ಅಪರಾಧ

ಗಾಯಕ ಸೋನು ನಿಗಮ್‌ ವಿರುದ್ಧ ಕೇಸ್‌

ಕನ್ನಡಿಗರ ಅಭಿಮಾನವನ್ನು ಉಗ್ರರ ದಾಳಿಗೆ ಹೋಲಿಸಿ ವಿವಾದ ಸೃಷ್ಟಿಸಿರುವ ಗಾಯಕ ಬೆಂಗಳೂರು: ಕನ್ನಡಿಗರ ಅಭಿಮಾನವನ್ನು ಪಹಲ್ಗಾಮ್ ಉಗ್ರರ ದಾಳಿಗೆ ಹೋಲಿಸಿ ವಿವಾದ ಮೈಮೇಲೆ ಎಳೆದುಕೊಂಡಿರುವ ಜನಪ್ರಿಯ ಹಿನ್ನೆಲೆ ಗಾಯಕ ಸೋನು ನಿಗಮ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರು ನಗರ ಘಟಕದ ಅಧ್ಯಕ್ಷ ಧರ್ಮರಾಜ್ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಖಾಸಗಿ ಕಾಲೇಜೊಂದರ ಕಾರ್ಯಕ್ರಮದಲ್ಲಿ ಕನ್ನಡ ಹಾಡು ಹೇಳುವಂತೆ ವಿದ್ಯಾರ್ಥಿಗಳು ಕೋರಿದಾಗ ಕನ್ನಡ…ಕನ್ನಡ… ಈ ರೀತಿಯ […]

ಗಾಯಕ ಸೋನು ನಿಗಮ್‌ ವಿರುದ್ಧ ಕೇಸ್‌ Read More »

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಖಾದರ್‌ ಹೇಳಿಕೆ ವಿರುದ್ಧ ಬಿಜೆಪಿ ಕೆಂಡಾಮಂಡಲ

ಆರೋಪಿಗಳ ರಕ್ಷಣೆಗೆ ಸ್ಪೀಕರ್‌ ನಿಂತಿದ್ದಾರೆ ಎಂದು ಆರೋಪ; ಹಾಗೇ ಹೇಳಿಲ್ಲ ಎಂದು ಖಾದರ್‌ ಸ್ಪಷ್ಟನೆ ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆಯ ಬಳಿಕ ಸ್ಪೀಕರ್‌ ಯು.ಟಿ.ಖಾದರ್‌ ನೀಡಿದ ಹೇಳಿಕೆಯೊಂದು ಭಾರಿ ವಿವಾದಕ್ಕೆ ಕಾರಣವಾಗಿದ್ದು, ಕೊಲೆ ಪ್ರಕರಣದ ದಿಕ್ಕು ತಪ್ಪಿಸಲು ಸ್ವತಃ ಸ್ಪೀಕರ್‌ ಮುಂದಾಗಿರುವುದು ದುರದೃಷ್ಟಕರ, ಅವರು ರಾಜೀನಾಮೆ ನೀಡಬೇಕೆಂದು ಬಿಜೆಪಿ ನಾಯಕರು ಆಗ್ರಹಿಸುತ್ತಿದ್ದಾರೆ. ಸುಹಾಸ್‌ ಶೆಟ್ಟಿ ಹತ್ಯೆಗೂ ಮೂರು ವರ್ಷದ ಹಿಂದೆ ಸುರತ್ಕಲ್‌ನಲ್ಲಿ ಹತ್ಯೆಯಾದ ಫಾಝಿಲ್‌ ಕುಟುಂಬಕ್ಕೂ ಯಾವುದೇ ಸಂಬಂಧ ಇಲ್ಲ, ಫಾಝಿಲ್‌ ಕುಟುಂಬದವರೊಂದಿಗೆ ನಾನು

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಖಾದರ್‌ ಹೇಳಿಕೆ ವಿರುದ್ಧ ಬಿಜೆಪಿ ಕೆಂಡಾಮಂಡಲ Read More »

ಹಿಂದೂ ಕಾರ್ಯಕರ್ತ ಸುಹಾಸ್‍ ಹತ್ಯೆ ಪ್ರಕರಣ | 8 ಮಂದಿ ಆರೋಪಿಗಳ ಬಂಧನ

ಮಂಗಳೂರು: ಹಿಂದೂ ಕಾರ್ಯಕರ್ತ ಹಾಗು ರೌಡಿ ಶೀಟರ್ ಆಗಿದ್ದ ಸುಹಾಸ್‍ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಂಗಳೂರು ನಗರ ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸಿ 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಹಿಂದೂ ಸಂಘಟನೆಯ ಕಾರ್ಯಗಳಲ್ಲಿ ಗುರುತಿಸಿಕೊಂಡಿದ್ದ ಸುಹಾಸ್ ಶೆಟ್ಟಿಯ ಕೊಲೆ ದಕ್ಷಿಣಕನ್ನಡದಲ್ಲಿ ಸಂಚಲನ ಮೂಡಿಸಿತ್ತು. ತಡರಾತ್ರಿ ನಡೆದ ಈ ಬರ್ಬರ ಕೃತ್ಯದ ತನಿಖೆ ಚುರುಕುಗೊಳಿಸಿದ್ದ ಪೊಲೀಸರು, ಈ ಕೃತ್ಯದಲ್ಲಿ ಭಾಗಿಯಾಗಿದ್ದ ಎಂಟು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತ ಆರೋಪಿಗಳ ವಿವರಗಳನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ.

ಹಿಂದೂ ಕಾರ್ಯಕರ್ತ ಸುಹಾಸ್‍ ಹತ್ಯೆ ಪ್ರಕರಣ | 8 ಮಂದಿ ಆರೋಪಿಗಳ ಬಂಧನ Read More »

ಮಂಗಳೂರಿನಲ್ಲಿ ಪೊಲೀಸರು, ಮುಖಂಡರ ಜೊತೆಗೆ ಪರಮೇಶ್ವರ್‌ ಸರಣಿ ಸಭೆ

ಪೊಲೀಸರ ಕಾರ್ಯವೈಖರಿಯ ಬಗ್ಗೆ ಭಾರಿ ಅಸಮಾಧಾನ ಮಂಗಳೂರು: ಕರಾವಳಿಯಲ್ಲಿ ಇತ್ತೀಚೆಗೆ ನಡೆದ ಎರಡು ಹತ್ಯೆಗಳ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಶನಿವಾರ ಮಂಗಳೂರಿಗೆ ಭೇಟಿ ನೀಡಿದ್ದು, ಸ್ಥಳೀಯ ಅಧಿಕಾರಿಗಳು ಹಾಗೂ ಮುಸ್ಲಿಂ ಮುಖಂಡರೊಂದಿಗೆ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಸಚಿವ ಪರಮೇಶ್ವರ್‌ ವಿಮಾನ ನಿಲ್ದಾಣದಿಂದ ಸರ್ಕೀಟ್ ಹೌಸ್‌ಗೆ ಆಗಮಿಸಿದ್ದು, ಸರ್ಕೀಟ್ ಹೌಸ್‌ನಲ್ಲಿ ಮಾತುಕತೆ ನಡೆಸುತ್ತಿದ್ದಾರೆಂದು ವರದಿಗಳು ತಿಳಿಸಿವೆ. ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿಯನ್ನು

ಮಂಗಳೂರಿನಲ್ಲಿ ಪೊಲೀಸರು, ಮುಖಂಡರ ಜೊತೆಗೆ ಪರಮೇಶ್ವರ್‌ ಸರಣಿ ಸಭೆ Read More »

ಮಂಗಳೂರು : ಬಿಗಿ ಬಂದೋಬಸ್ತು ನಡುವೆ ತಲ್ವಾರು ಹಿಡಿದು ಕೃತ್ಯ ಮೆರೆದ ಯುವಕರು

ಮಂಗಳೂರು : ರೌಡಿ ಶೀಟರ್, ಸಂಘಪರಿವಾರದ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯ ಹಿನ್ನೆಲೆಯಲ್ಲಿ ಕಾವೂರು ಪೊಲೀಸ್ ಠಾಣೆಯ ಎರಡು ಕಡೆಗಳಲ್ಲಿ ದುಷ್ಕರ್ಮಿಗಳು ಸಾರ್ವಜನಿಕರಿಬ್ಬರಿಗೆ ತಲವಾರು ತೋರಿಸಿ ಪರಾರಿಯಾಗಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ ಎಂದು ತಿಳಿದು ಬಂದಿದೆ. ಪಂಜಿಮೊಗರು ಸಮೀಪ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಂಜಿಮೊಗರು ನಿವಾಸಿ ಮೊಯ್ಲಿನಬ್ಬ (37) ಮತ್ತು ಶಾಂತಿನಗರದ ನಾಸಿರ್ (38) ಎಂಬವರಿಗೆ ತಲವಾರು ತೋರಿಸಿ, ಬೆದರಿಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ. ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್‍ ಧರಿಸಿಕೊಂಡಿದ್ದ ಇಬ್ಬರು ದುಷ್ಕರ್ಮಿಗಳು ತಲವಾರಿನೊಂದಿಗೆ ಸಂಚರಿಸುತ್ತಾ

ಮಂಗಳೂರು : ಬಿಗಿ ಬಂದೋಬಸ್ತು ನಡುವೆ ತಲ್ವಾರು ಹಿಡಿದು ಕೃತ್ಯ ಮೆರೆದ ಯುವಕರು Read More »

ಡಾ. ಆಶಾಪುತ್ತೂರಾಯರಿಗೆ ಹಲ್ಲೆ ಯತ್ನ | ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

ಪುತ್ತೂರು: ಪುತ್ತೂರಿನ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಆಶಾ ಪುತ್ತೂರಾಯರಿಗೆ ಅವಮಾನಿಸಿ  ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳಿಗೂ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಸುಳ್ಯ ಪದವಿನ ಜೊಹರಾ ಮತ್ತು ಅವರ ಮಗ ಸಮದ್ ಎಂಬವರು ಪ್ರಕರಣದ ಆರೋಪಿಗಳು. ಆರೋಪಿಗಳ ಪರ ವಕೀಲರಾದ ಅಶ್ರಫ್ ಅಗ್ನಾಡಿ, ಅಬ್ದುಲ್ ಮಜೀದ್ ಖಾನ್, ಸೆಲೀನಾ ನೆಕ್ಕಿಲಾಡಿ, ಮಿತ್ರಿಯಾ ವಾದಿಸಿದ್ದರು. ಹಲ್ಲೆ ಯತ್ನ ನಡೆದ ಬಗ್ಗೆ ಮಾಹಿತಿ ದೊರೆತು ಪುತ್ತೂರು

ಡಾ. ಆಶಾಪುತ್ತೂರಾಯರಿಗೆ ಹಲ್ಲೆ ಯತ್ನ | ಆರೋಪಿಗಳಿಗೆ ನಿರೀಕ್ಷಣಾ ಜಾಮೀನು Read More »

ಸಹಜ ಸ್ಥಿತಿಗೆ ಮರಳಿದ ಮಂಗಳೂರು : ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್‌ ಕಾವಲು

ಸೋಷಿಯಲ್‌ ಮೀಡಿಯಾ ಪೋಸ್ಟ್‌ಗಳ ಮೇಲೆ ತೀವ್ರ ನಿಗಾ ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ನಿನ್ನೆ ಬಂದ್‌ ಆಗಿದ್ದ ಮಂಗಳೂರು ನಗರ ಇಂದು ಸಹಜ ಸ್ಥಿತಿಗೆ ಮರಳಿದೆ. ನಿನ್ನೆ ಸುಹಾಸ್‌ ಶೆಟ್ಟಿ ಹತ್ಯೆ ಪ್ರತಿಭಟಿಸಿ ವಿಶ್ವ ಹಿಂದೂ ಪರಿಷತ್‌ ನೀಡಿದ ಕರೆಯನ್ವಯ ಬಂದ್‌ ಆಚರಿಸಲಾಗಿತ್ತು. ಬಂದ್‌ ಆಚರಿಸಲು ಒಪ್ಪದೆ ರಸ್ತೆಗಿಳಿದ ಕೆಲವು ಬಸ್‌ಗಳಿಗೆ ಕಲ್ಲುತೂರಿದ ಘಟನೆ ಮಂಗಳೂರು, ಮೂಲ್ಕಿ, ಕಾರ್ಕಳ ಮತ್ತಿತರೆಡೆಗಳಲ್ಲಿ ಸಂಭವಿಸಿತ್ತು. ನಿನ್ನೆಯಿಡೀ ಮಂಗಳೂರು ಸುತ್ತಮುತ್ತ ಬಿಗುವಿನ ಪರಿಸ್ಥಿಯಿತ್ತು. ಪುತ್ತೂರು, ಕಡಬ, ಬೆಳ್ತಂಗಡಿ

ಸಹಜ ಸ್ಥಿತಿಗೆ ಮರಳಿದ ಮಂಗಳೂರು : ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್‌ ಕಾವಲು Read More »

ಸುಹಾಸ್‌ ಶೆಟ್ಟಿ ಹತ್ಯೆ : 8 ಶಂಕಿತರು ವಶ?

ಇಂದು ಗೃಹ ಸಚಿವ ಪರಮೇಶ್ವರ್‌ ಮಂಗಳೂರಿಗೆ ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ಸಂಬಂಧಿಸಿ 8 ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಹತ್ಯೆಗೆ ಭಾರಿ ಸಂಚು ನಡೆಸಿರುವುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ವೀಡಿಯೊ ಸಾಕ್ಷ್ಯದ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಇದೀಗ 8 ಆರೋಪಿಗಳನ್ನು ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದಿರುವ ವಿಚಾರವನ್ನು ಪೊಲೀಸರು ಇನ್ನೂ ದೃಢಪಡಿಸಿಲ್ಲ. ಇಂದು ಸುದ್ದಿಗೋಷ್ಠಿ ಕರೆದು ತನಿಖೆಯ ಮಾಹಿತಿ

ಸುಹಾಸ್‌ ಶೆಟ್ಟಿ ಹತ್ಯೆ : 8 ಶಂಕಿತರು ವಶ? Read More »

ಜಾತ್ರೆಯಲ್ಲಿ ಭೀಕರ ಕಾಲ್ತುಳಿತ : 7 ಮಂದಿ ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ

ಗ್ರಾಮದೇವತೆಯ ಜಾತ್ರೆ ಮೆರವಣಿಗೆ ವೇಳೆ ವದಂತಿಗಳಿಂದ ನೂಕುನುಗ್ಗಲು ಉಂಟಾಗಿ ದುರಂತ ಪಣಜಿ: ಉತ್ತರ ಗೋವಾದ ಶಿರಗಾವ್‌ ದೇವಸ್ಥಾನದ ಜಾತ್ರಾ ಮಹೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 7 ಜನರು ದುರ್ಮರಣ ಹೊಂದಿದ್ದು, 50ಕ್ಕೂ ಅಧಿಕ ಜನರಿಗೆ ಗಾಯಂಡಿದ್ದಾರೆ. ಘಟನೆ ಕುರಿತು ಸಿಎಂ ಪ್ರಮೋದ್ ಸಾವಂತ್ ಆಘಾತ ವ್ಯಕ್ತಪಡಿಸಿದ್ದು, ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗೋವಾದ ಶಿರ್ಗಾಂವ್ ಗ್ರಾಮದಲ್ಲಿ ದೇವಿ ಲೈರೈ ಜಾತ್ರೆಯಲ್ಲಿ ಶನಿವಾರ ಮುಂಜಾನೆ ಈ ಘಟನೆ ಸಂಭವಿಸಿದೆ.

ಜಾತ್ರೆಯಲ್ಲಿ ಭೀಕರ ಕಾಲ್ತುಳಿತ : 7 ಮಂದಿ ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ Read More »

ಆಸ್ಪತ್ರೆಯಲ್ಲಿ ಬೆಂಕಿ ಅವಘಡ : ಉಸಿರುಕಟ್ಟಿ ಐವರು ರೋಗಿಗಳು ಸಾವು

ಕೋಝಿಕ್ಕೋಡ್: ಕೇರಳದ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿನಲ್ಲಿ ಶುಕ್ರವಾರ ರಾತ್ರಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹತ್ತಿಕೊಂಡು ದಟ್ಟ ಹೊಗೆ ವ್ಯಾಪಿಸಿದ್ದು, ಘಟನೆಯಲ್ಲಿ ಕನಿಷ್ಠ ಐವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಉಸಿರುಗಟ್ಟಿದ ಪರಿಣಾಮ ಸಾವುಗಳು ಸಂಭವಿಸಿವೆ. ಅಗ್ನಿಶಾಮಕ ಪಡೆಯ ನೆರವಿನಿಂದ ಪರಿಸ್ಥಿತಿಯನ್ನು ಕ್ಷಿಪ್ರವಾಗಿ ಹತೋಟಿಗೆ ತರಲಾಗಿದ್ದು, 200ಕ್ಕೂ ಅಧಿಕ ರೋಗಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಆಸ್ಪತ್ರೆಯ ಎಮರ್ಜೆನ್ಸಿ ವಿಭಾಗದಲ್ಲಿ ಅಗ್ನಿಅವಘಡ ಸಂಭವಿಸಿದೆ ಎನ್ನಲಾಗಿದೆ.

ಆಸ್ಪತ್ರೆಯಲ್ಲಿ ಬೆಂಕಿ ಅವಘಡ : ಉಸಿರುಕಟ್ಟಿ ಐವರು ರೋಗಿಗಳು ಸಾವು Read More »

error: Content is protected !!
Scroll to Top