ಅಪರಾಧ

ಮಂಗಳೂರಿನಲ್ಲಿ ಹೈಡ್ರೋವಿಡ್ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಮಂಗಳೂರು : ಮಂಗಳೂರು ನಗರ ಪೊಲೀಸರ ಸಿಸಿಬಿ ಘಟಕವು ಗೋವಾದಿಂದ ಮಂಗಳೂರು ಮತ್ತು ಕೇರಳಕ್ಕೆ ಹೈಡೋವಿಡ್ ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ಬಂಧಿಸಿ, 73 ಲಕ್ಷ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಶಮೀರ್ ಪಿ.ಕೆ (42) ಎಂದು ಪತ್ತೆಹಚ್ಚಲಾಗಿದೆ. ಬಂಧಿತ  ಶಮೀರ್ ಪಿ.ಕೆಯನ್ನು ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ಹಿಡಿದು ಬಂದಿಸಲಾಗಿದೆ. ಆತನಿಂದ 738 ಗ್ರಾಂ ಹೈಡ್ರೋವಿಡ್ ಗಾಂಜಾ, ಕಾರು, ಮೊಬೈಲ್ ಫೋನ್ ಸೇರಿದಂತೆ ಒಟ್ಟು 80 ಲಕ್ಷ […]

ಮಂಗಳೂರಿನಲ್ಲಿ ಹೈಡ್ರೋವಿಡ್ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ Read More »

ಬೈಕ್ ಗೆ  ಬಸ್‌ ಡಿಕ್ಕಿ | ಬೈಕ್‍ ಸವಾರ ಗಂಭೀರ ಗಾಯ

ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಬಸ್ ನಿಲ್ದಾಣ ಜಂಕ್ಷನ್ ಬಳಿ ಬೈಕ್ ಗೆ ತಡೆರಹಿತ ಬಸ್ ಡಿಕ್ಕಿಯಾದ ಘಟನೆ ನಡೆದಿದೆ. ಡಿಕ್ಕಿಯಾದ ಪರಿಣಾಮ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಚಿಕಿತ್ಸೆಗೆ  ದಾಖಲಾಗಿದ್ದಾರೆ. ಗಾಯಗೊಂಡವರನ್ನು ಮುಲ್ಕಿ ಅಂಚೆ ಕಚೇರಿಯ ಅಂಚೆಪಾಲಕ ಕೊಲ್ಲೂರು ನಿವಾಸಿ ಪಾಂಡುರಂಗ ರಾವ್ ಎನ್ನಲಾಗಿದೆ. ಗಾಯಾಳು ಪಾಂಡುರಂಗ ರಾವ್ ತಮ್ಮ ಬೈಕ್ ನಲ್ಲಿ ರಾಷ್ಟ್ರೀಯ ಹೆದ್ದಾರಿ ಮುಲ್ಕಿ ಜಂಕ್ಷನ್ ಬಳಿ ಹೆದ್ದಾರಿ ಕ್ರಾಸ್ ಮಾಡುತ್ತಿದ್ದ ವೇಳೆ  ಉಡುಪಿ ಕಡೆಯಿಂದ ಸರ್ವಿಸ್ ರಸ್ತೆಯಲ್ಲಿ ಬಂದ ತಡೆರಹಿತ

ಬೈಕ್ ಗೆ  ಬಸ್‌ ಡಿಕ್ಕಿ | ಬೈಕ್‍ ಸವಾರ ಗಂಭೀರ ಗಾಯ Read More »

ಕಾಡಿನ ರಹಸ್ಯ ಸ್ಥಳದಲ್ಲಿದೆಯೇ ನಕ್ಸಲರ ಶಸ್ತ್ರಾಸ್ತ್ರ?

ನಕ್ಸಲರು ಬಳಸುತ್ತಿದ್ದ ಎಕೆ 47, ಮಷಿನ್‌ ಗನ್‌ ಅರಣ್ಯದೊಳಗೆ ಬಚ್ಚಿಟ್ಟಿರುವ ಶಂಕೆ ಬೆಂಗಳೂರು: ಮುಖ್ಯಮಂತ್ರಿ ಸಮ್ಮುಖದಲ್ಲಿ ಶರಣಾದ ನಕ್ಸಲರು ಆಧುನಿಕ ಶಸ್ತ್ರಾಸ್ತ್ರಗಳನ್ನು ಬಳಸುತ್ತಿದ್ದರು. ಆದರೆ ಇನ್ನೂ ಆ ಶಸ್ತ್ರಾಸ್ತ್ರಗಳನ್ನು ಒಪ್ಪಿಸಿಲ್ಲ. ಒಪ್ಪಿಸುವ ಪ್ರತಿ ಶಸ್ತ್ರಾಸ್ತ್ರಕ್ಕೆ ಪರಿಹಾರ ರೂಪದಲ್ಲಿ ಹಣ ಕೊಡುವುದಾಗಿ ಸರಕಾರ ಪ್ಯಾಕೇಜ್‌ನಲ್ಲಿ ಘೋಷಿಸಿದೆ. ಹೀಗಾಗಿ ನಕ್ಸಲರ ಶಸ್ತ್ರಾಸ್ತ್ರಗಳು ಎಲ್ಲಿವೆ ಎಂಬ ಕುತೂಹಲ ಇದೆ. ಆಧುನಿಕ ಶಸ್ತ್ರಾಸ್ತ್ರಗಳನ್ನು ನಕ್ಸಲರು ಕಾಡಿನ ರಹಸ್ಯ ಸ್ಥಳದಲ್ಲಿ ಅಡಗಿಸಿಟ್ಟಿರುವ ಶಂಕೆ ವ್ಯಕ್ತವಾಗಿದೆ. ಶರಣಾದ ಯಾವೊಬ್ಬ ನಕ್ಸಲ್‌ ಕೂಡ ಆಯುಧಗಳನ್ನು ಪೊಲೀಸರಿಗೆ ನೀಡಿಲ್ಲ.

ಕಾಡಿನ ರಹಸ್ಯ ಸ್ಥಳದಲ್ಲಿದೆಯೇ ನಕ್ಸಲರ ಶಸ್ತ್ರಾಸ್ತ್ರ? Read More »

ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು | ಆರೋಪಿ ನಸೀಮಾ ಬಂಧನ

ಉಪ್ಪಿನಂಗಡಿ: ಮಹಿಳೆಯೋರ್ವರ ಬ್ಯಾಗಿನಿಂದ 114 ಗ್ರಾಂ ತೂಕದ ಚಿನ್ನಾಭರಣದ ಬಾಕ್ಸ್ ಎಗರಿಸಿದ್ದ ಪ್ರಕರಣ ಬಸ್‍ ನಿಲ್ದಾಣದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಉಪ್ಪಿನಂಗಡಿ ಪೊಲೀಸರು ಬಂಟ್ವಾಳ ತಾಲೂಕು ಕೊಮಿನಡ್ಕ ಮನೆ ನಿವಾಸಿ ನಸೀಮಾ (31) ಎಂಬಾಕೆಯನ್ನು ಬಂಧಿಸಿ, ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಕಡಬ ತಾಲೂಕು ಬಂಟಿ ಗ್ರಾಮದ ನೆಕ್ಕಿತದ ನಿವಾಸಿ ಮುಸ್ತಫಾ ಅವರ ಪತ್ನಿ ಅಬೀಬಾ ಅವರು ಭಾವನ ಪತ್ನಿ ಹಸೀರಾಬಾನು ಮದುವೆ ಕಾರ್ಯಕ್ರಮಕ್ಕೆ ಹೊರಡುವ ಮೊದಲು ಮನೆಯಲ್ಲಿದ್ದ ಅವರ ಸುಮಾರು 8 ಗ್ರಾಂ ತೂಕದ ಚಿನ್ನದ ನೆಕ್ಸಸ್ -1

ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು | ಆರೋಪಿ ನಸೀಮಾ ಬಂಧನ Read More »

ಮುಕ್ಕದಲ್ಲಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆ ಸೆರೆ

ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಬಾಂಗ್ಲಾದೇಶದ ಅಕ್ರಮ ಪ್ರಜೆ ಮಂಗಳೂರು: ಸುರತ್ಕಲ್‌ ಸಮೀಪ ಮುಕ್ಕದಲ್ಲಿ ಅಕ್ರಮವಾಗಿ ವಾಸವಾಗಿದ್ದ ಬಾಂಗ್ಲಾದೇಶದ ಪ್ರಜೆಯೊಬ್ಬನನ್ನು ರಾಜ್ಯ ಆಂತರಿಕ ಭದ್ರತಾ ವಿಭಾಗ ಮತ್ತು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಾಂಗ್ಲಾದೇಶದ ರಾಜಶಾಹಿ ಜಿಲ್ಲೆಯ ಅನರುಲ್ ಶೇಖ್​ (25) ಸೆರೆಯಾದವ.ಅನರುಲ್ ಶೇಖ್ ಮೂರು ವರ್ಷಗಳ ಹಿಂದೆ ಅಂತಾರಾಷ್ಟ್ರಿಯ ಗಡಿರೇಖೆ ಲಾಲ್​​​ಗೋಲ್ ಮೂಲಕ ಅಕ್ರಮವಾಗಿ ಭಾರತದೊಳಗೆ ಪ್ರವೇಶಿಸಿದ್ದ. ಬಳಿಕ ಪಶ್ಚಿಮ ಬಂಗಾಳದ ಮುರ್ಷಿದಾಬಾದ್​ನಿಂದ ಉಡುಪಿಗೆ ಬಂದಿದ್ದ. ಇಲ್ಲಿಂದ ಮಂಗಳೂರು ಹೊರವಲಯದ ಮುಕ್ಕ ಗ್ರಾಮದ ರೋಹನ್ ಎಸ್ಟೇಟ್​​ನಲ್ಲಿ ಕಟ್ಟಡ

ಮುಕ್ಕದಲ್ಲಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆ ಸೆರೆ Read More »

ಮೇರಠ್‌ : ಒಂದೇ ಕುಟುಂಬದ ಐವರ ಕೊಲೆ

ಮೂರು ಮಕ್ಕಳ ಶವಗಳನ್ನು ಮಂಚದೊಳಗಿಟ್ಟಿದ್ದ ಹಂತಕರು ಲಖನೌ: ಉತ್ತರ ಪ್ರದೇಶದ ಮೇರಠ್‌ ಜಿಲ್ಲೆಯ ಲಿಸಡಿ ಗೇಟ್‌ ಎಂಬಲ್ಲಿ ಒಂದೇ ಕುಟುಂಬದ ಐದು ಮಂದಿ ಕೊಲೆಯಾದ ಸ್ಥಿತಿಯಲ್ಲಿ ಮನೆಯೊಳಗೆ ಪತ್ತೆಯಾಗಿದ್ದಾರೆ. ತಂದೆ, ತಾಯಿ ಮತ್ತು ಮೂರು ಮಕ್ಕಳನ್ನು ಕೊಲೆಮಾಡಿದ್ದಾರೆ. ತಂದೆ, ತಾಯಿ ಶವ ನೆಲದಲ್ಲಿ ಬಿದ್ದಿದ್ದರೆ ಮಕ್ಕಳ ಶವಗಳು ಮಂಚದೊಳಗಿನ ಬಾಕ್ಸ್‌ನಲ್ಲಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆಯಾದವರನ್ನು ಮೊಯಿನ್‌, ಅವರ ಹೆಂಡತಿ ಅಸ್ಮಾ ಮಕ್ಕಳಾದ ಅಫ್ಸಾ (8), ಅಜೀಜ (4) ಮತ್ತು ಅದಿಬ(1) ಎಂದು ಗುರುತಿಸಲಾಗಿದೆ. ಕೆಲದಿನಗಳಿಂದ ಮನೆಯವರು

ಮೇರಠ್‌ : ಒಂದೇ ಕುಟುಂಬದ ಐವರ ಕೊಲೆ Read More »

ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ. ನರಿಮೊಗರು ಮುಗೇರಡ್ಕ ಮನೆ ನಿವಾಸಿ ವಿದ್ಯಾರ್ಥಿನಿ ದೀಕ್ಷಿತ ಜೋಗಿ (17) ಆತ್ಮಹತ್ಯೆ ಮಾಡಿಕೊಂಡ ಯುವತಿ. ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ಓದುತ್ತಿರುವ ದೀಕ್ಷಿತ ಜೋಗಿ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ Read More »

ಅತ್ಯಾಚಾರ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ತಾತ್ಕಾಲಿಕವಾಗಿ  ರಿಲೀಫ್‌ ಆದ ಪ್ರಜ್ವಲ್ ರೇವಣ್ಣ

ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿಕೊಂಡು ಬಂಧನದಲ್ಲಿದ್ದ ಪ್ರಜ್ವಲ್ ರೇವಣ್ಣ ರಿಗೆ ಹೈಕೋರ್ಟ್ ತಾತ್ಕಾಲಿಕವಾಗಿ ರಿಲೀಫ್ ನೀಡಿದೆ. ಪ್ರಕರಣ ರದ್ದು ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಆರೋಪ ನಿಗದಿ ಮಾಡದಂತೆ ಹೈಕೋರ್ಟ್‌ನ ನ್ಯಾ.ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ತಡೆ ನೀಡಿದೆ. ಜ.13ಕ್ಕೆ ವಿಚಾರಣಾಧೀನ ಕೋರ್ಟ್‌ನಲ್ಲಿ ಆರೋಪ ನಿಗದಿಗೆ ನಿಗದಿಯಾಗಿತ್ತು. ಸದ್ಯ ಹೈಕೋರ್ಟ್‌ ಆದೇಶದಿಂದ ಪ್ರಜ್ವಲ್‌ಗೆ ರಿಲೀಫ್ ಸಿಕ್ಕಿದೆ. ಮುಂದಿನ ಆದೇಶದ ವರೆಗೆ ಆರೋಪ ನಿಗದಿ ಮಾಡದಂತೆ ಹೈಕೋರ್ಟ್ ಸೂಚನೆ ನೀಡಿದೆ. ಇನ್ನು ಮುಂದಿನ

ಅತ್ಯಾಚಾರ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ತಾತ್ಕಾಲಿಕವಾಗಿ  ರಿಲೀಫ್‌ ಆದ ಪ್ರಜ್ವಲ್ ರೇವಣ್ಣ Read More »

ಲಂಚ ಸ್ವೀಕರಿಸಿದ ನಿಮಿತ್ತ ಮುಲ್ಕಿ ಕಂದಾಯ ನಿರೀಕ್ಷಕನ ಜಾಮೀನು ಅರ್ಜಿ ರದ್ದು

ಮಂಗಳೂರು : ಲಂಚ ಸ್ವೀಕರಿಸುತ್ತಿದ್ದ ವೇಳೆ  ಸಿಕ್ಕಿಬಿದ್ದು ನ್ಯಾಯಾಂಗ ಬಂಧನದಲ್ಲಿರುವ ಮೂಲ್ಕಿ ಕಂದಾಯ ನಿರೀಕ್ಷಕ ಜಿ.ಎಸ್‌.ದಿನೇಶ್ ಅವರ ಜಾಮೀನು ಅರ್ಜಿಯನ್ನು ಮಂಗಳೂರು ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯ ವಜಾಗೊಳಿಸಿದೆ. ನ್ಯಾಯಾಧೀಶೆ ಸಂಧ್ಯಾ ಎಸ್ ಅರ್ಜಿಯನ್ನು ವಜಾಗೊಳಿಸಿ, ನ್ಯಾಯಾಂಗ ಬಂಧನವನ್ನು ವಿಸ್ತರಿಸಿದ್ದಾರೆ. 2024ರ ಡಿಸೆಂಬರ್ 19ರಂದು 4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಿನೇಶ್ ಅವರನ್ನು ಬಂಧಿಸಿದ್ದಲ್ಲದೆ, ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಲೋಕಾಯುಕ್ತ ಸಂಸ್ಥೆಯ ಪರವಾಗಿ ವಿಶೇಷ

ಲಂಚ ಸ್ವೀಕರಿಸಿದ ನಿಮಿತ್ತ ಮುಲ್ಕಿ ಕಂದಾಯ ನಿರೀಕ್ಷಕನ ಜಾಮೀನು ಅರ್ಜಿ ರದ್ದು Read More »

ತಾಯಿಯೇ ಐದು ವರ್ಷದ ಮಗುವಿಗೆ ಬಿಸಿ ಪಾತ್ರೆಯಿಂದ ಸುಟ್ಟ ಪ್ರಕರಣ| 10 ಸಾವಿರ ರೂ. ದಂಡ ವಿಧಿಸಿದ ನ್ಯಾಯಲಾಯ

ಸುಳ್ಯ: ತಾಯಿಯೊಬ್ಬಳು ತನ್ನ  ಐದು ವರ್ಷದ ಮಗುವಿಗೆ ಬಿಸಿ ಪಾತ್ರೆಯಿಂದ ಸುಟ್ಟು ಗಾಯಗೊಳಿಸಿದ ಘಟನೆ ನಾವೂರಿನಲ್ಲಿ ನಡೆದಿದೆ. ಪ್ರಕರಣಕ್ಕೆ ಹಿನ್ನಲೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ, ಆರೋಪ ಸಾಬೀತಾಗಿದ್ದು, ಆರೋಪಿಗೆ ಶಿಕ್ಷೆ ವಿಧಿಸಲಾಗಿದೆ. ಆರೋಪಿ ತಾಯಿ ಕಾವ್ಯಶ್ರೀ ಎಂದು ಗುರುತಿಸಲಾಗಿದೆ. ಸುಳ್ಯ ಗಾಂಧಿನಗರ ನಾವೂರು ಎಂಬಲ್ಲಿ ತಾಯಿಯೋರ್ವಳು ಬಿಸಿ ಹಾಲಿನ ಪಾತ್ರೆಯಿಂದ ತನ್ನ ಐದು ವರ್ಷ ಪ್ರಾಯದ ಪುತ್ರಿಯ ದೇಹದ ವಿವಿಧ ಕಡೆ ಸುಟ್ಟಿರುವಂತದ್ದು ಆ.16  2022ರಂದು ನಡೆದಿದೆ.  ಈ ಕುರಿತು ತಾಯಿ ಕಾವ್ಯಶ್ರೀ ವಿರುದ್ಧ ಮಹಿಳಾ ಮತ್ತು

ತಾಯಿಯೇ ಐದು ವರ್ಷದ ಮಗುವಿಗೆ ಬಿಸಿ ಪಾತ್ರೆಯಿಂದ ಸುಟ್ಟ ಪ್ರಕರಣ| 10 ಸಾವಿರ ರೂ. ದಂಡ ವಿಧಿಸಿದ ನ್ಯಾಯಲಾಯ Read More »

error: Content is protected !!
Scroll to Top