ಓರ್ವ ಪುತ್ರಿಯೂ ಇದ್ದು, 8 ತಿಂಗಳ ಹಿಂದೆ ಜನಿಸಿದ

ಮೊಬೈಲ್ ಖರೀದಿಗೆ 8 ತಿಂಗಳ ಮಗುವನ್ನೇ ಮಾರಿದ ದಂಪತಿ | ಪೊಲೀಸರ ಅತಿಥಿಯಾದ ದಂಪತಿ Read More »

ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯಲ್ಲಿ ವಿಷಾಹಾರ ಸೇವಿಸಿ 38 ವಿದ್ಯಾರ್ಥಿಗಳು ಅಸ್ವಸ್ಥ

ಬೈಲಹೊಂಗಲ : ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯಲ್ಲಿ ವಿಷಾಹಾರ ಸೇವಿಸಿ 38 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ನಡೆದಿದೆ. ಅಸ್ವಸ್ಥ ವಿದ್ಯಾರ್ಥಿಗಳಿಗೆ ಸಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದ್ದು, ಚೇತರಿಸಿಕೊಂಡು ಮತ್ತೆ ಶಾಲೆಗೆ ತೆರಳಿದ್ದಾರೆ. ಗುರುವಾರ ರಾತ್ರಿ ಮಕ್ಕಳಿಗೆ ಚಿಕನ್, ಪನೀರ್ ನೀಡಲಾಗಿತ್ತು. ಊಟದ ಬಳಿಕ ಮಕ್ಕಳು ಅಸ್ವಸ್ಥರಾಗಿದ್ದರು. ವಿಷಯ ತಿಳಿದ ಉಪವಿಭಾಗಾಧಿಕಾರಿ ಪ್ರಭಾವತಿ ಫಕ್ಕೀರಪೂರ, ಪ್ರಭಾರಿ ತಹಶೀಲ್ದಾರ್ ಜೆ.ಸಿ.ಅಷ್ಟಗಿಮಠ, ಡಿವೈಎಸ್ ರವಿ ನಾಯ್ಕ, ಸಿಪಿಐ ಪಂಚಾಕ್ಷರಿ ಸಾಲಿಮಠ, ಕಂದಾಯ ನಿರೀಕ್ಷಕ

ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯಲ್ಲಿ ವಿಷಾಹಾರ ಸೇವಿಸಿ 38 ವಿದ್ಯಾರ್ಥಿಗಳು ಅಸ್ವಸ್ಥ Read More »

ಇಂಗು ಗುಂಡಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಪುತ್ತೂರು: ಪಡುವನ್ನೂರು ಗ್ರಾಮದಲ್ಲಿ ಇಂಗು ಗುಂಡಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಬುಧವಾರ ಪತ್ತೆಯಾಗಿದೆ. ಪಡುವನ್ನೂರು ಗ್ರಾಮದ ಗುರಿಯಡ್ಕ ನಿವಾಸಿ ಐತ್ತಪ್ಪ ಮೂಲ್ಯ ಎಂಬವರೇ ಮೃತಪಟ್ಟವರು. ಐತ್ತಪ್ಪ ಮೂಲ್ಯ ಸುಮಾರು ಒಂದು ತಿಂಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಚಿಕಿತ್ಸೆ ಫಲಕಾರಿಯಾಗಿರಲಿಲ್ಲ. ರಾತ್ರಿ ಸಮಯದಲ್ಲಿ ಅವರು ಯಾರಿಗೂ ಹೇಳದೆ ಹೊರಗೆ ಹೋಗುತ್ತಿದ್ದರು ಎನ್ನಲಾಗಿದೆ. ಭಾನುವಾರ ರಾತ್ರಿ ಊಟ ಮಾಡಿ ಮಲಗಿದವರು ಸೋಮವಾರ ಬೆಳಗ್ಗೆ ನಾಪತ್ತೆಯಾಗಿದ್ದರು. ಬುಧವಾರ ಮೃತದೇಹ ನೆರೆಮನೆಯ ಶೀನ ಗೌಡ ಮಾಪಳ ಎಂಬವರ ಮನೆ ಬಳಿಯ ಇಂಗು ಗುಂಡಿಯಲ್ಲಿ ಪತ್ತೆಯಾಗಿದೆ.

ಇಂಗು ಗುಂಡಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ Read More »

error: Content is protected !!
Scroll to Top