ಅಪರಾಧ

ಡೀಸೆಲ್‍ ಕಳವು ಪ್ರಕರಣ| ನಾಲ್ವರ ಬಂಧನ

ಮಂಗಳೂರು : ಮಂಗಳೂರು ತಾಲೂಕಿನ ಬಾಳ ಗ್ರಾಮದ ಟ್ಯಾಂಕರ್ ಯಾರ್ಡಿನಲ್ಲಿರುವ ಟ್ಯಾಂಕರುಗಳಿಂದ ಮಾಲಕರಿಗೆ ತಿಳಿಯದೇ ಡೀಸೆಲ್‌ನ್ನು ಕಳವು ಮಾಡಿ ದಾಸ್ತಾನು ಮಾಡಿರುವ ಘಟನೆ ನಡೆದಿದೆ. ಈ ಪ್ರಕರಣಕ್ಕೆ ಸಂಬಂದಿಸಿ ಪತ್ತೆ ಹಚ್ಚಿರುವ ಮಂಗಳೂರು ನಗರ ಪೊಲೀಸರು ಈ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಕುಳಾಯಿಗುಡ್ಡೆಯ ಸಂತೋಷ್ (42), ಕಾಟಿಪಳ್ಳದ ಐರನ್ ರಿತೇಶ್ ಮಿನೇಜ್ (36), ಟ್ಯಾಂಕರ್ ಚಾಲಕ ಕಡಿರುದ್ಯಾವರ, ನಾರಾಯಣ ( 23 ) ಮತ್ತು ಹೆಜಮಾಡಿಯ ರವಿ ಜನಾಂದ್ರ ಪುತ್ರನ್ (59)ಎಂದು ತಿಳಿದು ಬಂದಿದೆ. ಬಂಧಿತ […]

ಡೀಸೆಲ್‍ ಕಳವು ಪ್ರಕರಣ| ನಾಲ್ವರ ಬಂಧನ Read More »

ಪುತ್ತೂರಿನ ಬ್ಯಾನರ್ ಪ್ರಕರಣ | ಪೊಲೀಸ್ ದೌರ್ಜನ್ಯ ತನಿಖೆಗೆ  ‘ಬಿ’ ರಿಪೋರ್ಟ್ ತಿರಸ್ಕರಿಸಿದ ನ್ಯಾಯಾಲಯ

ಪುತ್ತೂರು: ಬ್ಯಾನರ್ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಿದ ಉಡುಪಿಯ ತನಿಖಾಧಿಕಾರಿ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಸಲ್ಲಿಸಿದ ” ಬಿ ” ರಿಪೋರ್ಟ್ ನ್ನು ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕರಿಸಿದೆ. ವರ್ಷದ ಹಿಂದೆ ಪುತ್ತೂರಿನ ನಗರದಲ್ಲಿ ಬ್ಯಾನರ್ ಅಳವಡಿಸಿ ಚಪ್ಪಲಿ ಹಾರ ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತ ಯುವಕರ ಮೇಲೆ ನಡೆದಿದ್ದ ಪೊಲೀಸ್ ದೌರ್ಜನ್ಯದ ಹಿನ್ನೆಲೆಯಲ್ಲಿ ಡಿವೈಎಸ್ಪಿ ಡಾ.ವೀರಯ್ಯ ಹಿರೇಮಠ, ಪುತ್ತೂರು ಗ್ರಾಮಾಂತರ ಠಾಣೆಯ ಆಗಿನ ಎಸ್‌ಐ ಶ್ರೀನಾಥ್

ಪುತ್ತೂರಿನ ಬ್ಯಾನರ್ ಪ್ರಕರಣ | ಪೊಲೀಸ್ ದೌರ್ಜನ್ಯ ತನಿಖೆಗೆ  ‘ಬಿ’ ರಿಪೋರ್ಟ್ ತಿರಸ್ಕರಿಸಿದ ನ್ಯಾಯಾಲಯ Read More »

ಖಲಿಸ್ಥಾನಿ ಉಗ್ರರ ಹಿಟ್‌ಲಿಸ್ಟ್‌ನಲ್ಲಿ ಅರವಿಂದ ಕೇಜ್ರಿವಾಲ್‌

ಹತ್ಯೆಗೆ ಸಂಚು ರೂಪಿಸಿರುವ ಕುರಿತು ಗುಪ್ತಚರ ಪಡೆ ಮಾಹಿತಿ ಹೊಸದಿಲ್ಲಿ : ಆಮ್ ಆದ್ಮಿ ಪಕ್ಷದ ಸಂಚಾಲಕ ಹಾಗೂ ದಿಲ್ಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮೇಲೆ ದಾಳಿ ನಡೆಸಲು ಖಲಿಸ್ಥಾನಿ ಉಗ್ರರು ಸಂಚು ರೂಪಿಸಿದ್ದಾರೆ ಎಂದು ಗುಪ್ತಚರ ಸಂಸ್ಥೆಗಳು ಮಾಹಿತಿ ನೀಡಿವೆ. ದಿಲ್ಲಿ ಚುನಾವಣೆ ವೇಳೆ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವು ನಾಯಕರ ಮೇಲೆ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಗುಪ್ತಚರ ಪಡೆ ಎಚ್ಚರಿಕೆ ನೀಡಿದೆ.ಖಲಿಸ್ಥಾನಿ ಭಯೋತ್ಪಾದಕರು ದಿಲ್ಲಿ ಚುನಾವಣೆ ಹಾಳುಗೆಡವಲು ನಾಯಕರ ಮೇಲೆ

ಖಲಿಸ್ಥಾನಿ ಉಗ್ರರ ಹಿಟ್‌ಲಿಸ್ಟ್‌ನಲ್ಲಿ ಅರವಿಂದ ಕೇಜ್ರಿವಾಲ್‌ Read More »

ತಿರುಪತಿ : ದೇವರ ಅರ್ಧ ಕೆಜಿಗೂ ಅಧಿಕ ಚಿನ್ನ ಕಳ್ಳತನ

ಚಿನ್ನದ ಕಾಣಿಕೆಗಳನ್ನು ವಿಂಗಡಿಸುವಾಗ ಎಗರಿಸುತ್ತಿದ್ದ ನೌಕರ ಸೆರೆ ತಿರುಪತಿ: ಭಕ್ತರು ತಿರುಪತಿಯ ತಿಮ್ಮಪ್ಪನಿಗೆ ಭಕ್ತಿಯಿಂದ ಸಮರ್ಪಿಸಿದ್ದ ಅರ್ಧ ಕೆಜಿಗೂ ಅಧಿಕ ಬಂಗಾರದ ಒಡವೆಗಳು ಕಳವು ಮಾಡಿರುವ ಕೃತ್ಯ ಬೆಳಕಿಗೆ ಬಂದಿದೆ. ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ)ಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ನೌಕರನೊಬ್ಬನನ್ನು ಕಳ್ಳತನಕ್ಕೆ ಸಂಬಂಧಿಸಿ ಪೊಲೀಸರು ಬಂಧಿಸಿದ್ದಾರೆ.ವಿ. ಪೆಂಚಲಯ್ಯ ಬಂಧಿತ ಆರೋಪಿ. ಈತ ಕಳೆದ ಒಂದು ವರ್ಷದಲ್ಲಿ 10 ರಿಂದ 15 ಸಲ ಚಿನ್ನದ ಬಿಸ್ಕೆಟ್‌ ಮತ್ತು ಇತರ ಆಭರಣಗಳು ಸೇರಿ ಸುಮಾರು 46 ಲಕ್ಷ

ತಿರುಪತಿ : ದೇವರ ಅರ್ಧ ಕೆಜಿಗೂ ಅಧಿಕ ಚಿನ್ನ ಕಳ್ಳತನ Read More »

ಮಲ್ಪೆಯ ಮೀನುಗಾರಿಕೆ ದೋಣಿ ಕಾರವಾರದಲ್ಲಿ ಮುಳುಗಡೆ

ಉಡುಪಿ: ಮೀನುಗಾರಿಕೆಗೆ ತೆರಳಿದ್ದ ಮಲ್ಪೆಯ ದೋಣಿ ಕಾರವಾರ ಸಮೀಪ ಮುಳುಗಿ ಅಪಾರ ನಷ್ಟ ಉಂಟಾಗಿದೆ. ಮಲ್ಪೆಯ ಸೀ ಹಂಟರ್ ಹೆಸರಿನ ದೋಣಿಯ ತಳಭಾಗದ ಕಬ್ಬಿಣದ ವೆಲ್ಡಿಂಗ್ ಬಿಟ್ಟುಹೋದ ಪರಿಣಾಮ ನೀರು ತುಂಬಿಕೊಂಡು ಮುಳುಗಿದೆ. ಬೋಟ್‌ನಲ್ಲಿದ್ದ 8 ಮೀನುಗಾರರನ್ನು ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದಾರೆ. ಮಲ್ಪೆಯಿಂದ ಮಹಾರಾಷ್ಟ್ರದ ಕಡೆ ಈ ಬೋಟ್ ಚಲಿಸುತಿತ್ತು. ಕಾರವಾರದಿಂದ 9 ನಾಟಿಕನ್ ಮೈಲು ದೂರದ ಲೈಟ್‌ಹೌಸ್ ಬಳಿ ಬೋಟ್ ತಳಭಾಗದ ಕಬ್ಬಿಣದ ಭಾಗದಲ್ಲಿ ವೆಲ್ಡಿಂಗ್ ಬಿಟ್ಟುಹೋಗಿದೆ. ವೆಲ್ಡಿಂಗ್ ಬಿಟ್ಟುಹೋದ ಪರಿಣಾಮ ಬೋಟ್ ಇಂಜಿನ್

ಮಲ್ಪೆಯ ಮೀನುಗಾರಿಕೆ ದೋಣಿ ಕಾರವಾರದಲ್ಲಿ ಮುಳುಗಡೆ Read More »

ದುಷ್ಕರ್ಮಿಗಳಿಂದ ಕೆಎಸ್‍ ಆರ್ ಟಿಸಿ ಬಸ್ ಚಾಲಕ-ನಿರ್ವಾಹಕರಿಗೆ ಹಲ್ಲೆ | ದುಷ್ಕರ್ಮಿಗಳನ್ನು ಬಂಧಿಸುವಂತೆ ಪ್ರಯಾಣಿಕರಿಂದ ಒತ್ತಾಯ

ಕಬಕ: ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಘಟನೆ ಕಬಕದಲ್ಲಿ ಇಂದು ನಡೆದಿದೆ. ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ಈ ಹಲ್ಲೆ ನಡೆದಿದ್ದು, ಉರಿಮಜಲು ಬಳಿ ಕಬಕ-ವಿಟ್ಲ ರಸ್ತೆಯಲ್ಲಿನ ಹಾರ್ಡ್ ವೇ‌ರ್ ಅಂಗಡಿಯೊಂದಕ್ಕೆ ಸೇರಿದ ಪಿಕಪ್ ವಾಹನದಲ್ಲಿ ಕಬಕದಿಂದ ಹಿಂಬಾಲಿಸಿಕೊಂಡು ಬಂದು ಉರಿಮಜಲು ಎಂಬಲ್ಲಿ ಕೆಎಸ್‌ಆರ್‌ಟಿಸಿ ಚಾಲಕ-ನಿರ್ವಾಹಕನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ಪ್ರಯಾಣಿಕರ ಮುಂದೆಯೇ ಬಸ್ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿ ಜೀವಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಕೆಎಸ್‌ಆರ್‌ಟಿಸಿ ಬಸ್‌ ಸೈಡ್ ಕೊಡಲಿಲ್ಲ

ದುಷ್ಕರ್ಮಿಗಳಿಂದ ಕೆಎಸ್‍ ಆರ್ ಟಿಸಿ ಬಸ್ ಚಾಲಕ-ನಿರ್ವಾಹಕರಿಗೆ ಹಲ್ಲೆ | ದುಷ್ಕರ್ಮಿಗಳನ್ನು ಬಂಧಿಸುವಂತೆ ಪ್ರಯಾಣಿಕರಿಂದ ಒತ್ತಾಯ Read More »

ಅಕ್ರಮ ದನ ಸಾಗಾಟ ಲಾರಿಯನ್ನು ತಡೆ ಹಿಡಿದ ಪೊಲೀಸರು | ವಾಹನ ವಶಕ್ಕೆ

ಕಡಬ: ಅಕ್ರಮ ದನ ಸಾಗಾಟದ ಲಾರಿಯನ್ನು ಕಡಬ ಠಾಣಾ ಪೊಲೀಸರು ತಡೆಹಿಡಿದ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಬಳಿ ನಡೆದಿದೆ. ಲಾರಿ ತಡೆಹಿಡಿದ ಸಂದರ್ಭ ಲಾರಿ ಚಾಲಕ ಪರಾರಿಯಾಗಿರುವುದಾಗಿ ತಿಳಿದು ಬಂದಿದೆ. ಇಂದು ಮುಂಜಾನೆ ಘಟನೆ ನಡೆದಿದ್ದು, ಸ್ಥಳದಲ್ಲಿ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಜಮಾಯಿಸಿದ್ದಾರೆ. ಪಿಕಪ್ ವಾಹನದಲ್ಲಿ ಸುಮಾರು ಎಂಟು ಜಾನುವಾರುಗಳಿದ್ದು, ಒಂದು ದನ ಮೃತಪಟ್ಟಿರುವುದಾಗಿ ಮಾಹಿತಿ ಲಭಿಸಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಲ್ಲದೆ ಅಕ್ರಮ ಜಾನುವಾರು ಸಾಗಾಟಕ್ಕೆ ಬಳಸಿದ ವಾಹನವನ್ನು ವಶಕ್ಕೆ

ಅಕ್ರಮ ದನ ಸಾಗಾಟ ಲಾರಿಯನ್ನು ತಡೆ ಹಿಡಿದ ಪೊಲೀಸರು | ವಾಹನ ವಶಕ್ಕೆ Read More »

ಹಾಡುಹಗಲೇ ಮನೆಗೆ ನುಗ್ಗಿದ ಕಳ್ಳರು| ಪ್ರಕರಣ ದಾಖಲು

ಕಡಬ : ಹಾಡುಹಗಲೇ ಮನೆಯೊಂದರ ಬಾಗಿಲು ಮುರಿದು ಒಳ ನುಗ್ಗಿದ ಕಳ್ಳರು ನಗದು ಮತ್ತು ಚಿನ್ನಾಭರಣವನ್ನು ಕಳವು ಮಾಡಿಕೊಂಡು ಪರಾರಿಯಾದ ಘಟನೆ ಕಡಬ ಠಾಣಾ ವ್ಯಾಪ್ತಿಯ ನೆಕ್ಕಿಲಾಡಿ ಗ್ರಾಮದ ಬಜಕೆರೆ ಎಂಬಲ್ಲಿ ನಿನ್ನೆ ನಡೆದಿದೆ. ಬಜಕೆರೆ ನಿವಾಸಿ ಜೇಮ್ಸ್ ಹಾಗೂ ಮನೆಯವರು ನೆಲ್ಯಾಡಿಯಲ್ಲಿ ಕಾರ್ಯಕ್ರಮಕ್ಕೆಂದು ತೆರಳಿದ್ದರು. ಸಂಜೆ ವೇಳೆಗೆ ಮನೆಗೆ ಹಿಂತಿರುಗಿದಾಗ ಮನೆಯ ಹಿಂಬಾಗಿಲ ಬೀಗ ಮುರಿದು ಕಳ್ಳತನ ನಡೆದಿರುವುದು ತಿಳಿದು ಬಂದಿದೆ. ಕಳ್ಳರು ಮನೆಯ ಕಪಾಟಿನಲ್ಲಿದ್ದ 10 ಪವನ್ ಚಿನ್ನಾಭರಣ ಹಾಗೂ ಒಂದು ಲಕ್ಷ ನಗದು

ಹಾಡುಹಗಲೇ ಮನೆಗೆ ನುಗ್ಗಿದ ಕಳ್ಳರು| ಪ್ರಕರಣ ದಾಖಲು Read More »

ಮಹಾಕುಂಭ ಮೇಳಕ್ಕೆ ಹೋಗುವ ಭಕ್ತರಿದ್ದ ರೈಲಿಗೆ ಕಲ್ಲು ತೂರಾಟ

ಮುಂಬಯಿ: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳಕ್ಕೆ ಭಕ್ತರನ್ನು ಕರೆದೊಯ್ಯುತ್ತಿದ್ದ ರೈಲಿಗೆ ಮಹಾರಾಷ್ಟ್ರದಲ್ಲಿ ಕಲ್ಲುತೂರಲಾಗಿದೆ. ತಪತಿ ಗಂಗಾ ಎಕ್ಸ್‌ಪ್ರೆಸ್‌ ರೈಲಿಗೆ ಮಾಹಾರಾಷ್ಟ್ರದ ಜಲಗಾಂವ್‌ನಲ್ಲಿ ಭಾನುವಾರ ರಾತ್ರಿ ಕಲ್ಲು ತೂರಾಟ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ರೈಲಿನಲ್ಲಿ ಗುಜರಾತ್‌ನಿಂದ ಕುಂಭಮೇಳಕ್ಕೆ ಭಕ್ತರು ಪ್ರಯಾಣಿಸುತ್ತಿದ್ದರು. ರೈಲು ಸೂರತ್‌ನಿಂದ ಛಾಪ್ರಾಕ್ಕೆ ಹೋಗುತ್ತಿದ್ದ ವೇಳೆ ಜಲಗಾಂವ್‌ನಲ್ಲಿ ಕಿಡಿಗೇಡಿಯೋರ್ವ ಕಲ್ಲುತೂರಿದ್ದಾನೆ. ರೈಲಿನ ಕಿಟಿಕಿ ಗಾಜು ಒಡೆದಿದ್ದು, ಯಾರಿಗೂ ಗಾಯವಾಗಿಲ್ಲ ಎಂದು ತಿಳಿಸಿದ್ದಾರೆ. ಬಾಬಾ ಬನಾರಸ್‌ ಎಂಬ ಎಕ್ಸ್‌ ಪೇಜ್‌ನಲ್ಲಿ ಕಲ್ಲುತೂರಾಟ ಮಾಡಿದ ವೀಡಿಯೊ ಮತ್ತು ಫೋಟೊ

ಮಹಾಕುಂಭ ಮೇಳಕ್ಕೆ ಹೋಗುವ ಭಕ್ತರಿದ್ದ ರೈಲಿಗೆ ಕಲ್ಲು ತೂರಾಟ Read More »

ಹಸುಗಳ ಕೆಚ್ಚಲು ಕತ್ತರಿಸಿದ ಪ್ರಕರಣ : ಓರ್ವ ಆರೋಪಿ ಸೆರೆ

ರಾಜ್ಯಾದ್ಯಂತ ಆಕ್ರೋಶದ ಅಲೆಯೆಬ್ಬಿಸಿದ ದುರುಳರ ವಿಕೃತಿ ಬೆಂಗಳೂರು: ಚಾಮರಾಜಪೇಟೆಯ ಓಲ್ಡ್​ ಪೆನ್ಶನ್​ ಮೊಹಲ್ಲಾದ ವಿನಾಯಕನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಕಾಟನ್ ​ಪೇಟೆ ಪೊಲೀಸರು ಬಂಧಿಸಿ ಸ್ಥಳ ಮಹಜರು ನಡೆಸಿದ್ದಾರೆ. ನಿನ್ನೆ ತಡರಾತ್ರಿಯಿಂದಲೇ ಆರೋಪಿಯ ವಿಚಾರಣೆ ನಡೆಸಲಾಗುತ್ತಿದೆ. ಚಾಮರಾಜಪೇಟೆಯ ಓಲ್ಡ್ ಪೆನ್ಶನ್ ಮೊಹಲ್ಲಾದ ವಿನಾಯಕನಗರ ನಿವಾಸಿ ಕರ್ಣ ಎಂಬುವರ ಮೂರು ಹಸುಗಳ ಕೆಚ್ಚಲನ್ನು ಕತ್ತರಿಸಿ, ಕಾಲಿಗೆ ಮಚ್ಚಿನಿಂದ ಹಲ್ಲೆ ಮಾಡಿ ದುಷ್ಕರ್ಮಿಗಳು ವಿಕೃತಿ ಮೆರೆದಿದ್ದರು. ಕರ್ಣ ನೀಡಿದ ​ದೂರು ಆಧರಿಸಿ

ಹಸುಗಳ ಕೆಚ್ಚಲು ಕತ್ತರಿಸಿದ ಪ್ರಕರಣ : ಓರ್ವ ಆರೋಪಿ ಸೆರೆ Read More »

error: Content is protected !!
Scroll to Top