ಅಪರಾಧ

ಅಪ್ರಾಪ್ತ ಬಾಲಕಿಯರಿಬ್ಬರಿಗೆ ಲೈಂಗಿಕ ಕಿರುಕುಳ | ಇಬ್ಬರ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಮೂಡುಬಿದಿರೆ : ಅಪ್ರಾಪ್ತ ವಯಸ್ಸಿನ ಬಾಲಕಿಯರಿಬ್ಬರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಯುವಕ  ಮತ್ತು ಮಧ್ಯ ವಯಸ್ಸಿನ ವ್ಯಕ್ತಿ ಸಹಿತ ಇಬ್ಬರನ್ನು ಮೂಡುಬಿದಿರೆ ಪೊಲೀಸರು ಮಂಗಳವಾರ ಬಂಧಿಸಿ ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಪೊಕ್ಸೋ ಪ್ರಕರಣ ದಾಖಲಿಸಿದ್ದಾರೆ. ಪ್ರಾಂತ್ಯ ಗ್ರಾಮದ ಅಜಂಕಲ್ಲುವಿನ ನಿವಾಸಿ ಪ್ರಕಾಶ್ (57) ಹಾಗೂ ಆಲಂಗಾರು ಉಮಿಯದ ಪವನ್ (19) ಎಂಬವರು ಬಂಧಿತ ಆರೋಪಿಗಳು. ಪ್ರಾಂತ್ಯ ಅಜಂಕಲ್ಲುವಿನ ಪ್ರಕಾಶ್ ಎಂಬಾತ ತನ್ನ ಮನೆಯ ಸಮೀಪ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಬಾಲಕಿಯ ಮನೆಗೆ ಯಾರೂ ಇಲ್ಲದಾಗ ಕಳೆದ ಒಂದು […]

ಅಪ್ರಾಪ್ತ ಬಾಲಕಿಯರಿಬ್ಬರಿಗೆ ಲೈಂಗಿಕ ಕಿರುಕುಳ | ಇಬ್ಬರ ವಿರುದ್ಧ ಪೋಕ್ಸೋ ಪ್ರಕರಣ ದಾಖಲು Read More »

ಕೌಟುಂಬಿಕ ಕಲಹ ಹಿನ್ನಲೆ : ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹದ ಕಾರಣದಿಂದ ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ನಡೆದಿದೆ. ಕಬ್ಬಳಿ ಗ್ರಾಮದ ಜಯಂತಿ (60) ಹಾಗೂ ಅವರ ಪುತ್ರ ಭರತ್ (35)  ಆತ್ಮಹತ್ಯೆ ಮಾಡಿಕೊಂಡವರು. ಭರತ್ ಕಳೆದ ಎಂಟು ತಿಂಗಳ ಹಿಂದಷ್ಟೇ ಅರಸೀಕೆರೆ ತಾಲೂಕು ಬಾಗೂರನಹಳ್ಳಿ ಗ್ರಾಮದ ಯುವತಿಯೊಂದಿಗೆ ವಿವಾಹವಾಗಿದ್ದರು. ಅತ್ತೆ-ಸೊಸೆ ನಡುವೆ ಹೊಂದಾಣಿಕೆ ಇಲ್ಲದೆ ಪದೇಪದೇ ಜಗಳ ನಡೆಯುತ್ತಿತ್ತು. ಇದೇ ಕಾರಣಕ್ಕೆ ಭರತ್‌ ಪತ್ನಿ ಮನೆಬಿಟ್ಟು ತವರು ಮನೆಗೆ ಹೋಗಿದ್ದರು. ಕುಟುಂಬಸ್ಥರು

ಕೌಟುಂಬಿಕ ಕಲಹ ಹಿನ್ನಲೆ : ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆ Read More »

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಡಿಜಿಪಿ ರಾಮಚಂದ್ರ ರಾವ್‌ ವಿರುದ್ಧ ತನಿಖೆಗೆ ಆದೇಶ

ವಿಮಾನ ನಿಲ್ದಾಣದಿಂದ ಹೊರಬರಲು ವಿಶೇಷ ಪ್ರೊಟೊಕಾಲ್‌ ಒದಗಿಸಿದ ಅನುಮಾನ ಬೆಂಗಳೂರು: ಕನ್ನಡದ ನಟಿ ರನ್ಯಾ ರಾವ್ ಒಳಗೊಂಡಿರುವ ಚಿನ್ನ ಕಳ್ಳ ಸಾಗಾಟ ಪ್ರಕರಣದಲ್ಲಿ ಆಕೆಯ ಮಲತಂದೆ ಡಿಜಿಪಿ ಡಾ.ರಾಮಚಂದ್ರ ರಾವ್‌ ವಿರುದ್ಧ ತನಿಖೆಗೆ ಆದೇಶಿಸಲಾಗಿದೆ. ರನ್ಯಾಗೆ ವಿಮಾನ ನಿಲ್ದಾಣದಲ್ಲಿ ಪ್ರೊಟೊಕಾಲ್ ನೀಡಿದ ಬಗ್ಗೆ ತನಿಖೆ ನಡೆಸಿ ಒಂದು ವಾರದ ಒಳಗೆ ವರದಿ ಸಲ್ಲಿಸುವಂತೆ ಗೃಹ ಇಲಾಖೆ ಮಂಗಳವಾರ ಆದೇಶಿಸಿದೆ. ಚಿನ್ನ ಸ್ಮಗ್ಲಿಂಗ್ ಪ್ರಕರಣದಲ್ಲಿ ರಾಮಚಂದ್ರ ರಾವ್ ಕೂಡ ಶಾಮಿಲಾಗಿದ್ದಾರೆಯೇ? ದುಬೈನಿಂದ ಬೆಂಗಳೂರಿಗೆ ಚಿನ್ನ ಸಾಗಿಸುವಾಗ ಶಿಷ್ಟಾಚಾರ ದುರ್ಬಳಕೆ

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಡಿಜಿಪಿ ರಾಮಚಂದ್ರ ರಾವ್‌ ವಿರುದ್ಧ ತನಿಖೆಗೆ ಆದೇಶ Read More »

ಸದನದಲ್ಲಿ ಪ್ರತಿಧ್ವನಿಸಿದ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌

ಪ್ರಕರಣದಲ್ಲಿ ಭಾಗಿಯಾಗಿರುವ ಸಚಿವರ ಹೆಸರು ಬಹಿರಂಗಪಡಿಸಲು ಸುನಿಲ್‌ ಕುಮಾರ್‌ ಒತ್ತಾಯ ಬೆಂಗಳೂರು: ಕನ್ನಡ ನಟಿ ರನ್ಯಾ ರಾವ್‌ ಜೊತೆ ನಂಟು ಹೊಂದಿರುವ ರಾಜ್ಯದ ಇಬ್ಬರು ಸಚಿವರ ಹೆಸರು ಬಹಿರಂಗಪಡಿಸಲು ಮತ್ತು ಪ್ರಕರಣದ ತನಿಖೆಯನ್ನು ಪಾರದರ್ಶಕವಾಗಿ ನಡೆಸಲು ಶಾಸಕ ಸುನಿಲ್‌ ಕುಮಾರ್‌ ನಿನ್ನೆ ಸದನದಲ್ಲಿ ಒತ್ತಾಯಸಿದ್ದಾರೆ. ಕಲಾಪದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ಸುನಿಲ್‌ ಕುಮಾರ್‌ ನಟಿಯೊಬ್ಬರು ಭಾರಿ ಪ್ರಮಾಣದ ಚಿನ್ನ ಕಳ್ಳ ಸಾಗಾಟ ಮಾಡಿ ಸಿಕ್ಕಿಬಿದ್ದಿರುವ ವಿಚಾರ ಮಾಧ್ಯಮಗಳಲ್ಲಿ ಬಂದಿದೆ. ಈ ನಟಿಯ ಹಿಂದೆ ಕೆಲವು ಪ್ರಭಾವಿ ವ್ಯಕ್ತಿಗಳಿದ್ದು,

ಸದನದಲ್ಲಿ ಪ್ರತಿಧ್ವನಿಸಿದ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ Read More »

ನೇಣುಬಿಗಿದು ಯುವಕನೋರ್ವ ಆತ್ಮಹತ್ಯೆಗೆ ಶರಣು

ವಿಟ್ಲ: ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ. ನೇತ್ರಕೆರೆ ಕಡಂಬು ನಿವಾಸಿ ವಿಶಾಲ್ (22) ಆತ್ಮಹತ್ಯೆ ಮಾಡಿಕೊಂಡ ಯುವಕ ಎನ್ನಲಾಗಿದೆ. ಮನೆಯಲ್ಲಿ ಯಾರು ಇಲ್ಲದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತರು ತಂದೆ, ತಾಯಿ ಹಾಗು ಸಹೋದರಿಯನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿಯಬೇಕಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ನೇಣುಬಿಗಿದು ಯುವಕನೋರ್ವ ಆತ್ಮಹತ್ಯೆಗೆ ಶರಣು Read More »

ನಟಿ ರಶ್ಮಿಕಾ ಮಂದಣ್ಣಗೆ ಭದ್ರತೆ ಒದಗಿಸಲು ಅಮಿತ್‌ ಶಾಗೆ ಪತ್ರ

ಹೇಳಿಕೆಗಳಿಂದ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿರುವ ನಟಿ ಬೆಂಗಳೂರು: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರಿಗೆ ಭದ್ರತೆ ನೀಡುವಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮತ್ತು ರಾಜ್ಯದ ಗೃಹ ಸಚಿವ ಜಿ.ಪರಮೇಶ್ವರ್‌ ಅವರಿಗೆ ಕೊಡವ ನ್ಯಾಶನಲ್‌ ಕೌನ್ಸಿಲ್‌ ಮನವಿ ಮಾಡಿದೆ. ಜನಪ್ರಿಯ ನಟಿಯಾಗಿರುವ ರಶ್ಮಿಕಾಗೆ ಮಂದಣ್ಣ ಅವರಿಗೆ ಬೆದರಿಕೆಯಿದೆ. ಹೀಗಾಗಿ ಅವರಿಗೆ ಸೂಕ್ತ ಭದ್ರತೆ ಒದಗಿಸಬೇಕೆಂದು ಗೃಹ ಸಚಿವರಿಗೆ ಬರೆದಿರುವ ಪತ್ರದಲ್ಲಿ ಕೊಡವ ನ್ಯಾಶನಲ್‌ ಕೌನ್ಸಿಲ್‌ ಹೇಳಿದೆ. ಹಲವು ಸೂಪರ್‌ ಹಿಟ್‌ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿರುವ ರಶ್ಮಿಕಾ

ನಟಿ ರಶ್ಮಿಕಾ ಮಂದಣ್ಣಗೆ ಭದ್ರತೆ ಒದಗಿಸಲು ಅಮಿತ್‌ ಶಾಗೆ ಪತ್ರ Read More »

ದಿಗಂತ್‌ ಪತ್ತೆ ಆಗ್ರಹಿಸಿ ಪ್ರತಿಭಟನೆ ಮಾಡಿದ ಹಿಂದು ಮುಖಂಡನಿಗೆ ಜೀವ ಬೆದರಿಕೆ

ನಿಮ್ಮ ರಕ್ತ ಈ ಭೂಮಿಗೆ ಹರಿಸದೆ ಬಿಡುವುದಿಲ್ಲ ಎಂದು ಧಮ್ಕಿ ಮಂಗಳೂರು: ನಿಗೂಢವಾಗಿ ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ‌ ಪಿಯುಸಿ ವಿದ್ಯಾರ್ಥಿ ದಿಗಂತ್ ಪತ್ತೆಗೆ ಆಗ್ರಹಿಸಿ ಪ್ರತಿಭಟಿಸಿದ್ದ ಬಜರಂಗದಳ ಮುಖಂಡ ಭರತ್ ಕುಮ್ಡೇಲ್​ ಅವರಿಗೆ ಸಾಮಾಜಿಕ ತಾಣಗಳ ಮೂಲಕ ಕೊಲೆ ಬೆದರಿಕೆ ಹಾಕಲಾಗಿದೆ. BEARY_ROYAL_NAWAB, ಬ್ಯಾರಿ ಟ್ರೋಲರ್, ಮಂಗಳೂರು ಕಿಂಗ್ ಎಂಬ ಹೆಸರಿನ ಪೇಜ್​ಗಳ ಮುಖಾಂತರ ಕೊಲೆ ಬೆದರಿಕೆ ಹಾಕಲಾಗಿದೆ. ದಿಗಂತ್ ಪತ್ತೆಗಾಗಿ ಮಾರ್ಚ್​ 1ರಂದು ಬಜರಂಗದಳ ಮುಖಂಡ ಭರತ್ ನೇತೃತ್ವದಲ್ಲಿ ಫರಂಗೀಪೇಟೆ ಬಂದ್

ದಿಗಂತ್‌ ಪತ್ತೆ ಆಗ್ರಹಿಸಿ ಪ್ರತಿಭಟನೆ ಮಾಡಿದ ಹಿಂದು ಮುಖಂಡನಿಗೆ ಜೀವ ಬೆದರಿಕೆ Read More »

ಗ್ಯಾರೇಜ್‍ ನಲ್ಲಿ ನಿಲ್ಲಿಸಿದ್ದ ಬೈಕ್‍ ಕಳವು

ಪುತ್ತೂರು: ಗ್ಯಾರೇಜೊಂದರಲ್ಲಿ ರಿಪೇರಿಗಾಗಿ ನಿಲ್ಲಿಸಿದ್ದ ಯಮಹಾ R X 100 ಬೈಕ್‌ನ್ನು ಗ್ಯಾರೇಜ್ ಶೆಟರ್‌ನ ಬೀಗ ಒಡೆದು ಕಳವು ಮಾಡಿರುವ ಘಟನೆ ಹಾರಾಡಿಯಲ್ಲಿ ನಡೆದಿದೆ. ಸಾಲ್ಮರ ನಿವಾಸಿ ಜಗದೀಶ್ ಆಚಾರ್ಯ ತನ್ನ ಬೈಕ್‌ನ್ನು ಹಾರಾಡಿ ಗ್ಯಾರೇಜೊಂದರಲ್ಲಿ ರಿಪೇರಿಗಾಗಿ ನಿಲ್ಲಿಸಿದ್ದರು. ಮಾ.10ರಂದು ಬೈಕ್ ತೆಗೆದುಕೊಂಡು ಹೋಗುವ ಕುರಿತು ಗ್ಯಾರೇಜ್ ಮಾಲಕರೊಂದಿಗೆ ಮಾತುಕತೆ ನಡೆದಿತ್ತು. ಆದರೆ ಮಾ.9 ರಂದು ಬೆಳಗ್ಗೆ ಗ್ಯಾರೇಜ್‌ನ ಶೆಟರ್ ಬೀಗ ಒಡೆದಿರುವುದನ್ನು ಗಮನಿಸಿದ ಗ್ಯಾರೇಜ್ ಮಾಲಕರು ಒಳಗೆ ನೋಡಿದಾಗ ಯಮಹಾ R X 100 ಬೈಕ್

ಗ್ಯಾರೇಜ್‍ ನಲ್ಲಿ ನಿಲ್ಲಿಸಿದ್ದ ಬೈಕ್‍ ಕಳವು Read More »

42 ವರ್ಷದ ಅಂಕಲ್‌ ಜೊತೆ 15ರ ಬಾಲಕಿಯ ಲವ್‌ ದುರಂತ ಅಂತ್ಯ

ಒಂದು ತಿಂಗಳ ಬಳಿಕ ದಟ್ಟ ಕಾಡಿನಲ್ಲಿ ಇಬ್ಬರ ಶವ ಪತ್ತೆ ಕಾಸರಗೋಡು: 42 ವರ್ಷದ ಆಟೋ ಚಾಲಕ ಅಂಕಲ್‌ ಜೊತೆ 15ರ ಹರೆಯದ ಶಾಲಾ ಬಾಲಕಿಯ ಪ್ರೀತಿ ಇಬ್ಬರ ಸಾವಿನಲ್ಲಿ ದುರಂತ ಅಂತ್ಯಗೊಂಡ ಘಟನೆಯೊಂದು ಕಾಸರಗೋಡಿನ ಕುಂಬಳೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ. ಕಳೆದ ಫೆ.11ರಂದು ನಾಪತ್ತೆಯಾಗಿದ್ದ ಇವರಿಬ್ಬರ ಮೃತದೇಹಗಳು ಒಂದು ತಿಂಗಳ ಬಳಿಕ ಕಾಡಿನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ನಿನ್ನೆ ಪತ್ತೆಯಾಗಿವೆ.ಕುಂಬಳೆ ಪೈವಳಿಕೆ ಸಮೀಪ ಮಂಡೆಕಾಪು ಗ್ರಾಮದ ಬಳಿ ಈ ಘಟನೆ ನಡೆದಿದೆ. ಆಟೋ

42 ವರ್ಷದ ಅಂಕಲ್‌ ಜೊತೆ 15ರ ಬಾಲಕಿಯ ಲವ್‌ ದುರಂತ ಅಂತ್ಯ Read More »

ವಿದ್ಯಾರ್ಥಿನಿ ಹಾಗೂ ಆಟೋ ಚಾಲಕನ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಕಾಸರಗೋಡು : ಮೂರು ವಾರಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಹಾಗೂ ಆಟೋ ರಿಕ್ಷಾ ಚಾಲಕ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಕುಂಬಳೆ ಠಾಣಾ ವ್ಯಾಪ್ತಿಯ ಕಯ್ಯಾರ್ ಮಂಡಕಾವು ಎಂಬಲ್ಲಿ ಪತ್ತೆಯಾಗಿದೆ. ಮಂಡಕಾಪುವಿನ ಶ್ರೇಯಾ (15) ಮತ್ತು ಆಟೋ ಚಾಲಕ ಪ್ರದೀಪ್ ( 42) ಎಂಬವರ ಮೃತದೇಹ ಪತ್ತೆಯಾದದ್ದು. ಮನೆಯಿಂದ ಅರ್ಧ ಕಿ. ಮೀ ದೂರದ ಕಾಡಿನಲ್ಲಿ ಆದಿತ್ಯವಾರ ಬೆಳಿಗ್ಗೆ 10.30 ರ ವೇಳೆಗೆ ಮೃತದೇಹ ಪತ್ತೆಯಾಗಿದೆ. ನಾಪತ್ತೆಯಾದ ಬಗ್ಗೆ ಲಭಿಸಿದ ದೂರಿನಂತೆ ಪೊಲೀಸರು ತನಿಖೆ ನಡೆಸಿದ್ದರು .

ವಿದ್ಯಾರ್ಥಿನಿ ಹಾಗೂ ಆಟೋ ಚಾಲಕನ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ Read More »

error: Content is protected !!
Scroll to Top