ಅಪರಾಧ

ರೈಲ್ವೇ ಟ್ರ್ಯಾಕಿನಲ್ಲಿ ಪತ್ತೆಯಾಯ್ತು KSRTC ಚಾಲಕನ ಮೃತದೇಹ!

ಪುತ್ತೂರು: ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕನ ಮೃತದೇಹ ಕಾಣಿಯೂರು ರೈಲ್ವೇ ಟ್ರ್ಯಾಕಿನಲ್ಲಿ ಶುಕ್ರವಾರ ಬೆಳಿಗ್ಗೆ ಪತ್ತೆಯಾಗಿದೆ. ಕುಸುಮಾಧರ ಗೌಡ ಅಭೀರ (34 ವ.) ಎಂಬವರ ಮೃತದೇಹ ಇದಾಗಿದೆ. ಗುರುವಾರ ರಾತ್ರಿ ಕರ್ತವ್ಯದಿಂದ ತೆರಳಿದ್ದು, ಬಳಿಕ ನಾಪತ್ತೆಯಾಗಿದ್ದರು. ಶುಕ್ರವಾರ ಬೆಳಿಗ್ಗೆ ಮೃತದೇಹ ರೈಲ್ವೇ ಟ್ರ್ಯಾಕಿನಲ್ಲಿ ಪತ್ತೆಯಾಗಿದೆ. ಕೆ.ಎಸ್.ಆರ್.ಟಿ.ಸಿ. ಪುತ್ತೂರು ವಿಭಾಗದಲ್ಲಿ ಚಾಲಕ ಕಂ ನಿರ್ವಾಹಕರಾಗಿ ಕುಸುಮಾಧರ ಕೆಲಸ ನಿರ್ವಹಿಸುತ್ತಿದ್ದರು. 1 ವರ್ಷದ ಹಿಂದೆ ವಿವಾಹವಾಗಿದ್ದರು. ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರೈಲ್ವೇ ಟ್ರ್ಯಾಕಿನಲ್ಲಿ ಪತ್ತೆಯಾಯ್ತು KSRTC ಚಾಲಕನ ಮೃತದೇಹ! Read More »

ಶಾಸಕ ಸಂಜೀವ ಮಠಂದೂರು ಅವರ ಮಾನಹಾನಿ | ಕ್ರಮಕೈಗೊಳ್ಳಲು ಶಾಸಕರ ಆಪ್ತ ಸಹಾಯಕರಿಂದ ದೂರು

ಪುತ್ತೂರು: ಶಾಸಕ ಸಂಜೀವ ಮಠಂದೂರು ಅವರನ್ನು ಹೋಲುವ ಫೊಟೋಗಳನ್ನು ಮಹಿಳೆಯ ಫೊಟೊದೊಂದಿಗೆ ಜೋಡಣೆ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಲಾಗುತ್ತಿದೆ. ಈ ಬಗ್ಗೆ ತಕ್ಷಣ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಶಾಸಕರ ಆಪ್ತ ಸಹಾಯಕ ವಸಂತ್ ಎಸ್. ದೂರಿದ್ದಾರೆ. ಹಲಸೂರು ಗೇಟ್ ಪೊಲೀಸ್ ಠಾಣೆಯ ಸೈಬರ್ ಕ್ರೈಮ್ ವಿಭಾಗಕ್ಕೆ ನೀಡಿರುವ ದೂರಿನಲ್ಲಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಸಂಜೀವ ಮಠಂದೂರು ಅವರ ಫೊಟೋವನ್ನು ಮಹಿಳೆಯೊಬ್ಬರ ಫೊಟೋದೊಂದಿಗೆ ಎಡಿಟ್

ಶಾಸಕ ಸಂಜೀವ ಮಠಂದೂರು ಅವರ ಮಾನಹಾನಿ | ಕ್ರಮಕೈಗೊಳ್ಳಲು ಶಾಸಕರ ಆಪ್ತ ಸಹಾಯಕರಿಂದ ದೂರು Read More »

ಎಡಿಟ್ ಫೊಟೋ ವೈರಲ್ | ಠಾಣೆ ಮೆಟ್ಟಿಲೇರಿದ ಸಂತ್ರಸ್ತ ಮಹಿಳೆ

ಪುತ್ತೂರು: ಜನಪ್ರತಿನಿಧಿಯವರ ಫೊಟೋದೊಂದಿಗೆ ತನ್ನ ಫೊಟೋವನ್ನು ಎಡಿಟ್ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಲಾಗುತ್ತಿದೆ. ಫೊಟೋ ಎಡಿಟ್ ಮಾಡಿ, ವೈರಲ್ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಂತ್ರಸ್ತ ಮಹಿಳೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತನ್ನ ಖಾಸಗಿ ಫೊಟೋವನ್ನು ಎಡಿಟ್ ಮಾಡಿ, ಜನಪ್ರತಿನಿಧಿಯೊಂದಿಗೆ ಜೋಡಿಸಲಾಗಿದೆ. ಈ ಫೊಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು, ದೌರ್ಜನ್ಯ ನಡೆಸಲಾಗುತ್ತಿದೆ. ಓರ್ವ ಮಹಿಳೆಯ ಮೇಲೆ ಇಷ್ಟು ದೊಡ್ಡ ಆರೋಪ ಸರಿಯಲ್ಲ. ಇಂತಹ ಘಟನೆಯಿಂದಾಗಿ ತನಗೆ ಹಾಗೂ ತನ್ನ ಮನೆಮಂದಿಗೆ ತೀವ್ರ

ಎಡಿಟ್ ಫೊಟೋ ವೈರಲ್ | ಠಾಣೆ ಮೆಟ್ಟಿಲೇರಿದ ಸಂತ್ರಸ್ತ ಮಹಿಳೆ Read More »

ರಾಜಕಾರಣಿಯೊಬ್ಬರೊಂದಿಗೆ ಮಹಿಳೆಯ ಅಶ್ಲೀಲ ರೀತಿಯ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ | ಮಹಿಳೆಯಿಂದ ಉಪ್ಪಿನಂಗಡಿ ಠಾಣೆಗೆ ದೂರು

ಉಪ್ಪಿನಂಗಡಿ : ಪ್ರತಿಷ್ಠಿತ ರಾಜಕಾರಣಿಯೊಬ್ಬರ ಫೋಟೊವನ್ನು ಮಹಿಳೆಯೊಂದಿಗೆ ಅಶ್ಲೀಲ ರೀತಿಯಲ್ಲಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಈ ಕುರಿತು ಮಹಿಳೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಹಿಂದೆ ರಾಜಕೀಯದಲ್ಲಿ ಸಕ್ರಿಯವಾಗಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ನೆಕ್ಕಿಲಾಡಿಯ ಮಹಿಳೆಯೋರ್ವರು ದೂರು ನೀಡಿದ್ದಾರೆ. ದೂರಿನಲ್ಲಿ – ತನ್ನ ಫೋಟೊವನ್ನು ವಿಭಿನ್ನ ರೀತಿಯಲ್ಲಿ ಅಸಹ್ಯಕರವಾಗಿ, ಅಶ್ಲೀಲವಾಗಿ ಪ್ರತಿಷ್ಠಿತ ರಾಜಾಕರಣಿ ಜತೆಗೆ ಜೋಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದಾರೆ. ಈ ರೀತಿ ಮಾಡಿ ತನ್ನ ಘನತೆಗೆ ಕುಂದುಂಟು ಮಾಡಿರುವ ಅಪರಿಚಿತ

ರಾಜಕಾರಣಿಯೊಬ್ಬರೊಂದಿಗೆ ಮಹಿಳೆಯ ಅಶ್ಲೀಲ ರೀತಿಯ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ | ಮಹಿಳೆಯಿಂದ ಉಪ್ಪಿನಂಗಡಿ ಠಾಣೆಗೆ ದೂರು Read More »

ಕ್ರಿಕೆಟಿಗ ಪ್ರಥ್ವಿ ಶಾ ಮತ್ತು ಆಶೀಶ್​ ಯಾದವ್ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಿದ ಯೂ ಟ್ಯೂಬರ್‌ ಸಪ್ನಾ ಗಿಲ್‌

ಮುಂಬಯಿಯ ಹೋಟೆಲಲ್ಲಿ ಕಿತ್ತಾಡಿಕೊಂಡ ಘಟನೆ ಮುಂಬಯಿ : ಯೂ ಟ್ಯೂಬರ್‌ ಸಪ್ನಾ ಗಿಲ್ ಎಂಬಾಕೆ ಕ್ರಿಕೆಟಿಗ ಪೃಥ್ವಿ ಶಾ ಮತ್ತು ಅವರ ಸ್ನೇಹಿತ ಆಶಿಶ್ ಸುರೇಂದ್ರ ಯಾದವ್ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಿದ್ದಾರೆ. ಐಪಿಸಿಯ ಸೆಕ್ಷನ್ 354, 509, 324ರ ಅಡಿಯಲ್ಲಿ ಕ್ರಿಕೆಟಿಗನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಪ್ನಾ ಗಿಲ್ ಪೃಥ್ವಿ ಶಾ ಮತ್ತು ಆಶೀಶ್​ ಯಾದವ್ ವಿರುದ್ಧ ಅಂಧೇರಿಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಲೈಂಗಿಕ ದೌರ್ಜನ್ಯದ ಕೇಸು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಕೋರ್ಟ್ ವಿಚಾರಣೆ ನಡೆಸುವುದಾಗಿ ತಿಳಿಸಿದೆ.ಕಿರುಕುಳ

ಕ್ರಿಕೆಟಿಗ ಪ್ರಥ್ವಿ ಶಾ ಮತ್ತು ಆಶೀಶ್​ ಯಾದವ್ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಿದ ಯೂ ಟ್ಯೂಬರ್‌ ಸಪ್ನಾ ಗಿಲ್‌ Read More »

ಚುಂಬನ ಪ್ರಕರಣದಲ್ಲಿ 16 ವರ್ಷದ ಬಳಿಕ ಶಿಲ್ಪಾ ಶೆಟ್ಟಿ ನಿರ್ದೋಷಿ

2007ರಲ್ಲಿ ರಾಜಸ್ಥಾನದಲ್ಲಿ ನಡೆದ ಘಟನೆ ಮುಂಬಯಿ : ಸಾರ್ವಜನಿಕ ವೇದಿಕೆಯಲ್ಲಿ ಹಾಲಿವುಡ್‌ ನಟ ರಿಚರ್ಡ್‌ ಗೇರ್‌ ಅವರನ್ನು ಚುಂಬಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಶಿಲ್ಪಾ ಶೆಟ್ಟಿ 16 ವರ್ಷದ ಬಳಿಕ ನಿರ್ದೋಷಿ ಎಂದು ಸಾಬೀತಾಗಿದ್ದಾರೆ.ಈ ಪ್ರಕರಣದಲ್ಲಿ ಶಿಲ್ಪಾ ಶೆಟ್ಟಿ ನಿರ್ದೋಷಿ ಎಂದು ಹೇಳಿ ಖುಲಾಸೆಗೊಳಿಸಿದ್ದ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ತೀರ್ಪನ್ನು ಮುಂಬಯಿಯ ಸೆಷನ್ಸ್‌ ಕೋರ್ಟ್‌ ಎತ್ತಿ ಹಿಡಿದಿದೆ.2007ರಲ್ಲಿ ರಾಜಸ್ಥಾನದಲ್ಲಿ ಏಡ್ಸ್‌ ಜಾಗೃತಿ ಕಾರ್ಯಕ್ರಮವೊಂದರ ವೇದಿಕೆಯಲ್ಲಿ ನಟ ರಿವರ್ಡ್‌ ಗೇರ್‌ ಅವರು ಶಿಲ್ಪಾ ಶೆಟ್ಟಿಯನ್ನು ಬರಸೆಳೆದು ಅಪ್ಪಿ ಹಿಡಿದು ಚುಂಬಿಸಿದ್ದರು.

ಚುಂಬನ ಪ್ರಕರಣದಲ್ಲಿ 16 ವರ್ಷದ ಬಳಿಕ ಶಿಲ್ಪಾ ಶೆಟ್ಟಿ ನಿರ್ದೋಷಿ Read More »

ಐಪಿಎಲ್‌ ಪಂದ್ಯದಲ್ಲಿ ಅಭಿಮಾನಿಯೊಬ್ಬ ಪಂಜುರ್ಲಿ ದೈವದ ವೇಷಧಾರಿ : ತುಳುವರಿಂದ ಭಾರಿ ಆಕ್ರೋಶ

ತುಳುನಾಡಿನ ದೈವಗಳಿಗೆ ಅವಮಾನ ಮಾಡಬೇಡಿ-ಕಾಂತಾರ-2 ಬೇಡ ಎಂದು ಒತ್ತಾಯ ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಮುಂಬೈ ಇಂಡಿಯನ್ಸ್ ಮತ್ತು ಆರ್‌ಸಿಬಿ ಐಪಿಎಲ್‌ ಪಂದ್ಯದಲ್ಲಿ ಅಭಿಮಾನಿಯೊಬ್ಬ ಪಂಜುರ್ಲಿ ದೈವದ ವೇಷ ಹಾಕಿಕೊಂಡು ಬಂದಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ತನ್ನ ನೆಚ್ಚಿನ ತಂಡಕ್ಕೆ ಬೆಂಬಲ ನೀಡಲು ಆತ ಪಂಜುರ್ಲಿ ವೇಷ ಹಾಕಿದ್ದಾನೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಈ ಫೋಟೊವನ್ನು ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ. ಕ್ರೀಡಾಂಗಣದಲ್ಲಿ ದೈವದ ವೇಷ ಹಾಕಿದ್ದನ್ನು ನೋಡಿ ತುಳುವರು ಆಕ್ರೋಶ

ಐಪಿಎಲ್‌ ಪಂದ್ಯದಲ್ಲಿ ಅಭಿಮಾನಿಯೊಬ್ಬ ಪಂಜುರ್ಲಿ ದೈವದ ವೇಷಧಾರಿ : ತುಳುವರಿಂದ ಭಾರಿ ಆಕ್ರೋಶ Read More »

ಉಪ್ಪಿನಂಗಡಿ: ಬಟ್ಟೆ ಮಳಿಗೆಗೆ ಬೆಂಕಿ

ಉಪ್ಪಿನಂಗಡಿ: ಇಲ್ಲಿನ ಬಟ್ಟೆ ಮಳಿಗೆ ವಿವಾ ಫ್ಯಾಶನ್‍ ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಉಪ್ಪಿನಂಗಡಿ ಮುಖ್ಯಪೇಟೆಯಲ್ಲೇ ಇರುವ ವಿವಾ ಫ್ಯಾಷನ್ ನ 1ನೇ ಹಾಗೂ 2ನೇ ಮಹಡಿಯಲ್ಲಿ ಈ ಶೋ ರೂಂ ಇದೆ. ಬೆಳಗ್ಗೆ ಮಳಿಗೆಯಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು, ಅಗ್ನಿಶಾಮಕ ಹಾಗೂ ಸ್ಥಳಿಯರ ಗಮನಕ್ಕೆ ತಂದಿದ್ದಾರೆ. ಈ ಕಟ್ಟಡದ ನೆಲ ಅಂತಸ್ತಿನಲ್ಲೀ ಅನೇಕ ಅಂಗಡಿ ಮಳಿಗೆಗಳಿವೆ.

ಉಪ್ಪಿನಂಗಡಿ: ಬಟ್ಟೆ ಮಳಿಗೆಗೆ ಬೆಂಕಿ Read More »

ಬೈಕ್‌-ಕಾರು ಡಿಕ್ಕಿ : ತಂದೆ-ಮಗಳ ಸಾವು

ರಾಮನಗರ : ಮಗಳನ್ನು ಶಾಲೆಗೆ ಬಿಟ್ಟು ಬರಲು ಹೋಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ತಂದೆ-ಮಗಳು ಸಾವನ್ನಪ್ಪಿರುವ ದುರಂತ ಘಟನೆ ರಾಮನಗರದಲ್ಲಿ ಸಂಭವಿಸಿದೆ. ಕಾರೊಂದು ಬೈಕ್‌ನ ಹಿಂಬದಿಯಿಂದ ಡಿಕ್ಕಿ ಹೊಡೆದು ತಂದೆ ಮತ್ತು ಮಗಳು ಸ್ಥಳದಲ್ಲೇ ಪ್ರಾಣ ಕಳೆದುಕೊಂಡ ಘಟನೆ ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದ ಸಾಬರಪಾಳ್ಯ ಬಳಿ ನಡೆದಿದೆ. ಯೋಗೇಶ್(47), ಹರ್ಷಿತಾ(14) ಅಪಘಾತದಲ್ಲಿ ಮೃತಪಟ್ಟವರು. ಮೃತರು ಮಾಗಡಿಯ ಕಲ್ಯಾ ಗ್ರಾಮದ ನಿವಾಸಿಗಳಾಗಿದ್ದು, ಪ್ರತಿನಿತ್ಯ ಶಾಲೆಗೆ ಬಿಡುತ್ತಿದ್ದಂತೆ ಮಗಳನ್ನು ಬೈಕ್‌ನಲ್ಲಿ ಕೂರಿಸಿಕೊಂಡು ತಂದೆ ಶಾಲೆಯತ್ತ ಸಾಬರಪಾಳ್ಯದ ಮಾರ್ಗವಾಗಿ ಹೋಗುತ್ತಿದ್ದಾಗ ಜವರಾಯನಾಗಿ

ಬೈಕ್‌-ಕಾರು ಡಿಕ್ಕಿ : ತಂದೆ-ಮಗಳ ಸಾವು Read More »

ನಾಪತ್ತೆಯಾದ ವ್ಯಕ್ತಿಯ ಶವ ಪತ್ತೆ

ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ಪುಳುವಾರು ನಿವಾಸಿಯೊಬ್ಬರು ಕಳೆದ ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದು, ಇದೀಗ ಅವರ ಮೃತದೇಹ ಚಿಕ್ಕಮುಡ್ನೂರು ಗ್ರಾಮದ ಗುತ್ತಿಕಲ್ಸ್  ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಚಿಕ್ಕಮುಡ್ನೂರು ಗ್ರಾಮದ ಪುಳುವಾರು ನಿವಾಸಿ ಶಿವಪ್ಪ ಗೌಡ (45) ಎಂಬವರ ಮೃತದೇಹ ಪತ್ತೆಯಾಗಿದೆ. ಶಿವಪ್ಪ ಗೌಡ ಮಾ.`17 ರಂದು ಕೆಲಸಕ್ಕೆ ಹೋಗಿ ಬರುತ್ತೇನೆ ಎಂದು ಮನೆಯಿಂದ ಹೊರ ಹೋಗಿದ್ದರು. ಬಳಿಕ ವಾಪಾಸು ಬಾರದೆ ನಾಪತ್ತೆಯಾಗಿದ್ದರು. ಇದೀಗ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ನಾಪತ್ತೆಯಾದ ವ್ಯಕ್ತಿಯ ಶವ ಪತ್ತೆ Read More »

error: Content is protected !!
Scroll to Top