ಅಪರಾಧ

ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ದಂಪತಿ |  ಪತಿ ಮೃತ್ಯು – ಪತ್ನಿಯ ಸ್ಥಿತಿ ಗಂಭೀರ

ಪುತ್ತೂರು : ಅನಂತಾಡಿಯ ಬಾಕಿಲ ಎಂಬಲ್ಲಿ ಪತಿ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಪತಿ ಮೃತಪಟ್ಟು ಪತ್ನಿಯನ್ನು ಗಂಭೀರ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಅನಂತಾಡಿ ಬಾಕಿಲ ನಿವಾಸಿ ಪ್ರತಾಪ್(35) ಮೃತಪಟ್ಟಿದ್ದು ಪತ್ನಿ ವೀಣಾ(32)ಗಂಭೀರ ಸ್ಥಿತಿಯಲ್ಲಿದ್ದು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಶನಿವಾರ ರಾತ್ರಿ ನೇಣು ಬಿಗಿದುಕೊಂಡಿದ್ದು, ತಕ್ಷಣ ಮಾಹಿತಿ ತಿಳಿದು ಇಬ್ಬರನ್ನೂ ಪುತ್ತೂರು ಆಸ್ಪತ್ರೆಗೆ ಕರೆ ತರಲಾಗಿತ್ತು.ಆದರೆ ಪ್ರತಾಪ್ ಮೃತಪಟ್ಟಿದ್ದಾರೆ. ಪತ್ನಿ ವೀಣಾರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ವರ್ಗಾಯಿಸಿದ್ದಾರೆ. ವಿಟ್ಲ ಪೊಲೀಸರು ಸ್ಥಳಕ್ಕೆ ತೆರಳಿ ಪ್ರಕರಣ […]

ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ದಂಪತಿ |  ಪತಿ ಮೃತ್ಯು – ಪತ್ನಿಯ ಸ್ಥಿತಿ ಗಂಭೀರ Read More »

ಜಾಗತಿಕ ಭಯೋತ್ಪಾದಕ ಸಂಘಟನೆ ಐಸಿಸ್ ನಿಂದ ರೋಬೋಟ್ ಮೂಲಕ ವಿದ್ವಂಸಕ ಕೃತ್ಯಕ್ಕೆ ಸಂಚು | ಸ್ಪೋಟಕ ಮಾಹಿತಿ ಬಯಲು

ಶಿವಮೊಗ್ಗ: ರಾಜ್ಯದಲ್ಲಿ ರೋಬೋಟ್ ಗಳ ಮೂಲಕ ವಿಧ್ವಂಸಕ ಕೃತ್ಯ ಎಸಗಲು ಜಾಗತಿಕ ಭಯೋತ್ಪಾದಕಾ ಸಂಘಟನೆ ಐಸಿಸ್ ಸಂಚು ಹೂಡಿದೆ ಎಂದು ಎನ್ಐಎ ಹೆಚ್ಚುವರಿ ಚಾರ್ಜ್ ಶೀಟ್ ನಲ್ಲಿ ಸ್ಫೋಟಕ ಮಾಹಿತಿ ಬಯಲಾಗಿದೆ. ಶಿವಮೊಗ್ಗ ಟ್ರಾಯಲ್ ಬ್ಲಾಸ್ಟ್ ಮತ್ತು ಐಸಿಸ್ ಲಿಂಕ್ ಕೇಸ್ ನಲ್ಲಿ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಲಾಗಿದ್ದು, ಮೆಕಾನಿಕಲ್ ಇಂಜಿನಿಯರ್ ಹಿನ್ನೆಲೆಯ ಐವರು ಶಂಕಿತರಿಂದ ರೋಬೋಟಿಕ್ ದಾಳಿಗೆ ಪ್ಲಾನ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ವಿಚಾರಣೆ ಸಂದರ್ಭದಲ್ಲಿ ಶಂಕಿತ ಉಗ್ರರು ಸ್ಫೋಟಕ ಮಾಹಿತಿ ಬಾಯ್ಬಿಟ್ಟಿದ್ದಾರೆ. ಶಂಕಿತ ಉಗ್ರ

ಜಾಗತಿಕ ಭಯೋತ್ಪಾದಕ ಸಂಘಟನೆ ಐಸಿಸ್ ನಿಂದ ರೋಬೋಟ್ ಮೂಲಕ ವಿದ್ವಂಸಕ ಕೃತ್ಯಕ್ಕೆ ಸಂಚು | ಸ್ಪೋಟಕ ಮಾಹಿತಿ ಬಯಲು Read More »

ಪ್ರವೀಣ್ ನೆಟ್ಟಾರೆ ಹತ್ಯೆ ಆರೋಪಿಗಳಿಗೆ ನ್ಯಾಯಾಲಯಕ್ಕೆ ಶರಣಾಗಲು ಜೂ.30 ಡೆಡ್ ಲೈನ್ | ಶರಣಾಗದ ಆರೋಪಿಗಳು | ಎನ್‍ಐಎ ಮೂಲಗಳಿಂದ ಮಾಹಿತಿ

ಪುತ್ತೂರು: ಬೆಳ್ಳಾರೆಯ ಹಿಂದೂ ಕಾರ್ಯಕರ್ತ ಪ್ರವೀಣ್‍ ನೆಟ್ಟಾರು ಹತ್ಯೆ ಪ್ರಕರಣ ಆರೋಪಿಗಳಿಗೆ ಜೂ.30 ರಂದು ಡೆಡ್ ಲೈನ್ ನೀಡಲಾಗಿದ್ದು, ಆರೋಪಿಗಳು ನ್ಯಾಯಾಲಯಕ್ಕೆ ಶರಣಾಗಿಲ್ಲ ಎಂದು ಎನ್‍ಐಎ ಮೂಲಗಳಿಂದ ಮಾಹಿತಿ ಲಭಿಸಿದೆ. ಪ್ರಮುಕ ಆರೋಪಿಗಳಾದ ುಮರ್ ಫಾರೂಕ್, ಅಬೂಬಕ್ಕರ್ ಸಿದ್ದಿಕ್, ತುಫೈಲ್, ಮೊಹಮ್ಮದ್ ಮುಸ್ತಾಫಾ ಎನ್‍ಐಗೆ ಬೇಕಾಗಿರುವ ಆರೋಪಿಗಳಾಗಿದ್ದಾರೆ. ಈ ನಾಲ್ಕು ಜನರ ಪತ್ತೆಗೆ 14 ಲಕ್ಷ ರೂ. ಬಹುಮಾನ ಪತ್ತೆ ಮಾಡಿದವರಿಗೆ ನೀಡಲಾಗುವುದು ಎಂದು ಘೋಷಣೆ ಮಾಡಲಾಗಿತ್ತು. ಈ ಪೈಕಿ ತುಫೈಲ್, ಮೊಹಮ್ಮದ್ ಮುಸ್ತಾಫ ಸುಳಿವಿಗೆ ತಲಾ

ಪ್ರವೀಣ್ ನೆಟ್ಟಾರೆ ಹತ್ಯೆ ಆರೋಪಿಗಳಿಗೆ ನ್ಯಾಯಾಲಯಕ್ಕೆ ಶರಣಾಗಲು ಜೂ.30 ಡೆಡ್ ಲೈನ್ | ಶರಣಾಗದ ಆರೋಪಿಗಳು | ಎನ್‍ಐಎ ಮೂಲಗಳಿಂದ ಮಾಹಿತಿ Read More »

ಪುರುಷರಕಟ್ಟೆಯಲ್ಲಿ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ |

ಪುತ್ತೂರು: ಪುತ್ತೂರು: ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಪುರುಷರಕಟ್ಟೆಯಲ್ಲಿ ಶನಿವಾರ ನಡೆದಿದೆ. 7 ವರ್ಷದ ಹಿಂದೆ ಗಂಡ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲೇ ಆತನ ಹೆಂಡತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುತೂಹಲಕ್ಕೆ ಪುಷ್ಟಿ ನೀಡಿದೆ. ಪುರುಷರಕಟ್ಟೆ ಇಂದಿರಾನಗರ ದಿ.ಪ್ರವೀಣ್ ಎಂಬವರ ಪತ್ನಿ ಕಾವ್ಯ(38ವ)ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು. 7 ವರ್ಷದ ಹಿಂದೆ ಅವರ ಪತಿ ಪ್ರವೀಣ್ ಅವರು ಕೂಡಾ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಪ್ರವೀಣ್ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲೇ ಕಾವ್ಯ

ಪುರುಷರಕಟ್ಟೆಯಲ್ಲಿ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ | Read More »

ವಾಯುವ್ಯ ಪಾಕಿಸ್ತಾನದಲ್ಲಿ ಒಂದೇ ಕುಟುಂಬದ 9 ಸದಸ್ಯರ ಗುಂಡಿಕ್ಕಿ ಹತ್ಯೆ

ಪೇಷಾವರ :  ವಾಯವ್ಯ ಪಾಕಿಸ್ತಾನದ ಖೈಬರ್ ಪಖ್ತೂಂಕ್ವ ಪ್ರಾಂತದಲ್ಲಿ ಮದುವೆಯ ಕುರಿತ ವಿವಾದದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ 9 ಸದಸ್ಯರನ್ನು ಬುಧವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಮಲಾಕಂಡ್ ಜಿಲ್ಲೆಯ ಬಟ್‍ಖೆಲಾ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಮದುವೆಯ ವಿವಾದದ ಹಿನ್ನೆಲೆಯಲ್ಲಿ ಸಂಬಂಧಿಕರೇ ಈ ಕೃತ್ಯ ಎಸಗಿದ್ದಾರೆ. ರಾತ್ರಿ ವೇಳೆ ಮನೆಗೆ ನುಗ್ಗಿದ ಗುಂಪು, ನಿದ್ದೆಯಲ್ಲಿದ್ದ 9 ಮಂದಿಯನ್ನು ಗುಂಡು ಹಾರಿಸಿ ಹತ್ಯೆಗೈದು ಪರಾರಿಯಾಗಿರುವುದಾಗಿ ವರದಿಯಾಗಿದೆ. ಮೃತದೇಹಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪ್ರಾಂತೀಯ ಅರೆಸೇನಾ ಪಡೆ

ವಾಯುವ್ಯ ಪಾಕಿಸ್ತಾನದಲ್ಲಿ ಒಂದೇ ಕುಟುಂಬದ 9 ಸದಸ್ಯರ ಗುಂಡಿಕ್ಕಿ ಹತ್ಯೆ Read More »

ಮರ್ದಾಳದ ಯುವಕ ನೇಣು ಬಿಗಿದು ಆತ್ಮಹತ್ಯೆ

ಕಡಬ: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಮರ್ಧಾಳದಲ್ಲಿ ನಡೆದಿದೆ. ಮರ್ದಾಳ ನೆಕ್ಕಿತ್ತಡ್ಕ ನಿವಾಸಿ ದಿ.ಸಂಜೀವ ರೈ ಎಂಬವರ ಪುತ್ರ ರಘುನಾಥ ರೈ ಯಾನೆ ಚುಮ್ಮ (38) ಆತ್ಮಹತ್ಯೆ ಮಾಡಿಕೊಂಡವರು. ಗುರುವಾರ ಸಂಜೆ ವೇಳೆ ಈ ಕೃತ್ಯ ಎಸಗಿದ್ದು, ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿರುವುದಾಗಿ ಶಂಕಿಸಲಾಗಿದೆ. ಈ ಕುರಿತು ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮರ್ದಾಳದ ಯುವಕ ನೇಣು ಬಿಗಿದು ಆತ್ಮಹತ್ಯೆ Read More »

ತೆಂಕಿಲ ಗುಡ್ಡದಲ್ಲಿ ಮೃತಪಟ್ಟ ರೀತಿಯಲ್ಲಿ ಕರುವಿನ ಮೃತದೇಹ ಪತ್ತೆ

ಪುತ್ತೂರು: ನಗರದ ಹೊರವಲಯದ ತೆಂಕಿಲ ಕಟ್ಟತ್ತಾರು ಸಮೀಪದ ಗುಡ್ಡವೊಂದರಲ್ಲಿ ಕರುವಿನ ಮೃತದೇಹ ಪತ್ತೆಯಾಗಿದೆ. ಸ್ಥಳೀಯರ ಮಾಹಿತಿಯಂತೆ ರಾತ್ರಿ ಹೊತ್ತು ಅಕ್ರಮ ಗೋಸಾಗಾಟ ಸಂದರ್ಭದಲ್ಲಿ ಆಗಿರುವ ಕೃತ್ಯ ಎಂದು ಹಿಂದೂ ಸಂಘಟನೆ ಕಾರ್ಯಕರ್ತರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆ ಸೂಕ್ತ ತನಿಖೆ ನಡೆಸುವಂತೆ ವಿಶ್ವ ಹಿಂದೂ ಪರಿಷತ್, ಬಜರಂಗದಳ ಆಗ್ರಹಿಸಿದೆ. ಮೃತದೇಹವನ್ನು ವಿಹಿಂಪ, ಬಜರಂಗದಳ ಹಾಗೂ ಸ್ಥಳೀಯ ಹಿಂದೂ ಯುವಕರಿಂದ ಅಂತಿಮ ಸಂಸ್ಕಾರ ನೆರವೇರಿತು.

ತೆಂಕಿಲ ಗುಡ್ಡದಲ್ಲಿ ಮೃತಪಟ್ಟ ರೀತಿಯಲ್ಲಿ ಕರುವಿನ ಮೃತದೇಹ ಪತ್ತೆ Read More »

ಉಜಿರೆ ಲಾಡ್ಜ್ ನಲ್ಲಿ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಳ್ತಂಗಡಿ: ಅವಿವಾಹಿತ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಜಿರೆಯ ಖಾಸಗಿ ಲಾಡ್ಜ್‍ ಒಂದರಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಅವಿವಾಹಿತ ಕಾರ್ತಿಕ್ (29) ಆತ್ಮಹತ್ಯೆ ಮಾಡಿಕೊಂಡವ. ಈತ ಉಜಿರೆಯ ಖಾಸಗಿ ಲಾಡ್ಜ್‍ ಒಂದರಲ್ಲಿ ರೂಂ ಪಡೆದುಕೊಂಡು ತಂಗಿದ್ದ. ಜೂ.28 ರಂದು ಫ್ಯಾನ್‍ಗೆ ಹಗ್ಗದಿಂದ ನೇಣು ಬಿಗಿದುಕೊಂಡಿದ್ದಾನೆ ಎನ್ನಲಾಗಿದೆ. ರೂಂನಿಂದ ಕಾರ್ತಿಕ್ ಹೊರಬಾರದೇ ಇದ್ದಾಗ ಅನುಮಾನಗೊಂಡು ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಸಬ್ ಇನ್ ಸ್ಪೆಕ್ಟರ್ ಆನಂದ ಹಾಗೂ ತಂಡ ಲಾಡ್ಜ್‍ ಗೆ ತೆರಳಿ ಬಾಗಿಲು ಒಡೆದು

ಉಜಿರೆ ಲಾಡ್ಜ್ ನಲ್ಲಿ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ Read More »

ಗೃಹಲಕ್ಷ್ಮೀ ಯೋಜನೆ ಜ್ಯಾರಿಗೆ ತರಲು ಮುಹೂರ್ತ ಫಿಕ್ಸ್ | ಸೈಬರ್ ವಂಚಕರಿಂದ ನಕಲಿ ಆ್ಯಪ್​ಗಳ ಸೃಷ್ಟಿ | ಎಚ್ಚೆತ್ತುಕೊಳ್ಳಬೇಕಾಗಿದೆ ಜನತೆ

ಬೆಂಗಳೂರು : ರಾಜ್ಯ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯನ್ನು ಆಗಸ್ಟ್ 16 ರಿಂದ ಅನುಷ್ಠಾನಗೊಳಿಸುವ ಸಿದ್ಧತೆಯಲ್ಲಿದ್ದು, ಇದಕ್ಕಾಗಿ ಪ್ರತ್ಯೇಕ ಆ್ಯಪ್​ ಕೂಡ ಸಿದ್ಧಪಡಿಸಲಾಗಿದೆ. ಈ ನಡುವೆ ಗೂಗಲ್​ ಪ್ಲೇಸ್ಟೋರ್​ನಲ್ಲಿ ಗೃಹಲಕ್ಷ್ಮೀ ಯೋಜನೆಯ ಹೆಸರಿಯಲ್ಲಿ ಮೂರು ನಕಲಿ ಆ್ಯಪ್​ಗಳ ಸೃಷ್ಟಿಯಾಗಿದ್ದು ಸೈಬರ್​ ಕ್ರೈಂ ಅಪಾಯ ಹೆಚ್ಚಾಗಿದೆ. ಥೇಟ್​ ಸರ್ಕಾರಿ ಆ್ಯಪ್​ನಂತೆಯೇ ಕಾಣುವಂತಹ ಮೂರು ನಕಲಿ ಗೃಹಲಕ್ಷ್ಮೀ ಅಪ್ಲಿಕೇಶನ್​ ಗೂಗಲ್​ ಪ್ಲೇಸ್ಟೋರ್​ನಲ್ಲಿ ಡೌನ್​ಲೋಡ್​ ಆಗ್ತಿದೆ. ಇದೊಂದು ನಕಲಿ ಆ್ಯಪ್​ ಎಂಬ ಅರಿವಿರದ ಅನೇಕರು ಈ ಆ್ಯಪ್‍

ಗೃಹಲಕ್ಷ್ಮೀ ಯೋಜನೆ ಜ್ಯಾರಿಗೆ ತರಲು ಮುಹೂರ್ತ ಫಿಕ್ಸ್ | ಸೈಬರ್ ವಂಚಕರಿಂದ ನಕಲಿ ಆ್ಯಪ್​ಗಳ ಸೃಷ್ಟಿ | ಎಚ್ಚೆತ್ತುಕೊಳ್ಳಬೇಕಾಗಿದೆ ಜನತೆ Read More »

ವಿಟ್ಲ ಜೋಗಿಮಠದಲ್ಲಿ ವಿವಾಹಿತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

ವಿಟ್ಲ: ವಿವಾಹಿತ ಮಹಿಳೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜೋಗಿಮಠದಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಕೈರಂಗಳ ಗ್ರಾಮದ ಮೋಟುಗೋಳಿ ನಿವಾಸಿ ಅಬ್ದುಲ್ ರಹಿಮಾನ್ ಅವರ ಪುತ್ರಿ ಅನಿಶಾ (34) ಆತ್ಮಹತ್ಯೆ ಮಾಡಿಕೊಂಡವರು. ಈ ಕುರಿತು ಮೃತರ ಸಹೋದರ ಮುನೀರ್ ಅಹಮ್ಮದ್, ತನ್ನ ಅಕ್ಕನ ಸಾವಿನಲ್ಲಿ ಯಾವುದೇ ಸಂಶಯವಿಲ್ಲ. ನಾಲ್ಕನೇ ಹೆರಿಗೆಯಾದ ಬಳಿಕ ಮಾನಸಿಕವಾಗಿ ನೊಂದಿದ್ದಳು ಎಂದು ತಿಳಿಸಿದ್ದಾರೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಟ್ಲ ಜೋಗಿಮಠದಲ್ಲಿ ವಿವಾಹಿತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ Read More »

error: Content is protected !!
Scroll to Top