ಅಪರಾಧ

ಚಂದ್ರದ್ರೋಣ ಪರ್ವತಕ್ಕೆ ಟ್ರೆಕ್ಕಿಂಗ್‌ಗೆ ಬಂದ ಕೇರಳದ ಬಾಲಕಿ ನಾಪತ್ತೆ

40 ಮಂದಿಯ ತಂಡದೊಂದಿಗಿದ್ದ ಬಾಲಕಿ ನಿಗೂಢವಾಗಿ ಕಣ್ಮರೆ ಚಿಕ್ಕಮಗಳೂರು: ಕೊಡಗಿನಲ್ಲಿ ಚಾರಣಕ್ಕೆಂದು ತೆರಳಿದ್ದ ಶರಣ್ಯ ನಾಪತ್ತೆಯಾಗಿ ವಾಪಸಾದ ಬೆನ್ನಲ್ಲೇ ಅದೇ ರೀತಿಯ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಜಿಲ್ಲೆಯ ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಅಪ್ರಾಪ್ತ ಬಾಲಕಿ ಶ್ರೀನಂದಾ ನಿನ್ನೆ ಸಂಜೆ ಸುಮಾರು 6 ಗಂಟೆಯಿಂದ ಕಾಣೆಯಾಗಿದ್ದಾಳೆ. ಕೇರಳದ ಪಾಲಕ್ಕಾಡ್ ಮೂಲದ 14 ವರ್ಷದ ಈ ಬಾಲಕಿ ಪೋಷಕರು ಸೇರಿದಂತೆ ಸುಮಾರು 40 ಜನರ ತಂಡದೊಂದಿಗೆ ಪ್ರವಾಸಕ್ಕೆ ಬಂದಿದ್ದಳು. ಈ ವೇಳೆ ಚಂದ್ರದ್ರೋಣ ಪರ್ವತ ಸರಣಿಯ […]

ಚಂದ್ರದ್ರೋಣ ಪರ್ವತಕ್ಕೆ ಟ್ರೆಕ್ಕಿಂಗ್‌ಗೆ ಬಂದ ಕೇರಳದ ಬಾಲಕಿ ನಾಪತ್ತೆ Read More »

ಸಹಾಯಕ ಔಷಧ ನಿಯಂತ್ರಕನ ಬಳಿ 3.37 ಕೋಟಿ ರೂ. ಅಕ್ರಮ ಸಂಪತ್ತು

ಲೋಕಾಯುಕ್ತ ದಾಳಿಯಲ್ಲಿ ಪತ್ತೆಯಾಯಿತು ಅಪಾರ ಪ್ರಮಾಣದ ಆಸ್ತಿ ಮಂಗಳೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದಿಸಿದ ಆರೋಪದ ಮೇಲೆ ಮಂಗಳೂರಿನ ಸಹಾಯಕ ಔಷಧ ನಿಯಂತ್ರಕ ಬಾಬು ಬಿ.ಎನ್‌ ಮನೆ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ದಾಳಿ ನಡೆಸಿದ್ದಾರೆ. ಪೊಲೀಸ್‌ ನಿರೀಕ್ಷಕ ಚಂದ್ರಶೇಖರ್‌ ಕೆ.ಎನ್‌ ನೀಡಿದ ಸೋರ್ಸ್‌ ವರದಿ ಆಧರಿಸಿ ಏಪ್ರಿಲ್‌ 8ರಂದು ಮಂಗೂರು ಲೋಕಾಯುಕ್ತ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಲೋಕಾಯುಕ್ತ ಎಸ್ಪಿ ಬಿ.ಪಿ ದಿನೇಶ್‌ ಕುಮಾರ್‌ ಮಾರ್ಗದರ್ಶದಲ್ಲಿ ಡಿವೈಎಸ್ಪಿಗಳಾದ ಡಾ.ಗಾನ ಪಿ.ಕುಮಾರ್‌, ಸುರೇಶ್‌ ಕುಮಾರ್‌ ಮತ್ತು ತಂಡದ 9

ಸಹಾಯಕ ಔಷಧ ನಿಯಂತ್ರಕನ ಬಳಿ 3.37 ಕೋಟಿ ರೂ. ಅಕ್ರಮ ಸಂಪತ್ತು Read More »

ಬೆಳ್ತಂಗಡಿ : ಮನೆಯಿಂದ 19 ಲ.ರೂ. ಚಿನ್ನಾಭರಣ, ನಗದು ಕಳವು

ಮನೆಯವರು ಜಾತ್ರೆಗೆ ಹೋದಾಗ ಹೊಂಚು ಹಾಕಿ ಕಳ್ಳತನ ಬೆಳ್ತಂಗಡಿ : ಮಚ್ಚಿನ ಗ್ರಾಮದಲ್ಲಿ ಮನೆಯ ಬೀಗ ಒಡೆದು ಒಳನುಗ್ಗಿದ ಕಳ್ಳರು ಸುಮಾರು 13 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 6 ಲಕ್ಷ ನಗದು ಹಣ ಕಳ್ಳತನ ಮಾಡಿರುವ ಘಟನೆ ನಡೆದಿದ್ದು ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮಚ್ಚಿನ ಗ್ರಾಮದ ಬಳ್ಳಮಂಜ ಹೊಸಮನೆ ನಿವಾಸಿ ಡಿ. ಮುರಳಿ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಏ.5ರಂದು ಬಳ್ಳಮಂಜ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಜಾತ್ರಾ ಕಾರ್ಯಕ್ರಮಕ್ಕೆ ಮನೆಯವರೆಲ್ಲರೂ ಮನೆಗೆ ಬೀಗ ಹಾಕಿ ತೆರಳಿದ್ದರು.

ಬೆಳ್ತಂಗಡಿ : ಮನೆಯಿಂದ 19 ಲ.ರೂ. ಚಿನ್ನಾಭರಣ, ನಗದು ಕಳವು Read More »

ಕಡಬ: ಮಹಿಳೆ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ

ಕಡಬ: ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಆರೋಪದ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮಹಿಳೆ ಕಳೆದ ಸುಮಾರು 3 ವರ್ಷಗಳಿಂದ ಗಂಡನಿಂದ ಪ್ರತ್ಯೇಕವಾಗಿ ಮಗಳೊಂದಿಗೆ ವಾಸವಾಗಿದ್ದರು. ಈ ನಡುವೆ ಆರೋಪಿ ಪ್ರಭಾಕರ ಪಿ. ಅವರೊಂದಿಗೆ ಪರಿಚಯವಾಗಿ ಆತ್ಮೀಯತೆ ಬೆಳೆದಿತ್ತು ಎನ್ನಲಾಗಿದೆ. ಏ.3ರಂದು ರಂದು ಮಹಿಳೆ ಆರೋಪಿಯೊಂದಿಗೆ ಮಾತನಾಡಲು ಅವರ ಮನೆಗೆ ತೆರಳಿದ ವೇಳೆ ಆರೋಪಿ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ

ಕಡಬ: ಮಹಿಳೆ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ Read More »

ಬಂಟ್ವಾಳ : ಸ್ಕೂಟರ್‌ ಕಳ್ಳರ ಬಂಧನ

ಬಂಟ್ವಾಳ : ದ್ವಿಚಕ್ರ ವಾಹನ ಕಳ್ಳತನ ಪ್ರಕರಣವನ್ನು ಭೇದಿಸಿದ ಬಂಟ್ವಾಳ ಪಟ್ಟಣ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಕದ್ದ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಮಾರ್ಚ್ 21ರಂದು ಪರ್ಲಿಯಾದಲ್ಲಿರುವ ವಸತಿಗೃಹದ ಶೆಡ್‌ನಲ್ಲಿ ನಿಲ್ಲಿಸಿದ್ದ ಸ್ಕೂಟರನ್ನು ಕಳವು ಮಾಡಲಾಗಿತ್ತು. ಬಂಟ್ವಾಳದ ಸಜೀಪ್ ಮುನ್ನೂರು ನಿವಾಸಿ ಹಸನ್ ಬಾವ (55) ಮತ್ತು ಬಂಟ್ವಾಳದ ಬಿಮೂಡ ನಿವಾಸಿ ಮೊಹಮ್ಮದ್ ಇರ್ಷಾದ್ (37) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಕದ್ದ ಸ್ಕೂಟರ್ ಸುಮಾರು 50,000 ರೂ. ಮೌಲ್ಯದ್ದಾಗಿದ್ದು, ಆರೋಪಿಗಳಿಂದ ಅದನ್ನು ವಶಪಡಿಸಿಕೊಳ್ಳಲಾಗಿದೆ.

ಬಂಟ್ವಾಳ : ಸ್ಕೂಟರ್‌ ಕಳ್ಳರ ಬಂಧನ Read More »

9 ಪೊಲೀಸರಿಗೆ ಮರಣ ದಂಡನೆ : ದೇಶದ ಇತಿಹಾಸದಲ್ಲೇ ಅತ್ಯಂತ ಮಹತ್ವದ ತೀರ್ಪು

ತಂದೆ-ಮಗನ ಲಾಕಪ್‌ ಡೆತ್‌ ಪ್ರಕರಣಕ್ಕೆ ಸಂಬಂಧಿಸಿ ನೀಡಿದ ತೀರ್ಪು ಚೆನ್ನೈ: ತಂದೆ ಹಾಗೂ ಮಗನಿಗೆ ಪೊಲೀಸ್‌ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿ ಅವರ ಸಾವಿಗೆಕಾರಣರಾಗಿದ್ದ ತಮಿಳುನಾಡಿನ 9 ಪೊಲೀಸರಿಗೆ ಮಧುರೈ ಜಿಲ್ಲಾ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ನ್ಯಾಯಾಧೀಶರು ಈ ಪ್ರಕರಣವನ್ನು ಅಪರೂಪದಲ್ಲಿ ಅಪರೂಪ ಎಂದು ಉಲ್ಲೇಖಿಸಿದ್ದಾರೆ. ದೇಶಾದ್ಯಂತ ಈ ತೀರು ಭಾರಿ ಚರ್ಚೆಗೆ ಕಾರಣವಾಗಿದೆ. ಪೊಲೀಸರು ಜನಸಾಮಾನ್ಯರ ಮೇಲೆ ಅಧಿಕಾರದ ದರ್ಪದಲ್ಲಿ ಎಸಗುವ ಕ್ರೌರ್ಯ ಎಷ್ಟು ಭೀಕರವಾಗಿರುತ್ತದೆ ಎಂಬುದಕ್ಕೆ ಈ ಪ್ರಕರಣ ಸಾಕ್ಷಿಯಾಗಿದೆ. ನ್ಯಾಯಾಲಯದ ಈ ತೀರ್ಪು ಭಾರತದ

9 ಪೊಲೀಸರಿಗೆ ಮರಣ ದಂಡನೆ : ದೇಶದ ಇತಿಹಾಸದಲ್ಲೇ ಅತ್ಯಂತ ಮಹತ್ವದ ತೀರ್ಪು Read More »

ಧರ್ಮಸ್ಥಳದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ನೇತ್ರಾವತಿ ಬಂಗ್ಲೆಗುಡ್ಡೆಯಲ್ಲಿ ಕಂಡು ಬಂದ ಪುರುಷನ ಮೃತದೇಹ ಬೆಳ್ತಂಗಡಿ: ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪ ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಇಂದು ಮಧ್ಯಾಹ್ನ ಪತ್ತೆಯಾಗಿದೆ. ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಇಂದು ಮಧ್ಯಾಹ್ನ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮೃತದೇಹವನ್ನು ಮಹಜರು ನಡೆಸಿ ಮೃತದೇಹವನ್ನು ಮಹಜರು ನಡೆಸಿ ಮಂಗಳೂರು ಆಸ್ಪತ್ರೆಗೆ ಸಾಗಿಸಿದ್ದಾರೆ. ಮೇಲ್ನೋಟಕ್ಕೆ ಅಪರಿಚಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ

ಧರ್ಮಸ್ಥಳದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ Read More »

ಸಂತ್ರಸ್ತೆಯನ್ನು ಬ್ಲ್ಯಾಕ್‌ಮೇಲ್‌ ಮಾಡಿ ಹಣ ಪೀಕಿದ್ದ ಸಮೀರ್‌

ಲವ್‌ ಜಿಹಾದ್‌ ಸಂತ್ರಸ್ತೆಯಿಂದಲೇ ಮೋಜುಮಸ್ತಿಗೆ ಹಣ ವಸೂಲಿ ಮಾಡುತ್ತಿದ್ದ ಕಿರಾತಕ ಹುಬ್ಬಳ್ಳಿ: ಲವ್ ಜಿಹಾದ್ ಪ್ರಕರಣದ ಆರೋಪಿ ಜಿಮ್ ಟ್ರೈನರ್‌ ಸಮೀರ್ ಅತ್ಯಾಚಾರದ ಬಳಿಕ ಬೆದರಿಕೆಯೊಡ್ಡಿ 70 ಸಾವಿರ ರೂ.ಗೂ ಅಧಿಕ ಹಣ ಪಡೆದಿರುವುದು ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದು, ಸಂತ್ರಸ್ತೆಗೆ ಬೆದರಿಕೆಯೊಡ್ಡಿ ಅತ್ಯಾಚಾರ ಮಾಡಿದ ಬಳಿಕ ಹಣಕ್ಕಾಗಿ ಬೇಡಿಕೆಯಿಡುತ್ತಿದ್ದ ಎನ್ನುವುದು ಗೊತ್ತಾಗಿದೆ. ಹಲವು ಬಾರಿ ಅತ್ಯಾಚಾರದ ಬಳಿಕ ಹಣವನ್ನು ಪಡೆದಿದ್ದಾನೆ. 5,000 ರೂ, 20,000 ರೂ, 25,000 ರೂ.ಯಂತೆ 70,000

ಸಂತ್ರಸ್ತೆಯನ್ನು ಬ್ಲ್ಯಾಕ್‌ಮೇಲ್‌ ಮಾಡಿ ಹಣ ಪೀಕಿದ್ದ ಸಮೀರ್‌ Read More »

ಹುಬ್ಬಳ್ಳಿ ಲವ್‌ ಜಿಹಾದ್‌ ಪ್ರಕರಣ : ಇನ್ನಷ್ಟು ವಿಡಿಯೋಗಳು ಬಹಿರಂಗ

ಜಿಮ್‌ ಟ್ರೈನಿಂಗ್‌ ನೆಪದಲ್ಲಿ ಹರಡಿದ ಜಿಹಾದ್‌ನ ಕಬಂಧ ಬಾಹು ಬೆಂಗಳೂರು : ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ವಿಡಿಯೋ ಬಹಿರಂಗವಾಗುತ್ತಿದೆ. ಇದೀಗ ಮತ್ತೆರಡು ವಿಡಿಯೋಗಳನ್ನು ಯುವತಿ ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ಕಾಂಗ್ರೆಸ್​​​​ ಮುಖಂಡನ ಕೈವಾಡ ಇದೆ ಎಂದು ಆರೋಪ ಮಾಡಲಾಗಿದೆ. ಹುಬ್ಬಳ್ಳಿಯ ಕೇಶ್ವಾಪುರದಲ್ಲಿ ದಾಖಲಾಗಿರುವ ಎರಡನೇ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಯು ಮತ್ತೊಮ್ಮೆ ವಿಡಿಯೋ ಮೂಲಕ ಸ್ಪಷ್ಟೀಕರಣ ನೀಡಿ ನಿನ್ನೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ವಿಡಿಯೋಗಳ ಸತ್ಯಾಸತ್ಯತೆಯನ್ನು ಅವರು ಬಿಚ್ಚಿಟ್ಟಿದ್ದಾರೆ.

ಹುಬ್ಬಳ್ಳಿ ಲವ್‌ ಜಿಹಾದ್‌ ಪ್ರಕರಣ : ಇನ್ನಷ್ಟು ವಿಡಿಯೋಗಳು ಬಹಿರಂಗ Read More »

ಶ್ವೇತಭವನದ ಬಳಿ ಮತ್ತೊಮ್ಮೆ ಗುಂಡಿನ ದಾಳಿ

ಟ್ರಂಪ್‌ ಇರುವಾಗಲೇ ದಾಳಿ ನಡೆಸಿ ತಪ್ಪಿಸಿಕೊಂಡ ಬಂದೂಕುಧಾರಿ ವಾಷಿಂಗ್ಟನ್: ವಾಷಿಂಗ್ಟನ್ ಡಿಸಿಯಲ್ಲಿರುವ ಶ್ವೇತಭವನದ ಬಳಿ ಮತ್ತೊಮ್ಮೆ ಗುಂಡಿನ ಚಕಮಕಿ ನಡೆದಿದೆ. ಆ ಸಮಯದಲ್ಲಿ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಶ್ವೇತಭವನದೊಳಗೆ ಇದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಘಟನೆಯ ಬಳಿಕ ಭದ್ರತಾ ಸಂಸ್ಥೆಗಳನ್ನು ಹೆಚ್ಚಿನ ಎಚ್ಚರಿಕೆ ನೀಡಲಾಗಿದೆ. ಭಾನುವಾರ ಮುಂಜಾನೆ ಶ್ವೇತಭವನದ ಎದುರಿನ ಲಫಯೆಟ್ಟೆ ಪಾರ್ಕ್ ಬಳಿ ಗುಂಡಿನ ದಾಳಿ ನಡೆದಿದೆ. ಗುಂಡಿನ ದಾಳಿಯಲ್ಲಿ ಯಾರೂ ಗಾಯಗೊಂಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂದೂಕುಧಾರಿ ತಲೆಮರೆಸಿಕೊಂಡಿದ್ದಾನೆ ಮತ್ತು ಪ್ರಸ್ತುತ ಆತನಿಗಾಗಿ

ಶ್ವೇತಭವನದ ಬಳಿ ಮತ್ತೊಮ್ಮೆ ಗುಂಡಿನ ದಾಳಿ Read More »

error: Content is protected !!
Scroll to Top