ಅಪರಾಧ

ರನ್ಯಾ ರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಕೇಳಿ ಬರುತ್ತಿದೆ ರಾಜಕೀಯ ನಾಯಕರ ಹೆಸರು

ನಟಿಯ ಕಂಪನಿಗೆ ಮಂಜೂರಾಗಿದೆಯಾ 12 ಎಕರೆ ಜಮೀನು? ಬೆಂಗಳೂರು: ಕನ್ನಡ ನಟಿ ರನ್ಯಾ ರಾವ್‌ ಒಳಗೊಂಡಿರುವ ಗೋಲ್ಡ್‌ ಸ್ಮಗ್ಲಿಂಗ್‌ ಜಾಲದ ಬಾಹುಗಳು ಬಹಳ ವಿಶಾಲವಾಗಿ ಚಾಚಿಕೊಂಡಿವೆ ಎಂಬ ವಿಚಾರ ತನಿಖೆ ಮುಂದುವರಿದಂತೆ ಬಯಲಾಗುತ್ತಿದೆ. ಕೆಲದಿನಗಳ ಹಿಂದೆಯಷ್ಟೇ ದಿಲ್ಲಿ ಮತ್ತು ಮುಂಬಯಿ ವಿಮಾನ ನಿಲ್ದಾಣಗಳಲ್ಲೂ ಭಾರಿ ಪ್ರಮಾಣದ ಚಿನ್ನದ ಬಿಸ್ಕಟ್‌ಗಳು ವಶವಾಗಿದ್ದು, ಈ ಪ್ರಕರಣಗಳಿಗೂ ರನ್ಯಾ ರಾವ್‌ ಒಳಗೊಂಡಿರುವ ಪ್ರಕರಣಕ್ಕೂ ಸಂಬಂಧ ಇದೆ ಎಂಬ ಅನುಮಾನ ಬಂದಿದೆ. ಮೂರು ಕಡೆ ಒಂದೇ ರೀತಿಯ ಚಿನ್ನದ ಬಿಸ್ಕೆಟ್‌ಗಳು ವಶವಾಗಿವೆ. ಮೂರೂ […]

ರನ್ಯಾ ರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಕೇಳಿ ಬರುತ್ತಿದೆ ರಾಜಕೀಯ ನಾಯಕರ ಹೆಸರು Read More »

ಇನ್‍ ಸ್ಟಾಗ್ರಾಂ ಜಾಹೀರಾತಿಗೆ ಮರುಳು | ಲಕ್ಷಾಂತರ ಕಳೆದುಕೊಂಡ ಮಹಿಳೆ

ಪುತ್ತೂರು: ಪುತ್ತೂರು: ಇನ್ ಸ್ಟಾಗ್ರಾಂನಲ್ಲಿ ಬಂದ ಜಾಹೀರಾತಿಗೆ ಮಾರು ಹೋಗಿ ಟ್ರೇಡಿಂಗ್ ಇನ್‌ವೆಸ್ಟೆಂಟ್ ಮಾಡಲು ಹೋಗಿ ಬನ್ನೂರು ನಿವಾಸಿ ಯುವತಿಯೋರ್ವರು 4.90 ಲಕ್ಷ ರೂ. ಕಳೆದುಕೊಂಡಿರುವ ಬಗ್ಗೆ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಪ್ರಸ್ತುತ ಮನೆಯಲ್ಲೇ ಕೆಲಸ ಮಾಡುತ್ತಿದ್ದಾರೆ. ಮಾ.1 ರಂದು  ಇನ್‍ ಸ್ಟಾಗ್ರಾಂನಲ್ಲಿ ನಲ್ಲಿ  ಹೂಡಿಕೆ ಮಾಡಿದರೆ ಲಾಭಾಂಶ ಸಿಗುವ ಬಗ್ಗೆ ಬಂದ , ໖) Instagram d Investment TASK 2 UPI

ಇನ್‍ ಸ್ಟಾಗ್ರಾಂ ಜಾಹೀರಾತಿಗೆ ಮರುಳು | ಲಕ್ಷಾಂತರ ಕಳೆದುಕೊಂಡ ಮಹಿಳೆ Read More »

ಸಿರಿಯಾ : ಭದ್ರತಾ ಪಡೆಗಳಿಂದ 1000ಕ್ಕೂ ಅಧಿಕ ನಾಗರಿಕರ ಹತ್ಯೆ

ಮಾಜಿ ಅಧ್ಯಕ್ಷ ಅಸಾದ್‌ ಬೆಂಬಲಿಗರ ಮೇಲೆ ಪ್ರತೀಕಾರದ ಹಿಂಸಾಚಾರ ಬೇರೂತ್‌: ಸಿರಿಯಾದಲ್ಲಿ ಕಳೆದ ಎರಡು ದಿನಗಳಿಂದ ಭದ್ರತಾ ಪಡೆಗಳು ಮತ್ತು ಪದಚ್ಯುತ ಅಧ್ಯಕ್ಷ ಬಾಶರ್‌ ಅಲ್‌ ಅಸಾದ್‌ ಬೆಂಬಲಿಗರ ನಡುವೆ ನಡೆಯುತ್ತಿರುವ ಭೀಕರ ಹಿಂಸಾಚಾರದಲ್ಲಿ 1000ಕ್ಕೂ ಅಧಿಕ ನಾಗರಿಕರು ಕೊಲ್ಲಲ್ಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೆಡಿಟೇರಿಯನ್‌ ಕರಾವಳಿಯಲ್ಲಿ ಎರಡು ದಿನಗಳಿಂದ ಭೀಕರ ಹಿಂಸಾಚಾರ ನಡೆಯುತ್ತಿದೆ. ದಂಗೆಯೆದ್ದಿರುವ ಅಲ್ವೈಟ್‌ ಸಮುದಾಯದ ಜನರನ್ನು ಭದ್ರತಾ ಪಡೆ ನಿರ್ದಯವಾಗಿ ಸಾಯಿಸುತ್ತಿದೆ ಎನ್ನಲಾಗಿದೆ.ಸಿರಿಯಾದ ಹೊಸ ಸರಕಾರ ಮತ್ತು ಮಾಜಿ ಅಧ್ಯಕ್ಷ ಅಸಾದ್‌ ಬೆಂಬಲಿಗರ ನಡುವೆ

ಸಿರಿಯಾ : ಭದ್ರತಾ ಪಡೆಗಳಿಂದ 1000ಕ್ಕೂ ಅಧಿಕ ನಾಗರಿಕರ ಹತ್ಯೆ Read More »

ಪರೀಕ್ಷೆಗೆ ಹೆದರಿ ಮನೆಬಿಟ್ಟು ಹೋಗಿದ್ದನೇ ದಿಗಂತ್‌?

ಶಿವಮೊಗ್ಗ, ಮೈಸೂರು, ಬೆಂಗಳೂರು ತಿರುಗಾಡಿ ಉಡುಪಿಗೆ ಬಂದಾಗ ಪತ್ತೆ ​ಮಂಗಳೂರು : ಬಂಟ್ವಾಳ ತಾಲೂಕಿನ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ‌ ಪಿಯುಸಿ ವಿದ್ಯಾರ್ಥಿ ದಿಗಂತ್ ನಿಗೂಢ ನಾಪತ್ತೆ ಪ್ರಕರಣ ಕೊನೆಗೂ ನಿನ್ನೆ ಬಗೆಹರಿದಿದೆ. ದಿಗಂತ್‌ ನಾಪತ್ತೆ ಪ್ರಕರಣ ರಾಜ್ಯಾದ್ಯಂತ ಸುದ್ದಿಯಾಗಿ ವಿಧಾನ ಮಂಡಲದ ಕಲಾಪದಲ್ಲೂ ಪ್ರತಿಧ್ವನಿಸಿತ್ತು. ಸ್ಪೀಕರ್‌ ಖಾದರ್‌ ನೀಡಿದ ಸೂಚನೆಯ ಬಳಿಕ ಪೊಲೀಸರು 11 ತಂಡಗಳನ್ನು ರಚಿಸಿ ಹುಡುಕಾಡಿ ದಿಗಂತ್‌ನನ್ನು ನಿನ್ನೆ ಉಡುಪಿಯ ಡಿಮಾರ್ಟ್‌ ಮಾಲ್‌ನಲ್ಲಿ ಪತ್ತೆಹಚ್ಚಿದ್ದಾರೆ. ಹಿಂದು ಸಂಘಟನೆಗಳಿಂದ ಪ್ರತಿಭಟನೆ ಸಹಿತ ಹಲವು ಬೆಳವಣಿಗೆಗಳಿಗೆ ಕಾರಣವಾಗಿದ್ದ

ಪರೀಕ್ಷೆಗೆ ಹೆದರಿ ಮನೆಬಿಟ್ಟು ಹೋಗಿದ್ದನೇ ದಿಗಂತ್‌? Read More »

ತಾಯಿ ಹಚ್ಚಿದ ಅಗರಬತ್ತಿಯಿಂದ ಏಳುತಿಂಗಳ ಮಗು ಮೃತ್ಯು

ಕನಕಗಿರಿ :  ಮಗುವಿಗೆ ಅನಾರೋಗ್ಯವಾಗಿದ್ದರಿಂದ ಅಗರಬತ್ತಿಯಿಂದ ಬಿಸಿ ಮುಟ್ಟಿಸಿದರೆ ಗುಣಮುಖವಾಗಬಹುದೆಂದು ತಿಳಿದು ಏಳು ತಿಂಗಳ ಮಗುವಿಗೆ ಅಗರಬತ್ತಿಯಿಂದ ಬಿಸಿ ಮುಟ್ಟಿಸಿದ್ದು, ಬಳಿಕ ಗುಣ ಪಡಿಸಲು ಮನೆಮದ್ದು ಮಾಡಿದ ಪರಿಣಾಮ ಮಗು ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ಮಗು ಮೃತಪಟ್ಟ ವೇಳೆ ಮರಣೋತ್ತರ ಪರೀಕ್ಷೆ ಮಾಡಿದ ವೈದ್ಯರು ‘ಸುಟ್ಟಗಾಯಗಳಿಂದ ನಂಜಾಗಿ ಮಗು ಸಾವನ್ನಪ್ಪಿದೆ’ ಎಂದು ತಿಳಿಸಿದ್ದಾರೆ. ಈ ಕುರಿತು ಮರಣೋತ್ತರ ಪರೀಕ್ಷೆಯ ವರದಿಯನ್ನೂ ನೀಡಿದ್ದಾರೆ. ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಪ್ರಶಾಂತ್ ಎಂಬುವವರು

ತಾಯಿ ಹಚ್ಚಿದ ಅಗರಬತ್ತಿಯಿಂದ ಏಳುತಿಂಗಳ ಮಗು ಮೃತ್ಯು Read More »

ನಾಪತ್ತೆಯಾದ ದಿಗಂತ್‍ ಪತ್ತೆ

ಬಂಟ್ವಾಳ : ಸುಮಾರು  13 ದಿನಗಳ ಕಾಲ  ನಾಪತ್ತೆಯಾಗಿದ್ದ ದಿಗಂತ್ ಪತ್ತೆಯಾಗಿದ್ದು, ಪೊಲೀಸರು ಕರೆ ತರುತ್ತಿದ್ದಾರೆ ಎಂದು ತಿಳಿದುಬಂದಿದೆ. ಫೆ. 25ರಂದು ದೇವಸ್ಥಾನಕ್ಕೆ ಹೋಗಿ ಬರುತ್ತೇನೆ ಎಂದು ಹೋಗಿದ್ದ ದಿಗಂತ್ ಹಿಂದಿರುಗಿ ಬಂದಿರಲಿಲ್ಲ. ರೈಲ್ವೇ ಹಳಿಯಲ್ಲಿ ಆತನ ಚಪ್ಪಲಿಗಳು, ಮೊಬೈಲ್ ಪತ್ತೆಯಾಗಿ ಸಾಕಷ್ಟು ಅನುಮಾನಗಳ ಜೊತೆ ಗೊಂದಲಕ್ಕೆ ಕಾರಣವಾಗಿತ್ತು. ಫರಂಗಿಪೇಟೆಯಲ್ಲಿ ಪ್ರತಿಭಟನೆ ನಡೆದು ಪೊಲೀಸರು ತನಿಖೆ ಸರಿಯಾಗಿ ಮಾಡಿಲ್ಲ ಎಂಬ ಆರೋಪ ಕೇಳಿ ಬಂದಿತ್ತು. ಆದರೆ ಇದೀಗ ಆತ ಕರಾವಳಿ ಭಾಗದಲ್ಲಿ ಪತ್ತೆಯಾಗಿದ್ದಾನೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ

ನಾಪತ್ತೆಯಾದ ದಿಗಂತ್‍ ಪತ್ತೆ Read More »

ಇಬ್ಬರು ಪ್ರೇಯಸಿಯರ ಜೊತೆ ಸೇರಿ ಮೂರನೆಯ ಪ್ರೇಯಸಿಯನ್ನು ವಿಷದ ಇಂಜೆಕ್ಷನ್‌ ಚುಚ್ಚಿ ಸಾಯಿಸಿದ ಪಾತಕಿ

ಬೆಚ್ಚಿಬೀಳಿಸುತ್ತಿದೆ ಇಂಜಿನಿಯರಿಂಗ್‌ ವಿದ್ಯಾರ್ಥಿ ಎಸಗಿದ ಕೃತ್ಯ ಚೆನ್ನೈ : ಇಬ್ಬರು ಪ್ರೇಯಸಿಯರ ಜೊತೆ ಸೇರಿಕೊಂಡು ಮೂರನೇ ಪ್ರೇಯಸಿಯನ್ನು ಕೊಂದು ಕಮರಿಗೆ ಎಸೆದ ಪ್ರಕರಣವನ್ನು ತಮಿಳುನಾಡಿನ ಸೇಲಂ ಪೊಲೀಸರು ಭೇದಿಸಿದ್ದಾರೆ. ಲೋಗನಾಯಕಿ (35) ಕೊಲೆಯಾದ ಮಹಿಳೆ. ಅವಳ ಪ್ರಿಯಕರ ಇಂಜಿನಿಯರಿಂಗ್‌ ವಿದ್ಯಾರ್ಥಿ ಅಬ್ದುಲ್‌ ಅಝೀಝ್‌ (22) ಮತ್ತು ಅವನ ಪ್ರೇಯಸಿಯರಾದ ಐಟಿ ಉದ್ಯೋಗಿ ತಾವಿಯಾ ಸುಲ್ತಾನ (22) ಮತ್ತು ನರ್ಸಿಂಗ್‌ ವಿದ್ಯಾರ್ಥಿನಿ ಮೋನಿಶಾ (21) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.ತಾವಿಯಾ ಸುಲ್ತಾನ ಮತ್ತು ಮೋನಿಶಾಳನ್ನು ಬಲೆಗೆ ಹಾಕಿಕೊಳ್ಳುವ ಮುನ್ನ ಆರೋಪಿ

ಇಬ್ಬರು ಪ್ರೇಯಸಿಯರ ಜೊತೆ ಸೇರಿ ಮೂರನೆಯ ಪ್ರೇಯಸಿಯನ್ನು ವಿಷದ ಇಂಜೆಕ್ಷನ್‌ ಚುಚ್ಚಿ ಸಾಯಿಸಿದ ಪಾತಕಿ Read More »

ದೂರು ನೀಡಲು ಪೊಲೀಸ್ ಠಾಣೆಗೆ ಬಂದ ವ್ಯಕ್ತಿಯ ಮೇಲೆ ನಾಯಿ ದಾಳಿ

ವಿಟ್ಲ: ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಲು ಹೋದ ವೃದ್ಧರೊಬ್ಬರ ಮೇಲೆ ಸಾಕು ನಾಯಿ ದಾಳಿ ನಡೆಸಿ, ಗಾಯಗೊಳಿಸಿದ ಘಟನೆ ನಡೆದಿದೆ. ಕರೋಪಾಡಿ ಗ್ರಾಮದ ಲಕ್ಷ್ಮಣ ಎಂಬವರು ವಿಚಾರವೊಂದಕ್ಕೆ ಠಾಣೆಗೆ ದೂರು ನೀಡಲು ಹೋಗಿದ್ದರು.  ಈ ಸಂದರ್ಭ ಠಾಣೆಯ ಮುಂಭಾಗ ಇದ್ದ ನಾಯಿ ಅವರ ಮೇಲೆ ಏಕಾಏಕಿ ದಾಳಿ ಮಾಡಿದೆ. ಇದರಿಂದ ಅವರ ಕಾಲಿನ ಮೂರು ಕಡೆ ಕಚ್ಚಿ ಗಾಯಗೊಳಿಸಿದೆ. ತಕ್ಷಣವೇ ಅವರು ಠಾಣೆಯಿಂದ ಬಂದ ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಈ ನಾಯಿ

ದೂರು ನೀಡಲು ಪೊಲೀಸ್ ಠಾಣೆಗೆ ಬಂದ ವ್ಯಕ್ತಿಯ ಮೇಲೆ ನಾಯಿ ದಾಳಿ Read More »

ಬಸ್‌ನಲ್ಲೇ ನೇಣು ಬಿಗಿದುಕೊಂಡು ಮೆಕ್ಯಾನಿಕ್‌ ಆತ್ಮಹತ್ಯೆ

ಬೆಂಗಳೂರು: ಕೆಎಸ್​​ಆರ್​ಟಿಸಿ ಬೆಳಗಾವಿ ಡಿಪೋ 1ರ ಮೆಕಾನಿಕ್​ ಬಸ್​ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ. ಮೆಕಾನಿಕ್ ಕೇಶವ ಕಮಡೊಳಿ (57) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ಕೇಶವ ಕಮಡೊಳಿ ಬೆಳಗಾವಿಯ ಹಳೇ ಗಾಂಧಿನಗರದ ನಿವಾಸಿಯಾಗಿದ್ದು, ಕೆಎಸ್​​ಆರ್​ಟಿಸಿ ಬಸ್​ ವಾಶಿಂಗ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಕೇಶವ್ ಅವರಿಗೆ ಬೆನ್ನು ನೋವಿದ್ದರೂ ಅಧಿಕಾರಿಗಳು ಪಂಚರ್​​ ಕೆಲಸಕ್ಕೆ ಬದಲಾಯಿದ್ದರು ಎನ್ನಲಾಗಿದೆ.ಕೇಶವ ಅವರ ಡ್ಯೂಟಿ ಬದಲಿಸದಂತೆ ಡಿಪೋ ಮ್ಯಾನೇಜರ್​​ ಲಿಂಗರಾಜ ಲಾಠಿ ಅವರು ಸಹಾಯಕ ಕಾರ್ಯ ಅಧೀಕ್ಷಕ ಅನಿಲ್​​​ ಬಾಂದೇಕರ್​ ಅವರಿಗೆ

ಬಸ್‌ನಲ್ಲೇ ನೇಣು ಬಿಗಿದುಕೊಂಡು ಮೆಕ್ಯಾನಿಕ್‌ ಆತ್ಮಹತ್ಯೆ Read More »

ಉಪ್ಪಿನಂಗಡಿ ವಳಾಲಿನಲ್ಲಿ ಅಕ್ರಮ ಮರಳು ಸಾಗಾಟ |  ಲೋಕೋಪಯೋಗಿ ಇಲಾಖೆಯ ಹೆಸರಿನಲ್ಲಿ ಮರಳು ಸಾಗುಸುತ್ತಿರುವ ಖದಿಮರು

ಉಪ್ಪಿನಂಗಡಿ : ಉಪ್ಪಿನಂಗಡಿಯ ವಳಾಲಿನಲ್ಲಿ ಲೋಕೋಪಯೋಗಿ ಇಲಾಖೆಯ ಹೆಸರಿನಲ್ಲಿ ನದಿಯಿಂದ ಮರಳು ತೆಗೆಯುತ್ತಿದ್ದಾರೆ  ಎಂದು ತಿಳಿದು ಬಂದಿದೆ. ಹಿಟಾಚಿಯ ಮುಖೇನ ನದಿಯಿಂದ ಮರಳು ತೆಗೆಯುತ್ತಿದ್ದು, ಅಲ್ಲಿಯ ಸಾರ್ವಜನಿಕರು ಪ್ರಶ್ನೆಸಿದಾಗ ಲೋಕೋಪಯೋಗಿ ಇಲಾಖೆಯ ಕಾಮಗಾರಿಗೆ ಮರಳು ತೆಗೆಯುತ್ತಿರುವುದಾಗಿ ತಿಳಿಸಿದ್ದಾರೆ.   ಲೋಕೋಪಯೋಗಿ ಇಲಾಖೆ ಅಂತಹ ಯಾವುದೇ ಕಾಮಗಾರಿ ನಡೆಸುತ್ತಿಲ್ಲ ಹಾಗೂ ನಮಗೆ ಈ ಬಗ್ಗೆ ಮಾಹಿತಿ ಇಲ್ಲ ಎಂದಿದೆ. ಪ್ರತಿನಿತ್ಯ ಇಲ್ಲಿ ಲೋಡುಗಟ್ಟಲೆ ಮರಳು ತೆಗೆದು ಸಾಗಾಟ ಮಾಡಲಾಗುತ್ತಿದ್ದು ಸರ್ಕಾರದ ಬೊಕ್ಕನಕ್ಕೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗುತ್ತಿದೆ.   ಪೊಲೀಸ್

ಉಪ್ಪಿನಂಗಡಿ ವಳಾಲಿನಲ್ಲಿ ಅಕ್ರಮ ಮರಳು ಸಾಗಾಟ |  ಲೋಕೋಪಯೋಗಿ ಇಲಾಖೆಯ ಹೆಸರಿನಲ್ಲಿ ಮರಳು ಸಾಗುಸುತ್ತಿರುವ ಖದಿಮರು Read More »

error: Content is protected !!
Scroll to Top