ಅಪರಾಧ

ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಪುತ್ತೂರು: ಪುತ್ತೂರು ನಗರದ ಪಾಂಗ್ಲಾಯಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹವೊಂದು ಗುರುವಾರ ಪತ್ತೆಯಾಗಿದೆ. ಪಾಂಗ್ಲಾಯಿ ಬಳಿ ಪೊದೆಯೊಂದರಲ್ಲಿ ಈ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮೃತದೇಹವನ್ನು ಆಂಬುಲೆನ್ಸ್ ಮೂಲಕ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತದೇಹ ಯಾರದ್ದೆಂದು, ಮೃತ್ಯುಗೆ ಕಾರಣ ತನಿಖೆಯಿಂದಷ್ಟೇ ತಿಳಿದುಬರಬೇಕಿದೆ

ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ Read More »

ಅನುಮತಿ ಇಲ್ಲದೆ ವಿಜಯೋತ್ಸವ | ಪುತ್ತಿಲ ಪರಿವಾರ ಸಂಘಟನೆ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಪುತ್ತೂರು, ಜುಲೈ 27: ಅನುಮತಿ ಇಲ್ಲದೆ ವಿಜಯೋತ್ಸವ ಮಾಡಿದ್ದಕ್ಕಾಗಿ ಪುತ್ತಿಲ ಪರಿವಾರ ಸಂಘಟನೆ ವಿರುದ್ಧ ಪ್ರಕರಣ ದಾಖಲಾಗಿದೆ. ಆರ್ಯಾಪು ಗ್ರಾ.ಪಂ ಉಪ ಚುನಾವಣೆಯಲ್ಲಿ ಪುತ್ತಿಲ ಪರಿವಾರದ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯರು ಜಯಗಳಿಸಿದ ಹಿನ್ನಲೆಯಲ್ಲಿ ವಿಜಯೋತ್ಸವ ನಡೆಸಲಾಗಿತ್ತು. ಮಿನಿ ವಿಧಾನಸೌಧದಿಂದ ಮುಕ್ರಂಪಾಡಿವರೆಗೆ ಡಿಜೆ ಮೆರವಣಿಗೆ ನಡೆಸಿದ್ದ ಪುತ್ತಿಲ ಪರಿವಾರ ವಿರುದ್ಧ ಪುತ್ತೂರು ನಗರ ಪೋಲೀಸ್ ಠಾಣೆಯಲ್ಲಿ ಶಾಂತಿಭಂಗದ ಪ್ರಕರಣ ದಾಖಲಿಸಲಾಗಿದೆ.

ಅನುಮತಿ ಇಲ್ಲದೆ ವಿಜಯೋತ್ಸವ | ಪುತ್ತಿಲ ಪರಿವಾರ ಸಂಘಟನೆ ವಿರುದ್ಧ ಪ್ರಕರಣ ದಾಖಲು Read More »

ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ ಮಹಿಳೆ ಮೃತ್ಯು | ವೈದ್ಯರ ನಿರ್ಲ್ಯಕ್ಷ ಎಂದು ಮಹಿಳೆಯ ಸಂಬಂಧಿಕರಿಂದ ಆಕ್ರೋಶ

ಮಂಗಳೂರು: ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ ಮಹಿಳೆಯೊಬ್ಬರು ಆಸ್ಪತ್ರೆಯಲ್ಲೇ ಮೃತಪಟ್ಟ ಘಟನೆಯು ವರದಿಯಾಗಿದ್ದು, ಸಾವಿಗೆ ವೈದ್ಯರ ನಿರ್ಲಕ್ಷ್ಯ ಎನ್ನುವ ಗಂಭೀರ ಆರೋಪ ವ್ಯಕ್ತವಾದ ಬೆನ್ನಲ್ಲೇ ಮಹಿಳೆಯ ಸಂಬಂಧಿಕರು ಪ್ರತಿಭಟಿಸಿದಾಗ ಪೊಲೀಸ್ ಬಲ ಪ್ರಯೋಗ ನಡೆದಿದ್ದು, ಸಾವಿಗೆ ಕಾರಣವಾದ ವೈದ್ಯರ ವಿರುದ್ಧ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ನಿವಾಸಿ ಪ್ರದೀಪ್ ಆಚಾರ್ಯ ಎಂಬವರ ಪತ್ನಿ ಶಿಲ್ಪಾ ಆಚಾರ್ಯ ಮೃತ ದುರ್ದೈವಿಯಾಗಿದ್ದು, ಆಸ್ಪತ್ರೆಯ ವೈದ್ಯರಾದ ವೀಣಾ ಭಗವಾನ್, ಡೀನ್ ಅಶೋಕ್ ಹೆಗ್ಡೆ,

ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ ಮಹಿಳೆ ಮೃತ್ಯು | ವೈದ್ಯರ ನಿರ್ಲ್ಯಕ್ಷ ಎಂದು ಮಹಿಳೆಯ ಸಂಬಂಧಿಕರಿಂದ ಆಕ್ರೋಶ Read More »

ಸಾರ್ವಜನಿಕರೊಂದಿಗೆ ಅಸಭ್ಯ ವರ್ತನೆ | ಮಾದಕ ವಸ್ತು ಸೇವನೆ ಶಂಕೆ

ಪುತ್ತೂರು: ಯುವಕನೋರ್ವ ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆಂಬ ಮಾಹಿತಿ ಮೇರೆಗೆ ಸಂಪ್ಯ ಪೊಲೀಸರು ವಿಚಾರಿಸಿದಾಗ ಯುವಕ ಗಾಂಜಾ ಸೇವನೆ ಮಾಡಿ ಈ ರೀತಿ ವರ್ತಿಸಿದ್ದಾನೆ ಎಂದು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇರ್ದೆ ಗ್ರಾಮ ತನ್ನೀರ್ ಮಂಜಿಲ್ ನಿವಾಸಿ ಮೊಹಮ್ಮದ್ ತಪ್ಪಿರ್ (21)ನನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದ ಹಿನ್ನಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗ್ರಾಮಾಂತರ ಠಾಣಾ ಎಸ್.ಐ ಧನಂಜಯ ಬಿ.ಸಿ ಅವರು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಇರ್ದೆ ಗ್ರಾಮದ ದೂಮಡ್ಕ ಗೋಳಿಪದವು ಸಮೀಪ

ಸಾರ್ವಜನಿಕರೊಂದಿಗೆ ಅಸಭ್ಯ ವರ್ತನೆ | ಮಾದಕ ವಸ್ತು ಸೇವನೆ ಶಂಕೆ Read More »

ಜಪಾನ್ ಮೂಲದ ವ್ಯಕ್ತಿ ಪತ್ತೆ

ಪುತ್ತೂರು: ತಾಲೂಕಿನ ಗಡಿಯಾರ ಸಮೀಪ ಜಪಾನ್ ಮೂಲಕ ವ್ಯಕ್ತಿಯೋರ್ವ ಪತ್ತೆಯಾಗಿದ್ದಾನೆ. ಜಪಾನ್‍ನ ಸುಯೋಷಿ ಪತ್ತೆಯಾದ ವ್ಯಕ್ತಿ. ಸ್ಥಳೀಯರು ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.  ಸ್ಥಳಕ್ಕೆ ಆಗಮಿಸಿದ ಪೊಲೀಸರು ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದು, ಬಳಿಕ ವಶಕ್ಕೆ ಪಡೆದಿದ್ದಾರೆ. ಆತ ಇಲ್ಲಿಗೆ ಹೇಗೆ ಬಂದ ಎಂಬ ಕುರಿತು ತನಿಖೆಯ ನಂತರವೇ ಮಾಹಿತಿ ತಿಳಿದು ಬರಬೇಕಿದೆ.

ಜಪಾನ್ ಮೂಲದ ವ್ಯಕ್ತಿ ಪತ್ತೆ Read More »

ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ವಿರುದ್ಧದ ವರದಿಗೆ ತಡೆ | ಸೆಷನ್ಸ್ ನ್ಯಾಯಾಲಯ ಆದೇಶ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ವಿರುದ್ಧ ಯಾವುದೇ ಮಾಧ್ಯಮದ ಮೂಲಕ ಅವಹೇಳನಕಾರಿ ವರದಿ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್‌ ಕೋರ್ಟ್‌ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಲಯ ಆದೇಶಿಸಿದೆ. ಜತೆಗೆ ಈಗಾಗಲೇ ಸಾಮಾಜಿಕ ಮಾಧ್ಯಮಗಳೂ ಸೇರಿದಂತೆ ಇನ್ನಿತರೆ ಮಾಧ್ಯಮಗಳು ಮಾಡಿರುವ ಅವಹೇಳನಕಾರಿ ವರದಿಗಳನ್ನು ಅಳಿಸಿ ಹಾಕುವಂತೆ ಈ ಸಂಬಂಧ ವಾದಿಗಳಾದ ಶೀನಪ್ಪ ಮತ್ತಿತರರು ಸಲ್ಲಿಸಿರುವ ಅಸಲು ದಾವೆಯನ್ನು ಸಿಸಿಎಚ್‌-11ನೇ ನ್ಯಾಯಾಲಯ ವಿಚಾರಣೆ ನಡೆಸಿ ಇದೇ ಜು.19ರಂದು ಈ ಕುರಿತಂತೆ ಆದೇಶಿಸಿದೆ. ಅರ್ಜಿ ವಿಚಾರಣೆ

ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ವಿರುದ್ಧದ ವರದಿಗೆ ತಡೆ | ಸೆಷನ್ಸ್ ನ್ಯಾಯಾಲಯ ಆದೇಶ Read More »

ಲಾರಿಯೊಂದರಿಂದ ಲಕ್ಷಾಂತರ ರೂಪಾಯಿ ಕಳವು | ಲಾರಿ ನಿರ್ವಾಹಕ ಪರಾರಿ

ಪುತ್ತೂರು: ಅಡಿಕೆ ಸಾಗಾಟದ ಲಾರಿಯೊಂದರಿಂದ ಲಕ್ಷಾಂತರ ರೂಪಾಯಿ ನಗದು ಕಳವಾಗಿರುವ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೂಣೆಯಲ್ಲಿರುವ ಅಝರ್ ಟ್ರೇಡಿಂಗ್ ಮತ್ತು ಪುತ್ತೂರಿನಲ್ಲಿರುವ ಅಝರ್ ಟ್ರಾನ್ಸ್ಪೋರ್ಟ್ ಸಂಸ್ಥೆಯ ಮಾಲಕ ಬನ್ನೂರು ನಿವಾಸಿ ಅಝರ್ ಕಂಪೌಂಡ್‌ನ ಕಲಂದರ್ ಇಬ್ರಾಹಿಂ ನೌಷದ್ ಎಂಬವರ ಲಕ್ಷಾಂತರ ರೂಪಾಯಿ ನಗದು ಕಳವಾಗಿದೆ. ಇದಕ್ಕೆ ಸಂಬಂಧಿಸಿ ಲಾರಿ ನಿರ್ವಾಹಕ ನಾಪತ್ತೆಯಾಗಿದ್ದಾನೆ. ಲಾರಿಯ ಮೂಲಕ ಪುತ್ತೂರಿನಿಂದ ಪೂಣೆಗೆ ಅಡಿಕೆ ಸಾಗಾಟ ಮಾಡಿಸಿ ಜು.18ರಂದು ಲಾರಿ ಹಿಂದಿರುಗುವಾಗ ಪೂಣೆಯ ಅಝರ್ ಟ್ರೇಡಿಂಗ್ ಸಂಸ್ಥೆಯ

ಲಾರಿಯೊಂದರಿಂದ ಲಕ್ಷಾಂತರ ರೂಪಾಯಿ ಕಳವು | ಲಾರಿ ನಿರ್ವಾಹಕ ಪರಾರಿ Read More »

ಮಣಿಪುರ ಬೆತ್ತಲೆ ಮೆರವಣಿಗೆ | ಓರ್ವ ಆರೋಪಿ ಮನೆಗೆ ಬೆಂಕಿ ಇಟ್ಟ ಪ್ರತಿಭಟನಾಕಾರರು

ಹೊಸದಿಲ್ಲಿ : ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ವಿವಸ್ತವಾಗಿ ಮೆರವಣಿಗೆ ಮಾಡಿದ ಕರಾಳ ಪ್ರಕರಣದ ವೀಡಿಯೊ ವೈರಲ್ ಆದ ಎರಡು ದಿನಗಳ ನಂತರ, ಪ್ರಮುಖ ಆರೋಪಿ ಹುಯಿರೆಮ್ ಹೆರೋದಾಸ್ ಮೈತೆಯ್ ಎಂಬಾತನ ಮನೆಗೆ ಪ್ರತಿಭಟನಾಕಾರರ ಗುಂಪೊಂದು ಬೆಂಕಿ ಹಚ್ಚಿದೆ. ಹಿಂಸಾಚಾರ ಪೀಡಿತ ಮಣಿಪುರದ ಕಾಂಗ್‌ಪೊಕ್ಸಿ ಜಿಲ್ಲೆಯಲ್ಲಿ ಮೇ 4ರಂದು ಇಬ್ಬರು ಮಹಿಳೆಯರನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡಲಾಗಿತ್ತು. ಈ ವೇಳೆ ಮಹಿಳೆಯರ ಮೇಲೆ ಅತ್ಯಾಚಾರ ಕೂಡ ಮಾಡಲಾಗಿದೆ ಎನ್ನಲಾಗಿದೆ. ಈ ವಿಡಿಯೋ ಈಗ ವೈರಲ್ ಆಗಿ ತೀವ್ರ ಆಕ್ರೋಶಕ್ಕೆ

ಮಣಿಪುರ ಬೆತ್ತಲೆ ಮೆರವಣಿಗೆ | ಓರ್ವ ಆರೋಪಿ ಮನೆಗೆ ಬೆಂಕಿ ಇಟ್ಟ ಪ್ರತಿಭಟನಾಕಾರರು Read More »

ಡಿ.ಕೆ.ಶಿವಕುಮಾರ್ ಆಪ್ತ ಪಾಂಬಾರು ಪ್ರದೀಪ್ ರೈ ಮೇಲೆ ಹಲ್ಲೆ | ಉಂಗುರ, ನಗದು ದೋಚಿದ ದುಷ್ಕರ್ಮಿಗಳು

ಪುತ್ತೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಪ್ತ ಪಾಂಬಾರು ಪ್ರದೀಪ್ ರೈ ಮೇಲೆ ಇಬ್ಬರು ಮಾರಣಾಂತಿಕ ಹಲ್ಲೆಗೈದ ಕುರಿತು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರದೀಪ್ ರೈ ಅವರು ಬೊಳುವಾರಿನಲ್ಲಿ ಆಸ್ಪತ್ರೆಯೊಂದ ಬಳಿ ಕಾರು ಪಾರ್ಕ್ ಮಾಡುತ್ತಿದ್ದ ವೇಳೆ ಡಸ್ಟರ್ ಕಾರಿನಲ್ಲಿ ಬಂದ ತಂಡವೊಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿ ಕೈಯಲ್ಲಿದ್ದ ಉಂಗುರ ಹಾಗೂ 9 ಸಾವಿರ ರೂ. ನಗದು ದೋಚಿ ಪರಾರಿಯಾಗಿದ್ದಾರೆ ಎಂಬ ಮಾಹಿತಿ ಇದೆ. ಪ್ರದೀಪ್ ರೈ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ

ಡಿ.ಕೆ.ಶಿವಕುಮಾರ್ ಆಪ್ತ ಪಾಂಬಾರು ಪ್ರದೀಪ್ ರೈ ಮೇಲೆ ಹಲ್ಲೆ | ಉಂಗುರ, ನಗದು ದೋಚಿದ ದುಷ್ಕರ್ಮಿಗಳು Read More »

ಸೌಜನ್ಯ ಕೊಲೆ ಪ್ರಕರಣ | ಧರ್ಮಸ್ಥಳ ಧರ್ಮಾಧಿಕಾರಿ ಡಾ.ಹೆಗ್ಗಡೆ ವಿರುದ್ಧ ಯಾವುದೇ ಮಾನಹಾನಿಕರ ಹೇಳಿಕೆ ನೀಡದಂತೆ ಸಿವಿಲ್ ಕೋರ್ಟ್ ಆದೇಶ

ಪುತ್ತೂರು: ಸೌಜನ್ಯರವರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಕುರಿತಾಗಿ ಯಾವುದೇ ಮಾನಹಾನಿಕರ ಹೇಳಿಕೆ ನೀಡದಂತೆ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಬೆಳ್ತಂಗಡಿಯ ಪ್ರಜಾಪ್ರಭುತ್ವ ವೇದಿಕೆ ಮುಖ್ಯಸ್ಥ ಮಹೇಶ್ ಶೆಟ್ಟಿ ತಿಮರೋಡಿ ಮತ್ತಿತರರಿಗೆ ಆದೇಶ ನೀಡಿದೆ. ಉಜಿರೆಯ ಎಸ್‌ಡಿಎಂ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದ ಸೌಜನ್ಯರವರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ತನಿಖೆ ನಡೆದು ಇತ್ತೀಚೆಗೆ ಆರೋಪಿ ಕಾರ್ಕಳದ ಸಂತೋಷ್ ರಾವ್

ಸೌಜನ್ಯ ಕೊಲೆ ಪ್ರಕರಣ | ಧರ್ಮಸ್ಥಳ ಧರ್ಮಾಧಿಕಾರಿ ಡಾ.ಹೆಗ್ಗಡೆ ವಿರುದ್ಧ ಯಾವುದೇ ಮಾನಹಾನಿಕರ ಹೇಳಿಕೆ ನೀಡದಂತೆ ಸಿವಿಲ್ ಕೋರ್ಟ್ ಆದೇಶ Read More »

error: Content is protected !!
Scroll to Top