ಅಪರಾಧ

ಅತ್ಯಾಚಾರ ಪ್ರಕರಣ : ಸ್ವಘೋಷಿತ ದೇವಮಾನವ ಆಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ

ಆಶ್ರಮದಲ್ಲಿ ಶಿಷ್ಯೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ ಗಾಂಧಿನಗರ : ಶಿಷ್ಯೆಯ ಅತ್ಯಾಚಾರ ಎಸಗಿದ ಕುರಿತು 2013ರಲ್ಲಿ ದಾಖಲಾದ ಪ್ರಕರಣದಲ್ಲಿ ಅಪರಾಧಿಯಾಗಿರುವ ಸ್ವಯಂಘೋಷಿತ ದೇವಮಾನವ ಆಸಾರಾಂ ಬಾಪುಗೆ (77) ಗುಜರಾತ್‌ನ ಗಾಂಧಿನಗರದ ನ್ಯಾಯಾಲಯ ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಸೆಕ್ಷನ್ 376 ಮತ್ತು 377 ಅಡಿಯಲ್ಲಿ ಅಸಾರಾಂ ಬಾಪುವಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಗಾಂಧಿನಗರ ಸೆಷನ್ಸ್ ಕೋರ್ಟ್​ನ ನ್ಯಾಯಾಧೀಶ ಡಿ.ಕೆ. ಸೋನಿ ಅವರು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದ್ದಾರೆ. ಸಂತ್ರಸ್ತೆಗೆ 50,000 ರೂ. ಪರಿಹಾರ ನೀಡುವಂತೆಯೂ ಅಪರಾಧಿಗೆ ಕೋರ್ಟ್​ […]

ಅತ್ಯಾಚಾರ ಪ್ರಕರಣ : ಸ್ವಘೋಷಿತ ದೇವಮಾನವ ಆಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ Read More »

ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ : 14 ಸಾವು

ಮೃತರಲ್ಲಿ 10 ಮಹಿಳೆಯರು 3 ಮಕ್ಕಳು ರಾಂಚಿ: ಜಾರ್ಖಂಡ್‌ನ ಧನ್‌ಬಾದ್ ನಗರದಲ್ಲಿ ಬಹುಮಹಡಿ ಕಟ್ಟಡವೊಂದಕ್ಕೆ ಬೆಂಕಿಹತ್ತಿಕೊಂಡು ಕನಿಷ್ಠ 14 ಮಂದಿ ಬೆಂಕಿಗೆ ಸಾವಿಗೀಡಾಗಿದ್ದಾರೆ.ಆಶೀರ್ವಾದ್ ಟವರ್ ಜೋರಫಟಕ್ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದ್ದು, ಸುಮಾರು 40 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.ಧನ್‌ಬಾದ್‌ನ ಜೋರಾಫಾಟಕ್‌ ಎಂಬಲ್ಲಿರುವ ಆಶೀರ್ವಾದ್‌ ಟವರ್ಸ್‌ ಎಂಬ ಬಹುಮಹಡಿ ವಸತಿ ಸಂಕೀರ್ಣದ ಎರಡನೇ ಮಹಡಿಯಲ್ಲಿ ನಿನ್ನೆ ರಾತ್ರಿ ಬೆಂಕಿದುರಂತ ಸಂಭವಿಸಿ 14 ಮಂದಿ ಸಾವನ್ನಪ್ಪಿ 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತಪಟ್ಟವರಲ್ಲಿ

ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ : 14 ಸಾವು Read More »

ಅಕ್ರಮ ಮರ ಸಾಗಾಟ ಪತ್ತೆ : ಮೂವರು ಆರೋಪಿಗಳ ಬಂಧನ,ವಶಕ್ಕೆ ಪಡೆದುಕೊಂಡ ಮರದ ದಿಮ್ಮಿ ಹಾಗೂ ವಾಹನ

ಪುತ್ತೂರು : ಅಕ್ರಮವಾಗಿ ಬೆಲೆಬಾಳುವ ಮರಗಳನ್ನು ಕಡಿದು ಸಾಗಾಟ ಮಾಡುತ್ತಿದ್ದುದನ್ನು ಪತ್ತೆಹಚ್ಚಿದ ಉಪ್ಪಿನಂಗಡಿ ವಲಯ ಬಂದಾರು ಶಾಖಾ ಉಪವಲಯಾರಣ್ಯಾಧಿಕಾರಿ ಜೆರಾಲ್ಡ್ ಡಿ’ಸೋಜಾ ಅವರು ಬೆಳ್ತಂಗಡಿ ತಾಲೂಕಿನ ಮುಗೇರಡ್ಕದಲ್ಲಿ ಪತ್ತೆಹಚ್ಚಿ ಮರ ಹಾಗೂ ವಾಹನ ವಶಪಡಿಸಿಕೊಂಡು, ಮೂವರು ಆರೋಫಿಗಳನ್ನು ಬಂಧಿಸಿದ್ದು, ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಮೊಗ್ರು ಗ್ರಾಮದ ಮುಗೇರಡ್ಕ ನಿವಾಸಿ ಕೃಷ್ಣಪ್ಪ ಕೌರಿಕ, ಅಬ್ಬಾಸ್ ಪಾಣೆಮಂಗಳೂರು, ಇರ್ಫಾನ್ ಕಡಬ ಬಂಧಿತ ಆರೋಪಿಗಳು. ಅಶ್ರಫ್ ಅಂಡೆತ್ತಡ್ಕ, ರಹಿಮಾನ್ ಅಂಡೆತ್ತಡ್ಕ, ಚಾಲಕ ಅಶ್ರಫ್ ಪರಾರಿಯಾಗಿದ್ದಾರೆ. ಆರೋಪಿ ಕೃಷ್ಣಪ್ಪ ಕ್ಷೌರಿಕ

ಅಕ್ರಮ ಮರ ಸಾಗಾಟ ಪತ್ತೆ : ಮೂವರು ಆರೋಪಿಗಳ ಬಂಧನ,ವಶಕ್ಕೆ ಪಡೆದುಕೊಂಡ ಮರದ ದಿಮ್ಮಿ ಹಾಗೂ ವಾಹನ Read More »

ಪುತ್ತೂರು ಕಂಬಳದಲ್ಲಿ ನಟಿ ಸಾನಿಯಾ ಅಯ್ಯರ್‍ಗೆ ಅವಮಾನ: ಅಸಹ್ಯವಾಗಿ ವರ್ತಿಸಿದ ಪುಂಡರಿಗೆ ಧರ್ಮದೇಟು

ಪುತ್ತೂರು: ಅವಳಿ ವೀರರ ಹೆಸರಿನಲ್ಲಿ ನಡೆಯುತ್ತಿರುವ ಕೋಟಿ – ಚೆನ್ನಯ ಜೋಡುಕರೆ ಕಂಬಳದಲ್ಲಿ ಮಹಿಳಾ ಅತಿಥಿಯೋರ್ವರನ್ನು ಅವಮಾನಿಸಿದ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ದಿ. ಮುತ್ತಪ್ಪ ರೈ ಅವರ ನೇತೃತ್ವದಲ್ಲಿ ನಡೆಯುತ್ತಿದ್ದ ಕಂಬಳ, ಈ ವರ್ಷ ಎನ್. ಚಂದ್ರಹಾಸ ಶೆಟ್ಟಿ ಅವರ ಸಾರಥ್ಯದಲ್ಲಿ ನಡೆದಿತ್ತು. ಆದರೆ ಮುಂಚೂಣಿಯಲ್ಲಿ ಕಾಣಿಸಿಕೊಂಡಿದ್ದು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ. ಮಹಿಳಾ ಪರ ಹೋರಾಟದ ಹಿನ್ನೆಲೆಯಿಂದಲೇ ಬಂದ ಶಾಸಕಿ ಶಕುಂತಳಾ ಶೆಟ್ಟಿ ಅವರು ಮುಂಚೂಣಿಯಲ್ಲಿದ್ದ ಕಾರ್ಯಕ್ರಮದಲ್ಲೇ ಮಹಿಳಾ ಅತಿಥಿಯಾಗಿದ್ದ

ಪುತ್ತೂರು ಕಂಬಳದಲ್ಲಿ ನಟಿ ಸಾನಿಯಾ ಅಯ್ಯರ್‍ಗೆ ಅವಮಾನ: ಅಸಹ್ಯವಾಗಿ ವರ್ತಿಸಿದ ಪುಂಡರಿಗೆ ಧರ್ಮದೇಟು Read More »

ತುಳುನಾಡ ಮಾಣಿಕ್ಯ ಅರವಿಂದ ಬೋಳಾರ್‌ಗೆ ರಸ್ತೆ ಅಪಘಾತ

ಮಂಗಳೂರು: ತುಳು ರಂಗಭೂಮಿ, ಚಿತ್ರರಂಗದ ಪ್ರಸಿದ್ಧ ಹಾಸ್ಯನಟ ತುಳುನಾಡ ಮಾಣಿಕ್ಯ ಖ್ಯಾತಿಯ ಅರವಿಂದ್ ಬೋಳಾರ್‌ರವರ ವಾಹನ ಸ್ಕಿಡ್ ಆಗಿ ಅಪಘಾತಕ್ಕೊಳಗಾದ ಘಟನೆ ಮಂಗಳೂರು ಪಂಪ್‌ವೆಲ್ ಬಳಿ ಜ. 30ರಂದು ಸಂಭವಿಸಿದೆ. ಅವರು ಚಲಾಯಿಸುತ್ತಿದ್ದ ಆಕ್ಟೀವಾ ಹೊಂಡಾ ಸ್ಕಿಡ್ ಹೊಡೆದು ಅಪಘಾತಕ್ಕೊಳಗಾಗಿದೆ. ಚಿಕಿತ್ಸೆಗಾಗಿ ಎನಪೋಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಆಪರೇಷನ್‌ ನಡೆಸುವ ಸಾಧ್ಯತೆಯಿದೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದು ಬಂದಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

ತುಳುನಾಡ ಮಾಣಿಕ್ಯ ಅರವಿಂದ ಬೋಳಾರ್‌ಗೆ ರಸ್ತೆ ಅಪಘಾತ Read More »

ಪೊಲೀಸ್ ಸಿಬ್ಬಂದಿಯಿಂದ ಗುಂಡಿನ ದಾಳಿಗೆ ಒಳಗಾಗಿದ್ದ ಸಚಿವ ನಿಧನ

ಭದ್ರತಾ ವ್ಯವಸ್ಥೆಯಲ್ಲಿದ್ದ ಪೊಲೀಸ್‌ ಅಧಿಕಾರಿಯಿಂದಲೇ ಗುಂಡೇಟು ಭುವನೇಶ್ವರ: ಪೊಲೀಸ್ ಸಿಬ್ಬಂದಿಯಿಂದಲೇ ಗುಂಡಿನ ದಾಳಿಗೆ ಒಳಗಾಗಿದ್ದ ಒಡಿಶಾದ ಆರೋಗ್ಯ ಸಚಿವ ನಬ ಕಿಶೋರ್ ದಾಸ್ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.ಒಡಿಶಾದ ಝಾರಸುಗುಡ ಜಿಲ್ಲೆಯ ಬ್ರಜರಾಜನಗರ್​ನ ಗಾಂಧಿಚಕ ಎಂಬಲ್ಲಿ ಭಾನುವಾರ ಮಧ್ಯಾಹ್ನ 12.30ಕ್ಕೆ ಭದರತಾ ವ್ಯವಸ್ಥೆಗೆ ನಿಯೋಜನೆಗೊಂಡಿದ್ದ ಎಎಸ್​ಐ ಗೋಪಾಲ್ ಚಂದ್ರ ದಾಸ್ ಸಚಿವರ ಎದೆಗೆ ಗುಂಡು ಹಾರಿಸಿದ್ದ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಚಿವರು ಕೊನೆಯುಸಿರೆಳೆದಿದ್ದಾರೆ. ನಬ ಕಿಶೋರ್ ಅವರು ಬಿಜು ಪಟ್ನಾಯಕ್ ನೇತೃತ್ವದ ಬಿಜೆಡಿ

ಪೊಲೀಸ್ ಸಿಬ್ಬಂದಿಯಿಂದ ಗುಂಡಿನ ದಾಳಿಗೆ ಒಳಗಾಗಿದ್ದ ಸಚಿವ ನಿಧನ Read More »

ವೈದ್ಯಕೀಯ ವಿದ್ಯಾರ್ಥಿನಿಯ ಮರ್ಯಾದಾ ಹತ್ಯೆ

ತಂದೆ, ಸಹೋದರನಿಂದಲೇ ಯುವತಿ ಕೊಲೆ ಮುಂಬಯಿ: ವೈದ್ಯಕೀಯ ವಿದ್ಯಾರ್ಥಿನಿಯನ್ನೇ ತಂದೆ ಮತ್ತು ಸಹೋದರ ಮರ್ಯಾ ದೆ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ ನಡೆದಿದೆ. 22 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಆಕೆಯ ತಂದೆ, ಸಹೋದರ ಮತ್ತು ಇತರ ಮೂವರು ಸಂಬಂಧಿಕರು ಸೇರಿ ಕೊಲೆ ಮಾಡಿದ್ದಾರೆ. ಯುವತಿಯನ್ನು ಶುಭಾಂಗಿ ಜೋಗದಂದ್ ಎಂದು ಗುರುತಿಸಲಾಗಿದೆ. ಆಕೆಯ ಪ್ರೇಮ ಪ್ರಕರಣ ಬೆಳಕಿಗೆ ಬಂದ ಬಳಿಕ ಕುಟುಂಬದವರೇ ಸೇರಿ ಕತ್ತು ಹಿಸುಕಿ ಕೊಂದು, ಬೆಂಕಿ ಹಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.

ವೈದ್ಯಕೀಯ ವಿದ್ಯಾರ್ಥಿನಿಯ ಮರ್ಯಾದಾ ಹತ್ಯೆ Read More »

ಮಂಗಳೂರು ಡ್ರಗ್‌ ಪ್ರಕರಣಕ್ಕೆ ಟ್ವಿಸ್ಟ್‌ : ಆಧಾರ ರಹಿತ ಬಂಧನ ಎಂಬ ಆರೋಪ

ವಕೀಲ, ವಿಧಿ ವಿಜ್ಞಾನ ತಜ್ಞರಿಂದ ವೈದ್ಯರನ್ನು ಬಂಧಿಸಿರುವುದಕ್ಕೆ ತೀವ್ರ ಆಕ್ಷೇಪ ಮಂಗಳೂರು: ಮಾದಕ ದ್ರವ್ಯ ಸೇವನೆ ಮತ್ತು ಸಾಗಾಟ ಪ್ರಕರಣದಲ್ಲಿ ಮಂಗಳೂರಿನಲ್ಲಿ ಇತ್ತೀಚಿಗೆ ಹಲವು ವೈದ್ಯರು ಮತ್ತು ವಿದ್ಯಾರ್ಥಿಗಳನ್ನು ಬಂಧಿಸಿದ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಅವೈಜ್ಞಾನಿಕ ಹಾಗೂ ಆಧಾರರಹಿತವಾಗಿ ತನಿಖೆ ನಡೆಸಲಾಗಿದೆ ಎಂದು ವಿಧಿ ವಿಜ್ಞಾನ ತಜ್ಞ ಡಾ. ಮಹಾಬಲ ಶೆಟ್ಟಿ ಆರೋಪಿಸಿದ್ದಾರೆ. ಹಿರಿಯ ವಕೀಲ ಮನೋರಾಜ್ ರಾಜೀವ ಹೈಕೋರ್ಟ್ ಮಧ್ಯ ಪ್ರವೇಶಿಸಿ ಸಿಬಿಐ ಅಥವಾ ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಮನವಿ ಮಾಡಿದ್ದಾರೆ. ಇಲ್ಲವಾದರೆ

ಮಂಗಳೂರು ಡ್ರಗ್‌ ಪ್ರಕರಣಕ್ಕೆ ಟ್ವಿಸ್ಟ್‌ : ಆಧಾರ ರಹಿತ ಬಂಧನ ಎಂಬ ಆರೋಪ Read More »

ನದಿಯಲ್ಲಿ ಒಂದೇ ಕುಟುಂಬದ ಏಳು ಮಂದಿಯ ಶವ ಪತ್ತೆ

ಸಾಮೂಹಿಕ ಆತ್ಮಹತ್ಯೆ ಶಂಕೆ ಪುಣೆ: ಪುಣೆ ಜಿಲ್ಲೆಯ ದೌಂಡ್ ಪಟ್ಟಣದ ನದಿಯಲ್ಲಿ ಒಂದೇ ಕುಟುಂಬದ 7 ಮಂದಿಯ ಮೃತದೇಹಗಳು ಪತ್ತೆಯಾಗಿರುವುದು ಆಘಾತವನ್ನುಂಟು ಮಾಡಿದೆ. ಇದೊಂದು ಅಸಹಜ ಸಾವು ಎಂದು ಪೊಲೀಸರು ಹೇಳಿದ್ದಾರೆ. ಏಳು ಮೃತದೇಹಗಳನ್ನು ನದಿಯಿಂದ ಮೇಲೆತ್ತಲಾಗಿದೆ. ಒಂದೇ ಕುಟುಂಬ ಸದಸ್ಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದ್ದರೂ, ಎಲ್ಲ ಆಯಾಮಗಳಿಂದ ತನಿಖೆ ನಡೆಯುತ್ತಿದೆ. ವಿವರವಾದ ತನಿಖೆ ನಡೆಸುವವರೆಗೆ ಏನನ್ನೂ ಹೇಳಲಾಗುವುದಿಲ್ಲ ಎಂದು ಪುಣೆ ಗ್ರಾಮಾಂತರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಜ.18 ರಂದು ದೌಂಡ್‌ನಲ್ಲಿ ಭೀಮಾ ನದಿಯಲ್ಲಿ ಮೃತದೇಹ ತೇಲುತ್ತಿರುವ

ನದಿಯಲ್ಲಿ ಒಂದೇ ಕುಟುಂಬದ ಏಳು ಮಂದಿಯ ಶವ ಪತ್ತೆ Read More »

ಕುಸ್ತಿ ಫೆಡರೇಶನ್ ಅಧ್ಯಕ್ಷರಿಂದ ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ

ಕುಸ್ತಿಪಟು ವಿನೇಶ್‌ ಫೋಗಟ್‌ ಗಂಭೀರ ಆರೋಪ ಹೊಸದಿಲ್ಲಿ : ಭಾರತೀಯ ಕುಸ್ತಿ ಫೆಡರೇಶನ್(ಡಬ್ಲ್ಯುಎಫ್‌ಐ) ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಹಲವು ವರ್ಷಗಳಿಂದ ಮಹಿಳಾ ಕುಸ್ತಿಪಟುಗಳನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಖ್ಯಾತ ಕುಸ್ತಿಪಟು ವಿನೇಶ್ ಫೋಗಟ್ ಆರೋಪಿಸಿದ್ದಾರೆ. ಆದರೆ ಈ ಆರೋಪವನ್ನು ಕ್ರೀಡಾ ಆಡಳಿತಾಧಿಕಾರಿ ಮತ್ತು ಬಿಜೆಪಿ ಸಂಸದ ತಿರಸ್ಕರಿಸಿದ್ದಾರೆ. ಟೋಕಿಯೊ ಒಲಿಂಪಿಕ್ ಕ್ರೀಡಾಕೂಟದ ನಂತರ ಡಬ್ಲ್ಯುಎಫ್‌ಐ ಜತೆ ಭಿನ್ನಾಭಿಪ್ರಾಯ ಹೊಂದಿರುವ ವಿನೇಶ್ ಅವರು, ಲಖನೌ ರಾಷ್ಟ್ರೀಯ ಶಿಬಿರದಲ್ಲಿ ಹಲವಾರು ತರಬೇತಿದಾರರು ಮಹಿಳಾ

ಕುಸ್ತಿ ಫೆಡರೇಶನ್ ಅಧ್ಯಕ್ಷರಿಂದ ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ Read More »

error: Content is protected !!
Scroll to Top