ಅಪರಾಧ

ಇನ್‌ಸ್ಪೆಕ್ಟರ್‌ ಸಂದೇಶ್‌ ಮೊಬೈಲ್‌, ಬ್ಯಾಂಕ್‌ ಸ್ಟೇಟ್‌ಮೆಂಟ್‌ ಪರಿಶೀಲಿಸಿ : ಸಂತ್ರಸ್ತ ಮಹಿಳೆ ಒತ್ತಾಯ

ಮಂಗಳೂರು: ಮೂಡುಬಿದಿರೆ ಪೊಲೀಸ್ ಇನ್‌ಸ್ಪೆಕ್ಟರ್ ಸಂದೇಶ್ ಅವರು ನನಗೆ, ನನ್ನ ಅಕ್ಕನ ಮಗ ಹಾಗೂ ನನ್ನ ಮಗನಿಗೆ ಮಾನಸಿಕ ಹಿಂಸೆ, ಜೀವಹಾನಿ ಬೆದರಿಕೆ, ಮಾನಹಾನಿ ಹಾಗೂ ಲೈಂಗಿಕ ನೀಡಿದ್ದಾರೆ. ಸದ್ಯ ಅಮಾನತ್ತಿನಲ್ಲಿರುವ ಇನ್‌ಸ್ಪೆಕ್ಟರ್ ಸಂದೇಶ್ ಅವರನ್ನು ಬಂಧಿಸಿ ತನಿಖೆಗೆ ಒಳಪಡಿಸಬೇಕು ಎಂದು ಕಾರ್ಕಳದ ಸುಮತಿ ನಾಯಕ್ ಒತ್ತಾಯಿಸಿದ್ದಾರೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಹೋದರಿ ಪ್ರಫುಲ್ಲ ಅವರ ಸಹಕಾರದಿಂದ ನಮ್ಮ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ. ಇನ್‌ಸ್ಪೆಕ್ಟರ್‌ ಸಂದೇಶ್‌ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ಅವರ ಮೊಬೈಲ್‌, […]

ಇನ್‌ಸ್ಪೆಕ್ಟರ್‌ ಸಂದೇಶ್‌ ಮೊಬೈಲ್‌, ಬ್ಯಾಂಕ್‌ ಸ್ಟೇಟ್‌ಮೆಂಟ್‌ ಪರಿಶೀಲಿಸಿ : ಸಂತ್ರಸ್ತ ಮಹಿಳೆ ಒತ್ತಾಯ Read More »

ನೀರಾನೆ ದಾಳಿಯಲ್ಲಿ ಗಾಯಗೊಂಡ ಯುವ ಪಶು ವೈದ್ಯೆ ಸಾವು

ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ಸಂಭವಿಸಿದ ದುರ್ಘಟನೆ ಶಿವಮೊಗ್ಗ: ಇಲ್ಲಿನ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವ ಪಶು ವೈದ್ಯೆಯೊಬ್ಬರು ನೀರಾನೆ ದಾಳಿಯಿಂದ ಮೃತಪಟ್ಟಿರುವ ದಾರುಣ ಘಟನೆ ಸಂಭವಿಸಿದೆ. ಮೃತರನ್ನು ಬೆಂಗಳೂರು ಮೂಲದ ಡಾ.ಸಮೀಕ್ಷಾ ರೆಡ್ಡಿ (27) ಎಂದು ಗುರುತಿಸಲಾಗಿದೆ. ಸಮೀಕ್ಷಾ ಸಫಾರಿಯಲ್ಲಿ ಪಶುವೈದ್ಯ ಅಧಿಕಾರಿಯಾಗಿ ಆಯ್ಕೆಯಾಗಿ ತರಬೇತಿ ಪಡೆಯುತ್ತಿದ್ದರು. ಗುರುವಾರ ರಾತ್ರಿ 10.30ರ ಸುಮಾರಿಗೆ ಅವರು ಸನ್ ಕಾನರ್ ಹಕ್ಕಿಯ ಚಿಕಿತ್ಸೆಗಾಗಿ ಮೃಗಾಲಯದ ಆಸ್ಪತ್ರೆಗೆ ತೆರಳಿದ್ದರು. ಬಳಿಕ ರಾತ್ರಿ 11.45ರ ಸುಮಾರಿಗೆ ಗರ್ಭಿಣಿ

ನೀರಾನೆ ದಾಳಿಯಲ್ಲಿ ಗಾಯಗೊಂಡ ಯುವ ಪಶು ವೈದ್ಯೆ ಸಾವು Read More »

ದಾಂಪತ್ಯ ಕಲಹ: ಪತ್ನಿಯನ್ನು ಕೊಲೆಗೈದು ‌ಪತಿ ಆತ್ಮಹತ್ಯೆಗೆ ಯತ್ನ

ಪುತ್ತೂರು: ಗಂಡ ಹೆಂಡಿರ ನಡುವಿನ ಜಗಳ ಕೊನೆಗೆ ದುರಂತ ಅಂತ್ಯ ಕಂಡ ಘಟನೆ ಅರಿಯಡ್ಕ ಗ್ರಾಮದ ಕಟ್ಟಾತ್ತಾರಿನ ಗೋಳ್ತಿಲ‌ದಲ್ಲಿ ನಡೆದಿದೆ. ದಂಪತಿ ನಡುವಿನ ಜಗಳದಲ್ಲಿ ಗಂಡ ಹೆಂಡತಿಯನ್ನು ಹತ್ಯೆ ಮಾಡಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದಾನೆ. ಆತ್ಮಹತ್ಯೆಗೆ ಯತ್ನಿಸಿ ಗಂಭೀರವಾಗಿರುವ ಪತಿಯನ್ನು ‌ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಪುತ್ತೂರು ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ‌ತಿಳಿದು ಬರಬೇಕಿದೆ.

ದಾಂಪತ್ಯ ಕಲಹ: ಪತ್ನಿಯನ್ನು ಕೊಲೆಗೈದು ‌ಪತಿ ಆತ್ಮಹತ್ಯೆಗೆ ಯತ್ನ Read More »

ಶೀಲ ಶಂಕಿಸಿ ಭಾವಿಪತ್ನಿಯನ್ನು ಬರ್ಬರವಾಗಿ ಸಾಯಿಸಿದ ಯುವಕ

ಬೆಂಗಳೂರು: ತನ್ನನ್ನು ಮದುವೆಯಾಗಬೇಕಿದ್ದ ಯುವತಿಯ ಎದೆ ಭಾಗ ಕತ್ತರಿಸಿ, ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಭಾವಿ ಪತಿಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ನಡೆದಿದೆ. ಡಿಜೆ ಹಳ್ಳಿಯ ಈರುಳ್ಳಿ ಮಾರ್ಕೆಟ್​​ನಲ್ಲಿ ಕೆಲಸ ಮಾಡ್ತಿದ್ದ ಸೈಯದ್ ಶಬೀಲ್ ಈ ಕೃತ್ಯ ಎಸಗಿದ್ದಾನೆ. ಕೋಲಾರ ಮೂಲದ ಅಪ್ರಾಪ್ತೆ ಜೊತೆ ಪ್ರೀತಿಯಲ್ಲಿ ಬಿದ್ದಿದ್ದ ಸೈಯದ್ ಆಕೆ ಜೊತೆ ಸುತ್ತಾಡಿಕೊಂಡಿದ್ದನು. ಈ ವಿಷಯ ತಿಳಿದು ಪೋಷಕರು ಇಬ್ಬರಿಗೂ 2025 ಜೂನ್‌ನಲ್ಲಿ ಎಂಗೇಜ್ಮೆಂಟ್ ಮಾಡಿದ್ದರು. ನಿಶ್ಚಿತಾರ್ಥವಾದ ನಂತರ ಸೈಯದ್‌ಗೆ ಭಾವಿಪತ್ನಿ ಮೇಲೆ

ಶೀಲ ಶಂಕಿಸಿ ಭಾವಿಪತ್ನಿಯನ್ನು ಬರ್ಬರವಾಗಿ ಸಾಯಿಸಿದ ಯುವಕ Read More »

ಬೆಳ್ತಂಗಡಿ : ಪ್ರಚೋದನಕಾರಿ ಪೋಸ್ಟ್‌ ಆರೋಪದಲ್ಲಿ ಸೆರೆಯಾಗಿದ್ದ ಯುವತಿಗೆ ಮಧ್ಯರಾತ್ರಿ ಜಾಮೀನು

ಸೋಷಿಯಲ್‌ ಮೀಡಿಯಾದಲ್ಲಿ ಕೋಮು ಪ್ರಚೋದನೆ ಪೋಸ್ಟ್‌ ಹಾಕಿದ ಆರೋಪದಲ್ಲಿ ಬಂಧನ ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಹಾಕಿದ ಆರೋಪದಲ್ಲಿ ಬಂಧಿತಳಾಗಿದ್ದ ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಯುವತಿಗೆ ಮಧ್ಯಂತರ ಜಾಮೀನು ಲಭಿಸಿದ್ದು ಆಕೆ ಬಿಡುಗಡೆಯಾಗಿದ್ದಾಳೆ. ಜಾಮೀನು ಪಡೆದ ಬಳಿಕ ಆಕೆಯೊಂದಿಗಿನ ಫೊಟೋವನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿರುವ ಶಾಸಕ ಹರೀಶ್ ಪೂಂಜ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ರಾಜಕೀಯದ ವಿರುದ್ಧ ಗೆಲುವು ಲಭಿಸಿದೆ ಎಂದು ಬರೆದಿದ್ದಾರೆಶಾಸಕರ ಫೇಸ್‌ಬುಕ್ ಪೋಸ್ಟ್ ವೈರಲ್‌ ಆಗಿದೆ. ಭಯೋತ್ಪಾದನಾ ವಿರೋಧಿ ಹಿಂದೂ ಪರವಾದ ಪೋಸ್ಟ್

ಬೆಳ್ತಂಗಡಿ : ಪ್ರಚೋದನಕಾರಿ ಪೋಸ್ಟ್‌ ಆರೋಪದಲ್ಲಿ ಸೆರೆಯಾಗಿದ್ದ ಯುವತಿಗೆ ಮಧ್ಯರಾತ್ರಿ ಜಾಮೀನು Read More »

ಯುದ್ಧದ ನಡುವೆಯೇ ಮೂವರು ಯುವಕರನ್ನು ಸಾರ್ವಜನಿಕವಾಗಿ ಗಲ್ಲೆಗೇರಿಸಿದ ಇರಾನ್‌ ಸರ್ಕಾರ

ಸರ್ಕಾರಿ ವಿರುದ್ಧ ಪ್ರತಿಭಟನೆಯಲ್ಲಿ ಭಾಗವಹಿಸಿದ ಆರೋಪದಲ್ಲಿ ಸೆರೆಯಾಗಿದ್ದ ಯುವಕರು ಟೆಹ್ರಾನ್‌ : ಘನಘೋರ ಸಮರದ ನಡುವೆಯೇ ಇರಾನ್‌ ಮೂವರು ಹೋರಾಟಗಾರರನ್ನು ಗುರುವಾರ ಸಾರ್ವಜನಿಕವಾಗಿ ಗಲ್ಲೆಗೇರಿಸಿದೆ. 19ರ ಹರೆಯದ ಕುಸ್ತಿ ಚಾಂಪಿಯನ್‌ ಸಲೇಹ್‌ ಮೊಹಮ್ಮದಿ, ಸಯೀದ್‌ ದಾವೂದಿ ಮತ್ತು ಮೆಹ್ದಿ ಘಸೇಮಿ ಎಂಬವರನ್ನು ಗಲ್ಲಿಗೇರಿಸಲಾಗಿದೆ. ಇವರು ಕಳೆದ ಜನವರಿ 8ರಂದು ನಡೆದ ಸರ್ಕಾರಿ ವಿರುದ್ಧದ ಪ್ರತಿಭಟನೆ ವೇಳೆ ಇಬ್ಬರು ಪೊಲೀಸರನ್ನು ಕೊಂದ ಆರೋಪ ಹೊತ್ತಿದ್ದರು. ಇರಾನ್‌ನ ಖೋಮ್‌ ನಗರದಲ್ಲಿ ಸಾರ್ವಜನಿಕವಾಗಿ ಈ ಮೂವರು ಯುವಕರನ್ನು ಗಲ್ಲೆಗೇರಿಸಲಾಗಿದೆ ಎಂದು ವರದಿಗಳು

ಯುದ್ಧದ ನಡುವೆಯೇ ಮೂವರು ಯುವಕರನ್ನು ಸಾರ್ವಜನಿಕವಾಗಿ ಗಲ್ಲೆಗೇರಿಸಿದ ಇರಾನ್‌ ಸರ್ಕಾರ Read More »

ತಾಯಿ, ಸಹೋದರಿಯ ಬಗ್ಗೆ ಅವಾಚ್ಯವಾಗಿ ಮಾತನಾಡಿದ ಸ್ನೇಹಿತನನ್ನು ಹತ್ಯೆಗೈದ ಯುವಕ ಪೊಲೀಸ್ ವಶಕ್ಕೆ

ಬೆಂಗಳೂರು: ತನ್ನ ತಾಯಿ ಮತ್ತು ಸಹೋದರಿಗೆ ‌ಅವಾಚ್ಯ ಶಬ್ಧಗಳಿಂದ ನಿಂದಿಸಿದ ಸ್ನೇಹಿತನನ್ನು ಯುವಕನೊಬ್ಬ ಹತ್ಯೆ ಮಾಡಿದ ಘಟನೆ ಆವಲಹಳ್ಳಿಯಲ್ಲಿ ನಡೆದಿದೆ. ಹತ್ಯೆಯಾದ ಯುವಕನನ್ನು ಬಿಹಾರ ಮೂಲದ ಕುನಾಲ್ (22) ಎಂದು ಗುರುತಿಸಲಾಗಿದೆ. ಕೊಲೆಗಾರನನ್ನು ನಸ್ರುಲ್ಲಾ(24) ಎಂದು ಗುರುತಿಸಲಾಗಿದೆ. ಕ್ಷುಲ್ಲಕ ಕಾರಣಕ್ಕಾಗಿ ಹದಿನೈದು ದಿನಗಳ ಹಿಂದೆ ಇವರಿಬ್ಬರ ನಡುವೆ ಜಗಳ ನಡೆದಿತ್ತು.‌ ಈ ಸಂದರ್ಭದಲ್ಲಿ ನಸ್ರುಲ್ಲಾನ ತಾಯಿ ಮತ್ತು ಸಹೋದರಿಯ ಬಗ್ಗೆ ಕುನಾಲ್ ಕೆಟ್ಟದಾಗಿ ಮಾತನಾಡಿದ್ದು, ಇದರಿಂದ ಆಕ್ರೋಶಗೊಂಡಿದ್ದ ನಸ್ರುಲ್ಲಾ ಮದ್ಯದ ಅಮಲಿನಲ್ಲಿ ಕುನಾಲ್‌ನ ರೂಮ್‌ಗೆ ನುಗ್ಗಿ ಆತನ

ತಾಯಿ, ಸಹೋದರಿಯ ಬಗ್ಗೆ ಅವಾಚ್ಯವಾಗಿ ಮಾತನಾಡಿದ ಸ್ನೇಹಿತನನ್ನು ಹತ್ಯೆಗೈದ ಯುವಕ ಪೊಲೀಸ್ ವಶಕ್ಕೆ Read More »

ಜಾತ್ರೆಯಲ್ಲಿ ಅನ್ಯಕೋಮಿನ ಬಾಲಕನ ಮೇಲೆ ಹಲ್ಲೆ : ಕೇಸ್‌ ದಾಖಲು

ಕಾಲೇಜಿನ ಗೆಳೆಯರೊಂದಿಗೆ ಜಾತ್ರೆಗೆ ಬಂದಿದ್ದ ಬಾಲಕ ಬೆಳ್ತಂಗಡಿ : ಉಜಿರೆಯ ಜನಾರ್ದನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಗೆಳೆಯರೊಂದಿಗೆ ಬಂದಿದ್ದ ಅನ್ಯಕೋಮಿನ 17 ವಯಸ್ಸಿನ ಬಾಲಕನ ಮೇಲೆ ಬಜರಂಗದಳದ ಕಾರ್ಯಕರ್ತರು ಎನ್ನಲಾದ ತಂಡವೊಂದು ಅಮಾನುಷವಾಗಿ ಹಲ್ಲೆ ನಡೆಸಿ ಅಪಹರಿಸಿ ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಬಗ್ಗೆ ಬಾಲಕನ ತಂದೆ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಉಜಿರೆಯ ಖಾಸಗಿ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿರುವ ಬಾಲಕ ಮಾ.11ರಂದು ತನ್ನ ಸ್ನೇಹಿತರೊಂದಿಗೆ ಉಜಿರೆ

ಜಾತ್ರೆಯಲ್ಲಿ ಅನ್ಯಕೋಮಿನ ಬಾಲಕನ ಮೇಲೆ ಹಲ್ಲೆ : ಕೇಸ್‌ ದಾಖಲು Read More »

ಕಡಬ : ತಲೆನೋವಿನ ಮಾತ್ರೆ ಸೇವಿಸಿ ಬಾಲಕ ಸಾವು

ಕಡಬ: ತಲೆನೋವಿನಿಂದ ಬಳಲುತ್ತಿದ್ದ 10 ವರ್ಷದ ಬಾಲಕನೊಬ್ಬ ಔಷಧಿ ಸೇವಿಸಿದ ಬಳಿಕ ಮೃತಪಟ್ಟ ದುರ್ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಡಬ ತಾಲೂಕಿನ ರಾಮಕುಂಜ ನಿವಾಸಿ ಸಂಜೀವ ಪೂಜಾರಿ (50) ಅವರ ಪುತ್ರನಿಗೆ ಪದೇಪದೆ ತಲೆನೋವು ಕಾಣಿಸಿಕೊಳ್ಳುತ್ತಿತ್ತು ಎನ್ನಲಾಗಿದೆ. ಮಾರ್ಚ್ 18ರಂದು ಸಂಜೆ ಬಾಲಕ ತಲೆನೋವಿಗಾಗಿ ಮನೆಯಲ್ಲಿದ್ದ ಔಷಧಿ ಸೇವಿಸಿದ್ದಾನೆ. ಬಳಿಕ ಅವನು ಮನೆಯಲ್ಲಿ ಅಸ್ವಸ್ಥಗೊಂಡು ಹೊರಳಾಡುತ್ತಿದ್ದಾನೆಂದು ತಾಯಿ ಮಾಹಿತಿ ನೀಡಿದ್ದಾರೆ. ತಕ್ಷಣ ಮನೆಗೆ ಬಂದ ತಂದೆ, ಮಗನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ

ಕಡಬ : ತಲೆನೋವಿನ ಮಾತ್ರೆ ಸೇವಿಸಿ ಬಾಲಕ ಸಾವು Read More »

ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಆರೋಪಿಗಳ ಬಂಧನ

ಮೂಡಬಿದ್ರೆ: ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದವರ ಮೇಲೆ ಮೂಡಬಿದ್ರೆ ಪೊಲೀಸರು ದಾಳಿ ಮಾಡಿ, ಐವರು ಆರೋಪಿಗಳನ್ನು ಬಂಧಿಸಿರುವ ಘಟನೆ ನಡೆದಿದೆ. ಮೂಡುಮೂರ್ನಾಡು ಗ್ರಾಮದ ಹೊಯಿಪಾಲಬೆಟ್ಟು ಎಂಬಲ್ಲಿ ಶ್ರೀ ಕೋಡಮಣಿತ್ತಾಯ ಹಾಗೂ ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ ಮುಗಿದ ಬಳಿಕ ಅಕ್ರಮ ಕೋಳಿ ಅಂಕ ನಡೆಯುತ್ತಿತ್ತು. ಈ ಕುರಿತು ಮಾಹಿತಿ ಪಡೆದ ಮೂಡುಬಿದ್ರೆ ಪೊಲೀಸರು ತಕ್ಷಣ ದಾಳಿ ನಡೆಸಿ ಕೋಳಿ ಅಂಕದಲ್ಲಿ ನಿರತರಾಗಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಕೋಳಿ ಅಂಕಕ್ಕೆ ಪಣವಾಗಿಟ್ಟಿದ್ದ ₹1,480 ನಗದು, 17 ಜೀವಂತ

ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಆರೋಪಿಗಳ ಬಂಧನ Read More »

error: Content is protected !!
Scroll to Top