ಅಪರಾಧ

ಗಡಿ ನಿಯಂತ್ರಣ ರೇಖೆ ಮೂಲಕ ಒಳ ನುಸುಳಲು ಯತ್ನ | ಇಬ್ಬರು ಭಯೋತ್ಪಾದಕರ ಹತ್ಯೆ

ಕಾಶ್ಮೀರ: ಜಮ್ಮು-ಕಾಶ್ಮೀರದ ಕುಪ್ವಾರದ ಮಚ್ಚಲ್ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಮೂಲಕ ಒಳನುಸಲು ಪ್ರಯತ್ನಿಸಿದ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಇಂದು ಮುಂಜಾನೆ ಹತ್ಯೆ ಮಾಡಿದೆ. ಭಾರತೀಯ ಸೇನೆ, ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾರ್ಯಚರಣೆ ಸಮಯದಲ್ಲಿ ಭದ್ರತಾ ಪಡೆಗಳು ನಾಲ್ಕು ಎಕೆ ರೈಫಲ್‌ಗಳು, ಆರು ಹ್ಯಾಂಡ್ ಗ್ರೆನೇಡ್‌ಗಳು ಮತ್ತು ಇತರ ಯುದ್ಧದಂತಹ ಶಸ್ತ್ರಾಸ್ತ್ರ ಮತ್ತು […]

ಗಡಿ ನಿಯಂತ್ರಣ ರೇಖೆ ಮೂಲಕ ಒಳ ನುಸುಳಲು ಯತ್ನ | ಇಬ್ಬರು ಭಯೋತ್ಪಾದಕರ ಹತ್ಯೆ Read More »

ಅಪ್ರಾಪ್ತ ಯುವತಿಯರಿಗೆ ಕಿರುಕುಳ | ನಗರ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು

ಪುತ್ತೂರು : ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿದಂತೆ ಪುತ್ತೂರು ನಗರ ಠಾಣೆಯಲ್ಲಿ ವ್ಯಕ್ತಿಯೋರ್ವರ ಮೇಲೆ ಫೋಕ್ಲೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮಂಗಳವಾರ ಬೆಳಿಗ್ಗೆ ಅಪ್ರಾಪ್ತ ಪ್ರಾಯದ ಇಬ್ಬರು ಬಾಲಕಿಯರು ಮನೆಯಿಂದ ಪುತ್ತೂರಿನ ಕಾಲೇಜಿಗೆ ಬರುತ್ತಿರುವಾಗ ದಾರಿಯಲ್ಲಿ ಅಪರಿಚಿತ ವ್ಯಕ್ತಿಯೋರ್ವ ಸದರಿ ಬಾಲಕಿಯರೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದು, ಬಾಲಕಿಯರು ಆತನಿಂದ ತಪ್ಪಿಸಿಕೊಂಡು ಕಾಲೇಜಿಗೆ ಬಂದಿದ್ದಾರೆ. ಬಳಿಕ ಕಾಲೇಜಿನ ಉಪನ್ಯಾಸಕಿಗೆ ತಿಳಿಸಿದ್ದಾರೆ. ಉಪನ್ಯಾಸಕಿಯವರು ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್

ಅಪ್ರಾಪ್ತ ಯುವತಿಯರಿಗೆ ಕಿರುಕುಳ | ನಗರ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು Read More »

ವರದಿಗಾರ ನಿಶಾಂತ್ ಬಿಲ್ಲಂಪದವು ಮೇಲೆ ದೌರ್ಜನ್ಯ | ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್ ಠಾಣಾಧಿಕಾರಿಗಳಿಗೆ ಮನವಿ

ಪುತ್ತೂರು: ಬಪ್ಪಳಿಗೆಯ ಗುರುಂಪುನಾರು ಎಂಬಲ್ಲಿ ವಿಜಯವಾಣಿ ಪತ್ರಿಕೆ ವರದಿಗಾರ ನಿಶಾಂತ್ ಬಿಲ್ಲಂಪದವು ಅವರ ಮೊಬೈಲ್ ಹುಡಿ ಮಾಡಿ ದೌರ್ಜನ್ಯಗೈದ ಘಟನೆಗೆ ಸಂಬಂಧಿಸಿ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಪುತ್ತೂರು ತಾಲೂಕು ಘಟಕದ ವತಿಯಿಂದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಮನವಿ ಸಲ್ಲಿಸಲಾಯಿತು. ಘಟನೆ ಬಪ್ಪಳಿಗೆಯ ಗುಂಪಕಲ್ಲು ಎಂಬಲ್ಲಿ ನಡೆದಿದ್ದು, ನಿಶಾಂತ್ ಅವರು ಅಪಾಯಕಾರಿ ಮರಗಳನ್ನು ಮಾನದಂಡದ ಪ್ರಕಾರ ಅಗತ್ಯ ಸುರಕ್ಷತಾ ಸಾಧನಗಳನ್ನು ಬಳಸಿರಲಿಲ್ಲ. ಅಪಾಯಕ್ಕೆ ಆಹ್ವಾನಿಸುವ ರೀತಿಯಲ್ಲಿ

ವರದಿಗಾರ ನಿಶಾಂತ್ ಬಿಲ್ಲಂಪದವು ಮೇಲೆ ದೌರ್ಜನ್ಯ | ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್ ಠಾಣಾಧಿಕಾರಿಗಳಿಗೆ ಮನವಿ Read More »

ಚಾರ್ಮಾಡಿ ಅಕ್ರಮ ಮರಳು ಸಾಗಾಟ ಪ್ರಕರಣ | ಲಾರಿ ವಶಕ್ಕೆ

ಬೆಳ್ತಂಗಡಿ: ಅಕ್ರಮ ಮರಳು ಸಾಗಾಟ ಪ್ರಕರಣವನ್ನು ಧರ್ಮಸ್ಥಳ ಪೊಲೀಸರು ಚಾರ್ಮಾಡಿಯಲ್ಲಿ ಪತ್ತೆಹಚ್ಚಿ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಧರ್ಮಸ್ಥಳ ಎಸ್.ಐ. ಅನಿಲ್ ಕುಮಾರ್ ನೇತೃತ್ವದ ತಂಡ ವಾಹನ ಚಾರ್ಮಾಡಿಯಲ್ಲಿ ತಪಾಸಣೆ ನಡೆಸಿದಾಗ ಈ ಅಕ್ರಮ ಮರಳು ಸಾಗಾಟ ಪತ್ತೆಯಾಗಿದೆ. ಲಾರಿ ಚಾಲಕ ಅನ್ವರ್ ಎಂಬಾತನನ್ನು ಈ ಕುರಿತು ವಿಚಾರಿಸಿದಾಗ ಆತನ ಬಳಿ ಯಾವುದೇ ದಾಖಲೆಗಳು ಇಲ್ಲದಿರುವುದು ಕಂಡು ಬಂದಿದೆ. ಸರಕಾರಕ್ಕೆ ಯಾವುದೇ ರಾಜಸ್ವವನ್ನು ಪಾವತಿಸದೆ ಮರಳನ್ನು ಸಾಗಾಟ ಮಾಡುತ್ತಿರುವುದು ಕಂಡು ಬಂದ ಹಿನ್ನಲೆಯಲ್ಲಿ ಲಾರಿಯನ್ನು ವಶಕ್ಕೆ ಪಡೆತಲಾಯಿತು. ಮುಂದಿನ ಕ್ರಮಕ್ಕಾಗಿ

ಚಾರ್ಮಾಡಿ ಅಕ್ರಮ ಮರಳು ಸಾಗಾಟ ಪ್ರಕರಣ | ಲಾರಿ ವಶಕ್ಕೆ Read More »

ಚಿಕ್ಕೋಡಿ ಜೈನಮುನಿ ಹತ್ಯೆ | ಪುತ್ತಿಲ ಪರಿವಾರದಿಂದ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕುವಂತೆ ರಾಜ್ಯಪಾಲರಿಗೆ ಮನವಿ

ಪುತ್ತೂರು: ಚಿಕ್ಕೋಡಿ ಜೈನ ಮುನಿವರ್ಯರ ಭೀಕರ ಹತ್ಯೆ ಮಾಡಿದ ಆರೋಪಿಗಳ ಮನೆ ಸಹಿತ ಸಂಪೂರ್ಣ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕಾಗಿ ಪುತ್ತಿಲ ಪರಿವಾರದ ವತಿಯಿಂದ ಸಹಾಯಕ ಕಮಿಷನರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಪ್ರಕರಣಕ್ಕೆ ಸಂಬಂಧಿತ ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಮುಂದೆ ಬಿರಿಯಾನಿ ಊಟ ನೀಡುವಂತಹ ಸ್ಥಿತಿ ನಿರ್ಮಾಣವಾಗಬಾರದು. ಧಾರ್ಮಿಕ ಪರಂಪರೆಯನ್ನು ಉಳಿಸುವಲ್ಲಿಯೂ ಕಾರ್ಯ ಸರ್ಕಾರ ಕಟಿ ಬದ್ದವಾಗಿರಬೇಕು. ಮನವಿ ಸಲ್ಲಿಸುವ ಸಂದರ್ಭ ಪುತ್ತಿಲ ಪರಿವಾರದ ಪ್ರಮುಖರಾದ ಉಮೇಶ್ ಗೌಡ , ಪ್ರವೀಣ್ ಭಂಡಾರಿ

ಚಿಕ್ಕೋಡಿ ಜೈನಮುನಿ ಹತ್ಯೆ | ಪುತ್ತಿಲ ಪರಿವಾರದಿಂದ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕುವಂತೆ ರಾಜ್ಯಪಾಲರಿಗೆ ಮನವಿ Read More »

ಶರಣ್ ಪಂಪ್ವೆಲ್ ವಿರುದ್ಧ ಮಾನಹಾನಿಕರ ಪೋಸ್ಟ್| ಕ್ರಮ ಕೈಗೊಳ್ಳುವಂತೆ ಬಜರಂಗದಳ, ವಿಹಿಂಪ ವತಿಯಿಂದ ಠಾಣಾಧಿಕಾರಿಗಲಿಗೆ ಮನವಿ

ಪುತ್ತೂರು: ವಿಹಿಂಪ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ವೆಲ್ ಅವರ ವಿರುದ್ಧ ಮಾನಹಾನಿಕರ ಪೋಸ್ಟ್ ಹಾಕಿದವರ ಮೇಲೆ ಕ್ರಮ ಕೈಗೊಳ್ಳುವಂತೆ ಪುತ್ತೂರು ಗ್ರಾಮಾಂತರ ಠಾಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ವಿಶ್ವ ಹಿಂದೂ ಪರಿಷತ್, ಬಜರಂಗದಳ ಪುತ್ತೂರು ಗ್ರಾಮಾಂತರ ಪ್ರಖಂಡದ ವತಿಯಿಂದ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಿಹಿಂಪ ಪ್ರಖಂಡ ಕಾರ್ಯದರ್ಶಿ ರವಿಕುಮಾರ್ ಕೈತಡ್ಕ, ಬಜರಂಗದಳ ಸಂಯೋಜಕ ವಿಶಾಖ್ ಸಸಿಹಿತ್ಲು, ಚಂದ್ರನಾಥ ಮುಕ್ವೆ, ಧನರಾಜ್ ಕೊಡಿಪ್ಪಾಡಿ ಉಪಸ್ಥಿತರಿದ್ದರು.

ಶರಣ್ ಪಂಪ್ವೆಲ್ ವಿರುದ್ಧ ಮಾನಹಾನಿಕರ ಪೋಸ್ಟ್| ಕ್ರಮ ಕೈಗೊಳ್ಳುವಂತೆ ಬಜರಂಗದಳ, ವಿಹಿಂಪ ವತಿಯಿಂದ ಠಾಣಾಧಿಕಾರಿಗಲಿಗೆ ಮನವಿ Read More »

ವೀಡಿಯೋ ಚಿತ್ರೀಕರಣ ಮಾಡುತ್ತಿದ್ದ ವೇಳೆ ಪತ್ರಕರ್ತರೊಬ್ಬರ ಮೊಬೈಲ್ ಎಳೆದು ದೌರ್ಜನ್ಯ | ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದಿಂದ ಖಂಡನೆ

ಪುತ್ತೂರು: ಬಪ್ಪಳಿಗೆಯಲ್ಲಿ ಸುದ್ದಿಗಾಗಿ ವಿಡಿಯೋ ಶೂಟಿಂಗ್ ಮಾಡುತ್ತಿದ್ದ  ವಿಜಯವಾಣಿ ವರದಿಗಾರ, ನಮ್ಮ ಸಂಘದ ಸದಸ್ಯರೂ ಆಗಿರುವ  ನಿಶಾಂತ್ ಬಿಲ್ಲಂಪದವು ಅವರ ಮೊಬೈಲ್  ಕಸಿದು ನೆಲಕ್ಕೆ ಬಡಿದು  ದೌರ್ಜನ್ಯ ನಡೆಸಿರುವ ಗುತ್ತಿಗೆದಾರರ ನಡೆಯನ್ನು ಕಾರ್ಯನಿರತ ಪತ್ರಕರ್ತರ ಸಂಘ ಪುತ್ತೂರು  ತಾಲೂಕು ಘಟಕ ಖಂಡಿಸುತ್ತದೆ. ಆರೋಪಿ ವಿರುದ್ದ ತಕ್ಷಣ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಪೊಲೀಸ್ ಇಲಾಖೆಯನ್ನು ಒತ್ತಾಯಿಸುತ್ತಿದೆ. ಶನಿವಾರ ಬಲ್ನಾಡಿನ ಗುಂಪಕಲ್ಲು ಎಂಬಲ್ಲಿ ಸಂಜೆ ಅಪಾಯಕಾರಿ ಮರದ ಗೆಲ್ಲುಗಳನ್ನು ಕಡಿಯುತ್ತಿದ್ದ ಸಂದರ್ಭ ಮೆಸ್ಕಾಂ ಸಿಬ್ಬಂದಿಗಳ ವೀಡಿಯೋ ಚಿತ್ರಿಕರಿಸುತ್ತಿದ್ದ ಪತ್ರಕರ್ತ

ವೀಡಿಯೋ ಚಿತ್ರೀಕರಣ ಮಾಡುತ್ತಿದ್ದ ವೇಳೆ ಪತ್ರಕರ್ತರೊಬ್ಬರ ಮೊಬೈಲ್ ಎಳೆದು ದೌರ್ಜನ್ಯ | ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದಿಂದ ಖಂಡನೆ Read More »

ಪಿಕಪ್ ವಾಹನದಲ್ಲಿ ಹಿಂಸಾತ್ಮಕ ರೀತಿಯಲ್ಲಿ ದನ-ಕರುಗಳ ಸಾಗಾಟ | ನಾಲ್ವರು ಆರೋಪಿಗಳ ಬಂಧನ

ಪುತ್ತೂರು: ಹಿಂಸಾತ್ಮಕರ ರೀತಿಯಲ್ಲಿ ದಕನಕರುಗಳನ್ನು ಪತ್ತೆಹಚ್ಚಿದ ಧರ್ಮಸ್ಥಳ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಸಕ್ರಿಯ ಬಿಜೆಪಿ ಕಾರ್ಯಕರ್ತರೆನ್ನಲಾದ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಮೋರ್ತಾಜೆ ನಿವಾಸಿ ಪ್ರಮೋದ್ ಸಾಲ್ಯಾನ್, ಒಳಗದ್ದೆ ನಿವಾಸಿ ಪುಷ್ಪರಾಜ್ ಹಾಗೂ ಹಾಸನ ಜಿಲ್ಲೆಯ ಕಸಬಾ ಹೋಬಳಿ ಅರಕಲಗೂಡು ನಿವಾಸಿ ಚೆನ್ನಕೇಶವ ಮತ್ತು ಹೊಳೆನರಸೀಪುರ ನಿವಾಸಿ ಸಂದೀಪ್ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಸಾಗಾಟಕ್ಕೆ ಬಳಸಿದ ಮೂರು ವಾಹನಗಳು, 6 ದನ ಹಾಗೂ 2 ಗಂಡು ಕರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಧರ್ಮಸ್ಥಳ ಠಾಣೆಯ ಎಸ್‍.ಐ. ಅನಿಲ್ ಕುಮಾರ್

ಪಿಕಪ್ ವಾಹನದಲ್ಲಿ ಹಿಂಸಾತ್ಮಕ ರೀತಿಯಲ್ಲಿ ದನ-ಕರುಗಳ ಸಾಗಾಟ | ನಾಲ್ವರು ಆರೋಪಿಗಳ ಬಂಧನ Read More »

ಹಾಡುಹಗಲೇ ಜೋಡಿ ಕೊಲೆ : ಮಾಜಿ ಉದ್ಯೋಗಿಯಿಂದ ಕೃತ್ಯ

ಬೆಂಗಳೂರು: ಏರೋನಿಕ್ಸ್ ಇಂಟರ್ನೆಟ್ ಎಂಬ ಕಂಪನಿಯ ಸಿಇಒ ಹಾಗೂ ಎಂಡಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಆಘಾತಕಾರಿ ಘಟನೆ ಬೆಂಗಳೂರು ನಗರದ ಅಮೃತಹಳ್ಳಿಯಲ್ಲಿ ಹಾಡುಹಗಲೇ ನಡೆದಿದೆ. ಏರೋನಿಕ್ಸ್ ಇಂಟರ್ನೆಟ್ ಕಂಪನಿಯ ಸಿಇಒ ವಿನುಕುಮಾರ್ ಮತ್ತು ವ್ಯವಸ್ಥಾಪಕ ನಿರ್ದೇಶಕ ಫಣೀಂದ್ರ ಸುಬ್ರಹ್ಮಣ್ಯ ಹತ್ಯೆಯಾದರು. ಸಂಜೆ 4 ಗಂಟೆಯ ಸುಮಾರಿಗೆ ಕಂಪನಿಯ ಮಾಜಿ ಉದ್ಯೋಗಿ ಫೆಲಿಕ್ಸ್ ಎಂಬಾತ ಈ ಕೃತ್ಯ ಎಸಗಿದ್ದು, ಸ್ಥಳಕ್ಕೆ ಅಮೃತಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಏರೋನಿಕ್ಸ್ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಫೆಲಿಕ್ಸ್ ಕಂಪನಿಯಿಂದ

ಹಾಡುಹಗಲೇ ಜೋಡಿ ಕೊಲೆ : ಮಾಜಿ ಉದ್ಯೋಗಿಯಿಂದ ಕೃತ್ಯ Read More »

ನಕಲಿ ದಾಖಲೆ ಸೃಷ್ಟಿಸಿ ಕಾರ್ಯಾಚರಿಸುತ್ತಿದ್ದ ಕಚೇರಿಯೊಂದಕ್ಕೆ ಅಧಿಕಾರಿಗಳಿಂದ ದಾಳಿ | ಗ್ರಾಪಂ, ನಗರಸಭೆ ಇಲಾಖೆ ಮೊಹರು ಒಳಗೊಂಡ ಸೀಲ್ ವಶಕ್ಕೆ

ಪುತ್ತೂರು: ಭೂದಾಖಲೆ ಸಹಿತ ಹಲವು ವಿಷಯಗಳಿಗೆ ಸಂಬಂಧಿಸಿ ನಿರಾಪೇಕ್ಷಣಾ ಪತ್ರದ ನಕಲಿ ದಾಖಲೆ ಸೃಷ್ಟಿಸಿ ಮಾಡಿರುವ ಆರೋಪಕ್ಕೆ ಸಂಬಂಧಿಸಿ ಪುತ್ತೂರಿನ ಪಡೀಲ್‍ನಲ್ಲಿರುವ ಕಚೇರಿಯೊಂದಕ್ಕೆ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ. ವಿಶ್ವನಾಥ್ ಎಂಬವರಿಗೆ ಸೇರಿದ ಇಲೆಕ್ಟ್ರಿಕಲ್ಸ್ ಮತ್ತು ಪ್ಲಂಬಿಗ್ ವರ್ಕ್‍ ಕಚೇರಿಗೆ ದಾಳಿ ನಡೆಸಿದ್ದು, ಪುತ್ತೂರು ಹಾಗೂ ಕಡಬದ ಎಲ್ಲಾ ಗ್ರಾಪಂ ಮೊಹರು, ಬಂಟ್ವಾಳ ತಾಲೂಕಿನ ಮೂರು ಗ್ರಾಪಂಗಳ ಪಿಡಿಒ ಸೀಲ್, ನಗರಸಭೆ ಅಧಿಕಾರಿಗಳ ಮೊಹರು ಎಲ್ಲವನ್ನೂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ತಾಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ನೇತೃತ್ವದ ತಂಡ

ನಕಲಿ ದಾಖಲೆ ಸೃಷ್ಟಿಸಿ ಕಾರ್ಯಾಚರಿಸುತ್ತಿದ್ದ ಕಚೇರಿಯೊಂದಕ್ಕೆ ಅಧಿಕಾರಿಗಳಿಂದ ದಾಳಿ | ಗ್ರಾಪಂ, ನಗರಸಭೆ ಇಲಾಖೆ ಮೊಹರು ಒಳಗೊಂಡ ಸೀಲ್ ವಶಕ್ಕೆ Read More »

error: Content is protected !!
Scroll to Top