ಅಪರಾಧ

ಉಡುಪಿ ಲವ್‌ ಜಿಹಾದ್‌ ಪ್ರಕರಣಕ್ಕೆ ತಿರುವು : ಸ್ವಇಚ್ಚೆಯಿಂದ ಹೋಗಿದ್ದೇನೆ ಎಂದ ಯುವತಿ

ಎ.19ರಂದು ರಿಜಿಸ್ಟ್ರರ್‌ ಮದುವೆ ಮಾಡಿಕೊಳ್ಳುವುದಾಗಿ ಹೇಳಿಕೆ ಉಡುಪಿ: ಉಡುಪಿಯಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದ್ದ ಲವ್‌ ಜಿಹಾದ್‌ ಪ್ರಕರಣ ಯುವತಿ ನ್ಯಾಯಾಲಯಕ್ಕೆ ಹಾಜರಾಗುವುದರೊಂದಿಗೆ ತಿರುವು ಪಡೆದುಕೊಂಡಿದೆ. ಕ್ರೈಸ್ತ ಸಮುದಾಯದ 19ರ ಹರೆಯದ ಕಾಲೇಜು ವಿದ್ಯಾರ್ಥಿನಿಯನ್ನು ಮುಹಮ್ಮದ್‌ ಅಕ್ರಮ್‌ ಎಂಬಾತ ಅಪಹರಿಸಿ ಬಲವಂತವಾಗಿ ಮದುವೆಯಾಗಲು ತಯಾರಿ ನಡೆಸಿದ್ದಾನೆ. ಈ ವಿಚಾರದಲ್ಲಿ ದೂರು ನೀಡಿದರೂ ಪೊಲೀಸರು ಯಾವುದೇ ಕ್ರಮಕೈಗೊಂಡಿಲ್ಲ ಎಂದು ಯುವತಿಯ ತಾಯಿ ಕೆಲದಿನಗಳ ಹಿಂದೆ ಆರೋಪಿಸಿದ್ದರು. ಇದರ ಬೆನ್ನಿಗೆ ಹಿಂದು ಸಂಘಟನೆಗಳು ಮಧ್ಯೆ ಪ್ರವೇಶಿಸಿ ಲವ್‌ ಜಿಹಾದ್‌ ಅರೋಪ ಮಾಡಿದ್ದವು.ಅಪಹರಣ […]

ಉಡುಪಿ ಲವ್‌ ಜಿಹಾದ್‌ ಪ್ರಕರಣಕ್ಕೆ ತಿರುವು : ಸ್ವಇಚ್ಚೆಯಿಂದ ಹೋಗಿದ್ದೇನೆ ಎಂದ ಯುವತಿ Read More »

ವಂಚನೆ : ಕ್ರಿಪ್ಟೊ ಕರೆನ್ಸಿ ಹೂಡಿಕೆ ನೆಪದಲ್ಲಿ 70 ಲ.ರೂ. ವಂಚನೆ

ಮಂಗಳೂರು: ಕ್ರಿಪ್ಟೊ ಕರೆನ್ಸಿಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಸಿಗುವ ನಂಬಿಕೆ ಹುಟ್ಟಿಸಿ ಸುಮಾರು 70 ಲ.ರೂ. ವಂಚಿಸಿದ ಕುರಿತು ಮಂಗಳೂರಿನ ವ್ಯಕ್ತಿಯೊಬ್ಬರು ಸೆನ್‌ ಪೊಲೀಸರಿಗೆ ದೂರು ನೀಡಿದ್ದಾರೆ. ಫೇಸ್‌ಬುಕ್‌ನಲ್ಲಿ ಪರಿಚಿತನಾದ ರೈಸೆನ್‌ ಎಂಬ ವ್ಯಕ್ತಿ ದೂರುದಾರರ ವಿಶ್ವಾಸ ಸಂಪಾದಿಸಿ ಕ್ರಿಪ್ಟೊ ಕರೆನ್ಸಿ ಹೂಡಿಕೆಯ ಆಶೆ ಹುಟ್ಟಿಸಿದ್ದಾನೆ. ತಾನು ಕ್ರಿಪ್ಟೊ ಕರೆನ್ಸಿ ಟ್ರೇಡಿಂಗ್‌ ಮಾಡುತ್ತಿದ್ದು, ಅದರಲ್ಲಿ ಶೇ.30ರಷ್ಟು ಲಾಭಾಂಶವಿದೆ ಎಂದು ಹೇಳಿದ್ದ. ಅವನ ಮಾತು ನಂಬಿ ದೂರುದಾರರು ಫೆ.2ರಿಂದ 23ರ ವರೆಗೆ ಪ್ರತಿದಿನ ಹೂಡಿಕೆ ಮಾಡುತ್ತಿದ್ದರು. ಒಟ್ಟಾರೆಯಾಗಿ

ವಂಚನೆ : ಕ್ರಿಪ್ಟೊ ಕರೆನ್ಸಿ ಹೂಡಿಕೆ ನೆಪದಲ್ಲಿ 70 ಲ.ರೂ. ವಂಚನೆ Read More »

ಕಾಂಗ್ರೆಸ್‌ ಮುಖಂಡನ ಕಿರುಕುಳದಿಂದ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ರಾಜಕೀಯ ಪ್ರೇರಿತ ಎಫ್‌ಐಆರ್‌ ದಾಖಲಿಸಿದ್ದಾರೆ ಎಂದು ಆರೋಪ ಬೆಂಗಳೂರು : ಕಾಂಗ್ರೆಸ್‌ ಶಾಸಕರ ಆಪ್ತನ ಕಿರುಕುಳದಿಂದ ಬೇಸತ್ತು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಬೆಂಗಳೂರಿನ ನಾಗವಾರದ ಕಚೇರಿಯಲ್ಲೇ ವಿನಯ್ ಸೋಮಯ್ಯ(35) ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಸಾಮಾಜಿಕ ಜಾಲತಾಣದಲ್ಲಿ ಡೆತ್​ನೋಟ್ ಪೋಸ್ಟ್ ಮಾಡಿದ್ದ ವಿನಯ್, ರಾಜಕೀಯ ಪ್ರೇರಿತ ಎಫ್‌ಐಆರ್‌ನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದರು. ವಿನಯ್​ ವಾಟ್ಸ್​ಆ್ಯಪ್​ ಗ್ರೂಪ್​​ ಒಂದರ ಅಡ್ಮಿನ್ ಆಗಿದ್ದರು. ಆ ಗ್ರೂಪ್​ನಲ್ಲಿ ಇತ್ತೀಚೆಗೆ ಕಾಂಗ್ರೆಸ್​ ಶಾಸಕರೊಬ್ಬರ

ಕಾಂಗ್ರೆಸ್‌ ಮುಖಂಡನ ಕಿರುಕುಳದಿಂದ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ Read More »

ವಕ್ಫ್‌ ಮಸೂದೆ ಪಾಸ್‌ ಆದ ಬಳಿಕ ಅನ್ವರ್‌ ಮಾಣಿಪ್ಪಾಡಿಗೆ ಜೀವ ಬೆದರಿಕೆ

ವಿದೇಶಗಳಿಂದ ಕರೆ ಮಾಡಿ ಬೆದರಿಕೆಯೊಡ್ಡುತ್ತಿರುವ ಕುರಿತು ಪೊಲೀಸ್‌ ಕಮಿಷನರ್‌ಗೆ ದೂರು ಮಂಗಳೂರು: ಸಂಸತ್ತಿನಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಪಾಸ್‌ ಆದ ಬೆನ್ನಲ್ಲೇ ಕರ್ನಾಟಕದ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪಾಡಿ ಅವರಿಗೆ ವಿದೇಶದಿಂದ ಬೆದರಿಕೆ ಕರೆಗಳು ಬರಲಾರಂಭಿಸಿವೆ. ಈ ವಿಚಾರವಾಗಿ ಅನ್ವರ್ ಮಾಣಿಪ್ಪಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮಾಹಿತಿ ನೀಡಿದ್ದಾರೆ. ಇಂಟರ್‌ನೆಟ್ ಆಧಾರಿತ ಕರೆ ಮೂಲಕ ಬೆದರಿಕೆ ಕರೆ ಬಂದಿದೆ ಎಂದು ಅನ್ವರ್‌ ಮಾಣಿಪ್ಪಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅನ್ವರ್ ಮಾಣಿಪ್ಪಾಡಿ ಮಂಗಳೂರಿನಲ್ಲಿ ವಾಸವಾಗಿದ್ದಾರೆ.

ವಕ್ಫ್‌ ಮಸೂದೆ ಪಾಸ್‌ ಆದ ಬಳಿಕ ಅನ್ವರ್‌ ಮಾಣಿಪ್ಪಾಡಿಗೆ ಜೀವ ಬೆದರಿಕೆ Read More »

ಅಕ್ರಮ ಗೋಸಾಗಾಟ ಮಾಡುತ್ತಿದ್ದ ವಾಹನಕ್ಕೆ ಹಿಂದು ಸಂಘಟನೆಯಿಂದ ತಡೆ

ಬೆಳ್ತಂಗಡಿ: ಮಂಗಳೂರಿಗೆ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ವಾಹನವನ್ನು ಕಳಿಯ ನ್ಯಾಯತರ್ಪು ಸಮೀಪದ ಜಾರಿಗೆಬೈಲು ಎಂಬಲ್ಲಿ ತಡೆಹಿಡಿದ ಘಟನೆ ನಡೆದಿದೆ. ತರಕಾರಿ ಸಾಗಾಟದ ವಾಹನದಲ್ಲಿ ಸುಮಾರು 10 ರಿಂದ 15 ಗೋವುಗಳನ್ನು ವಧೆಗೆಂದು ಸಾಗಿಸಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಹಿಂದೂ ಸಂಘಟನೆ ಕಾರ್ಯಕರ್ತರು ವಾಹನವನ್ನು ಹಿಂಬಾಲಿಸಿ ತಡೆಹಿಡಿದಿದ್ದಾರೆ. ಘಟನೆಯಲ್ಲಿ ಚಾಲಕರು ವಾಹನ ಬಿಟ್ಟು ಪರಾರಿಯಾಗಿದ್ದ. ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸರು ಹೆಚ್ಚಿನ ತನಿಖೆ ಮತ್ತು ಕಾನೂನು ಕ್ರಮಕ್ಕಾಗಿ ವಾಹನ ಮತ್ತು 15 ಕ್ಕೂ ಹೆಚ್ಚು ಜಾನುವಾರುಗಳನ್ನು

ಅಕ್ರಮ ಗೋಸಾಗಾಟ ಮಾಡುತ್ತಿದ್ದ ವಾಹನಕ್ಕೆ ಹಿಂದು ಸಂಘಟನೆಯಿಂದ ತಡೆ Read More »

ಬಾವಿಯೊಳಗೆ ಉಸಿರುಕಟ್ಟಿ 8 ಮಂದಿ ಸಾವು

ಸ್ವಚ್ಛಗೊಳಿಸಲು ಇಳಿದವರು ವಿಷಾನಿಲ ಸೇವಿಸಿ ಮೃತ್ಯು ಹೊಸದಿಲ್ಲಿ: ಬಾವಿಯೊಳಗೆ ಉಸಿರುಕಟ್ಟಿ 8 ಮಂದಿ ಸಾವಿಗೀಡಾದ ದಾರುಣ ಘಟನೆ ಮಧ್ಯ ಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ಸಂಭವಿಸಿದೆ. ಛಾಯ್‌ಗಾಂವ್‌ ಮಖಾನ ಎಂಬಲ್ಲಿ ಊರಿನ ಉತ್ಸವದ ವಿಗ್ರಹ ವಿಸರ್ಜನೆಗೆ ಮುಂಚಿತವಾಗಿ ಬಾವಿಯ ನೀರನ್ನು ಸ್ವಚ್ಛಗೊಳಿಸುವ ಕೆಲಸ ನಡೆಯುತ್ತಿದ್ದಾಗ ಬಾವಿಯಲ್ಲಿದ್ದವರು ವಿಷಾನಿಲದಿಂದಾಗಿ ಉಸಿರುಕಟ್ಟಿ ಸಾವಿಗೀಡಾಗಿದ್ದಾರೆ. ಮೊದಲು ಓರ್ವ ಕಾರ್ಮಿಕ ಬಾವಿಗಿಳಿದಿದ್ದು, ಅತ ಉಸಿರುಕಟ್ಟಿ ಒದ್ದಾಡುವುದನ್ನು ನೋಡಿ ಉಳಿದವರು ಅವನನ್ನು ರಕ್ಷಿಸಲು ಇಳಿದಿದ್ದರು. ಆದರೆ ಎಲ್ಲರೂ ಉಸಿರುಕಟ್ಟಿ ಮೇಲೆ ಬರಲಾಗದೆ ಸಾವಿಗೀಡಾಗಿದ್ದಾರೆ. ಈ ಬಾವಿ

ಬಾವಿಯೊಳಗೆ ಉಸಿರುಕಟ್ಟಿ 8 ಮಂದಿ ಸಾವು Read More »

ಬೆಳ್ತಂಗಡಿ : ತರಕಾರಿ ಟೆಂಪೊದಲ್ಲಿ ವಧೆಗಾಗಿ ಸಾಗಿಸುತ್ತಿದ್ದ 15 ಗೋವುಗಳ ರಕ್ಷಣೆ

ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿದ ಹಿಂದೂ ಸಂಘಟನೆ ಕಾರ್ಯಕರ್ತರು ಬೆಳ್ತಂಗಡಿ: ವಧಿಸುವ ಸಲುವಾಗಿ ಮಂಗಳೂರಿಗೆ ಸಾಗಿಸುತ್ತಿದ್ದ ಸುಮಾರು 15 ಗೋವುಗಳನ್ನು ಇಂದು ನಸುಕಿನ ಹೊತ್ತು ಬೆಳ್ತಂಗಡಿ ಸಮೀಪ ರಕ್ಷಿಸಲಾಗಿದೆ. ತರಕಾರಿ ವಾಹನದಲ್ಲಿ ಗೋವು ಸಾಗಾಟ ಮಾಡುತ್ತಿರುವ ಮಾಹಿತಿ ಸಿಕ್ಕಿ ಹಿಂದು ಸಂಘಟನೆಗಳು ವಾಹನವನ್ನು ಹಿಂಬಾಲಿಸಿ ಕಳಿಯ ನಾಯತರ್ಪು ಸಮೀಪದ ಜಾರಿಗೆಬೈಲಿನಲ್ಲಿ ಅಡ್ಡಗಟ್ಟಿದ್ದಾರೆ. ಆಗ ವಾಹನದಲ್ಲಿ ಸುಮಾರು 15 ಗೋವುಗಳನ್ನು ಅತ್ಯಂತ ಹಿಂಸಾತ್ಮಕ ರೀತಿಯಲ್ಲಿ ಸಾಗಿಸುತ್ತಿರುವುದು ಪತ್ತೆಯಾಗಿದೆ.ಮಹೇಶ್‌ ಶೆಟ್ಟಿ ತಿಮರೋಡಿ ನೇತೃತ್ವದ ರಾಷ್ಟ್ರೀಯ ಹಿಂದೂ ಜಾರಣ ವೇದಿಕೆಯ ಕಾರ್ಯಕರ್ತರು ಈ

ಬೆಳ್ತಂಗಡಿ : ತರಕಾರಿ ಟೆಂಪೊದಲ್ಲಿ ವಧೆಗಾಗಿ ಸಾಗಿಸುತ್ತಿದ್ದ 15 ಗೋವುಗಳ ರಕ್ಷಣೆ Read More »

3 ತಿಂಗಳಲ್ಲಿ 49.6 ಕೆಜಿ ಚಿನ್ನ ಸ್ಮಗ್ಲಿಂಗ್‌ ಮಾಡಿದ್ದ ರನ್ಯಾ ರಾವ್‌

ಹವಾಲ ಮೂಲಕ ದುಬೈಗೆ ಕೋಟಿಗಟ್ಟಲೆ ಹಣ ರವಾನೆ ಬೆಂಗಳೂರು : ನಟಿ ರನ್ಯಾ ರಾವ್‌ ಮೂರು ತಿಂಗಳಲ್ಲಿ ಬರೋಬ್ಬರಿ 49.6 ಕೆಜಿ ಚಿನ್ನ ಕಳ್ಳ ಸಾಗಾಟ ಮಾಡಿರುವ ವಿಚಾರ ಬಯಲಾಗಿದೆ. ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನ ಮೂರನೇ ಆರೋಪಿ ಸಾಹಿಲ್ ಜೈನ್ ಡಿಆರ್‌ಐ ಮುಂದೆ ಈ ವಿಚಾರ ಬಾಯಿಬಿಟ್ಟಿದ್ದಾನೆ. ನವಂಬರ್‌ನಿಂದ ರನ್ಯಾ ಬರೋಬ್ಬರಿ 49.6 ಕೆಜಿ ಚಿನ್ನ ಸಾಗಿಸಿದ್ದಾಳೆ. ಈ ಚಿನ್ನವನ್ನೆಲ್ಲ ತಂದು ಸಾಹಿಲ್ ಜೈನ್​ಗೆ ಕೊಟ್ಟಿದ್ದ ರನ್ಯಾ ಅದನ್ನು ಆತನ ಮೂಲಕ ಮಾರಾಟ ಮಾಡಿಸುತ್ತಿದ್ದಳು. ಅಷ್ಟೇ ಅಲ್ಲ

3 ತಿಂಗಳಲ್ಲಿ 49.6 ಕೆಜಿ ಚಿನ್ನ ಸ್ಮಗ್ಲಿಂಗ್‌ ಮಾಡಿದ್ದ ರನ್ಯಾ ರಾವ್‌ Read More »

ರಾಡ್‍ಗಳಿಂದ ಹೊಡೆದಾಡಿಕೊಂಡ ಬಸ್‍ ಸಿಬ್ಬಂದಿಯರು | ಇಬ್ಬರು ಅರೆಸ್ಟ್‍

ಮಣಿಪಾಲ: ಮಣಿಪಾಲದಲ್ಲಿ ಎರಡು ಬಸ್ ಸಿಬ್ಬಂದಿಗಳು ಉಕ್ಕಿನ ರಾಡ್‌ಗಳಿಂದ ಹೊಡೆದಾಡಿಕೊಂಡ ಘಟನೆ ನಡೆದಿದೆ. ರಾಡ್‍ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಜಗಳವಾಡಿದ ಇಬ್ಬರು ಬಸ್‍  ಸಿಬ್ಬಂದಿಯನ್ನು ಬಂಧಿಸಲಾಗಿದೆ. ಬುಧವಾರ ಸಂಜೆ ಮಣಿಪಾಲ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಬಸ್  ಸಿಬ್ಬಂದಿ ಬೀದಿ ಜಗಳದಲ್ಲಿ ತೊಡಗಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗಿದೆ. ವಾಗ್ವಾದದಲ್ಲಿ ಬಸ್ ಕಂಡಕ್ಷರ್‌ಗಳಾದ ಅಲ್ಪಾಜ್ ಮತ್ತು ವಿಜಯಕುಮಾ‌ರ್ ಅವರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಎರಡೂ ಬಸ್‌ಗಳನ್ನು ಮಣಿಪಾಲ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಣಿಪಾಲ

ರಾಡ್‍ಗಳಿಂದ ಹೊಡೆದಾಡಿಕೊಂಡ ಬಸ್‍ ಸಿಬ್ಬಂದಿಯರು | ಇಬ್ಬರು ಅರೆಸ್ಟ್‍ Read More »

ಕಾಡಿನ ಮಧ್ಯೆ ಪತ್ತೆಯಾದ ಹೆಣ್ಣು ಮಗುವಿನ ಪ್ರಕರಣ | ಪೋಷಕರನ್ನು ಪತ್ತೆ ಹಚ್ಚಿದ  ಧರ್ಮಸ್ಥಳ ಪೋಲಿಸರು 

ಉಜಿರೆ :  ಸುಮಾರು ದಿನಗಳ ಹಿಂದೆ  ಬೆಳಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಡೋಳುಕೆರೆ ಕಾಡಿನ ಮಧ್ಯೆ ಪತ್ತೆಯಾದ ಹೆಣ್ಣು ಮಗುವಿನ ಪೋಷಕರನ್ನು ಧರ್ಮಸ್ಥಳ ಪೊಲೀಸರು ಪತ್ತೆ ಮಾಡಿದ್ದಾರೆ. ಕಾಡಿನಲ್ಲಿ ಮಗು ಸಿಕ್ಕಿದ ತಕ್ಷಣ ಗ್ರಾಮದ ಜನರು ಈ ಕುರಿತು ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಗ್ರಾಮಸ್ಥರ  ಸಹಕಾರದೊಂದಿಗೆ ಮಗುವಿನ ತಂದೆ ತಾಯಿಯ ವಿವರಗಳು ಲಭಿಸಿದೆ. ಧರ್ಮಸ್ಥಳ ಪೊಲೀಸ್ ಠಾಣಾ ಸಬ್ ಇನ್ಸೆಕ್ಟರ್ ಸಮರ್ಥ ಆರ್. ಗಾಣಿಗೇರಾ ನೇತೃತ್ವದ ತಂಡವು ಮಗುವಿನ ತಂದೆ ರಂಜಿತ್ ಗೌಡನನ್ನು ಎ.2 ರಂದು

ಕಾಡಿನ ಮಧ್ಯೆ ಪತ್ತೆಯಾದ ಹೆಣ್ಣು ಮಗುವಿನ ಪ್ರಕರಣ | ಪೋಷಕರನ್ನು ಪತ್ತೆ ಹಚ್ಚಿದ  ಧರ್ಮಸ್ಥಳ ಪೋಲಿಸರು  Read More »

error: Content is protected !!
Scroll to Top