ಅಪರಾಧ

ರಾಡ್‍ಗಳಿಂದ ಹೊಡೆದಾಡಿಕೊಂಡ ಬಸ್‍ ಸಿಬ್ಬಂದಿಯರು | ಇಬ್ಬರು ಅರೆಸ್ಟ್‍

ಮಣಿಪಾಲ: ಮಣಿಪಾಲದಲ್ಲಿ ಎರಡು ಬಸ್ ಸಿಬ್ಬಂದಿಗಳು ಉಕ್ಕಿನ ರಾಡ್‌ಗಳಿಂದ ಹೊಡೆದಾಡಿಕೊಂಡ ಘಟನೆ ನಡೆದಿದೆ. ರಾಡ್‍ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಜಗಳವಾಡಿದ ಇಬ್ಬರು ಬಸ್‍  ಸಿಬ್ಬಂದಿಯನ್ನು ಬಂಧಿಸಲಾಗಿದೆ. ಬುಧವಾರ ಸಂಜೆ ಮಣಿಪಾಲ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಬಸ್  ಸಿಬ್ಬಂದಿ ಬೀದಿ ಜಗಳದಲ್ಲಿ ತೊಡಗಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗಿದೆ. ವಾಗ್ವಾದದಲ್ಲಿ ಬಸ್ ಕಂಡಕ್ಷರ್‌ಗಳಾದ ಅಲ್ಪಾಜ್ ಮತ್ತು ವಿಜಯಕುಮಾ‌ರ್ ಅವರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಎರಡೂ ಬಸ್‌ಗಳನ್ನು ಮಣಿಪಾಲ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಣಿಪಾಲ […]

ರಾಡ್‍ಗಳಿಂದ ಹೊಡೆದಾಡಿಕೊಂಡ ಬಸ್‍ ಸಿಬ್ಬಂದಿಯರು | ಇಬ್ಬರು ಅರೆಸ್ಟ್‍ Read More »

ಕಾಡಿನ ಮಧ್ಯೆ ಪತ್ತೆಯಾದ ಹೆಣ್ಣು ಮಗುವಿನ ಪ್ರಕರಣ | ಪೋಷಕರನ್ನು ಪತ್ತೆ ಹಚ್ಚಿದ  ಧರ್ಮಸ್ಥಳ ಪೋಲಿಸರು 

ಉಜಿರೆ :  ಸುಮಾರು ದಿನಗಳ ಹಿಂದೆ  ಬೆಳಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಡೋಳುಕೆರೆ ಕಾಡಿನ ಮಧ್ಯೆ ಪತ್ತೆಯಾದ ಹೆಣ್ಣು ಮಗುವಿನ ಪೋಷಕರನ್ನು ಧರ್ಮಸ್ಥಳ ಪೊಲೀಸರು ಪತ್ತೆ ಮಾಡಿದ್ದಾರೆ. ಕಾಡಿನಲ್ಲಿ ಮಗು ಸಿಕ್ಕಿದ ತಕ್ಷಣ ಗ್ರಾಮದ ಜನರು ಈ ಕುರಿತು ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಗ್ರಾಮಸ್ಥರ  ಸಹಕಾರದೊಂದಿಗೆ ಮಗುವಿನ ತಂದೆ ತಾಯಿಯ ವಿವರಗಳು ಲಭಿಸಿದೆ. ಧರ್ಮಸ್ಥಳ ಪೊಲೀಸ್ ಠಾಣಾ ಸಬ್ ಇನ್ಸೆಕ್ಟರ್ ಸಮರ್ಥ ಆರ್. ಗಾಣಿಗೇರಾ ನೇತೃತ್ವದ ತಂಡವು ಮಗುವಿನ ತಂದೆ ರಂಜಿತ್ ಗೌಡನನ್ನು ಎ.2 ರಂದು

ಕಾಡಿನ ಮಧ್ಯೆ ಪತ್ತೆಯಾದ ಹೆಣ್ಣು ಮಗುವಿನ ಪ್ರಕರಣ | ಪೋಷಕರನ್ನು ಪತ್ತೆ ಹಚ್ಚಿದ  ಧರ್ಮಸ್ಥಳ ಪೋಲಿಸರು  Read More »

ಮಡಿಕೇರಿ : ಕೊಲೆಯಾಗಿದ್ದ ಮಹಿಳೆ ೫ ವರ್ಷದ ಬಳಿಕ ಹೋಟೆಲಿನಲ್ಲಿ ಗಂಡನ ಕೈಗೆ ಸಿಕ್ಕಿಬಿದ್ದಳು!

ಪತ್ನಿಯನ್ನು ಸಾಯಿಸಿದ ಆರೋಪದಲ್ಲಿ ಜೈಲಿಗೆ ಹೋಗಿ ಬಂದಿದ್ದ ಗಂಡನಿಗೆ ಶಾಕ್ ಮಡಿಕೇರಿ : ಐದು ವರ್ಷದ ಹಿಂದೆ ಕೊಲೆಯಾಗಿದ್ದಾಳೆ ಎಂದು ಭಾವಿಸಲಾಗಿದ್ದ ಹೆಂಡತಿ ಹೋಟೆಲೊಂದರಲ್ಲಿ ಪ್ರಿಯಕರನ ಜೊತೆ ಗಂಡನ ಕೈಗೆ ಸಿಕ್ಕಿಬಿದ್ದ ಸಿನಿಮಾ ಮಾದರಿ ಘಟನೆಯೊಂದು ಮಡಿಕೇರಿಯಲ್ಲಿ ಸಂಭವಿಸಿದೆ. ಕುಶಾಲನಗರ ತಾಲೂಕಿನ ಬಸವನಹಳ್ಳಿ ಗ್ರಾಮದಲ್ಲಿ ಐದು ವರ್ಷಗಳ ಹಿಂದೆ ನಡೆದಿದೆ ಎನ್ನಲಾಗಿದ್ದ ಈ ಕೊಲೆ ಪ್ರಕರಣ ಸಸ್ಪೆನ್ಸ್​ ಥ್ರಿಲ್ಲರ್ ಸಿನಿಮಾದಂತೆ ಅನಾವರಣಗೊಂಡಿದೆ. ತಾನು ಮಾಡದ ಕೊಲೆಗಾಗಿ ಗಂಡ ಎರಡು ವರ್ಷ ಜೈಲು ಶಿಕ್ಷೆಯನ್ನು ಅನುಭವಿಸಿದ್ದರು. ಪೊಲೀಸರು ಮಲ್ಲಿಗೆ

ಮಡಿಕೇರಿ : ಕೊಲೆಯಾಗಿದ್ದ ಮಹಿಳೆ ೫ ವರ್ಷದ ಬಳಿಕ ಹೋಟೆಲಿನಲ್ಲಿ ಗಂಡನ ಕೈಗೆ ಸಿಕ್ಕಿಬಿದ್ದಳು! Read More »

ಅಣ್ಣನ ಜೊತೆ ಬೈಕ್‌ನಲ್ಲಿ ಹೋಗುತ್ತಿದ್ದ ಯುವತಿಯನ್ನು ಅಪಹರಿಸಿ ಅತ್ಯಾಚಾರ

ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿಬೀಳಿಸುವ ಕೃತ್ಯ ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿಬೀಳಿಸುವ ಅತ್ಯಾಚಾರ ನಡೆದಿದೆ. ಬುಧವಾರ ಮಧ್ಯರಾತ್ರಿ ಕೆ.ಆರ್​ ಪುರಂ ರೈಲ್ವೆ ಸ್ಟೇಷನ್​ನಿಂದ ಅಣ್ಣನೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ಬಿಹಾರದ ಯುವತಿಯನ್ನು ದುಷ್ಕರ್ಮಿಗಳು ಅಪಹರಿಸಿ ಅತ್ಯಾಚಾರ ಎಸಗಿದ್ದಾರೆ. ಯುವತಿಯ ಅಣ್ಣನ ಮೇಲೂ ಹಲ್ಲೆ ನಡೆಸಿದ್ದಾರೆ. ಘಟನೆ ಸಂಬಂಧ ಮಾದೇವಪುರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಿಹಾರ ಮೂಲದ ಯುವತಿ ಕೇರಳದ ಎರ್ನಾಕುಲಂನಿಂದ ಬೆಂಗಳೂರಿನ ಕೆ.ಆರ್.ಪುರಂ ರೈಲ್ವೆ ನಿಲ್ದಾಣಕ್ಕೆ ಬಂದಿದ್ದಳು. ಆಕೆಯನ್ನು ಕರೆದುಕೊಂಡು ಹೋಗಲು ದೊಡ್ಡಮ್ಮನ ಮಗ ಬಂದಿದ್ದರು.ಅಲ್ಲಿಂದ ಅವರು

ಅಣ್ಣನ ಜೊತೆ ಬೈಕ್‌ನಲ್ಲಿ ಹೋಗುತ್ತಿದ್ದ ಯುವತಿಯನ್ನು ಅಪಹರಿಸಿ ಅತ್ಯಾಚಾರ Read More »

ಕೋಟ್ಯಂತರ  ಮೌಲ್ಯದ ಚಿನ್ನಾಭರಣ ಕಳವು ಪ್ರಕರಣ |  ಚುರುಕಿನ ತನಿಖೆಗಾಗಿ ವಿಶೇಷ ತಂಡ ರಚನೆ

ಬಜಪೆ: ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ಮುದೆ ಪೇಟೆಯ ಮನೆಯೊಂದರಲ್ಲಿ ಸೋಮವಾರ ಮಧ್ಯರಾತ್ರಿ ಬಳಿಕ ನಡೆದಿರುವ ಕಳವು ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ತಂಡಗಳ ತನಿಖೆ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಬಿಗುಭದ್ರತೆಯಲ್ಲಿ ಮನೆಯೊಳಗಿದ್ದ ಲಾಕರ್ ಒಡೆದು ಸುಮಾರು 80 ಲಕ್ಷ ರೂ. ಮೌಲ್ಯದ ಅಂದಾಜು 1ಕೆ.ಜಿಯಷ್ಟು ಚಿನ್ನಾಭರಣಗಳನ್ನು ಲೂಟಿಗೈದಿರುವ ಬಗ್ಗೆ ಪೊಲೀಸ್ ಮೂಲಗಳು ಈಗಾಗಲೇ ಧೃಡಪಡಿಸಿವೆ. ಪ್ರಕರಣದ ಸಮಗ್ರ ಮಾಹಿತಿ ಹಾಗೂ ಆರೋಪಿಗಳ ಪತ್ತೆಗಾಗಿ ಮನೆಯ ಪರಿಸರದಲ್ಲಿ ಶೋಧಕಾರ್ಯ ನಡೆಸಲಾಗಿದ್ದು ಮನೆಗೆ‌‌‌ ಸಂಬಂಧಿಸಿದ ವ್ಯಕ್ರಿಗಳನ್ನು ವಿಚಾರಣೆಗೆ

ಕೋಟ್ಯಂತರ  ಮೌಲ್ಯದ ಚಿನ್ನಾಭರಣ ಕಳವು ಪ್ರಕರಣ |  ಚುರುಕಿನ ತನಿಖೆಗಾಗಿ ವಿಶೇಷ ತಂಡ ರಚನೆ Read More »

ಮಹಿಳೆಯೊಂದಿಗೆ ಅನ್ಯಕೋಮಿನ ವೃದ್ದ ಪತ್ತೆ

ಉಪ್ಪಿನಂಗಡಿ : ಗುಡ್ಡೆಯೊಂದರಲ್ಲಿ ಹಿಂದೂ ಮಹಿಳೆಯೊಂದಿಗೆ ಅನ್ಯಕೋಮಿನ ವೃದ್ಧನೋರ್ವ ಸಿಕ್ಕಿ ಬಿದ್ದ ಘಟನೆ ಉಪ್ಪಿನಂಗಡಿಯ ಇಳಂತಿಲದಲ್ಲಿ ನಡೆದಿದೆ. ಕಾರ್ವೆಲ್ ನಿವಾಸಿಯಾದ ವೃದ್ದ ಹಿಂದೂ ಮಹಿಳೆಯೊಂದಿಗೆ ಇದ್ದುದನ್ನು ಕಂಡ ಸ್ಥಳೀಯರು ಇಬ್ಬರನ್ನು ಹಿಡಿದು ಬೆನ್ನಟ್ಟಿದ್ದಾರೆ. ವೃದ್ಧನಿಗೆ 65 ವರ್ಷ ವಯಸ್ಸಾಗಿದ್ದು ಏಳು ಜನ ಮಕ್ಕಳಿದ್ದಾರೆ ಆದರೂ ಈ ರೀತಿ ಮಾಡುತ್ತಿದ್ದಾನೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಮಹಿಳೆಯೊಂದಿಗೆ ಅನ್ಯಕೋಮಿನ ವೃದ್ದ ಪತ್ತೆ Read More »

ಗಡಿಯಲ್ಲಿ ಐವರು ನುಸುಳುಕೋರರು ಸೇನೆಯ ಗುಂಡಿಗೆ ಬಲಿ

ಕದನ ವಿರಾಮ ಉಲ್ಲಂಘಿಸಿ ಗುಂಡು ಹಾರಿಸಿದ್ದ ಪಾಕ್‌ ಸೈನಿಕರು ಹೊಸದಿಲ್ಲಿ: ಜಮ್ಮು-ಕಾಶ್ಮೀರದ ಪೂಂಛ್‌ ಜಿಲ್ಲೆಯಲ್ಲಿ ಗಡಿ ದಾಟಿ ಬರಲು ಯತ್ನಿಸಿದ ಐವರು ಪಾಕಿಸ್ಥಾನಿ ನುಸುಳುಕೋರರನ್ನು ಗಡಿ ಭದ್ರತಾ ಪಡೆಯವರು ಗುಂಡಿಕ್ಕಿ ಸಾಯಿಸಿದ್ದಾರೆ. ಪೂಂಛ್‌ ಜಿಲ್ಲೆಯ ಕೃಷ್ಣ ಘಾಟಿ ಸೆಕ್ಷನ್‌ನಲ್ಲಿ ಪಾಕ್‌ ಕಡೆಯಿಂದ ಕದನ ವಿರಾಮ ಉಲ್ಲಂಘಿಸಿ ಗಡಿದಾಟಲು ಯತ್ನಿಸಲಾಗಿತ್ತು. ಅವರನ್ನು ಯಶಸ್ವಿಯಾಗಿ ಹಿಮ್ಮೆಟ್ಟಿಸಿದ್ದೇವೆ. 4-5 ಮಂದಿ ಸತ್ತಿದ್ದಾರೆ ಎಂದು ಸೇನೆಯ ಮೂಲಗಳು ತಿಳಿಸಿವೆ. ನಿನ್ನೆ ಬೆಳಗ್ಗಿನಿಂದ ಗಡಿಯಲ್ಲಿ ಉದ್ವಿಗ್ನ ಸ್ಥಿತಿಯಿತ್ತು. ಅತ್ತ ಕಡೆಯಿಂದ ಪಾಕ್‌ ಸೈನಿಕರು ಗುಂಡು

ಗಡಿಯಲ್ಲಿ ಐವರು ನುಸುಳುಕೋರರು ಸೇನೆಯ ಗುಂಡಿಗೆ ಬಲಿ Read More »

ಗೋಲ್ಡ್‌ ಸ್ಮಗ್ಲಿಂಗ್‌ ಆರೋಪಿ ನಟಿ ರನ್ಯಾಳಿಂದ ವಿಚ್ಚೇದನ ಕೋರಿದ ಪತಿ

ಮದುವೆಯ ಬಳಿಕ ದಾಂಪತ್ಯದಲ್ಲಿ ಒಂದಲ್ಲ ಒಂದು ಸಮಸ್ಯೆ ಎಂದು ಅರ್ಜಿ ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್​ ಕೇಸ್​ನಲ್ಲಿ ಜೈಲು ಪಾಲಾಗಿರುವ ನಟಿ ರನ್ಯಾ ರಾವ್ ಸಂಸಾರವೂ ಈಗ ಸಮಸ್ಯೆಯಲ್ಲಿ ಸಿಲುಕಿದೆ. ರನ್ಯಾಳಿಂದ ವಿಚ್ಛೇದನ ಕೋರಿ‌ ಕೋರ್ಟ್​ಗೆ ಅರ್ಜಿ ಸಲ್ಲಿಸಲು ಪತಿ ಜತಿನ್ ಹುಕ್ಕೇರಿ ಸಿದ್ಧತೆ ನಡೆಸಿದ್ದಾರೆ. ಮದುವೆಯಾದಾಗಿನಿಂದ ರನ್ಯಾ ಜೊತೆಗೆ ಒಂದಲ್ಲ ಒಂದು ತೊಂದರೆಗಳು ಕಾಣಿಸಿಕೊಳ್ಳುತ್ತಿವೆ. ಹೀಗಾಗಿ ಸದ್ಯ ರನ್ಯಾಳಿಂದ ಪತಿ ಜತಿನ್ ಅಂತರ ಕಾಯ್ದುಕೊಂಡಿದ್ದಾರೆ ಎನ್ನಲಾಗಿದೆ. 2024 ಅಕ್ಟೋಬರ್ 6ರಂದು ಬೆಂಗಳೂರಿನ ಬಾಸ್ಟಿನ್ ರೆಸ್ಟೋರೆಂಟ್​ನಲ್ಲಿ ರನ್ಯಾ ಮತ್ತು

ಗೋಲ್ಡ್‌ ಸ್ಮಗ್ಲಿಂಗ್‌ ಆರೋಪಿ ನಟಿ ರನ್ಯಾಳಿಂದ ವಿಚ್ಚೇದನ ಕೋರಿದ ಪತಿ Read More »

ಮಂಗಳೂರು : ಮುಡಾ ಕಮಿಷನರ್‌ಗೇ ವಾಮಾಚಾರ ಯತ್ನ

ಪೊಲೀಸ್‌ ದೂರು ದಾಖಲಿಸಿದ ಕಮಿಷನರ್‌ ನೂರ್ ಝಹರಾ ಖಾನಂ ಮಂಗಳೂರು : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಕಮಿಷನರ್ ಮೇಲೆ ಬ್ರೋಕರ್‌ಗಳು ಮಾಟಮಂತ್ರ ಮಾಡಲು ಮುಂದಾದ ವಿಚಾರ ಬೆಳಕಿಗೆ ಬಂದಿದೆ. ಈ ಕುರಿತು ಕಮಿಷನರ್‌ ಇಬ್ಬರು ದಲ್ಲಾಳಿಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಮುಡಾ ಕಚೇರಿಯಲ್ಲಿ ಬ್ರೋಕರ್‌ಗಳ ಕಾರುಬಾರು ಜೋರಾಗಿದ್ದು, ಅವರನ್ನು ನಿಯಂತ್ರಸಲು ಮುಂದಾದ ಕಮಿಷನರ್‌ ನೂರ್ ಝಹರಾ ಖಾನಂ ಅವರಿಗೆ ಬ್ರೋಕರ್‌ಗಳು ನಾನಾ ರೀತಿಯಲ್ಲಿ ಕಿರುಕುಳ ನೀಡುತ್ತಿದ್ದಾರೆ. ಇತ್ತೀಚೆಗೆ ಒಬ್ಬ ಬ್ರೋಕರ್‌ ಸಿಬ್ಬಂದಿ ಇಲ್ಲದ ವೇಳೆ ಮುಡಾ

ಮಂಗಳೂರು : ಮುಡಾ ಕಮಿಷನರ್‌ಗೇ ವಾಮಾಚಾರ ಯತ್ನ Read More »

ಹೆಂಡತಿ ಬಿಟ್ಟು ಹೋದ ಸಿಟ್ಟು : ಅತ್ತೆ, ನಾದಿನಿ, ಮಗಳನ್ನು ಗುಂಡಿಕ್ಕಿ ಸಾಯಿಸಿ ಆತ್ಮಹತ್ಯೆ ಮಾಡಿಕೊಂಡ ಚಾಲಕ

ಬಾಳೆಹೊನ್ನೂರು: ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಸಮೀಪ ಖಾಂಡ್ಯ ಹೋಬಳಿ ಮಾಗಲು ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ಕುಟುಂಬದ ಮೂವರನ್ನು ಗುಂಡು ಹಾರಿಸಿ ಸಾಯಿಸಿದ್ದು, ಬಳಿಕ ತಾನೂ ಅತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ. ಗುಂಡಿನ ದಾಳಿಯಲ್ಲಿ ಓರ್ವ ವ್ಯಕ್ತಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಡಬಗೆರೆಯ ಶಾಲೆಯೊಂದರಲ್ಲಿ ವಾಹನ ಚಾಲಕನಾಗಿದ್ದ ರತ್ನಾಕರ ಗುಂಡು ಹಾರಿಸಿವ. ಈತನ ಹೆಂಡತಿ ಎರಡು ವರ್ಷದ ಹಿಂದೆ ಬಿಟ್ಟು ಹೋಗಿದ್ದು, ಈ ಸಿಟ್ಟಿನಲ್ಲಿ ಅತ್ತೆ ಜ್ಯೋತಿ(50), ಮಗಳು ಮೌಲ್ಯ(6) ಮತ್ತೆ ನಾದಿನಿ ಸಿಂಧು(24)

ಹೆಂಡತಿ ಬಿಟ್ಟು ಹೋದ ಸಿಟ್ಟು : ಅತ್ತೆ, ನಾದಿನಿ, ಮಗಳನ್ನು ಗುಂಡಿಕ್ಕಿ ಸಾಯಿಸಿ ಆತ್ಮಹತ್ಯೆ ಮಾಡಿಕೊಂಡ ಚಾಲಕ Read More »

error: Content is protected !!
Scroll to Top